Author: editor.udayarashmi@gmail.com

ಸಿಂದಗಿ: ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಎಲ್ಲರೂ ಮತದಾನ ಮಾಡಬೇಕು ಎಂಬ ಕಾರಣಕ್ಕಾಗಿ ಚುನಾವಣಾ ಆಯೋಗ ವಿಭಿನ್ನವಾಗಿ ಜಾಗೃತಿ ಮೂಡಿಸುವ ಕಾರ್ಯ ನಡೆಸುತ್ತಿದೆ ಎಂದು ಸಹಾಯಕ ಚುನಾವಣಾಧಿಕಾರಿ ವಿನಯ ಪಾಟೀಲ್ ಹೇಳಿದರು.ಪಟ್ಟಣದಲ್ಲಿ ಸ್ವೀಪ್ ಸಮಿತಿ ಯೋಜನೆಯ ಅಡಿಯಲ್ಲಿ ಹಮ್ಮಿಕೊಂಡ ಬೈಕ್ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ತಾಲೂಕಿನಾದ್ಯಂತ ಈಗಾಗಲೇ ಲೋಕಸಭಾ ಚುನಾವಣೆ ಘೋಷಣೆಯದಾಗಿನಿಂದ ಗ್ರಾಮ ಪಂಚಾಯಿತಿ ಹಂತದಿಂದ ಜಿಲ್ಲಾ ಮಟ್ಟದವರೆಗೆ ಸ್ವೀಪ್ ಚಟುವಟಿಕೆಗಳ ವಿಭಿನ್ನ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಜನರಲ್ಲಿ ಮತದಾನದ ಬಗ್ಗೆ ಜಾಗೃತಿಯನ್ನು ಮೂಡಿಸಲಾಗಿದೆ. ಮತದಾನದ ದಿವಸ ಹೆಚ್ಚಿನ ಜನರನ್ನು ಮತಗಟ್ಟೆಗೆ ಕರೆದುಕೊಂಡು ಬಂದು ಮತ ಚಲಾವಣೆ ಮಾಡಿಸುವುದು ನಮ್ಮ ಗುರಿಯಾಗಿದೆ ಎಂದು ವಿವರಿಸಿದರು.ಈ ವೇಳೆ ತಹಶೀಲ್ದಾರ್ ಪ್ರದೀಪಕುಮಾರ ಹಿರೇಮಠ ಮಾತನಾಡಿದರು.ಸಹಾಯಕ ಚುನಾವಣಾಧಿಕಾರಿ ವಿನಯ ಪಾಟೀಲ, ಸಿಂದಗಿ ತಹಶೀಲ್ದಾರ್ ಪ್ರದೀಪಕುಮಾರ ಹಿರೇಮಠ, ಆಲಮೇಲ ತಹಶೀಲ್ದಾರ್ ಮಹಾದೇವ ಸಣ್ಣಮುರಿ, ತಾಪಂ ಇಒ ಸುಬ್ರಮಣ್ಯ ಶರ್ಮಾ, ಪುರಸಭೆ ಮುಖ್ಯಧಿಕಾರಿ ಗುರುರಾಜ ಚೌಕಿಮಠ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ನಗರದಾದ್ಯಂತ ಬೈಕ್ ಓಡಿಸುವ ಮೂಲಕ…

Read More

ನಾಮಪತ್ರ ವಾಪಸ್ ಪಡೆಯದಿದ್ರೆ ಉಚ್ಛಾಟನೆ? | ಏ.22 ಡೆಡ್ ಲೈನ್ | ಮನವೊಲಿಕೆ ಕೈಬಿಟ್ಟ ಬಿಜೆಪಿ ಹೈಕಮಾಂಡ್ ಶಿವಮೊಗ್ಗ: ಮಾಜಿ ಡಿಸಿಎಂ ಕೆಎಸ್ ಈಶ್ವರಪ್ಪ ತಮ್ಮ ಪುತ್ರ ಕೆಇ ಕಾಂತೇಶ್ ಗೆ ಹಾವೇರಿ ಲೋಕಸಭೆ ಕ್ಷೇತ್ರದ ಟಿಕೆಟ್ ನಿರಾಕರಿಸಿದ್ದರಿಂದ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹಾಗೂ ಬಿಜೆಪಿ ವಿರುದ್ಧ ಮುನಿಸಿಕೊಂಡಿದ್ದು ಇದೀಗ ಶಿವಮೊಗ್ಗದಲ್ಲಿ ಬಿಜೆಪಿ ಅಭ್ಯರ್ಥಿ ಬಿವೈ ರಾಘವೇಂದ್ರ ವಿರುದ್ಧ ಪಕ್ಷೇತ್ತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ.ಬಿಎಸ್ ವೈ ಕುಟುಂಬದಿಂದ ಬಿಜೆಪಿಯನ್ನು ಮುಕ್ತಗೊಳಿಸಬೇಕು ಎಂದು ಪಣತೊಟ್ಟಿರುವ ಈಶ್ವರಪ್ಪ ಕಳೆದ ವಾರ ತಮ್ಮ ನಾಮಪತ್ರವನ್ನೂ ಸಲ್ಲಿಕೆ ಮಾಡಿದ್ದರು. ಇದರ ಬೆನ್ನಲ್ಲೇ ಬಿವೈ ರಾಘವೇಂದ್ರ ಮುಂದಿನ ದಿನಗಳಲ್ಲಿ ಈಶ್ವರಪ್ಪ ನಾಮಪತ್ರ ವಾಪಸ್ ಪಡೆಯಲಿದ್ದಾರೆ ಎಂದು ಹೇಳಿಕೆ ನೀಡಿದ್ದರು. ಇದರ ಬೆನ್ನಲ್ಲೇ ಬ್ರಹ್ಮನೇ ಬಂದು ಹೇಳಿದರೂ ನಾನು ನಾಮಪತ್ರ ವಾಪಸ್ ಪಡೆಯುವುದಿಲ್ಲ ಎಂದು ಹೇಳುತ್ತಿದ್ದಾರೆ.ಈ ಹಿಂದೆ ಈಶ್ವರಪ್ಪರಿಗೆ ಹೈಕಮಾಂಡ್ ದೆಹಲಿಗೆ ಬರುವಂತೆ ಬುಲಾವ್ ನೀಡಿತ್ತು. ಆದರೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಈಶ್ವರಪ್ಪರ ಭೇಟಿಗೆ ಅವಕಾಶ ನೀಡದ…

Read More

ಮುದ್ದೇಬಿಹಾಳ: ಪಟ್ಟಣದ ಆಲಮಟ್ಟಿ ರಸ್ತೆಯಲ್ಲಿರುವ ಹಡಲಗೇರಿ ಗ್ರಾಮ ವ್ಯಾಪ್ತಿಯ ಮಾದರಿ ಪರಿಶಿಷ್ಠ ಜಾತಿ ಪರಿಶಿಷ್ಠ ಪಂಗಡದ ವಸತಿಯುಕ್ತ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ೨೦೨೪-೨೫ನೇ ಸಾಲಿಗೆ ಬಿಎ, ಬಿಎಸ್ಸಿ, ಬಿಕಾಂ, ಮತ್ತು ಬಿಸಿಎ ಕೋರ್ಸ್ಗಳಿಗೆ ಪ್ರವೇಶಗಳು ಪ್ರಾರಂಭವಾಗಿವೆ.ಪ್ರತಿ ಕೋರ್ಸ್ಗೆ ೪೦ ವಿದ್ಯಾರ್ಥಿಗಳಿಗೆ ಮಾತ್ರ ಪ್ರವೇಶಾತಿಯ ಅವಕಾಶವಿದ್ದು, ಡೋನೇಷನ್ ರಹಿತ ಪ್ರವೇಶವನ್ನು ವಿದ್ಯಾರ್ಥಿಗಳು ಪಡೆಯಬಹುದು. ಈ ಕಾಲೇಜಿನಲ್ಲಿ ಎಲ್ಲಾ ಜಾತಿ ವರ್ಗಗಳ ವಿದ್ಯಾರ್ಥಿಗಳಿಗೆ ಪ್ರವೇಶಾತಿಗೆ ಅವಕಾಶವಿದೆ. ಈ ಕಾಲೇಜು ಕರ್ನಾಟಕ ರಾಜ್ಯದ ೧೦ ವಸತಿಯುಕ್ತ ಕಾಲೇಜುಗಳಲ್ಲಿ ಒಂದಾಗಿದ್ದು, ವಿಜಯಪುರ ಜಿಲ್ಲೆಯಲ್ಲಿ ಬಿಸಿಎ ಕೋರ್ಸ್ನ್ನು ಹೊಂದಿದ ಏಕೈಕ ಸರಕಾರಿ ಕಾಲೇಜು ಇದಾಗಿದೆ. ಸ್ಮಾರ್ಟ್ಕ್ಲಾಸ್ ಸೌಲಭ್ಯ, ಪರಿಣಿತ ಬೋಧಕರಿಂದ ಹಾಗೂ ಉದ್ಯೋಗಾಧಾರಿತ ಉಚಿತ ಕ್ಲಾಸ್‌ಗಳು ಈ ಕಾಲೇಜಿನ ವೈಶಿಷ್ಟ್ಯವಾಗಿದ್ದು, ಆಸಕ್ತರು ಸದುಪಯೋಗ ಪಡೆದುಕೊಳ್ಳುವಂತೆ ಪ್ರಾಂಶುಪಾಲ ಡಾ.ಎಸ್.ಎಲ್.ಪಾಟೀಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ: ೮೯೫೧೧೯೧೨೪೨, ೯೪೮೦೯೯೪೧೪೨, ೯೭೪೦೮೫೩೭೭೦, ೯೭೩೮೬೩೬೦೦೫, ೯೭೪೨೭೨೯೭೪೬, ೭೭೬೦೬೦೫೯೨೭, ೯೬೬೩೨೯೦೨೪೧ ಸಂಪರ್ಕಿಸಬಹುದು.

Read More

ಕಾರ್ಖಾನೆಯಿಂದ ದುಷ್ಷಪರಿಣಾಮಗಳ ಹಿನ್ನಲೆ ಮಧಬಾವಿ ತಾಂಡಾ ನಂ.೧ ನಿವಾಸಿಗಳ ಎಚ್ಚರಿಕೆ ವಿಜಯಪುರ: ಮಧಬಾವಿ ತಾಂಡಾ ನಂಬರ-೧ (ರಾಜಾಜೀ ನಗರ) ಹೊರ ವಲಯದ ಟೈಯರ್ ಕಾರ್ಖಾನೆಯಿಂದ ಅನೇಕ ದುಷ್ಷಪರಿಣಾಮಗಳು ಸಂಭವಿಸಿರುವ ಹಿನ್ನಲೆಯಲ್ಲಿ ಕಾರ್ಖಾನೆ ಬಂದ್ ಮಾಡಬೇಕು, ಇಲ್ಲವಾದಲ್ಲಿ ಲೋಕಸಭಾ ಚುನಾವಣೆ ಬಹಿಷ್ಠಾರ ಮಾಡುತ್ತೇವೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.ಈ ವೇಳೆ ಗ್ರಾಮ ಪಂಚಾಯಿತಿ ಸದಸ್ಯರಾದ ಪ್ರಕಾಶ ಶ್ರೀಮಂತ ರಾಠೋಡ ಮನವಿ ಸಲ್ಲಿಸಿ ಮಾತನಾಡುತ್ತಾ, ವಿಜಯಪುರ ಜಿಲ್ಲೆ ಹಾಗೂ ತಾಲೂಕಿನ ವ್ಯಾಪ್ತಿಯಲ್ಲಿ ಬರುವ ಮಧಬಾವಿ ತಾಂಡಾ ನಂಬರ ೧ರ ( ರಾಜಾಜೀ ನಗರ) ಹತ್ತಿರದಲ್ಲಿ ಕಳೆದ ೫-೬ ವರ್ಷಗಳಿಂದ ಅಕ್ರಮವಾಗಿ ನಡೆಯುತ್ತಿರುವ ಟಾಯರ್ ಕಾರ್ಖಾನೆಯಿಂದಾಗಿ ಅಪಾರ ಪ್ರಮಾಣದ ವಿಷಯುಕ್ತ ಹೊಗೆ ಮುಗಿಲೆತ್ತರಕ್ಕೆ ಹೊರಸೂಸುತ್ತಿದ್ದು ಇದರಿಂದಾಗಿ ಸುತ್ತಮುತ್ತಲಿನ ಸುಮಾರು ೧೦ ಹಳ್ಳಿಗಳ ಜನರ ಆರೋಗ್ಯದಲ್ಲಿ ಅನೇಕ ರೀತಿಯ ಸಮಸ್ಯೆಗಳು ಕಂಡುಬಂದಿದ್ದು ಸಾವುನೋವುಗಳು ಉಂಟಾಗಿವೆ. ಇದರಿಂದಾಗಿ ಮಕ್ಕಳಿಗೆ, ಮಯಸ್ಕರಿಗೆ, ವಯೋವೃದ್ಧರಿಗೆ ಅಸ್ತಮಾ, ಬಿ.ಪಿ, ಲಕ್ವಾ, ಹೃದಯ…

Read More

ಬಸವನಬಾಗೇವಾಡಿ: ತಾಲೂಕಿನ ಕಣಕಾಲ ಗ್ರಾಮದಲ್ಲಿ ಸ್ಥಳೀಯ ಅಗ್ನಿಶಾಮಕ ಠಾಣೆಯಿಂದ ಸೋಮವಾರ ಅಗ್ನಿ ಶಾಮಕ ಸೇವಾ ದಿನಾಚರಣೆ ಸಪ್ತಾಹ ಆಚರಣೆ ಅಂಗವಾಗಿ ಅಗ್ನಿ ಸುರಕ್ಷತೆ ಮತ್ತು ಅಗ್ನಿ ಅವಘಡ ಮುಂಜಾಗ್ರತೆ ಬಗ್ಗೆ ಅರಿವು ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ನಂತರ ಬೆಂಕಿ ಆಕಸ್ಮಿಕ ಬಗ್ಗೆ ನಾಗರಿಕರಿಗೆ ತಿಳುವಳಿಕೆ ಕುರಿತಾದ ಕರಪತ್ರಗಳನ್ನು ವಿತರಿಸಲಾಯಿತು.ಅಗ್ನಿಶಾಮಕ ಠಾಣಾಧಿಕಾರಿ ಸಂಗಮೇಶ ಶಿವಪೂಜಿ, ಅಗ್ನಿಶಾಮಕ ಠಾಣೆಯ ಸಹಾಯಕ ಠಾಣಾಧಿಕಾರಿ ಭೀಮಾಶಂಕರ ಮಾದರ, ಸಿಬ್ಬಂದಿಗಳಾದ ನಾರಾಯಣ ರಾಠೋಡ, ಲಿಂಗಪ್ಪ ಲಮಾಣಿ, ಸಂಗಪ್ಪ ಹಳಕಟ್ಟಿ, ಶ್ರೀಶೈಲ ಬಿರಾದಾರ, ಗ್ರಾಮ ಪಂಚಾಯತ ಅಧ್ಯಕ್ಷರು ಮತ್ತು ಪಿಡಿಓ ಇತರರು ಇದ್ದರು.

Read More

ಕೃಷಿ ಹೊಂಡದಲ್ಲಿ ಬಿದ್ದು ಬಾಲಕ ಸಾವು ಬಸವನಬಾಗೇವಾಡಿ: ತಾಲೂಕಿನ ನರಸಲಗಿ ಗ್ರಾಮದ ತೋಟದ ಕೃಷಿ ಹೊಂಡದಲ್ಲಿ ಬಿದ್ದು ಬಾಲಕ ಮೃತಪಟ್ಟ ಘಟನೆ ಸೋಮವಾರ ನಡೆದಿದೆ.ಮೃತ ಬಾಲಕ ಕುಶಾಲ ವೀರೇಶ ಹಾಲ್ಯಾಳ (6) ಆಟವಾಡುತ್ತಿದ್ದಾಗ ಆಕಸ್ಮಿಕವಾಗಿ ಕಾಲು ಜಾರಿ ಕೃಷಿ ಹೊಂಡಕ್ಕೆ ಬಿದ್ದು ಮೃತಪಟ್ಟಿದ್ದಾನೆ. ಪಟ್ಟಣದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬಸವನಬಾಗೇವಾಡಿ: ವಿಜಯಪುರ ಜಿಲ್ಲೆಯ ಸಮಗ್ರ ಅಭಿವೃದ್ಧಿ ಆಗಬೇಕಾದರೆ ಕಾಂಗ್ರೆಸ್ ಪಕ್ಷದ ಲೋಕಸಭೆ ಅಭ್ಯರ್ಥಿ ಪ್ರೊ. ರಾಜು ಆಲಗೂರ ಅವರನ್ನು ಲೋಕಸಭೆ ಚುನಾವಣೆಯಲ್ಲಿ ಮತಬಾಂಧವರು ಆಯ್ಕೆ ಮಾಡಬೇಕೆಂದು ಕಾಂಗ್ರೆಸ್ ಮುಖಂಡ ಶಂಕರಗೌಡ ಬಿರಾದಾರ ಹೇಳಿದರು.ಪಟ್ಟಣದ ಲಕ್ಷ್ಮೀ ನಗರ, ಶಿವನಗುಡಿ, ಶಿವಾಜಿ ಗಲ್ಲಿಗಳಲ್ಲಿ ಲೋಕಸಭಾ ಚುನಾವಣೆಯ ಪ್ರಯುಕ್ತ ಭಾನುವಾರ ಸಂಜೆ ಮನೆ ಮನೆಗೆ ತೆರಳಿ ಪ್ರಚಾರ ಕೈಗೊಂಡು ನಂತರ ಮಾತನಾಡಿದ ಅವರು, ಕಳೆದ ಹತ್ತು ವರ್ಷಗಳಿಂದ ವಿಜಯಪುರ ಜಿಲ್ಲೆಯ ಸಂಸದ ಸದಸ್ಯ ರಮೇಶ ಜಿಗಜಿಣಗಿ ಅವರು ಸಂಸತ್ತಿನಲ್ಲಿ ವಿಜಯಪುರ ಜಿಲ್ಲೆಯ ಅಭಿವೃದ್ಧಿ ಕುರಿತು ಮಾತನಾಡಲು ವಿಫಲರಾಗಿದ್ದರೆ. ಸಂಸತ್ತ್ ಅಧಿವೇಶನದಲ್ಲಿ ಜಿಲ್ಲೆಯ ಅಭಿವೃದ್ಧಿ ಕುರಿತು ಹತ್ತು ವರ್ಷಗಳಲ್ಲಿ ಒಮ್ಮೆಯೂ ಕೂಡಾ ಮಾತನಾಡಿಲ್ಲ. ಅಂಥವರನ್ನು ಸಂಸತ್ತಿಗೆ ಕಳಿಸುವುದರಿಂದ ಜಿಲ್ಲೆಯ ಅಭಿವೃದ್ಧಿ ಕುಂಠಿತವಾಗುತ್ತದೆ.ವಿಜಯಪುರ ಜಿಲ್ಲೆಯ ಜ್ವಲಂತ ಸಮಸ್ಯೆಗಳಾದ ಕೃಷ್ಣೆ ನದಿಯ ನೀರಾವರಿ ಯೋಜನೆಯನ್ನು ರಾಷ್ಟ್ರೀಯ ನೀರಾವರಿ ಯೋಜನೆಯನ್ನಾಗಿ ಮಾಡಬೇಕು. ವಿಜಯಪುರದಿಂದ ಬೆಂಗಳೂರಿಗೆ ವಿಜಯಪುರದಿಂದ ಮುಂಬೈ ಹಾಗೂ ಹೈದ್ರಾಬಾದಕ್ಕೆ ತೆರಳಲು ಸೂಕ್ತವಾದ ರೈಲಿನ ವ್ಯವಸ್ಥೆಗಳಿಲ್ಲ. ವಿಜಯಪುರ ನಗರದ ಹಿಟ್ಟನಹಳ್ಳಿ ಹತ್ತಿರ…

Read More

ಬಸವನಬಾಗೇವಾಡಿ: ಪಟ್ಟಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ತಾಲೂಕಾಡಳಿತ, ತಾಲೂಕು ಸ್ವೀಪ್ ಸಮಿತಿ,ಪುರಸಭೆ ಸಹಯೋಗದಲ್ಲಿ ಭಾನುವಾರ ಮತದಾನ ಜಾಗೃತಿ ಮೂಡಿಸಲು ಬೈಕ್ ರ್ಯಾಲಿ ಜರುಗಿತು.ಪಟ್ಟಣದ ಡಾ.ಅಂಬೇಡ್ಕರ ವೃತ್ತದಲ್ಲಿ ತಹಸೀಲ್ದಾರ ವೈ.ಎಸ್.ಸೋಮನಕಟ್ಟಿ ಅವರು ಬೈಕ್ ರ್ಯಾಲಿಗೆ ಚಾಲನೆ ನೀಡಿದರು. ಡಾ.ಅಂಬೇಡ್ಕರ ವೃತ್ತದಿಂದ ಆರಂಭಗೊಂಡ ಬೈಕ್ ರ್ಯಾಲಿ ಲಕ್ಷ್ಮೀ ನಗರ ಮಾರ್ಗವಾಗಿ ಸಂಗೊಳ್ಳಿ ರಾಯಣ್ಣ ವೃತ್ತ, ಬಸವ ಭವನ ಮಾರ್ಗ, ಬಸವೇಶ್ವರ ವೃತ್ತ, ಬಸ್ ನಿಲ್ದಾಣ ಮಾರ್ಗವಾಗಿ ತಹಸೀಲ್ದಾರ ಕಚೇರಿಯವರೆಗೆ ತೆರಳಿ ನಂತರ ಬಸ್ ನಿಲ್ದಾಣ ಮಾರ್ಗವಾಗಿ ಬಸವೇಶ್ವರ ವೃತ್ತಕ್ಕೆ ಆಗಮಿಸಿತು. ನಂತರ ಮೊಂಬತ್ತಿ ಬೆಳಗುವ ಮೂಲಕ ಮತದಾನ ಜಾಗೃತಿ ಮೂಡಿಸಲಾಯಿತು.ಬಸವೇಶ್ವರ ವೃತ್ತದಲ್ಲಿ ಜರುಗಿದ ಮತದಾನ ಜಾಗೃತಿ ಕಾರ್ಯಕ್ರಮ ಉದ್ದೇಶಿಸಿ ತಹಸೀಲ್ದಾರ ವೈ.ಎಸ್.ಸೋಮನಕಟ್ಟಿ ಮಾತನಾಡಿ, ಈಗ ನಡೆಯುತ್ತಿರುವ ಲೋಕಸಭೆ ಚುನಾವಣೆಯಲ್ಲಿ ಮತದಾರರು ಯಾವುದೇ ಆಸೆ ಆಮಿಷಕ್ಕೆ ಒಳಗಾಗದೇ ಸಂವಿಧಾನ ತಮಗೆ ನೀಡಿರುವ ಮತದಾನ ಎಂಬ ಪವಿತ್ರ ಹಕ್ಕು ಚಲಾಯಿಸುವ ಮೂಲಕ ಪ್ರಾಮಾಣಿಕ ಜನಪ್ರತಿನಿಧಿಗಳನ್ನು ಆಯ್ಕೆ ಮಾಡಬೇಕು. ಉತ್ತಮ ಜನಪ್ರತಿನಿಧಿಗಳನ್ನು ಆಯ್ಕೆ ಮಾಡಿದರೆ ದೇಶದ ಪ್ರಗತಿಗೆ ಸಹಕಾರಿಯಾಗುತ್ತದೆ.…

Read More

ಮುದ್ದೇಬಿಹಾಳ: ಶ್ರೀ ರಾಮನವಮಿಯ ನಿಮಿತ್ಯ ಪಟ್ಟಣದ ಆಲಮಟ್ಟಿ ರಸ್ತೆಯಲ್ಲಿರುವ ಶ್ರೀ ಸಾಯಿಬಾಬಾ ದೇವಸ್ಥಾನದಲ್ಲಿ ಶ್ರೀ ಸಾಯಿಬಾಬಾರಿಗೆ ಅಭಿಷೇಕ, ಸತ್ಯನಾರಾಯಣ ಪೂಜೆ, ಮಹಾಮಂಗಳಾರತಿ ನಂತರ ಮಹಾ ಪ್ರಸಾದ ಕಾರ್ಯಕ್ರಮಗಳು ಜರುಗಲಿದ್ದು, ಭಕ್ತಾದಿಗಳು ಆಗಮಿಸಿ ಬಾಬಾ ರ ಕೃಪೆಗೆ ಪಾತ್ರರಾಗುವಂತೆ ಪ್ರಕಟಣೆ ತಿಳಿಸಿದೆ.

Read More