Subscribe to Updates
Get the latest creative news from FooBar about art, design and business.
Author: editor.udayarashmi@gmail.com
ವಿಜಯಪುರ: ರೋಟರಿ ಕ್ಲಬ್ ವಿಜಯಪುರ ಉತ್ತರ ವಲಯದ ವತಿಯಿಂದ ಭಾನುವಾರ ಭೂತನಾಳ ಟ್ಯಾಂಕ್ ಹತ್ತಿರವಿರುವ ಗೋಶಾಲೆಗೆ ಭೇಟಿ ನೀಡಿ ಗೋವುಗಳಿಗೆ ಕುಡಿಯುವ ನೀರಿನ ಟ್ಯಾಂಕ್ಗಳನ್ನು ಒದಗಿಸಲಾಯಿತು.ರೋಟರಿ ಕ್ಲಬ್ ವತಿಯಿಂದ ಹಲವು ಸಾಮಾಜಿಕ ಕಾರ್ಯಗಳನ್ನು ಕೈಗೊಂಡಿದ್ದು, ರೋಟರಿ ಕ್ಲಬ್ ೩೧೭೦ದ ಪ್ರಾಂತದ ಪ್ರಾಂತದ ಗವ್ಹರ್ನರ್ ನಾಸೀರ ಬೋರಸನವಾಲಾ ಅವರು ಕ್ಲಬ್ ವೀಕ್ಷಣೆ ಮಾಡಿ ಕ್ಲಬ್ ವತಿಯಿಂದ ಗೋಶಾಲೆಗಳ ಗೋವುಗಳಿಗೆ ಕುಡಿಯುವ ನೀರಿನ ವ್ಯವಸ್ಥೆ ಹಾಗೂ ದಿವಟಗೇರಿ ಗಲ್ಲಿಯಲ್ಲಿರುವ ರಾಯರಮಠಕ್ಕೆ ಬರುವ ಭಕ್ತಾದಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಆರ್.ಓ. ವಾಟರ್ ಟ್ಯಾಂಕ್ ಒದಗಿಸಲಾಯಿತು.ಈ ಸಂದರ್ಭದಲ್ಲಿ ಕೋ-ಅಧ್ಯಕ್ಷರಾದ ಮಲ್ಲು ಕಲಾದಗಿ ಅವರು ಮಾತನಾಡಿ, ಗೋವುಗಳ ಸಂರಕ್ಷಣೆ ಅತ್ಯಂತ ಮಹತ್ವದ್ದು ಹಾಗೆಯೇ ಕುಡಿಯುವ ನೀರಿನ ವ್ಯವಸ್ಥೆ ಅತ್ಯವಶ್ಯಕವಾಗಿದೆ. ಈ ನಿಟ್ಟಿನಲ್ಲಿ ರೋಟರಿ ಕ್ಲಬ್ ವತಿಯಿಂದ ಹಲವು ಸಾಮಾಜಿಕ ಕಾರ್ಯಗಳನ್ನು ಮಾಡುತ್ತ ಬಂದಿದ್ದು, ಪ್ರತಿನಿತ್ಯ ವಿವಿಧೆಡೆ ರೋಟರಿ ಕ್ಲಬ್ ವತಿಯಿಂದ ನೀರಿನ ಪ್ಲಾಟ್ಗಳನ್ನಿಟ್ಟು ನೀರಿನ ದಾಹ ತೀರಿಸಲು ಪ್ರಯತ್ನಿಸಲಾಗುತ್ತಿದ್ದು, ಸಮಾಜಮುಖ್ಯ ಕಾರ್ಯದಲ್ಲಿ ಪ್ರತಿಯೊಬ್ಬರು ಮುಂದಾಗಬೇಕು ಎಂದು ಹೇಳಿದರು.ಈ ಸಂದರ್ಭದಲ್ಲಿ ಚಾರ್ಟಟ್…
ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಆಚರಣೆಯಲ್ಲಿ ಡಿಸಿ ಟಿ.ಭೂಬಾಲನ್ ಅಭಿಮತ ವಿಜಯಪುರ: ಜಗತ್ತಿನಲ್ಲಿಯೇ ಶ್ರೇಷ್ಠ ಸಂವಿಧಾನ ರಚಿಸಿದ ಡಾ.ಬಾಬಾಸಾಹೇಬ ಅಂಬೇಡ್ಕರ್ ಅವರನ್ನು ಪ್ರತಿಯೊಬ್ಬರು ಪ್ರತಿನಿತ್ಯ ಸ್ಮರಿಸಿ ಅವರ ಸಂದೇಶಗಳನ್ನು ಪಾಲಿಸುವುದರ ಮೂಲಕ ಸಂವಿಧಾನವನ್ನು ಗೌರವಿಸಬೇಕು ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಕರೆ ನೀಡಿದರು.ಲೋಕಸಭಾ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಜಿಲ್ಲಾಡಳಿತದ ವತಿಯಿಂದ ರವಿವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅತ್ಯಂತ ಸರಳ ಹಾಗೂ ಅರ್ಥಪೂರ್ಣವಾಗಿ ಹಮ್ಮಿಕೊಂಡ ಜಯಂತಿ ಕಾರ್ಯಕ್ರಮದಲ್ಲಿ ಡಾ.ಬಾಬಾಸಾಹೇಬ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಅವರು ಮಾತನಾಡಿದರು.ಡಾ.ಬಾಬಾಸಾಹೇಬ್ ಅಂಬೇಡ್ಕರವರು ಬಡವರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ಸೇರಿದಂತೆ ಬಡ ದೀನ ದಲಿತರ ಜೀವನ ಮಟ್ಟ ಸುಧಾರಿಸಲು, ಸಾಮಾಜಿಕ ನ್ಯಾಯಕ್ಕಾಗಿ ಶ್ರಮಿಸಿದವರು. ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸಮಾನ ಅವಕಾಶ ಕಲ್ಪಿಸಿ, ಮೂಲಭೂತ ಸೌಲಭ್ಯಗಳೊಂದಿಗೆ ಸುಭದ್ರ ಜೀವನ ಕಟ್ಟಿಕೊಳ್ಳಬೇಕೆಂಬುದು ಆಶಯ ಹೊಂದಿದ ಡಾ.ಬಿ.ಆರ್.ಅಂಬೇಡ್ಕರ್ ಅವರ ಆದರ್ಶಗಳು, ಸಂವಿಧಾನದ ಆಶಯಗಳ ಕುರಿತು ಪ್ರತಿಯೊಬ್ಬ ನಾಗರಿಕನು ಅರಿವು ಹೊಂದಿಬೇಕು. ಈ ನಿಟ್ಟಿನಲ್ಲಿ ಪ್ರತಿಯೊಂದು ಮನೆ- ಶಾಲೆಗಳಲ್ಲಿ…
ಚಿಮ್ಮಡ: ಆದ್ಯ ವಚನಕಾರ ದೇವಾಂಗ ಸಮಾಜದ ಆರಾಧಕ ದೇವರ ದಾಸಿಮಯ್ಯನವರ ಆದರ್ಶ ಮನುಕುಲಕ್ಕೆ ಸಂದೇಶ ನೀಡಿದೆಯಂದು ಸ್ಥಳೀಯ ವಿರಕ್ತಮಠದ ಶ್ರೀ ಪ್ರಭು ಮಹಾಸ್ವಾಮಿಗಳು ಹೇಳಿದರು.ಗ್ರಾಮದ ದಾಸಿಮಯ್ಯ ವೃತ್ತದಲ್ಲಿ ಶನಿವಾರ ಸಂಜೆ ಹಮ್ಮಿಕೊಳ್ಳಲಾಗಿದ್ದ ದೇವರ ದಾಸಿಮಯ್ಯನವರ ಜಯಂಯೋತ್ಸವ ಕಾರ್ಯಕ್ರಮದಲ್ಲಿ ಸಾನಿಧ್ಯವಹಿಸಿ ಮಾತನಾಡಿದ ಅವರು, ದಾಸಿಮಯ್ಯನವರು ಒಂದೇ ಕುಲಕ್ಕೆ ಸಿಮಿತವಾಗಿರದೆ ಇಡೀ ಮನುಕುಲಕ್ಕೇ ಸಂದೇಶನೀಡುವ ಮಹಾನ್ ವ್ಯಕ್ತಿಯಾಗಿದ್ದರು, ಅವರ ವಚನ ಸಾಹಿತ್ಯ ನಾಡಿನೆಲ್ಲೆಡೆ ಮನೆಮಾತಾಗಿದ್ದು ವಚನಗಳ ಮೂಲಕವೇ ಸಾಮಾಜಿಕ ಕ್ರಾಂತಿ ಮಾಡಿದ್ದಾರೆಂದರು.ರಘುನಾಥ ಪ್ರೀಯ ಸಾಧು ಮಹಾರಾಜರ ಮಠದ ಶ್ರೀ ಜನಾರ್ಧನ ಮಹಾರಾಜರು ಮಾತನಾಡಿ ೧೧ನೇ ಶತಮಾನದಲ್ಲಿಯೇ ವಚನಗಳನ್ನು ರಚಿಸುವ ಮೂಲಕ ಸಮಾಜರ ಓರೆ ಕೋರೆಗಳನ್ನು ತಿದ್ದಿದ ಕೀರ್ತಿ ದೇವರ ದಾಸಿಮಯ್ಯನವರಿಗೆ ಸಲ್ಲುತ್ತದೆ ಎಂದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ದೇವಾಂಗ ಸಮಾಜದ ಪ್ರಮುಖರಾದ ಶ್ರೀಕಾಂತ ಜಾಡಗೌಡರ ವಹಿಸಿದ್ದರು, ಅಶೋಕ ಧಡೂತಿ, ರಾಮಣ್ಣ ಬಗನಾಳ, ಗ್ರಾಂ.ಪಂ. ಮಾಜಿ ಅಧ್ಯಕ್ಷ ಗುರಲಿಂಗಪ್ಪಾ ಪೂಜಾರಿ, ಬೀರಪ್ಪಾ ಹಳೆಮನಿ, ಮನೋಜ ಹಟ್ಟಿ, ಚನ್ನಪ್ಪಾ ಬಿಳ್ಳೂರ, ಬಸವರಾಜ ಕುಂಚನೂರ, ದುಂಡಪ್ಪಾ ಪಾಟೀಲ, ಪರಪ್ಪಾ ಬರಗಲ್, ಸುರೇಶ…
ಚಿಮ್ಮಡ: ಗ್ರಾಮದಿಂದ ಶ್ರೀಶೈಲ ಕ್ಷೇತ್ರಕ್ಕೆ ಪಾದಯಾತ್ರೆಯ ಮೂಲಕ ತೆರಳಿದ್ದ ಮುನ್ನೂರಕ್ಕೂ ಹೆಚ್ಚು ಜನ ಭಕ್ತಾದಿಗಳು ಇಂದು ಗ್ರಾಮದ ದ್ವಾರ ಬಾಗಿಲಿನ ಮೂಲಕ ಸ್ವಗ್ರಾಮ ಪ್ರವೇಶಿಸಿದರು.ಕಳೆದ ಹದಿನೈದು ದಿನಗಳ ಹಿಂದೆ ಹೋಳಿ ಹುಣ್ಣಿಮೆ ಕರಿ ದಿನದಂದು ಗ್ರಾಮದಿಂದ ನೆರೆಯ ಆಂದ್ರ ಪ್ರದೇಶದ ಶ್ರೀಶೈಲ ಕ್ಷೇತ್ರಕ್ಕೆ ಪಾದಯಾತ್ರೆ ಮೂಲಕ, ವಾಹನಗಳ ಮೂಲಕ ತೆರಳಿದ್ದ ನೂರಾರು ಜನ ಭಕ್ತಾಧಿಗಳು ಕಳೆದ ನಾಲ್ಕು ದಿನಗಳಿಂದ ಗ್ರಾಮದಿಂದ ಹೊರಗಡೆಯಿರುವ ದೇವಸ್ಥಾನಗಳಲ್ಲಿ, ಶಾಲೆಗಳಲ್ಲಿ ಬೀಡು ಬಿಟ್ಟಿದ್ದರು, ವಾಸ್ತವ್ಯ ವಿರುವ ಸ್ಥಳದಲ್ಲಿಯೇ ಪಾದಯಾತ್ರಿಗಳಿಗೆ ಕಳೆದ ಮೂರು ದಿನಗಳವರೆಗೆ ಊಟ ಮತ್ತು ಉಪಹಾರದ ವ್ಯವಸ್ಥೆಯನ್ನು ಮುಸ್ಲಿಂ ಸಮಾಜಬಾಂಧವರೂ ಸೇರಿದಂತೆ ಹಲವಾರು ಜನ ಭಕ್ತಾಧಿಗಳು ವ್ಯವಸ್ಥೆಗೊಳಿಸಿ ಸಾಮರಸ್ಯ ಮೆರೆದರು. ಪ್ರತೀತಿಯಂತೆ ಐದೇಶಿಯ ಐದು ದಿನಗಳ ಮುಂಚಿನ ದಿನವಾದ ರವಿವಾರ ಮುಂಜಾನೆ ಶ್ರೀ ಪ್ರಭು ಮಹಾಸ್ವಾಮಿಗಳಿಂದ ಮಂಗಳಾರತಿ ನೆರವೇರಿಸುವ ಮೂಲಕ ಪಾದಯಾತ್ರಿಗಳನ್ನು ಗ್ರಾಮದೊಳಗೆ ಬರಮಾಡಿಕೊಳ್ಳಲಾಯಿತು. ಶ್ರೀ ಮಲ್ಲಯ್ಯದೇವರ ಕಂಬಿಯನ್ನು ಶ್ರೀಗಳು ಹೆಗಲಮೇಲೆ ಹೊತ್ತು ಗ್ರಾಮದ ದ್ವಾರ ಬಾಗಿಲಿನ ಮೂಲಕ ಗ್ರಾಮ ಪ್ರವೇಶಿಸಿದರು.ನಂತರ ಗುಡ್ಡದ ಶ್ರೀ ಪ್ರಭುಲಿಂಗೇಶ್ವರ…
ಚಿಮ್ಮಡ: ಗ್ರಾಮದಿಂದ ಶ್ರೀಶೈಲ ಕ್ಷೇತ್ರಕ್ಕೆ ಪಾದಯಾತ್ರೆಯ ಮೂಲಕ ತೆರಳಿದ್ದ ಮುನ್ನೂರಕ್ಕೂ ಹೆಚ್ಚು ಜನ ಭಕ್ತಾದಿಗಳು ಇಂದು ಗ್ರಾಮದ ದ್ವಾರ ಬಾಗಿಲಿನ ಮೂಲಕ ಸ್ವಗ್ರಾಮ ಪ್ರವೇಶಿಸಿದರು.ಕಳೆದ ಹದಿನೈದು ದಿನಗಳ ಹಿಂದೆ ಹೋಳಿ ಹುಣ್ಣಿಮೆ ಕರಿ ದಿನದಂದು ಗ್ರಾಮದಿಂದ ನೆರೆಯ ಆಂದ್ರ ಪ್ರದೇಶದ ಶ್ರೀಶೈಲ ಕ್ಷೇತ್ರಕ್ಕೆ ಪಾದಯಾತ್ರೆ ಮೂಲಕ, ವಾಹನಗಳ ಮೂಲಕ ತೆರಳಿದ್ದ ನೂರಾರು ಜನ ಭಕ್ತಾಧಿಗಳು ಕಳೆದ ನಾಲ್ಕು ದಿನಗಳಿಂದ ಗ್ರಾಮದಿಂದ ಹೊರಗಡೆಯಿರುವ ದೇವಸ್ಥಾನಗಳಲ್ಲಿ, ಶಾಲೆಗಳಲ್ಲಿ ಬೀಡು ಬಿಟ್ಟಿದ್ದರು, ವಾಸ್ತವ್ಯ ವಿರುವ ಸ್ಥಳದಲ್ಲಿಯೇ ಪಾದಯಾತ್ರಿಗಳಿಗೆ ಕಳೆದ ಮೂರು ದಿನಗಳವರೆಗೆ ಊಟ ಮತ್ತು ಉಪಹಾರದ ವ್ಯವಸ್ಥೆಯನ್ನು ಮುಸ್ಲಿಂ ಸಮಾಜಬಾಂಧವರೂ ಸೇರಿದಂತೆ ಹಲವಾರು ಜನ ಭಕ್ತಾಧಿಗಳು ವ್ಯವಸ್ಥೆಗೊಳಿಸಿ ಸಾಮರಸ್ಯ ಮೆರೆದರು. ಪ್ರತೀತಿಯಂತೆ ಐದೇಶಿಯ ಐದು ದಿನಗಳ ಮುಂಚಿನ ದಿನವಾದ ರವಿವಾರ ಮುಂಜಾನೆ ಶ್ರೀ ಪ್ರಭು ಮಹಾಸ್ವಾಮಿಗಳಿಂದ ಮಂಗಳಾರತಿ ನೆರವೇರಿಸುವ ಮೂಲಕ ಪಾದಯಾತ್ರಿಗಳನ್ನು ಗ್ರಾಮದೊಳಗೆ ಬರಮಾಡಿಕೊಳ್ಳಲಾಯಿತು. ಶ್ರೀ ಮಲ್ಲಯ್ಯದೇವರ ಕಂಬಿಯನ್ನು ಶ್ರೀಗಳು ಹೆಗಲಮೇಲೆ ಹೊತ್ತು ಗ್ರಾಮದ ದ್ವಾರ ಬಾಗಿಲಿನ ಮೂಲಕ ಗ್ರಾಮ ಪ್ರವೇಶಿಸಿದರು.ನಂತರ ಗುಡ್ಡದ ಶ್ರೀ ಪ್ರಭುಲಿಂಗೇಶ್ವರ…
ಕೆಂಭಾವಿ: ಪಟ್ಟಣದಲ್ಲಿ ಹಳೆಯ ಬಸ್ ಸ್ಟ್ಯಾಂಡ್ ಹತ್ತಿರ ಡಾ ಬಿ.ಆರ್.ಅಂಬೇಡ್ಕರ್ ಅವರ ಮೂರ್ತಿಗೆ ಆದಿತ್ಯ ಗೌಡ ಪೊಲೀಸ್ ಪಾಟೀಲ್ ಹಾಗೂ ರಮೇಶ ಗೊಂದನಕರ್ ಮಲ್ಲಿಕಾರ್ಜುನ್ ಪಾಟೀಲ್ ಉಪ ತಹಸಿಲ್ದಾರ್ ಕೆಂಭಾವಿ ಮಾಲಾರ್ಪಣೆ ಮಾಡುವ ಮೂಲಕ ಬಾಬಾ ಸಾಹೇಬ್ ಡಾಕ್ಟರ್ ಬಿಆರ್ ಅಂಬೇಡ್ಕರ್ ಅವರ ೧೩೩ನೇ ಜಯಂತಿಯನ್ನು ಆಚರಿಸಲಾಯಿತು.ಇದೇ ಸಂದರ್ಭದಲ್ಲಿ ಲಾಲಪ್ಪ ಆಲ್ಹಾಳ, ಧರ್ಮಣ್ಣ ಪತ್ತೆಪುರ್, ಭೀಮರಾಯ ಮೇಸ್ತ್ರಿ ಮಾಳ್ಳಳಿಕರ್, ಪುಂಡಲಿಕ್ ಬಸರಿಗಿಡ, ಮಲ್ಲಪ್ಪ ಇಂಗಳಗಿ, ಮಲ್ಲಿಕಾರ್ಜುನ್ ಕಡಕಲ್, ಬಸವರಾಜ್ ಮಲ್ಲೆ, ಬಸವಣ್ಣಪ್ಪ ಆರ್ ಮಾಳಳ್ಳಿಕರ್, ಜೇಟೆಪ್ಪ ಬಸರಿಗಿಡ, ಸುರೇಶ ಮಾಳಳ್ಳಿಕರ್, ಲಕ್ಷ್ಮಣ ಬಸರೀಗಿಡ, ಯಲ್ಲಪ್ಪ ಬಾವಿಮನಿ, ಸಂಗಣ್ಣಕರಡಕಲ್, ಪರಶುರಾಮ ಮಾಳಳ್ಳಿಕರ್, ಗೊತ್ತಪ್ಪ ಮುದ್ದನೂರ್, ಮರೆಪ್ಪ ಕಟ್ಟಿಮನಿ, ತಿಪ್ಪಣ ಅಗ್ನಿ, ಮಾಂತೇಶ್ ಮಳಳ್ಳಿಕರ್, ಮಡಿವಾಳಪ್ಪ ಬಾಳಬಟ್ಟೆ, ಮಲ್ಲಿಕಾರ್ಜುನ ಕಟ್ಟಿಮನಿ, ಅಂಬರೀಶ್ ಬೊಮ್ಮನಹಳ್ಳಿ, ಪ್ರಕಾಶ್ ಮಾಳಳ್ಳಿಕರ್, ಶಿವುರಾಜ್ ಯಮನೂರ, ರೇಣುಕಾ, ಶೋಭಾ, ಸಿದ್ದರಾಮ್ ಇಂಡಿ, ಮುಜಾಜ್ ಸಾಬ್, ಉದಯ್ ಕುಮಾರ್, ಭೀಮಣ್ಣ ದೊಡ್ಡಮನಿ, ಮರೆಪ್ಪ, ಸಿದ್ದರಾಮ ಕಟ್ಟಿಮನಿ ಇತರರು ಇದ್ದರು
ಇಂಡಿ: ದೇಶ ಹಾಗೂ ಸಂವಿಧಾನದ ರಕ್ಷಣೆಗಾಗಿ ಕಡ್ಡಾಯವಾಗಿ ನೈತಿಕ ಮತದಾನ ಮಾಡಬೇಕು ಎಂದು ಸಹಾಯಕ ಚುನಾವಣೆ ಅಧಿಕಾರಿ ಮತ್ತು ಕಂದಾಯ ಉಪವಿಬಾಗಾಧಿಕಾರಿ ಅಬೀದ್ ಗದ್ಯಾಳ ಹೇಳಿದರು.ಪಟ್ಟಣದ ಮಿನಿ ವಿಧಾನಸೌಧದಲ್ಲಿ ಡಾ. ಬಾಬಾಸಾಹೇಬ ಅಂಬೇಡ್ಕರ ಜನ್ಮ ದಿನಾಚರಣೆ ನಿಮಿತ್ಯ ಪುರಸಭೆ ಕಾರ್ಮಿಕರಿಂದ ಸ್ವಚ್ಛತಾ ಕಾರ್ಯಕ್ರಮ ಮತ್ತು ಮತದಾನ ಜಾಗೃತಿ ಮೂಡಿಸುವ ಕಾರ್ಯಕ್ರಮದಲ್ಲಿ ಮಾತನಾಡಿದರು.ಈ ಬಾರಿ ಶೇ ೧೦೦ ರಷ್ಟು ಮತದಾನದ ಗುರಿ ಹೊಂದಿದ್ದು ಮೇ.೭ ರಂದು ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಎಲ್ಲರೂ ಮತದಾನ ಮಾಡಬೇಕು.ಪ್ರಜಾಪ್ರಭುತ್ವದ ಈ ಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಲು ಮತದಾರರು ಸಹಕರಿಸಬೇಕು. ಆ ಮೂಲಕ ದೇಶದ ಅಭಿವೃದ್ದಿಗೆ ಸೂಕ್ತ ಅಭ್ಯರ್ಥಿ ಆಯ್ಕೆ ಮಾಡಬೇಕು ಎಂದರು.ತಾವು ಸ್ವತಃ ಸ್ವಚ್ಛತಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಡಾ. ಬಾಬಾ ಸಾಹೇಬ ಅಂಬೇಡಕರ ಜಯಂತಿ ನಿಮಿತ್ಯ ಸ್ವಚ್ಛತಾ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.ತಾ.ಪಂ ಯೋಜನಾಧಿಕಾರಿ ನಂದೀಪ ರಾಠೋಡ, ತಹಸೀಲ್ದಾರ ಮಂಜುಳಾ ನಾಯಕ, ಐ.ಇ.ಸಿ ಸಂಯೋಜಕ ರಾಮಗೌಡ ಸರಬಡಗಿ ಮತ್ತಿತರಿದ್ದರು.
ವಿಜಯಪುರ: ಸಾಮಾಜಿಕ ಅಸಮಾನತೆಯ ವಿರುದ್ಧ ಹೋರಾಡಿದ, ಸಂವಿಧಾನದ ಮೂಲಕ ಪ್ರಜಾಪ್ರಭುತ್ವಕ್ಕೆ ಮೂರ್ತ ರೂಪ ನೀಡಿದ ಭಾರತ ರತ್ನ ಎಂದು ಬಂಜಾರಾ ಪ್ರೌಢ ಶಾಲೆಯ ಮುಖ್ಯ ಗುರುಗಳಾದ ಇ.ಡಿ.ಲಮಾಣಿ ಅಭಿಪ್ರಾಯ ಪಟ್ಟರು.ನಗರದ ಬಂಜಾರಾ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಡಾ. ಬಿ.ಆರ್.ಅಂಬೇಡ್ಕರ್ರವರ ಜಯಂತಿಯ ಅಂಗವಾಗಿ ಮಾತನಾಡಿದ ಅವರು. ಸಾಮಾಜಿಕ ಕಾರ್ಯಕ್ರಮಗಳನ್ನು ವೈಜ್ಞಾನಿಕ ಮನೋಭಾವನೆಯಿಂದ ನೋಡಿದಾಗ ಸಮಾಜಕ್ಕೆ ಅಂಟಿಕೊಂಡಿರುವ ಅಸ್ಪೃಶ್ಯತೆ, ಜಾತಿಪದ್ಧತಿ ಹಾಗೂ ತಾರತಮ್ಯ ಹೋಗಲಾಡಿಸಬಹುದು ಇದ್ದಕ್ಕೆ ಪ್ರತಿಯೊಬ್ಬರು ಮುಂದಾಗಬೇಕು ಎಂದು ಹೇಳಿದರು.ಈ ಸಂದರ್ಭದಲ್ಲಿ ಪ್ರಾಥಮಿಕ ಶಾಲೆಯ ಮುಖ್ಯ ಗುರುಗಳಾದ ಎಂ.ಬಿ.ಪೂಜಾರಿಯವರು ಮಾತನಾಡುತ್ತ. ನಮ್ಮ ವಿದ್ಯಾಭ್ಯಾಸದ ಜೊತೆ ಜೊತೆಯಲ್ಲಿಯೇ ರಾಷ್ಟ್ರ ನಾಯಕರುಗಳ ಜೀವನ ಚರಿತ್ರೆಗಳನ್ನು ಓದುವುದನ್ನು ರೂಢಿಸಿಕೊಳ್ಳುವುದರಿಂದ ರಾಷ್ಟ್ರಾಭಿಮಾನ, ರಾಷ್ಟ್ರ ಗೌರವ ಹೆಚ್ಚಾಗುತ್ತದೆ ಎಂದು ಹೇಳಿದರು.ಅಂಬೇಡ್ಕರ್ರವರ ಭಾವಚಿತ್ರ ಪೂಜೆಯನ್ನು ಶಿಕ್ಷಕರುಗಳಾದ ಆರ್.ಎನ್.ಬಕಾಟೆ ಹಾಗೂ ಆರ್.ವಿ.ಭುಜಂಗನವರ ರವರುಗಳು ನೆರವೇರಿಸಿದರು. ಈ ವೇಳೆಯಲ್ಲಿ ಶಾಲೆಯ ಎಲ್ಲ ಶಿಕ್ಷಕ ಸಿಬ್ಬಂದಿ ವರ್ಗವು ಉಪಸ್ಥಿತರಿದ್ದರು.
ದೇವರಹಿಪ್ಪರಗಿ: ಭಾರತರತ್ನ ಡಾ.ಅಂಬೇಡ್ಕರ್ ಯಾವುದೇ ಜಾತಿ, ಧರ್ಮ, ಮತ, ಪಂಥಗಳಿಗೆ ಸೀಮಿತವಾಗದೇ ಮಹಾಮಾನವತಾವಾದಿಯಾಗಿ ವಿಶ್ವಮಾನವರೆನಿಸಿದ್ದಾರೆ ಎಂದು ತಹಶೀಲ್ದಾರ ಪ್ರಕಾಶ ಸಿಂದಗಿ ಹೇಳಿದರು.ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ತಾಲ್ಲೂಕು ಆಡಳಿತದಿಂದ ಶುಕ್ರವಾರ ಜರುಗಿದ ಡಾ. ಅಂಬೇಡ್ಕರವರ ೧೩೩ ನೇ ಜಯಂತಿಯಲ್ಲಿ ಪಾಲ್ಗೊಂಡು, ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡುವುದರ ಮೂಲಕ ಮಾತನಾಡಿದರು. ಅಂಬೇಡ್ಕರ್ ಅವರ ಸಮಗ್ರ ಜೀವನವೇ ಆದರ್ಶ. ಭಾರತೀಯ ಸಂವಿಧಾನದ ಪಿತಾಮಹರಾದ ಇವರು ಮಾನವೀಯ ಮೌಲ್ಯಗಳು, ಶಿಕ್ಷಣ ಹಾಗೂ ಸಮಾನತೆಯ ಪ್ರತಿಪಾದನೆಯ ಪ್ರಮುಖ ಹರಿಕಾರರೆನಿಸಿದ್ದಾರೆ ಎಂದರು.ತಾಲ್ಲೂಕು ಪಂಚಾಯಿತಿ ಇಓ ಸಂಜೀವ ಜುನ್ನೂರ ಮಾತನಾಡಿ, ಪ್ರತಿಜ್ಞಾ ವಿಧಿ ಬೋಧಿಸಿದರು. ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಪ್ರಭುಗೌಡ ಬಿರಾದಾರ(ಅಸ್ಕಿ), ಬಿಜೆಪಿ ಧುರೀಣ ಸಿದ್ದು ಬುಳ್ಳಾ, ದಲಿತ ಸಮಾಜ ಸುಧಾರಣಾ ಸಮೀತಿ ಅಧ್ಯಕ್ಷ ಕಾಶೀನಾಥ ತಳಕೇರಿ ಹಾಗೂ ಪ್ರಕಾಶ ಗುಡಿಮನಿ ಮಾತನಾಡಿದರು.ಪಿಎಸ್ಐಗಳಾದ ಬಸವರಾಜ ತಿಪ್ಪಾರಡ್ಡಿ, ಬಿ.ಬಿ.ಕೊಳ್ಳಿ, ಶಿರಸ್ತೇದಾರ ಸುರೇಶ ಮ್ಯಾಗೇರಿ, ಪಟ್ಟಣ ಪಂಚಾಯಿತಿ ಮಾಜಿಆಧ್ಯಕ್ಷ ಭಾಸ್ಕರ್ ಗುಡಿಮನಿ, ಸದಸ್ಯ ಉಮೇಶ ರೂಗಿ, ಕಿರಿಯ ಆರೋಗ್ಯ ನಿರೀಕ್ಷಕ ಫಿರೋಜ್ ಮುಲ್ಲಾ, ನಿಂಗು…
ಸಿಂದಗಿ: ರಾಜ್ಯದ ಕಟ್ಟ ಕಡೆಯ ವ್ಯಕ್ತಿಯೂ ಕೂಡಾ ನೆಮ್ಮದಿಯ ಜೀವನ ಕಳೆಯಬೇಕು ಎಂದು ಕನಸು ಕಟ್ಟಿದ ನಮ್ಮ ಕಾಂಗ್ರೆಸ್ ಸರಕಾರ ಚುನಾವಣೆ ಪೂರ್ವದಲ್ಲಿ ಕೊಟ್ಟ ಮಾತಿನಂತೆ ಪಂಚ ಯೋಜನೆಗಳು ಮನೆ ಮನೆಗೆ ತಲುಪಿಸುವ ಪ್ರಾಮಾಣಿಕ ಕೆಲಸ ಮಾಡುತ್ತಿದೆ ದೇಶದ ಉಳಿವಿಗಾಗಿ ಮತ್ತು ಏಳಿಗೆಗಾಗಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಬೇಕು ಎಂದು ಶಾಸಕ ಅಶೋಕ ಮನಗೂಳಿ ಮನವಿ ಮಾಡಿದರು.ಪಟ್ಟಣದ ಸಿಂದಗಿ ನಗರದ ಕಾಂಗ್ರೆಸ್ ಪಕ್ಷದ ವತಿಯಿಂದ ವಾರ್ಡ್ ನಂ.೯ ಮತ್ತು ೧೭ರಲ್ಲಿ ವಿಜಯಪುರ ಲೋಕಸಭಾ ಚುನಾವಣೆ ಅಂಗವಾಗಿ ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ಗಳನ್ನು ಶಾಸಕ ಅಶೋಕ ಮನಗೂಳಿ ಬಿಡುಗಡೆಗೊಳಿಸಿ ಮಾತನಾಡಿದರು.ಕೇಂದ್ರ ಬಿಜೆಪಿ ಸರ್ಕಾರ ಕೇವಲ ಸುಳ್ಳು ಭರವಸೆಗಳನ್ನು ನೀಡುವ ಮೂಲಕ ದೇಶದ ಜನರ ದಿಕ್ಕು ತಪ್ಪಿಸುತ್ತಿದೆ. ದೇಶದ ಅಭಿವೃದ್ಧಿ ವಿಚಾರದಲ್ಲಿ, ಯುವಕರಿಗೆ ಉದ್ಯೋಗದ ವಿಚಾರದಲ್ಲಿ, ಮಹಿಳಾ ಸ್ವಾವಲಂಬನೆಯ ವಿಚಾರ ಸೇರಿದಂತೆ ಹಲವಾರು ಕ್ಷೇತ್ರಗಳಲ್ಲಿ ಕೇಂದ್ರ ಸರ್ಕಾರ ಸುಳ್ಳಿನ ಭರವಸೆಯನ್ನು ನೀಡಿ ಜನರನ್ನು ಮರಳು ಮಾಡುತ್ತಿದೆ. ಹತ್ತು ವರ್ಷದ ಅಧಿಕಾರ ಅವಧಿಯಲ್ಲಿ ಈ ದೇಶ…
