Subscribe to Updates
Get the latest creative news from FooBar about art, design and business.
Author: editor.udayarashmi@gmail.com
ವಿಜಯಪುರ: ಲೋಕಸಭಾ ಚುನಾವಣೆ ನಿಮಿತ್ತ ವಿಜಯಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಸಂಸದ ರಮೇಶ ಜಿಗಜಿಣಗಿ ಅವರು ನಗರದ ಎಪಿಎಂಸಿ ಮಂಗಲ ಕಾರ್ಯಾಲಯದಲ್ಲಿ ವರ್ತಕರ ಸಭೆ ನಡೆಸಿ ವಿವಿಧ ವರ್ತಕರ ಸಂಘಸಂಸ್ಥೆಗಳ ಸದಸ್ಯರಲ್ಲಿ ಈ ಬಾರಿ ತಮಗೆ ಬೆಂಬಲಿಸಿ ಬಿಜೆಪಿ ಪರ ಮತ ಹಾಕುವಂತೆ ಕೋರಿದರು.ಈ ವೇಳೆ ಸಂಸದ ರಮೇಶ ಜಿಗಜಿಣಗಿ ಮಾತನಾಡಿ, ದೇಶದ ಸಮಗ್ರ ಅಭಿವೃದ್ಧಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರದ ಕೊಡುಗೆ ಸಾಕಷ್ಟಿದೆ. ಕಳೆದ ಹತ್ತು ವರ್ಷಗಳಲ್ಲಿ ಭಾರತ ವಿಶ್ವದ 5 ನೇ ಬಲಿಷ್ಠ ಆರ್ಥಿಕ ರಾಷ್ಟ್ರವಾಗಿ ಹೊರಹೊಮ್ಮಿದೆ. ಈ ಬಾರಿ ಮತ್ತೆ ಮೋದಿ ನೇತೃತ್ವದ ಬಿಜೆಪಿ ಸರ್ಕಾರದ ಆಡಳಿತಕ್ಕೆ ಬಂದರೆ ಭಾರತವನ್ನು ವಿಶ್ವದ 3 ನೇ ಆರ್ಥಿಕ ಶಕ್ತಿಶಾಲಿ ರಾಷ್ಟ್ರ ಮಾಡುವುದರೊಂದಿಗೆ ವಿಕಸಿತ ಭಾರತ ಮಾಡುವ ಸಂಕಲ್ಪ ಮೋದಿ ತೊಟ್ಟಿದ್ದಾರೆ. ನಾನು ಬಹುವರ್ಷಗಳಿಂದ ವರ್ತಕರ ಸಂಘಸಂಸ್ಥೆಗಳಿಗೆ ಅವಕಾಶ ಬಂದಾಗಲೆಲ್ಲಾ ಸ್ಪಂದಿಸುವ ಕೆಲಸ ಮಾಡಿದ್ದೇನೆ. ಎಲ್ಲಾ ಮಾರುಕಟ್ಟೆ ವರ್ತಕರು, ವ್ಯಾಪಾರಸ್ಥರೊಂದಿಗೆ ಆತ್ಮೀಯ ಒಡನಾಟ ಹೊಂದಿದ್ದೇನೆ. ತಾವೆಲ್ಲಾ…
ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ರೈತರ ಸಾಲ ಮನ್ನಾ | ಮಹಿಳೆಯರಿಗೆ ವಾರ್ಷಿಕ ರೂ.1.24 ಲಕ್ಷ ನೀಡಿಕೆ ಮಂಡ್ಯ: ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ದೇಶದ ಎಲ್ಲಾ ರೈತರ ಸಾಲ ಮನ್ನಾ ಮಾಡುತ್ತೇವೆ ಮತ್ತು ರಾಜ್ಯದಲ್ಲಿ ಬಡ ಮಹಿಳೆಯರಿಗೆ ಈಗಾಗಲೇ ನೀಡುತ್ತಿರುವ 24 ಸಾವಿರಕ್ಕೆ 1 ಲಕ್ಷ ರೂ. ಸೇರಿಸಿ 1 ಲಕ್ಷದ 24 ಸಾವಿರ ರೂಪಾಯಿ ನೀಡುತ್ತೇವೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಭರವಸೆ ನೀಡಿದ್ದಾರೆ.ಬುಧವಾರ ಮಂಡ್ಯದ ಪಿಇಎಸ್ ಕಾಲೇಜು ಮೈದಾನದಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದ ರಾಹುಲ್ ಗಾಂಧಿ, ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರ ಸಂಬಳ ಹೆಚ್ಚಿಸುತ್ತೇವೆ. ಸರ್ಕಾರಿ, ಅರೆ ಸರ್ಕಾರಿ ನೌಕರರ ಗುತ್ತಿಗೆ ಪದ್ಧತಿಯನ್ನು ರದ್ದುಗೊಳಿಸುತ್ತೇವೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಉದ್ಯೋಗ ಭದ್ರತಾ ಯೋಜನೆ ಜಾರಿ ಮಾಡುತ್ತೇವೆ ಎಂದು ಹೇಳಿದರು.ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ನುಡಿದಂತೆ ನಡೆದಿದ್ದೇವೆ. 5 ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಬಡವರಿಗೆ, ಮಹಿಳೆಯರಿಗೆ, ಯುವಕರಿಗೆ ಅನುಕೂಲವಾಗಿದೆ. ಮೋದಿ ನೇತೃತ್ವದ ಕೇಂದ್ರ…
ಆಲಮಟ್ಟಿ: ಯಲಗೂರದ ಯಲಗೂರೇಶ್ವರ ದೇವಸ್ಥಾನದಲ್ಲಿ ಬುಧವಾರ ರಾಮನವಮಿ ನಿಮಿತ್ತ ಯಲಗೂರೇಶ , ದೇವಸ್ಥಾನ ಪ್ರಾಂಗಣ ಸಂಪೂರ್ಣ ದ್ರಾಕ್ಷಿಯ ಅಲಂಕಾರ ಮಾಡಲಾಗಿತ್ತು.ಬೆಳಿಗ್ಗೆ ಶ್ರೀ ರಾಮನ ಉತ್ಸವ ಮೂರ್ತಿಯ ಮೆರವಣಿಗೆ ಜರುಗಿತು.ದೇವಸ್ಥಾನದ ಪ್ರಾಂಗಣದಲ್ಲಿ ಮಧ್ಯಾಹ್ನ 12 ಕ್ಕೆ ಸರಿಯಾಗಿ ಪುಷ್ಪಾಲಂಕೃತ ತೊಟ್ಟಿಲಲ್ಲಿ ರಾಮನ ಮೂರ್ತಿ ಇಟ್ಟು ರಾಮನವಮಿಯನ್ನು ಭಕ್ತಿ ಭಾವದಿಂದ ಆಚರಿಸಲಾಯಿತು. ಯಲಗೂರೇಶನಿಗೆ ಪಂಚಾಮೃತ ಅಭಿಷೇಕ, ಅಲಂಕಾರ, ಮಹಾಪೂಜೆಯೂ ಜರುಗಿತು. ರಾಮನ ಹಾಗೂ ಪವನಸುತನ ಭಕ್ತಿಗೀತೆಗಳನ್ನು ಸೇರಿದ್ದ ಹಲವಾರು ಮಹಿಳೆಯರು ಹಾಡಿದರು.ಭಕ್ತರಿಗೆ ಪಾನಕಾ, ಮಜ್ಜಿಗೆ, ಕೋಸಂಬರಿ ಪ್ರಸಾದ ವಿತರಿಸಲಾಯಿತು. ಡಾ ವಾದಿರಾಜ ಯಲಬುರ್ಗಿ ದಂಪತಿ ರಾಮನ ಪೂಜೆ ನೆರವೇರಿಸಿದರು.ದೇವಸ್ಥಾನ ಟ್ರಸ್ಟ್ ಅಧ್ಯಕ್ಷ ಅನಂತ ಓಂಕಾರ, ಯಲಗೂರೇಶ್ವರ ಅನ್ನದಾಸೋಹ ಸಮಿತಿಯ ಅಧ್ಯಕ್ಷ ಶ್ಯಾಮ ಪಾತರದ, ಯಲಗೂರದಪ್ಪ ಪೂಜಾರ, ಗುರುರಾಜ ಗದ್ದನಕೇರಿ, ಸಂಜೀವ ಪೂಜಾರ, ವಿಠ್ಠಲಾಚಾರ್ಯ ಗದ್ದನಕೇರಿ, ಪಾಂಡುರಂಗಾಚಾರ್ಯ ಹೊಸೂರ, ಪ್ರಹ್ಲಾದಾಚಾರ್ಯ ಗದ್ದನಕೇರಿ, ಸಂತೋಷ ಪೂಜಾರ, ಬದರಿನಾರಾಯಣ ಚಿಮ್ಮಲಗಿ, ಮಹಾಂತೇಶ ಡೆಂಗಿ, ಸಂಭಾಜಿ ಪವಾರ, ಸುಧಾಬಾಯಿ ಗದ್ದನಕೇರಿ, ರುಕ್ಮಿಣಿ ಗದ್ದನಕೇರಿ, ವಾರುಣಿ ಹಿಪ್ಪರಗಿ, ಶ್ರೀಲಕ್ಷ್ಮಿ ಗದ್ದನಕೇರಿ ಅನಘಾ…
ವಿಜಯಪುರ: ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ನಂದಿಹಾಳ ಪಿಯು ಗ್ರಾಮದ ಭಾರತೀಯ ಯುವಜನ ಸೇವಾ ಸಂಸ್ಥೆ ಹಾಗೂ ಕರ್ನಾಟಕ ಪತ್ರಕರ್ತರ ಸಂಘ ವಿಜಯಪುರ ಜಿಲ್ಲಾ ಘಟಕ ಇವರ ಸಹಯೋಗದಲ್ಲಿ ಶ್ರೀ ಕೊಡೆಕಲ್ ಬಸವೇಶ್ವರ ಜಾತ್ರಾ ನಿಮಿತ್ಯವಾಗಿ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಕೊಡೆಕಲ್ ಬಸವ ಶ್ರೀ ರಾಜ್ಯ ಪ್ರಶಸ್ತಿ ಸಮಾರಂಭದಲ್ಲಿ ಅಂತರಾಷ್ಟ್ರೀಯ ಕ್ರೀಡಾ ವಿಭಾಗದಲ್ಲಿ ಸಾಧನೆಗೈದ ಸಮರ್ಥ ವಸಂತಕುಮಾರ ಬಜಂತ್ರಿ ಹಾಗೂ ಸಂಜೀವ ವಸಂತಕುಮಾರ ಬಜಂತ್ರಿ ಇವರಿಗೆ ಕೊಡೆಕಲ್ ಬಸವ ಶ್ರೀ ರಾಜ್ಯ ಪ್ರಶಸ್ತಿ ನೀಡಿ ಆತ್ಮೀಯವಾಗಿ ಸನ್ಮಾನಿಸಲಾಯಿತು.ಈ ಸಂಧರ್ಭದಲ್ಲಿ ಕೊಡೆಕಲ್ ಮಠದ ಸಂಗಯ್ಯ ಸ್ವಾಮಿಗಳು ವೀರಸಂಗಯ್ಯ ಕೊಡೆಕಲ್ ಮಠ ಸ್ವಾಮಿಗಳು ಹಾಗೂ ಪರಶುರಾಮ ಪೂಜಾರಿ ಮಣ್ಣೂರ ಬೀರಪ್ಪ ಪೂಜಾರಿ ನಂದಿಹಾಳ, ನ್ಯಾಯವಾದಿಗಳು ಹಾಗೂ ಸಾಹಿತಿಗಳಾದ ಮಲ್ಲಿಕಾರ್ಜುನ ಭೃಂಗಿಮಠ, ಸಾಹಿತಿ ಲಾಯಪ್ಪ ಇಂಗಳೆ, ಯಲಬುರ್ಗಾದ ಪತ್ರಕರ್ತರಾದ ವಿ ಎಸ್ ಶಿವಪ್ಪಯ್ಯನ ಮಠ ವಿನಾಯಕ ಸೌಹಾರ್ದ ಬ್ಯಾಂಕಿನ ಅಧ್ಯಕ್ಷರಾದ ವಿಶ್ವನಾಥ ಪಾಟೀಲ ಪ್ರಕಾಶ ಕೋಲ್ಕಾರ ಸೇರಿದಂತೆ ವಿವಿಧ ಗಣ್ಯರು ಉಪಸ್ಥಿತರಿದ್ದರು.
ವಿಜಯಪುರ: ನಗರದಲ್ಲಿ ಶ್ರೀರಾಮ ನವಮಿ ಉತ್ಸವ ಸಮಿತಿ ವತಿಯಿಂದ ರಾಮ ನವಮಿಯನ್ನು ಬೆಳಿಗ್ಗೆ ೬ ಗಂಟೆಯಿಂದ ಹೋಮ ಹವನ ಪೂಜಾ ಕಾರ್ಯಕ್ರಮಗಳೊಂದಿಗೆ ಸರಳವಾಗಿ ಆಚರಿಸಲಾಯಿತು.ಈ ಸಂದರ್ಭದಲ್ಲಿ ಉತ್ಸವ ಸಮಿತಿ ಅಧ್ಯಕ್ಷ ಉಮೇಶ ವಂದಾಲ ಮಾತಾನಾಡಿ, ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವದರಿಂದ ಈ ವರ್ಷ ಕೇವಲ ಬ್ರಾಹ್ಮಣ ಮಹಿಳಾ ಮಂಡಳಿ ವತಿಯಿಂದ ಕೋಲಾಟ ಆರತಿ, ಮಾಹಾಪುಜೆ, ರಾಮಜಪ ದೊಂದಿಗೆ ರಾಮ ನವಮಿ ಆಚರಿಸಲಾಯಿತು. ರಾಮ ನವಮಿ ಉತ್ಸವದ ಮಹತ್ವವು ದುಷ್ಟರ ಮೇಲೆ ಒಳ್ಳೆಯತನದ ವಿಜಯ, ಅಧರ್ಮವನ್ನು ಸೋಲಿಸಿ ಧರ್ಮದ ಸ್ಥಾಪನೆಯನ್ನು ಮಾಡಿದ ಕಾರ್ಯವನ್ನು ಸೂಚಿಸುತ್ತದೆ. ಶ್ರಿರಾಮನನ್ನು ಸೂರ್ಯದೇವನ ಪೂರ್ವಜನೆಂದೂ ಜನ ನಂಬುತ್ತಾರೆ. ರಾಮ ನವಮಿಯು ಸದಾಚಾರದ ಶಾಶ್ವತ ತತ್ವಗಳ ಜ್ಞಾಪನೆಯಾಗಿ ಕಾರ್ಯನಿರ್ವಹಿಸುತ್ತದೆ. ಭಗವಾನ್ ರಾಮನ ಜೀವನವು ಕರ್ತವ್ಯ, ಗೌರವ ಮತ್ತು ತ್ಯಾಗದ ಆದರ್ಶಗಳನ್ನು ನಮಗೆ ಕಲಿಸುತ್ತದೆ. ನೈತಿಕ ಮೌಲ್ಯಗಳನ್ನು ಎತ್ತಿಹಿಡಿಯಲು ಮತ್ತು ಸದಾಚಾರದ ಜೀವನವನ್ನು ನಡೆಸಲು ಭಕ್ತರನ್ನು ಪ್ರೇರೇಪಿಸುತ್ತದೆ ಎಂದು ತಿಳಿಸಿದರು.ಈ ಸಂದರ್ಭದಲ್ಲಿ ಶಿವಾನಂದ ಭುಯ್ಯಾರ, ಶರಣು ಸಬರದ, ಮಹೇಶ ಜಾಧವ, ಶ್ರೀಶೈಲ…
ಕೊಲ್ಹಾರ: ದೇಶದಲ್ಲಿ ಈ ಬಾರಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ರೈತಾಪಿ ವರ್ಗದವರ ಸಾಲವನ್ನು ಸಂಪೂರ್ಣ ಮನ್ನಾ ಮಾಡಲಾಗುವದು. ಆದ್ದರಿಂದ ಮತದಾರರು ಜಾಗೃತರಾಗಿ ಪ್ರಸಕ್ತ ಸಾಲಿನ ಲೋಕಸಭಾ ಚುಣಾವನೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಿ ಅಧಿಕಾರದ ಚುಕ್ಕಾನೆ ಹಿಡಿಯಲು ಅನುಕೂಲ ಮಾಡಿಕೊಡಬೇಕೆಂದು ಸಚಿವ ಶಿವಾನಂದ ಎಸ್ ಪಾಟೀಲ ಮನವಿ ಮಾಡಿಕೊಂಡರು.ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಲೋಕಸಭಾ ಚುನಾವಣಾರ್ಥವಾಗಿ ಕೊಲ್ಹಾರ ತಾಲೂಕು ಕೂಡಗಿ ಮತ್ತು ಮುಳವಾಡ ಜಿಲ್ಲಾ ಪಂಚಾಯತಿ ವ್ಯಾಪ್ತಿಯ ಹಾಗೂ ಪಟ್ಟಣದ ಮತದಾರ ಪ್ರಭುಗಳಲ್ಲಿ ಮತದಾನ ಮಾಡಬೇಕೆಂಬ ಸಾರ್ವಜನಿಕ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡುತ್ತಿದ್ದರು. ದೇಶದ ರೈತರಿಗೆ ಸೂಕ್ತ ಬೆಂಬಲ ಬೆಲೆ ಕೊಡದೇ ಇರುವದು ಅಲ್ಲದೇ ಇನ್ನೊಂದು ಕಡೆ ಬಂಗಾರದ ಬೆಲೆಯನ್ನು ಗಗನಕ್ಕೆ ಏರಿಸುತ್ತಾ ನಡೆದಿರುವದು ಈಗಿರುವ ಕೇಂದ್ರ ಸರಕಾರದ ದ್ವಿಮುಖ ನೀತಿಯನ್ನು ಎತ್ತಿ ತೋರಿಸುತ್ತಿದೆ ಎಂದು ವ್ಯಂಗ್ಯವಾಡಿದರು.ಚಿನ್ನದ ಬೆಲೆ ಆಕಾಶದೆತ್ತರಕ್ಕೆ ಏರುತ್ತಿರುವದನ್ನು ಗಮನಿಸಿದರೆ ಹೆಣ್ಣುಮಕ್ಕಳು ಕೊರಳಲ್ಲಿ ತಾಳಿಯ ಬದಲಾಗಿ ಕಬ್ಬಿಣದ ತುಕಡಿಯನ್ನು ಹಾಕಿಕೊಳ್ಳಬೇಕೋ ಅಥವಾ ಅರಿಷಿಣದ ಕೊಂಬನ್ನು ಧರಿಸಿಕೊಂಡು ಇರಬೇಕು ಎನ್ನುವಂತಹ…
ಮುದ್ದೇಬಿಹಾಳ: ಚಿಮ್ಮಲಗಿ ಏತ ನೀರಾವರಿ ಕಾಲುವೆ ಕಾಮಗಾರಿ ಸನ್ ೨೦೧೩ ರಿಂದ ಪ್ರಾರಂಭವಾಗಿದ್ದರೂ ಪೂರ್ಣಗೊಂಡಿಲ್ಲ. ರಸ್ತೆಯ ಒಂದೇ ಬದಿಯಲ್ಲಿ ನೀರು ಹರಿಯುತ್ತಿದ್ದು ಇನ್ನೊಂದು ಬದಿಯ ರೈತರಿಗೆ ಈ ಯೋಜನೆ ತಲುಪಿಲ್ಲ. ಇದರಿಂದ ರೈತರಿಗೆ ತೊಂದರೆಯಾಗುತ್ತಿದ್ದು ತಾಲೂಕಿನ ನಾಲತವಾಡ ಬಳಿಯ ಅಮರೇಶ್ವರ ದೇವಸ್ಥಾನದ ತಿರುವಿಗೆ ಕಾಲುವೆ ನಿರ್ಮಿಸುವ ಮೂಲಕ ಯೋಜನೆಯನ್ನು ಪೂರ್ಣಗೊಳಿಸಬೇಕು ಎಂದು ಆಗ್ರಹಿಸಿ ಹೋರಾಟಗಾರ ಶಿವಾನಂದ ವಾಲಿ ಪಟ್ಟಣದ ಹುಡ್ಕೋದಲ್ಲಿರುವ ಕೃಷ್ಣಾ ಭಾಗ್ಯ ಜಲ ನಿಗಮದ (ಎ.ಎಲ್.ಬಿ.ಸಿ) ಸಹಾಯಕ ಅಭಿಯಂತರರಿಗೆ ಮಂಗಳವಾರ ಮನವಿ ಪತ್ರ ಸಲ್ಲಿಸಿರು.ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಸ್ತೆಯ ಎರಡು ಬದಿಗಳಲ್ಲಿ ಕಾಲುವೆ ನಿರ್ಮಿಸಿದ್ದಾರೆ. ಆದರೆ ಒಂದನ್ನೊಂದು ಸೇರಿಸುವ ಪ್ರಮುಖ ಕಾಮಗಾರಿಯನ್ನೇ ಕೈಗೊಂಡಿಲ್ಲ. ಹನ್ನೊಂದು ವರ್ಷಗಳು ಗತಿಸಿದರೂ ಈ ಎರಡೂ ಕಾಲುವೆಗಳನ್ನು ಸೇರಿಸುವ ಇಚ್ಛೆ ಈ ಅಧಿಕಾರಿಗಳಿಗೆ ಇಲ್ಲ. ಇದರಿಂದ ಅಂದಾಜು ೫೦೦ ಎಕರೆ ಭೂಮಿಯ ರೈತರಿಗೆ ಅನ್ಯಾಯ ಮಾಡಿದಂತಾಗಿದೆ. ಕೂಡಲೇ ಸಂಬಂಧಿಸಿದ ಅಧಿಕಾರಿಗಳು ಎಚ್ಚೆತ್ತು ರಸ್ತೆಯ ಈ ಬದಿಗೆ ಕಾಲುವೆ ಸೇರಿಸಲು ಮುಂದಾಗಬೇಕು ಇಲ್ಲವಾದಲ್ಲಿ ಆಮರಣಾಂತ…
ಮುದ್ದೇಬಿಹಾಳ: ಮಂಗಳವಾರ ಅಗಲಿದ ಚಿತ್ರರಂಗದ ಹಿರಿಯ ಹಾಸ್ಯನಟ, ನಿರ್ಮಾಪಕ, ನಿರ್ದೇಶಕ ದ್ವಾರಕೀಶ ಅವರ ಹಸನ್ಮುಖಿ ಚಿತ್ರವನ್ನು ಬಿಡಿಸುವ ಮೂಲಕ ತಾಲೂಕಿನ ಯರಗಲ್ಲ ಗ್ರಾಮದ ಕಲಾವಿದ ಬಸವರಾಜ ಹಡಪದ ಅವರು ಶೃದ್ಧಾಂಜಲಿ ಸಲ್ಲಿಸಿದರು.
ಬೆಕಿನಾಳದಲ್ಲಿ ನಡೆದ ಧರ್ಮಸಭೆಯನ್ನು ಉದ್ಘಾಟಿಸಿದ ಡಾ.ಪ್ರಭುಗೌಡ ಅಭಿಮತ ಕಲಕೇರಿ: ನಮ್ಮ ಪ್ರಾಂಪಚಿಕ ಜೀವನದಲ್ಲಿ ಯಶಸ್ಸು ಕಾಣಲು ಗುರು ಮತ್ತು ಗುರಿ ಬಹುಮುಖ್ಯ ಸಾರ್ಥಕ ಬದುಕನ್ನು ಕಾಣಲು ಪ್ರತಿಯೋಬ್ಬರು ಧಾರ್ಮಿಕ ಕಾರ್ಯಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕು ಗುರುಗಳು ಗುರಿಯನ್ನು ತೋರುತ್ತಾರೆ, ಅದು ಬದುಕಿನ ದಾರಿಯೂ ಹೌದು. ಗುರು ಮತ್ತು ಗುರಿಯ ದರ್ಶನ ನೀಡುವುದೇ ಧರ್ಮಸಭೆಯ ಮೂಲ ದ್ಯೇಯವಾಗಿರುತ್ತದೆ ಎಂದು ಅನುಗ್ರಹ ಕಣ್ಣಿನ ಆಸ್ಪತ್ರೆಯ ಸಂಸ್ಥಾಪಕ ಡಾ.ಪ್ರಭುಗೌಡ ಲಿಂಗದಳ್ಳಿ (ಚಭನೂರ) ಹೆಳಿದರು.ಕಲಕೇರಿ ಸಮಿಪದ ಬೇಕಿನಾಳ ಗ್ರಾಮದ ಶಕ್ತಿಪೀಠ ಮಾತೇಮಹೇಶ್ವರಿ ದೇವಸ್ಥಾನದಲ್ಲಿ ಮಂಗಳವಾರ ಸಂಜೆ ಜಾತ್ರಾ ಮಹೋತ್ಸವದ ನಿಮಿತ್ಯ ಹಮ್ಮಿಕೊಂಡ ಧರ್ಮ ಸಭೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಭಾರತೀಯ ಸಂಸ್ಕೃತಿ,ಆಚಾರ ವಿಚಾರಗಳನ್ನು ಯುವ ಜನತೆಯಲ್ಲಿ ಬಿತ್ತುವ ಕಾರ್ಯವನ್ನು ನಾವಿಂದು ಮಾಡಬೇಕಾಗಿದೆ, ಯುವ ಸಮೂಹ ಶಿಕ್ಷಣದ ಜೊತೆಗೆ ಸಂಸ್ಕಾರವನ್ನು ಪಡೆದುಕೊಳ್ಳಬೇಕು, ಮಾನವೀಯ ಮೌಲ್ಯಗಳನ್ನು ಮೈಗೂಡಿಸಿಕೊಳ್ಳಬೇಕು. ಈ ದಿಸೆಯಲ್ಲಿ ಬೇಕಿನಾಳ-ವಣಕಿಹಾಳ ಶಕ್ತಿಪೀಠದ ಮಹೇಶಮುತ್ಯಾ ಅವರು ಮಾಡುತ್ತಿರುವ ಧಾರ್ಮಿಕ ಕಾರ್ಯಗಳು ನಿಜಕ್ಕೂ ಶ್ಲಾಘನಿಯ ಎಂದು ಅವರು ಹೆಳಿದರು.ಆಲೂರ ಹಿರೇಮಠದ ಕೇಂಚವೃಷಬೇಂದ್ರ…
ಇಂಡಿ: ಲೋಕಸಭೆ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಮತದಾನ ಪ್ರಮಾಣ ಹೆಚ್ಚಿಸುವ ನಿಟ್ಟಿನಲ್ಲಿ ತಾಲೂಕು ಆಡಳಿತ, ತಾಪಂ, ಸ್ವೀಪ್ ಸಮಿತಿ, ಪುರಸಭೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಮಂಗಳವಾರ ಸಂಜೆ ತಾಲೂಕು ಆಡಳಿತ ಸೌಧದಿಂದ ಪಟ್ಟಣದ ಹೃದಯ ಭಾಗದ ಬಸವೇಶ್ವರ ವೃತ್ತದವರೆಗೆ ಕ್ಯಾಂಡಲ್ ಮಾರ್ಚ್ ನಡೆಯಿತು.ಮೆರವಣಿಗೆಯುದ್ದಕ್ಕೂ ನಮ್ಮ ಮತ ನಮ್ಮ ಶಕ್ತಿ, ಮತದಾನ ಮಾಡಲು ನಿರ್ಲಕ್ಷ್ಯವೇಕೆ, ನಾಗರಿಕರ ಒಂದೇ ಕರೆ-ಅದು ಮತದಾನದ ಕರೆ, ಮತದಾನ ಪ್ರತಿಯೊಬ್ಬರ ಹಕ್ಕು, ನಾನು ಮತದಾರ ನನಗೆ ಹೆಮ್ಮೆ ಎಂಬಿತ್ಯಾದಿ ಭಿತ್ತಿಪತ್ರ ಹಿಡಿದುಕೊಂಡು ಘೋಷಣೆ ಕೂಗುತ್ತ ಮತದಾರರಲ್ಲಿ ಜಾಗೃತಿ ಮೂಡಿಸಿದರು.ಈ ಸಂದರ್ಭದಲ್ಲಿ ಉಪವಿಭಾಗ ಅಧಿಕಾರಿ ಅಬೀದ್ ಗದ್ಯಾಳ ಮಾತನಾಡಿ ಜಿಲ್ಲೆಯಲ್ಲಿ ಮತದಾನ ಪ್ರಮಾಣದ ನೂರಕ್ಕೆ ನೂರರಷ್ಟು ಆಗಲು ಸ್ವೀಪ್ ಸಮಿತಿಯಿಂದ ಜಾಗೃತಿ ಮೂಡಿಸಲು ವಿವಿಧ ಚಟುವಟಿಕೆಗಳನ್ನು ಆಯೋಜಿಸಿದೆ. ಇದರಲ್ಲಿ ಮೇಣದಬತ್ತಿ ಮೆರವಣಿಗೆ ಸಹ ಒಂದಾಗಿದೆ ಎಂದರು. ಪ್ರತಿಯೊಬ್ಬರು ಬರುವ ಮೇ ೭ ರಂದು ಕಡ್ಡಾಯವಾಗಿ ಮತ ಚಲಾಯಿಸಿ ಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸಬೇಕು ಎಂದು ಕರೆ ನೀಡಿದರು.ತಹಸೀಲ್ದಾರ ಮಂಜುಳಾ…
