Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ಇಂಡಿ: ತಾಲೂಕಿನ ಶ್ರೀ ಮರುಳಸಿದ್ದೇಶ್ವರ ದೇವಸ್ಥಾನ ಜೋಡಗುಡಿ ತಡವಲಗಾ ಇವರ ಆಧೀನದಲ್ಲಿ ನಡೆದ ಕಾರ್ತಿಕ ಮಾಸ ಜಾತ್ರಾ ಮಹೋತ್ಸವ ಪ್ರಯುಕ್ತ ಶೈಕ್ಷಣಿಕ ಹಾಗೂ ಇನ್ನಿತರ ಕ್ಷೇತ್ರಗಳಲ್ಲಿ ಸಾಧಕರನ್ನು ಸನ್ಮಾನಿಸಲು ಸಾಹಿತ್ಯ ಮತ್ತು ಸಾಂಸ್ಕೃತಿಕ ವೇದಿಕೆ ವತಿಯಿಂದ ವಿಶ್ವ ಚೇತನ ಪ್ರಶಸ್ತಿ ಸಮಾರಂಭ ಏರ್ಪಡಿಸಲಾಗಿತ್ತು.ಸಮಾರಂಭದ ದಿವ್ಯ ಸಾನಿಧ್ಯ ಹಿರೇಮಠದ ಅಭಿನವ ರಾಚೋಟೇಶ್ವರ ಶ್ರೀಗಳು, ಶಿವಾನಂದ ಶಾಸ್ತ್ರಿಗಳ ಸಮ್ಮುಖ ಕಸಾಪ ಮಾಜಿ ಅಧ್ಯಕ್ಷ ಡಾ. ಕಾಂತು ಇಂಡಿ ನೇತೃತ್ವ ವಹಿಸಿದ್ದರು.ಮುಖ್ಯ ಅತಿಥಿಗಳಾಗಿ ಸಾಹಿತಿಗಳಾದ ಶಂಕರ ಬೈಚಬಾಳ, ಗುರುರಾಜ ಲೂತಿ, ಜಿಲ್ಲಾ ಪ್ರಾಥಮಿಕ ಸಂಘದ ಗೌರವಾಧ್ಯಕ್ಷ ಜಿ.ಎಸ್.ಬೇವನೂರ, ಜಿಲ್ಲಾಧ್ಯಕ್ಷ ಅರ್ಜುನ ಲಮಾಣಿ, ಅಲ್ಲಾಬಕ್ಷ ವಾಲಿಕಾರ ಇಂಡಿ ಶಿಕ್ಷಕರ ಸಂಘದ ವೈ.ಟಿ.ಪಾಟೀಲ ಎಸ್.ವಿ.ಹರಳಯ್ಯ ಭಾಗವಹಿಸಿದ್ದರು.ಇಂಡಿ ತಾಲೂಕಾ ಕಜಾಪ ಅಧ್ಯಕ್ಷ ಆರ್.ವಿ.ಪಾಟೀಲ, ಎ.ಬಿ.ಮೊರೆ, ಬಿ.ಎ.ಪಾಸೋಡಿ, ಸಾಗರ ಮಾನೆ, ಹಾಡುಗಾರ ಸಂತೋಷ ವಾಲಿಕಾರ, ತಾನಾಜಿ ಕಟಕದೊಂಡ ಇವರಿಗೆ ಪ್ರಶಸ್ತಿ ನೀಡಿ ಗೌರವಿಸಿದರು.

Read More

ಉದಯರಶ್ಮಿ ದಿನಪತ್ರಿಕೆ ಇಂಡಿ: ಪಟ್ಟಣದ ಜಿ.ಆರ್.ಗಾಂಧಿ ಕಲಾ, ವಾಯ್.ಎ.ಪಾಟೀಲ ವಾಣಿಜ್ಯ ಹಾಗೂ ಎಮ್.ಪಿ.ದೋಶಿ ವಿಜ್ಞಾನ ಪದವಿ ಮಹಾವಿದ್ಯಾಲಯದಲ್ಲಿ ಉಚಿತ ಆರೋಗ್ಯ ಹಾಗೂ ನೇತ್ರ ತಪಾಸಣೆ ಚಿಕಿತ್ಸಾ ಶಿಬಿರ ನ. ೧೯ ರಂದು ಮುಂಜಾನೆ ೧೦ ಗಂಟೆಗೆ ಹಮ್ಮಿಕೊಳ್ಳಲಾಗಿದೆ ಎಂದು ಸಂಸ್ಥೆಯ ಅಧ್ಯಕ್ಷ ನೀಲಕಂಠಗೌಡ ಪಾಟೀಲ ಹೇಳಿದರು.ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ತಾಲೂಕ ಸರಕಾರಿ ಆಸ್ಪತ್ರೆ ಮತ್ತು ಸ್ಪಂದನಾ ಆಸ್ಪತ್ರೆ ಇಂಡಿ ಇವರ ಸಹಯೋಗದೊಂದಿಗೆ ಉಚಿತ ಆರೋಗ್ಯ ಹಾಗೂ ನೇತ್ರ ತಪಾಸಣೆ ಚಿಕಿತ್ಸಾ ಶಿಬಿರವನ್ನು ಹಮ್ಮಿಕೊಂಡಿದ್ದು, ಸದರಿ ಶಿಬಿರದಲ್ಲಿ ರಕ್ತದ ಗುಂಪು ತಪಾಸಣೆ, ರಕ್ತದ ಒತ್ತಡ, ಸಕ್ಕರೆ ಕಾಯಲೆ, ಸಾಮಾನ್ಯ ಆರೋಗ್ಯ ತಪಾಸಣೆ, ನೇತ್ರ ತಪಾಸಣೆ ಮುಂತಾದ ಸೇವೆಗಳು ಸಂಪೂರ್ಣ ಉಚಿತವಾಗಿ ನೀಡಲಾಗುತ್ತದೆ. ಇಂಡಿಯ ಜನತೆ ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದರು.ಶಿಬಿರದಲ್ಲಿ ತಾಲೂಕು ವೈದ್ಯಾಧಿಕಾರಿಗಳು ಇಂಡಿಡಾ. ರಾಜೇಶ ಕೊಳೆಕರ, ಡಾ.ರಾಮಕೃಷ್ಣ ಇಂಗಳೆ, ಡಾ.ಜಗದೀಶ ಬಿರಾದಾರ ,ಡಾ.ಲಕ್ಷ್ಮಿಕಾಂತ ಮೇತ್ರಿ , ಡಾ.ಆದರ್ಶ ಪ್ರಭಾಕರ ಬಗಲಿ , ಡಾ.ಸುಧೀರ ಚವ್ಹಾಣ ಪಾಲ್ಗೊಳ್ಳುವರು.ಪತ್ರಿಕಾಗೋಷ್ಠಿಯಲ್ಲಿ ಪ್ರಾಚಾರ್ಯ ಶ್ರೀಶೈಲ ಸಣ್ಣಕ್ಕಿ ಮತ್ತಿತರಿದ್ದರು.

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ತಾಲೂಕಿನ ಚಾಂದಕವಠೆ ಗ್ರಾಮದ ಶ್ರೀಪರಮಾನಂದ ಪ್ರೌಢಶಾಲೆಯಲ್ಲಿ ೯ನೇ ತರಗತಿಯಲ್ಲಿ ಓದುತ್ತಿರುವ ಆದರ್ಶ ವಿದ್ಯಾರ್ಥಿನಿ ಸಾವಿತ್ರಿ ಸಿದ್ದಪ್ಪ ಯರನಾಳ ಅವರು ಜಿಲ್ಲಾ ಮಟ್ಟದ ಕ್ರೀಡಾಕೂಟ ಉದ್ದ ಜಿಗಿತದಲ್ಲಿ ದ್ವೀತಿಯ ಸ್ಥಾನ ಪಡೆದುಕೊಂಡು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.ವಿದ್ಯಾರ್ಥಿಯ ಈ ಸಾಧನೆಗೆ ಶ್ರೀಪರಮಾನಂದ ಪ್ರೌಢಶಾಲಾ ಮುಖ್ಯಗುರು ಅರುಣ ಕೂಚಬಾಳ, ನಿವೃತ ದೈಹಿಕ ಶಿಕ್ಷಕ ಪಿ.ಟಿ ಬಿರಾದಾರ, ದೈಹಿಕ ಶಿಕ್ಷಕ ಕಂಟ್ಟೆಪ್ಪ ಕಂಟಿಗೊಂಡ, ದೈಹಿಕ ಶಿಕ್ಷಕ ಪ್ರವೀಣ ಬಿರಾದಾರ. ಕಬ್ಬಡ್ಡಿ ತರಬೇತಿದಾರ ಶ್ರೀಧರ ಕಂಟಿಗೊಂಡ ಸೇರಿದಂತೆ ಪಾಲಕರು ಹಾಗೂ ಗ್ರಾಮಸ್ಥರು ಹರ್ಷ ವ್ಯಕ್ತಪಡಿಸಿದ್ದಾರೆ.

Read More

ಪಿ.ಸಿ. ಮತ್ತು ಪಿ.ಎನ್.ಡಿ.ಟಿ. ಕಾಯ್ದೆ ಪರಿಣಾಮಕಾರಿ ಅನುಷ್ಠಾನಕ್ಕೆ ಅಧಿಕಾರಿಗಳಿಗೆ ಡಿಸಿ ಡಾ.ಆನಂದ ಕೆ ಸೂಚನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಪ್ರಸವ ಪೂರ್ವ ಭ್ರೂಣ ಲಿಂಗ ಪತ್ತೆ ಹಾಗೂ ಭ್ರೂಣ ಹತ್ಯೆಯನ್ನು ತಡೆಗಟ್ಟಲು ಜಿಲ್ಲಾದ್ಯಂತ ಪಿ.ಸಿ. ಮತ್ತು ಪಿ.ಎನ್.ಡಿ.ಟಿ. ಕಾಯ್ದೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ ಕೆ ಅವರು ಸೂಚಿಸಿದ್ದಾರೆ.ಮಂಗಳವಾರ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ನಡೆದ ಪಿ.ಸಿ.ಮತ್ತು ಪಿ.ಎನ್.ಡಿ.ಟಿ. ಮೇಲ್ವಿಚಾರಣ ಸಮಿತಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಹೆಣ್ಣು ಭ್ರೂಣ ಹತ್ಯೆ ತಡೆಯುವ ನಿಟ್ಟಿನಲ್ಲಿ ಹೆಚ್ಚಿನ ನಿಗಾವಹಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.ಪಿ.ಸಿ.ಮತ್ತು ಪಿ.ಎನ್.ಡಿ.ಟಿ. ಕಾಯ್ದೆಯಡಿಯಲ್ಲಿ ಸ್ಕ್ಯಾನಿಂಗ್ ಸೆಂಟರ್ ನೋಂದಣಿ, ನವೀಕರಣ ಹಾಗೂ ನೋಂದಣಿಗಾಗಿ ಅರ್ಜಿ ಸಲ್ಲಿಸಿರುವ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು. ಸದರಿ ಆಸ್ಪತ್ರೆಗಳಿಗೆ ಭೇಟಿ ನೀಡಿ ಪರಿಶೀಲಿಸಿದ ನಂತರ ಅನುಮತಿ ನೀಡಲು ಜಿಲ್ಲಾಧಿಕಾರಿ ಸೂಚಿಸಿದರು. ಪಿ.ಸಿ.ಮತ್ತು ಪಿ.ಎನ್.ಡಿ.ಟಿ. ಕಾಯ್ದೆ ಕುರಿತು ಅರಿವು ಮೂಡಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ಅವರು ಸೂಚಿಸಿದರು.ಎಲ್ಲಾ ತಾಲೂಕು ಆಸ್ಪತ್ರೆಗಳಲ್ಲಿ ಸ್ಕ್ಯಾನಿಂಗ್ ಸೆಂಟರಗಳನ್ನು ಆರಂಭಿಸುವಂತೆ ಕ್ರಮ ಜರುಗಿಸಬೇಕು ಮುಂಬರುವ…

Read More

ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಗುಡ್ಡಾಪೂರ ದಾನಮ್ಮಾದೇವಿ ದರ್ಶನಕ್ಕಾಗಿ ತೆರಳುವ ಪಾದಯಾತ್ರಿ ಭಕ್ತ ಸಮೂಹದ ಸೇವೆಗಾಗಿ ಪಟ್ಟಣದ ಸಿದ್ದಯ್ಯ ಮಲ್ಲಿಕಾರ್ಜುನಮಠ ಅವರು ಸತತ ೨೫ ವರ್ಷಗಳಿಂದ ಹಾಗೂ ಪ್ರಭುದೇವ ಹಿರೇಮಠ(ಹಂದಿಗನೂರ) ಕಳೆದ ೭ ವರ್ಷಗಳಿಂದ ಪ್ರಸಾದ ವ್ಯವಸ್ಥೆ ಕಲ್ಪಿಸಿದ್ದಾರೆ.ಪಟ್ಟಣದ ರಾಷ್ಟ್ರೀಯ ಹೆದ್ದಾರಿ-೫೦ರಲ್ಲಿ ಕರ್ನಾಟಕ ತೈಲ ವಿತರಣಾ ಕೇಂದ್ರದ ಪಕ್ಕದಲ್ಲಿ ಸಿದ್ದಯ್ಯ ತಮ್ಮ ಅವಿರತ ಭಕ್ತಿಯ ಸೇವೆಗಾಗಿ ನಿರಂತರ ದಾಸೋಹ ಮುಂದುವರೆಸಿಕೊಂಡು ಬರುತ್ತಿದ್ದಾರೆ. ಇದಕ್ಕೆ ದಾನಮ್ಮದೇವಿಯ ಆಶೀರ್ವಾದವೇ ಪ್ರೇರಣೆ ಎಂದು ಹೇಳುತ್ತಾ, ಜಾತ್ರೆ ಆರಂಭದ ಮುಂಚೆ ಒಂದುವಾರ ಪಾದಯಾತ್ರೆ ನಡೆಸುವ ಭಕ್ತ ಸಮೂಹಕ್ಕೆ ನೀರು, ವಿವಿಧಉಪಹಾರ, ಹಣ್ಣು, ಚಹಾ, ಬಿಸಿನೀರು, ಗುಳಿಗೆ, ಔಷಧಿಗಳ ಸೇವೆ ಒದಗಿಸಿ ಭಕ್ತಿಯ ಸಹಕಾರ ನೀಡುತ್ತಿದ್ದಾರೆ. ಇವರ ಸೇವೆಗೆ ಪೆಟ್ರೋಲ್ ಪಂಪ್ ಮಾಲೀಕರಾದ ಎ.ಕೆ.ನಾಡಗೌಡ ಪ್ರತಿವರ್ಷ ಜಾಗೆ ವ್ಯವಸ್ಥೆ ಕಲ್ಪಿಸಿದರೆ, ಔಷಧಿ ಅಂಗಡಿ ಮಾಲೀಕ ನಿಂಗು ಹಡಗಲಿ ಭಕ್ತರ ತಾತ್ಕಾಲಿಕ ಅನಾರೋಗ್ಯಕ್ಕೆ ಚಿಕಿತ್ಸಾ ರೂಪದಲ್ಲಿ ಗುಳಿಗೆ, ಔಷಧಿಗಳನ್ನು ಒದಗಿಸುತ್ತಿದ್ದಾರೆ. ಇನ್ನು ಮಿತ್ರರಾದ ಈರಣ್ಣ ಮಠ, ಬಲು ಮೆಟಗಾರ, ಶಿವು ಕೊಣ್ಣೂರ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಬೆಳಗಾವಿಯ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ೨೦೨೪-೨೫ ನೇ ಸಾಲಿನ ಸ್ನಾತಕ ಅಂತಿಮ ರ‍್ಯಾಂಕ್ ಪಟ್ಟಿ ಪ್ರಕಟಿಸಿದ್ದು, ವಿಜಯಪುರ ನಗರದ ಬಿ ಎಲ್ ಡಿ ಇ ಸಂಸ್ಥೆಯ ಎಸ್ ಬಿ ಕಲಾ ಮತ್ತು ಕೆಸಿಪಿ ವಿಜ್ಞಾನ ಮಹಾವಿದ್ಯಾಲಯದ ಸ್ನಾತಕ ಬಿಎಸ್ಸಿ ಪದವಿಯಲಿ ಇಬ್ಬರು ರ‍್ಯಾಂಕ್ ಪಡೆಯುವ ಮೂಲಕ ಉನ್ನತ ಸಾಧನೆ ಮಾಡಿದ್ದಾರೆ.ಎಸ್ ಬಿ ಕಲಾ ಮತ್ತು ಕೆಸಿಪಿ ವಿಜ್ಞಾನ ಮಹಾವಿದ್ಯಾಲಯದ ಸ್ನಾತಕ ಬಿಎಸ್ಸಿ ಪದವಿಯಲಿ ವಿದ್ಯಾರ್ಥಿನಿ ಅಲ್ಫಿಯಾ ಚೌಧರಿ ಶೇ. ೯೪.೩೬ ಪ್ರತಿಶತ ಅಂಕಗಳೊಂದಿಗೆ ತೃತೀಯ ರ‍್ಯಾಂಕ್ ಹಾಗೂ ಕಾವೇರಿ ಮೇಲಿನಕೆರಿ ಶೇ. ೯೨.೯೬ ಪ್ರತಿಶತ ಅಂಕಗಳೊಂದಿಗೆ ಎಂಟನೆ ರ‍್ಯಾಂಕ್ ಪಡೆಯುವ ಮೂಲಕ ಬಿಎಲ್‌ಡಿಇ ಸಂಸ್ಥೆಯ ಹಾಗೂ ಮಹಾವಿದ್ಯಾಲಯದ ಹೆಸರು ಮತ್ತಷ್ಟು ಇಮ್ಮಡಿಗೊಳಿಸಿದ್ದಾರೆ. ರ‍್ಯಾಂಕ್ ವಿಜೇತ ವಿಧ್ಯಾರ್ಥಿನಿಯರ ಸಾಧನೆಗೆ ಆಡಳಿತಾಧಿಕಾರಿ ಪ್ರೊ.ವಿ.ಎಸ್.ಬಗಲಿ ಹಾಗೂ ಕಾಲೇಜಿನ ಪ್ರಾಚಾರ್ಯೆ ಡಾ.ಆರ್.ಎಂ.ಮಿರ್ಧೆ ಉಪ ಪ್ರಾಚಾರ್ಯ ಡಾ.ಅನೀಲ.ಭೀ.ನಾಯಕ ಹರ್ಷ ವ್ಯಕ್ತಪಡಿಸಿದ್ದಾರೆ. Alfiya Choudhary kaveri melinkeri

Read More

ವಿಜಯಪುರ ಜಿಲ್ಲಾ ಸರ್ಕಾರಿ ಆಸ್ಪತ್ರೆ ಮತ್ತು‌ ವೈದ್ಯಕೀಯ ಕಾಲೇಜು ಉಳುವಿಗಾಗಿ ಜನವೇದಿಕೆ ಮಹಿಳಾ ಸಂಘಟನೆಯಿಂದ ವಿನೂತನ ಪ್ರತಿಭಟನೆ ಉದಯರಶ್ಮಿ ದಿನಪತ್ರಿಕೆ ಆಲಮೇಲ: ಜಿಲ್ಲಾ ಆಸ್ಪತ್ರೆ ಮತ್ತು ಸರಕಾರಿ ವೈದ್ಯಕೀಯ ಕಾಲೇಜು ಖಾಸಗೀಕರಣ ಮಾಡುತ್ತಿರುವುದನ್ನು ವಿರೋಧಿಸಿ ಜನವೇದಿಕೆ ಮಹಿಳಾ ಸಂಘಟನೆ ರಂಗೋಲಿ ಚಳುವಳಿ ಹಮ್ಮಿಕೊಳ್ಳುವ ಮೂಲಕ ಪ್ರತಿಭಟಿಸಿದರು.ಮಂಗಳವಾರ ಪಟ್ಟಣ ಪಂಚಾಯಿತಿ ಎದುರುಗಡೆ ಜನ ವೇದಿಕೆ ಮಹಿಳಾ ಸಂಘಟನೆ ಸದಸ್ಯರು ರಂಗೋಲಿ ಹಾಕುವ ಮೂಲಕ ಜಿಲ್ಲಾ ಸರಕಾರಿ ಆಸ್ಪತ್ರೆ ಮತ್ತು ಸರಕಾರಿ ವೈದ್ಯಕೀಯ ಕಾಲೇಜು ಉಳಿವಿಗಾಗಿ ರಂಗೋಲಿ ಬಿಡಿಸಿ ವಿನೂತನವಾಗಿ ಪ್ರತಿಭಟಿಸಿದರು.ನಂತರ ಪ.ಪಂ ಮುಖ್ಯಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.ನ್ಯಾಯ ಬೆಲೆ ಅಂಗಡಿ ಮಾಲಿಕ ಅಪ್ಪು ಶೆಟ್ಟಿ ಮಾತನಾಡಿ, ಸರಕಾರಿ ಆಸ್ಪತ್ರೆ ಮತ್ತು ವೈದ್ಯಕೀಯ ಕಾಲೇಜು ಖಾಸಗಿಕರಣ ಮಾಡಿದರೆ ಬಡ ಜನರ ಚಿಕಿತ್ಸೆ ಕಷ್ಟಕರ ವಾಗುತ್ತದೆ. ಯಾವುದೆ ಕಾರಣಕ್ಕೂ ಸರಕಾರಿ ಆಸ್ಪತ್ರೆ ಮತ್ತು ಜಿಲ್ಲೆಗೆ ಮಂಜುರಾಗಿರುವ ಸರಕಾರಿ ವೈದ್ಯಕೀಯ ಕಾಲೇಜು ಖಾಸಗೀಕರಣ ಮಾಡಬಾರದು ಎಂದು ಒತ್ತಾಯಿಸಿದರು.ಜನವೇದಿಕೆಯ ಮುಖ್ಯಸ್ಥೆ ಒಲಿವಾ ಸಲ್ಡಾನ ಮಾತನಾಡಿ, ವಿಜಯಾಪುರ ಜಿಲ್ಲೆಗೆ…

Read More

ಉದಯರಶ್ಮಿ ದಿನಪತ್ರಿಕೆ ಚಡಚಣ: ಪಟ್ಟಣದ ಧರ್ಮಶ್ರೀ ಜ್ಞಾನ ವಿಕಾಸ ಕೇಂದ್ರದಲ್ಲಿ ಚಡಚಣ ವಲಯದ ಪರಮಾನಂದ ಕಾರ್ಯಕ್ಷೇತ್ರದ ಸೃಜನಶೀಲ ಕಾರ್ಯಕ್ರಮದಡಿಯಲ್ಲಿ ಬಟ್ಟೆ ಬ್ಯಾಗ್ ತಯಾರಿಕಾ ತರಬೇತಿಯನ್ನು ಹಮ್ಮಿಕೊಳ್ಳಲಾಯಿತು.ತರಬೇತಿಯ ಸಮಾರೋಪ ಕಾರ್ಯಕ್ರಮವನ್ನು ಚಡಚಣ ತಾಲೂಕಿನ ಯೋಜನಾಧಿಕಾರಿ ನಟರಾಜ್ ಜ್ಯೋತಿ ಬೆಳಗಿಸುವುದರ ಮೂಲಕ ಚಾಲನೆ ನೀಡಿ ಮಾತನಾಡಿ, ನಮ್ಮೆಲ್ಲರ ಮಾತೃ ಹೃದಯಿ ಮಾತೃಶ್ರೀ ಹೇಮಾವತಿ ಅಮ್ಮನವರು ಈ ನಾಡಿನ ಜನರ ಬಡತನ ನಿವಾರಣೆಗಾಗಿ ಮತ್ತು ಮಹಿಳೆಯರು ಸ್ವಾವಲಂಬನೆಯಾಗಿ ಬದುಕಬೇಕೆಂಬುವ ನಿಟ್ಟಿನಲ್ಲಿ ಸೃಜನಶೀಲ ಕಾರ್ಯಕ್ರಮದಂತಹ ವಿಶೇಷ ಕಾರ್ಯಕ್ರಮಗಳನ್ನು ಜ್ಞಾನವಿಕಾಸ ಕೇಂದ್ರದ ಮೂಲಕ ಅವಕಾಶ ಕಲ್ಪಿಸಿಕೊಟ್ಟಿದ್ದು, ಅದೆಷ್ಟೋ ನಿರುದ್ಯೋಗಿಗಳನ್ನು ಜ್ಞಾನವಿಕಾಸ ಕೇಂದ್ರದಲ್ಲಿ ಸ್ವ-ಉದ್ಯೋಗದ ತರಬೇತಿಗಳನ್ನು ನೀಡುವುದರ ಮೂಲಕ ಉದ್ಯೋಗಿಗಳನ್ನಾಗಿಸಿ ಸದಸ್ಯರ ಬದುಕು ಬಂಗಾರವಾಗುವಂತೆ ಮಾಡುತ್ತಿದೆ.ಅದೇ ರೀತಿ ಭೂತಾಯಿ ಸಂರಕ್ಷಣೆ, ಪರಿಸರ ಸುರಕ್ಷತೆ, ಪ್ಲಾಸ್ಟಿಕ್ ಮುಕ್ತ ನಾಡನ್ನು ಮಾಡಬೇಕೆನ್ನುವ ಉದ್ದೇಶ ಹಾಗೂ ಸ್ವ ಉದ್ಯೋಗಗಳನ್ನು ಕಲ್ಪಿಸಿ ಕೊಡುವ ನಿಟ್ಟಿನಲ್ಲಿ ನಮ್ಮ ತಾಲೂಕಿನ ಜಿ.ವಿ.ಕೆ ಕೇಂದ್ರದ ಸದಸ್ಯರಿಗೆ ಬಟ್ಟೆ ಬ್ಯಾಗ್ ತಯಾರಿಕೆ ತರಬೇತಿಯನ್ನು ಹಮ್ಮಿಕೊಂಡಿದ್ದು, ತಾವೆಲ್ಲರೂ ಅತ್ಯಂತ ಉತ್ಸಕತೆಯಿಂದ ಭಾಗವಹಿಸಿ ತರಬೇತಿಯನ್ನು…

Read More

ಕಾರ್ಯನಿರತ ಪತ್ರಕರ್ತರ ಸಂಘದ ವಿಜಯಪುರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಇಂದುಶೇಖರ ಮಣೂರ ಶ್ಲಾಘನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಮಾತು ಬಾರದ, ಕಿವಿ ಕೇಳದ ಬಡ ಮಕ್ಕಳಿಗಾಗಿ ತಮ್ಮ ಬದುಕನ್ನೇ ಮೀಸಲಿಟ್ಟು, ಆ ಮಕ್ಕಳಿಗೆ ಧ್ವನಿಯಾಗಿರುವ ಸುಜಾತ ರೇಶ್ಮಿ ಅವರು ಮಹಾತಾಯಿಯಾಗಿದ್ದಾರೆ ಎಂದು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಪ್ರಧಾನ ಕಾರ್ಯದರ್ಶಿ ಇಂದುಶೇಖರ ಮಣೂರ ಶ್ಲಾಘಿಸಿದರು.ನಗರದ ಸಪ್ನಾ ಕಿವುಡ ಮತ್ತು ಮೂಕ ಮಕ್ಕಳ ಶಾಲೆಯಲ್ಲಿ ಸೋಮವಾರ ಸಂಜೆ ಏರ್ಪಡಿಸಿದ ಸನ್ಮಾನ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.೨೦೦೯ ರಲ್ಲಿ ಯಾರ ಸಹಾಯವೂ ಇಲ್ಲದೆ ಕೇವಲ ಮೂರು ಮಕ್ಕಳಿಂದ ಆರಂಭಗೊಂಡ ಈ ಶಾಲೆ ಇಂದು ೧೩೦ ಮಕ್ಕಳಿಗೆ ಆಶ್ರಯಧಾಮವಾಗಿದೆ. ಇಂತಹ ಮಕ್ಕಳಿಗೆ ಶಿಕ್ಷಣ ನೀಡುವುದು ತುಂಬ ಕಷ್ಟದ ಕೆಲಸ. ಆದರೆ ಈ ಶಾಲೆಯ ಸಂಸ್ಥಾಪಕಿ ಸುಜಾತ ರೇಶ್ಮಿ ಅವರು ತಾವೇ ಮೂರು ವರ್ಷ ಮೈಸೂರಿನಲ್ಲಿ ಸ್ಪೀಚ್ ಥೆರೆಪಿ ತರಬೇತಿ ಪಡೆದು, ಇಲ್ಲಿಯ ಸುಮಾರು ೨೫ ಶಿಕ್ಷಕರಿಗೆ ತರಬೇತಿ ನೀಡಿ ಪರಿಣಾಮಕಾರಿ ಶಿಕ್ಷಣದೊಂದಿಗೆ ಮಕ್ಕಳಿಗೆ ಊಟ-ವಸತಿಯ…

Read More

ಲೇಖನ- ಜಯಶ್ರೀ.ಜೆ. ಅಬ್ಬಿಗೇರಿಇಂಗ್ಲೀಷ್ ಉಪನ್ಯಾಸಕರುಬೆಳಗಾವಿಮೊ: ೯೪೪೯೨೩೪೧೪೨ ಉದಯರಶ್ಮಿ ದಿನಪತ್ರಿಕೆ ನನ್ನೊಲವಿನ ಚೆಲುವೆಕಾಲೇಜಿನಂಗಳದಿ ಕಾಲಿಟ್ಟ ದಿನದಂದೇ ನೀ ಕಣ್ಣಿಗೆ ಬಿದ್ದೆ. ಸುರಿವ ಸೋನೆ ಮಳೆಗೆ ಹಾಡೊಂದ ಗುಣುಗುಣಿಸುತ ಕಣ್ಮುಂದೆ ನಿಂದೆ. ತುಸುವೇ ತುಸು ದೂರದ ರಸ್ತೆಯಂಚಿನಲ್ಲಿ ನಿಂತು ಹರಿವ ಸಿಹಿ ಝರಿಯಂತೆ ನನ್ನೆಡೆ ಕಣ್ಣೋಟ ಹರಿಸಿದೆ. ಬೀಸುವ ತಂಗಾಳಿಯ ಜತೆ ನಿನ್ನ ಮೈಯ ಸುಗಂಧ ತೇಲಿ ಬಂದು ನನ್ನ ಮೈಯ ಸವರಿದಂತೆನಿಸಿ ನಿಂತಲ್ಲೇ ಒಮ್ಮೆ ನಡುಗಿದೆ. ಒಮ್ಮಿಂದೊಮ್ಮೆಲೇ ಬೀಸಿದ ಜೋರಾದ ಗಾಳಿಗೆ ಬಲು ದೂರದ ತನಕ ಹಾರಿದ ನಿನ್ನೆದೆಯ ಅಂದದ ಆಕಾರ ಮುಚ್ಚಿದ್ದ ದುಪ್ಪಟ್ಟಾ ತಂದು ಕೈಗಿತ್ತೆ. ಕೋಮಲವಾದ ನಿನ್ನ ಬೆರಳುಗಳಿಗೆ ಬೆರಳು ಸೋಕಿ ಪುಳಕಗೊಂಡೆ. ಆ ಹೊಸ ಸ್ಪರ್ಷ ಪ್ರೇಮ ಲೋಕವೊಂದನ್ನು ತೆರೆದಂತಿತ್ತು. ಬಾನಂಗಳದಿ ನೇಸರ ಕಂಗೊಳಿಸುತ್ತ ಇಳಿಯುತ್ತಿದ್ದ. ಸದ್ದಿಲ್ಲದೇ ನೀ ನನ್ನೆದೆಗೆ ಇಳಿಯುತ್ತಿದ್ದೆ. ನೋಟದಲ್ಲಿ ನೋಟ ಬೆರೆಸಿ ಸ್ವಲ್ಪ ದೂರ ನನ್ನೊಡೆನೆ ನಡೆದು ಬಂದೆ ನೀನು, ನನ್ನೊಡನೆ ಒಂದಾಗಿ ಹೋದಂತೆ ಅನಿಸಿತು. ಇಬ್ಬರೂ ಜೊತೆಗೂಡಿ ರಸ್ತೆ ಬದಿಯಲಿರುವ ಜರ್ಝರಿತವಾದ ಬಂಡೆಗಲ್ಲಿನ…

Read More