Author: editor.udayarashmi@gmail.com

ಮುದ್ದೇಬಿಹಾಳ: ನೇಹಾ ಕೊಲೆ ಪ್ರಕರಣ ಎಲ್ಲ ಆಯಾಮಗಳಲ್ಲಿ ಮುಕ್ತ ತನಿಖೆ ನಡೆಯಬೇಕು ಎಂದು ಮಾಜಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಒತ್ತಾಯಿಸಿದರು.ಹುಬ್ಬಳ್ಳಿಯಲ್ಲಿ ಹತ್ಯೆಯಾದ ನೇಹಾಳಿಗೆ ಪಟ್ಟಣದ ರಾಘವೇಂದ್ರ ಕಲ್ಯಾಣ ಮಂಟಪದಲ್ಲಿ ವಿವಿಧ ಹಿಂದೂ ಪರ ಸಂಘಟನೆಗಳು, ವ್ಯಾಪಾರಸ್ಥರು, ನಾಗರಿಕರ ಪರವಾಗಿ ಹಮ್ಮಿಕೊಳ್ಳಲಾಗಿದ್ದ ಶೃದ್ಧಾಂಜಲಿ ಸಭೆಯಲ್ಲಿ ಅವರು ಮಾತನಾಡಿದರು.ಕೊಲೆಗಾರ ಫಯಾಜ ಮತ್ತು ಅವನ ಬೆಂಬಲವಾಗಿ ನಿಂತಿರುವ ಎಲ್ಲರಿಗೂ ಉಗ್ರ ಶಿಕ್ಷೆಯಾಗಬೇಕೆನ್ನುವದು ನೇಹಾಳ ಕುಟುಂಬದ ಮತ್ತು ಎಲ್ಲ ಕನ್ನಡಿಗರ ಬೇಡಿಕೆಯಾಗಿದೆ ಎಂದರು.ವಿಶ್ವ ಹಿಂದೂ ಪರಿಷತ್ ಮುಖಂಡ ಶ್ರೀಮಂತ ದುದ್ದಗಿ ಮಾತನಾಡಿ, ಸ್ವತಂತ್ರ ಬಂದು ಸಾಕಷ್ಟು ವರ್ಷಗಳಾದರೂ ನಮ್ಮ ಮನೆಯ ಹೆಣ್ಣು ಮಕ್ಕಳು ಬೆಳಿಗ್ಗೆ ಮನೆಯಿಂದ ಹೋದರೆ ಮರಳಿ ಸೌಖ್ಯವಾಗಿ ಮನೆಗೆ ಬರುವವರೆಗೂ ಸಮಾಧಾನ ಇರಲ್ಲ. ಹಿಂದೂಗಳಲ್ಲಿ ಒಗ್ಗಟ್ಟು ಕಡಿಮೆಯಾದ ಪರಿಣಾಮ ಹಿಂದೂಗಳ ಮೇಲೆ ದಬ್ಬಾಳಿಕೆಯಾಗುತ್ತಿದೆ. ಹಿಂದು ಹೆಣ್ಣುಮಕ್ಕಳನ್ನು ಟಾರ್ಗೇಟ್ ಮಾಡಲಾಗುತ್ತಿದೆ. ಹಿಂದೆ ಬಿದ್ದು ಪ್ರೀತಿಸುವಂತೆ ಒತ್ತಾಯಿಸಲಾಗುತ್ತಿದೆ ಹಿಂದೂ ಹೆಣ್ಣುಮಕ್ಕಳು ಜಾಗೃತರಾಗಬೇಕಾಗಿದೆ ಎಂದರು.ಹೋರಾಟಗಾರ ಬಸಯ್ಯ ನಂದಿಕೆಶ್ವರಮಠ, ಪ್ರಮುಖರಾದ ವಿಕ್ರಂ ಓಸ್ವಾಲ್, ವಾಸುದೇವ ಶಾಸ್ತ್ರಿ ಶಿವಯೋಗಪ್ಪ ರಾಂಪೂರ, ಕಾಶಿಬಾಯಿ…

Read More

ವಿಜಯಪುರ: ತಾಲೂಕಾ ಸಾರ್ವಜನಿಕ ಆಸ್ಪತ್ರೆ ಸಿಂದಗಿಯಲ್ಲಿ ಶಸ್ತçಚಿಕಿತ್ಸಕರು, ತಜ್ಞವೈದ್ಯರು ಲಭ್ಯವಿರುವದರಿಂದ ಹೆರಿಗೆ ಹಾಗೂ ಇನ್ನಿತರ ಶಸ್ತ್ರಚಿಕಿತ್ಸೆಯನ್ನು ಸಾರ್ವಜನಿಕ ಆಸ್ಪತ್ರೆಯಲ್ಲಿ ಮಾಡಲಾಗುತಿದ್ದು. ಸಿಂದಗಿ ತಾಲೂಕಿನ ಎಲ್ಲ ಸಾರ್ವಜನಿಕರು ಸರ್ಕಾರಿ ಆಸ್ಪತ್ರೆಯಲ್ಲಿ ದೊರೆಯುವ ಎಲ್ಲ ಸೌಲಭ್ಯಗಳನ್ನು ಪಡೆದುಕೊಳ್ಳುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಾದ ಡಾ.ಬಸವರಾಜ ಹುಬ್ಬಳ್ಳಿ ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡಿದ್ದಾರೆ.ಸಿಂದಗಿಯ ತಾಲೂಕಾ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿದ ಅವರು ಆಸ್ಪತ್ರೆಯ ದಾಖಲಾತಿ, ಕಾರ್ಯವೈಖರಿಯನ್ನು ಪರಿಶೀಲಿಸಿ ವೈದ್ಯರೊಂದಿಗೆ ಸಭೆ ನಡೆಸಿದರು.ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿಗಳು ಹಾಗೂ ಸಾರ್ವಜನಿಕ ಆಸ್ಪತ್ರೆ ಸಿಂದಗಿ ಮುಖ್ಯ ವೈದ್ಯಾಧಿಕಾರಿಗಳಾದ ಡಾ.ಕೆ.ಡಿ ಗುಂಡಬಾವಡಿ, ಈಗಾಗಲೇ ಆಸ್ಪತ್ರೆಯಲ್ಲಿ ಕಳೆದ ಮೂರು ದಿನಗಳಲ್ಲಿ ಎರಡು ಜನ ಗರ್ಭಿಣಿಯರಿಗೆ ಸಿಜರಿಯನ್, ಒಂದು ಹರ್ನಿಯಾ ಶಸ್ತ್ರಚಿಕಿತ್ಸೆ, ಎರಡು ಜನರಿಗೆ ಗಡ್ಡೆ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ಮಾಡಲಾಗಿದೆ. ಎಲ್ಲರೂ ಆರೋಗ್ಯದಿಂದ ಇರುತ್ತಾರೆ. ಸದರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ತಜ್ಞವೈದ್ಯರಾದ ಡಾ.ನೂರೇಸ ಪಟೇಲ್ ಹೆರಿಗೆ ಹಾಗೂ ಸ್ರೀರೋಗ ತಜ್ಞರು, ಡಾ.ರಾಜಶೇಖರ ಸಿ.ಹೆಚ್. ಚಿಕ್ಕಮಕ್ಕಳ ತಜ್ಞರು, ಡಾ.ಸಾಯಬಣ್ಣ ಗುಣಕಿ. ಅವರಳಿಕೆ ತಜ್ಞರು, ಡಾ.ನಾಗರಾಜ ಶಸ್ತçಚಿಕಿತ್ಸಕರು,…

Read More

ವಿಜಯಪುರ: ಲೋಕಸಭಾ ಸಾರ್ವತ್ರಿಕ ಚುನಾವಣೆ ೨೦೨೪ರ ನಿಮಿತ್ಯ ಮತದಾನದ ಜಾಗೃತಿ ಮೂಡಿಸಲು ಜಿಲ್ಲಾಡಳಿತ, ಜಿಲ್ಲಾ ಸ್ವೀಪ್ ಸಮಿತಿ ವಿಜಯಪುರ ಹಾಗೂ ಮಹಾನಗರ ಪಾಲಿಕೆ ವಿಜಯಪುರ ಇವುಗಳ ಸಹಯೋಗದಲ್ಲಿ ಮಹಾನಗರ ಪಾಲಿಕೆ ಸಭಾಂಗಣದಲ್ಲಿ ಚುನಾವಣೆ ವಿಷಯಕ್ಕೆ ಸಂಬಂಧಿಸಿದಂತೆ ಏ.೨೯ರಂದು ಬೆಳಗ್ಗೆ ೧೦.೩೦ಕ್ಕೆ ಕ್ವೀಜ್ ಕಾರ್ಯಕ್ರಮ ಏರ್ಪಡಿಸಲಾಗಿದೆ.೧೦ರಿಂದ ೧೬ ವಯಸ್ಸು ಹಾಗೂ ೧೭ ರಿಂದ ೨೩ ವಯಸ್ಸಿನ ಆಸಕ್ತರು ವಿಜಯಪುರ ಮಹಾನಗರ ಪಾಲಿಕೆಯ ಆವಕ ವಿಭಾಗದಲ್ಲಿ ಏ.೨೬ ಸಂಜೆ ೫ರ ಒಳಗಾಗಿ ತಮ್ಮ ಹೆಸರನ್ನು ನೋದಾಯಿಸಿಕೊಳ್ಳಬಹುದು ಎಂದು ಮಹಾನಗರ ಪಾಲಿಕೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಸಿಂದಗಿ: ಜಿಲ್ಲೆಯಲ್ಲಿ ಮೇ.೭ರಂದು ಲೋಕಸಭಾ ಚುನಾವಣಾ ಮತದಾನ ನಡೆಯಲಿದ್ದು, ಯಾವುದೇ ಆಸೆ ಆಮಿಷಗಳಿಗೆ ಒಳಗಾಗದೆ ಮುಕ್ತ ಮತ್ತು ನ್ಯಾಯಯುತವಾಗಿ ಮತ ಚಲಾಯಿಸಿ ಎಂದು ತಾಪಂ ಇಒ ಸುಬ್ರಮಣ್ಯ ಶರ್ಮಾ ಹೇಳಿದರು.ಪಟ್ಟಣದ ಬಸವೇಶ್ವರ ವೃತ್ತದಲ್ಲಿ ತಾಲೂಕು ಆಡಳಿತ, ತಾಲೂಕು ಸ್ವೀಪ್ ಸಮಿತಿ, ತಾಲೂಕು ಪಂಚಾಯತ್, ಶಿಕ್ಷಣ ಇಲಾಖೆ, ಪುರಸಭೆ ಕಾರ್ಯಾಲಯ, ಸಿಡಿಪಿಒ ಇಲಾಖೆ ಮತ್ತು ಆರೋಗ್ಯ ಇಲಾಖೆಯ ಸಹಯೋಗದೊಂದಿಗೆ ಹಮ್ಮಿಕೊಂಡ ಮತದಾನ ಜಾಗೃತ ಅಭಿಯಾನ ಜಾಥಾ ಮತ್ತು ಪ್ರತಿಜ್ಞಾವಿಧಿ ಬೋಧನಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಮೇ.೭ರಂದು ಎಲ್ಲರೂ ಮತಗಟ್ಟೆಗೆ ಆಗಮಿಸಿ ಮತ ಚಲಾಯಿಸಿ. ಮತದಾನ ಪ್ರತಿಶತ ಹೆಚ್ಚಿಸಿ. ನಿಮ್ಮ ಹಕ್ಕು ಚಲಾಯಿಸಿ ಎಂದರು.ಈ ವೇಳೆ ಬಸವೇಶ್ವರ ವೃತ್ತದಿಂದ ಪ್ರಾರಂಭವಾದ ಜಾಥಾ ಸಂಗೋಳ್ಳಿ ರಾಯಣ್ಣ ವೃತ್ತ, ಅಂಬಿಗರ ಚೌಡಯ್ಯ ವೃತ್ತ, ಡಾ.ಬಿ.ಆರ್.ಅಂಬೇಡ್ಕರ್ ವೃತ್ತ, ಮಹಾತ್ಮಾ ಗಾಂಧಿ ವೃತ್ತದ ಮಾರ್ಗವಾಗಿ ತಾಲೂಕು ಪಂಚಾಯತ್ ಕಚೇರಿಗೆ ಜಾಥಾ ಕಾರ್ಯಕ್ರಮವು ತಲುಪಿ ಸಮಾಪ್ತಿಗೊಂಡಿತು.ಇದೇ ಸಂದರ್ಭದಲ್ಲಿ ಆಲಮೇಲ ತಾಪಂ ಇಒ ಪರಿದಾ ಪಠಣ, ಕ್ಷೇತ್ರ ಶಿಕ್ಷಣಾಧಿಕರಿ ಆರಿಫ್…

Read More

ಸಿಂದಗಿ: ಈ ಬಾರಿ ಕೇಂದ್ರದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದರೆ ರೈತರ ಸಾಲ ಮನ್ನಾ ಮಾಡುವ ಜೊತೆಗೆ ಅವರು ಬೆಳೆದ ಬೆಳೆಗೆ ಬೆಂಬಲ ಬೆಲೆ ನೀಡುತ್ತೇವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಹೇಳಿದರು.ಬುಧವಾರದಂದು ಪಟ್ಟಣದ ಮಾಂಗಲ್ಯ ಭವನದಲ್ಲಿ ವಿಜಯಪುರ ಮೀಸಲು ಕ್ಷೇತ್ರ ಲೋಕಸಭಾ ಚುನಾವಣಾ ನಿಮಿತ್ಯವಾಗಿ ಸಿಂದಗಿ ವಿದಾನಸಭಾ ಮತಕ್ಷೇತ್ರದಲ್ಲಿ ಹಮ್ಮಿಕೊಂಡ ಚುನಾವಣಾ ಪ್ರಚಾರ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ರೈತರು ಬೆಳೆದ ಬೆಳೆಗೆ ನ್ಯಾಯಯುತ ಬೆಲೆ ದೊರೆಯುವಂತೆ ಮಾಡುತ್ತೇವೆ. ಪ್ರತಿ ವರ್ಷಕ್ಕೆ ಮಹಿಳೆಗೆ ೧ಲಕ್ಷ ರೂ. ಕುಟುಂಬದ ಮಹಿಳೆಗೆ ನೀಡುತ್ತೇವೆ. ದೇಶ ಕಟ್ಟಿದ್ದು ಕಾಂಗ್ರೆಸ್. ಜನರಿಗೆ ತಿನ್ನಲೂ ಆಹಾರ ಇಲ್ಲದ ಸಂದರ್ಭದಲ್ಲಿ ನೆಹರೂ, ಲಾಲಬಹದ್ದೂರ್ ಶಾಸ್ತ್ರೀಜಿ ಅವರು ಹಸಿರು ಕ್ರಾಂತಿಯನ್ನು ಮಾಡುವ ಮೂಲಕ ಆಹಾರ ಉತ್ಪಾದನೆ ಮಾಡುವುದಲ್ಲದೇ ವಿದೇಶಕ್ಕೆ ರವಾನೆ ಮಾಡುವ ಶಕ್ತಿ ಕೊಟ್ಟಿದ್ದು ಕಾಂಗ್ರೆಸ್ ಪಕ್ಷ. ಅನೇಕ ಬೃಹತ್ ಕಾರ್ಖಾನೆಗಳನ್ನು ಕಟ್ಟಿ ಉದ್ಯೋಗಗಳನ್ನು ನೀಡಿದೆ. ಕಾಂಗ್ರೆಸ್ ಸರಕಾರ ಕೇಂದ್ರದಲ್ಲಿ ಅಧಿಕಾರದಲ್ಲಿದ್ದಾಗ ಬಡವರಿಗೆ ಕೈಗೆಟುಕುವ ಬೆಲೆಗೆ ವಸ್ತುಗಳು ದೊರೆಯುತ್ತಿದ್ದವು.…

Read More

ಸಿಂದಗಿ: ನಗರದ ಪ್ರಜಾಪಿತ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ಏ.೨೭-೨೯ರ ವರೆಗೆ ಚಿಣ್ಣರಿಗೆ ಮೂರು ದಿನಗಳ ಕಾಲ ಚಿಗುರು-ಚಿಲಿಪಿಲಿ ಚೈತ್ರದ ಶಿಬಿರ ಹಮ್ಮಿಕೊಳ್ಳಲಾಗಿದೆ ಎಂದು ಬ್ರಹ್ಮಾಕುಮಾರಿ ರಾಜಯೋಗಿನಿ ಪವಿತ್ರಾ ಅಕ್ಕನವರು ತಿಳಿಸಿದ್ದಾರೆ.ಪ್ರತಿದಿನ ಬೆಳಿಗ್ಗೆ ೧೦ರಿಂದ ಸಾಯಂಕಾಲ ೪ಗಂಟೆಯವೆರೆಗ ಜರುಗಲಿರುವ ಶಿಬಿರದ ಮಾರ್ಗದರ್ಶಕರಾಗಿ ಬಾಗಲಕೋಟೆಯ ಬಿ.ಕೆ. ನಾಗರತ್ನ ಅಕ್ಕನವರು, ಎಂ.ಕೆ ಹುಬ್ಬಳ್ಳಿಯ ಬಿ.ಕೆ ಜ್ಯೋತಿ ಅಕ್ಕನವರು, ಬಿ.ಕೆ ಗಾಯತ್ರಿ ಅಕ್ಕನವರು, ಶಿಕ್ಷಣ ತಜ್ಞ ಎಚ್.ಟಿ. ಕುಲಕರ್ಣಿ ಗುರುಗಳು, ಶಿಕ್ಷಕ ವ್ಯಂಗ್ಯ ಚಿತ್ರಗಾರ ಶರಣು ಚಟ್ಟಿ, ಚಿತ್ರಕಲಾ ಶಿಕ್ಷಕ ಎಂ.ಬಿ ಅಲ್ದಿ, ಗುಂಡಣ್ಣ ಕುಂಬಾರ, ರೇಣುಕ ಗವಾಯಿ, ದೈಹಿಕ ಶಿಕ್ಷಕ ಸಿದ್ದಲಿಂಗ ಚೌದರಿ ಭಾಗವಹಿಸುವರು.ಶಿಬಿರದಲ್ಲಿ ಯೋಗಾಸನ, ಧ್ಯಾನ, ಕ್ರಾಫ್ಟ್, ಸ್ಪೋಕನ್ ಇಂಗ್ಲೀಷ್,ವ್ಯಂಗ್ಯ ಚಿತ್ರಕಲೆ, ನೃತ್ಯ, ಸ್ವಾನುಭೂತಿ, ಸ್ವಯಂ ಜಾಗೃತಿ, ತಾರ್ಕಿಕ ಶಕ್ತಿಯ ವೃದ್ಧಿ, ಜ್ಞಾನದ ಮಹತ್ವ ಮತ್ತು ಸ್ಮರಣ ಶಕ್ತಿಯನ್ನು ಹೆಚ್ಚಿಸುವ ವಿಧಿ ಕುರಿತು ಮಾರ್ಗದರ್ಶನ ನೀಡಲಿದ್ದಾರೆ. ೬-೯ನೇ ತರಗತಿಯ ವಿದ್ಯಾರ್ಥಿಗಳು ಶಿಬಿರದ ಲಾಭವನ್ನು ಪಡೆದುಕೊಳ್ಳಬೇಕು. ಈ ಶಿಬಿರವು ಉಚಿತವಾಗಿದ್ದು, ಕೂಡಲೇ ಎಲ್ಲ ಮಕ್ಕಳು ೮೦೯೫೦೬೫೬೮೭…

Read More

ಇಂಡಿ: ಬಿಜೆಪಿ ಕಾರ‍್ಯಗಳನ್ನು ಪ್ರಶ್ನೆ ಮಾಡಿದವರಿಗೆ ಜೈಲಿಗೆ ಅಟ್ಟುತ್ತಿದ್ದಾರೆ. ದೇಶದಲ್ಲಿ ಒಂದು ರೀತಿಯ ಅಘೋಷಿತ ತುರ್ತು ಪರಿಸ್ಥಿತಿ ಜಾರಿಯಲ್ಲಿದೆ ಎಂದು ಶಾಸಕ ಯಶವಂತರಾಯಗೌಡ ಪಾಟೀಲ ಹೇಳಿದರು.ಮಂಗಳವಾರ ಸಾಯಂಕಾಲ ಪಟ್ಟಣದ ಸಿಂದಗಿ ರಸ್ತೆಯ ಧನಶೆಟ್ಟಿ ಮಂಗಲ ಕಾರ್ಯಾಲಯದಲ್ಲಿ ಆಯೋಜಿಸಿದ್ದ ವಿಜಯಪುರ ಜಿಲ್ಲಾ ಲೋಕಸಭೆಯ ಚುನಾವಣೆಯ ಪ್ರಚಾರ ಕಾರ‍್ಯಕ್ರಮಲ್ಲಿ ಅವರು ಮಾತನಾಡಿದರು.ಸಂವಿಧಾನದ ಬದಲಾವಣೆಯ ಹುನ್ನಾರ ಮಾಡುತ್ತಿದ್ದಾರೆ. ದೇಶದಲ್ಲಿ ಸರ್ವಾಧಿಕಾರದ ಧೋರಣೆಯಿದೆ ಎಂದು ಆರೋಪಿಸಿದ ಅವರು, ಯಶಸ್ವಿ ಪ್ರಜಾ ಪ್ರಭುತ್ವಕ್ಕಾಗಿ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ಮನವಿ ಮಾಡಿದರು.ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಮಾತನಾಡಿ, ದೇಶದ ಜನತೆಯ ಗುಲಾಮಗಿರಿ ಕಿತ್ತೊಗೆಯಲು ಮತ್ತು ಸ್ವಾತಂತ್ರ‍್ಯ ತಂದು ಕೊಡಲು ಕಟ್ಟಿದ ಪಕ್ಷ ಕಾಂಗ್ರೆಸ್. ಅದಕ್ಕೆ ತನ್ನದೇಯಾದ ಇತಿಹಾಸವಿದೆ. ಅದನ್ನು ಹುಟ್ಟುಹಾಕಿದ ಅನೇಕರು ದೇಶದ ಸ್ವಾತಂತ್ರ‍್ಯಕ್ಕಾಗಿ ಹೋರಾಡಿ ದೇಶಕ್ಕೆ ಸ್ವಾತಂತ್ರ‍್ಯ ತಂದುಕೊಟ್ಟಿದ್ದಾರೆ ಎಂದು ಹೇಳಿದರು.ದೇಶದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರೈತರ ಸಾಲ ಮನ್ನಾ, ದೇಶದ ಪ್ರತೀ ಕುಟುಂಬದ ಮಹಿಳೆಗೆ ವರ್ಷಕ್ಕೆ ೧ ಲಕ್ಷ ಹಣ ನೀಡುವದಲ್ಲದೇ…

Read More

ಬಸವನಬಾಗೇವಾಡಿ: ಸಮಾಜಕ್ಕೆ ಕೊಡುಗೆ ಕೊಟ್ಟ ಮಹನೀಯರನ್ನು ಎಲ್ಲ ಕಾಲಕ್ಕೂ ಸಮಾಜ ಸ್ಮರಿಸುವ ಮೂಲಕ ಅವರಿಗೆ ಗೌರವ-ನಮನ ಸಲ್ಲಿಸಬೇಕಾದ ಕರ್ತವ್ಯವಾಗಿದೆ ಎಂದರೆ ತಪ್ಪಾಗಲಾರದು ಎಂದು ಭಾರತೀಯ ಜೀವ ವಿಮಾ ನಿಗಮದ ನಿವೃತ್ತ ಅಧಿಕಾರಿ, ಸಾಹಿತಿ ವಿವೇಕಾನಂದ ಕಲ್ಯಾಣಶೆಟ್ಟಿ ಹೇಳಿದರು.ಪಟ್ಟಣದ ಅಕ್ಕನಾಗಮ್ಮ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ಕೂಡಲಸಂಗಮ ಅಭಿವೃದ್ಧಿ ಮಂಡಳಿಯು ಬುಧವಾರ ಹಮ್ಮಿಕೊಂಡಿದ್ದ ಬಸವೇಶ್ವರ ದೇವಾಲಯ ಸಂಸ್ಥೆಯ ಮೂಲ ಸಂಸ್ಥಾಪಕ ನಿವೃತ್ತ ಮಾಮಲೇದಾರ ಲಿಂ. ಮಲ್ಲಪ್ಪ ಶಂಕ್ರೆಪ್ಪ ಸಿಂಹಾಸನ ಅವರ ಪುಣ್ಯ ಸ್ಮರಣೆ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿ ಮಾತನಾಡಿದ ಅವರು, ಸಮಾಜಕ್ಕೆ ಕೊಡುಗೆ ಕೊಟ್ಟವರ ಸಾಲಿನಲ್ಲಿರುವ ಅಮೀನಗಡದ ನಿವೃತ್ತ ಮಾಮಲೇದಾರ ಲಿಂ. ಮಲ್ಲಪ್ಪ ಶಂಕ್ರೆಪ್ಪ ಸಿಂಹಾಸನ ಅವರು ತಮ್ಮ ನಿವೃತ್ತಿಯ ನಂತರ ಬಸವೇಶ್ವರ ದೇವಾಲಯ ಸಂಸ್ಥೆಯ ಮೂಲಸಂಸ್ಥಾಪಕರಾಗಿ ಬಸವೇಶ್ವರ ದೇವಸ್ಥಾನದ ಮೂಲ ಜೀರ್ಣೋದ್ಧಾರಕರಾಗಿ ಧಾರ್ಮಿಕ ಕ್ಷೇತ್ರದ ಕಾರ್ಯ ಮಾಡಿದ್ದಾರೆ. ಇವರು ಆರಂಭದಲ್ಲಿ ತಾವು ದೇಣಿಗೆ ನೀಡಿ ನಂತರ ಸಮಾಜದಲ್ಲಿರುವ ಎಲ್ಲ ಬಾಂಧವರ ದೇಣಿಗೆ ಸಹಾಯದೊಂದಿಗೆ ಬಸವೇಶ್ವರ ಜನ್ಮಸ್ಥಳ ಬಸವನಬಾಗೇವಾಡಿಯ ಬಸವೇಶ್ವರ ದೇವಾಲಯದ…

Read More

ಕೊಲ್ಹಾರ: ಆರೋಗ್ಯ ಕೇಂದ್ರಕ್ಕೆ ಬರುವ ರೋಗಿಗಳೊಂದಿಗೆ ಸೌಜನ್ಯದಿಂದ ವರ್ತಿಸಿ, ಉತ್ತಮ ವೈದ್ಯಕೀಯ ಚಿಕಿತ್ಸೆ ನೀಡುವ ಮೂಲಕ ಜನಸ್ನೇಹಿಯಾಗಿ ಕಾರ್ಯನಿರ್ವಹಿಸುವಂತೆ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಶಿ ಆನಂದ್ ಹೇಳಿದರು.ತಾಲೂಕಿನ ಕೂಡಗಿ ಸರಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ, ಅಲ್ಲಿನ ವ್ಯವಸ್ಥೆ ಕುರಿತು ಪರಿಶೀಲನೆ ನಡೆಸಿದರು. ಆಸ್ಪತ್ರೆಗೆ ಬರುವ ರೋಗಿಗಳನ್ನು ಸೌಜನ್ಯದಿಂದ ಮಾತನಾಡಿ ಉತ್ತಮ ವೈದ್ಯಕೀಯ ಉಪಚಾರ ನೀಡುವ ಮೂಲಕ ಸಾರ್ವಜನಿಕರಿಗೆ ಯಾವುದೇ ತೊಂದರೆಗಳಾಗದಂತೆ ನೋಡಿಕೊಳ್ಳಬೇಕು ಎಂದು ಸೂಚನೆ ನೀಡಿದರು.ನಂತರ ಆಸ್ಪತ್ರೆಯ ಚುಚ್ಚುವಿಕೆ ಕೊಠಡಿ, ಔಷಧಿ ಸಂಗ್ರಾಹಣೆ ಕೊಠಡಿ, ಒಳ ರೋಗಿಗಳ ಕೊಠಡಿಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ಇದೇ ವೇಳೆ ಆಸ್ಪತ್ರೆಯ ಇಲ್ಲಾ ವಿಭಾಗಗಳಲ್ಲಿ ಸ್ವಚ್ಛತೆ ಹಾಗೂ ನೈರ್ಮಲ್ಯೀಕರಣ ಕಾಪಾಡಿಕೊಳ್ಳಬೇಕು. ಕಡ್ಡಾಯವಾಗಿ ಪ್ರತಿದಿನ ಆಸ್ಪತ್ರೆಯ ಇಲ್ಲಾ ವಿಭಾಗಗಳಲ್ಲಿ ಸ್ವಚ್ಛತೆಗೆ ಆಧ್ಯತೆ ನೀಡಬೇಕು ಎಂದು ಅಲ್ಲಿನ ವೈದ್ಯಾಧಿಕಾರಿಗಳಿಗೆ ಹಾಗೂ ಸಿಬ್ಬಂದಿಗಳಿಗೆ ಕಟ್ಟು ನಿಟ್ಟಿನ ಸೂಚನೆ ನೀಡಿದರು. ಆರೋಗ್ಯ ತಪಾಸಣೆಗಾಗಿ ಬಂದ ಸಾರ್ವಜನಿಕರೊಂದಿಗೆ ಮಾತಾಡಿ ಅವರೊಂದಿಗೆ ಇಲ್ಲಿನ ವೈದ್ಯಕೀಯ ಗುಣಮಟ್ಟ ಯಾವ ತರನಾಗಿ ಇದೆ…

Read More

ವಿಜಯಪುರದಲ್ಲಿ ಕಾಲ್ನಡಿಗೆ ಜಾಥಾ ಮೂಲಕ ಮತದಾನ ಜಾಗೃತಿ ವಿಜಯಪುರ: ಈ ಬಾರಿ ಯುವ ಮತದಾರರು ಅತ್ಯಧಿಕ ಸಂಖ್ಯೆಯಲ್ಲಿದ್ದಾರೆ. ಮೊಟ್ಟ ಮೊದಲ ಬಾರಿಗೆ ಮತದಾನ ಮಾಡುವವರು ತಪ್ಪದೇ ತಮ್ಮ ಹಕ್ಕನ್ನು ಚಲಾಯಿಸಿ, ಕರ್ತವ್ಯವನ್ನು ನಿಭಾಯಿಸಿ ಪ್ರಜಾಪ್ರಭುತ್ವವನ್ನು ಬಲಪಡಿಸಬೇಕು. ಜವಾಬ್ದಾರಿಯುತವಾಗಿ ಸೂಕ್ತ ಅಭ್ಯರ್ಥಿಯನ್ನು ಆರಿಸಿ ಸದೃಢ ರಾಷ್ಟ್ರ ನಿರ್ಮಾಣಕ್ಕೆ ಕಾರಣಿಭೂತರಾಗಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿಗಳಾದ ಟಿ. ಭೂಬಾಲನ್ ಹೇಳಿದರು.ಬುಧವಾರ ಜಿಲ್ಲಾಡಳಿತ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ್ಲ ಲೋಕಸಭಾ ಚುನಾವಣೆ-೨೦೨೪ರ ಪ್ರಯುಕ್ತ ಮತದಾನ ಜಾಗೃತಿಗಾಗಿ ವಿಜಯಪುರ ಜಿಲ್ಲಾ ಪಂಚಾಯತಿಯ ಆಟದ ಮೈದಾನದಿಂದ ಹಮ್ಮಿಕೊಂಡ ಕಾಲ್ನಡಿಗೆ ಜಾಗೃತಿ ಜಾಥಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.ಯುವಕರು ಒಂದು ದೇಶದ ಶಕ್ತಿಯಾಗಿ ರೂಪುಗೊಂಡಾಗ ಆಡಳಿತ ವ್ಯವಸ್ಥೆ ಉತ್ತಮವಾಗಿ ಕಾರ್ಯನಿರ್ವಹಿಸುತ್ತದೆ. ಚಾಚುತಪ್ಪದೇ ಮತದಾನ ಮಾಡಬೇಕು ಹಾಗೂ ನೆರೆಹೊರೆಯವರಿಗೆ ಮತದಾನದ ಜಾಗೃತಿ ಮೂಡಿಸಬೇಕು ಎಂದು ಹೇಳಿದರು.ಜಿಲ್ಲಾ ಪೋಲಿಸ್ ವರಿಷ್ಠ್ಠಾಧಿಕಾರಿಗಳಾದ ಋಷಿಕೇಶ ಸೊನಾವಣೆ, ವಿಜಯಪುರ ಮೀಸಲು ಮತಕ್ಷೇತ್ರದ ಚುನಾವಣಾ ವೀಕ್ಷಕರಾದ ಡಾ. ರತನ್ ಕನ್ವರ್ ಹೆಚ್. ಗಧವಿಚರಣ, ಇನ್ನೋರ್ವ ವೀಕ್ಷಕರಾದ…

Read More