Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಇಂಡಿ: ನ್ಯಾಯ, ನೀತಿ,ಧರ್ಮ, ಸತ್ಯ, ಪ್ರಾಮಾಣಿಕತೆ, ಮಾನವೀಯತೆ ಇವೆಲ್ಲದರ ಪ್ರತೀಕ ಶ್ರೀ ರಾಮರವರು ಎಂದು ಜೈನಾಪುರ ಮಠದ ಶ್ರೀ ರೇಣುಕಾಶಿವಾಚಾರ್ಯರರು ಹೇಳಿದರು.ಪಟ್ಟಣದ ಶ್ರೀ ಶಾಂತೇಶ್ವರ ಮಂಗಲ ಕಾರ್ಯಾಲಯದಲ್ಲಿ ಶ್ರೀ ರಾಮ ಸಮಿತಿಯಿಂದ ನಡೆದ ಶ್ರೀ ರಾಮ ನವಮಿ ಕಾರ್ಯಕ್ರಮದಲ್ಲಿ ಮಾತನಾಡಿದರು.ಬೆಳಗಾವಿ ವಿಭಾಗದ ವಿಎಚ್ಪಿ ಪ್ರಮುಖ ಶ್ರೀಮಂತ ದುದ್ದಗಿ ಮಾತನಾಡಿ ಶ್ರೀ ರಾಮನನ್ನು ರಾಮಾಯಣದಲ್ಲಿ ಶ್ರೀ ವಾಲ್ಮೀಕಿ ಮಹರ್ಷಿಗಳು ಓರ್ವ ಸಾಮಾನ್ಯ ಮನುಷ್ಯನಾಗಿಯೇ ಚಿತ್ರಿಸಿ ಸಾರ್ಥಕ ಬದುಕಿನ ಅವರ ನಡುವಳಿಕೆಯಿಂದಲೇ ದೇವನನ್ನಾಗಿಸಿದ್ದಾರೆ ಎಂದರು.ಡಾ.ಕುಮಾರಗೌಡ ಪಾಟೀಲ ಮಾತನಾಡಿ, ಸವೋತ್ತಮನೆಂದರೆ, ಪರಿಪೂರ್ಣ, ಶ್ರೇಷ್ಠ ಮನುಷ್ಯನೆಂದರೆ, ಮನುಷ್ಯನಿಂದಲೇ ದೇವನಾದವನು. ಅವರೇ ರಾಮ ಎಂದರು.ವಿಎಚ್ಪಿ ಮುಖಂಡ ಪ್ರಕಾಶ ಬಿರಾದಾರ ಮಾತನಾಡಿದರು.ಮಲ್ಲಿಕಾರ್ಜುನ ಪವಾರ, ವಿಠ್ಠಲ ಹೊಸಮನಿ, ನೇತಾಜಿ ಪವಾರ, ಗೋವಿಂದ ಹಿಬಾರೆ, ಮಹೇಶ ಪೂಜಾರಿ, ಶಿವರಾಜ ಬಿರಾದಾರ ಮತ್ತಿತರಿದ್ದರು.
ವಿಜಯಪುರ: ೨೦೨೪-೨೫ನೇ ಶೈಕ್ಷಣಿಕ ಸಾಲಿನ ಬಿ.ಎ ಬಿ.ಎಸ್.ಸಿ ಬಿ.ಕಾಂ. ಬಿ.ಬಿ.ಎ ಹಾಗೂ ಸಂಜೆ ಕಾಲೇಜಿನ ಬಿ.ಕಾಂ ಬಿ.ಸಿ.ಎ ಪ್ರಥಮ ವರ್ಷದ ಪ್ರವೇಶಗಳು ಪ್ರಾರಂಭವಾಗಿವೆ, ಆದರಿಂದ ಈ ಕಾಲೇಜಿನಲ್ಲಿ ಸರ್ಕಾರ ನಿಗಧಿಪಡಿಸಿದ ಶುಲ್ಕವನ್ನು ಮಾತ್ರ ಇದ್ದು, ವಿದ್ಯಾರ್ಥಿನಿಯರಿಗೆ ಮಾತ್ರ ಯಾವುದೇ ಬೋಧನಾ ಶುಲ್ಕು ಇರುವದಿಲ್ಲ. ಆದರಿಂದ ದ್ವಿತಿಯ ಪಿ.ಯು.ಸಿ ತೇರ್ಗಡೆ ಹೊಂದಿರುವ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಪ್ರವೇಶ ಪಡೆದುಕೊಳ್ಳಬೇಕೆಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ. ಎ. ಆಯ್. ಹಂಜಗಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿಜಯಪುರ: ವಿಜಯಪುರ(ಪ ಜಾ) ಲೋಕಸಭೆ ಮತಕ್ಷೇತ್ರದಲ್ಲಿ ನಾಲ್ಕನೆ ದಿನವಾದ ಬುಧವಾರದಂದು ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ಬಾಬು ರಾಜೇಂದ್ರ ನಾಯಿಕ ಅವರು ಒಂದು ನಾಮಪತ್ರ, ಕರ್ನಾಟಕ ರಾಷ್ಟ್ರೀಯ ಸಮಿತಿ (ಕೆಆರ್ಎಸ್ ) ಪಕ್ಷದಿಂದ ಗಣಪತಿ ಲಾಲಸಿಂಗ್ ರಾಠೋಡ ಒಂದು ನಾಮಪತ್ರ, ರಾಣಿ ಚೆನ್ನಮ್ಮ ಪಕ್ಷದ ಅಭ್ಯರ್ಥಿಯಾಗಿ ಕವಿತಾ ದೀಪಕ ಉರ್ಫ್ ವೆಂಕಟೇಶ್ವರ ಮಹಾಸ್ವಾಮೀಜಿ ಕಟಕದೊಂಡ್ ಅವರು ಒಂದು ಹಾಗೂ ಹಿಂದೂಸ್ತಾನ ಜನತಾ ಪಕ್ಷದಿಂದ ದೀಪಕ ಉರ್ಫ್ ವೆಂಕಟೇಶ್ವರ ಮಹಾಸ್ವಾಮಿಜಿ ಒಂದು ನಾಮಪತ್ರ ಸಲ್ಲಿಸುವ ಮೂಲಕ ಒಟ್ಟಾರೆ ನಾಲ್ಕು ಅಭ್ಯರ್ಥಿಗಳಿಂದ ನಾಲ್ಕು ನಾಮಪತ್ರಿಗಳು ಸಲ್ಲಿಕೆಯಾದವು. ಏಪ್ರಿಲ್ ೧೨ ರಿಂದ ಇಲ್ಲಿಯವರೆಗೆ ಒಂಬತ್ತು ಅಭ್ಯರ್ಥಿಗಳಿಂದ ಒಟ್ಟಾರೆಯಾಗಿ ಹದಿನೆಂಟುನಾಮಪತ್ರಗಳು ಸಲ್ಲಿಕೆಯಾಗಿರುತ್ತವೆ.
ವಿಜಯಪುರ: ದೇಶಕ್ಕೆ ಮೋದಿಯವರು ಬಿಟ್ಟರೆ ಪರ್ಯಾಯ ಇಲ್ಲ ಎಂಬುವುದು ಜನರಿಗೆ ತಿಳಿದಿದ್ದು, ಪ್ರತಿಯೊಬ್ಬರ ತಲೆಯಲ್ಲಿ ಮೋದಿ ಮತ್ತು ಬಿಜೆಪಿ ಪಕ್ಷ ಇದೆ. ಮತದಾನ ಪ್ರಮಾಣ ಹೆಚ್ಚಿಸುವ ನಿಟ್ಟಿನಲ್ಲಿ ನಾವು ಕೆಲಸ ಮಾಡಬೇಕು ಎಂದು ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಸಲಹೆ ನೀಡಿದರು.ನಗರದ ಹೇಮರಡ್ಡಿ ಮಲ್ಲಮ್ಮ ಮಂಗಲ ಕಾರ್ಯಾಲಯದಲ್ಲಿ ಮಂಗಳವಾರ ಸಂಜೆ ಬಿಜೆಪಿ ನಗರ ಮಂಡಲ ವತಿಯಿಂದ ನಡೆದ ಅಟಲ್ ಬಿಹಾರಿ ವಾಜಪೇಯಿ ಶಕ್ತಿ ಕೇಂದ್ರದ ಸಭೆಯಲ್ಲಿ ಮಾತನಾಡಿದ ಅವರು, ಮೊದಲು ತಲೆಯಿಂದ ಜಾತಿ ಕಿತ್ತೊಗೆಯಿರಿ. ಮೋದಿಯವರು ಬಂದರೆ ಸನಾತನ ಧರ್ಮ ಉಳಿಯುತ್ತದೆ. ನಮ್ಮ ಜಾತಿಗಳು ಇರುತ್ತದೆ. ಎಲ್ಲ ಸಮುದಾಯದವರು ನೆಮ್ಮದಿ ಜೀವನ ಮಾಡಲು ಸಾಧ್ಯ ಎಂದರು.ನಗರದಲ್ಲಿ ಒಳ್ಳೆಯ ಮಹಾನಗರ ಪಾಲಿಕೆ ಸದಸ್ಯರಿದ್ದಾರೆ. ಪ್ರಾಮಾಣಿಕತೆವುಳ್ಳ ಪದಾಧಿಕಾರಿಗಳ ಒಳ್ಳೆಯ ತಂಡವಿದೆ. ವಾರ್ಡಗಳಲ್ಲಿ ಮನೆ ಮನೆಗೆ ಭೇಟಿ ನೀಡಿ, ನಮ್ಮ ಸರ್ಕಾರದ ಸಾಧನೆ ತಿಳಿಸಿ, ದೇಶದ ಹಿತದೃಷ್ಟಿಯಿಂದ ತಪ್ಪದೆ ಬಿಜೆಪಿಗೆ ಮತದಾನ ಮಾಡಲು ತಿಳಿಸಬೇಕು. ಎಲ್ಲರೂ ಸೇರಿ ಮತದಾನ ಪ್ರಮಾಣ ಹೆಚ್ಚಳ ಮಾಡಿದರೆ, ನಗರದಲ್ಲಿ…
ಜಯಶ್ರೀ.ಜೆ.ಅಬ್ಬಿಗೇರಿಇಂಗ್ಲೀಷ್ ಉಪನ್ಯಾಸಕರು, ಬೆಳಗಾವಿ. ಮೊ:೯೪೪೯೨೩೪೧೪೨ ‘ಪಕ್ಕದ ಮನೆ ಪದ್ಮ ಕೋಗಿಲೆ ತರ ಹಾಡುತ್ತಾಳೆ. ನೀನೂ ಇದ್ದಿಯಾ. ನಿನ್ನ ಗೆಳೆಯ ರವಿ ನೋಡು ಭಾಷಣ ಸ್ಪರ್ಧೆಯಲ್ಲಿ ರಾಜ್ಯ ಮಟ್ಟದವರೆಗೂ ಬಹುಮಾನ ಪಡೆದಿದ್ದಾನೆ. ಹಾಡು ಭಾಷಣ ಇರದಿದ್ದರೆ ಅಷ್ಟೇ ಹೋಯ್ತು ರಜನಿ ತರಹ ಕ್ಲಾಸಿಗೆ ರ್ಯಾಂಕ್ ಬರೋಕೆ ಆಗಲ್ಲ ಯಾವಾಗ ನೋಡಿದರೂ ಮನೆ ಮುಂದೆ, ಮೈದಾನದಲ್ಲಿ ಕ್ರಿಕೆಟ್ ಬ್ಯಾಟ್ ಹಿಡಿದು ಆಡ್ತಿಯಾ ನಾಯಿ ಬಾಲ ಯಾವಾಗಲೂ ಡೊಂಕು ಅದನ್ನು ನೇರ ಮಾಡಲು ಸಾಧ್ಯವಿಲ್ಲ. ನಾ ಹೇಳಿದಾಗ ಮಾತ್ರ ಅಭ್ಯಾಸ ಮಾಡುತ್ತಿಯಾ.’ ಇದು ರಾಜುವಿನ ಅಪ್ಪ ಅವ್ವನ ಮಾತುಗಳು. ರಾಜುನಿಗೂ ಹೆತ್ತವರ ಮಾತುಗಳನ್ನು ಕೇಳಿ ಕೇಳಿ ರೋಸಿ ಹೋಗುತ್ತದೆ. ನಾನು ಆಟದಲ್ಲಿ ಮುಂದಿರೋದು ಇವರಿಗೆ ಕಾಣುವುದೇ ಇಲ್ಲ ಎಂದು ಗೊಣಗಿಕೊಳ್ಳುತ್ತಾನೆ. ಮನಸ್ಥಿತಿ ಸರಿ ಇರದಿದ್ದಾಗ ಹೌದಲ್ಲ ನನಗೆ ಚೆನ್ನಾಗಿ ಹಾಡೋಕೆ ಬರಲ್ಲ. ಭಾಷಣ ಮಾಡೋಕೆ ಬರಲ್ಲ. ಅಂಕ ಜಾಸ್ತಿ ಗಳಿಸಲು ಆಗಿಲ್ಲ. ನಾನು ಕೆಲಸಕ್ಕೆ ಬಾರದವನು ಎಂದೆನಿಸುತ್ತದೆ. ಇದು ಕೇವಲ ರಾಜುವಿನ ಆತಂಕದ ಸ್ಥಿತಿಯಲ್ಲ. ನಮ್ಮಲ್ಲಿ…
ಕೇವಲ ಟಿಎ, ಡಿಎ ಗೆ ಸೀಮಿತವಾಗಿರುವ ಜಿಗಜಿಣಗಿ ವಿಜಯಪುರ: ಕೇವಲ ಟಿಎ, ಡಿಎ ಗಾಗಿ ಸೀಮಿತವಾಗಿರುವ ಸಂಸದ ರಮೇಶ ಜಿಗಜಿಣಗಿ ಬದಲು ಸಂಸತ್ತಿನಲ್ಲಿ ಬಸವ ನಾಡಿನ ಜನರ ಪರ ಧ್ವನಿ ಎತ್ತಲು ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ಅವರನ್ನು ಗೆಲ್ಲಿಸಬೇಕಿದೆ ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ.ಬುಧವಾರ ತಿಕೋಟಾ ತಾಲೂಕಿನ ಮುಮ್ಮೆಟಿಗುಡ್ಡದ ಬಳಿ ಅರ್ಜುನ ರಾಠೊಡ ಅವರ ತೋಟದಲ್ಲಿ ನಡೆದ ಅರಕೇರಿ ಜಿ. ಪಂ. ವ್ಯಾಪ್ತಿಯ ಕಾಂಗ್ರೆಸ್ ಚುನಾವಣೆ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು.ಸಂಸತ್ತಿನಲ್ಲಿ ಎಂದೂ ಜನರ ಸಮಸ್ಯೆಗಳ ಪರ ಪ್ರಶ್ನೆ ಕೇಳದವರು ಕೇವಲ ಟಿಎ, ಡಿಎ ಪಡೆಯಲು ಎಂಪಿ ಆಗಬೇಕಾ? ಅಥವಾ ಜಿಲ್ಲೆಯ ಜನರ ಸಮಸ್ಯೆಗಳಿಗೆ ಸ್ಪಂದಿಸುವವರಿಗೆ ಮತ ಹಾಕಬೇಕಾ ಎಂಬುದರ ಕುರಿತು ಯೋಚಿಸಬೇಕು. ಪ್ರೊ. ರಾಜು ಆಲಗೂರ ಅವರು ಆಯ್ಕೆಯಾದ ಬಳಿಕ ಜಿಲ್ಲೆಯ ನೀರಾವರಿ, ರೈಲು, ತೋಟಗಾರಿಕೆ, ಪ್ರವಾಸೋದ್ಯಮ, ಪ್ರಾಚೀನ ಸ್ಮಾರಕಗಳನ್ನು ವಿಶ್ವ ಪರಂಪರೆ ಪಟ್ಟಿಗೆ ಸೇರಿಸುವ…
ವಿಜಯಪುರ: ಪ್ರಾಮಾಣಿಕ ಸಮಾಜ ಸೇವೆಯಿಂದ ಸದೃಢ ಸಮಾಜ ನಿರ್ಮಾಣಕ್ಕೆ ಯುವಕರು ಪಣ ತೊಡಬೇಕು. ಸಾಮಾಜಿಕ ಅಸಮಾನತೆ ಹೋಗಲಾಡಿಸುವುದು ಎಲ್ಲರ ಮುಖ್ಯ ಗುರಿಯಾಗಿರಲಿ ಎಂದು ಜಿಲ್ಲಾ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಜಂಬುನಾಥ ಕಂಚ್ಯಾಣಿ ಹೇಳಿದರು.ಅವರು ನಗರದ ವೀರಶೈವ ಲಿಂಗಾಯತ ಸಭಾಭವನದಲ್ಲಿ ಭಾರತ ಯುವ ವೇದಿಕೆ ಚಾರಿಟೇಬಲ್ ಫೌಂಡೇಶನ್ ವತಿಯಿಂದ ಹಮ್ಮಿಕೊಂಡ ನಗರ ಘಟಕದ ಉದ್ಘಾಟನೆ ಹಾಗೂ ಡಾ.ಬಿ ಆರ್ ಅಂಬೇಡ್ಕರ್ ಅವರ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.ಯುವಕರು ತಮ್ಮ ಸಹವಾಸದ ಚಿಂತನೆಯನ್ನು ಬುದ್ಧಿವಂತಿಕೆಯಿಂದ ಆರಿಸಿಕೊಂಡು, ಅಂಬೇಡ್ಕರ್ ಅವರ ಚಿಂತನೆಗಳನ್ನು ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.ಶಿಕ್ಷಕ ಸಾಹಿತಿ ಸಂತೋಷ ಬಂಡೆ ಮಾತನಾಡಿ, ಯುವಕರ ಬದುಕು ತಪಸ್ವಿಯಂತಾಗಬೇಕು. ಅವರು ತಮ್ಮ ಬದುಕಿನಲ್ಲಿ ಸಹಕಾರ, ಸಹಬಾಳ್ವೆ, ಸಹೋದರತ್ವ, ಶಿಸ್ತು, ಸಮಯ ಪ್ರಜ್ಞೆ, ಆತ್ಮವಿಶ್ವಾಸ, ದೃಢ ನಂಬಿಕೆ, ಶ್ರದ್ಧಾ ಮನೋಭಾವ ಬೆಳೆಸಿಕೊಂಡಾಗ ಮಾತ್ರ ಆದರ್ಶ ನಾಗರಿಕರಾಗಿ ಬೆಳೆಯಲು ಸಾಧ್ಯವಾಗುತ್ತದೆ ಎಂದು ಹೇಳಿದರು.ಅಧ್ಯಕ್ಷತೆ ವಹಿಸಿದ್ದ ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷ ವ್ಹಿ ಸಿ ನಾಗಠಾಣ ಮಾತನಾಡಿ, ಯುವಕರು ದುಶ್ಚಟಗಳಿಂದ…
ವೀಣಾ ಹೇಮಂತ್ ಗೌಡ ಪಾಟೀಲ್ ಮುಂಡರಗಿ-ಗದಗ ದ್ವಾರಕೀಶ್ ಅವರ ಕುರಿತು ಈವರೆಗೂ ಬರೆಯುವ ಪ್ರಮೇಯ ಬಂದಿರಲಿಲ್ಲ. ಆದರೆ ಇದೀಗ ಮರಣ ಹೊಂದಿರುವ ಅವರಿಗೊಂದು ಗೌರವದ ಬೀಳ್ಕೊಡುಗೆ ನೀಡಲು ಬರೆಯಲೇಬೇಕು ನಾವು.ಕನ್ನಡ ಚಿತ್ರರಂಗದ ವಾಮನ, ಕುಳ್ಳ, ದ್ವಾರ್ಕಿ ಎಂದೇ ಹೆಸರಾದ ದ್ವಾರಕೀಶ್ ಸರಿಸುಮಾರು ಆರು ದಶಕಗಳ ಕಾಲ ಕನ್ನಡ ಚಿತ್ರರಂಗದಲ್ಲಿ ನಟರಾಗಿ, ನಿರ್ದೇಶಕರಾಗಿ, ನಿರ್ಮಾಪಕರಾಗಿ ಕಾರ್ಯನಿರ್ವಹಿಸಿದರು. ಮದರಾಸಿನಲ್ಲಿ ಮಾತ್ರ ಚಿತ್ರೀಕರಣ ಮಾಡುತ್ತಿದ್ದಂತಹ ದಿನಮಾನಗಳಲ್ಲಿಯೇ ಆಫ್ರಿಕಾದಲ್ಲಿ ಶೀಲಾ, ಸಿಂಗಪೂರ್ನಲ್ಲಿ ರಾಜಾಕುಳ್ಳ ಎಂಬಂತಹ ಚಲನಚಿತ್ರಗಳನ್ನು ದೂರದ ವಿದೇಶಗಳಲ್ಲಿ ಚಿತ್ರೀಕರಣ ಮಾಡಿದ ಮೊದಲ ನಿರ್ಮಾಪಕ ಎಂಬ ಹೆಗ್ಗಳಿಕೆ ಅವರದು.ಇಂದಿನ ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ 1942 ಆಗಸ್ಟ್ 19 ರಂದು ಬಂಗ್ಲೆ ಶಾಮರಾಯರ ಮಗನಾಗಿ ಜನಿಸಿದ ದ್ವಾರಕೀಶ್ ಅವರು ತಮ್ಮ ಶಿಕ್ಷಣವನ್ನು ಮೈಸೂರಿನ ಬನುಮಯ್ಯ ಶಾಲೆ, ಶಾರದಾ ವಿಲಾಸ್ ಶಾಲೆಗಳಲ್ಲಿ ಪೂರೈಸಿ ಡಿಪ್ಲೋಮಾ ಶಿಕ್ಷಣವನ್ನು ಸಿಪಿಸಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಪಡೆದರು. ವಿದ್ಯಾರ್ಥಿ ದೆಸೆಯಲ್ಲಿದ್ದಾಗಲೇ ಅಣ್ಣ ಹಾಕಿ ಕೊಟ್ಟ ಭಾರತ್ ಆಟೋ ಸ್ಪೇರ್ಸ್ ಎಂಬ ಅಂಗಡಿಯನ್ನು ಮುನ್ನಡೆಸಿದವರಿಗೆ ಸಿನಿಮಾದ ಗುಂಗು…
Udayarashmi kannada daily newspaper
ರವೀಂದ್ರ ಕಲಾಕ್ಷೇತ್ರದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ | ಇಂದು ಬೆಂಗಳೂರಿನಲ್ಲಿ ಅಂತ್ಯಕ್ರಿಯೆ ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಹಾಗೂ ನಿರ್ಮಾಪಕ ದ್ವಾರಕೀಶ್ ನಿಧನರಾಗಿದ್ದು, ಅಂತ್ಯಕ್ರಿಯೆ ಬುಧವಾರ ಬೆಳಿಗ್ಗೆ 11:30ಕ್ಕೆ ಚಾಮರಾಜಪೇಟೆಯ ಟಿಆರ್ ಮೀಲ್ನಲ್ಲಿ ನಡೆಯಲಿದೆ.ದ್ವಾರಕೀಶ ಅವರ ಪಾರ್ಥೀವ ಶರೀರವು ಬುಧವಾರ ಬೆಳಗಿನ ಜಾವದವರೆಗೂ ಅವರ ನಿವಾಸದಲ್ಲಿಯೇ ಇರಲಿದ್ದು, ಗಣ್ಯರ ಮತ್ತು ಕುಟುಂಬಸ್ಥರು ಅಂತಿಮ ದರ್ಶನ ಪಡೆದುಕೊಳ್ಳಲು ವ್ಯವಸ್ಥೆ ಮಾಡಲಾಗಿದೆ.ಬೆಳಿಗ್ಗೆ 7.30 ರ ನಂತರ ರವೀಂದ್ರ ಕಲಾಕ್ಷೇತ್ರದಲ್ಲಿ ಕಲಾವಿದರು ಹಾಗೂ ಸಾರ್ವಜನಿಕರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. 11 ಗಂಟೆವರೆಗೂ ಅಂತಿಮ ದರ್ಶನಕ್ಕೆ ಅವಕಾಶ ನೀಡಲಾಗಿದ್ದು, 11 ಗಂಟೆಯ ನಂತರ ಶವವನ್ನು ಚಾಮರಾಜಪೇಟೆಯ ಟಿಆರ್ಮೀಲ್ ಚಿತಾಗಾರಕ್ಕೆ ತರಲಾಗುತ್ತದೆ. ಇಲ್ಲಿ ಅಂತ್ಯಕ್ರಿಯೆ ನೆರವೇರಲಿದೆ.ದ್ವಾರಕೀಶ್ ಅವರ ನಿಧನದ ಕುರಿತು ಈ ಹಿಂದೆ ವದಂತಿಗಳು ಹಬ್ಬಿದ್ದವು. ಈ ಬಾರಿಯೂ ಸಾವಿನ ಸುದ್ದಿ ಫೇಕ್ ಇರಬಹುದು ಎಂದು ಎಲ್ಲರೂ ಭಾವಿಸಿದ್ದರು. ಆದರೆ, ಕುಟುಂಬಸ್ಥರೇ ಸಾವಿನ ಕುರಿತು ಸ್ಪಷ್ಟನೆ ನೀಡಿದ್ದಾರೆ.” ರಾತ್ರಿ ಲೂಸ್ ಮೋಷನ್ ಆಗಿತ್ತು. ರಾತ್ರಿಯಿಡೀ ನಿದ್ರೆ…
