Author: editor.udayarashmi@gmail.com

-ಮಲಿಕ್.ಎಲ್‌.ಜಮಾದಾರ ವಿಜಯಪುರ: ಈ ವರ್ಷ ಬಿಸಿಲಿನ ತಾಪಮಾನ ಹೆಚ್ಚಾಗಿದ್ದು ಎಲ್ಲೆಂದರಲ್ಲಿ ಝಳವೋ ಝಳ. ಇದರಿಂದ ನೀರಿನ ಆಕರಗಳು ಒಣಗಿ ಹೋಗಿವೆ. ಜನ ಜೀವನಕ್ಕೆ ನೀರಿನ ಅಭಾವದಿಂದ ಅಸ್ತವ್ಯಸ್ತ ಉಂಟಾಗಿದೆ. ಇಂತಹ ಬೇಸಿಗೆಯಲ್ಲಿ ನೀರಿನ ಹಾಹಾಕಾರ ಮತ್ತಷ್ಟು ತಾರಕ್ಕೇರಿದೆ. ಜನ ಜಾನುವಾರುಗಳಿಗೆ ನೀರಿನ ಅಭಾವದಿಂದಾಗಿ ಗ್ರಾಮದ ಸುತ್ತಮುತ್ತಲಿನ ವಸ್ತಿ ಪ್ರದೇಶಗಳಲ್ಲಿ ನೀರನ್ನು ಪೂರೈಸಲು ನಂದರಗಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿನ ಧುಮಕನಾಳ ಗ್ರಾಮದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸ್ವತಃ ಗ್ರಾಮ ಪಂಚಾಯತಿ ಸದಸ್ಯರೇ ಜನರ ನೀರಿನ ಬವಣೆಯನ್ನು ನೀಗಿಸುವಲ್ಲಿ ಮುಂದಾಗಿದ್ದಾರೆ. ನಿತ್ಯ ಹಲವು ವಸ್ತಿ ಪ್ರದೇಶಗಳಿಗೆ ಖುದ್ದಾಗಿ ತಾವೇ ಟ್ಯಾಂಕರ್ ಮೂಲಕ ನೀರನ್ನು ಪೂರೈಸುತ್ತಿದ್ದಾರೆ. ಇದೆಲ್ಲವನ್ನೂ ಗಮನಿಸಿದ ಗ್ರಾಮಸ್ಥರು ಇವರ ಸೇವೆ ನಿಜಕ್ಕೂ ಮೆಚ್ಚುಗೆಗೆ ಪಾತ್ರವಾಗಿದೆ ಎಂದಿದ್ದಾರೆ.ಜನಸೇವೆಯೇ ಜನಾರ್ದನ ಸೇವೆ ಎಂಬಂತೆ ಬಿಸಲಿನ‌ ಹಂಗಿಲ್ಲದೆ ನಿರಂತರ ಜನರ ದಾಹ ತಣಿಸುವಲ್ಲಿ ಮುಂದಾಗಿದ್ದಾರೆ. ಜನಪ್ರತಿನಿಧಿಗಳು ಕುಂತಲ್ಲೆ ಪರೋಕ್ಷವಾಗಿ ಜನಸೇವೆ ಮಾಡುವ ಈ ದಿನಮಾನದಲ್ಲಿ ಇವರು ಪ್ರತ್ಯಕ್ಷವಾಗಿ ಈ ಸೇವೆಗೆ ಮುಂದಾಗಿದ್ದು ನಿಜಕ್ಕೂ ಶ್ಲಾಘನೀಯವಾದದ್ದಾಗಿದೆ.ಬೇಸಿಗೆಯಲ್ಲಿ ಬಿಸಿಲಿನ ತಾಪಮಾನ ತತ್ತರಿಸಿದ…

Read More

ವಿಜಯಪುರ: ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರೊ.ರಾಜು ಆಲಗೂರ ಅವರು ಸೋಮವಾರ ನಾಮಪತ್ರ ಸಲ್ಲಿಸಿದರು.ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಅವರು, ಜಿಲ್ಲಾ ಚುನಾವಣಾಧಿಕಾರಿ ಟಿ. ಭೂಬಾಲನ್ ಅವರಿಗೆ ತಮ್ಮ ನಾಮಪತ್ರ ಸಲ್ಲಿಸಿದರು.ಈ ಸಂದರ್ಭದಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ, ಸಕ್ಕರೆ ಸಚಿವ ಶಿವಾನಂದ ಎಸ್. ಪಾಟೀಲ, ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ ಅಧ್ಯಕ್ಷ ಮತ್ತು ಮುದ್ದೇಬಿಹಾಳ ಶಾಸಕ ಸಿ. ಎಸ್. ನಾಡಗೌಡ, ಇಂಡಿ ಶಾಸಕ ಯಶವಂತರಾಯಗೌಡ ವಿ. ಪಾಟೀಲ, ಉಪಸ್ಥಿತರಿದ್ದರು.ಎರಡನೇ ಸೆಟ್ ನಲ್ಲಿ ನಾಮಪತ್ರ ಸಲ್ಲಿಸುವ ವೇಳೆ ನಾಗಠಾಣ ಶಾಸಕ ವಿಠ್ಠಲ ಧೋಂಡಿಬಾ ಕಟಕದೊಂಡ, ಅಶೋಕ ನ್ಯಾಮಗೊಂಡ, ಮುಖಂಡರಾದ ಅಬ್ದುಲ್ ಹಮೀದ್ ಮುಶ್ರಿಫ್, ಪೂಜಾರಿ ಉಪಸ್ಥಿತರಿದ್ದರು.

Read More

ನಾಗಠಾಣ ವಿಧಾನಸಭೆ ಮತಕ್ಷೇತ್ರದ ಚುನಾವಣೆ ಪ್ರಚಾರ ಸಭೆಯಲ್ಲಿ ಸಚಿವ ಎಂ.ಬಿ.ಪಾಟೀಲ ಅಭಿಮತ ವಿಜಯಪುರ: ಜಿಲ್ಲೆಯ ಸಮಸ್ಯೆಗಳ ಬಗ್ಗೆ ಸಂಸತ್ತಿನಲ್ಲಿ ಧ್ವನಿ ಎತ್ತಿ ಕೇಂದ್ರದ ಗಮನ ಸೆಳೆಯಲು ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ಅವರನ್ನು ಬಹುಮತದಿಂದ ಗೆಲ್ಲಿಸುವುದು ಅಗತ್ಯವಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ.ರವಿವಾರ ನಗರದ ಐಶ್ವರ್ಯ ನಗರದಲ್ಲಿ ನಾಗಠಾಣ ವಿಧಾನಸಭೆ ಮತಕ್ಷೇತ್ರದ ಚುನಾವಣೆ ಪ್ರಚಾರ ಸಭೆಯನ್ನು ಉದ್ಘಾಟಿಸಿದ ಅವರು, ಕಾಂಗ್ರೆಸ್ ಅಭ್ಯರ್ಥಿ ಪ್ರೊ.ರಾಜು ಆಲಗೂರ ಪರ ಮತಯಾಚಿಸಿ ಮಾತನಾಡಿದರು.ದೇಶದಲ್ಲಿ ಬದಲಾವಣೆ ಮಾಡುವುದಾಗಿ 2014 ರಲ್ಲಿ ಮೋದಿ ದೊಡ್ಡ ಪ್ರಚಾರ ಮಾಡಿ ಅಧಿಕಾರಕ್ಕೆ ಬಂದರು. ಆದರೆ, ಕಳೆದ 10 ವರ್ಷಗಳಲ್ಲಿ ಅವರು ನೀಡಿರುವ ಯಾವ ಭರವಸೆಗಳೂ ಈಡೇರಿಲ್ಲ. ಅಚ್ಛೆ ದಿನ್, ಕಪ್ಪು ಹಣ ವಾಪಸ್, ಪ್ರತಿ ವರ್ಷ ಎರಡು ಕೋಟಿ ಉದ್ಯೋಗ ಸೃಷ್ಟಿ ಸೇರಿದಂತೆ ಯಾವುದೂ ಈಡೇರಿಲ್ಲ. ಬದಲಾಗಿ ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ, ಅಡುಗೆ…

Read More

ವಿಜಯಪುರ: ವಿಜಯಪುರ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಚುನಾವಣೆ ಪ್ರಚಾರ ಕಾರ್ಯಾಲಯವನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಉದ್ಘಾಟಿಸಿದರು.ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ ಅವರ ಚುನಾವಣೆ ಪ್ರಚಾರ ಚಟುವಟಿಕೆಗಳಿಗಾಗಿ ಈ ಕಾರ್ಯಾಲಯ ಪ್ರಾರಂಭಿಸಲಾಗಿದೆ ಎಂದರು.ಈ ಸಂದರ್ಭದಲ್ಲಿ ವಿಧಾನ ಪರಿಷತ ಶಾಸಕ ಪ್ರಕಾಶ ರಾಠೋಡ, ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜು ಆಲಗೂರ, ನಾಗಠಾಣ ಶಾಸಕ ವಿಠ್ಠಲ ಧೋಂಡಿಬಾ ಕಟಕದೊಂಡ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಂ. ಎಸ್. ಲೋಣಿ, ಉಪಾಧ್ಯಕ್ಷ ಡಾ.ಗಂಗಾಧರ ಸಂಬಣ್ಣಿ, ಕೆಪಿಸಿಸಿ ಕಾರ್ಯದರ್ಶಿ ಸಂಗಮೇಶ ಬಬಲೇಶ್ವರ, ಮಾಜಿ ಶಾಸಕರಾದ ಶರಣಪ್ಪ ಸುಣಗಾರ, ಡಾ. ಮಕ್ಬೂಲ ಬಾಗವಾನ, ಕಾಂಗ್ರೆಸ್ ಮುಖಂಡರಾದ ಅಬ್ದುಲ್ ಹಮೀದ್ ಮುಶ್ರಿಫ್, ವಸಂತ ಹೊನಮೋಡೆ, ಹೊನಮಲ್ಲ ಸಾರವಾಡ, ಸುರೇಶಗೌಡ ಪಾಟೀಲ, ಚಂದ್ರಕಾಂತ ಶೆಟ್ಟಿ ಮುಂತಾದವರು ಉಪಸ್ಥಿತರಿದ್ದರು.

Read More

ವಿಜಯಪುರ: ಜಗತ್ಪ್ರಸಿದ್ಧ ಕಲಾವಿದ ಲಿಯೋನಾರ್ಡ್ ಡಾ ವಿಂಚಿ ಕೇವಲ ಒಬ್ಬ ಕಲಾವಿದ ಅಲ್ಲದೆ ಪ್ರಖ್ಯಾತ ವಾಸ್ತುಶಿಲ್ಪಿ, ಅಂಗರಚನಾ ತಜ್ಞರಾಗಿದ್ದು, ವೈದ್ಯಕೀಯ ಕ್ಷೇತ್ರದಲ್ಲಿ ತನ್ನದೆ ಆದ ಮಹತ್ವದ ಸೇವೆ ಸಲ್ಲಿಸಿದ ಶ್ರೇಷ್ಠ ಕಲಾವಿದ ಇತಿಹಾಸಕಾರರಾಗಿದ್ದರು ಎಂದು ಡಾ. ಫ.ಗು ಹಳಕಟ್ಟಿ ಇಂಜಿನಿಯರಿಂಗ್ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಡಾ. ಅನುರಾಧಾ ಟಂಕಸಾಲಿ ಹೇಳಿದರು.ಸೋಮವಾರ ನಗರದ ಆರ್ಟ್ ಗ್ಯಾಲರಿಯಲ್ಲಿ ನಡೆದ ವಿಶ್ವದೃಶ್ಯಕಲಾ ದಿನಾಚರಣೆಯ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಅವರು ಮಾತನಾಡಿದರು.ನಮ್ಮ ದೇಶದ ಪ್ರಖ್ಯಾತ ಕಲಾವಿದ ರಾಜಾ ರವಿವರ್ಮ ಅವರ ಜನ್ಮದಿನವನ್ನು ನಮ್ಮ ದೇಶದ ಕಲಾ ದಿನವನ್ನಾಗಿ ಆಚರಿಸಬೇಕೆಂದು ಸಲಹೆ ನೀಡಿದರು.ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕ ಮಲ್ಲಿಕಾರ್ಜುನ ಭಜಂತ್ರಿ ಮತನಾಡಿ, ಕಲಾವಿದರು ಸರ್ವ ಸ್ವತಂತ್ರರು. ಕವಿ ಕಾಣದನ್ನು ಕಲಾವಿದ ಕಂಡಹಾಗೆ ಸಮಾಜಕ್ಕೆ ತನ್ನದೆ ದೃಶ್ಯಭಾಷೆಯಲ್ಲಿ ಸಂದೇಶಗಳನ್ನು ನೀಡುತಿದ್ದಾರೆ. ಅವರು ನಿಜವಾದ ಸಮಾಜದ ಆಸ್ತಿ ಎಂದರು.ಕಲಾವಿದ ರಾಜಾ ರವಿವರ್ಮ ಅವರ ಜನ್ಮದಿನಾಚರಣೆಗೆ ಸಂಪೂರ್ಣ ಸಹಾಯ ನೀಡುವುದಾಗಿ ಭರವಸೆ ನೀಡಿದರು.ಕಾರ್ಯಕ್ರಮದ ಅದ್ಯಕ್ಷತೆ ವಹಿಸಿದ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಿರಿಯ ಕಲಾವಿದ…

Read More

ಸಿಂದಗಿ: ದೇವರ ದಾಸಿಮಯ್ಯ ಅವರಂತಹ ವಚನಕಾರರು ಸಮಾಜವನ್ನು ಬಹಳ ಆಳವಾಗಿ ಅಧ್ಯಯನ ಮಾಡಿ, ಅದರ ಓರೆಕೋರೆಗಳನ್ನು ಸೂಕ್ಷ್ಮವಾಗಿ ಗ್ರಹಿಸಿ, ಅವುಗಳನ್ನು ತಮ್ಮ ವಚನಗಳ ಮೂಲಕ ತಿದ್ದಿದವರು ಎಂದು ತಹಶೀಲ್ದಾರ್ ಪ್ರದೀಪಕುಮಾರ ಹಿರೇಮಠ ಹೇಳಿದರು.ಪಟ್ಟಣದ ತಾಲೂಕು ಆಡಳಿತ ಕಚೇರಿಯಲ್ಲಿ ಹಮ್ಮಿಕೊಂಡ ದೇವರ ದಾಸಿಮಯ್ಯ ಜಯಂತಿಯಲ್ಲಿ ಅವರ ಭಾವಚಿತ್ರಕ್ಕೆ ಸಲ್ಲಿಸಿ ಮಾತನಾಡಿದ ಅವರು, ಇಡೀ ಮಾನವ ಸಮಾಜಕ್ಕೆ ಸನ್ಮಾರ್ಗವನ್ನು ತಮ್ಮ ವಚನಗಳ ಮೂಲಕ ತೋರಿಸಿದ ಆದ್ಯ ವಚನಕಾರ ದೇವರ ದಾಸಿಮಯ್ಯ ಎಲ್ಲ ಸಮುದಾಯಗಳಿಗೆ ಮಾದರಿಯಾಗಿದ್ದಾರೆ. ವಚನಗಳನ್ನು ಆಲಿಸುವುದರಿಂದ ಬದುಕಿನಲ್ಲಿ ಸ್ಫೂರ್ತಿ ಹೆಚ್ಚುತ್ತದೆ. ಸರಿಯಾದ ದಾರಿಯಲ್ಲಿ ನಡೆಯುವ ಮೂಲಕ ಬದುಕು ಸಾರ್ಥಕ ಮಾಡಿಕೊಳ್ಳಬೇಕು ಎಂದು ಹೇಳಿದರು.ಈ ವೇಳೆ ಶ್ಯಾಮಲಾ ಮಂದೇವಾಲ್ ಮಾತನಾಡಿದರು.ಇದೇ ಸಂದರ್ಭದಲ್ಲಿ ಗ್ರೇಡ್ ೨ ತಹಶೀಲ್ದಾರ್ ಇಂದ್ರಾಬಾಯಿ ಬಳಗಾನೂರ, ಕಂದಾಯ ನಿರೀಕ್ಷಿಕ ಆಯ್.ಎ. ಮಕಂದಾರ, ಪವನಕುಮಾರ ಬೇನೂರ, ಕಾಶೀನಾಥ ತೇರದಾಳ, ರಮೇಶ ರೊಟ್ಟಿ, ಶರಣು ರೊಟ್ಟಿ, ಶರಣು ಕುಂಟೋಜಿ, ಮಲ್ಲು ಸೊನ್ನದ, ಸಿದ್ದಪ್ಪ ಶಹಾಪುರ ಸೇರಿದಂತೆ ಸಿಬ್ಬಂದಿಗಳು ಇದ್ದರು.

Read More

ಸಿಂದಗಿ: ಪಕ್ಷವನ್ನು ತಳಮಟ್ಟದಿಂದ ಕಟ್ಟಿ ಬೆಳೆಸುವಲ್ಲಿ ಯುವಕರ ಪಾತ್ರ ಬಹಳ ಮುಖ್ಯ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.ಪಟ್ಟಣದ ಮನಗೂಳಿ ಪೆಟ್ರೋಲ್ ಬಂಕಲ್ಲಿ ಯುವ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆಯಾದ ಗುರುಬಸಪ್ಪ (ಕುಮಾರ) ದೇಸಾಯಿ ಅವರಿಗೆ ಸನ್ಮಾನಿಸಿ ಮಾತನಾಡಿದ ಅವರು, ಸಿಂದಗಿ ಮತಕ್ಷೇತ್ರದ ಕಾಂಗ್ರೆಸ್ ಯುವ ಘಟಕದ ಅಧ್ಯಕ್ಷರನ್ನಾಗಿ ತಾಲೂಕಿನ ಬಬಲೇಶ್ವರ ದೇಸಾಯಿ ಅವರನ್ನು ಮಹ್ಮದ ಹ್ಯಾರಿಸ್ ನಲಪಾಡರವರ ಆದೇಶ ಮೇರೆಗೆ ಆಯ್ಕೆ ಮಾಡಲಾಗಿದೆ. ಯುವಕರನ್ನು ಒಗ್ಗೂಡಿಸುವುದು ಪಕ್ಷದ ಮುಖಂಡರ ಹೊಣೆಯವಾಗಿದೆ. ಕಾರ್ಯಕರ್ತರ ಕುಂದುಕೊರತೆಗಳನ್ನು ಆಲಿಸಿ, ಸ್ಪಂದಿಸಿ ಸಹಕಾರ ನೀಡಬೇಕಿದೆ ಎಂದರು.ಇದೇ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುರೇಶ ಪೂಜಾರಿ, ಮಾಜಿ ಜಿಪಂ ಸದಸ್ಯ ಮಹಾಂತಗೌಡ ಪಾಟೀಲ, ಭೀಮನಗೌಡ ಬಿರಾದಾರ, ಸತೀಶಗೌಡ ಬಿರಾದಾರ, ಪರಶುರಾಮ ಕಾಂಬಳೆ, ಮಹೇಶ ಮನಗೂಳಿ, ಷಣ್ಮುಖ ಹಿರೇಮಠ, ಮಲ್ಲಿಕಾರ್ಜುನ ಶಂಬೇವಾಡ, ಶ್ರೀಶೈಲ ದೇಸಾಯಿ, ದವಲತ ದೊಡಮನಿ, ಈರಣ್ಣ ನಾಯ್ಕೊಡಿ, ಮಲಕಣ್ಣ ನಂದೂರ, ಬೀರಪ್ಪ ಪೂಜಾರಿ, ಪ್ರಕಾಶ ಕರ್ಪೂರಮಠ, ಕುಪೇಂದ್ರಗೌಡ ಬಿರಾದಾರ, ಮನ್ಸೂರ ಮುಜಾವರ, ಅನಿಲ ದೊಡಮನಿ ಸೇರಿದಂತೆ…

Read More

ಚಿಮ್ಮಡ: ಬಾವಿ ಗೌರಮ್ಮಎಂದೇ ಖ್ಯಾತಳಾದ ಸಿರಸಿಯ ಗೌರಿ ಸಿ.ನಾಯ್ಕ ಅವರು ಚಿಮ್ಮಡ ಗ್ರಾಮದ ವಿರಕ್ತಮಠದಿಂದ ಅಕ್ಕಮಹಾದೇವಿ ಜಯಂತಿ ಹಾಗೂ ವಿರಕ್ರ ಮಹಾಸ್ವಾಮಿಗಳ ಸ್ಮರಣೋತ್ಸವದ ಅಂಗವಾಗಿ ಪ್ರತಿ ವರ್ಷನೀಡುವ ಅಕ್ಕ ಪ್ರಶಸ್ತಿಗೆ ಭಾಜನರಾಗಿದ್ದಾರೆ.ಏಕಾಂಗಿಯಾಗಿ ಬಾವಿಗಳನ್ನು ತೋಡಿ ಮನೆಗಳಿಗೆ, ಅಂಗನವಾಡಿ ಮಕ್ಕಳಿಗೆ ನೀರಿನಆಸರೆಯಾಗಿ ನಿಂತ ೫೭ ವರ್ಷ ವಯಸ್ಸಿನ ಗೌರಮ್ಮಳ ಏಕಾಂಗಿ ಸಾಹಸಕ್ಕೆ ಈ ಪ್ರಶಸ್ತಿ ಅರಸಿಕೊಂಡು ಬಂದಿದೆ. ಏ.೨೩ ರಂದು ಶ್ರೀಮಠದಲ್ಲಿ ನಡೆಯುವ ಬ್ರಹತ್ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ವಿರಕ್ತಮಠದ ಪ್ರಭು ಮಹಾಸ್ವಾಮಿಗಳು ತಿಳಿಸಿದ್ದಾರೆ.

Read More

ಚಿಮ್ಮಡ: ನೇಕಾರರಿಗೆ ಕಾಂಗ್ರೆಸ್ ಪಕ್ಷ ನೀಡಿದಷ್ಟು ಸೌಲಭ್ಯಗಳನ್ನು ಇತಿಹಾಸದಲ್ಲಿ ಬೇರಾವ ಪಕ್ಷವೂ ನೀಡಿಲ್ಲವೆಂದು ನೇಕಾರರ ಒಕ್ಕೂಟದ ಜಿಲ್ಲಾಧ್ಯಕ್ಷ ರವೀಂದ್ರ ಕಲಬುರ್ಗಿ ಹೇಳಿದರು.ಗ್ರಾಮದಲ್ಲಿ ಶುಕ್ರವಾರ ಹಮ್ಮಿಕೊಳ್ಳಲಾಗಿದ್ದ ನೇಕಾರರ ಸಭೆಯಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದ ಅವರು ಕಾಂಗ್ರೆಸ್ ಸರಕಾರ ರಾಜ್ಯದ ಜನರಿಗಾಗಿ ಘೋಷಣೆ ಮಾಡಿದಂತೆ ಐದು ಗ್ಯಾರಂಟಿಗಳನ್ನು ಜಾರಿಗೆ ತರುವ ಮೂಲಕ ಹೇಳಿದಂತೆ ನಡೆದುಕೊಂಡಿದೆ, ನೇಕಾರರ ವಿದ್ಯುತ್ ಮಗ್ಗಗಳಿಗೂ ಉಚಿತ ವಿದ್ಯುತ್ ನೀಡುತ್ತಿದೆ ಅಲ್ಲದೇ ನೇಕಾರ ಸಮ್ಮಾನ ಯೋಜನೆಯಡಿ ಐದು ಸಾವಿರ ರೂ. ನೀಡುತ್ತಿದೆ. ಇಂಥಹ ಹಲವಾರು ಯೋಜನೆಗಳ ಮೂಲಕ ಬಡವರಿಗೆ, ನೇಕಾರರಿಗೆ ಶ್ರೀರಕ್ಷೆಯಾಗಿರುವ ಪಕ್ಷಕ್ಕೆ ಪ್ರಸಕ್ತ ಸಾಲಿನ ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಸಂಯುಕ್ತಾ ಪಾಟೀಲ ಅವರಿಗೆ ಮತವನ್ನು ನೀಡುವ ಮೂಲಕ ಬೆಂಬಲಿಸಬೇಕಾಗಿದೆ ಎಂದರು.ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಮುರುಗೇಶ ಕಡ್ಲಿಮಟ್ಟಿ ಮಾತನಾಡಿ ಕಾಂಗ್ರೆಸ್ ಪಕ್ಷ ಬದ್ದತೆಗೆ ಹೆಸರಾಗಿದೆ ಸಚಿವ ಶಿವಾನಂದ ಪಾಟೀಲರು ನೇಕಾರರ ಕುರಿತ ಕಳಕಳಿ ಹೊಂದಿದವರಾಗಿದ್ದು ಅಂಥವರನ್ನು ಬೆಂಬಲಿಸಿದಲ್ಲಿ ಬಡ ನೇಕಾರರಿಗೆ ಅನುಕೂಲವಾಗಲಿದೆ ಎಂದರು..ನೇಕಾರರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಸಂಗಪ್ಪ…

Read More