Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಉದಯರಶ್ಮಿ ದಿನಪತ್ರಿಕೆ ಕೊಲ್ಹಾರ: ಈ ಭಾಗದ ಹೆಚ್ಚು ಪ್ರದೇಶದಲ್ಲಿ ಉಳ್ಳಾಗಡ್ಡಿ ಬೆಳೆ ಬೆಳೆದಿದ್ದಾರೆ ನೀರು ಹೆಚ್ಚು ಬೇಕು. ರೈತರ ಬೆಳೆಗಳಿಗೆ ಮುಳವಾಡ 1 ನೇ ಹಂತದ ಪೂರ್ವ ಹಾಗೂ ಪಶ್ಚಿಮ ಕಾಲುವೆಗಳಿಗೆ ನೀರು ಹರಿಸಬೇಕು. ಕೆನಾಲ್ ಮೇಲಿನ ಪಕ್ಕದ ರಸ್ತೆಗಳು ಹದಗೆಟ್ಟು ಹೋಗಿದ್ದು ಅವುಗಳನ್ನು ಈ ಭಾಗದ ಶಾಸಕ ಸಚಿವ ಶಿವಾನಂದ ಪಾಟೀಲ ಅವರು ವಿಶೇಷ ಅನುದಾನ ತಂದು ಸುಧಾರಣೆ ಮಾಡಿಸುವ ಕೆಲಸ ಮಾಡಬೇಕಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ ರಾಜ್ಯಾಧ್ಯಕ್ಷ ಚೂನಪ್ಪ ಪೂಜಾರಿ ಹೇಳಿದರು.ತಾಲೂಕಿನ ಮಟ್ಟಿಹಾಳ ಕ್ರಾಸ ಬಳಿ ಇರುವ ಕೃಷ್ಣಾ ಭಾಗ್ಯ ಜಲ ನಿಗಮ ನಿಯಮಿತದ ಮುಳವಾಡ ಏತ ನೀರಾವರಿ ವಿಭಾಗ-ನಂ.1ರ ಕಾರ್ಯನಿರ್ವಾಹಕ ಅಭಿಯಂತರ ರವರ ಕಛೇರಿ ಮುಂದೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಸಂಘಟನೆಯ ನೇತೃತ್ವದಲ್ಲಿ ನಡೆದ ರೈತರ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾಧ್ಯಮದವರೊಂದಿಗೆ ಮಾತನಾಡಿದರು.ಈ ಭಾಗದ ರೈತರ ಜಮೀನುಗಳಲ್ಲಿ ಕಾಲುವೆ ಹಾಯ್ದು ಹೋಗಿವೆ ಅದರಿಂದ ರೈತರು ಜಮೀನು ಕಳೆದುಕೊಂಡಿದ್ದಾರೆ.…
ಉದಯರಶ್ಮಿ ದಿನಪತ್ರಿಕೆ ಚಡಚಣ: ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಮಾತೃ ಡಾ. ಹೇಮಾವತಿ ವಿ. ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಜನರ ಸಹಭಾಗಿತ್ವದೊಂದಿಗೆ ರಾಜ್ಯವ್ಯಾಪಿಯಾಗಿ ಶ್ರದ್ಧಾ ಕೇಂದ್ರಗಳ ಬೃಹತ್ ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.“ನಮ್ಮೂರು – ನಮ್ಮ ಶ್ರದ್ಧಾ ಕೇಂದ್ರ” ಎಂಬ ಧ್ಯೇಯವಾಕ್ಯದೊಂದಿಗೆ ಸ್ವಯಂಸೇವಕರು, ಸ್ವಸಹಾಯ ಸಂಘಗಳ ಸದಸ್ಯರು ಹಾಗೂ ಸ್ಥಳೀಯರು ಕೈಜೋಡಿಸಿ ಧಾರ್ಮಿಕ ಶ್ರದ್ಧಾ ಕೇಂದ್ರಗಳನ್ನು ಸ್ವಚ್ಛತೆಗೊಳಿಸಿದರು.ಮಕರ ಸಂಕ್ರಾಂತಿ, ಅಂದರೆ ಉತ್ತರಾಯಣ ಪುಣ್ಯಕಾಲದ ಅಂಗವಾಗಿ ಜನವರಿ 14ರಂದು ಪೂಜಾಮಂದಿರಗಳು ಸ್ವಚ್ಛತೆ ಮತ್ತು ಪವಿತ್ರತೆಯಿಂದ ಕೂಡಿರಬೇಕು ಎಂಬುದು ಪೂಜ್ಯ ವೀರೇಂದ್ರ ಹೆಗ್ಗಡೆಯವರ ಆಶಯವಾಗಿದ್ದು, ಅದರಂತೆ ಈ ಕಾರ್ಯಕ್ರಮವನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಲಾಯಿತು.ಚಡಚಣ ವಲಯದಲ್ಲಿ ಶ್ರೀ ಸಂಗಮೇಶ್ವರ ದೇವಸ್ಥಾನ, ಶ್ರೀ ಲಕ್ಷ್ಮಿ ದೇವಸ್ಥಾನ, ಶ್ರೀ ಎಲ್ಲಮ್ಮ ದೇವಸ್ಥಾನ, ಶ್ರೀ ಶಂಕರಲಿಂಗ ದೇವಸ್ಥಾನ, ಶ್ರೀ ಪರಮಾನಂದ ದೇವಸ್ಥಾನ, ಶ್ರೀ ಮಾತಾಂಗಿ ದೇವಸ್ಥಾನ, ಶ್ರೀ ಮಹಾದೇವ ಮಂದಿರ, ನಿವರಗಿ ಶ್ರೀ ಮಹಾಲಕ್ಷ್ಮಿ ದೇವಸ್ಥಾನ ಹಾಗೂ ಹತ್ತಳ್ಳಿಯ ಶ್ರೀ ಜಕ್ಕರಾಯ ದೇವಸ್ಥಾನಗಳಲ್ಲಿ ಸ್ವಚ್ಛತಾ…
ಉದಯರಶ್ಮಿ ದಿನಪತ್ರಿಕೆ ಬೆಂಗಳೂರು: ಬೆಂಬಲ ಬೆಲೆ ಯೋಜನೆಯಲ್ಲಿ ಶೇಂಗಾ ಸೇರಿದಂತೆ ಹಲವು ಕೃಷಿ ಉತ್ಪನ್ನಗಳ ಖರೀದಿ ಅವಧಿ ವಿಸ್ತರಣೆ ಮಾಡಲಾಗಿದೆ ಎಂದು ಜವಳಿ, ಕಬ್ಬು ಅಭಿವೃದ್ಧಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ತಿಳಿಸಿದ್ದಾರೆಶೇಂಗಾ ಮತ್ತು ಸೋಯಾಬೀನ್ ಖರೀದಿ ಅವಧಿಯನ್ನು ಜನವರಿ 26ರವರೆಗೆ ಹಾಗೂ ಹೆಸರುಕಾಳು, ಉದ್ದಿನಕಾಳು ಮತ್ತು ಸೂರ್ಯಕಾಂತಿ ಖರೀದಿ ಅವಧಿಯನ್ನು ಜನವರಿ 22ರವರೆಗೆ ವಿಸ್ತರಣೆ ಮಾಡಲಾಗಿದೆ.ಈ ಎಲ್ಲ ಉತ್ಪನ್ನಗಳ ಖರೀದಿ ಅವಧಿ ಈಗಾಗಲೇ ಅಂತ್ಯವಾಗಿದ್ದು, ಖರೀದಿ ಪ್ರಕ್ರಿಯೆ ಅವಧಿ ವಿಸ್ತರಣೆ ಮಾಡಬೇಕು ಎಂಬ ಬೇಡಿಕೆ ಬಂದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಸದ್ಗುರು ಶ್ರೀ ಚಿನ್ಮಯಮೂರ್ತಿ ತ್ರಿಮೂರ್ತಿ ಮಹಾಶಿವಯೋಗಿಗಳ 32ನೇ ಪುಣ್ಯಾರಾಧನೆ ಮಹೋತ್ಸವದ ಅಂಗವಾಗಿ ಇಂಡಿ ತಾಲೂಕಿನ ಗೊಳಸಾರದಲ್ಲಿ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯದ ಆಸ್ಪತ್ರೆಯ ವತಿಯಿಂದ ಪ್ರಾಥಮಿಕ ಆರೋಗ್ಯ ಕೇಂದ್ರ ಚಿಕ್ಕಬೇನೂರ ಮತ್ತು ಅಗರಖೇಡ ಸಹಯೋಗದಲ್ಲಿ ಉಚಿತ ಆರೋಗ್ಯ ತಪಾಸಣೆ ಶಬಿರಿ ಮತ್ತು ಸ್ವಯಂಪ್ರೇರಿತ ರಕ್ತದಾನ ಶಿಬಿರ ಸೋಮವಾರ ನಡೆಯಿತು.ಶ್ರೀ ತ್ರಿಮೂರ್ತಿ ಮಹಾಶಿವಯೋಗಿಗಳ ಭಾವಚಿತ್ರಕ್ಕೆ ಪೂಜಿಸುವ ಮತ್ತು ಸಸಿಗೆ ನೀರುಣಿಸುವ ಮೂಲಕ ಅಭಿನವ ಪುಂಡಲಿಂಗ ಶ್ರೀಗಳು ಚಾಲನೆ ನೀಡಿದರು.ಈ ಸಂದರ್ಭದಲ್ಲಿ ಮಾತನಾಡಿದ ಶಿಬಿರದ ಸಂಚಾಲಕ ಮತ್ತು ಆಸ್ಪತ್ರೆಯ ಶಸ್ತ್ರ ಚಿಕಿತ್ಸೆ ವಿಭಾಗದ ಮುಖ್ಯಸ್ಥ ಡಾ. ಮಂಜುನಾಥ ಕೋಟೆಣ್ಣವರ, ಗೊಳಸಾರ ಮಠದ ಜನಹಿತದ ಕಾರ್ಯಗಳು ಅನನ್ಯ. ಪ್ರತಿ ವರ್ಷ ಸದ್ಗುರು ಶ್ರೀ ಪುಂಡಲಿಂಗೇಶ್ವರ ಮತ್ತು ಶ್ರೀ ತ್ರಿಮೂರ್ತಿ ಮಹಾಶಿವಯೋಗಿಗಳ ಪುಣ್ಯಾರಾಧನೆ ಮಹೋತ್ಸವದ ಅಂಗವಾಗಿ ವರ್ಷದಲ್ಲಿ ಎರಡು ಸಲ ಬಿ.ಎಲ್.ಡಿ.ಇ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ಶಿಬಿರ ನಡೆಸಲು ಅವಕಾಶ ನೀಡುತ್ತಾರೆ. ಭಕ್ತರ ಆರೋಗ್ಯ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಶೈಕ್ಷಣಿಕ ಇತಿಹಾಸದಲ್ಲಿ ಅಚ್ಚಳಿಯದ ಹೆಸರಾಗಿ ಉಳಿಯುವ ಡಾ. ಶಮ್ಶುದ್ದೀನ್ ಎ. ಪುಣೆಕರ್ ಅವರ ನಿಧನಕ್ಕೆ ಕೈಗಾರಿಕೆ ಹಾಗೂ ಮೂಲಸೌಕರ್ಯ ಅಭಿವೃದ್ಧಿ ಹಾಗೂ ವಿಜಯಪುರ ಜಿಲ್ಲೆ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ್ ತೀವ್ರ ಕಂಬನಿ ಮಿಡಿದಿದ್ದಾರೆ.ಈ ಕುರಿತು ಮಂಗಳವಾರ ಪ್ರಕಟಣೆಯಲ್ಲಿ ತಿಳಿಸಿದ ಅವರು, ಸರ್ಕಾರಿ ಉದ್ಯೋಗವನ್ನು ತ್ಯಜಿಸಿ, ಗುಣಮಟ್ಟದ ಹಾಗೂ ಕಡಿಮೆ ವೆಚ್ಚದ ಶಿಕ್ಷಣವನ್ನು ಸಮಾಜದ ಅಂಚಿನವರಿಗೂ, ವಿಶೇಷವಾಗಿ ಮಹಿಳೆಯರಿಗೆ ತಲುಪಿಸುವ ಧ್ಯೇಯದಿಂದ ತಮ್ಮ ಬದುಕನ್ನೇ ಅರ್ಪಿಸಿದರು.1969ರಲ್ಲಿ ಒಂದು ಬಾಡಿಗೆ ಮನೆಯಲ್ಲಿ ಕೆಲವೇ ವಿದ್ಯಾರ್ಥಿಗಳೊಂದಿಗೆ ಸಿಕ್ಯಾಬ್ (Socio Economic Cultural Association of Bijapura – SECAB) ಸಂಸ್ಥೆಯನ್ನು ಸ್ಥಾಪಿಸಿದರು.ನಂತರದ ದಿನಗಳಲ್ಲಿ ಮಹಿಳೆಯರಿಗಾಗಿ ಪಿಯುಸಿ ಹಾಗೂ ಡಿಗ್ರಿ ಕಾಲೇಜುಗಳನ್ನು ಆರಂಭಿಸಿ, ಅವಿಭಜಿತ ವಿಜಯಪುರ ಜಿಲ್ಲೆಯಲ್ಲಿ ಮೊದಲ ಮಹಿಳಾ ಕಾಲೇಜು ಸ್ಥಾಪಿಸಿದ ಗೌರವಕ್ಕೆ ಪಾತ್ರರಾದರು.ಕಾಲಕ್ರಮೇಣ ಡಿಪ್ಲೊಮ ಸೇರಿದಂತೆ 26ಕ್ಕೂ ಅಧಿಕ ಶಿಕ್ಷಣ ಸಂಸ್ಥೆಗಳ ಮಹಾ ವೃಕ್ಷವನ್ನೇ ಬೆಳೆಸಿದರು. ಅಹಂಕಾರವಿಲ್ಲದ ವ್ಯಕ್ತಿತ್ವ, ಧರ್ಮನಿರಪೇಕ್ಷ ಚಿಂತನೆ ಮತ್ತು ಖ್ಯಾತಿಗಿಂತ ಕಾರ್ಯಕ್ಕೆ ಮಹತ್ವ ನೀಡಿದ…
ಶಾಸಕ ಯತ್ನಾಳ ಅವರಿಂದ ಫಲಪುಷ್ಪ ಪ್ರದರ್ಶನ-ತೋಟಗಾರಿಕೆ ಅಭಿಯಾನ ಉದ್ಘಾಟನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆ, ಜಿಲ್ಲಾ ತೋಟಗಾರಿಕೆ ಸಂಘ, ಕರ್ನಾಟಕ ರಾಜ್ಯ ಲಿಂಬೆ ಅಭಿವೃದ್ದಿ ಮಂಡಳಿ ಹಾಗೂ ಜಿಲ್ಲಾ ಹಾಪ್ಕಾಮ್ಸ್ ಇವರ ಸಹಯೋಗದೊಂದಿಗೆ ಇದೇ ಜನವರಿ ೧೩ರಿಂದ ೧೫ರವರೆಗೆ ನಗರದ ಸ್ಟೇಶನ ರಸ್ತೆಯಲ್ಲಿರುವ ಬಸವವನ ಆವರಣದಲ್ಲಿ ಹಮ್ಮಿಕೊಂಡ ಫಲಪುಷ್ಪ ಪ್ರದರ್ಶನ ಹಾಗೂ ತೋಟಗಾರಿಕೆ ಅಭಿಯಾನಕ್ಕೆ ನಗರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ಉದ್ಘಾಟಿಸಿ, ಎಲ್ಲ ಮಳಿಗೆಗಳನ್ನು ವೀಕ್ಷಣೆ ಮಾಡಿದರು.ಫಲಪುಸ್ಪ ಪ್ರದರ್ಶನ ನೋಡುಗರ ಕಣ್ಮನ ಸೆಳೆಯುತ್ತಿವೆ. ವಿವಿಧ ಹೂ-ಹಣ್ಣು ಹಾಗೂ ತರಕಾರಿಗಳಿಂದ ನಿರ್ಮಿಸಲಾದ ಅಪರೂಪದ ಕಲಾಕೃತಿಗಳು ಜನಾಕರ್ಷಣೆಯವಾಗಿವೆ. ಒಂದಕ್ಕಿಂತ ಒಂದು ವಿಭಿನ್ನ ಆಲೋಚನೆ, ಸೃಜನಶೀಲತೆ ಹಾಗೂ ನೈಸರ್ಗಿಕ ಸೌಂದರ್ಯವನ್ನು ಸೃಷ್ಟಿಸುವ ಸನ್ನಿವೇಶ ಈ ಪ್ರದರ್ಶನದಲ್ಲಿ ವೀಕ್ಷಿಸಬಹುದಾಗಿದ್ದು, ಸಾರ್ವಜನಿಕರಿಂದ ಮೆಚ್ಚುಗೆ ಪಡೆಯುತ್ತಿದೆ.ಪ್ರದರ್ಶನದಲ್ಲಿ ಹೂವಿನಲ್ಲಿ ಅರಳಿದ ಗೋಲಗುಮ್ಮಟ, ಗಿಡದಲ್ಲಿ ಕುಳಿತ ನಾಟ್ಯ ಮಯೂರಿ, ವೃಕ್ಷಮಾತೆ ಸಾಲುಮರದ ತಿಮ್ಮಕ್ಕ, ಹೂವಿನಲ್ಲಿ ಮೂಡಿಬಂದ ಡಾಲ್ಫಿನ್, ಪುಷ್ಪ ಮಾರಾಟಕ್ಕೆ ಬಂದ ಪುಷ್ಪಲತಾ ಚಿತ್ರ, ನೀರಿನಿಂದ…
ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಸಾಹಿತ್ಯ ಮತ್ತು ಗ್ರಂಥಗಳ ಅಧ್ಯಯನ ಮಾಡುವುದರಿಂದ ಒಬ್ಬ ಸಾಮಾನ್ಯ ಮನುಷ್ಯ ಅಸಾಮಾನ್ಯ ಸಾಧನೆ ಮಾಡಬಲ್ಲ ಎಂದು ಯುವಾ ಬ್ರಿಗೇಡ್ ವಿಭಾಗ ಸಂಚಾಲಕ ರಾಜು ಪಾಟೀಲ ಹೇಳಿದರು.ಸಿಂದಗಿ ಮತಕ್ಷೇತ್ರದ ಕಡಣಿ ಗ್ರಾಮದ ಶ್ರೀ ಪರಮಾನಂದ ಭೊಗಲಿಂಗೇಶ್ವರ ಪಪೂ ಕಾಲೇಜಿನಲ್ಲಿ ಯುವಾ ಬ್ರಿಗೇಡ್ ವತಿಯಿಂದ ವಿವೇಕಾನಂದ ಜಯಂತಿ ನಿಮಿತ್ತ ಹಮ್ಮಿಕೊಂಡ ಅರಿವೇ ಗುರು ಕಾರ್ಯಕ್ರಮದಲ್ಲಿ ಕಾಲೇಜಿಗೆ ೨೦೦ ಪುಸ್ತಕ ಹಾಗೂ ಒಂದು ಟ್ರೇಜರಿ (ಖಜಾನೆ) ಯನ್ನು ಗ್ರಂಥಾಲಯಕ್ಕೆ ಕೊಡುಗೆಯಾಗಿ ನೀಡಿ ಅವರು ಮಾತನಾಡಿದರು.ಈ ವೇಳೆ ಆಲಮೇಲ ತಾಲೂಕ ಮಕ್ಕಳ ಸಾಹಿತ್ಯ ಪರಿಷತ್ ಅಧ್ಯಕ್ಷ ಲಕ್ಷ್ಮಿಪುತ್ರ ಕಿರಣಳ್ಳಿ, ಯುವಾ ಬ್ರಿಗೇಡ್ ವಿಭಾಗ ಸಹ ಸಂಚಾಲಕರು ಶಿವಮೂರ್ತಿ ಕಾಟಕರ ಪ್ರಸ್ತಾವಿಕ ಮಾತನಾಡಿದರು.ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷ ಲಾಳಸಂಗಿ, ಪ್ರಾಚಾರ್ಯರು ರಮೇಶ ಗಂಗನಳ್ಳಿ, ಮುಖ್ಯ ಗುರುಗಳು ಗಂಗನಳ್ಳಿ, ಜಿಲ್ಲಾ ಸಂಚಾಲಕ ಮಡಿವಾಳ ವಾಲಿಕಾರ, ಪರಶುರಾಮ ಭಜಂತ್ರಿ, ಶಿವರಾಜ ಜೋಗೂರ, ಪ್ರಭಾಕರ ಸೇರಿದಂತೆ ಬೋಧಕ ಬೋಧಕೇತರ ಸಿಬ್ಬಂದಿಗಳು ಇದ್ದರು.
ವಿಜಯಪುರದ ಎಕ್ಸಲಂಟ್ ಕಾಲೇಜಿನಲ್ಲಿ ರಾಷ್ಟ್ರೀಯ ಯುವದಿನ | ಸಂಸ್ಥಾಪಕ ಚೇರಮನ್ ಬಸವರಾಜ ಕೌಲಗಿ ಅಭಿಮತ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜ್ಞಾನವನ್ನು ಹೊರತುಪಡಿಸಿ ಎಲ್ಲವನ್ನು ತೊರೆದವನು ಸನ್ಯಾಸಿಯಾಗುತ್ತಾನೆ. ಆದರೆ ಎಲ್ಲ ಸನ್ಯಾಸಿಗಳು ಸಹ ವೀರ ಸನ್ಯಾಸಿಗಳು ಆಗುವುದಕ್ಕೆ ಸಾಧ್ಯವಿಲ್ಲ. ಇಂದ್ರಿಯಗಳ ಮೇಲೆ ಗೆಲುವು ಸಾಧಿಸಿ, ಭಾರತದ ಜ್ಞಾನ ಪರಂಪರೆಯನ್ನು ಜಗತ್ತಿಗೆ ಪರಿಚಯಿಸಿದ ಸ್ವಾಮಿ ವಿವೇಕಾನಂದರು ವೀರ ಸನ್ಯಾಸಿ ವಿವೇಕಾನಂದ ಎಂದು ಕರೆಸಿಕೊಂಡರು. ಅಂದಿನಿಂದ ಇಂದಿನ ವರೆಗೂ ಯುವಕರ ಪಾಲಿನ ಚೈತನ್ಯವಾಗಿ ಗುರುತಿಸಿಕೊಂಡರು ಎಂದು ಎಕ್ಸಲಂಟ್ ಸಮೂಹ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕ ಚೇರಮನ್ ಬಸವರಾಜ ಕೌಲಗಿ ಹೇಳಿದರು.ವೀರ ಸನ್ಯಾಸಿ ವಿವೇಕಾನಂದರ ಜನ್ಮ ದಿನದ ಅಂಗವಾಗಿ ನಗರದ ಎಕ್ಸಲಂಟ ವಿಜ್ಞಾನ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ರಾಷ್ಟ್ರೀಯ ಯುವದಿನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಧಾರವಾಡದ ಎಕ್ಸಲಂಟ್ ನೀಟ್ ಅಕಾಡೆಮಿಯ ಪ್ರಾಂಶುಪಾಲ ಡಾ.ಜಗದೀಶ ಚಿತ್ತರಗಿ; ಯುವಕರಲ್ಲಿ ಜಾಗೃತಿ ಮೂಡಿಸಿದ ಸ್ವಾಮಿ ವಿವೇಕಾನಂದರು ಇಂದು ದೇಹದಿಂದ ದೂರಾಗಿದ್ದರು ಸಹ ಅವರ ವಿಚಾರ…
ನಮ್ಮಲ್ಲಿ ಯಾವ ಗೊಂದಲ ಇಲ್ಲ | ಊಹಾಪೋಹ ಚರ್ಚೆ ಕೇವಲ ಮಾಧ್ಯಮದ ಸೃಷ್ಟಿ | ಸಿಎಂ ಸಿದ್ದರಾಮಯ್ಯ ಹೇಳಿಕೆ ಮೈಸೂರು: ರಾಜ್ಯ ಕಾಂಗ್ರೆಸ್ ನಲ್ಲಿ ಮತ್ತೆ ನಾಯಕತ್ವ ಬದಲಾವಣೆಯ ಚರ್ಚೆ ಜೋರಾಗಿದ್ದು, ಒಂದು ಕಡೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕೊಟ್ಟ ಮಾತು ನೆನಪಿಸುತ್ತಿದ್ದರೆ ಮತ್ತೊಂದು ಕಡೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೈಕಮಾಂಡ್ ನಾಯಕರ ಮಾತೇ ಅಂತಿಮ ಎನ್ನುತ್ತಿದ್ದಾರೆ.ಸಿಎಂ ಕುರ್ಚಿ ಕಾಳಗದ ನಡುವೆಯೇ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಅವರು ಮಂಗಳವಾರ ಮೈಸೂರಿನ ಮಂಡಕಳ್ಳಿಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿಯನ್ನ ಅವರನ್ನು ಜಂಟಿಯಾಗಿ ಸ್ವಾಗತಿಸಿದರು.ತಮಿಳುನಾಡಿಗೆ ತೆರಳಲು ದೆಹಲಿಯಿಂದ ವಿಶೇಷ ವಿಮಾನದ ಮೂಲಕ ಮೈಸೂರಿಗೆ ಆಗಮಿಸಿದ ರಾಹುಲ್ ಗಾಂಧಿ ಅವರಿಗೆ ಸಿಎಂ ಸಿದ್ದರಾಮಯ್ಯ ಅವರು ಪುಷ್ಪಗುಚ್ಛ ನೀಡಿ ಸ್ವಾಗತಿಸಿ, ಮೈಸೂರು ಅರಮನೆ ಮಾದರಿಯನ್ನು ಉಡುಗೊರೆಯಾಗಿ ನೀಡಿದರು. ಈ ವೇಳೆ ಸಿಎಂ ಹಾಗೂ ಡಿಸಿಎಂ ಕೆಲ ನಿಮಿಷಗಳ ಕಾಲ ರಾಹುಲ್ ಗಾಂಧಿ ಜತೆ ಮಹತ್ವದ ಚರ್ಚೆ ನಡೆಸಿದ್ದಾರೆ…
ಲೇಖನ- ಮಲ್ಲಪ್ಪ ಸಿ. ಖೊದ್ನಾಪೂರ (ತಿಕೋಟಾ)ವಿಜಯಪುರ ಉದಯರಶ್ಮಿ ದಿನಪತ್ರಿಕೆ ಬಸವಾದಿ ಶರಣರು ಸಮಾಜದಲ್ಲಿ ಸಮಾನತೆ, ಸಮಷ್ಠಿ ಭಾವ ಮತ್ತು ಭಾವೈಕ್ಯತೆಯನ್ನು ಮೂಡಿಸುತ್ತಾ, ಸಾಮಾಜಿಕ ಸುಧಾರಣೆ ಮಾಡುವಲ್ಲಿ ಶ್ರಮಿಸಿದವರು. ವಚನಕಾರರು ತಮ್ಮ ವಚನ ಸಿದ್ದಾಂತದ ಮೂಲಕ ಸಮಾಜದಲ್ಲಿನ ಲಿಂಗ, ಜಾತಿ, ಮತ, ಪಂಥ, ಪಂಗಡಗಳ ಭೇದಗಳನ್ನು ತೊಲಗಿಸುವಲ್ಲಿ ಹೋರಾಡಿದರು. ಸಾಮಾಜಿಕ ಅರಿವು, ಧರ್ಮತತ್ವ ಮತ್ತು ವೈಯಕ್ತಿಕ ಬದುಕಿನ ಆಳವಾದ ಚಿಂತನೆಗಳನ್ನು ಪ್ರತಿಪಾದಿಸುತ್ತಾ, ಸಮುದಾಯದ ಒಳಿತಿಗಾಗಿ ಕೆರೆ ಕಟ್ಟೆ ನಿರ್ಮಾಣದಂತಹ ಕರ್ಮಯೋಗವನ್ನು ಮರೆದ ಶ್ರೇಷ್ಠ ಶರಣರೆಂದರೆ ಶಿವಯೋಗಿ ಸಿದ್ದರಾಮೇಶ್ವರರು.ಮಹಾರಾಷ್ಟçದ ಸೋಲಾಪೂರ ಜಿಲ್ಲೆಯ ಸೊನ್ನಲಿಗೆ ಎಂಬ ಗ್ರಾಮದಲ್ಲಿ ಮುದ್ದುಗೌಡ-ಸುಗ್ಗಲೆ ದಂಪತಿಗೆ ಧೂಳಿ ಮಾಕಾಳ ರೇವಣಸಿದ್ದ ದೇವರ ವರದಿಂದ ಜನಿಸಿದ ಶಿವಯೋಗಿ ಸಿದ್ದರಾಮೇಶ್ವರ ಅವರು ಬಾಲ್ಯದಲ್ಲಿಯೇ ಒಬ್ಬ ಮುಗ್ಧ ಭಕ್ತನಾಗಿದ್ದರು. ಶಿವಭಕ್ತನಾಗಿದ್ದ ಇವರು ಶಿವಯೋಗ ಮಾರ್ಗದಿಂದ ಪರಮಶಿವನ ದರ್ಶನ ಪಡೆಯಬೇಕೆಂಬ ಮಹತ್ವಾಕಾಂಕ್ಷೆಯೊಂದಿಗೆ ಸೊನ್ನಲಿಗೆಯಿಂದ ಶ್ರೀಶೈಲದತ್ತ ನಡೆದುಕೊಂಡ ತೆರಳಿ ಕೊನೆಗೆ ಮಲ್ಲಿಕಾರ್ಜುನ ದರ್ಶನ ಪಡೆದವರು. ಕೊಡುಗೆಗಳುಬಡವರ ಕಷ್ಟ-ಕಾರ್ಪಣೆಗಳ ನಿವಾರಣೆ, ಸಾಮೂಹಿಕ ವಿವಾಹಗಳ ಜಾರಿಯಂತಹ ಪ್ರಗತಿಪರವಾದ ವಿಚಾರಧಾರೆಗಳನ್ನು ಹೊಂದಿದ್ದ ಶಿವಯೋಗಿ…
