Author: editor.udayarashmi@gmail.com

ತಿಕೋಟಾ: ತಾಲ್ಲೂಕಿನ ಕನಮಡಿ ಗ್ರಾಮದ ಮಲ್ಲಪ್ಪ ಆರ್. ತುಂಗಳ ಅವರು ಸಹಕಾರಿ ಕ್ಷೇತ್ರಕ್ಕೆ ನೀಡಿದ ಕೊಡುಗೆ ಪರಿಗಣಿಸಿ ದೇವರಹಿಪ್ಪರಗಿಯಲ್ಲಿ ಮಡಿವಾಳ ಮಾಚಿದೇವ ಜನ್ಮಭೂಮಿ ಪ್ರತಿಷ್ಠಾನ ಕಲೆ, ಸಾಹಿತ್ಯ ಹಾಗೂ ಸಾಂಸ್ಕೃತಿಕ ವೇದಿಕೆ ವತಿಯಿಂದ ನಡೆದ ತೃತೀಯ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಶನಿವಾರ ರಾಷ್ಟ್ರೀಯ ವೀರಗಣಾಚಾರಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.ಸಹಕಾರಿ ಕ್ಷೇತ್ರ ಸೇರಿದಂತೆ ಸಾಮಾಜಿಕ, ಧಾರ್ಮಿಕ ಹಾಗೂ ಶೈಕ್ಷಣಿಕ ಕ್ಷೇತ್ರಕ್ಕೂ ಕೊಡುಗೆಯನ್ನು ನೀಡುತ್ತಾ ಗ್ರಾಮದ ಕೀರ್ತಿಯನ್ನು ಎಲ್ಲಡಡೆ ಹರಡುವಂತೆ ಮಾಡಿದ ಇವರಿಗೆ ಪ್ರಶಸ್ತಿ ಲಭಿಸಿರುವದು ಗ್ರಾಮಸ್ಥರಿಗೆ ಖುಷಿ ತಂದಿದೆ.ಈ ಸಂದರ್ಭದಲ್ಲಿ ಕೂಡಲಸಂಗಮದ ಬಸವ ಜಯಮೃತ್ಯುಂಜಯ ಸ್ವಾಮೀಜಿ, ಜಡೆಸಿದ್ದೇಶ್ವರ ಶಿವಾಚಾರ್ಯ, ವೀರಗಂಗಾಧರ ಶಿವಾಚಾರ್ಯ ಹಾಗೂ ಅತಿಥಿಗಳು ಇದ್ದರು.

Read More

ಗಬಸಾವಳಗಿಯಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಸಂಸದ ಜಿಗಜಿಣಗಿ ಮನವಿ ಮೋರಟಗಿ: ಪ್ರಧಾನಿ ಮೋದಿ ಹಾಗೂ ಸಚಿವರ ಮನವೊಲಿಸಿ ಕಳೆದ ಅವಧಿಯಲ್ಲಿ ಜಿಲ್ಲೆಗೆ ಒಂದು ಲಕ್ಷ ಕೋಟಿ ರೂ. ಅನುದಾನ ತಂದು ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗಿದೆ ದೇಶದ ಅಭಿವೃದ್ಧಿಗಾಗಿ ಮತ್ತೊಮ್ಮೆ ಮೋದಿಜಿ ಸರಕಾರಕ್ಕೆ ಬೆಂಬಲಿಸಿ ಎಂದು ಸಂಸದ ರಮೇಶ ಜಿಗಜಿಣಗಿ ಹೇಳಿದರು.ಸಮೀಪದ ಗಬಸಾವಳಗಿ ಗ್ರಾಮದ ಹೇಮರಡ್ಡಿ ಮಲ್ಲಮ್ಮ ಸಭಾ ಭವನದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಮೋರಟಗಿ ಮತ್ತು ಯಂಕಂಚಿ ಜಿಲ್ಲಾ ಪಂಚಾಯಿತಿ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು.ಅಭಿವೃದ್ಧಿ ಕಾರ್ಯಗಳನ್ನು ಸಹಿಸದ ವಿರೋಧಿಗಳು ಸಾರ್ವಜನಿಕರಿಗೆ ತಪ್ಪು ಸಂದೇಶ ನೀಡುತ್ತಿದ್ದಾರೆ. ವಿಜಯಪುರ ಇತಿಹಾಸದಲ್ಲೇ ಗುರುತಿಸುವಂಥ ಕೆಲಸಗಳು ಕಳೆದ ಅವಧಿಯಲ್ಲಿ ಆಗಿವೆ. ನಾನೊಬ್ಬ ಜಾತ್ಯತೀತ ನಾಯಕ. ಜನ ನನ್ನ ಸರಳತೆ ನೋಡಿ ಆಶೀರ್ವದಿಸಿ ಆಯ್ಕೆ ಮಾಡಿದ್ದಾರೆ. ಇದು ನನ್ನ ಕೊನೆಯ ಚುನಾವಣೆಯಾಗಿದ್ದು, ಮತ್ತೊಮ್ಮೆ ತಮ್ಮ ಸೇವೆಗೆ ಅವಕಾಶ ಕಲ್ಪಿಸಲು ಆಶೀರ್ವದಿಸಬೇಕು ಎಂದರು.ಪ್ರಧಾನಿ ಮೋದಿ ಅವರ ಆಡಳಿತದಿಂದ ನಮ್ಮ ದೇಶ ಆರ್ಥಿಕವಾಗಿ, ಸಾಮಾಜಿಕವಾಗಿ ಭದ್ರವಾಗಿದೆ. ೫೦…

Read More

ಕ್ಲಾಪ್ ಮಾಡಿ ಶುಭ ಹಾರೈಸಿದ ಹಿರಿಯ ನಿರ್ದೇಶಕ ಗಿರೀಶ ಕಾಸರವಳ್ಳಿ ಬೆಂಗಳೂರು: ಜಮಖಂಡಿ ತಾಲ್ಲೂಕಿನ ಕೃಷ್ಣಾ ನದೀತೀರದ ಹಿಪ್ಪರಗಿಯ ಇಂಚಗೇರಿ ಮಠದ ಕಲ್ಪತರುವಾದ ಶ್ರೀ ಸಂಗಮೇಶ್ವರ ಮಹಾರಾಜರ ಜೀವನ ಚರಿತ್ರೆ “ಸಮರ್ಥ ಸದ್ಗುರು ಶ್ರೀಸಂಗಮೇಶ್ವರ ಮಹಾರಾಜರು” ಚಿತ್ರದ ಮುಹೂರ್ತ ಸಮಾರಂಭ ಏ.13 ಶನಿವಾರ ಬೆಂಗಳೂರಿನ ವಿದ್ಯಾಪೀಠದಲ್ಲಿರುವ ಶ್ರೀಕೃಷ್ಣನ ಸನ್ನಿಧಿಯಲ್ಲಿ ಆರಂಭವಾಯಿತು.ಇಂಚಗೇರಿಯ ಶ್ರೀ ಪ್ರಭುಜೀ ಮಹಾರಾಜರ ಸಾನಿಧ್ಯದಲ್ಲಿ ರಾಷ್ಟ್ರಪ್ರಶಸ್ತಿ ವಿಜೇತ ನಿರ್ದೇಶಕ ಗಿರೀಶ್ ಕಾಸರವಳ್ಳಿ ಅವರು ಚಿತ್ರದ ಮೊದಲ ಸನ್ನಿವೇಶಕ್ಕೆ ಆರಂಭ ಫಲಕ ತೋರುವುದರ ಮೂಲಕ ಚಿತ್ರಕ್ಕೆ ಚಾಲನೆ ನೀಡಿದರು.ಇಂಚಗೇರಿಯ ಶ್ರೀ ಸಂಗಮೇಶ್ವರ ಮಹಾರಾಜರ ಜೀವನ ಚರಿತ್ರೆಯನ್ನು ಚಿತ್ರ‌ ಮಾಡಿ ಎಂದು ನಾನು ಎರಡು ವರ್ಷಗಳ ಹಿಂದೆ ನಿರ್ಮಾಪಕ ಮಾಧವಾನಂದ ಅವರಿಗೆ ತಿಳಿಸಿದೆ. ಅದು ಈಗ ಕಾರ್ಯರೂಪಕ್ಕೆ ಬಂದಿದೆ. ರಾಜ್ಯದೆಲ್ಲೆಡೆ ಇಂಚಗೇರಿ ಸಂಪ್ರದಾಯಕ್ಕೆ ಅದರದೆ ಆದ ಮಹತ್ವವಿದೆ‌. ಅದನ್ನು ಶ್ರೀಸಂಗಮೇಶ್ವರ ಮಹಾರಾಜರು ಪಾಲಿಸಿಕೊಂಡು ಬರುತ್ತಿದ್ದರು. ಕಲಿಯುಗದ ಕಲ್ಪತರುವೆಂದೆ ಖ್ಯಾತರಾಗಿರುವ ಶ್ರೀಸಂಗಮೇಶ್ವರರ ಚಿತ್ರ ಭರ್ಜರಿ ಯಶಸ್ಸು ಕಾಣಲಿ ಎಂದು ಶ್ರೀಪ್ರಭುಜೀ ಮಹಾರಾಜರು ಆಶೀರ್ವದಿಸಿದರು.ನಾನು ಈ…

Read More

ದೇವರಹಿಪ್ಪರಗಿ: ದೇಶ ಕಟ್ಟಿದ್ದು ಕಣ್ಣ ಮುಂದೆಯೇ ಇದ್ದರೂ ಕಾಂಗ್ರೆಸ್ ಏನು ಮಾಡಿದೆ ಎಂದು ಕೇಳುತ್ತಾರೆ. ಸಾವಿರಾರು ಡ್ಯಾಮ್‌ಗಳನ್ನು ಕಟ್ಟಿದ್ದು ಯಾರು ಎಂದು ಬೃಹತ್ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಪ್ರಶ್ನಿಸಿದರು.ಮತಕ್ಷೇತ್ರದ ಬಂಡೆಪ್ಪ ಸಾಲವಾಡಗಿ ಹಾಗೂ ಕುದರಿ ಸಾಲವಾಡಗಿ ಗ್ರಾಮಗಳಲ್ಲಿ ಶನಿವಾರ ಸಂಜೆ ನಡೆದ ಜಿಪಂ ವ್ಯಾಪ್ತಿಯ ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ ಮಾತನಾಡಿದರು.ದೊಡ್ಡ ದೊಡ್ಡ ಸಂಸ್ಥೆ, ಶಾಲೆ, ಕಾರ್ಖಾನೆಗಳನ್ನು ಮಾಡಿದ್ದು ಕಾಂಗ್ರೆಸ್ ಪಕ್ಷ. ಒಂದು ಸೂಜಿಯೂ ದೇಶದಲ್ಲಿ ತಯಾರಾಗದ ಸ್ಥಿತಿಯನ್ನು ಮೀರಿಸಿ ಜಗತ್ತಿನ ಮುಂದುವರಿದ ದೇಶಗಳ ಪಟ್ಟಿಯಲ್ಲಿ ಭಾರತವನ್ನು ಇಟ್ಟಿದ್ದು ನಮ್ಮ ಪಕ್ಷ. ಇವರು ಅಧಿಕಾರಕ್ಕೆ ಬಂದು ಅಚ್ಛೇ ದಿನ್ ಅಂತ ಹೇಳಿ ಕೆಟ್ಟ ಪ್ರಯೋಗಗಳನ್ನು ಮಾಡಿದರು. ನೋಟು ಬ್ಯಾನ್ ಮಾಡಿ ಆರ್ಥಿಕ ಸ್ಥಿತಿ ಹದಗೆಡಿಸಿದರು. ಮನಮೋಹನ್ ಸಿಂಗ್ ಅವರು ಇದ್ದಾಗ ಎಪ್ಪತ್ತೆರಡು ಸಾವಿರ ಕೋಟಿ ಸಾಲ ಮನ್ನಾ ಮಾಡಿದರು. ಆದರೆ ಮೋದಿಯವರು ಜನರ ಭಾವನೆಗಳನ್ನು ಕೆರಳಿಸಿ ಮತ ಕೇಳುತ್ತಿದ್ದಾರೆ. ಕಾಂಗ್ರೆಸ್ ಹೊಟ್ಟೆ ತುಂಬಿಸುವ, ಜನರ ಬದುಕು ಸುಧಾರಿಸುವ…

Read More

ಕೊಲ್ಹಾರ: ತಾಲೂಕಿನ ಕಲಗುರ್ಕಿ ಗ್ರಾಮದ ಮಲ್ಲಿಕಾರ್ಜುನ ದೇವರ ಜಾತ್ರಾ ಮಹೋತ್ಸವ ಹಾಗೂ ದೇವಸ್ಥಾನದ ೧೦ನೇ ವಾರ್ಷಿಕೋತ್ಸವ ಏ.೧೬ರಿಂದ ೨೬ರ ವರೆಗೆ ವಿವಿಧ ಧಾರ್ಮಿಕ, ಮನೋರಂಜನಾ, ಹಾಸ್ಯ ವಿಡಂಬನೆ, ವಿವಿಧ ಕ್ಷೇತ್ರಗಳ ಸಾಧಕರ ಸನ್ಮಾನ ಕಾರ್ಯಕ್ರಮಗಳು ನಡೆಯುವವು ಎಂದು ಮಲ್ಲಿಕಾರ್ಜುನ ದೇವಸ್ಥಾನದ ದಶಮಾನೋತ್ಸವ ಸೇವಾ ಸಮೀತಿಯವರು ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ.ಮಸೂತಿ ಜಗದೀಶ್ವರ ಹಿರೇಮಠದ ಪ್ರಭುಕುಮಾರ ಶಿವಾಚಾರ್ಯ ಮಹಾಸ್ವಾಮಿಗಳ ನೇತೃತ್ವದಲ್ಲಿ ಜಾತ್ರಾ ಮಹೋತ್ಸವದ ಕಾರ್ಯಕ್ರಮಗಳು ನಡೆಯುವವು. ದಿನಾಂಕ ೧೬ ಮಂಗಳವಾರ ಸಾಯಂಕಾಲ ೭ ಘಂಟೆಗೆ ಪುರಾಣ ಕಾರ್ಯಕ್ರಮದ ಪ್ರಾರಂಭೋತ್ಸವ ಹರ ಗುರು ಚರಮೂರ್ತಿಗಳ ಸಾನಿಧ್ಯದಲ್ಲಿ ನಡೆಯುವದು. ಕಲಬುರ್ಗಿ ಜಿಲ್ಲೆ ಚಿಂಚೊಳ್ಳಿ ತಾಲೂಕಿನ ಐನಾಪೂರ ಗ್ರಾಮದ ಸಿದ್ದಲಿಂಗೇಶ್ವರ ಸಂಸ್ಥಾನ ಹಿರೇಮಠದ ಪಂಚಾಕ್ಷರಿ ದೇವರ ಅಮ್ರತವಾಣಿಯಿಂದ ಕಲಬುರ್ಗಿ ಶರಣಬಸವೇಶ್ವರ ಪುರಾಣ ಪಠಣ ನಡೆಯುವದು. ಬಸಲಿಂಗಯ್ಯ ಗವಾಯಿಗಳು ಹಾಗೂ ಸುಭಾಸ ಸಂಗೀತಸೇವೆ ಒದಗಿಸುವರು.ದಿನಾಂಕ ೨೫ ಗುರುವಾರ ಮುಂಜಾನೆ ೯ ಘಂಟೆಗೆ ಮುತ್ತೆöÊದೆಯರಿಗೆ ಉಡಿತುಂಬುವ ಕಾರ್ಯಕ್ರಮ ೧೦.೩೦ ಘಂಟೆಗೆ ಧರ್ಮಸಭೆ, ಸಾಯಂಕಾಲ ೬ ಘಂಟೆಗೆ ದೇಶ ಸೇವೇಗೈದ ನೀವೃತ್ತ…

Read More

ಬಸವನಬಾಗೇವಾಡಿ: ಪಟ್ಟಣದ ತಹಸೀಲ್ದಾರ ಕಚೇರಿಯಲ್ಲಿ ಸಹಾಯಕ ಚುನಾವಣಾಧಿಕಾರಿ ಗಂಗಪ್ಪ ಎಂ. ಅವರು ಶುಕ್ರವಾರ ಸಂಜೆ ಬೆಳೆ ಸಮೀಕ್ಷೆಗಾರರಿಗೆ ಟೀ ಶರ್ಟ್, ಕ್ಯಾಪ್ ವಿತರಿಸಿದರು.ಈ ಸಂದರ್ಭದಲ್ಲಿ ಕೃಷಿ ಇಲಾಖೆಯ ಸಹಾಯಕ ಕೃಷಿ ನಿರ್ದೇಶಕ ಎಂ.ಎಚ್.ಯರಝರಿ ಮಾತನಾಡಿ, ಅಖಂಡ ಬಸವನಬಾಗೇವಾಡಿ ತಾಲೂಕಿನಲ್ಲಿ ಬೆಳೆ ಸಮೀಕ್ಷೆ ಮಾಡುವ ಸಮೀಕ್ಷೆಗಾರರಿಗೆ ಕೃಷಿ ಇಲಾಖೆಯಿಂದ ಟೀ ಶರ್ಟ್, ಕ್ಯಾಪ್ ವಿತರಣೆ ಮಾಡಲಾಗುತ್ತಿದೆ. ಬೆಳೆ ಸಮೀಕ್ಷೆ ಮಾಡುವ ಸಂದರ್ಭದಲ್ಲಿ ಬೆಳೆ ಸಮೀಕ್ಷೆಗಾರರನ್ನು ಗುರುತಿಸಲು ಇದು ನೆರವಾಗುತ್ತದೆ. ಎಲ್ಲ ಬೆಳೆ ಸಮೀಕ್ಷೆಗಾರರು ಸರಿಯಾಗಿ ಜಿಪಿಎಸ್ ಮಾಡುವ ಮೂಲಕ ಬೆಳೆ ಸಮೀಕ್ಷೆ ಕಾರ್ಯ ಮಾಡಬೇಕೆಂದರು.ಈ ಸಂದರ್ಭದಲ್ಲಿ ಬಸವನಬಾಗೇವಾಡಿ ತಹಸೀಲ್ದಾರ ವೈ.ಎಸ್.ಸೋಮನಕಟ್ಟಿ, ಕೊಲ್ಹಾರ ತಹಸೀಲ್ದಾರ ಎಸ್.ಎಸ್.ನಾಯಕಲಮಠ, ಕೃಷಿ ಇಲಾಖೆಯ ಚಿದಾನಂದ ಹಿರೇಮಠ, ಬಿ.ಎಸ್.ಸಕ್ರಿ, ಜಿ.ಬಿ.ಮೇದಕಿನಾಳ, ಆತ್ಮ ಸಿಬ್ಬಂದಿ, ಕಂದಾಯ ಇಲಾಖೆಯ ಸಿಬ್ಬಂದಿ, ಕಂದಾಯ ನಿರೀಕ್ಷಕರು, ಗ್ರಾಮಾಡಳಿತಾಧಿಕಾರಿಗಳು ಇದ್ದರು.

Read More

ಬಸವನಬಾಗೇವಾಡಿ: ಪ್ರತಿಯೊಬ್ಬರೂ ತಮ್ಮ ಬದುಕನ್ನು ಹೇಗೆ ಸಾಗಿಸುತ್ತಾರೋ ಹಾಗೇ ಅವರ ಬದುಕು ಸಾಗುತ್ತದೆ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರೂ ತಮ್ಮ ಬದುಕನ್ನು ಉತ್ಸಾಹ,ಸಂತೋಷದಿಂದ ಸಾಗಿಸಬೇಕೆಂದು ತಾಳಿಕೋಟಿಯ ಖಾಸ್ಗತೇಶ್ವರ ಮಠದ ಸಿದ್ದಲಿಂಗ ದೇವರು ಹೇಳಿದರು.ತಾಲೂಕಿನ ಅವಿಮುಕ್ತ ಸುಕ್ಷೇತ್ರ ಯರನಾಳ ವಿರಕ್ತಮಠದ ಕರ್ತೃ ಜಗದ್ಗುರು ಪಂಪಾಪತಿ ಶಿವಯೋಗಿಗಳ ಜಾತ್ರಾಮಹೋತ್ಸವ ಹಾಗೂ ಗುರುಸಂಗನಬಸವ ಸ್ವಾಮೀಜಿಗಳ ಜನ್ಮಸುವರ್ಣ ಮಹೋತ್ಸವದಂಗವಾಗಿ ಶನಿವಾರ ಹಮ್ಮಿಕೊಂಡಿದ್ದ ತಾಯಂದಿರ ಉಡಿತುಂಬುವ ಕಾರ್ಯಕ್ರಮದ ಸಾನಿಧ್ಯ ವಹಿಸಿ ಮಾತನಾಡಿದ ಅವರು, ಭಗವಂತನು ನಮಗೆ ಒಳ್ಳೆಯ ಜೀವನವನ್ನು ಕೊಟ್ಟಿದ್ದಾನೆ. ಈ ಜೀವನದಲ್ಲಿ ಪ್ರತಿಯೊಬ್ಬರೂ ಎಲ್ಲರೊಂದಿಗೆ ಪ್ರೀತಿಯಿಂದ ಇರುವ ಮೂಲಕ ಸುಂದರವಾದ ಜೀವನ ಕಳೆಯಬೇಕು. ರಾಧಾಕೃಷ್ಣನ್ ಅವರು ಹೇಳುವಂತೆ ಜೀವನ ಒಂದು ಹಾಡು, ಆಟ, ಉತ್ಸವ. ಈ ಜೀವನವನ್ನು ಹಾಡುತ್ತಾ, ಆಡುತ್ತಾ, ಉತ್ಸಾಹದಿಂದ ಸಾಗಿಸಬೇಕೆಂದರು.ಜೀವನದಲ್ಲಿ ಯಾವುದು ಅಸಾಧ್ಯವೆಂಬುವದು ಇಲ್ಲ. ಜೀವನದಲ್ಲಿ ಸಾಧ್ಯವಾಗಿಸುವ ಶಕ್ತಿ ಗುರುವಿಗಿದೆ. ಪ್ರತಿಯೊಬ್ಬರೂ ಗುರುವಿನ ಕೃಪೆಗೆ ಸದಾ ಪಾತ್ರರಾಗಬೇಕು. ಶ್ರೀಮಠದ ಸಂಗನಬಸವ ಸ್ವಾಮೀಜಿಯವರು ತಮ್ಮ ಧಾರ್ಮಿಕ ಕಾರ್ಯದೊಂದಿಗೆ ಸಾಮಾಜಿಕ, ಶೈಕ್ಷಣಿಕ ಕಾರ್ಯ ಮಾಡುವ ಮೂಲಕ ಭಕ್ತರ ಉದ್ಧಾರಕ್ಕೆ…

Read More

ಬಸವನಬಾಗೇವಾಡಿ: ಪಟ್ಟಣದ ತಹಸೀಲ್ದಾರ ಕಚೇರಿಯಲ್ಲಿ ತಾಲೂಕಾಡಳಿತದಿಂದ ಶನಿವಾರ ಆದ್ಯ ವಚನಕಾರ ದೇವರ ದಾಸಿಮಯ್ಯನವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ದೇವರ ದಾಸಿಮಯ್ಯನವರ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು.ದೇವರ ದಾಸಿಮಯ್ಯನವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದ ತಹಸೀಲ್ದಾರ ವೈ.ಎಸ್.ಸೋಮನಕಟ್ಟಿ ಮಾತನಾಡಿ, ಬಸವಣ್ಣನವರ ಕಾಲದ ಪೂರ್ವದಲ್ಲಿ ೧೧ ನೇ ಶತಮಾನದಲ್ಲಿಯೇ ವಚನಗಳನ್ನು ರಚಿಸುವ ಮೂಲಕ ಸಮಾಜದ ಓರೆ-ಕೋರೆಗಳನ್ನು ತಿದ್ದಿದ ಕೀರ್ತಿ ಆದ್ಯ ವಚನಕಾರ ದೇವರ ದಾಸಿಮಯ್ಯನವರಿಗೆ ಸಲ್ಲುತದೆ. ಅಂತಹ ಶರಣರ ವಚನಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಜೀವನ ಸುಂದರ ಮಾಡಿಕೊಳ್ಳಬೇಕೆಂದರು.ನಿವೃತ್ತ ಶಿಕ್ಷಕ ಎಸ್.ಕೆ.ಸೋಮನಕಟ್ಟಿ, ಸಾಹಿತಿ ವಿವೇಕಾನಂದ ಕಲ್ಯಾಣಶೆಟ್ಟಿ, ಡಾ.ಶ್ರೀಶೈಲ ಕೂಡಗಿ, ನಿವೃತ್ತ ಉಪನ್ಯಾಸಕ ಕೆ.ಬಿ.ಕಡೆಮನಿ ಅವರು ದೇವರ ದಾಸಿಮಯ್ಯನವರ ಕುರಿತು ಮಾತನಾಡಿದರು.ಈ ಸಂದರ್ಭದಲ್ಲಿ ಶಿವಪುತ್ರ ಅಂಕದ, ಎಸ್.ಬಿ.ಚವ್ಹಾಣ, ಬಸವರಾಜ ನಾಯ್ಕೋಡಿ, ವಿಲಾಸ ಜಾಡರ, ಬಸವರಾಜ ಪಟ್ಟಣದ, ಸೋಮು ಗೋಟೆದ, ಐ.ಜಿ.ಬೆಕಿನಾಳ ಇತರರು ಇದ್ದರು. ಜಿಲ್ಲಾ ಕುರುಹಿನ ಶೆಟ್ಟಿ ಸಮಾಜ ನಿರ್ದೇಶಕ ಶ್ರೀಶೈಲ ಶಿರಗುಪ್ಪಿ ನಿರೂಪಿಸಿ, ವಂದಿಸಿದರು.

Read More

ಬಸವನಬಾಗೇವಾಡಿ: ಜಗತ್ತಿನ ಯಾವ ಧರ್ಮಪರಂಪರೆಯಲ್ಲಿ ಸಿಗದೇ ಇರುವ ಅಮೂಲ್ಯ ತತ್ವಗಳಾದ ಕಾಯಕ-ದಾಸೋಹ-ಇಷ್ಟಲಿಂಗ ಪೂಜೆ ಶರಣಧರ್ಮದಲ್ಲಿದೆ. ಶರಣಧರ್ಮ ಪರಂಪರೆ ನೀಡಿರುವ ಮೌಲ್ಯಗಳನ್ನು ಜಗತ್ತು ಅಳವಡಿಸಿಕೊಂಡರೆ ಪ್ರಗತಿಯಾಗಲು ಸಾಧ್ಯ ಎಂದು ಮುದಗಲ್ದ ಕಲ್ಯಾಣ ಆಶ್ರಮ, ಮಹಾಂತೇಶ್ವರಮಠದ ಮಹಾಂತ ಸ್ವಾಮೀಜಿ ಹೇಳಿದರು.ತಾಲೂಕಿನ ಯರನಾಳ ವಿರಕ್ತಮಠದಲ್ಲಿ ಶುಕ್ರವಾರ ಸಂಜೆ ಕರ್ತೃ ಜಗದ್ಗುರು ಪಂಪಾಪತಿ ಶಿವಯೋಗಿಗಳ ಜಾತ್ರಾಮಹೋತ್ಸವ ಹಾಗೂ ಗುರುಸಂಗನಬಸವ ಸ್ವಾಮೀಜಿಯವರ ಜನ್ಮಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಸುವರ್ಣ ಪ್ರಶಸ್ತಿ ಸ್ವೀಕರಿಸಿದ ನಂತರ ಮಾತನಾಡಿದ ಅವರು, ಮನುಷ್ಯನಿಗೆ ಅನೇಕ ದಾಹಗಳಿವೆ. ಶರಣರು ಈ ದಾಹಕ್ಕೆ ಸೋ ಎಂಬ ಶಬ್ಧ ಸೇರಿಸಿ ವಿಶಾಲವಾದ ದಾಸೋಹದ ಕಲ್ಪನೆ ನೀಡಿದ್ದಾರೆ. ದಾಸೋಹವೆಂದರೆ ಕೇವಲ ಶ್ರೀಮಠಗಳಿಗೆ ಸೀಮಿತವಲ್ಲ. ಇಡೀ ವಿಶ್ವವನ್ನು ಗಮನದಲ್ಲಿಕೊಂಡು ವಿಶಾಲಾರ್ಥದಲ್ಲಿ ಶರಣರು ದಾಸೋಹದ ಪರಿಕಲ್ಪನೆ ನೀಡಿದ್ದಾರೆ. ಈ ತತ್ವವನ್ನು ಅಳವಡಿಸಿಕೊಂಡರೆ ಇಡೀ ಜಗತ್ತು ಸಮೃದ್ಧಿಯಾಗುತ್ತದೆ. ಬಸವಾದಿ ಶರಣರ ತತ್ವಗಳನ್ನು ನಾವೆಲ್ಲರೂ ಅಳವಡಿಸಿಕೊಳ್ಳದೇ ಹೋದರೆ ಜಗತ್ತು ಅಭಿವೃದ್ಧಿಯಾಗುವದಿಲ್ಲ. ಇಂದು ಎಲ್ಲರೂ ತಮ್ಮ ಸ್ವಾರ್ಥ ಜೀವನದಿಂದಾಗಿ ಮನುಷ್ಯತ್ವ ಕಳೆದುಕೊಳ್ಳುತ್ತಿರುವುದು ವಿಷಾದಕರ ಸಂಗತಿ. ಎಲ್ಲರೂ ಶರಣ ಧರ್ಮವನ್ನು…

Read More

ಮುದ್ದೇಬಿಹಾಳ: ಬಿಸಿಲಿನ ಧಗೆಯಿಂದ ಬೇಸತ್ತ ಪಟ್ಟಣದ ಜನತೆಗೆ ಮಳೆರಾಯ ಶನಿವಾರ ತಂಪೆರೆದಿದ್ದು, ಕೊಂಚ ನೆಮ್ಮದಿ ಸಿಕ್ಕಂತಾಗಿದೆ. ಕಳೆದ ಕೆಲ ದಿನಗಳಿಂದ ಬೆಳಿಗ್ಗೆ ೧೧ ಗಂಟೆಯಾದರೆ ಸಾಕು ನೆತ್ತಿ ಸುಡುವ ಬಿಸಿಲು ಆವರಿಸಿ ಸಂಜೆಯಾದರೂ ಸಾರ್ವಜನಿಕರು ಹೊರಗಡೆ ತಿರುಗಾಡಲು ಭಯ ಪಡುವಂತಾಗಿತ್ತು. ಗರಿಷ್ಟ ತಾಪಮಾನ ೪೨ ರವರಗೂ ಏರಿದ್ದು ಈ ಬಿಸಿಲಿಂದ ಮುಕ್ತಿ ಯಾವಾಗಪ್ಪಾ ಎನ್ನುತ್ತಿದ್ದವರಿಗೆ ಗಂಟೆಗೂ ಹೆಚ್ಚು ಕಾಲ ಸುರಿದ ಮಳೆಯಿಂದಾಗಿ ಕೊಂಚ ನೆಮ್ಮದಿ ಸಿಕ್ಕಿದೆ.

Read More