Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಾನುವಾರ ಜಾತ್ರೆಯ ಅಂಗವಗಿ ನಗರದ ತೊರವಿಯಲ್ಲಿ ನಡೆಯುತ್ತಿರುವ ಜಾನುವಾರ ಜಾತ್ರಾ ಸ್ಥಳಕ್ಕೆ ಬುಧವಾರ ಜಿಲ್ಲಾಧಿಕಾರಿ ಡಾ.ಆನಂದ.ಕೆ ಅವರು ಭೇಟಿ ನೀಡಿ, ಪರಿಶೀಲನೆ ನಡೆಸಿ ಜಾತ್ರೆಯ ಸುಸೂತ್ರ ನಿರ್ವಹಣೆಗಾಗಿ ಅಧಿಕಾರಿಗಳಿಗೆ ಅಗತ್ಯ ಸಲಹೆ ಸೂಚನೆ ನೀಡಿದರು.ಸಂಕ್ರಮಣ ಜಾತ್ರೆಯ ಹಿನ್ನೆಲೆಯಲ್ಲಿ ಜಾನುವಾರ ಜಾತ್ರೆ ಆಯೋಜಿಸಲಾಗುತ್ತಿದ್ದು, ಇದೇ ಜ.೧೦ ರಿಂದ ಆರಂಭಗೊಂಡಿದ್ದು, ಈ ಸಂದರ್ಭ ಯಾವುದೇ ಸಮಸ್ಯೆಯುಂಟಾಗದಂತೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿರುವುದನ್ನು ಹಾಗೂ ಜಾತ್ರೆಗೆ ಆಗಮಿಸಲು ಅನುಕೂಲವಾಗುವ ನಿಟ್ಟಿನಲ್ಲಿ ಸುಗಮ ರಸ್ತೆ ಹಾಗೂ ಸಾರಿಗೆ ವ್ಯವಸ್ಥೆ, ಜಾನುವಾರಗಳಿಗೆ ಕುಡಿಯುವ ನೀರು ಒದಗಿಸುವುದು ಪಶುವೈದ್ಯಾಧಿಕಾರಿಗಳು ಜಾತ್ರೆಯ ಸಂದರ್ಭದಲ್ಲಿ ಅಗತ್ಯ ಮುಂಜಾಗ್ರತೆ ತೆಗೆದುಕೊಂಡಿರುವ ಕುರಿತು ಮಾಹಿತಿ ಪಡೆದುಕೊಂಡರು.ಆಂಬುಲೆನ್ಸ್, ವೈದ್ಯಕೀಯ ಸೌಲಭ್ಯ ಸೇರಿದಂತೆ ಯಾವುದೇ ಕೊರತೆ ಉಂಟಾಗದಂತೆ ಅಚ್ಚುಕಟ್ಟಾಗಿ ಜಾನುವಾರ ಜಾತ್ರೆ ವ್ಯವಸ್ಥಿತವಾಗಿ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.ಇದೇ ಸಂದರ್ಭದಲ್ಲಿ ನಡೆದಿರುವ ಜಾನುವಾರುಗಳ ಬಹುಮಾನ ಆಯ್ಕೆ ಮಾನದಂಡಗಳಂತೆ ಆಯ್ಕೆ ಪ್ರಕ್ರಿಯೆ ನಡೆಸುವಂತೆ ಸೂಚಿಸಿದರು. ಈ ಬಾರಿ ಜಾತ್ರೆಗೆ ಸುಮಾರು ಐದು ಸಾವಿರ ಜಾನುವಾರಗಳು ಆಗಮಿಸಿದ್ದು,…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದಲ್ಲಿ ಬುಧವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸರಳವಾಗಿ ಹಾಗೂ ಅತ್ಯಂತ ಅರ್ಥಪೂರ್ಣವಾಗಿ ಶಿವಯೋಗಿ ಸಿದ್ಧರಾಮೇಶ್ವರ ಜಯಂತಿ ಆಚರಿಸಲಾಯಿತು.ಜಿಲ್ಲಾಧಿಕಾರಿಗಳಾದ ಡಾ. ಆನಂದ.ಕೆ ಅವರು ಶಿವಯೋಗಿ ಸಿದ್ಧರಾಮೇಶ್ವರ ಭಾವಚಿತ್ರಕ್ಕೆ ಪುಷ್ಪ ನಮನ ಅರ್ಪಿಸಿ,ಗೌರವ ಸಲ್ಲಿಸಿದರು.ಭವ್ಯ ಮೆರವಣಿಗೆನಗರದ ಶ್ರೀ ಸಿದ್ದೇಶ್ವರ ದೇವಸ್ಥಾನದ ಆವರಣದಲ್ಲಿ ಶಿವಯೋಗಿ ಸಿದ್ಧರಾಮೇಶ್ವರ ಭಾವಚಿತ್ರದ ಮೆರವಣಿಗೆಗೆ ಅಪರ ಜಿಲ್ಲಾಧಿಕಾರಿ ಡಾ.ಔದ್ರಾಮ ಅವರು ಚಾಲನೆ ನೀಡಿದರು.ಭವ್ಯ ಮೆರವಣಿಗೆಯು ವಿವಿಧ ಕಲಾ ತಂಡಗಳೊಂದಿಗೆ ನಗರದ ವಿವಿಧ ವೃತ್ತಗಳ ಮೂಲಕ ಸಂಚರಿಸಿ, ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಸಮಾವೇಶಗೊಂಡಿತು.ಈ ಸಂದರ್ಭದಲ್ಲಿ ವಿಜಯಪುರ ಉಪ ವಿಭಾಗಾಧಿಕಾರಿ ಗುರುನಾಥ ದಡ್ಡೆ,ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿಗಳಾದ ನಾರಾಯಣಪ್ಪ ಕುರುಬರ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಮಹೇಶ ಪೋತದಾರ, ವಿಜಯಪುರ ತಹಶೀಲ್ದಾರರಾದ ಪ್ರಶಾಂತ ಚನಗೊಂಡ, ಸುರೇಶ ಚವಲರ, ರಾಮು ಹೊಸಪೇಟೆ, ಈರಪ್ಪ ಗೋಠೆ, ಕೃಷ್ಣ ಹಡಗಲಿ, ಬಾಲಚಂದ್ರ ಕಟ್ಟಿಮನಿ, ದಿಲೀಪ ಧೋತ್ರೆ,…
ಸರ್ಕಾರಿ ಮೆಡಿಕಲ್ ಕಾಲೇಜ್ ಹೋರಾಟ ಹಿನ್ನೆಲೆ ಜೈಲುವಾಸ ಅನುಭವಿಸಿದ್ದ ಆರು ಜನ ಹೋರಾಟಗಾರರು | ಇದು ಜನರ ಗೆಲುವೆಂದ ಹೊಸಮನಿ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಸರ್ಕಾರಿ ಮೆಡಿಕಲ್ ಕಾಲೇಜ್ ಹೋರಾಟ ಹಿನ್ನೆಲೆಯಲ್ಲಿ ಜೈಲು ವಾಸ ಅನುಭವಿಸಿದ್ದ ಆರು ಜನ ಹೋರಾಟಗಾರರು ಬುಧವಾರ ಸಂಜೆ ಜಿಲ್ಲಾ ಕೇಂದ್ರ ಕಾರಾಗೃಹದಿಂದ ಬಿಡುಗಡೆಗೊಂಡರು.ಅತ್ತ ಜೈಲಿನಿಂದ ಹೋರಾಟಗಾರರಾದ ಸಂಗನಬಸವೇಶ್ವರ ಸ್ವಾಮೀಜಿ, ಭಿ. ಭಗವಾನರೆಡ್ಡಿ, ಸಿದ್ರಾಮ ಹಳ್ಳೂರ, ಅರವಿಂದ ಕುಲಕರ್ಣಿ, ಭೋಗೇಶ ಸೊಲ್ಲಾಪೂರ, ಅನೀಲ ಹೊಸಮನಿ ಅವರು ಕಾರಾಗೃಹದಿಂದ ಹೊರ ಬರುತ್ತಿದ್ದಂತೆ ಹೋರಾಟಗಾರರು, ಕುಟುಂಬ ಸದಸ್ಯರು, ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಸಿಹಿ ತಿನಿಸಿ, ಶಾಲು ಹೊದಿಸಿ ಹಾರ ಹಾಕಿ ಸನ್ಮಾನಿಸಿದರು.ಮೆಡಿಕಲ್ ಕಾಲೇಜ್ ಹೋರಾಟಗಾರರಿಗೆ ಜಯವಾಗಲಿ ಎಂಬ ಉದ್ಘೋಷಗಳು ಮೊಳಗಿದವು.ಈ ವೇಳೆ ಜೈಲಿನಿಂದ ಬಿಡುಗಡೆಗೊಂಡ ಹೋರಾಟಗಾರ ಹಾಗೂ ಪರ್ತಕರ್ತ ಅನೀಲ ಹೊಸಮನಿ ಮಾತನಾಡಿ, ಇದು ಜನರ ಗೆಲುವು, ಈ ಹೋರಾಟದ ಫಲವಾಗಿ ವಿಜಯಪುರ ಅಷ್ಟೇ ಅಲ್ಲದೇ ಖಾಸಗಿ ಸಹಭಾಗಿತ್ವದಲ್ಲಿ ಮೆಡಿಕಲ್ ಕಾಲೇಜ್ ಸ್ಥಾಪಿಸುವ ನಿರ್ಧಾರ ಕೈಬಿಟ್ಟಿದೆ, ಕೊನೆಗೂ ಸರ್ಕಾರ…
ವಿಜಯಪುರದಲ್ಲಿ ಅಕ್ಕಪಡೆ ಯೋಜನೆ ಸಂಚಾರಿ ವಾಹನಕ್ಕೆ ಚಾಲನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಮಹಿಳೆ ಮತ್ತು ಮಕ್ಕಳ ಸುರಕ್ಷತೆ, ಘನತೆ ಹಾಗೂ ಸಬಲೀಕರಣದ ಉದ್ದೇಶದಿಂದ ರಾಜ್ಯ ಸರ್ಕಾರ ಅನುಷ್ಠಾನಗೊಳಿಸಿರುವ ಅಕ್ಕಪಡೆ ಯೋಜನೆಯ ಸಂಚಾರಿ ವಾಹನಕ್ಕೆ ಡಿ.೨೨ ರಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಂ.ಬಿ. ಪಾಟೀಲ ಅವರು ಚಾಲನೆ ನೀಡಿದ್ದರು.ಈ ಸಂದರ್ಭದಲ್ಲಿ ಶಾಸಕರಾದ ವಿಠ್ಠಲ ಕಟಕಧೋಂಡ ಹಾಗೂ ಅಶೋಕ ಮನಗೂಳಿ, ಸಂಸದರಾದ ರಮೇಶ ಜಿಗಜಿಣಗಿ, ಜಿಲ್ಲಾಧಿಕಾರಿಗಳಾದ ಡಾ.ಆನಂದ.ಕೆ ಈ ಸಂದರ್ಭದಲ್ಲಿ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಲಕ್ಷ್ಮಣ ನಿಂಬರಗಿ ಅವರು ಜ.೧೪ರಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯ ಆವರಣದಲ್ಲಿ ನಡೆದ ಅಕ್ಕಪಡೆ ಯೋಜನೆಯ ಕುರಿತ ಕಾರ್ಯಕ್ರಮದಲ್ಲಿ ಮಾತನಾಡಿ, ಅಕ್ಕಪಡೆ ಯೋಜನೆಯು ರಾಜ್ಯಾದ್ಯಂತ ಅನುಷ್ಠಾನಗೊಂಡಿದ್ದು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಪೊಲೀಸ್ ಇಲಾಖೆಯ ಸಹಯೋಗದಲ್ಲಿ ಕಾರ್ಯನಿರ್ವಹಿಸುತ್ತಿದೆ. ಜಿಲ್ಲೆಯಲ್ಲಿ ಅಕ್ಕಪಡೆ ಸಿಬ್ಬಂದಿಗಳು ಎರಡು ಪಾಳಿಯಲ್ಲಿ (ಶಿಪ್ಟ್) ಕಾರ್ಯನಿರ್ವಹಿಸುತ್ತಿದ್ದು,…
ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಶ್ರೀ ಸಿದ್ಧರಾಮೇಶ್ವರ ಜಯಂತಿ ಆಚರಣೆಯಲ್ಲಿ ಸರ್ವರೂ ಪಾಲ್ಗೊಂಡು ವಿಜೃಂಭಣೆಯಿಂದ ಆಚರಿಸುವಂತಾಗಲಿ ಎಂದು ಬಿಜೆಪಿ ಧುರೀಣ ಬಸನಗೌಡ ಪಾಟೀಲ (ಯಡಿಯಾಪೂರ) ಹೇಳಿದರು.ಪಟ್ಟಣದಲ್ಲಿ ಪಟ್ಟಣದಲ್ಲಿ ಭೋವಿ ಸಮುದಾಯದಿಂದ ಆಚರಿಸಲಾದ ಶ್ರೀಸಿದ್ಧರಾಮೇಶ್ವರ ಜಯಂತಿಯಲ್ಲಿ ಪಾಲ್ಗೊಂಡು ನಂತರ ಸಮೀಪದ ಜಮಾದರ ಲೇಔಟ್ನಲ್ಲಿ ವೃತ್ತ ಉದ್ಘಾಟಿಸಿ ಮಾತನಾಡಿದರು.ಶರಣ, ಮಹಾಪುರುಷ, ಸ್ವಾತಂತ್ರ್ಯಯೋಧರನ್ನು ಕೇವಲ ಒಂದು ಸಮುದಾಯಕ್ಕೆ ಸೀಮಿತಗೊಳಿಸುವ ಇಂದಿನ ಪರಿಪಾಠ ಬದಲಾಗಬೇಕು. ಎಲ್ಲ ಮಹಾನುಭಾವರ ಜಯಂತಿಗಳನ್ನು ಎಲ್ಲರೂ ಸೇರಿ ಆಚರಿಸುವಂತಾಗಲಿ ಎಂದರು.ನೂತನ ಸಿದ್ದರಾಮೇಶ್ವರ ವೃತ್ತ ಉದ್ಘಾಟನಾ ಕಾರ್ಯಕ್ರಮದ ಸಾನಿಧ್ಯವನ್ನು ಅವೋಗೇಶ್ವರ ಧಾಮದಶ್ರೀ ವಹಿಸಿದ್ದರು.ಸಿದ್ದಪ್ಪ ವಡ್ಡರ, ಜಗನ್ನಾಥ ಬರಟಗಿ, ಅರ್ಜುನ ಮಾನೆ, ಲಕ್ಷ್ಮಣ ವಡ್ಡರ, ರಾಜು ಆಲಕುಂಟೆ, ತಿಪ್ಪಣ್ಣ ವಡ್ಡರ ಸಹಿತ ಭೋವಿ ಸಮುದಾಯದ ಪ್ರಮುಖರು ಇದ್ದರು.
ಉದಯರಶ್ಮಿ ದಿನಪತ್ರಿಕೆ ಇಂಡಿ: ತಾಲ್ಲೂಕಿನ ೩೮ ಗ್ರಾಮ ಪಂಚಾಯತಿ ಮತ್ತು ಇತರೇ ಗ್ರಾಮಗಳಿಗೆ ಜನ ಜೀವನ್ ಮಶಿನ್ ಯೋಜನೆಯ ಅಡಿಯಲ್ಲಿ ಕುಡಿಯುವ ನೀರು ಪೂರೈಕೆ ಮಾಡುತ್ತಿದೆ. ಆದರೆ ಕಳೆದ ಒಂದು ವಾರದಿಂದ ನೀರು ಪೂರೈಕೆಯಾಗದೇ ಗ್ರಾಮಸ್ಥರು ತೊಂದರೆ ಅನುಭವಿಸುತ್ತಿದ್ದಾರೆ. ಅಧಿಕಾರಿಗಳಿಗೆ ಕಾರಣ ಕೇಳಿದರೆ ಜನ ಜೀವನ್ ಮಶಿನ್ ಅಡಿಯಲ್ಲಿ ನೀರು ಸರಬರಾಜು ಮಾಡುವ ಟೆಂಡರುದಾರರಿಗೆ ಬರಬೇಕಾದ ಹಣ ಬಿಡುಗಡೆಯಾಗಿಲ್ಲ. ಹೀಗಾಗಿ ಅವರು ನೀರು ಬಿಡುವದನ್ನು ಸ್ಥಗಿತಗೊಳಿಸಿದ್ದಾರೆ. ನೀರು ಪೂರೈಕೆ ಮಾಡುವ ಕೆರೆಗಳಲ್ಲಿ, ಬೋರವೆಲ್ ಗಳಲ್ಲಿ ಮತ್ತು ಇತರೇ ನೀರಿನ ಮೂಲಗಳಲ್ಲಿ ಸಾಕಷ್ಟು ನೀರು ಇದ್ದರೂ ಕೂಡಾ ಟೆಂಡರುದಾರರು ಕಳೆದ ಆರು ತಿಂಗಳಿಂದ ಬಿಲ್ಲು ಪಾವತಿಯಾಗದಿರುವದರಿಂದ ನೀರು ಸರಬರಾಜು ಮಾಡುವದನ್ನು ನಿಲ್ಲಿಸಿದ್ದಾರೆ.ಈ ಕುರಿತು ನೀರು ಸರಬರಾಜು ಮಾಡುವ ಗುತ್ತಿಗೆದಾರರನ್ನು ಕೇಳಿದರೆ ತಾಲ್ಲೂಕು ಪಂಚಾಯತಿ ಮತ್ತು ಜಿ.ಪಂಚಾಯತಿ ಅಧಿಕಾರಿಗಳಿಗೆ ಹಲವಾರು ಬಾರಿ ಮನವಿ ಮಾಡಿಕೊಂಡಿದ್ದಾರೆ. ಅದಲ್ಲದೇ ಜಿಲ್ಲೆಯ ಎಲ್ಲಾ ಗುತ್ತಿಗೆದಾರರು ರಾಜ್ಯ ಮಟ್ಟದಲ್ಲಿ ಈ ಬಗ್ಗೆ ಪ್ರತಿಭಟನೆ ಮಾಡಲು ನಿರ್ಧರಿಸಿದ್ದಾರೆ. ಆದರೂ ಕೂಡಾ ಹಣ…
ಉದಯರಶ್ಮಿ ದಿನಪತ್ರಿಕೆ ಕೊಲ್ಹಾರ: ಪಟ್ಟಣ ಪಂಚಾಯತಿಯಲ್ಲಿ ಜರುಗಿದ ಸಿದ್ಧರಾಮೇಶ್ವರ ಜಯಂತಿ ಕಾರ್ಯಕ್ರಮದಲ್ಲಿ ಪಪಂ ಅಧ್ಯಕ್ಷರಾದ ಸಿ.ಎಸ್. ಗಿಡ್ಡಪ್ಪಗೋಳ ಪುಷ್ಪಾರ್ಚನೆ ಸಲ್ಲಿಸಿದರು.ಈ ವೇಳೆ ಪಪಂ ಮುಖ್ಯಾಧಿಕಾರಿ ವಿರೇಶ ಹಟ್ಟಿ, ಪಿಎಸ್ಐ ಅಶೋಕ ನಾಯಕ, ಪಪಂ ಸದಸ್ಯರಾದ ಬಾಬು ಭಜಂತ್ರಿ, ನಿಂಗಪ್ಪ ಗಣಿ, ಇಕ್ಬಾಲ್ ನದಾಪ್, ಮಲ್ಲು ಹೆರಕಲ್, ಅನ್ವರ್ ಕಂಕರಪೀರ ಹಾಗೂ ಸಿಬ್ಬಂದಿ ವರ್ಗದವರು ಇದ್ದರು.
ಸಂಸದ ರಮೇಶ ಜಿಗಜಿಣಗಿ ನೈಋತ್ಯ ರೈಲ್ವೇ ಜನರಲ್ ಮ್ಯಾನೇಜರ್ ಮುಕುಲ್ ಮಾಥುರ ಭೇಟಿ | ಮಹತ್ವದ ಚರ್ಚೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ರೈಲ್ವೇ ನಿಲ್ದಾಣಗಳಲ್ಲಿಯೇ ಕೋಚ್ ನಿರ್ವಹಣೆ ಹಾಗೂ ತಪಾಸಣೆ ನಡೆಸಲು ಅನುಕೂಲವಾಗುವ ನಿಟ್ಟಿನಲ್ಲಿ ಪಿಟ್ಲೈನ್ ವ್ಯವಸ್ಥೆ ಕಲ್ಪಿಸುವ ನಿಟ್ಟಿನಲ್ಲಿ ಸಂಸದ ರಮೇಶ ಜಿಗಜಿಣಗಿ ನೈಋತ್ಯ ರೈಲ್ವೇ ಜನರಲ್ ಮ್ಯಾನೇಜರ್ ಮುಕುಲ್ ಮಾಥುರ ಅವರನ್ನು ಭೇಟಿ ಮಾಡಿ ಮಹತ್ವದ ಚರ್ಚೆ ನಡೆಸಿದರು.ವಿಜಯಪುರದಲ್ಲಿಯೇ ಪಿಟ್ ಲೈನ್ ವ್ಯವಸ್ಥೆಯಾದರೆ ರೈಲ್ವೇ ಕೋಚ್ಗಳ ನಿರ್ವಹಣೆ, ತಪಾಸಣೆಗಾಗಿ ಬೇರೆ ಕಡೆ ಸಾಗಿಸುವುದು ತಪ್ಪುತ್ತದೆ, ಈಗಾಗಲೇ ಈ ಪಿಟ್ಲೈನ್ ವಿಜಯಪುರಕ್ಕೆ ಮಂಜೂರಾಗಿದೆ, ಹೀಗಾಗಿ ಕೂಡಲೇ ಈ ವ್ಯವಸ್ಥೆ ಆರಂಭಿಸಬೇಕು ಎಂದರು.ರೈಲುಗಳ ಅಂಡರ್ಗೇರ್, ಬ್ರೇಕ್, ವಿದ್ಯುತ್ ವ್ಯವಸ್ಥೆಗಳನ್ನು ಸಮಗ್ರವಾಗಿ ಪರಿಶೀಲನೆ ನಡೆಸಲು, ವಿವಿಧ ರೀತಿಯ ತಾಂತ್ರಿಕ ಪರೀಶೀಲನೆ ನಡೆಸಲು ಪಿಟ್ಲೈನ್ ವ್ಯವಸ್ಥೆ ವಿಜಯಪುರ ರೈಲ್ವೇ ನಿಲ್ದಾಣದಲ್ಲಿ ಅಳವಡಿಸುವ ನಿಟ್ಟಿನಲ್ಲಿ ಮಹತ್ವದ ಸಮಾಲೋಚನೆ ನಡೆಸಿದರು. ಶೀಘ್ರದಲ್ಲಿಯೇ ಈ ಸೌಲಭ್ಯವನ್ನು ಸ್ಥಾಪಿಸುವಂತೆ ಸಂಸದ ಜಿಗಜಿಣಗಿ ಹೇಳಿದರು.ರೈಲ್ವೇ ಹೋರಾಟಗಾರ ಅಶೋಕ ಹಳ್ಳೂರ ವಿಜಯ ಜೋಶಿ…
ಜಾತ್ರಾ ಮಹೋತ್ಸವಕ್ಕೆ ಸಕಲ ಸಿದ್ಧತೆ | ಜ.18 ರಿಂದ ಜ.22 ರವರೆಗೆ ಜಾನುವಾರ ಜಾತ್ರೆ | ಒಮ್ಮತದ ನಿರ್ಣಯದಿಂದ ಆತಂಕ ದೂರ ಉದಯರಶ್ಮಿ ದಿನಪತ್ರಿಕೆ ಚಡಚಣ: ಪಟ್ಟಣದ ಪ್ರವಾಸಿ ಮಂದಿರದಲ್ಲಿ ಬುಧವಾರ ಎಪಿಎಮ್ಸಿ, ಪಟ್ಟಣ ಪಂಚಾಯತ್ ಹಾಗೂ ಶ್ರೀ ಸಂಗಮೇಶ್ವರ ಸಂಸ್ಥೆಯ ದೇವರ ಜಾತ್ರಾ ಸಮಿತಿಯವರ ನಡೆದ ಸಭೆ ಪಟ್ಟಣದ ಆರಾಧ್ಯ ದೈವ ಶ್ರೀ ಸಂಗಮೇಶ್ವರ ದೇವರ ಜಾತ್ರಾ ಮಹೋತ್ಸವದ ಆಯೋಜನೆ ಕುರಿತು ಕಳೆದ ಕೆಲವು ದಿನಗಳಿಂದ ವಿವಿಧ ವಲಯಗಳಲ್ಲಿ ಭಿನ್ನಾಭಿಪ್ರಾಯಗಳು ವ್ಯಕ್ತವಾಗಿ ಗೊಂದಲ ಉಂಟಾಗಿತ್ತು. ಇದರಿಂದ ಭಕ್ತರು ಹಾಗೂ ಸಾರ್ವಜನಿಕರಲ್ಲಿ ಆತಂಕವೂ ಕಾಣಿಸಿಕೊಂಡಿತ್ತು.ಈ ಹಿನ್ನೆಲೆ ಶ್ರೀ ಸಂಗಮೇಶ್ವರ ಸಂಸ್ಥೆಯ ದೇವರ ಜಾತ್ರಾ ಸಮಿತಿಯ ಆಡಳಿತ ಮಂಡಳಿ, ಪಟ್ಟಣ ಪಂಚಾಯತ್, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ (ಎಪಿಎಂಸಿ), ಹಾಗೂ ಗ್ರಾಮದ ಗಣ್ಯರೊಂದಿಗೆ ಸಭೆ ನಡೆಯಿತು. ಸಭೆಗಳಲ್ಲಿ ಎಲ್ಲರ ಅಭಿಪ್ರಾಯಗಳನ್ನು ಆಲಿಸಿ, ಸಂಪ್ರದಾಯ, ಸಾರ್ವಜನಿಕ ಹಿತ ಮತ್ತು ವ್ಯವಸ್ಥೆಯ ಸುಗಮತೆಗೆ ಆದ್ಯತೆ ನೀಡುವ ಕುರಿತು ವಿಸ್ತೃತ ಚರ್ಚೆ ನಡೆಸಲಾಯಿತು.ಚರ್ಚೆಗಳ ಫಲವಾಗಿ, ಜಾತ್ರಾ ಮಹೋತ್ಸವವನ್ನು…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಬಿ.ಎಲ್.ಡಿ.ಇ ಸಂಸ್ಥೆಯ ಎ.ವಿಎಸ್ ಆಯುರ್ವೇದ ಮಹಾವಿದ್ಯಾಲಯದ ಪ್ರಾಚಾರ್ಯಡಾ. ಅಶೋಕ ಪಾಟೀಲ ಅವರನ್ನು ಕೇಂದ್ರೀಯ ಆಯುಷ್ ಪರೀಕ್ಷೆ ಪ್ರಾಧಿಕಾರದ ಸಲಹಾ ಸಮಿತಿ ಸದಸ್ಯರನ್ನಾಗಿ ನಾಮನಿರ್ದೇಶನ ಮಾಡಲಾಗಿದೆ.ಭಾರತೀಯ ಚಿಕಿತ್ಸೆ ಪದ್ಧತಿಗಳ ಆಯೋಗ ಮತ್ತು ಆಯುಷ್ ಇಲಾಖೆ ಮೂರು ವರ್ಷಗಳ ಅವಧಿಗೆ ನಾಮ ನಿರ್ದೇಶನ ಮಾಡಲಾಗಿದೆ.ಡಾ. ಅಶೋಕ ಪಾಟೀಲ ಅವರು 19 ವರ್ಷಗಳ ಸುಧೀರ್ಘ ಅಧ್ಯಾಪಕ ವೃತ್ತಿಯಲ್ಲಿದ್ದು ಅನೇಕ ಸಂಶೋಧನೆಗಳನ್ನು ಕೈಗೊಂಡು 35 ಕ್ಕೂ ಹೆಚ್ಚು ಪ್ರಭಂದಗಳನ್ನು ಮಂಡಿಸಿದ್ದಾರೆ. ನಾನಾ ಆರೋಗ್ಯ ವಿಶ್ವವಿದ್ಯಾಲಯಗಳಲ್ಲಿ ಪರೀಕ್ಷಕರಾಗಿ ಸಂಶೋಧನೆ ಪರಿಣಿತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಅಲ್ಲದೇ, ಪಿ.ಎಚ್.ಡಿ ಪದವಿಧರರಿಗೆ ಮಾರ್ಗದರ್ಶಕರಾಗಿ ಅನುಭವ ಪಡೆದಿದ್ದಾರೆ.ಡಾ. ಅಶೋಲ ಪಾಟೀಲ ಅವರನ್ನು ನಾಮನಿರ್ದೇಶಿತ ಮಾಡಿರುವುದಕ್ಕೆ ಬಿ.ಎಲ್.ಡಿ.ಇ ಸಂಸ್ಥೆಯ ಅಧ್ಯಕ್ಷ ಡಾ. ಎಂ. ಬಿ. ಪಾಟೀಲ, ಕಾರ್ಯದರ್ಶಿ ಸುನೀಲಗೌಡ ಪಾಟೀಲ, ಬಿ.ಎಲ್.ಡಿ.ಇ. ಡೀಮ್ಡ ವಿಶ್ವವಿದ್ಯಾಲಯದ ಸಮಕುಲಾಧಿಪತಿ ಡಾ. ವೈ. ಎಂ.ಜಯರಾಜ, ರಜಿಸ್ಟ್ರಾರ್ ಡಾ. ಆರ್. ವಿ. ಕುಲಕರ್ಣಿ, ಉಪಪ್ರಾಚಾರ್ಯ ಡಾ. ಶಶಿಧರ ನಾಯಕ ಮತ್ತು ಆಸ್ಪತ್ರೆಯ ಆಡಳಿತಾಧಿಕಾರಿ ಡಾ. ಸಂಜಯ ಕಡ್ಲಿಮಟ್ಟಿ,…
