Author: editor.udayarashmi@gmail.com

ದೇವರಹಿಪ್ಪರಗಿ: ಪಟ್ಟಣ ಸೇರಿದಂತೆ ಸ್ಥಳೀಯ ಜಮೀನುಗಳಿಗೆ ನೀಡಲಾಗುವ ವಿದ್ಯುತ್ ವ್ಯವಸ್ಥೆಯಲ್ಲಿ ನಿರಂತರ ನಿಲುಗಡೆಯಾಗುತ್ತಿದ್ದು, ಕೂಡಲೇ ಸಮರ್ಪಕವಾಗಿ ವಿದ್ಯುತ್ ಪೂರೈಸುವಂತೆ ಆಗ್ರಹಿಸಿ ರೈತರು, ಸಾರ್ವಜನಿಕರು ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು.ಮಂಗಳವಾರ ಹೆಸ್ಕಾಂ ಕಚೇರಿ ಆವರಣಕ್ಕೆ ಬಂದ ರೈತರು ಹಾಗೂ ಸಾರ್ವಜನಿಕರು ವಿದ್ಯುತ್ ಪೂರೈಕೆಯ ಕುರಿತು ಅಸಮಾಧಾನ ವ್ಯಕ್ತಪಡಿಸಿ ಶಾಖಾಧಿಕಾರಿ ಯು.ಎಲ್.ಪಟ್ಟಣ, ಗ್ರಾಮೀಣ ಶಾಖಾಧಿಕಾರಿ ಅಶೋಕ ಕಂದಗಲ್ ಹಾಗೂ ಸಿಬ್ಬಂದಿ ಶಿವಾನಂದ ಕೊಡಗೆ ಅವರ ಜೊತೆ ವಾಗ್ವಾದಕ್ಕಿಳಿದರು. ಈ ಸಂದರ್ಭದಲ್ಲಿ ಸಿಬ್ಬಂದಿ ಕೆಲವು ತಾಂತ್ರಿಕ ಕಾರಣಗಳಿಂದಾಗಿ ಪೂರೈಕೆಯಲ್ಲಿ ವ್ಯತ್ಯಯವಾಗಿದೆ. ಒಂದು ವಾರದಲ್ಲಿ ಯಥಾ ಪ್ರಕಾರ ವಿದ್ಯುತ್ ಪೂರೈಸಲಾಗುವುದು ಎಂದು ಸಮಜಾಯಿಷಿ ನೀಡಿದರೂ ಕೇಳದ ಸಾರ್ವನಿಕರು ಎಇಇ ಅವರು ಬಂದು ಉತ್ತರಿಸಿವಂತೆ ಪಟ್ಟು ಹಿಡಿದರು. ಕೊನೆಗೆ ಸಭೆಯಲ್ಲಿ ನಿರತವಾಗಿದ್ದ ಎಇಇ ಗಂಗಾಧರ ಲೋಣಿ ಮೋಬೈಲ್ ಮೂಲಕ ಮಾತನಾಡಿ ವಿದ್ಯುತ್ ಸಮಸ್ಯೆ ಬಗೆಹರಿಸುವ ಭರವಸೆ ನೀಡಿದಾಗ, ಪ್ರತಿಭಟನಾಕಾರರು ಬರುವ ಮಂಗಳವಾರದ ಒಳಗಾಗಿ ವಿದ್ಯುತ್ ಸಮರ್ಪಕವಾಗಿ ಪೂರೈಸಬೇಕು ಇಲ್ಲವಾದಲ್ಲಿ ಮತ್ತೇ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿ…

Read More

ದೇವರ ಹಿಪ್ಪರಗಿ: ಮಡಿವಾಳ ಮಾಚಿದೇವರ ರಥೋತ್ಸವ ಹಾಗೂ ಪಲ್ಲಕ್ಕಿ ಮಹೋತ್ಸವ ಸಾವಿರಾರು ಭಕ್ತವೃಂದದೊಂದಿಗೆ ವಿಜೃಂಭಣೆಯಿಂದ ಜರುಗಿತು.ಪಟ್ಟಣದಲ್ಲಿ ಮಾಚಿದೇವರ ರಥೋತ್ಸವದ ಅಂಗವಾಗಿ ಸೋಮವಾರ ಗದ್ದುಗೆಮಠದಲ್ಲಿ ಸಾಂಪ್ರದಾಯಿಕವಾಗಿ ನಡೆದು ಬಂದ ಪೂಜಾ ವಿಧಿವಿಧಾನಗಳು ಬೆಳಿಗ್ಗೆ ಹೋಮ ಹವನದೊಂದಿಗೆ ಆರಂಭಗೊಂಡವು. ನಂತರ ಆರಾ ಎಂದೇ ಕರೆಯಲಾಗುವ ಪ್ರಕೃತಿಗೆ ಆಹಾರ ನೀಡುವುದು ಜರುಗಿತು. ಆನಂತರ ಮಾಚಿದೇವರನ್ನು ಹೊತ್ತ ಪಲ್ಲಕ್ಕಿ ಗದ್ದುಗೆಮಠದಿಂದ ಹೊರಟು ಮೇನ್ ಬಜಾರಿನಲ್ಲಿರುವ ತೇರಿನವರೆಗೆ ಸಾಗಿ ೫ ಸುತ್ತು ಪ್ರದಕ್ಷಿಣೆ ಹಾಕಿ ನೈವೇದ್ಯ (ಬಡ್ಯಾಣ) ಅರ್ಪಿಸಲಾಯಿತು. ತದನಂತರ ಬೆಳಿಗ್ಗೆಯಿಂದಲೇ ಹೂವಿನ ಹಾರ, ತಳಿರು ತೋರಣಗಳಿಂದ ಶೃಂಗಾರಗೊಂಡ ರಥ (ತೇರ) ಕ್ಕೆ ನೆರೆದ ಸಾವಿರಾರು ಜನ ಭಕ್ತರ ಜಯಕಾರ, ಉದ್ಘೋಶಗಳ ಮೂಲಕ ಕಳಸಾರೋಹಣ ನೆರವೇರಿಸಿ ಚಾಲನೆ ನೀಡಲಾಯಿತು. ರಥೋತ್ಸವಕ್ಕೆ ಈ ಬಾರಿ ಯಾವುದೇ ಅಡ್ಡಿ ಆತಂಕಗಳಿಲ್ಲದ ಕಾರಣ ಯುವಭಕ್ತ ಸಮೂಹ ಉತ್ಸಾಹದಿಂದ ರಥವನ್ನು ಸರಾಗವಾಗಿ ಮಾನೆದೊಡ್ಡಿ ಹತ್ತಿರದವರೆಗೆ ಎಳೆದು ತಮ್ಮ ಭಕ್ತಿ, ಭಾವ ತೋರಿದರು.ಈ ಸಮಯದಲ್ಲಿ ಮಹಿಳೆಯರು, ಮಕ್ಕಳು, ಯುವಕರು ತಾವು ತಂದ ಉತ್ತತ್ತಿ, ಬಾಳೆಹಣ್ಣುಗಳನ್ನು ರಥೋತ್ಸವ…

Read More

ವಿಜಯಪುರ: ವಿಜಯಪುರ ಮಹಾನಗರ ಪಾಲಿಕೆಯ ಕಚೇರಿಯ ಮೇಲೆ ಲೋಕಸಭಾ ಚುನಾವಣೆ ೨೦೨೪ರ ಮತದಾನ ಜಾಗೃತಿ ಕುರಿತು ೧೦ ಅಡಿ ಉದ್ದ ೧೦ ಅಡಿ ಅಗಲದ ಬಲೂನ್‌ನ್ನು ಸ್ಥಾಪಿಸಲಾಯಿತು.ಈ ಸಂದರ್ಭ ಸಹಾಯಕ ಚುನಾವಣಾ ಅಧಿಕಾರಿಗಳು ವಿಜಯಪುರ ನಗರ ಲೋಕಸಭಾ ಮತಕ್ಷೇತ್ರ ಹಾಗೂ ಮಹಾನಗರ ಪಾಲಿಕೆ ಆಯುಕ್ತರು ಅಶಾದ ಉರ್ ರೆಹಮಾನ್ ಶರೀಫ್, ಮಹಾನಗರ ಪಾಲಿಕೆಯ ಉಪ ಆಯುಕ್ತ ಮಹಾವೀರ ಬೋರಣ್ಣವರ, ಸಹಾಯಕ ನಗರ ಯೋಜನಾಧಿಕಾರಿ ಲಕ್ಷ್ಮಣ್ ಮೊರೆ, ವಲಯ ೩ ಕಂದಾಯ ಅಧಿಕಾರಿ ರವಿ ಶರಶಾಡ ಪರಿಷತ್ ಕಾರ್ಯದರ್ಶಿ ರವಿ ರಂಗಸುಬೆ ಸೇರಿದಂತೆ ಇತರರು ಉಪಸ್ಥಿತರಿದ್ದರು.

Read More

ವಿಜಯಪುರ: ಮತದಾನದ ದಿನದಂದು ಕಡ್ಡಾಯವಾಗಿ ಮತಗಟ್ಟೆಗಳಿಗೆ ತೆರಳಿ ಎಲ್ಲರೂ ಮತದಾನ ಮಾಡಬೇಕು. ಮತದಾನ ದಿನದಂದು ಮತಗಟ್ಟೆಗಳಲ್ಲಿ ನೆರಳಿನ ವ್ಯವಸ್ಥೆ, ಕುಡಿಯುವ ನೀರು, ವಿಶೇಷಚೇತನರಿಗೆ ರ‍್ಯಾಂಪ್ ವ್ಯವಸ್ಥೆ, ಮತ್ತು ಇತರೆ ವ್ಯವಸ್ಥೆಗಳನ್ನು ಮಾಡಲಾಗಿರುತ್ತದೆ. ಮತದಾನ ಮಾಡಿ ಚುನಾವಣೆ ಪ್ರಕ್ರಿಯೆಯನ್ನು ಯಶಸ್ವಿಗೊಳಿಸಬೇಕು ಎಂದು ಜಿಲ್ಲಾ ಸ್ವೀಪ್ ಸಮಿತಿಯ ನೊಡೆಲ್ ಅಧಿಕಾರಿ ಸಿ.ಆರ್. ಮುಂಡರಗಿ ಹೇಳಿದರು.ಮಂಗಳವಾರ ಜಿಲ್ಲಾ ಸ್ವೀಪ್ ಸಮಿತಿ ಹಾಗೂ ಲೀಡ್ ಬ್ಯಾಂಕ್ ವ್ಯವಸ್ಥಾಪಕರು ಇವರ ಸಹಯೋಗದಲ್ಲಿ ಜಿಲ್ಲಾ ವಿಜಯಪುರ ನಗರದ ವಿವಿಧ ಬ್ಯಾಂಕ್‌ಗಳಿಗೆ ಹಾಗೂ ಅಂಚೆ ಕಛೇರಿಗಳಿಗೆ ತೆರಳಿ ಬ್ಯಾಂಕ್ ಅಧಿಕಾರಿಗಳು, ಸಿಬ್ಬಂದಿಯವರು ಹಾಗೂ ಗ್ರಾಹಕರಿಗೆ ಹಮ್ಮಿಕೊಂಡ ಮತದಾರರ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಲೀಡ್ ಬ್ಯಾಂಕ್‌ನ ವ್ಯವಸ್ಥಾಪಕ ನರೇಂದ್ರಬಾಬು ಮಾತನಾಡಿ, ಮತದಾನ ಮಾಡುವುದು ನಮ್ಮ ಹಕ್ಕು, ಅಷ್ಟೇ ಅಲ್ಲದೇ ನಮ್ಮ ಜವಾಬ್ದಾರಿಯೂ ಸಹ. ತಾವೆಲ್ಲರೂ ಮತದಾನ ಮಾಡಿದರೆ ಮಾತ್ರ ನಮ್ಮ ದೇಶ ಅಭಿವೃದ್ಧಿಯಾಗಲು ಸಾಧ್ಯ. ನಿಮ್ಮ ಒಂದು ಮತ ದೇಶಕ್ಕೆ ಅತೀ ಮುಖ್ಯ. ಆದ್ದರಿಂದ ಎಲ್ಲರೂ ಕಡ್ಡಾಯವಾಗಿ ಮತದಾನ ಮಾಡಿ ಎಂದರು.ಸ್ಟೇಟ್ ಬ್ಯಾಂಕ್‌ನ…

Read More

ವಿಜಯಪುರದಲ್ಲಿ ಮತದಾನ ಜಾಗೃತಿ ಮೂಡಿಸಲು ಕ್ಯಾಂಡಲ್ ಮಾರ್ಚ್ ಜಾಥಾ ವಿಜಯಪುರ: ಮತದಾನ ಮಾಡಿ ದೇಶದ ಏಳಿಗೆಗೆ ಸಹಕರಿಸಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆದ ಜಿಲ್ಲಾಧಿಕಾರಿಗಳಾದ ಟಿ.ಭೂಬಾಲನ್ ಹೇಳಿದರು.ಅವರು ಜಿಲ್ಲಾಡಳಿತ, ಜಿಲ್ಲಾ ಸ್ವೀಪ್ ಸಮಿತಿ ವಿಜಯಪುರ, ಮಹಾನಗರ ಪಾಲಿಕೆ ವಿಜಯಪುರ ಹಾಗೂ ಇವರ ಸಹಯೋಗದಲ್ಲಿ ಲೋಕಸಭಾ ಚುನಾವಣೆ ೨೦೨೪ರ ಹಿನ್ನೆಲೆಯಲ್ಲಿ ಮತದಾನ ಜಾಗೃತಿ ಮೂಡಿಸಲು ಹಮ್ಮಿಕೊಂಡ ಕ್ಯಾಂಡಲ್ ಮಾರ್ಚ್ ಜಾಥಾ ಕಾರ್ಯಕ್ರಮ ಚಾಲನೆ ನೀಡಿ ಮಾತನಾಡಿದರು.ಎಲ್ಲರೂ ತಪ್ಪದೇ ಮತದಾನ ಮಾಡುವುದರ ಜೊತೆಗೆ ನೆರೆಹೊರೆಯವರನ್ನು ಮತದಾನ ಮಾಡುವಂತೆ ಜಾಗೃತಿ ಮೂಡಿಸಬೇಕು. ಪ್ರಜ್ಞಾವಂತ ನಾಗರೀಕರಾಗಿ ದೇಶದ ಏಳಿಗೆಗ ಮತದಾನ ಮಾಡುವುದನ್ನು ಮರೆಯಬಾರದು ಎಂದು ಹೇಳಿದರು.ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷರು ಮತ್ತು ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಿಷಿ ಆನಂದ ಹಾಗೂ ಸಹಾಯಕ ಚುನಾವಣಾ ಅಧಿಕಾರಿಗಳು ವಿಜಯಪುರ ನಗರ ಲೋಕಸಭಾ ಮತಕ್ಷೇತ್ರ ಹಾಗೂ ಮಹಾನಗರ ಪಾಲಿಕೆ ಆಯುಕ್ತ ಅಶಾದ ಉರ್ ರೆಹಮಾನ್ ಶರೀಫ್ ಮಾತನಾಡಿದರು.ನಗರದ ಶ್ರೀ ಸಿದ್ದೇಶ್ವರ ದೇವಸ್ಥಾನದಿಂದ ನಗರದ ಹೃದಯ ಭಾಗವಾಗಿರುವ ಗಾಂಧಿ ವೃತ್ತದವರೆಗೆ…

Read More

ವಿಜಯಪುರ: ಪ್ರತಿಬಾರಿ ಸಾರ್ವತ್ರಿಕ ಚುನಾವಣೆಗಳು ಬಂದಾಗ ಮತದಾನದ ಪ್ರಮಾಣವನ್ನು ಹೆಚ್ಚಿಸಲು , ಮತದಾನದ ಮಹತ್ವ ಕುರಿತು ಜಿಲ್ಲಾಡಳಿತಗಳು ಜಾಗೃತಿಯನ್ನು ಮೂಡಿಸುತ್ತವೆ. ಜಿಲ್ಲೆಯ ಆಲಮೇಲದ ಆಯುಷ್ ವೈದ್ಯ ಡಾ ಸಮೀರ ಹಾದಿಮನಿ ತಮ್ಮ ಆಸ್ಪತ್ರೆಗೆ ಬರುವ ರೋಗಿಗಳಿಗೆ ವಿಶಿಷ್ಟ ರೀತಿಯಲ್ಲಿ ಮತದಾನದ ಜಾಗ್ರತಿ ಮೂಡಿಸುತ್ತಿದ್ದಾರೆ.ಪ್ರಿಸ್ಕ್ರಿಪ್ಶನ್ ಚೀಟಿ, ಪ್ರಯೋಗಾಲಯದ ವರದಿಗಳ ಮೇಲೆ “ನಿಮ್ಮ ಮತ ಅಮೂಲ್ಯ, ತಪ್ಪದೇ ಮತದಾನ ಮಾಡಿ” ಎಂಬ ವಾಕ್ಯವನ್ನು ವಿವಿಧ ಆಕಾರದ ಸೀಲ್ ಗಳ ಮೂಲಕ ಮುದ್ರಿಸಿ ರೋಗಿಗಳಲ್ಲಿ ಜಾಗೃತಿ ಮೂಡಿಸುತ್ತಿದ್ದಾರೆ. ಅಲ್ಲದೆ ವ್ಯಂಗ್ಯಚಿತ್ರಗಳ ಮೂಲಕ ಸಾಮಾಜಿಕ ಜಾಲತಾಣಗಳಲ್ಲಿ ಮತದಾನದ ಮಹತ್ವ ಸಾರುತ್ತಿದ್ದಾರೆ.

Read More

ಮಿಣಜಗಿ (ಮುದ್ದೇಬಿಹಾಳ):ಮೋದಿ ಸರಕಾರದ ಸುಳ್ಳು ಭರವಸೆ, ಭಾವನೆ ಕೆರಳಿಸುವ ವಿಚಾರ ಬೇಕೋ ಕಾಂಗ್ರೆಸ್ ಪಕ್ಷದ ಕಳಕಳಿ ಯೋಜನೆಗಳು ಬೇಕೊ ನೀವೇ ನಿರ್ಧರಿಸಿ ಎಂದು ಶಾಸಕ ಹಾಗೂ ಸಾಬೂನು-ಮಾರ್ಜಕ ನಿಗಮದ ಆಧ್ಯಕ್ಷರಾದ ಸಿ.ಎಸ್.ನಾಡಗೌಡ ಅಪ್ಪಾಜಿ ಹೇಳಿದರು.ಮುದ್ದೇಬಿಹಾಳ ಕ್ಷೇತ್ರದ ಮಿಣಜಗಿಯಲ್ಲಿ ಮಂಗಳವಾರ ನಡೆದ ಜಿಪಂ ವ್ಯಾಪ್ತಿಯ ಸಭೆಯಲ್ಲಿ ಮಾತನಾಡಿ, ರಾಜ್ಯ ಸರಕಾರ ನುಡಿದಂತೆ ನಡೆದುಕೊಂಡು ಹೆಣ್ಣುಮಕ್ಕಳ, ಯುವಕರ ಮನಸ್ಸು ಗೆದ್ದಿದೆ. ಕೆಲವೇ ತಿಂಗಳಲ್ಲಿ ಹೇಳಿದ್ದ ಗ್ಯಾರಂಟಿ ಭರವಸೆಗಳನ್ನು ಈಡೇರಿಸಿದೆ. ಮೋದಿಯವರು ನೀಡಿದ್ದ ಯಾವೊಂದು ಮಾತನ್ನೂ ಉಳಿಸಿಕೊಂಡಿಲ್ಲ. ಬದಲಾಗಿ ದೇಶಕ್ಕೆ ಆರ್ಥಿಕ ಸಂಕಷ್ಟ ತಂದೊಡ್ಡಿದ್ದಾರೆ ಎಂದು ಹೇಳಿದರು.ವಿದ್ಯಾವಂತ, ಪ್ರಬುದ್ಧ ಅಭ್ಯರ್ಥಿ ರಾಜು ಆಲಗೂರರಿಗೆ ಮತ ನೀಡಿದರೆ ಅದು ವ್ಯರ್ಥವಾಗುವುದಿಲ್ಲ. ದಶಕಗಳ ಮೇಲಾಯ್ತು ಲೋಕಸಭೆಯಲ್ಲಿ ಕಾಂಗ್ರೆಸ್ ಗೆದ್ದಿಲ್ಲ. ಕಾರಣ ಏನೇ ಇರಲಿ, ಇದೀಗ ನಮ್ಮ ಲೋಕಸಭೆ ಸದಸ್ಯ ಹೇಗಿರಬೇಕು ನೀವು ನಿರ್ಧರಿಸಬೇಕು. ನೀವು ನೀಡಿದ ಮತ ಸಮಾನತೆ, ಸಾಮರಸ್ಯ, ಸುಭದ್ರತೆ ಹಾಗೂ ಅಭಿವೃದ್ಧಿಗೆ ಎಂದು ಹೇಳಿದರು.ಕೃಷ್ಣಾ ನದಿ ನೀರಿನ ಹಂಚಿಕೆ ಬಗೆಹಸಿಸಲಿಲ್ಲ. ಯಾವೊಂದು ಜ್ವಲಂತ ಸಮಸ್ಯೆಗಳನ್ನು ಬಿಜೆಪಿಯವರು…

Read More

-ಸಂತೋಷ ಎಸ್ ಬಂಡೆ ಶಿಕ್ಷಕರು, ನಾಗಠಾಣ ಸಿಂಗಾಪುರದಲ್ಲಿ ರಾಜಾಕುಳ್ಳ, ಮನೆ ಮನೆ ಕಥೆ, ಆಫ್ರಿಕಾದಲ್ಲಿ ಶೀಲಾ, ಆಪ್ತಮಿತ್ರ, ಭಲೇ ಹುಡುಗ, ಬಂಗಾರದ ಮನುಷ್ಯ, ಗಲಾಟೆ ಸಂಸಾರ,ಪ್ರಚಂಡಕುಳ್ಳ, ಆಪ್ತಮಿತ್ರ, ಗುರುಶಿಷ್ಯರು, ಕಳ್ಳ ಕುಳ್ಳ, ಮುದ್ದಿನ ಮಾವ, ರಾಯರು ಬಂದರು ಮಾವನ ಮನೆಗೆ, ಆಟಗಾರ, ಚೌಕ, ಪ್ರೀತಿ ಮಾಡು ತಮಾಷೆ ನೋಡು ಮುಂತಾದ ಚಿತ್ರಗಳಲ್ಲಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿ, ಕನ್ನಡ ಪ್ರೇಕ್ಷಕರ ಮನಸ್ಸನ್ನು ಗೆದ್ದಿದ್ದಾರೆ. ಅದರಲ್ಲಿಯೂ ಗುರು ಶಿಷ್ಯರು ಚಿತ್ರದಲ್ಲಿ ಇವರ ಅಭಿನಯ ಇಂದಿಗೂ ಕನ್ನಡ ಚಿತ್ರ ರಸಿಕರ ಮನಸ್ಸಿನಲ್ಲಿದ್ದು, ಚಿತ್ರದ ಕೆಲವು ದೃಶ್ಯಗಳನ್ನು ನೆನಪಿಸಿಕೊಂಡು ಬಿದ್ದು ಬಿದ್ದು ನಗುವವರಿದ್ದಾರೆ. ಏಪ್ರಿಲ್ 26, 1967 ರಂದು ದ್ವಾರಕೀಶ ತಮ್ಮ ಸಂಬಂಧಿಯೇ ಆದ ಅಂಬುಜಾ ಅವರನ್ನು ಮದುವೆಯಾಗಿ ನಾಲ್ಕು ಗಂಡು ಮಕ್ಕಳಿಗೆ ತಂದೆಯಾದರು. ಮೊದಲನೇ ಮಗ ತಂದೆಯೊಂದಿಗೆ ಚಿತ್ರ ನಿರ್ಮಾಣದಲ್ಲಿ ತೊಡಗಿದ್ದರೆ, ಉಳಿದವರು ಒಂದೆರಡು ಚಿತ್ರಗಳಲ್ಲಿ ತಮ್ಮ ಅದೃಷ್ಟವನ್ನು ಪರೀಕ್ಷಿಸಿ ಈಗ ಬೇರೆ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಕೆಲ ವರ್ಷಗಳ ಹಿಂದೆ ಶೈಲಜಾ ಎಂಬುವರನ್ನೂ ಕೂಡ ಎರಡನೇ ಮದುವೆ ಮಾಡಿಕೊಂಡಿದ್ದರು.ನಟ ದ್ವಾರಕೀಶ ಅವರು ಕನ್ನಡ ಚಿತ್ರರಂಗದಲ್ಲಿ ಬಹುದೊಡ್ಡ ಹೆಸರು ಮಾಡಿದ್ದಾರೆ. ಹಲವಾರು ವರ್ಷಗಳಿಂದ ಕನ್ನಡ ಚಿತ್ರರಂಗದಲ್ಲಿ…

Read More

-ಮಂಡ್ಯ ಮ.ನಾ.ಉಡುಪ ಮಹಾವಿಷ್ಣುವಿನ ಏಳನೆಯ ಅವತಾರವಾದ ಶ್ರೀರಾಮನು ಜನಿಸಿದ ನವಮಿ ದಿನ ಶ್ರೀ ರಾಮ ನವಮಿ ಹಬ್ಬ ಆಚರಿಸಲಾಗುತ್ತದೆ. . ಹಿಂದೂ ಧರ್ಮದಲ್ಲಿ ಶ್ರೀ ರಾಮ ನವಮಿ ಎಂದರೆ ಹಬ್ಬದ ಸಂಭ್ರಮ ಚೈತ್ರ ಮಾಸದ ಒಂಭತ್ತನೇ ದಿನ, ಅಂದರೆ ವರ್ಷದ ಮೊದಲ ತಿಂಗಳಿನಲ್ಲಿ ಬರುವ ಹಬ್ಬ . ಧರ್ಮ ಶಾಸ್ತ್ರಗಳ ಪ್ರಕಾರ ಅಯೋಧ್ಯೆಯ ರಾಜನಾದ ದಶರಥನಿಗೆ ಕೌಸಲ್ಯಾ, ಕೈಕೇಯೀ ಹಾಗೂ ಸುಮಿತ್ರೆ ಎಂಬ ಮೂರು ಜನ ಪತ್ನಿಯರಿದ್ದರು. ಆದರೆ ಯಾರಿಗೂ ಪುತ್ರ ಸಂತಾನವಾಗಿರಲಿಲ್ಲ. ನಂತರ ದಶರಥನು ಋಷಿಮುನಿಗಳ ಸಲಹೆಯಂತೆ ಪುತ್ರಕಾಮೇಷ್ಠಿ ಯಾಗವನ್ನು ಮಾಡಿಸಿದ. ಈ ಯಜ್ಞದಿಂದ ಸಂತುಷ್ಟನಾದ ಪ್ರಜಾಪತಿಯು ದಶರಥನಿಗೆ ದಿವ್ಯಪಾಯಸವನ್ನು ನೀಡುತ್ತಾನೆ. ಈ ದಿವ್ಯ ಪಾಯಸವನ್ನು ದಶರಥನು ತನ್ನ ಮೂವರು ಪತ್ನಿಯರಿಗೂ ಹಂಚುತ್ತಾನೆ. ಇದರಂತೆ ಚೈತ್ರ ಮಾಸದ ಶುಕ್ಲಪಕ್ಷದ ನವಮಿ ತಿಥಿಯಂದು ಮಧ್ಯಾಹ್ನ ಪುನರ್ವಸು ನಕ್ಷತ್ರದಲ್ಲಿ ಕೌಸಲ್ಯೆಗೆ ರಾಮನೂ, ಪುಷ್ಯನಕ್ಷತ್ರದ ದಶಮಿಯಂದು ಸೂರ್ಯೋದಯಕ್ಕೆ ಮುನ್ನ ಕೈಕೇಯಿಗೆ ಭರತನೂ, ಅದೇ ದಿನ ಆಶ್ಲೇಷಾ ನಕ್ಷತ್ರದಲ್ಲಿ ಮಧ್ಯಾಹ್ನ ಲಕ್ಷ್ಮಣ, ಶತ್ರುಘ್ನರೂ ಜನಿಸುತ್ತಾರೆ. ಹೀಗೆ…

Read More

-ವೀಣಾ ಹೇಮಂತ್ ಗೌಡ ಪಾಟೀಲ್, ಮುಂಡರಗಿ-ಗದಗ ಅದು ರಾಮ ರಾವಣರ ಯುದ್ಧ ಸನ್ನಿಹಿತವಾದ ಕಾಲ. ಸ್ವರ್ಣಲಂಕೆಯನ್ನು ತಲುಪಲು ಬೇಕಾದ ಸೇತುವೆಯ ನಿರ್ಮಾಣ ಕಾರ್ಯ ಭರದಿಂದ ಸಾಗಿತ್ತು. ಎಲ್ಲಾ ಕಪಿಗಳು ಸುತ್ತಮುತ್ತಲ ಗುಡ್ಡ ಬೆಟ್ಟಗಳಿಂದ ಸಣ್ಣ ಕಲ್ಲುಗಳನ್ನು ತಂದು ಸೇತುವೆಯ ನಿರ್ಮಾಣದಲ್ಲಿ ತೊಡಗಿದ್ದವು. ಎಲ್ಲರ ಪ್ರಯತ್ನದ ಫಲವಾಗಿ ಪುಟ್ಟ ಸೇತುವೆ ನಿರ್ಮಾಣವಾಯಿತು.ಆದರೆ ಪ್ರಭು ಶ್ರೀರಾಮನಿಗೆ ಸೇತುವೆ ಅಷ್ಟೊಂದು ಬಲಿಷ್ಠವಾಗಿಲ್ಲ ಎಂಬ ಭಾವನೆ. ಸೇತುವೆ ತುಂಬಾ ತೆಳುವಾಗಿ ನಿರ್ಮಾಣವಾಗಿದೆ ಎಲ್ಲ ಕಪಿಗಳ ಭಾರಕ್ಕೆ ಬಿದ್ದು ಹೋಗಬಹುದು ಎಂಬ ಭಯ, ಜೊತೆಗೆತನ್ನಿಂದ ಯಾರಿಗೂ ಹಾನಿಯಾಗಬಾರದು ಎಂಬ ಮುಂದಾಲೋಚನೆ ಕೂಡ. ಆದ್ದರಿಂದ ಎಲ್ಲರಿಗಿಂತ ಮುಂಚೆ ತಾನು ಸೇತುವೆಯ ಮೇಲೆ ನಡೆದು ಹೋಗುವ ಪ್ರಯತ್ನದ ಅಂಗವಾಗಿ ಆತ ಹೆಜ್ಜೆ ಇಟ್ಟನು. ಪ್ರಭು ಶ್ರೀ ರಾಮ ಸೇತುವೆಯ ಮೇಲೆ ಕಾಲಿಟ್ಟೊಡನೆ ಸಮುದ್ರದಲ್ಲಿದ್ದ ಎಲ್ಲಾ ಜಲಚರಗಳು ಬಂದು ಸೇತುವೆಯನ್ನು ಗಟ್ಟಿಯಾಗಿ ಒತ್ತಿ ಹಿಡಿದವು. ಎಲ್ಲ ಜಲಚರಗಳ ಪ್ರಯತ್ನದ ಫಲವಾಗಿ ಸೇತುವೆ ಅತ್ಯಂತ ಬಲಿಷ್ಠವಾಯಿತು. ಸೇತುವೆಯ ಮೇಲೆ ನಡೆದಾಡಿದ ಶ್ರೀರಾಮ ತೃಪ್ತನಾಗಿ ಹಿಂದಿರುಗಿ…

Read More