Author: editor.udayarashmi@gmail.com

ವಿಜಯಪುರ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಕರ್ನಾಟಕ ಲೋಕ ಸೇವಾ ಆಯೋಗದವರು ನಡೆಸಲಿರುವ ಕೆಎಎಸ್ ಹಾಗು ಇತರ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ೫೦ ದಿನಗಳ ತರಬೇತಿಯನ್ನು ಮೈಸೂರಿನ ಕರಾಮುವಿ ಕೇಂದ್ರ ಕಚೇರಿಯಲ್ಲಿ ನಡೆಸಲು ನಿರ್ಧರಿಸಲಾಗಿದೆ.ಆಸಕ್ತರು ಏಪ್ರೀಲ್ ೩೦ ರೊಳಗಾಗಿ ಬೆಳಗ್ಗೆ ೧೦ ಗಂಟೆಯಿಂದ ಸಂಜೆ ೪.೩೦ ಗಂಟೆಯವರೆಗೆ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಲು ೦೮೨೧-೨೫೧೫೯೪೪ ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದು ಎಂದು ಕರಾಮುವಿ ವಿಜಯಪುರದ ಪ್ರಾದೇಶಿಕ ನಿರ್ದೇಶಕರಾದ ಡಿ.ಎಸ್. ಮೈತ್ರಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ವಿಜಯಪುರ: ಲೋಕಸಭೆ ಸಾರ್ವತ್ರಿಕ ಚುನಾವಣೆ-೨೦೨೪ರ ಸಲುವಾಗಿ ಪ್ರಿಸೈಡಿಂಗ್, ಸಹಾಯಕ ಪ್ರಿಸೈಡಿಂಗ್ ಮತ್ತು ಪೋಲಿಂಗ್ ಅಧಿಕಾರಿಗಳಿಗೆ ಏಪ್ರಿಲ್ ೩೦ ರಂದು ಬೆಳಗ್ಗೆ ೯.೩೦ ರಿಂದ ತರಬೇತಿ ಏರ್ಪಡಿಸಲಾಗಿದೆ.ಮುದ್ದೇಬಿಹಾಳ ಮತಕ್ಷೇತ್ರ ಸಂಬಂಧಿಸಿದ ಮತಗಟ್ಟೆ ಅಧಿಕಾರಿಗಳಿಗೆ ಮುದ್ದೇಬಿಹಾಳ ಎಮ್.ಜಿ.ವಿ.ಸಿ ಕಾಲೇಜು ನಲ್ಲಿ, ದೇವರ ಹಿಪ್ಪರಗಿ ಕ್ಷೇತ್ರದ ಅಧಿಕಾರಿಗಳಿಗೆ ದೇವರ ಹಿಪ್ಪರಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ಪ್ರಾಥಮಿಕ ಹಾಗೂ ಪ್ರೌಡ ಶಾಲೆ, ಬಸವನ ಬಾಗೇವಾಡಿ ಮತಕ್ಷೇತ್ರಕ್ಕೇ ಬಸವನ ಬಾಗೇವಾಡಿ ಬಸವೇಶ್ವರ ಪಿಯು ಕಾಲೇಜು , ಬಬಲೇಶ್ವರ ಮತ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಬಬಲೇಶ್ವರ ಶಾಂತವೀರ ಪ್ರೌಡಶಾಲೆ ಮತ್ತು ಪಿ ಯು ಕಾಲೇಜು, ವಿಜಯಪುರ ನಗರ ಮತ ಕೆತ್ರದ ಅಧಿಕಾರಿಗಳಿಗೆವಿ ವಿ ದರಬಾರ ಪ್ರೌಡ ಶಾಲೆ ಹಾಗೂ ಪಿಯು ಕಾಲೇಜು, ವಿಜಯಪುರನಲ್ಲಿ, ನಾಗಠಾಣ ಮಠಕ್ಷೆತ್ರಕ್ಕೆ ಪಿಡಿಜೆ ಪ್ರೌಡ ಶಾಲೆ ವಿಜಯಪುರ, ಇಂಡಿ ಮತಕ್ಸೇತ್ರಕ್ಕೆ ಇಂಡಿ ಸರ್ಕಾರಿ ಆದರ್ಶ ವಿದ್ಯಾಲಯದಲ್ಲಿ, ಸಿಂದಗಿ ಮತಕ್ಷೇತ್ರದ ಅಧಿಕಾರಿಗಳಿಗೆ ಸಿಂದಗಿ ಆರ್ ಡಿ. ಪಾಟೀಲ್ ಹಾಗೂ ಜೆ ಪಿ ಪೊರವಾಲ್ ಕಾಲೇಜಿನಲ್ಲಿ ತರಬೇತಿ ಹಮ್ಮಿಕೊಳ್ಳಲಾಗಿದೆ.ಚುನಾವಣೆ ಕರ್ತವ್ಯಕ್ಕೆ…

Read More

ಬಸವನಬಾಗೇವಾಡಿ: ಪಟ್ಟಣದ ಚತುಷ್ಟ ಯತಿಗಳ ವೃಂದಾವನ ಸನ್ನಿದಾನ ಉತ್ತರಾದಿ ಮಠದಲ್ಲಿ ೭ ನೇ ವರ್ಷದ ವರ್ಧಂತಿ ಉತ್ಸವ ಗುರುವಾರ ಪವಮಾನ ಹೋಮ, ಪೂಜೆ ಸೇರಿದಂತೆ ವಿವಿಧ ಪೂಜಾ ಕೈಂಕರ್ಯಗಳು ವೈಭವದಿಂದ ಜರುಗಿದವು.ಬೆಳಗ್ಗೆ ೬ ಗಂಟೆಗೆ ವಾಯುಸ್ತುತಿ, ವಿಷ್ಣು ಸಹಸ್ರನಾಮ ಅಷ್ಟೋತ್ತರ ಜಪವಾದ ನಂತರ ಪವಮಾನ ಹೋಮ, ಪಂಚಾಮೃತ ಅಭಿಷೇಕ ಹಾಗೂ ಪುಷ್ಪಾಲಂಕಾರ ಜರುಗಿದ ನಂತರ ವಿಶೇಷ ಪೂಜೆ ಹಾಗೂ ಪಲ್ಲಕ್ಕಿ ಉತ್ಸವ ಜರುಗಿತು.ಶ್ರೀಮಠದ ಅರ್ಚಕ ವಾದಿರಾಜಾಚಾರ್ಯ ಯಜುರ್ವೇದಿ ಮಾತನಾಡಿ, ಮಠದಲ್ಲಿರುವ ಚತುಷ್ಟ ಯತಿಗಳ ದರ್ಶನ ಹಾಗೂ ಸೇವೆಯನ್ನು ಮಾಡಿದರೆ ಸಕಲ ಕಷ್ಟಗಳು,ಪಾಪಗಳು ಪರಿಹಾರವಾಗಿ ಸಕಲ ಇಷ್ಟಾರ್ಥಗಳು ನೆರವೇರುತ್ತವೆ ಎಂದರು.ಸಾವಿರ ಹಾಡಿನ ಸರದಾರ ಎಂದು ಖ್ಯಾತರಾದ ಜಿ.ಬಿ.ಜೋಶಿ ಅವರಿಂದ ಸಂಗೀತ ಸೇವೆ ಜರುಗಿತು. ಶ್ರೀಮಠದ ಅಧ್ಯಕ್ಷ ವಸಂತಾಚಾರ್ಯ ಇಂಗಳೇಶ್ವರ ನೇತೃತ್ವದಲ್ಲಿ ಎಲ್ಲ ಪೂಜಾ ಕಾರ್ಯಕ್ರಮ, ವಿಶೇಷ ಕಾರ್ಯಕ್ರಮಗಳು ಜರುಗಿದವು. ಇದೇ ಸಂದರ್ಭದಲ್ಲಿ ವೇದಮೂರ್ತಿ ಶ್ರೀನಿವಾಸಾಚಾರ್ಯ ಜೋಶಿ (ಮುತ್ತಗಿ), ವೇದಮೂರ್ತಿ ರಾಮಾಚಾರ್ಯ ಜೋಶಿ(ಹಿಪ್ಪರಗಿ) ಹಾಗೂ ಜಿ.ಬಿ.ಜೋಶಿ ಅವರನ್ನು ಶ್ರೀಮಠದಿಂದ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಮುತ್ತಗಿಯ…

Read More

ಬಸವನಬಾಗೇವಾಡಿ: ಸುಕ್ಷೇತ್ರ ಶ್ರೀಶೈಲ ಕ್ಷೇತ್ರಕ್ಕೆ ತೆರಳಿದ್ದ ಮಲ್ಲಯ್ಯನ ಕಂಬಿಗಳನ್ನು ಭಕ್ತರು ವಿವಿಧ ವಾಧ್ಯ ಮೇಳಗಳೊಂದಿಗೆ ಸಂಭ್ರಮ, ಸಡಗರದಿಂದ ಗುರುವಾರ ಬರಮಾಡಿಕೊಂಡರು.ಕಳೆದ ತಿಂಗಳು ಹೋಳಿಹುಣ್ಣಿಮೆ ಮರುದಿನ ಇಲ್ಲಿಂದ ಪಾದಯಾತ್ರಾ ಭಕ್ತರೊಂದಿಗೆ ಕಂಬಿಗಳು ಪಾದಯಾತ್ರೆ ಮೂಲಕ ಶ್ರೀಶೈಲ ಕ್ಷೇತ್ರಕ್ಕೆ ತೆರಳಿದ್ದವು. ದ್ವಾದಶ ಲಿಂಗಗಳಲ್ಲಿ ಒಂದಾದ ಸುಕ್ಷೇತ್ರ ಶ್ರೀಶೈಲ ಮಲ್ಲಿಕಾರ್ಜುನ ಕ್ಷೇತ್ರದಲ್ಲಿ ಪ್ರತಿ ವರ್ಷ ಯುಗಾದಿ ಹಬ್ಬದಂದು ನಡೆಯುವ ರಥೋತ್ಸವದಲ್ಲಿ ಈ ಭಾಗದ ಜನರು ಭಾಗವಹಿಸಿ ತಮ್ಮ ತಮ್ಮ ಗ್ರಾಮಗಳಿಗೆ ಆಗಮಿಸುತ್ತಾರೆ. ತದ ನಂತರ ಹುಣ್ಣಿಮೆಗೆ ಆಯಾ ಆಯಾ ಗ್ರಾಮಗಳಿಗೆ ಅಂದು ತೆರಳಿದ್ದ ಮಲ್ಲಯ್ಯನ ಕಂಬಿಗಳು ಆಗಮಿಸುವದು ಸಾಮಾನ್ಯ.ಪಟ್ಟಣದ ಮುದ್ದೇಬಿಹಾಳ ರಸ್ತೆಯಲ್ಲಿರುವ ಕಂಬಿ ಕಟ್ಟೆಗೆ ನಿನ್ನೆ ರಾತ್ರಿ ಮಲ್ಲಯ್ಯನ ಕಂಬಿಗಳು ಬಂದಿದ್ದವು. ಇಂದು ಬೆಳಗ್ಗೆ ಇಲ್ಲಿನ ಭಕ್ತರು ಕುಂಬಾರರ ಮನೆಗೆ ತೆರಳಿ ಅಲ್ಲಿಂದ ಪೂಜಾ ಸಾಮಗ್ರಿಗಳೊಂದಿಗೆ ಬಸವೇಶ್ವರರ ವಂಶಸ್ಥರಾದ ಕುಲಕರ್ಣಿಯವರ ಮನೆಗೆ, ಗೌಡರ ಮನೆಗೆ ವಿವಿಧ ವಾಧ್ಯ ಮೇಳಗಳೊಂದಿಗೆ ತೆರಳಿ ಅವರನ್ನು ಕರೆದುಕೊಂಡು ಕಂಬಿ ಕಟ್ಟೆಗೆ ಆಗಮಿಸಿದರು. ನಂತರ ಕಂಬಿ ಕಟ್ಟೆಯಲ್ಲಿ ಮಲ್ಲಯ್ಯನ ಕಂಬಿಗಳಿಗೆ ವಿಶೇಷ…

Read More

ಇಂಡಿ: ಸಜ್ಜನ ಹಾಗೂ ಅನುಭವಿಯಾದ ಕಾಂಗ್ರೆಸ್‌ನ ಲೋಕಸಭೆ ಅಭ್ಯರ್ಥಿ ರಾಜು ಆಲಗೂರರಿಗೆ ಮತ ನೀಡಿದರೆ ಜಿಲ್ಲೆಯಲ್ಲಿ ಮತ್ತಷ್ಟು ಅಭಿವೃದ್ಧಿಯಾಗಲಿದೆ ಎಂದು ಶಾಸಕ ಯಶವಂತರಾಯಗೌಡ ಪಾಟೀಲ ಹೇಳಿದರು.ತಾಲೂಕಿನ ಅಗರಖೇಡ ಹಾಗೂ ಹಿರೇ ಬೇನೂರಲ್ಲಿ ನಡೆದ ಜಿಪಂ ವ್ಯಾಪ್ತಿಯ ಲೋಕಸಭೆ ಚುನಾವಣೆ ಸಭೆಯಲ್ಲಿ ಮಾತನಾಡಿದ ಅವರು, ಭೀಮೆಯ ದಡದ ಗ್ರಾಮಗಳಿಗೆ ಹಲವು ಅನುಕೂಲ ಮಾಡಿಕೊಡಲಾಗಿದೆ. ಕಾಂಗ್ರೆಸ್ ಅಭ್ಯರ್ಥಿ ಗೆದ್ದರೆ ನೀರಾವರಿ, ಪ್ರವಾಸೋದ್ಯಮ, ಲಿಂಬೆ ಬೆಳೆಗಳಿಗೆ ಪ್ರಾತಿನಿಧ್ಯ ಸೇರಿದಂತೆ ನೂರಾರು ಕೆಲಸಗಳು ತಮಗಾಗಲಿವೆ. ಕೆಲಸ ಮಾಡುವವರಿಗೆ ಮತ ನೀಡಿದರೆ ಅವರಿಗೆ ಉತ್ತೇಜನ ಸಿಗುತ್ತದೆ. ಆಧ್ಯಾತ್ಮಿಕ ಸ್ವರೂಪದ ನೆಲ ಇದಾಗಿದೆ. ಈ ಕ್ಷೇತ್ರವನ್ನು ಹಿಂದೆಂದೂ ಕಾಣದಂತಹ ಅಭಿವೃದ್ಧಿ ಮಾಡಿದ್ದೇವೆ. ಸಾವಿರಾರು ಕೋಟಿ ರೂ. ಅನುದಾನ ನೀಡಿದ್ದೇವೆ. ಇಂಡಿ ನಗರಕ್ಕೆ ನಿರಂತರ ನೀರು, ರಸ್ತೆ, ಭೀಮಾಶಂಕರ ಸಕ್ಕರೆ ಕಾರಖಾನೆ ನಮ್ಮ ಸಾಧನೆಗಳು ಎಂದು ಹೇಳಿದರು.ಅಭ್ಯರ್ಥಿ ಪ್ರೊ.ರಾಜು ಆಲಗೂರ ಅವರು ಮಾತನಾಡಿ, ಮೋದಿಯವರು ಉದ್ಯಮಪತಿಗಳ ಬಗ್ಗೆ ತೋರಿದ ಕಾಳಜಿ ರೈತರಿಗೆ ತೋರಿಸಿದ್ದರೆ ಈ ದೇಶ ಉದ್ಧಾರವಾಗುತ್ತಿತ್ತು ಎಂದು ಹೇಳಿದರು.ಉದ್ತಮಿಗಳ ಹದಿನಾಲ್ಕು…

Read More

ಸಿಎಂ‌ ಸಿದ್ಧರಾಮಯ್ಯ, ರಾಜ್ಯ ಉಸ್ತುವಾರಿ ರಂದೀಪಸಿಂಗ್ ಸುರ್ಜೆವಾಲಾ ಸಾಥ್ | ಖಚಿತವಾಗದ ಮಲ್ಲಿಕಾರ್ಜುನ ಖರ್ಗೆ ಆಗಮನ ವಿಜಯಪುರ: ಕಾಂಗ್ರೆಸ್ ರಾಷ್ಟ್ರೀಯ ಮುಖಂಡ ರಾಹುಲ ಗಾಂಧಿ ಅವರು ಏ. 26 ರಂದು ಶುಕ್ರವಾರ ನಗರಕ್ಕೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಅವರು ಗುರುವಾರ ಬಿ.ಎಲ್.ಡಿ.ಇ ನ್ಯೂ ಕ್ಯಾಂಪಸ್ ಗೆ ಭೇಟಿ ನೀಡಿದರು.ಸಂಸದ ಮತ್ತು ಎಐಸಿಸಿ ರಾಷ್ಟ್ರೀಯ ಮುಖಂಡ ರಾಹುಲ ಗಾಂಧಿ ಅವರು ವಿಜಯಪುರ ಕಾಂಗ್ರೆಸ್ ಅಭ್ಯರ್ಥಿ ಪ್ರೊ.ರಾಜು ಆಲಗೂರ ಪರ ಮತಯಾಚನೆ ಮಾಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಕಾರ್ಯಕ್ರಮ ನಡೆಯಲಿರುವ ಸ್ಥಳದಲ್ಲಿ ಕೈಗೊಳ್ಳಲಾಗುತ್ತಿರುವ ಸಿದ್ಧತೆಗಳನ್ನು ಸಚಿವರು ಪರಿಶೀಲನೆ ನಡೆಸಿದರು.ಬಿ.ಎಲ್.ಡಿ.ಇ ನ್ಯೂ ಕ್ಯಾಂಪಸ್ ನಲ್ಲಿ ಕಾರ್ಯಕ್ರಮಕ್ಕಾಗಿ ಬೃಹತ್ ವೇದಿಕೆ ನಿರ್ಮಿಸಲಾಗಿದ್ದು, ವಿಶಾಲವಾದ ಪೆಂಡಾಲ್ ಹಾಕಲಾಗಿದೆ. ಈ ವೇದಿಕೆ ಹಾಗೂ ಸಾರ್ವಜನಿಕರು ಆಸೀನರಾಗುವ ಸ್ಥಳದ ವೀಕ್ಷಣೆ ನಡೆಸಿದ ಸಚಿವರು ಕಾರ್ಯಕ್ರಮ ಅಚ್ಚುಕಟ್ಟಾಗಿ ನಡೆಸಲು ಕೈಗೊಳ್ಳಬೇಕಿರುವ ಕ್ರಮಗಳ ಕುರಿತು ಸೂಚನೆ ನೀಡಿದರು.ಈ ಸಂದರ್ಭದಲ್ಲಿ ತಮ್ಮನ್ನು ಭೇಟಿ ಮಾಡಿದ…

Read More

ದೇಶದ & ಹೆಣ್ಣುಮಕ್ಕಳ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಬೇಕು :ಯತ್ನಾಳ ಆಲಮೇಲ: ಹಿಂದೂಗಳ ಪುರಾತನ ಭಾರತ ದೇಶ ಭಾರತವಾಗಿ ಉಳಿಯಬೇಕು, ಹಿಂದುತ್ವ, ಹಿಂದೂಗಳ ರಕ್ಷಣೆಯಾಗಬೇಕು ಎಂದರೆ ನರೇಂದ್ರ ಮೋದಿಜಿ ಮತ್ತೆ ಪ್ರಧಾನಿ ಆದರೆ ಮಾತ್ರ ಸಾಧ್ಯ ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.ಬುಧವಾರ ಸಂಜೆ ಲೋಕಸಭೆ ಚುನಾವಣೆ ನಿಮಿತ್ಯ ಪಟ್ಟಣದಲ್ಲಿ ರೋಡ್ ಶೋ ಮೂಲಕ ಮತಯಾಚನೆ ಮಾಡಿ ನಂತರ ಸಾರ್ವಜನಿಕರನ್ನು ಉದ್ದೇಶಿಸಿ ಅವರು ಮಾತನಾಡಿದರು.ನರೇಂದ್ರ ಮೋದಿಯವರು ದೇಶಕ್ಕಾಗಿ, ಹಿಂದೂ ಧರ್ಮ ರಕ್ಷಣೆಗಾಗಿ ಹಗಲಿರುಳು ಕೆಲಸ ಮಾಡುತ್ತಿದ್ದಾರೆ. ಕಾಂಗ್ರೇಸ್ ಪಕ್ಷದ ಉಚಿತ ಯೋಜನೆಗಳು ಗ್ರಾರೆಂಟಿಗಳು ನಂಬಬೇಡಿ, ದೇಶದ ರಕ್ಷಣೆ, ನಮ್ಮ ಮನೆಯ ಹೆಣ್ಣುಮಕ್ಕಳ ರಕ್ಷಣೆಗಾಗಿ ಮೋದಿ ಅವರ ಅವಶ್ಯಕತೆ ಇದೆ ಎಂದರು.ಕಾಂಗ್ರೇಸ್ ಪಕ್ಷದವರು ಮುಸ್ಲಿಂ ಓಲೈಕೆಯಿಂದ ಈ ದೇಶದ ಬಹುಸಂಖ್ಯಾತ ಹಿಂದೂಗಳನ್ನು ಕಡೆಗಣಿಸುತ್ತಿದ್ದಾರೆ. ಅದಕ್ಕೆ ತಕ್ಕ ಉತ್ತರ ನೀಡುವ ಕಾಲ ಸದ್ಯ ಬಂದಿದೆ. ಕಾಂಗ್ರೇಸ್ ಅಧಿಕಾರಕ್ಕೆ ಬಂದರೆ ಹಿಂದೂಗಳ ಸಂಪತ್ತನ್ನು ಮುಸ್ಲಿಂರಿಗೆ ವಿತರಿಸುವ ಆಲೋಚನೆ ಇದೆ. ಅವರಿಂದ ಹಿಂದೂಗಳ ರಕ್ಷಣೆ…

Read More

ಇಂಡಿ: ಭಾರತೀಯ ಜನತಾ ಪಕ್ಷದಿಂದ ಹಾಲುಮತ ಸಮುದಾಯಕ್ಕೆ ಸಿಕ್ಕಿದ್ದು ಏನು..? ರಾಜ್ಯದಲ್ಲಿ ನಿರ್ಣಾಯಕ ಮತ ಹೊಂದಿರುವ ಹಾಲುಮತ ಸಮುದಾಯಕ್ಕೆ ರಾಜ್ಯದಲ್ಲಿ ಒಂದೇ ಒಂದು ಕ್ಷೇತ್ರದಲ್ಲಿ ಅವಕಾಶ ನೀಡಿಲ್ಲ. ಇನ್ನು ಚಡ್ಡಿ ಹಾಕಿ ಬಿಜೆಪಿ ಪಕ್ಷ ಕಟ್ಟುವಲ್ಲಿ ಶ್ರಮಿಸಿದ ನಮ್ಮ‌ ಸಮುದಾಯದ ನಾಯಕ ಕೆ ಎಸ್ ಈಶ್ವರಪ್ಪರನ್ನು ವಿಧಾನ ಸಭೆಯಲ್ಲೂ ಟಿಕೆಟ್ ನೀಡದೆ, ಲೋಕಸಭೆಯಲ್ಲೂ ಟಿಕೆಟ್ ನೀಡದೆ, ಪಕ್ಷದಿಂದ 6 ವರ್ಷಗಳ‌ ಕಾಲ ಉಚ್ಚಾಟನೆ ಮಾಡಿದ್ದು, ಹಾಲುಮತ ಸಮಾಜ ಖಂಡಿಸುತ್ತದೆ. ಹಾಗಾಗಿ ಬಿಜೆಪಿ ಪಕ್ಷಕ್ಕೆ ಹಾಲುಮತ ಸಮುದಾಯದಿಂದ ಒಂದೇ ಒಂದು ಮತ ನೀಡಬಾರದು ಎಂದು ಹಾಲುಮತ ಸಮಾಜದ ತಾಲ್ಲೂಕು ಅಧ್ಯಕ್ಷ ಜೆಟ್ಟಪ್ಪ ರವಳಿ ಹೇಳಿದರು.ಬುಧವಾರ ಪಟ್ಟಣದ ಖಾಸಗಿ ಹೊಟೆಲ್ ಯೊಂದರಲ್ಲಿ ಕರೆದ ಸುದ್ದಿಗೊಷ್ಠಿ ಉದ್ದೇಶಿಸಿ ‌ಮಾತನಾಡಿದ ಅವರು, 2024 ರ ಲೋಕಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಹಾಲುಮತದ ನಡೆ ಸಿದ್ದರಾಮಯ್ಯ ಕಡೆ ಎಂದು ಹೇಳಿದರು.ಕಾಂಗ್ರೆಸ್ ಹಾಲುಮತ ಸಮುದಾಯಕ್ಕೆ ಮುಖ್ಯಮಂತ್ರಿ ಭಾಗ್ಯ ಕೊಟ್ಟಿದೆ. ಒಂದು ಬಾರಿ ಅಲ್ಲಾ ಎರಡನೇ ಬಾರಿ ಅವಕಾಶ ಕೊಟ್ಟಿದೆ. ಆದರೆ ಬಿಜೆಪಿ…

Read More

ವಿಜಯಪುರ: ಈ ಬಾರಿ ಲೋಕಸಭೆಯಲ್ಲಿ ಬದಲಾವಣೆ ತರಲೇಬೇಕೆಂದು ನಾವೆಲ್ಲ ಒಗ್ಗಟ್ಟಾಗಿ ನಿಂತಿದ್ದೇವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಹೇಳಿದರು.ನಾಗಠಾಣದಲ್ಲಿ ನಡೆದ ಬೃಹತ್ ಚುನಾವಣಾ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು.ಮುಂದಿನ ದಿನಗಳಲ್ಲಿ ನಾಗಠಾಣ ಭಾಗಕ್ಕೆ ಶಾಶ್ವತ ನೀರಿನ ಪರಿಹಾರಕ್ಕೆ ಕೆರೆ ತುಂಬಲಾಗುವುದು. ಈ ಕ್ಷೇತ್ರದಲ್ಲಿ ಹಿಂದೆ ತಾವು, ಶಿವಾನಂದ ಪಾಟೀಲ, ಆಲಗೂರರು ಶಾಸಕರಾಗಿ ಕೆಲಸ ಮಾಡಿದ್ದೇವೆ. ಪಕ್ಕದ ಇಂಡಿ ಶಾಸಕರಿದ್ದಾರೆ. ಮಕಣಪುರ ಕೆರೆ ತುಂಬಿಸಿದ್ದೇವೆ. ಮುಂದೆಯೂ ನಿಮ್ಮೊಂದಿಗೆ ನಾವೆಲ್ಲ ಇರುತ್ತೇವೆ. ಆಲಗೂರರು ಸಂಸದರಾದರೆ ಆಲಮಟ್ಟಿ ಎತ್ತರ ಹೆಚ್ಚಿಸಲು ಸಂಸತ್‌ನಲ್ಲಿ ಹೋರಾಟ ಮಾಡಲಿದ್ದಾರೆ. ಆದಾದರೆ ಜಿಲ್ಲೆ ಸಂಪೂರ್ಣ ನೀರಾವರಿ ಆಗುತ್ತದೆ ಎಂದು ಭರವಸೆ ನೀಡಿದರು.ಮೋದಿಯವರ ಮುಖ ನೋಡಿ ಓಟು ಹಾಕಿ ಎನ್ನುವವರಿಗೆ ಮೋದಿಯವರು ಏನು ಮಾಡಿದ್ದಾರೆ ಎಂದು ಕೇಳಿ. ಸಬ್ ಕಾ ಸಾಥ್ ಎಂದವರು ಜಗಳ ಹಚ್ಚಿದ್ದಾರೆ. ಇನ್ನೂ ಮುಂದೆ ಹೋಗಿ ಹೆಣ್ಣುಮಕ್ಕಳ ತಾಳಿಯ ಬಗ್ಗೆ ಮಾತನಾಡುವ ಮಟ್ಟಕ್ಕೆ ಹೋಗಿದ್ದಾರೆ. ಚುನಾವಣಾ ಬಾಂಡ್‌ನಿಂದ ಇವರ ಬಂಡವಾಳ ಬಯಲಾಗಿದೆ. ಸ್ವಚ್ಛ ಸ್ವಚ್ಛ ಎಂದವರ ದೇಶದ…

Read More

-ಸಂತೋಷ್ ರಾವ್ ಪೆರ್ಮುಡಪೆರ್ಮುಡ ಮನೆ, ಪಟ್ರಮೆ ಗ್ರಾಮ ಮತ್ತು ಅಂಚೆ ಬೆಳ್ತಂಗಡಿ ತಾಲೂಕು, ದ.ಕ ಜಿಲ್ಲೆ ಹಸ್ತಿನಾಪುರದ ಯುವರಾಜನಾದ ದುರ್ಯೋಧನನು ದುರಾಸೆಯಿಂದ ಪಾಂಡುವಿನ ಪುತ್ರರಾದ ಪಾಂಡವರನ್ನು ಇಂದ್ರಪ್ರಸ್ಥ ಅರಮನೆಯಿಂದ ಓಡಿಸಿ ಅವರ ಆಸ್ತಿಯನ್ನೂ ಕಬಳಿಸುವ ಉದ್ದೇಶದಿಂದ ಮಾವ ಶಕುನಿಯ ಕುತಂತ್ರದಂತೆ ಹಸ್ತಿನಾವತಿಗೆ ಪಗಡೆಯಾಟಕ್ಕೆ ಆಹ್ವಾನಿಸುತ್ತಾನೆ. ಶಕುನಿಯ ಹೆಣೆದ ಕುತಂತ್ರದಿಂದ ಧರ್ಮರಾಯನು ಪಗಡೆಯಾಟದಲ್ಲಿ ಸೋತು, ತಾನು ಗಳಿಸಿದ ಅಷ್ಟೂ ಸಂಪತ್ತು, ಗಳಿಸಿದ್ದ ಆಸ್ತಿ, ತನ್ನ ಸೈನ್ಯ, ಸಾವಿರಾರು ಕುದುರೆಗಳನ್ನು ಕಳೆದುಕೊಳ್ಳುತ್ತಾನೆ. ನಂತರದಲ್ಲಿ ಇಂದ್ರಪ್ರಸ್ಥ ಅರಮನೆ, ಸಹೋದರರಾದ ನಕುಲ, ಸಹದೇವ, ಅರ್ಜುನ, ಭೀಮ ಕೊನೆಗೆ ತನ್ನನ್ನೇ ತಾನು ಪಂದ್ಯಕ್ಕಿಟ್ಟು ಯುಧಿಷ್ಠಿರನು ಎಲ್ಲವನ್ನೂ ಕಳೆದುಕೊಳ್ಳುತ್ತಾನೆ. ಪಗಡೆಯಾಟದಲ್ಲಿ ಕೊನೆಯದಾಗಿ ತನ್ನ ಮಡದಿ ದ್ರೌಪದಿಯನ್ನೂ ಪಂದ್ಯಕ್ಕೆ ಇಟ್ಟು ಆಕೆಯನ್ನೂ ಪಂದ್ಯದಲ್ಲಿ ಕಳೆದುಕೊಂಡು ಪಾಂಡವರು ಕೌರವನ ದಾಸನಾಗುತ್ತಾರೆ.ದ್ರೌಪದಿಯ ಮೇಲಿದ್ದ ದ್ವೇಷದ ಕಾರಣದಿಂದ ತನ್ನ ತಮ್ಮನಾದ ದುಶ್ಶಾಸನನಲ್ಲಿ ದ್ರೌಪದಿಯನ್ನು ತುಂಬಿದ ರಾಜ ಸಭೆಗೆ ಎಳೆದು ತರುವಂತೆ ಆದೇಶಿಸುತ್ತಾನೆ. ಅಣ್ಣನ ಆದೇಶದಂತೆ ದುಶ್ಶಾಸನನು ದ್ರೌಪದಿಯನ್ನು ರಾಜಸಭೆಗೆ ದರದರನೆ ಎಳೆದುಕೊಂಡು ಬರುತ್ತಾನೆ. ಧುರ್ಯೋಧನನ ಆದೇಶದಂತೆ…

Read More