Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಸಿಂದಗಿ: ತಾಲೂಕಿನ ಬೋರಗಿ ಗ್ರಾಮದ ನಬಿರೋಶನ್ ಪ್ರಕಾಶನ ಸಂಸ್ಥೆಯ ವತಿಯಿಂದ ಮೇ ತಿಂಗಳಲ್ಲಿ ಬಸವ ಜಯಂತಿ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಜಯಂತೋತ್ಸವ ಪ್ರಯುಕ್ತ ಉಪನ್ಯಾಸ, ಬಸವ ಬಂಧು ಮತ್ತು ಭೀಮ್ ಬಂಧು ಪ್ರಶಸ್ತಿ ಪ್ರದಾನ ಹಾಗೂ ಕವಿಗೋಷ್ಠಿ ಸಮಾರಂಭವನ್ನು ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ. ಕಾರಣ ಆಸಕ್ತ ಕವಿಗಳು ಕವಿಗೋಷ್ಠಿಯಲ್ಲಿ ಭಾಗವಹಿಸಲು ಬಸವಣ್ಣನವರ ಹಾಗೂ ಡಾ.ಬಿ.ಆರ್ ಅಂಬೇಡ್ಕರ್ ರವರ ಕುರಿತಾದ ಎರಡು ಕವನಗಳನ್ನು ಈ ಕೆಳಗಿನ ದೂರವಾಣಿಗೆ ೯೭೪೨೮೪೯೬೬೩ ವ್ಯಾಟ್ಸಪ್ ಮಾಡಬೇಕು ಎಂದು ಪತ್ರಿಕಾ ಪ್ರಕಟಣೆಯಲ್ಲಿ ನಬಿರೋಷನ್ ಸಂಸ್ಥೆಯ ಸಂಚಾಲಕರು ತಿಳಿಸಿದ್ದಾರೆ.
“ವೀಣಾಂತರಂಗ”- ವೀಣಾ ಹೇಮಂತ್ ಗೌಡ ಪಾಟೀಲ್, ಮುಂಡರಗಿ-ಗದಗ ಅದು ನಮ್ಮ ಕಡೆ ಕಾಣ ಸಿಗುವ ಮಧ್ಯಾಹ್ನ ಮಲ್ಲಿಗೆ ಇಲ್ಲವೇ ತ್ರಿಕಾಲ ಮಲ್ಲಿಗೆ ಎಂದು ಕರೆಯಲ್ಪಡುವ ಒಂದು ಜಾತಿಯ ಪೊದೆಯಂತಹ ಹೂವಿನ ಗಿಡ. ಆ ಹೂವಿನಲ್ಲಿ ಹಲವಾರು ಬಣ್ಣಗಳನ್ನು ಹೊಂದಿರುವ ವರ್ಷದ 12 ತಿಂಗಳು ಹೂ ಬಿಡುವ ಈ ಗಿಡ ಅಲ್ಲಲ್ಲ ಪೊದೆಗೆ ಎಲ್ಲೆಂದರಲ್ಲಿ ಹಬ್ಬಿ ಹರಡುವ ಸಾಮರ್ಥ್ಯವಿದೆ. ಬಹುಶಹ ಅತ್ಯಂತ ಕಡಿಮೆ ನಿರ್ವಹಣೆಯನ್ನು ಬಯಸುವ ಈ ಒಂದು ಪೊದೆಯಿಂದಲೇ ಒಂದು ಸುಂದರವಾದ ಅದ್ಭುತ ಮಿರಾಕಲ್ ಗಾರ್ಡನ್ ನ ಸೃಷ್ಟಿ ಮರುಭೂಮಿ ನಾಡು ದುಬೈನಲ್ಲಿ ಆಗಿದೆ. ಈ ಹೂಗಳನ್ನು ಬಿಟ್ಟರೆ ಇಲ್ಲಿ ಇರುವ ಬೇರೆ ಹೂಗಳೆಂದರೆ ಗುಲಾಬಿ,ಟುಲಿಪ್, ಮೆರಿಗೋಲ್ಡ್ ಮುಂತಾದವು. ಸುಮಾರು 72,000 ಚದರ ಮೀಟರ್ ವಿಸ್ತೀರ್ಣದ ಮಿರಾಕಲ್ ಗಾರ್ಡನ್ ನಲ್ಲಿ 25 ಮಿಲಿಯನ್ ಗಿಡಗಳಿದ್ದು 50 ಮಿಲಿಯನ್ಗಿಂತಲೂ ಹೆಚ್ಚು ಹೂಗಳನ್ನು ಹೊಂದಿರುವ ವಿಶ್ವದ ಅತಿ ದೊಡ್ಡ ಹೂಗಳ ತೋಟ ಈ ಮಿರಾಕಲ್ ಗಾರ್ಡನ್. 2013 ಫೆಬ್ರವರಿ 14ರಂದು ವ್ಯಾಲೆಂಟೈನ್ಸ್ ಡೇ ದಿನ…
ಸಂತೋಷ್ ರಾವ್ ಪೆರ್ಮುಡಪಟ್ರಮೆ ಗ್ರಾಮ ಅಂಚೆ ಬೆಳ್ತಂಗಡಿ ತಾಲೂಕು, ದ.ಕ ಜಿಲ್ಲೆ ಗಡಿಯಾರವನ್ನು ನೋಡದೇ ದುಡಿಯುವವನು ವ್ಯವಸ್ಥೆಯ ಒಳಗಡೆ ಮಾಲೀಕನಾಗಿ ಬೆಳೆಯುತ್ತಾನೆ.‘ಉದ್ಯೋಗಂ ಪುರುಷ ಲಕ್ಷಣಂ’ ಎನ್ನುವ ಕಾಲವೊಂದಿತ್ತು, ಆದರೆ ಇದು ಇಂದು ಬದಲಾಗಿದ್ದು, ‘ಉದ್ಯೋಗಂ ಸರ್ವ ಲಕ್ಷಣಂ’ ಎಂದು ಬದಲಾಗಿದೆ ಎಂದರೆ ತಪ್ಪಾಗದು. ಏಕೆಂದರೆ ಇಂದು ಉದ್ಯೋಗವು ಕೇವಲ ಪುರುಷರಿಗಷ್ಟೇ ಅಲ್ಲದೇ ಮಹಿಳೆಯರಿಗೂ ಅತ್ಯಂತ ಅನಿವಾರ್ಯವಾಗಿದೆ. ಉದ್ಯೋಗವೇನೋ ಎಲ್ಲರಿಗೂ ಬೇಕು ಆದರೆ ಉದ್ಯೋಗದ ಆಳವನ್ನು ಮತ್ತು ಉದ್ಯೋಗದಾತನ ಆಶಯಗಳನ್ನು ಅರಿತು ಕೆಲಸ ಮಾಡುವ ಕೆಲಸಗಾರರು ಎಷ್ಟು ಮಂದಿ ಇದ್ದಾರೆ ಎಂದು ವ್ಯವಸ್ಥೆಯ ಒಳಗೆ ಅಧ್ಯಯನ ಏನಾದರೂ ಮಾಡಿದರೆ ಸಿಗುವ ಉತ್ತರವು ನಿರಾಶಾದಾಯಕ ಆಗಿರಬಹುದು.ಏಕೆಂದರೆ ಎಲ್ಲರಿಗೂ ಉದ್ಯೋಗ ಅತ್ಯಂತ ಅಗತ್ಯವಾಗಿ ಬೇಕು, ಉದ್ಯೋಗದಾತನು ನೀಡುವ ಸಂಬಳವಂತೂ ಬೇಕೇ ಬೇಕು, ಆದರೆ ಉದ್ಯೋಗದಾತನು ನೀಡುವ ಸಂಬಳಕ್ಕೆ ನೀಡುವ ಕೆಲಸದ ರೂಪದ ಪ್ರತಿಫಲದ ಕುರಿತು ಯೋಚಿಸುವವರು ತೀರಾ ವಿರಳ. ಸಾಮಾನ್ಯವಾಗಿ ಕೆಲಸಗಾರರಲ್ಲಿ ಪ್ರತಿದಿನವೂ ಬೆಳಗಾಗಿ ಮಧ್ಯಾಹ್ನವಾದರೆ ಸಾಕು, ಸಂಜೆಯಾದರೆ ಸಾಕಪ್ಪಾ ಎನ್ನುವ ಮನೋಭಾವ ಇರುತ್ತದೆ. ಬೆಳಗಿನಿಂದ…
ಕೊಲ್ಹಾರ: ಆಕಸ್ಮಿಕವಾಗಿ ಅಗ್ನಿ ಅವಘಡವಾದಾಗ ಭಯಪಡದೆ ನೀರು ಗಿಡದ ತಪ್ಪಲು, ಮಣ್ಣು ಬಳಸಿ ಬೆಂಕಿ ನಂದಿಸಿ ಮುಂದಾಗುವ ಅನಾಹುತ ತಪ್ಪಿಸಬಹುದು ಎಂದು ಸಿ.ಆಯ್.ಎಸ್.ಎಫ್ನ ಅಗ್ನಿಶಾಮಕ ದಳದ ಫೈರ್ ಹೆಡ್ಕಾನ್ಸ್ಟೆಬಲ್ ಬಿನ್ನಾಳ ಈಶ್ವರ ತಿಳಿಸಿದರು.ಶ್ರೀ ಗುರು ಸಂಗನಬಸವೇಶ್ವರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕ ಜಗದೀಶ ಸಾಲಳ್ಳಿ ವಿನಂತಿ ಮೇರೆಗೆ ಅಗ್ನಿ ಶಾಮಕ ಸಪ್ತಾಹದ ಅಂಗವಾಗಿ ಅಗ್ನಿ ಸುರಕ್ಷತೆ ಹಾಗೂ ಅಗ್ನಿ ಅವಘಡ ಮುಂಜಾಗೃತಾ ಅರಿವು ಕಾರ್ಯಕ್ರಮ ಉದ್ದೇಶಿಸಿ ಮಾಹಿತಿ ನೀಡಿದರು.ಬೇಸಿಗೆ ರಜೆಯಲ್ಲಿರುವ ಮಕ್ಕಳಿಗೆ ಹಾಗೂ ಗ್ರಾಮಸ್ಥರಿಗೆ ಅಣುಕು ಪ್ರದರ್ಶನ ಹಾಗೂ ಬೆಂಕಿ ನಂದಿಸುವ ಸಲಕರಣೆ ಬಳಸುವ ವಿಧಾನ,ಮನೆಯಲ್ಲಿ ಎಲ್ ಪಿ ಜಿ ಗ್ಯಾಸ್ ಸೋರಿಕೆ ಸಂಧರ್ಭದಲ್ಲಿ ನಾವು ಕೈಗೊಳ್ಳುವ ಮುಂಜಾಗ್ರತಾ ಕ್ರಮದ ಕುರಿತು ವಿವರಿಸಿದರು.ಶಿಕ್ಷಕ ಜಗದೀಶ ಸಾಲಳ್ಳಿ ಮಾತನಾಡಿ ಅಗ್ನಿಶಾಮಕ ದಳದ ಸಿಬ್ಬಂದಿ ಆಕಸ್ಮಿಕವಾಗಿ ಸಂಭವಿಸುವ ಅಗ್ನಿ ಅನಾಹುತ ತಪ್ಪಿಸಲು ಜೀವದ ಹಂಗು ತೊರೆದು ನಮ್ಮೆಲ್ಲರ ರಕ್ಷಣಾ ಕಾರ್ಯದಲ್ಲಿ ತೊಡಗಿರುವ ಅವರ ಕಾರ್ಯ ಶ್ಲಾಘನೀಯ ಜೊತೆಗೆ ಮಕ್ಕಳು ಹಾಗೂ ಜನರಲ್ಲಿ ಅರಿವು ಮೂಡಿಸುವುದರಿಂದ…
ಮುದ್ದೇಬಿಹಾಳ: ತಾಲೂಕಿನ ಬಂಗಾರಗುಂಡ ಗ್ರಾಮದ ಆಂಜನೇಯ ಮಹಾರಥೋತ್ಸವವು ರಾಮನವಮಿಯಂದು ಸಹಸ್ರಾರು ಭಕ್ತರ ಸಮ್ಮುಖದಲ್ಲಿ ನೆರವೇರಿತು. ದೇವಸ್ಥಾನದ ಆಡಳಿತ ವರ್ಗದವರು, ಗ್ರಾಮಸ್ಥರು ಸೇರಿದ ಭಕ್ತ ಸಮೂಹ ರಥವನ್ನು ಎಳೆದು, ಉತ್ತತ್ತಿ, ಬಾಳೇಹಣ್ಣು ಸಮರ್ಪಿಸಿ ಕೃತಾರ್ಥರಾದರು.
ಚಿಮ್ಮಡ: ಪರಸ್ಪರ ಸಹಕಾರದೊಂದಿಗೆ ಪರೀಶ್ರಮ ಸೇರಿದರೆ ಸರಕಾರಿ ಸಂಸ್ಥೆಗಳಲ್ಲಿಯೂ ಉತ್ತಮ ಸಾಧನೆ ಮಾಡಬಹುದೆಂದು ಚಿಮ್ಮಡ ಗ್ರಾಮದ ಸರಕಾರಿ ಪದವಿ ಪೂರ್ವ ವಿದ್ಯಾಲಯದ ಪ್ರಾಚಾರ್ಯ ಶರತ್ಚಂದ್ರ ಜಂಬಗಿ ಹೇಳಿದರು.ಗ್ರಾಮದ ಸರಕಾರಿ ಪದವಿ ಪೂರ್ವ ವಿದ್ಯಾಲಯದ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ ರ್ಯಾಂಕ್ ವಿದಾರ್ಥಿಗಳ ಸತ್ಕಾರ ಕಾರ್ಯಕ್ರಮದಲ್ಲಿ ಮುಖ್ಯ ಅಥಿತಿಗಳಾಗಿ ಭಾಗವಹಿಸಿ ಮಾತನಾಡಿದ ಅವರು ವಿದ್ಯಾರ್ಥಿಗಳು, ಪಾಲಕರು, ಶಿಕ್ಷಕರೊಂದಿಗೆ ಅಭೀವೃದ್ದಿ ಸಮೀತಿಯ ಸಹಕಾರದಿಂದ ನಮ್ಮ ವಿದ್ಯಾಲಯವು ಶೇ. ನೂರರಷ್ಟು ಫಲಿತಾಂಶ ಪಡೆಯಲು ಸಾಧ್ಯವಾಗಿದ್ದು ಇದೇ ಸಹಕಾರ ಮುಂದುವರೆದಲ್ಲಿ ಇದಕ್ಕಿಂತ ಉತ್ತಮ ಫಲಿತಾಂಶ ದೊರೆಯಲಿದೆ ಎಂದರು.ಕಾಲೇಜು ಅಭಿವೃದ್ದಿ ಸಮೀತಿಯ ಅಧ್ಯಕ್ಷ ಬಸವರಾಜ ಕುಂಚನೂರ ಮಾತನಾಡಿ ಕಾಲೇಜು ಪ್ರಾರಂಭವಾಗಿ ಕೇವಲ ಮೂರು ವರ್ಷಗಲಾದರೂ ಖಾಸಗೀ ಶಾಲೆಗಳೂ ನೀಡದಷ್ಟು ಉತ್ತಮ ಫಲಿತಾಂಶ ನೀಡಲು ಕಾರಣೀಭೂತರಾದ ಎಲ್ಲರನ್ನು ಅಭಿನಂದಿಸುವುದಾಗಿ ತಿಳಿಸಿದರು.ಗ್ರಾ.ಪಂ. ಮಾಜಿ ಅಧ್ಯಕ್ಷ ಪರಪ್ಪಾ ಪಾಲಭಾವಿ, ಪ್ರಭು ನೇಸೂರ, ಪ್ರವೀಣ ಮೈತ್ರಿ ಮಾತನಾಡಿದರು.ಅಭಿವೃದ್ದಿ ಸಮೀತಿಯ ಬೀರಪ್ಪಾ ಹಳೆಮನಿ, ರಾಚಯ್ಯ ಮಠಪತಿ, ಶಂಕರಗೌಡ ಪಾಟೀಲ, ಅವ್ವನಪ್ಪಾ ಮುಗಳಖೋಡ, ಉಪನ್ಯಾಸಕರಾದ ಬಿ.ಬಿ. ಕುದರಿಮನಿ, ಎಚ್.ಎಂ. ಕುಂಬಾರ…
ವಿಜಯಪುರ: ವಿಜಯಪುರ ಲೋಕಸಭಾ ಚುನಾವಣೆ-೨೦೨೪ರ ವೆಚ್ಚ ವೀಕ್ಷಕ ಐ.ಆರ್.ಎಸ್ನ ಅಧಿಕಾರಿ ಅನುಪಕುಮಾರ ರವರು ಗುರುವಾರ ಬಬಲೇಶ್ವರ ಮತಕ್ಷೇತ್ರ ವ್ಯಕ್ತಿಯ ಕನಮಡಿ ಚೆಕ್ ಪೋಸ್ಟ್ ಪರಿಶೀಲಿಸಿದರು.ಚೆಕ್ಪೋಸ್ಟಗಳಲ್ಲಿನ ಅಧಿಕಾರಿ ಮತ್ತು ಸಿಬ್ಬಂದಿಯ ಹಾಜರಾತಿ, ಶಾಮಿಯಾನ, ಕುಡಿಯುವ ನೀರು ಸೇರಿದಂತೆ ಚೆಕ್ಪೋಸ್ಟ್ಗಳ ವ್ಯವಸ್ಥೆಯ ಬಗ್ಗೆ ಮಾಹಿತಿ ಪಡೆದರು. ಚೆಕ್ಪೋಸ್ಟಗಳು ಸರಿಯಾಗಿ ಕಾರ್ಯ ನಿರ್ವಹಿಸಬೇಕು. ಚೆಕ್ಪೋಸ್ಟಳಿಗೆ ನಿಯೋಜನೆಗೊಂಡ ಎಲ್ಲ ಅಧಿಕಾರಿಗಳು ಮತ್ತು ಸಿಬ್ಬಂದಿ ಸರಿಯಾದ ಸಮಯಕ್ಕೆ ಪಾಳಿ ಅನುಸಾರ ಹಾಜರಾಗಿ ಕಾರ್ಯ ನಿರ್ವಹಿಸಬೇಕು. ಪ್ರತಿಯೊಂದು ವಾಹನವನ್ನು ತಪಾಸಣೆಗೆ ಒಳಪಡಿಸಬೇಕು ಎಂದು ಜಿಲ್ಲಾಧಿಕಾರಿಗಳು ಸ್ಥಳದಲ್ಲಿದ್ದ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ವಿಜಯಪುರ: ಸಾರ್ವತ್ರಿಕ ಲೋಕಸಭಾ ಚುನಾವಣೆ ಇದೇ ಮೇ ೦೭ರಂದು ಜರುಗಲಿದ್ದು, ಮತದಾನದ ದಿನದಂದು ಕಡ್ಡಾಯವಾಗಿ ಮತಗಟ್ಟೆಗಳಿಗೆ ಬಂದು ಎಲ್ಲರೂ ಮತದಾನ ಮಾಡಿ, ಮತದಾನವನ್ನು ನಿಮಗಾಗಿ, ನಿಮ್ಮ ಭವಿಷ್ಯಕ್ಕಾಗಿ, ನಮ್ಮ ಸಮಾಜಕ್ಕಾಗಿ ಮತ್ತು ನಮ್ಮ ದೇಶಕ್ಕಾಗಿ ಮತದಾನ ಮಾಡಿ ಚುನಾವಣೆ ಪ್ರಕ್ರಿಯೆಯನ್ನು ಯಶಸ್ವಿಗೊಳಿಸಬೇಕೆಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ರಿಶಿ ಆನಂದ ಹೇಳಿದರು.ಅವರು ವಿಜಯಪುರ ತಾಲೂಕಿನ ನಾಗಠಾಣ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಅನುಷ್ಠಾನಗೊಳ್ಳುತ್ತಿರುವ ಕೆರೆಹೂಳೆತ್ತುವ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ನರೇಗಾ ಕಾರ್ಮಿಕರಿಗೆ ಮತದಾನ ಜಾಗೃತಿ ಮೂಡಿಸಿದರು.ಪ್ರಸ್ತುತ ಜಿಲ್ಲೆಯಲ್ಲಿ ಬರಗಾಲ ಇರುವುದರಿಂದ ನರೇಗಾ ಯೋಜನೆಯಡಿ ಈ ವರ್ಷದ ಏಪ್ರಿಲ್, ಮೇ ಹಾಗೂ ಜೂನ್ ತಿಂಗಳುಗಳಲ್ಲಿ ಕೂಲಿ ಆಧಾರಿತ ಕಾಮಗಾರಿಗಳನ್ನು ಮಾತ್ರ ಕೈಗೊಳ್ಳಲಾಗುತ್ತಿದೆ. ಆದ್ದರಿಂದ ಎಲ್ಲರೂ ಇನ್ನೂ ಹೆಚ್ಚು ಹೆಚ್ಚು ಸಂಖ್ಯೆಯಲ್ಲಿ ಕೂಲಿ ಕಾರ್ಮಿಕರು ಕೆಲಸಕ್ಕೆ ಬರಬೇಕು. ನರೇಗಾ ಯೋಜನೆಯಡಿ ಪುರುಷರಿಗೆ ಮತ್ತು ಮಹಿಳೆಯರಿಗೆ ಸಮಾನವಾದ ಕೂಲಿ ಒದಗಿಸಲಾಗುತ್ತಿದೆ ಪ್ರತಿದಿನ ಒಬ್ಬರಿಗೆ ೩೪೯ ರೂಪಾಯಿಗಳನ್ನು ನೀಡಲಾಗುತ್ತಿದೆ ಎಂದರು.ಜನರಿಗೆ ನರೇಗಾ…
ಬೇಸಿಗೆ ಮಳೆ ವೇಳೆ ಜೀವಹಾನಿ ಹೆಚ್ಚು | ಕಂದಾಯ ಇಲಾಖೆ ವಿಪತ್ತು ನಿರ್ವಹಣೆ ಕಿವಿಮಾತು ಇಂಡಿ: ಬೇಸಿಗೆಯ ಮಳೆ ವೇಳೆ ಬಡಿಯುವ ಸಿಡಿಲಿನಿಂದ ಆಗುತ್ತಿರುವ ಜೀವ ಹಾನಿ ಪ್ರಕರಣಗಳಿಂದ ಎಚ್ಚೆತ್ತು ಕೊಂಡಿರುವ ರಾಜ್ಯ ಕಂದಾಯ ಇಲಾಖೆ ವಿಪತ್ತು ನಿರ್ವಹಣೆ ಜೀವಹಾನಿ ತಪ್ಪಿಸಲು ಮಾರ್ಗಸೂಚಿ ಪ್ರಕಟಿಸಿ ತಾಲೂಕಿನ ಜನರಿಗೆ ಮುನ್ನಚ್ಚರಿಕೆ ವಹಿಸಲು ಕಂದಾಯ ಉಪವಿಬಾಗಾಧಿಕಾರಿ ಅಬೀದ್ ಗದ್ಯಾಳ ಸೂಚಿಸಿದ್ದಾರೆ.ತಾಲೂಕಿನಲ್ಲಿ ಸಧ್ಯ ಮಳೆ ಕೊರತೆ ಇದ್ದರೂ ಮುಂಬರುವ ಪೂರ್ವ ಮುಂಗಾರು ಸಮಯದಲ್ಲಿ ಗುಡುಗು ಸಿಡಿಲಿನ ಅಬ್ಬರ ಹೆಚ್ಚಿರುವ ಮುನ್ನಸೂಚನೆಯಿದೆ. ಆದ್ದರಿಂದ ಸಾರ್ವಜನಿಕರು ಏನೆಲ್ಲ ಎಚ್ಚರಿಕೆ ವಹಿಸಬೇಕು ಎಂಬುದರ ಬಗ್ಗೆ ಸಲಹೆಗಳನ್ನು ಪ್ರಕಟಿಸಿದೆ.ಸಿಡಿಲು ಸಾಮಾನ್ಯವಾಗಿ ಮಧಾಹ್ನ ಅಥವಾ ಸಂಜೆ ಸಂಭವಿಸುವ ಸಾಧ್ಯತೆ ಹೆಚ್ಚಾಗಿರುತ್ತದೆ. ಈ ವೇಳೆ ಅನಿವಾರ್ಯವಿದ್ದಲ್ಲಿ ಮಾತ್ರ ಹೊರಗೆ ಹೋಗಬೇಕು.ಕೃಷಿ ಕ್ಷೇತ್ರದಲ್ಲಿ ಕೆಲಸ ಮಾಡುವವರು ಜಾನುವಾರು ಮೇಯಿಸುವವರು, ಸಾಮಾನ್ಯ ಪ್ರಯಾಣಕ್ಕಾಗಿ ಮನೆಯಿಂದ ಹೊರಗೆ ಹೋಗದಿರುವುದು ಒಳ್ಳೆಯದು.ಲೋಹದ ತಗಡನ್ನು ಹೊದಿಸಿರುವ ಮನೆಗಳು ಸುರಕ್ಷಿತವಲ್ಲ. ಸುರಕ್ಷಿತವಾದ ಕಟ್ಟಡಗಳಾದ ಮನೆ, ಕಚೇರಿ, ಅಂಗಡಿಗಳು ಮತ್ತು ಕಿಟಕಿ ಮುಚ್ಚಿರುವಂತಹ ವಾಹನಗಳಲ್ಲಿ…
ದೇವರಹಿಪ್ಪರಗಿ: ಬಿ.ಬಿ.ಇಂಗಳಗಿ ಗ್ರಾಮಸ್ಥರಿಂದ ತಹಶೀಲ್ದಾರ ಕಚೇರಿಗೆ ಮುತ್ತಿಗೆ ದೇವರಹಿಪ್ಪರಗಿ: ಗ್ರಾಮದಲ್ಲಿ ಸಮರ್ಪಕ ಕುಡಿಯುವ ನೀರು ಪೂರೈಸಲು ಆಗ್ರಹಿಸಿ ಮಹಿಳೆಯರು ಸೇರಿದಂತೆ ಗ್ರಾಮಸ್ಥರು ಖಾಲಿ ಕೊಡಗಳೊಂದಿಗೆ ಆಗಮಿಸಿ ತಹಶೀಲ್ದಾರ ಕಚೇರಿ ಮುಂದೆ ಧರಣಿ ಕುಳಿತು ಪ್ರತಿಭಟಿಸಿದರು.ತಾಲ್ಲೂಕಿನ ಕೊಂಡಗೂಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಿ.ಬಿ.ಇಂಗಳಗಿ ಗ್ರಾಮಸ್ಥರು ಬುಧವಾರ ತಹಶೀಲ್ದಾರ ಕಚೇರಿಗೆ ಆಗಮಿಸಿ ನೀರು ಪೂರೈಸದ ಗ್ರಾಮ ಪಂಚಾಯಿತಿ ಹಾಗೂ ತಾಲ್ಲೂಕು ಆಡಳಿತದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.ಈ ಸಂದರ್ಭದಲ್ಲಿ ಮಡಿವಾಳಮ್ಮ ಅಗಸರ ಮಾತನಾಡಿ, ಪ್ರತಿ ವರ್ಷ ಬೇಸಿಗೆಯಲ್ಲಿ ನಮ್ಮ ಗ್ರಾಮ ವ್ಯಾಪ್ತಿಯಲ್ಲಿ ಕುಡಿಯುವ ನೀರು ದೊರೆಯದೇ ತುಂಬಾ ತೊಂದರೆಯಾಗುತ್ತಿದೆ. ಗ್ರಾಮದಲ್ಲಿಯ ಬೊರೆವೆಲ್ ನೀರು ಕುಡಿಯಲು ಯೋಗ್ಯವಾಗಿಲ್ಲ. ಇನ್ನೂ ಕೆಲವು ಬೊರೆವೆಲ್ಗಳು ಕೆಟ್ಟು ಹೋಗಿವೆ. ಕುಡಿಯುವ ನೀರು ದೊರೆಯುವ ಏಕೈಕ ಭಾವಿಯಲ್ಲಿ ನೀರು ಆಳಕ್ಕೆ ಇಳಿದಿದೆ. ಇನ್ನೂ ಗ್ರಾಮ ಪಂಚಾಯಿತಿ ೧೫ ದಿನಗಳಿಗೊಮ್ಮೆ ನೀರು ಪೂರೈಸುತ್ತದೆ ಹೀಗಾದರೆ ಜೀವನ ಮಾಡುವುದಾದರೂ ಹೇಗೆ ಎಂದು ಪ್ರಶ್ನೀಸಿ ತಮ್ಮ ಅಸಹಾಯಕತೆ ವ್ಯಕ್ತಪಡಿಸಿದರು.ಗ್ರಾಮ ಪಂಚಾಯಿತಿ ಸದಸ್ಯ ಸಲೀಮ್ ವಠಾರ ಹಾಗೂ ಸಾಹಿರಾಭಾನು…
