Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಚಡಚಣ: ಪಟ್ಟಣದ ಸಮುದಾಯ ಅರೋಗ್ಯ ಕೇಂದ್ರದ ಮುಂಬದಲ್ಲಿರುವ ದೇವರ ದಾಸಿಮಯ್ಯ ವ್ರತ್ತದಲ್ಲಿ ದೇವರ ದಾಸಿಮಯ್ಯ ಜಯಂತಿ ಆಚರಿಸಲಾಯಿತು.ಪರೋಪಕಾರವನ್ನೇ ಜೀವನವನ್ನಾಗಿಟ್ಟುಕೊಂಡು ಬದುಕುವ ಮಹಾನ್ ಆದರ್ಶ ಪುರುಷರಲ್ಲಿ ಜೇಡರ ದಾಸಿಮಯ್ಯ ಕೂಡ ಪ್ರಮುಖರಾಗಿದ್ದಾರೆ. ಮಹಿಳಾ ಸಮಾನತೆ, ಅಸ್ಮಿತೆಯ ಬಗ್ಗೆ ತನ್ನ ವಚನದ ಮೂಲಕವೇ ತಿಳಿಸಿದ ಶ್ರೇಷ್ಠ ವಚನಕಾರರಾಗಿದ್ದು, ಆತ್ಮಕ್ಕೆ ಯಾವುದೇ ಜಾತಿ, ಲಿಂಗ ಭೇದವಿಲ್ಲವೆಂದು ಅಂದಿನ ಕಾಲದಲ್ಲಿಯೇ ತಿಳಿಸಿದ ವಚನಕಾರ ಎಂದು ಕೆ ಟಿ ಏಳಗಿ ಅವರು ಹೇಳಿದರು.ಪಟ್ಟಣದ ರಾಮಲಿಂಗ ಚೌಡೇಶ್ವರಿ ದೇವಸ್ಥಾನದಲ್ಲಿ ಸಾಹಿತಿ ಹಾಗೂ ಸಮುದಾಯದ ಅಧ್ಯಕ್ಷ ಬಸವರಾಜ ಯಂಕಂಚಿ ಮಾತನಾಡಿ, ಬಸವಣ್ಣ, ದೇವರದಾಸಿಮಯ್ಯ ಹೀಗೆ ಅನೇಕ ವಚನಕಾರರು ತಮ್ಮ ಕಾಲದಲ್ಲಿಯೇ ಮಹಿಳೆ ಮತ್ತು ಪುರುಷರಿಗೆ ಸಮಾನ ಹಕ್ಕು ನೀಡಿದರು. ವಚನಗಳ ಮೂಲಕ ಸಾಮಾಜಿಕ ಕ್ರಾಂತಿ ಮಾಡಿದರು. ದೇವರ ದಾಸಿಮಯ್ಯ ಅವರ ವಚನಗಳು ಮನುಷ್ಯನ ದಿಕ್ಕನ್ನೇ ಬದಲಿಸುತ್ತವೆ. ಜೀವನದ ಅನುಭವ ಅವರ ವಚನಗಳಲ್ಲಿವೆ. ಜಯಂತಿ ಆಚರಿಸುವ ಮೂಲಕ ಅವರ ಬದುಕಿನ ಅನೇಕ ಮಜಲುಗಳನ್ನು ನಾವೆಲ್ಲರು ಅಳವಡಿಸಿಕೊಳ್ಳಬೇಕು ಎಂದರು.ಈ ಸಂದರ್ಭದಲ್ಲಿ ಗುರುಪಾದಪ್ಪಾ ಜೀರಂಕಲಗಿ, ಗಂಗಾಧರ…
Udayarashmi kannada daily newspaper
ಬೆಂಗಳೂರು: ರಾಜ್ಯದಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಾದ ಮಾರ್ಚ್ 16 ರಿಂದ ಈವರೆಗೆ ಚುನಾವಣಾ ಅಕ್ರಮಕ್ಕೆ ಸಂಬಂಧಿಸಿದಂತೆ ರೂ.300 ಕೋಟಿಗೂ ಅಧಿಕ ಮೌಲ್ಯದ ನಗದು, ಮದ್ಯ, ಮಾದಕವಸ್ತು ಹಾಗೂ ಮತದಾರರಿಗೆ ಆಮಿಷವೊಡ್ಡಲು ಬಳಸುವ ಇತರೆ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.ಕರ್ನಾಟಕದ 28 ಕ್ಷೇತ್ರಗಳಿಗೆ ಏಪ್ರಿಲ್ 26 ಮತ್ತು ಮೇ 7 ರಂದು ಎರಡು ಹಂತಗಳಲ್ಲಿ ಲೋಕಸಭೆ ಚುನಾವಣೆ ನಡೆಯಲಿದೆ. ಮಾರ್ಚ್ 16 ರಿಂದ ಇಲ್ಲಿಯವರೆಗೆ ರಾಜ್ಯದಲ್ಲಿ ವಿಚಕ್ಷಣ ದಳ, ಸ್ಥಿರ ಕಣ್ಗಾವಲು ತಂಡ, ಪೊಲೀಸ್ ಅಧಿಕಾರಿಗಳನ್ನೊಳಗೊಂಡಿರುವ ಜಾರಿ ತಂಡಗಳ ಸಮನ್ವಯದಲ್ಲಿ ರೂ. 307.61 ಕೋಟಿ ಮೌಲ್ಯದ ನಗದು, ಮತ್ತಿತರ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಚುನಾವಣಾ ಆಯೋಗದ ಅಧಿಕಾರಿಗಳು ತಿಳಿಸಿದ್ದಾರೆ.46.01 ಕೋಟಿ ರೂಪಾಯಿ ನಗದು, 7.73 ಕೋಟಿ ರೂ. ಮೌಲ್ಯದ ಉಚಿತ ಕೊಡುಗೆಗಳು, 147 ಕೋಟಿ ರೂಪಾಯಿ ಮೌಲ್ಯದ ಮದ್ಯ, 9.75 ಕೋಟಿ ಮೌಲ್ಯದ ಮಾದಕ ವಸ್ತುಗಳು ಮತ್ತು 24.38 ಕೋಟಿ ರೂಪಾಯಿ ಮೌಲ್ಯದ ಚಿನ್ನ ಮತ್ತಿತರ ವಸ್ತುಗಳನ್ನು ವಶಕ್ಕೆ…
ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ ಕೊಲ್ಕತ್ತಾ: ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣದ ಇಬ್ಬರು ಆರೋಪಿಗಳಿಗೆ ಕೊಲ್ಕತ್ತಾ ಕೋರ್ಟ್ ಶುಕ್ರವಾರ ಮೂರು ದಿನಗಳ ಟ್ರಾನ್ಸಿಟ್ ರಿಮಾಂಡ್ ನೀಡಿದ್ದು, ಹೆಚ್ಚಿನ ತನಿಖೆಗಾಗಿ ಅವರನ್ನು ಬೆಂಗಳೂರಿಗೆ ಕರೆದೊಯ್ಯಲು ಎನ್ಐಎಗೆ ಅನುಮತಿ ನೀಡಿದೆ.ಬಂಧಿತ ಆರೋಪಿಗಳಾದ ಮುಸಾವಿರ್ ಹುಸೇನ್ ಶಾಜೀಬ್ ಹಾಗೂ ಅಬ್ದುಲ್ ಮಥೀನ್ ತಾಹಾನನ್ನು ವೈದ್ಯಕೀಯ ಪರೀಕ್ಷೆ ಮಾಡಿಸಿ ಅವರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು. ರಾಷ್ಟ್ರೀಯ ತನಿಖಾ ಸಂಸ್ಥೆಯ ಮನವಿ ಮೇರೆಗೆ ಸಿಟಿ ಸೆಷನ್ಸ್ ನ್ಯಾಯಾಲಯದ ಮುಖ್ಯ ನ್ಯಾಯಾಧೀಶರು ಮೂರು ದಿನಗಳ ಟ್ರಾನ್ಸಿಟ್ ರಿಮಾಂಡ್ ಗೆ ಅನುಮತಿ ನೀಡಿದ್ದಾರೆ. ಕೋರ್ಟ್ ನಿಂದ ವಶಕ್ಕೆ ಪಡೆದು ಆರೋಪಿಗಳನ್ನು ಎನ್ಐಎ ತಂಡ ಬೆಂಗಳೂರಿಗೆ ಕರೆತರಲಿದೆ ಎನ್ನಲಾಗಿದೆ.
ಕಾಂಗ್ರೆಸ್ ಅಧಿಕೃತ ಅಭ್ಯರ್ಥಿಯಾಗಿ ಆಲಗೂರರಿಂದ ನಾಮತ್ರ ಸಲ್ಲಿಕೆ ವಿಜಯಪುರ: ಚುನಾವಣೆ ಅಧಿಕಾರಿಯಾಗಿರುವ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರಿಗೆ ಕಾಂಗ್ರೆಸ್ನ ಲೋಕಸಭೆ ಅಭ್ಯರ್ಥಿ ಪ್ರೊ.ರಾಜು ಆಲಗೂರ ಅವರು ಶುಕ್ರವಾರ ನಾಮಪತ್ರ ಸಲ್ಲಿಸಿದರು.ನಂತರ ಸುದ್ದಿಗಾರರ ಜೊತೆ ಮಾತನಾಡಿ, ರಾಜ್ಯ ಕಾಂಗ್ರೆಸ್ನ ಕೆಲಸ ನಮ್ಮ ಕೈಹಿಡಿಯಲಿದೆ. ಜನ ನಮ್ಮ ಮೇಲೆ ವಿಶ್ವಾಸವಿಟ್ಟಿದ್ದಾರೆ. ನನ್ನ ಗೆಲುವು ಖಚಿತ ಎಂದು ಹೇಳಿದರು.ನನಗೆ ಪೂರ್ತಿ ಜಿಲ್ಲೆ ಗೊತ್ತಿಲ್ಲ ಎನ್ನುವ ಸಂಸದ ರಮೇಶ ಜಿಗಜಿಣಗಿಯವರಿಗೆ ಏನು ಹೇಳಬೇಕು. ನಾನು ಕಾಂಗ್ರೆಸ್ ಜಿಲ್ಲಾಧ್ಯಕ್ಷನಾಗಿ ಇಡೀ ಜಿಲ್ಲೆ ಪರಿಚಿತನಿದ್ದೇನೆ. ಎರಡು ಸಲ ಶಾಸಕನಾಗಿದ್ದೇನೆ. ನನಗೆ ರಾಜಕೀಯದ ಇತಿಹಾಸವಿದೆ, ದುಡಿದಿದ್ದೇನೆ. ಆದರೆ, ಚಿರಪರಿಚಿತರಾಗಿರುವ ಜಿಗಜಿಣಗಿಯವರ ಮುಖವನ್ನೇ ಜನರು ಮರೆತಿದ್ದಾರಲ್ಲ, ಯಾಕೆಂದರೆ ಇವರು ಯಾರಿಗೆ ಮುಖ ತೋರಿಸಿದ್ದಾರೆ ಹೇಳಿ ಎಂದು ವ್ಯಂಗ್ಯವಾಡಿದರು.ಯಾರು ಏನೇ ಮಾತಾಡಿದರೂ ಮತದಾರರಿಗೆ ಕಾಂಗ್ರೆಸ್ ಪಕ್ಷ ಜನಾನುರಾಗಿ ಅಂತ ಗೊತ್ತಾಗಿದೆ. ಅಭಿವೃದ್ಧಿ ಮಂತ್ರವಾಗಿಸಿಕೊಂಡು ಅವರ ಮುಂದೆ ನಾನೀಗ ನಿತಿದ್ದೇನೆ. ಗೆಲುವು ಆಗೇ ಆಗುತ್ತದೆ, ಜನರ ಪ್ರತಿಕ್ರಿಯೆ-ಉತ್ಸಾಹದಿಂದ ಈ ಮಾತು ಹೇಳುತ್ತಿರುವೆ. ಗೆದ್ದರೆ ಅವರ ಋಣ ತೀರಿಸುತ್ತೇನೆ…
ಕಲಬುರಗಿಯಲ್ಲಿ ಬೃಹತ್ ಸಾರ್ವಜನಿಕ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಖರ್ಗೆ ವಾಗ್ದಾಳಿ ಕಲಬುರಗಿ: ಪ್ರಧಾನಿ ಮೋದಿಯವರು ಭ್ರಷ್ಟಾಚಾರದ ವಿರುದ್ಧ ಹೋರಾಡುವುದಾಗಿ ಹೇಳುತ್ತಾರೆ, ಆದರೆ ಬಿಜೆಪಿ ಭ್ರಷ್ಟಾಚಾರ ಆರೋಪ ಹೊತ್ತವರಿಗೆ ಕ್ಲೀನ್ ಚಿಟ್ ನೀಡುವ ವಾಷಿಂಗ್ ಮೆಷಿನ್ನಂತೆ ಕೆಲಸ ಮಾಡುತ್ತಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಿಡಿಕಾರಿದ್ದಾರೆ.ಕಲಬುರಗಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಅವರ ನಾಮಪತ್ರ ಸಲ್ಲಿಕೆಯ ನಂತರ ಬೃಹತ್ ಸಾರ್ವಜನಿಕ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಖರ್ಗೆ, ಪ್ರಧಾನಿ ಮೋದಿಜಿ ಮತ್ತು ಶಾ ಬಳಿ ಒಂದು ದೊಡ್ಡ ಯಂತ್ರವಿದೆ. ವಾಷಿಂಗ್ ಮಷೀನ್. ಇದು ಎಷ್ಟು ದೊಡ್ಡ ಯಂತ್ರವೆಂದರೆ ಅದು ಬಟ್ಟೆಗಳನ್ನು ಮಾತ್ರವಲ್ಲ; ಮನುಷ್ಯರನ್ನು ಕೂಡ ಶುದ್ಧಗೊಳಿಸಬಲ್ಲದು.ಒಮ್ಮೆ ಬಿಜೆಪಿ ಸೇರಿದರೆ ಸಾಕು ಈ ಯಂತ್ರದ ಮೂಲಕ ಹಾದು ಎಲ್ಲರೂ ಪರಿಶುದ್ಧರಾಗುತ್ತಾರೆ. ಭ್ರಷ್ಟತೆಯ ಆರೋಪದ ಮೇಲೆ ಜೈಲಿಗೆ ಕಳುಹಿಸಲ್ಪಟ್ಟವರು, ಭ್ರಷ್ಟಾಚಾರ ಆರೋಪ ಪ್ರಕರಣ ದಾಖಲಾದವರು, ನೀವೇ ಜೈಲಿಗೆ ಕಳಿಸದವರೆಲ್ಲಾ ನಿಮ್ಮ ಪಕ್ಷಕ್ಕೆ ಸೇರಿದ ಮೇಲೆ ಅದು ಹೇಗೆ ಪರಿಶುದ್ಧರಾಗುತ್ತಾರೆ? ಎಂದು ಪ್ರಶ್ನಿಸಿದರು.ಮೋದಿಜೀ ಭ್ರಷ್ಟರನ್ನು ಎಂದಿಗೂ ಬಿಡುವುದಿಲ್ಲ…
ವಿಜಯಪುರ: ಡಾ. ಬಿ.ಆರ್. ಅಂಬೇಡ್ಕರ್ ಸ್ಮಾರಕ ಸಂಸ್ಥೆಯ ನಳಂದ ಪದವಿ ಪೂರ್ವ ಕಾಲೇಜು ಕೆ.ಎಚ್.ಬಿ. ಕಾಲನಿ, ವಿಜಯಪುರ ಇದರ ದ್ವಿತೀಯ ಪಿ.ಯು.ಸಿ. ಪರೀಕ್ಷೆ ೨೦೨೪ರ ಸಾಲಿನ ವಿಜ್ಞಾನ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ನಂದಿನಿ ಮಠಪತಿ ಶೇ.೯೫% ರಷ್ಟು, ದ್ವಿತೀಯ ಸ್ಥಾನವನ್ನು ಪರಮಾನಂದ ಕತ್ನಳ್ಳಿ ಶೇ.೯೪ ರಷ್ಟು, ತೃತೀಯ ಸ್ಥಾನವನ್ನು ಭಾಗ್ಯಶ್ರೀ ಅವರಾದಿ ಶೇ.೯೩ ರಷ್ಟು ಅಂಕಗಳನ್ನು ಪಡೆದುಕೊಂಡಿರುತ್ತಾರೆ. ಇವರೊಂದಿಗೆ ಚಿದಾನಂದ ಮಠಪತಿ ಶೇ.೯೨%, ಅಬ್ದುಲ ಕಯ್ಯೂಮ್ ಚಡಚಣ ಶೇ.೯೧%, ಚೇತನ ಮಠಪತಿ ಶೇ.೯೦%, ಸಹನಾ ಬೊಮ್ಮನಹಳ್ಳಿ ಶೇ.೯೦ %. ಶೃತಿ ಯಳವಂತಿ ಶೇ.೮೯%, ಸೌಮ್ಯ ಶೇ.೮೯%, ಸಾವಿತ್ರಿ ಹರಿಜನ ಶೇ.೮೮% ಪರಿಮಳ ಕಟ್ಟಿ ಶೇ.೮೮% ರಷ್ಟು ಶಿವಕುಮಾರ ಗೊಳಸಂಗಿ ಶೇ.೮೭% ರಷ್ಟು ಫಲಿತಾಂಶವನ್ನು ಮಾಡಿರುತ್ತಾರೆ.ಕಲಾ ವಿಭಾಗದಲ್ಲಿ : ಪ್ರಥಮ ಸ್ಥಾನ ಪ್ರವೀಣ ಇಮ್ಮಡಿ ಶೇ.೯೦%, ದ್ವಿತೀಯ ಸ್ಥಾನ ರಂಜಿತಾ ಮನಿಕ್ಯಾಳ ಶೇ.೮೯%, ತೃತಿಯ ಸ್ಥಾನ ರಾಜೇಶ ಅರವತ್ತು ಶೇ.೮೮% ಪಡೆದುಕೊಂಡರೆ, ಇವರೊಂದಿಗೆ ಸಾಗರ ಮಂಗಳೂರು ಶೇ.೮೭%, ಗುರುಪಾದ ಕಂಬಾರ ಶೇ.೮೭%, ಮಂಜುನಾಥ…
ಇಂಡಿಯಲ್ಲಿ ಸಿಡಿಲಿಗೆ ಇಬ್ಬರ ಬಲಿ ಇಂಡಿ: ಸಿಡಿಲು ಅಪ್ಪಳಿಸಿ ಇಬ್ಬರ ದಾರುಣ ಸಾವು. ಬಿರುಗಾಳಿ ಮಳೆಗೆ ಮರಗಳು ಧರೆಗುರುಳಿದ ಘಟನೆ ತಾಲ್ಲೂಕಿನಲ್ಲಿ ನಡೆದಿದೆ.ಗುರುವಾರ ಸಂಜೆ ವೇಳೆ ಬಿರುಗಾಳಿ ಸಮೇತ ಮಳೆಯಾಗಿದ್ದು ರೈತರಲ್ಲಿ ಸ್ವಲ್ಪ ಸಂತಸ ಮೂಡಿಸಿದ್ದರೆ, ಹಲವರ ದುಃಖಕ್ಕೆ ಕಾರಣವಾಗಿದೆ. ಪಟ್ಟಣದ ಮಾವಿನಹಳ್ಳಿ ರಸ್ತೆಯ ಜಲ ದೇವಪ್ಪ ಕೆರೆ ಹತ್ತಿರ ಇರುವ ಪೂಜಾರಿ ವಸ್ತಿಯಲ್ಲಿ 16 ವರ್ಷದ ಬಾಲಕ ಭೀರಪ್ಪ ನಿಂಗಪ್ಪ ಅವರಾದಿ ಮಳೆ ಬರುತ್ತಿದೆ ಎಂದು ಬೇವಿನ ಮರದ ಆಶ್ರಯದಲ್ಲಿ ಪಡೆಯುತ್ತಿದ್ದಂತೆ ಏಕಾಏಕಿ ಬಡಿದ ಸಿಡಿಲಿಗೆ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಅದರಂತೆ ತಾಲ್ಲೂಕಿನ ಹಿರೇ ಮಸಳಿ ಗ್ರಾಮದಲ್ಲಿ ಕೃಷಿ ಕಾರ್ಯದಲ್ಲಿ ತೊಡಗಿದ್ದ 43 ವರ್ಷದ ಸೋಮಶೇಖರ್ ಕಾಶಿಕನಾಥ ಪಟ್ಟಣಶೆಟ್ಟಿ ಸಿಡಿಲಿಗೆ ಜೀವ ತೆತ್ತಿದ್ದಾರೆ. ಇಷ್ಟಲ್ಲದೆ ಹಿರೇ ಮಸಳಿ ಗ್ರಾಮದ ಸುತ್ತಮುತ್ತ ಹಾಗೂ ಅಂಬಣ್ಣ ಸುಣಗಾರ ಇವರ ತೋಟದಲ್ಲಿ ಫಲಕೊಡಬೇಕಾದ ಲಿಂಬೆ ಗಿಡಗಳು ಹಾಗೂ ಇತರೆ ಮರಗಳು ನೆಲಕಚ್ಚಿವೆ. ಒಟ್ಟಾರೆಯಾಗಿ ಸಿಡಿಲು ಬಡಿದು ದುರಂತದಲ್ಲಿರುವ ಕುಟುಂಬಕ್ಕೆ ಪರಿಹಾರ ಹಾಗೂ ಹಾಗೂ ಹಾನಿಗೊಳಗಾದ ರೈತ…
ಇಂಡಿ: 2024 ರ ಲೋಕಸಭಾ ಚುನಾವಣೆ ಪ್ರಚಾರ ಹಿನ್ನೆಲೆಯಲ್ಲಿ ಜೆಡಿಎಸ್ ಪಕ್ಷದ ಕಾರ್ಯಕರ್ತರ ಹಾಗೂ ಮೈತ್ರಿ ಪಕ್ಷದ ಸಮಯನ್ವ ಸಮಿತಿಯ ಕಾರ್ಯಕ್ರಮದಲ್ಲಿ ನ್ಯಾಯವಾದಿ ಎಸ್ ಜೆ ವಾಲಿಕಾರ ಕಾಂಗ್ರೆಸ್ ಪಕ್ಷ ತೊರೆದು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾದರು.ಗುರುವಾರ ಪಟ್ಟಣದ ಶಾಂತೇಶ್ವರ ಮಂಗಲಕಾರ್ಯದಲ್ಲಿ ನಡೆದ ಸಮನ್ವಯ ಸಮಿತಿಯ ಸಭೆಯಲ್ಲಿ ಸಂಸದ ಅಭ್ಯರ್ಥಿ ರಮೇಶ್ ಜಿಗಜಿಣಿಗಿ, ಜೆಡಿಎಸ್ ಪಕ್ಷದ ಮುಖಂಡ ಬಿ.ಡಿ. ಪಾಟೀಲ, ವಿಧಾನ ಪರಿಷತ್ ಮಾಜಿ ಸದಸ್ಯ ಬಿ. ಜಿ. ಪಾಟೀಲ, ಆರ್ ಕೆ ಪಾಟೀಲ ಶ್ರೀಶೈಲಗೌಡ ಬಿರಾದಾರ ಅವರ ನೇತೃತ್ವದಲ್ಲಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾದರು.
ವಿಜಯಪುರ: ಸಿಂದಗಿ ತಾಲೂಕಿನ ಕನ್ನೊಳ್ಳಿ ಗ್ರಾಮದ ಡಿ. ಎಸ್.ಪಾಟೀಲ ಪದವಿ ಪೂರ್ವ ಮಹಾವಿದ್ಯಾಲಯದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟಣೆಗೊಂಡಿದ್ದು ಕಾಲೇಜಿನ ಫಲಿತಾಂಶ 98.43% ರಷ್ಟು ದಾಖಲಾಗಿದೆ.ಕುಮಾರಿ – ಸೌಮ್ಯ ಗೌರ 569/600 ಪ್ರಥಮ ಸ್ಥಾನ, ಕುಮಾರಿ – ಶಶಿಕಲಾ ಮಂಗೊಂಡಿ -568/600 ದ್ವಿತೀಯ ಸ್ಥಾನ, ಕುಮಾರಿ – ಪ್ರೀಯಾ ಸುಂಟ್ಯಾಣ 557/600 ತೃತೀಯ ಸ್ಥಾನ ಪಡೆದಿದ್ದಾರೆ. ಕಾಲೇಜಿನಲ್ಲಿ ಒಟ್ಟು 64 ವಿದ್ಯಾರ್ಥಿಗಳು ಪರೀಕ್ಷೆಗೆ ಹೆಸರು ನೋಂದಾಯಿಸಿದ್ದರು ಅದರಲ್ಲಿ 63 ವಿದ್ಯಾರ್ಥಿಗಳು ತೇರ್ಗಡೆ ಹೊಂದ್ದಿದ್ದಾರೆ. ಅದರಲ್ಲಿ 32 ವಿದ್ಯಾರ್ಥಿಗಳು ಅತ್ಯುತ್ತಮ ಶ್ರೇಣಿಯಲ್ಲಿ (ಡಿಸ್ಟಿಂಕ್ಷನ್), ಮತ್ತು 31 ವಿದ್ಯಾರ್ಥಿಗಳು ಉತ್ತಮ ಶ್ರೇಣಿ (ಪ್ರಥಮ ಶ್ರೇಣಿ)ಯಲ್ಲಿ ಉತ್ತೀರ್ಣರಾಗಿ ಕಾಲೇಜಿಗೆ ಕೀರ್ತಿ ತಂದಿದ್ದಾರೆ.ಈ ಸಾಧನೆ ತೋರಿದ ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ಸಿದ್ದನಗೌಡ ಪಾಟೀಲ ಹಾಗೂ ಆಡಳಿತ ಮಂಡಳಿಯ ಸರ್ವ ಸದಸ್ಯರು, ಕಾಲೇಜಿನ ಪ್ರಾಚಾರ್ಯರಾದ ಐ.ಡಿ.ಪಡಶೆಟ್ಟಿ ಹಾಗೂ ಉಪನ್ಯಾಸಕ ಸಿಬ್ಬಂದಿ ವರ್ಗ ಹರ್ಷ ವ್ಯಕ್ತಪಡಿಸಿ ವಿದ್ಯಾರ್ಥಿಗಳಿಗೆ ಅಭಿನಂದಿಸಿದ್ದಾರೆ.
