Subscribe to Updates
Get the latest creative news from FooBar about art, design and business.
Author: editor.udayarashmi@gmail.com
ವಿಜಯಪುರ: ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಜಿಲ್ಲಾಡಳಿತದ ವತಿಯಿಂದ ಶನಿವಾರ ಸರಳವಾಗಿ ದೇವರದಾಸಿಮಯ್ಯ ಜಯಂತಿಯನ್ನು ಆಚರಿಸಲಾಯಿತು.ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜರುಗಿದ ಸರಳ ಜಯಂತಿ ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ, ತಹಶೀಲ್ದಾರರಾದ ಕವಿತಾ ಅವರು ದೇವರ ದಾಸಿಮಯ್ಯ ಭಾವಚಿತ್ರಕ್ಕೆ ಪೂಜೆ ಹಾಗೂ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಿದರು.ಈ ಸಂದರ್ಭದಲ್ಲಿ ವಿವಿಧ ಸಮಾಜದ ಬಿ.ಎಂ.ನೂಲವಿ, ಎ.ಬಿ.ಕೋಷ್ಠಿ, ಎ.ಬಿ.ಅಂಕದ, ಆನಂದ ಹುಲಮನಿ, ಜವಳಗಿ ಎಂ.ಸಿ., ನಾಗಪ್ಪ ಭಾವಿಕಟ್ಟಿ, ಸಂತೋಷ ಬಂಡೆ, ಪಿ.ಎಂ.ಬಲ್ಲಾಳ, ಶ್ರೀಮತಿ ವಿದ್ಯಾವತಿ ಅಂಕಲಗಿ, ಬಸವರಾಜ ಒಂಟಗೋಡಿ ಸೇರಿದಂತೆ ಇತರರು ಉಪಸ್ಥಿತರಿದ್ದರು.
ವಿಜಯಪುರ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ವಿಜಯಪುರದ ಶಾಸ್ತ್ರಿ ನಗರದಲ್ಲಿರುವ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯದ ವಿದ್ಯಾರ್ಥಿಯಾದ ಕುಮಾರ ವೇದಾಂತ ನಾವಿ ಪ್ರಸಕ್ತ ವರ್ಷ ಜರುಗಿದ ದ್ವೀತಿಯ ಪಿಯು ವಾರ್ಷಿಕ ಪರೀಕ್ಷೆಯಲ್ಲಿ ಕಲಾವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದು, ವಿದ್ಯಾರ್ಥಿಯ ಸಾಧನೆಗೆ ಜಿಲ್ಲಾ ಅಧಿಕಾರಿಗಳು ಹಾಗೂ ತಾಲೂಕಾ ಕಲ್ಯಾಣಾಧಿಕಾರಿಗಳು, ನಿಲಯ ಮೇಲ್ವಿಚಾರಕರು ಹರ್ಷವನ್ನು ವ್ಯಕ್ತಪಡಿಸಿದ್ದಾರೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿಜಯಪುರ: ಪ್ರಸಕ್ತ ವರ್ಷ ಜರುಗಿದ ದ್ವೀತಿಯ ಪಿಯು ವಾರ್ಷಿಕ ಪರೀಕ್ಷೆಯಲ್ಲಿ ವಿಜಯಪುರ ಜಿಲ್ಲೆಯ ಜಿಲ್ಲಾ ಮಕ್ಕಳ ರಕ್ಷಣಾ ಘಟಕದಡಿ ಕಾರ್ಯನಿರ್ವಹಿಸುತ್ತಿರುವ ಸರಕಾರಿ ಬಾಲಕರ ಬಾಲಮಂದಿರ ಹಿರಿಯ ಹಾಗೂ ಸರಕಾರಿ ಬಾಲಕಿಯರ ಬಾಲಮಂದಿರದ ವಿದ್ಯಾರ್ಥಿಗಳು ಅತಿ ಹೆಚ್ಚು ಅಂಕ ಪಡೆಯುವ ಮೂಲಕ ಉತ್ತಮ ಸಾಧನೆಗೈದಿದ್ದಾರೆ ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು ತಿಳಿಸಿದ್ದಾರೆ.ದ್ವೀತಿಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಕುಮಾರಿ ಭವ್ಯಾ ಹಳ್ಳಿ ವಿಜ್ಞಾನ ವಿಭಾಗದಲ್ಲಿ ಶೇ.೮೨, ಕುಮಾರಿ ನಾಗರತ್ನ ನಾಗರಾಳ ವಾಣಿಜ್ಯ ವಿಭಾಗದಲ್ಲಿ ಶೇ.೮೭.೬೬, ಕುಮಾರಿ ಮೀನಾಕ್ಷಿ ಸುಣಗಾರ ವಾಣಿಜ್ಯ ವಿಭಾಗದಲ್ಲಿ ಶೇ.೬೮.೩೩ ಹಾಗೂ ಕುಮಾರಿ ಸಿದ್ದಮ್ಮ ಪಾಟೀಲ ಕಲಾ ವಿಭಾಗದಲ್ಲಿ ಶೇ.೬೬.೮೩ ಅಂಕ ಪಡೆದಿದ್ದು ಅದರಂತೆ ಸರಕಾರಿ ಹಿರಿಯ ಬಾಲಕರ ಬಾಲಮಂದಿರದ ೮ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಕುಮಾರ ಗಣೇಶ ಲಮಾಣಿ ಕಲಾ ವಿಭಾಗದಲ್ಲಿ ಶೇ.೭೭, ನಿಂಗರಾಜ ಜಾಲವಾದಿ ಶೇ.೭೦.೧೭, ಅಲ್ಲಪ್ಪ ಮನಗೂಳಿ ಶೇ.೬೯, ಆಕಾಶ ಪಾರೆ ಶೇ.೬೩.೮೩, ರಫೀಕ ಭಜಂತ್ರಿ ಶೇ.೬೧.೧೭, ಬಸವರಾಜ ಕುಂಬಾರ ಶೇ.೫೯.೫೦, ತನ್ವೀರ ಕೊರಬು ಶೇ.೫೬.೮೩ ಹಾಗೂ…
ಡಾ.ಪೂರ್ಣಿಮಾ ಕೆ ಧಾಮಣ್ಣವರಉಪನ್ಯಾಸಕರು, ಕನ್ನಡ ಅಧ್ಯಯನ ವಿಭಾಗ, ರಾಣಿ ಚನ್ನಮ್ಮ ವಿವಿ, ಡಾ ಫ.ಗು ಹಳಕಟ್ಟಿ ಸ್ನಾತಕೋತ್ತರ ಕೇಂದ್ರ ವಿಜಯಪುರ ಡಾ. ಬಾಬಾ ಸಾಹೇಬ ಅಂಬೇಡ್ಕರ್ ಅವರು ಒಬ್ಬ ವ್ಯಕ್ತಿಯಲ್ಲ, ಅವರೊಬ್ಬರು ಮಹಾನಶಕ್ತಿ. ಜ್ಞಾನದ ಶಿಖರವನ್ನೇರಿ ಕುಳಿತ ಜ್ಞಾನಸೂರ್ಯ, ಕಠಿಣ ಪರಿಶ್ರಮ ಮತ್ತು ಸ್ವ ಸಾಮರ್ಥ್ಯದಿಂದ ಈ ದೇಶದ ಅಗ್ರಗಣ್ಯ ರಾಷ್ಟ್ರನಾಯಕನಾಗಿ ಶೋಷಣೆಗೊಳಪಟ್ಟಿದ ಮೇರು ಪುರುಷ ಡಾ ಅಂಬೇಡ್ಕರ್.೬೦ಕ್ಕಿಂತ ಹೆಚ್ಚು ವಿಶ್ವದ ಎಲ್ಲ ಸಂವಿಧಾನವನ್ನು ಅಧ್ಯಯನ ಮಾಡಿ ಜೀರ್ಣಿಸಿಕೊಂಡವರು ಅಂಬೇಡ್ಕರ್ ಅವರು. ಇಂದು ಪ್ರಪಂಚಕ್ಕೆ ಮಾದರಿಯಾಗಿರುವ ವಿಶ್ವವಿಖ್ಯಾತ ಭಾರತ ಸಂವಿಧಾನವನ್ನು ರಚಿಸುವುದರ ಮೂಲಕ ಡಾ. ಅಂಬೇಡ್ಕರ್ ಯಾರಿಂದಲೂ ಬೆಲೆ ಕಟ್ಟಲಾಗದ ಹಾಗೂ ಈ ಪ್ರಜಾಪ್ರಭುತ್ವ ವ್ಯವಸ್ಥೆ ಇರುವವರೆಗೂ ಶಾಶ್ವತವಾಗಿ ಉಳಿಯುವಂತಹ ಮಹತ್ಕಾರ್ಯ ಮಾಡಿದ್ದಾರೆ.ಪ್ರಸ್ತುತ ವಿಶ್ವದಲ್ಲಿ ನಮ್ಮ ಭಾರತ ದೇಶಕ್ಕೆ ವಿಶೇಷ ಗೌರವ, ಘನತೆ, ಕೀರ್ತಿ ಲಭಿಸುತ್ತಿರುವುದೇ ನಮ್ಮ ಸಂವಿಧಾನ ಮತ್ತು ಸಂವಿಧಾನದ ಮೂಲಕ ನಿರ್ಮಾಣಗೊಂಡಿರುವ ಪ್ರಜಾಪ್ರಭುತ್ವ ವ್ಯವಸ್ಥೆಯಿಂದಾಗಿ ಎಂಬ ವಾಸ್ತವವನ್ನು ಹೇಳಿಕೊಳ್ಳಲು ನಮ್ಮಗೆಲ್ಲ ಹೆಮ್ಮೆಯ ವಿಷಯ.ಕೊಲಂಬಿಯಾ ವಿಶ್ವವಿದ್ಯಾಲಯ ಅಮೇರಿಕಾದಲ್ಲಿ ಡಾ. ಅಂಬೇಡ್ಕರ್…
ಚುನಾವಣೆ ಕರ್ತವ್ಯಕ್ಕೆ ನಿಯೋಜನೆಗೊಂಡ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ವಿಜಯಪುರ: ಲೋಕಸಭಾ ಚುನಾವಣೆಗಾಗಿ ಅಭ್ಯರ್ಥಿಗಳು ಮಾಡುವ ಖರ್ಚು ವೆಚ್ಚದ ಮೇಲೆ ತೀವ್ರ ನಿಗಾ ಇಡುವ ಕಾರ್ಯವಾಗಬೇಕು ಎಂದು ವಿಜಯಪುರ ಲೋಕಸಭಾ ಚುನಾವಣಾ ವೆಚ್ಚ ವೀಕ್ಷಕರಾಗಿರುವ ಐ ಆರ್ ಎಸ್ ಅಧಿಕಾರಿ ಅನುಪಕುಮಾರ ಸೂಚಿಸಿದರು.ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶನಿವಾರದಂದು ಚುನಾವಣೆ ಕರ್ತವ್ಯಕ್ಕೆ ನಿಯೋಜನೆಗೊಂಡ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ಯಾವುದೇ ಚುನಾವಣೆಯಾದರು ಕೂಡ ನಿರ್ಲಕ್ಷಿಸುವಂತಿಲ್ಲ, ವಿದಾನ ಸಭೆ ಚುನಾವಣೆಯಂತೆ ಲೋಕಸಭಾ ಚುನಾವಣೆಯನ್ನು ಕೂಡಾ ಅಷ್ಟೇ ಗಂಬೀರವಾಗಿ ಪರಿಗಣಿಸಿ ಅಭ್ಯರ್ಥಿಗಳು ಮಾಡುವ ಖರ್ಚು ವೆಚ್ಚಗಳನ್ನು ಲೆಕ್ಕಕ್ಕೆ ತೆಗೆದುಕೊಳ್ಳಬೇಕು. ಬ್ಯಾಂಕುಗಳಲ್ಲಿ ಹೊಸ ಖಾತೆಗಳನ್ನು ತೆರೆಯಲಾಗುತ್ತಿದೆಯಾ ಎಂದು ಪರಿಶೀಲಿಸಿ ಮತ್ತು ಆ ಖಾತೆಗಳಿಗೆ ನಿಗದಿಪಡಿಸಿದ ಮೊತ್ತಕ್ಕಿಂತ ಹೆಚ್ಚಿನ ಹಣ ವರ್ಗಾವಣೆಯಾಗುತ್ತಿದೆಯಾ ಎಂಬುದನ್ನು ವಿಚಾರಿಸಿ ಖಚಿತಪಡಿಸಿಕೊಳ್ಳಬೇಕು, ಚೆಕ್ ಪೋಸ್ಟಗಳಲ್ಲಿ ಕಾಟಾಚಾರಕ್ಕೆ ಮಾಡಿದಂತೆ ತಪಾಸಣೆಯಾಗಬಾರದು, ಕಟ್ಟು ನಿಟ್ಟಾಗಿ ಪರಿಶೀಲಿಸುವದರೊಂದಿಗೆ ಸಾರ್ವಜನಿಕರಿಗೆ ತೊಂದೆಯಾಗದಂತೆ ಕರ್ತವ್ಯ ನಿರ್ವಹಿಸಬೇಕು ಎಂದರು.ಮದ್ಯದಂಗಡಿಗಳಲ್ಲಿ ನಿಗದಿಪಡಿಸಿದಕಿಂತ ಹೆಚ್ಚಿನ ಮಟ್ಟದ ಸಾರಾಯಿ ಮಾರಾಟವಾದಲ್ಲಿ ತಕ್ಷಣ ಗಮನಕ್ಕೆ…
ರಾಷ್ಟ್ರೀಯ ವೀರಗಣಾಚಾರಿ ಪ್ರಶಸ್ತಿ ವಿತರಣಾ ಸಮಾರಂಭದಲ್ಲಿ ಜಯಮೃತ್ಯುಂಜಯ ಶ್ರೀ ಅಭಿಮತ ದೇವರಹಿಪ್ಪರಗಿ: ಇಂದಿನ ಯುವಜನತೆ ತಮ್ಮ ಗ್ರಾಮ, ಪಟ್ಟಣ, ನಗರಗಳ ಹಿನ್ನೆಲೆ, ಇತಿಹಾಸ, ವಿಶಿಷ್ಟತೆಗಳ ಬಗ್ಗೆ ಅರಿತುಕೊಳ್ಳುವುದು ಅಗತ್ಯವಾಗಿದೆ ಎಂದು ಕೂಡಲಸಂಗಮ ಪಂಚಮಸಾಲಿ ಪೀಠದ ಶ್ರೀಬಸವ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದರು.ಪಟ್ಟಣದ ಕಲ್ಮೇಶ್ವರ ದೇವಸ್ಥಾನ ಸಭಾಭವನದಲ್ಲಿ ಶನಿವಾರ ಜರುಗಿದ ಶ್ರೀಮಡಿವಾಳ ಮಾಚಿದೇವ ಜನ್ಮಭೂಮಿ ಪ್ರತಿಷ್ಠಾನ ಕಲೆ, ಸಾಹಿತ್ಯ, ಸಾಂಸ್ಕೃತಿಕ ವೇದಿಕೆಯ ತೃತಿಯ ವಾರ್ಷಿಕೋತ್ಸವ ಹಾಗೂ ರಾಷ್ಟ್ರೀಯ ವೀರಗಣಾಚಾರಿ ಪ್ರಶಸ್ತಿ ವಿತರಣಾ ಸಮಾರಂಭದಲ್ಲಿ ಸಾನಿಧ್ಯ ವಹಿಸಿ ಮಾತನಾಡಿದರು. ದೇವರಹಿಪ್ಪರಗಿ ಪಟ್ಟಣ ವೀರಶರಣರ ಜನ್ಮಭೂಮಿಯೆಂದೂ ಮುಂದಿನ ಪೀಳಿಗೆ ಗುರುತಿಸಲು ಸಹಕಾರಿಯಾಗುವಂತೆ ಇನ್ನಷ್ಟು ಅಭಿವೃದ್ಧಿಗೊಳಿಸಬೇಕಾಗಿದೆ ಎಂದರು.ಗದ್ದಗಿಮಠದ ಮಡಿವಾಳೇಶ್ವರ ಸ್ವಾಮೀಜಿ, ಸದಯ್ಯನಮಠದ ವೀರಗಂಗಾಧರಶ್ರೀ, ಜಡಿಮಠದ ಜಡಿಸಿದ್ಧೇಶ್ವರಶ್ರೀಳು ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು.ಸೃಷ್ಟಿ ಹಾಗೂ ಕುಮಾರಿ ಸುದೀಕ್ಷಾ ಬಿರಾದಾರ ಪ್ರಾರ್ಥನೆಯೊಂದಿಗೆ ಆರಂಭಗೊಂಡ ಕಾರ್ಯಕ್ರಮದಲ್ಲಿ ಪ್ರತಿಷ್ಠಾನದ ಗೌರವಾಧ್ಯಕ್ಷ ಕಾಶೀಪತಿ ದೇವಣಗಾಂವ ಅಧ್ಯಕ್ಷತೆ ವಹಿಸಿದ್ದರು. ಸಿದ್ಧೇಶ್ವರ ಸ್ವಾಮೀಜಿ ಶಿಕ್ಷಣ ಸಂಸ್ಥೆಯ ವ್ಹಿ.ಕೆ. ಪಾಟೀಲ ಸ್ವಾಗತಿಸಿದರು. ಸಂಚಾಲಕ ಬಿ.ಎಂ.ಪಾಟೀಲ ಪ್ರಸ್ತಾವಿಕವಾಗಿ ಮಾತನಾಡಿದರು.ಸಮಾರಂಭದಲ್ಲಿ ರಾಷ್ಟ್ರೀಯ ವೀರಗಣಾಚಾರಿ…
ಮ.ನ.ಪಾ ವತಿಯಿಂದ ಸ್ವೀಪ್ ಅಡಿ ನಗರದ ವಿವಿಧ ಸ್ತ್ರೀ ಶಕ್ತಿ ಮತ್ತು ಸ್ವ-ಸಹಾಯ ಮಹಿಳೆಯರಿಂದ ಸಭೆ ವಿಜಯಪುರ: ಸಾರ್ವತ್ರಿಕ ಲೋಕಸಭಾ ಚುನಾವಣೆ-೨೦೨೪ ರ ಸ್ವೀಪ್ ಕಾರ್ಯಕ್ರಮದ ಅಂಗವಾಗಿ ಮತದಾನದ ಜಾಗೃತಿ ಮೂಡಿಸಲು ಮಹಾನಗರ ಪಾಲಿಕೆ ವತಿಯಿಂದ ನಗರದ ವಿವಿಧ ಸ್ತ್ರೀಶಕ್ತಿ ಮತ್ತು ಸ್ವ-ಸಹಾಯ ಸಂಘದ ಗುಂಪುಗಳ ಪ್ರತಿನಿಧಿಗಳಿಗೆ ಸಭೆ ನಡೆಸಿ ತಮ್ಮ ಗುಂಪಿನ ಸದಸ್ಯರು ತಮ್ಮ ತಮ್ಮ ವ್ಯಾಪ್ತಿಯಲ್ಲಿ ಬರುವ ಮತದಾರರಿಗೆ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಕುರಿತು ಅರಿವು ಮೂಡಿಸಲು ಆಯೋಜಿಸಿರುವ ಸ್ವೀಪ್ ಕಾರ್ಯಕ್ರಮಗಳನ್ನು ಅಚ್ಚುಕಟ್ಟಾಗಿ ನೇರವೆರಿಸಲುಮಹಾನಗರ ಪಾಲಿಕೆ ಸಭಾ ಭವನದಲ್ಲಿ ಸಭೆ ಜರುಗಿತು.ಸಹಾಯಕ ಚುನಾವಣಾ ಅಧಿಕಾರಿಗಳು ಸಾರ್ವತ್ರಿಕ ಲೋಕಸಭಾ ಚುನಾವಣೆ-೨೦೨೪ ವಿಜಯಪುರ ನಗರ ಹಾಗೂ ಮಹಾನಗರ ಪಾಲಿಕೆಯ ಆಯುಕ್ತ ಅಶಾದ್ ಉರ್ ರೆಹಮಾನ್ ಷರೀಫ್ ಇವರು ಮಾತನಾಡುತ್ತ, ನಮ್ಮ ಭಾರತಿಯರಿಗೆ ರಾಷ್ಟ್ರ ಪ್ರೇಮ ಮತ್ತು ಪ್ರಜಾಪ್ರಭುತ್ವದ ಮೇಲೆ ತುಂಬಾ ಹೆಮ್ಮೆ, ನ್ಯಾಯ ಸಮ್ಮತ ಚುನಾವಣೆ ಪ್ರಜಾಪ್ರಭುತ್ವದ ಆಧಾರ ಸ್ತಂಭ, ಏಕೆಂದರೆ ಜನರ ಸರ್ಕಾರವು, ಜನರಿಂದ ಮತ್ತು ಜನರಗೊಸ್ಕರ ಎಂದು ಚುನಾವಣೆಗಳು…
ವಿಜಯಪುರ: ಕುಡಿಯುವ ನೀರಿನ ಯಾವುದೇ ಸಮಸ್ಯೆಯಾಗದಂತೆ ಅಧಿಕಾರಿಗಳು ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕು. ನೀರಿನ ಸಮಸ್ಯೆ ಉದ್ಭವಿಸುವ ಕಡೆಯಲ್ಲಿ ತುರ್ತಾಗಿ ಅಗತ್ಯ ಕ್ರಮ ಕೈಗೊಂಡು ನೀರು ಒದಗಿಸುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದರು.ಶುಕ್ರವಾರ ಸಂಜೆ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕುಡಿಯುವ ನೀರಿನ ನಿರ್ವಹಣೆ ಕುರಿತು ವಿವಿಧ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಸಧ್ಯಕ್ಕೆ ಯಾವುದೇ ಸಮಸ್ಯೆ ಇಲ್ಲ ಆದ್ಯಾಗೂ ಅಧಿಕಾರಿಗಳು ಎಲ್ಲ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡು ಜಿಲ್ಲೆಯಲ್ಲಿ ಲಭ್ಯವಿರುವ ನೀರಿನ ಸದ್ಭಳಕೆಯೊಂದಿಗೆ ಸಮರ್ಪಕವಾಗಿ ನೀರು ಒದಗಿಸಲು ಕ್ರಮ ವಹಿಸಬೇಕು ಎಂದು ಅವರು ಹೇಳಿದರು.ಹೊನಗನಹಳ್ಳಿಯ ೫ ಎಂಎಲ್ಡಿ ನೀರು ಸರಬರಾಜು ಸಮಸ್ಯೆ ಕುರಿತು ನಾಳೆಯೇ ಸಂಬಂಧಿಸಿದ ತಹಶೀಲ್ದಾರರು ಸ್ಥಳಕ್ಕೆ ಭೇಟಿ ನೀಡಿ ಇರುವ ತಾಂತ್ರಿಕ ಸಮಸ್ಯೆಯನ್ನು ಪರಿಹರಿಸಲು ಕ್ರಮ ವಹಿಸುವಂತೆ ಸೂಚಿಸಿದ ಅವರು, ವಿವಿಧೆಡೆ ಎಕ್ಸಟೆನ್ಶನ್ ಪ್ರದೇಶ ಹೆಚ್ಚಾಗಿ ನಿರ್ಮಾಣವಾಗುತ್ತಿರುವುದರಿಂದ ನೀರಿನ ಅವಶ್ಯಕತೆ ಹೆಚ್ಚಾಗಲಿದ್ದು, ನೀರಿನ ಅಭಾವವನ್ನು ಕಡಿಮೆಗೊಳಿಸುವ ನಿಟ್ಟಿನಲ್ಲಿ ವಿಜಯಪುರ ನಗರದಲ್ಲಿರುವ ವಿವಿಧ ಬೊರವೆಲ್ಗಳು, ಕೈಪಂಪುಗಳು ಸುಸ್ಥಿತಿಯಲ್ಲಿರುವಂತೆ ನೋಡಿಕೊಳ್ಳಬೇಕು.…
ಕಡ್ಡಾಯವಾಗಿ ಮೌಲ್ಯಮಾಪನ ಕಾರ್ಯಕ್ಕೆ ಹಾಜರಾಗುವಂತೆ ಶಿಕ್ಷಕರಿಗೆ ಸೂಚನೆ ವಿಜಯಪುರ: ಪ್ರಸಕ್ತ ವರ್ಷ ೨೦೨೪ರ ಮಾರ್ಚ್-ಏಪ್ರಿಲ್ನಲ್ಲಿ ನಡೆದ ಎಸ್.ಎಸ್.ಎಲ್.ಸಿ. ಪರೀಕ್ಷೆ-೧ರ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯ ಏಪ್ರಿಲ್ ೧೫ರಿಂದ ವಿಜಯಪುರ ನಗರದಲ್ಲಿರುವ ಹತ್ತು ಮೌಲ್ಯಮಾಪನ ಕೇಂದ್ರಗಳಲ್ಲಿ ಜರುಗಲಿದ್ದು, ಮೌಲ್ಯಮಾಪನ ಕಾರ್ಯಕ್ಕೆ ನಿಯೋಜಿತ ಎಲ್ಲ ಶಿಕ್ಷಕರು ಮತ್ತು ಗುಂಪು ಬಿ ವೃಂದದ ಪ್ರೌಢಶಾಲಾ ಮುಖ್ಯೋಪಾಧ್ಯಾಯರುಗಳು ನಿಗದಿತ ದಿನಾಂಕ ಮತ್ತು ಸಮಯಕ್ಕೆ ಕಡ್ಡಾಯವಾಗಿ ಮೌಲ್ಯಮಾಪನ ಕಾರ್ಯಕ್ಕೆ ಹಾಜರಾಗುವಂತೆ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಎನ್.ಎಚ್.ನಾಗೂರ ಸೂಚಿಸಿದ್ದಾರೆ.ಮೌಲ್ಯಮಾಪನ ಕಾರ್ಯಕ್ಕೆ ಅಗತ್ಯವಿರುವ ತಾಂತ್ರಿಕ ಸೌಲಭ್ಯಗಳ ಸಮೇತ ಎಲ್ಲ ಪೂರ್ವಸಿದ್ಧತೆಗಳು ಪೂರ್ಣಗೊಂಡಿದ್ದು, ಜಿಲ್ಲೆಯ ಎಲ್ಲ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಪ್ರೌಢಶಾಲೆಗಳ ಎಲ್ಲ ವಿಷಯಗಳ ಶಿಕ್ಷಕರುಗಳ ಮೌಲ್ಯಮಾಪನ ಕಾರ್ಯದ ಆದೇಶಗಳನ್ನು ಆಯಾ ಶಾಲೆಗಳ ಮುಖ್ಯೋಪಾಧ್ಯಾಯರುಗಳ ಲಾಗಿನ್ನಿಂದ ಡೌನ್ಲೋಡ್ ಮಾಡಿಕೊಂಡು ಸಂಬಂಧಿಸಿದವರಿಗೆ ತಲುಪಿಸುವ ವ್ಯವಸ್ಥೆ ಮಾಡಲಾಗಿದೆ.ಜಿಲ್ಲೆಯ ಎಲ್ಲ ಕ್ಷೇತ್ರ ಶಿಕ್ಷಣಾಧಿಕಾರಿಗಳು ಅವರ ವ್ಯಾಪ್ತಿಯ ಎಲ್ಲ ಪ್ರೌಢಶಾಲೆಗಳ ಮುಖ್ಯೋಪಾಧ್ಯಾಯರು ಮತ್ತು ಎಲ್ಲ ವಿಷಯ ಶಿಕ್ಷಕರುಗಳು ಕಡ್ಡಾಯವಾಗಿ ಮೌಲ್ಯಮಾಪನ ಕಾರ್ಯಕ್ಕೆ ಹಾಜರಾಗುವಂತೆ ಕ್ರಮ ವಹಿಸಬೇಕು.…
ಮಮದಾಪುರದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಸಚಿವ ಎಂ.ಬಿ.ಪಾಟೀಲ ಹೇಳಿಕೆ ವಿಜಯಪುರ: ಈ ಬಾರಿ ಚುನಾವಣೆಯಲ್ಲಿ ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳು ಗಾಳಿ ಬೀಸುತ್ತಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ.ಶನಿವಾರ ಬಬಲೇಶ್ವರ ತಾಲೂಕಿನ ಮಮದಾಪುರದಲ್ಲಿ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಅಭ್ಯರ್ಥಿ ಪ್ರೊ. ರಾಜು ಆಲಗೂರ ಪರ ಅವರು ಮತಯಾಚಿಸಿ ಮಾತನಾಡಿದರು.ಕಳೆದ ಲೋಕಸಭೆ ಚುನಾವಣೆ ವೇಳೆ ಪುಲ್ವಾಮಾ ಮೇಲೆ ದಾಳಿ ಮತ್ತು ಭಾರತ ಕೈಗೊಂಡ ಪ್ರತಿದಾಳಿಯಂಥ ಭಾವನಾತ್ಮಕ ವಿಚಾರಗಳು ಬಿಜೆಪಿಗೆ ವರವಾಗಿದ್ದವು. ಮೋದಿ ಅವರು ನೀಡಿದ್ದ ಕಪ್ಪು ಹಣ ವಾಪಸ್ ತರುವುದು, ಪ್ರತಿಯೊಬ್ಬರ ಅಕೌಂಟಿಗೆ ರೂ. 15 ಲಕ್ಷ ಹಣ ಹಾಕುವುದು, ಪ್ರತಿವರ್ಷ ಎರಡು ಕೋಟಿ ಉದ್ಯೋಗ ಸೃಷ್ಠಿಯ ಅಚ್ಛೇ ದಿನ್ ಭರವಸೆಗಳು ಈಡೇರಿಲ್ಲ. ಆದರೆ, ಈಗ ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ಗಾಳಿ ಬೀಸುತ್ತಿದೆ. ಪಂಚ ಗ್ಯಾರಂಟಿ ಯೋಜನೆಗಳು ಜನರ ಜೀವನಮಟ್ಟ ಸುಧಾರಿಸಿವೆ. 2013-18ರ ಅವಧಿಯಲ್ಲಿ ನಾವು ಕೈಗೊಂಡ ನೀರಾವರಿ…
