Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಬಸವನಬಾಗೇವಾಡಿ: ತಾಲೂಕಿನ ಜಾಯವಾಡಗಿ ಗ್ರಾಮದ ಆರಾಧ್ಯದೈವ ಸೋಮನಾಥೇಶ್ವರ, ಶಿವಪ್ಪ ಮುತ್ಯಾ ಜಾತ್ರಾಮಹೋತ್ಸವದಂಗವಾಗಿ ಶುಕ್ರವಾರ ಇಡೀ ದಿನ ಜರುಗಿದ ವಾದಿ-ಪ್ರತಿವಾದಿ ಗೀ ಗೀ ಪದಗಳು ಜನಮನಸೂರೆಗೊಂಡವು.ಸಿಂದಗಿ ತಾಲೂಕಿನ ಮದರಿಯ ಸಂಗನಬಸವೇಶ್ವರ ಗೀ ಗೀ ಪದ ಕಲಾ ಮೇಳ ಹಾಗೂ ಅಥಣಿ ತಾಲೂಕಿನ ಬಾಳೇಗರಿಯ ರೇಣುಕಾದೇವಿ ಗೀ ಗೀ ಪದ ಕಲಾ ಮೇಳದಿಂದ ವಾದಿ-ಪ್ರತಿವಾದಿ ಗೀ ಗೀ ಪದಗಳು ಜರುಗಿದವು. ಮದರಿಯ ರಾಜ್ಯ ಪ್ರಶಸ್ತಿ ವಿಜೇತ ಗಾಯಕ ಭಾಗಣ್ಣ ಲಕ್ಷ್ಮಣ ತಳವಾರ ಇವರಿಗೆ ಪರಶುರಾಮ ಮಾದರ ಅವರು ವಾಯಲೀನ್ ಸಾಥ್ ನೀಡಿದರು. ಬಾಳೇಗರಿಯ ಗಾಯಕಿ ಲಕ್ಷ್ಮೀಬಾಯಿ ಅಡಿವೆಪ್ಪ ಕೊಣ್ಣೂರ ಗೀ ಗೀ ಮುಖ್ಯಗಾಯಕಿಗೆ ಗೋಪಾಲ ಕೋಳಿ, ಶ್ರೀಕಾಂತ ಕೊಣ್ಣೂರ, ಶಾಂತಪ್ಪ ಜಮಾದಾರ ಸಾಥ್ ನೀಡಿದರು. ಎರಡು ಗೀ ಗೀ ಕಲಾಮೇಳಗಳು ಗರ್ಭಕಾಂಡ ವಿಷಯ ಸೇರಿದಂತೆ ವಿವಿಧ ವಿಷಯಗಳ ಕುರಿತು ಪ್ರಸ್ತುತ ಪಡಿಸಿದ ವಾದಿ-ಪ್ರತಿವಾದಿ ಗೀ ಗೀ ಪದಗಳನ್ನು ಜನರು ಆಲಿಸಿದರು.ಮುಖ್ಯ ಗಾಯಕಿ ಲಕ್ಷ್ಮೀಬಾಯಿ ಅಡಿವೆಪ್ಪ ಕೊಣ್ಣೂರ ಅವರನ್ನು ಮಾತನಾಡಿಸಿದಾಗ, ನಿಜವಾದ ಕಲಾವಿದರಿಗೆ ಎಲ್ಲ ಕಾಲದಲ್ಲಿಯೂ…
ಬಸವನಬಾಗೇವಾಡಿ: ೧೨ ನೇ ಶತಮಾನದ ಬಸವಣ್ಣನವರ ಕಾಲದಲ್ಲಿ ಎಲ್ಲ ಧರ್ಮದವರು ಶರಣರಾಗುವ ಧನ್ಯತೆ ಪಡೆಯುವ ಮೂಲಕ ಅದ್ಭುತವಾದ ಕ್ರಾಂತಿ ನಡೆಯಿತು. ಈ ಕಾಲ ಘಟದಲ್ಲಿ ಬಸವಾದಿ ಶರಣರಿಂದ ರಚನೆಯಾಗಿರುವ ವಚನ ಸಾಹಿತ್ಯ ಎಲ್ಲರಿಗೂ ಆದರ್ಶದ ಬದುಕಿಗೆ ದಾರಿದೀಪವಾಗಿದೆ ಎಂದು ಧಾರವಾಡದ ಮುರುಘಾಮಠದ ಮಲ್ಲಿಕಾರ್ಜುನ ಸ್ವಾಮೀಜಿ ಹೇಳಿದರು.ತಾಲೂಕಿನ ಅವಿಮುಕ್ತ ಸುಕ್ಷೇತ್ರ ಯರನಾಳ ಗ್ರಾಮದ ವಿರಕ್ತಮಠದ ಕರ್ತೃ ಜಗದ್ಗುರು ಪಂಪಾಪತಿ ಶಿವಯೋಗಿಗಳ ಜಾತ್ರಾಮಹೋತ್ಸವ ಹಾಗೂ ಗುರುಸಂಗನಬಸವ ಸ್ವಾಮೀಜಿಯವರ ಜನ್ಮಸುವರ್ಣ ಮಹೋತ್ಸವವನ್ನು ಗುರುವಾರ ಸಂಜೆ ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿ ಕಾರ್ಯಕ್ರಮದ ಸಮ್ಮುಖ ವಹಿಸಿ ಮಾತನಾಡಿದ ಅವರು, ಬಸವಣ್ಣನವರು ಸಾಮಾಜಿಕ ಕ್ರಾಂತಿಯಿಂದಾಗಿ ತಮ್ಮ ಮಂತ್ರಿ ಸ್ಥಾನವನ್ನು ತ್ಯಾಗ ಮಾಡಬೇಕಾಯಿತು. ವಚನ ಸಾಹಿತ್ಯ ಸಂರಕ್ಷಣೆ ಚನ್ನಬಸವಣ್ಣನವರಿಗೆ ಜವಾಬ್ದಾರಿ ವಹಿಸಿ ತಾವು ಕೂಡಲಸಂಗಮದ ಕಡೆಗೆ ತೆರಳಿದರು. ಚನ್ನಬಸವಣ್ಣನವರು ಸೇರಿದಂತೆ ಅನೇಕ ಶರಣರು ವಚನ ಸಾಹಿತ್ಯದ ಸಂರಕ್ಷಣೆ ಮಾಡಿದರು. ೧೨ ನೇ ಶತಮಾನದಲ್ಲಿ ಧರ್ಮದ ಜ್ಯೋತಿ ಬೆಳಗಿ ನಂತರ ಕೆಲ ವರ್ಷಗಳ ಕಾಲ ಆರಿ ಹೋಯಿತು. ನಂತರ ವಿಜಯನಗರ ಸಾಮ್ರಾಜ್ಯದ…
ವಿಜಯಪುರ: ವಿಜಯಪುರ ಜಿಲ್ಲಾ ಆಸ್ಪತ್ರೆಯಲ್ಲಿ ತಾತ್ಕಾಲಿಕ ಆಧಾರದ ಮೇಲೆ ೬ ಭದ್ರತಾ ಸಿಬ್ಬಂದಿ ನೇಮಕಾತಿ ಹುದ್ದೆಗಳಿಗಾಗಿ ಮಾಜಿ ಸೈನಿಕರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.ಆಸಕ್ತರು ಐದು ದಿನದ ಒಳಗಾಗಿ ತಮ್ಮ ವಿವರವನ್ನು ಉಪನಿರ್ದೇಶಕರ ಕಾರ್ಯಾಲಯ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ವಿಜಯಪುರ ಇವರಿಗೆ ಅರ್ಜಿಯನ್ನು ಸಲ್ಲಿಸಬಹುದು ಎಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿಜಯಪುರ: ಭಾರತ ರತ್ನ ಡಾ.ಬಿ.ಆರ್. ಅಂಬೇಡ್ಕರ್ ರವರ ೧೩೩ ನೇ ಜಯಂತಿ ಆಚರಣೆಯನ್ನು, ಲೋಕಸಭೆ ಸಾರ್ವತ್ರಿಕ ಚುನಾವಣಾ ನೀತಿ ಸಂಹಿತೆ ಹಿನ್ನಲೆಯಲ್ಲಿ, ಜಿಲ್ಲಾಡಳಿತ ವತಿಯಿಂದಏಪ್ರಿಲ್ ೧೪ ರಂದು ಬೆಳಿಗ್ಗೆ ೧೦ ಗಂಟೆಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವುದರ ಮೂಲಕ ಸರಳವಾಗಿ ಆಚರಿಸಲಾಗುವುದು.ಅಂದು ಬೆಳಿಗ್ಗೆ ೮ ಗಂಟೆಗೆ ನಗರದ ಡಾ.ಬಿ.ಆರ್. ಅಂಬೇಡ್ಕರ್ ವೃತ್ತದ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಗೌರವ ಸಮರ್ಪಿಸಲಾಗುವುದು. ಸಾರ್ವಜನಿಕರು, ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಎಲ್ಲ ಸಿಬ್ಬಂದಿಗಳು ಭಾಗವಹಿಸಲು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಪುಂಡಲೀಕ ಮಾನವರ ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.
ವಿಜಯಪುರ: ಸಧೃಡ ಭಾರತ ನಿರ್ಮಾಣಕ್ಕಾಗಿ, ಸಶಕ್ತ ಭಾರತವನ್ನು ಮುನ್ನೆಡಸಲು ಯೋಗ್ಯ ವ್ಯಕ್ತಿಯನ್ನು ಆಯ್ಕೆ ಮಾಡಲು ಮತದಾನ ಅತ್ಯಗತ್ಯವಾಗಿದೆ. ಹಾಗಾಗಿ ಎಲ್ಲರೂ ಕಡ್ಡಾಯವಾಗಿ ಮತ ಚಲಾಯಿಸಬೇಕು ಎಂದು ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಟಿ.ಭೂಬಾಲನ್ ಹೇಳಿದರು.ಅವರು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಲೋಕಸಭೆ ಚುನಾವಣೆ-೨೦೨೪ರ ನಿಮಿತ್ತ ಮತದಾನ ಜಾಗೃತಿ ಮೂಡಿಸುವ ಸ್ಥಬ್ಧಚಿತ್ರ ವಾಹನಕ್ಕೆ ಶುಕ್ರವಾರ ಹಸಿರು ನಿಶಾನೆ ತೋರುವುದರ ಮೂಲಕ ಮಾತನಾಡಿದರು.ಮತ ಚಲಾಯಿಸುವುದರ ಮೂಲಕ ದೇಶದ ಸಮಗ್ರತೆ ಹಾಗೂ ಪ್ರಗತಿಗೆ ಮುನ್ನುಡಿ ಬರೆಯಬೇಕು. ನಾವು ಹಾಕುವ ಮತ ಕೇವಲ ಒಬ್ಬ ವ್ಯಕ್ತಿಗೆ ಸೀಮಿತವಾಗಿರುವುದಿಲ್ಲ ಅದು ದೇಶದ ಭವಿಶ್ಯವನ್ನು ನಿರ್ಮಾಣ ಮಾಡುವ, ಅಭಿವೃದ್ಧಿಗೆ ಪೂರಕವಾಗಿರುವ ಮೆಟ್ಟಿಲು ಆಗಿರುತ್ತದೆ ಎಂದು ಹೇಳಿದರು.ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಶಿ ಆನಂದ ಮಾತನಾಡಿ, ಮತದಾನದಿಂದ ದೇಶದ ಆಭಿವೃದ್ಧಿ ಸಾಧ್ಯ. ನನ್ನ ಒಂದು ಒಂದು ಮತದಾನವೂ ದೇಶದ ಭವಿಷ್ಯಕ್ಕೆ ಸಹಕಾರಿಯಾಗುತ್ತದೆ ಎಂಬುದನ್ನು ಅರಿತುಕೊಂಡು ಮತ ಚಲಾಯಿಸಬೇಕು. ಬಹುದೊಡ್ಡ ಪ್ರಜಾಪ್ರಭುತ್ವ ದೇಶ ಭಾರತಕ್ಕೆ ಮತದಾನ ಎಂಬುದು ಅತ್ಯಂತ ಪ್ರಾಮುಖ್ಯತೆ ಹೊದಿರುವ ಕರ್ತವ್ಯವಾಗಿದೆ ಎಂದರು.ಈಗಾಗಲೇ…
ದೇವರಹಿಪ್ಪರಗಿ: ಮತದಾನ ಎಂಬುದು ಪ್ರಜಾಪ್ರಭುತ್ವದ ಹಬ್ಬ. ಇದರಲ್ಲಿ ನಾವೆಲ್ಲರೂ ಭಾಗಿಯಾಗಿ ನಮ್ಮ ಹಕ್ಕನ್ನು ಚಲಾಯಿಸೋಣ ಎಂದು ತಾಲ್ಲೂಕು ಪಂಚಾಯಿತಿ ಇಓ ಸಂಜೀವ ಜುನ್ನೂರ ಹೇಳಿದರು.ಪಟ್ಟಣದಲ್ಲಿ ಶುಕ್ರವಾರ ತಾಲ್ಲೂಕು ಪಂಚಾಯಿತಿ ಸ್ವೀಪ್ ಸಮಿತಿ ಮತ್ತು ಪಟ್ಟಣ ಪಂಚಾಯಿತಿ ಇವರ ಸಹಯೋಗದಲ್ಲಿ ಜರುಗಿದ ಮತದಾನ ಜಾಗೃತಿ ಅಭಿಯಾನದಲ್ಲಿ ಪಾಲ್ಗೊಂಡು ಮಾತನಾಡಿದರು. ಯಾರೊಬ್ಬರೂ ಮತದಾನದಿಂದ ವಂಚಿತರಾಗದಂತೆ ತಾಲ್ಲೂಕು, ಜಿಲ್ಲಾ, ಪಟ್ಟಣ ಪಂಚಾಯಿತಿಗಳ ಅಡಿಯಲ್ಲಿ ಹಲವಾರು ಮತದಾನ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಅಧಿಕಾರಿಗಳು ಮತ್ತು ಸಿಬ್ಬಂದಿ ಜನರನ್ನು ಜಾಗೃತಿಗೊಳಿಸಿ ಮತದಾನದಲ್ಲಿ ಪಾಲ್ಗೊಳ್ಳುವಂತೆ ಶ್ರಮಿಸಬೇಕು ಎಂದರು.ತಹಶೀಲ್ದಾರ ಪ್ರಕಾಶ ಸಿಂದಗಿ ಮತದಾನ ಪ್ರತಿಜ್ಞಾವಿಧಿ ಬೋಧಿಸುವುದರ ಮೂಲಕ ಬೈಕ್ ರ್ಯಾಲಿಗೆ ಚಾಲನೆ ನೀಡಿದರು.ತಾಲ್ಲೂಕು ಪಂಚಾಯಿತಿಯಿಂದ ಆರಂಭಗೊಂಡ ಬೈಕ್ ರ್ಯಾಲಿ ಮೋಹರೆ ಹನುಮಂತರಾಯ ವೃತ್ತ, ಮೇನ್ ಬಜಾರ್, ಪತ್ತಾರಕಟ್ಟಿ, ಬೇವಿನಕಟ್ಟಿ, ಕರಿಸಿದ್ಧೇಶ್ವರ ದೇವಸ್ಥಾನ ಮಾರ್ಗವಾಗಿ ವಿವಿಧ ಬೀದಿಗಳಲ್ಲಿ ಸಂಚರಿಸಿ ಅಂಬೇಡ್ಕರ್ ವೃತ್ತ ತಲುಪಿ ಸಮಾರೋಪಗೊಂಡಿತು. ಈ ಸಂದರ್ಭದಲ್ಲಿ ತಪ್ಪದೆ ಮತದಾನ ಮಾಡಿ, ನಮ್ಮ ಹಕ್ಕನ್ನು ನಾವು ಚಲಾಯಿಸೋಣ, ನಿಮ್ಮ ಮತ, ನಿಮ್ಮ ಹಕ್ಕು,…
ದೇವರಹಿಪ್ಪರಗಿ: ಪಟ್ಟಣದ ಯಲಗೂರ ಲೇಔಟ್ ವ್ಯಾಪ್ತಿಯಲ್ಲಿ ಬೊರೆವೆಲ್ ಕೊರೆಯಿಸುವುದರ ಮೂಲಕ ಕುಡಿಯುವ ನೀರಿನ ವ್ಯವಸ್ಥೆ ಮಾಡುವಂತೆ ಆಗ್ರಹಿಸಿ ಸಾರ್ವಜನಿಕರು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಎಲ್.ಡಿ.ಮುಲ್ಲಾ ಅವರಿಗೆ ಮನವಿ ಸಲ್ಲಿಸಿದರು.ಪಟ್ಟಣದ ವಿಜಯಪುರ ರಸ್ತೆಯಲ್ಲಿರುವ ನೂತನ ಹಣಮಂತ ಯಲಗೂರ ಲೇಔಟ್ ವ್ಯಾಪ್ತಿಯಲ್ಲಿ ಸುಮಾರು ೨೫ ಮನೆಗಳು ನಿರ್ಮಾಣವಾಗಿದ್ದು, ಇಲ್ಲಿ ನೀರಿನ ಸರಬರಾಜು ಇರುವುದಿಲ್ಲ. ಇದರಿಂದ ಸಾರ್ವಜನಿಕರಿಗೆ ನೀರಿನ ಕೊರತೆ ಕಾಡುತ್ತಿದೆ. ಆದ್ದರಿಂದ ಪಟ್ಟಣ ಪಂಚಾಯಿತಿಯಿಂದ ಬೊರವೆಲ್ ಕೊರೆಯಿಸಿ ಕುಡಿಯುವ ನೀರು ಪೂರೈಸಿದರೆ ಸಾರ್ವಜನಿಕರ ನೀರಿನ ತಾಪತ್ರಯ ತಪ್ಪಿದಂತಾಗುತ್ತದೆ. ಆದ್ದರಿಂದ ಕೂಡಲೇ ಬೊರೆವೆಲ್ ವ್ಯವಸ್ಥೆ ಮಾಡಬೇಕು ಎಂದು ಆಗ್ರಹಿಸಿದರು.ಶಂಕರಗೌಡ ಪಾಟೀಲ(ಯರನಾಳ), ಮುನ್ನಾ ಮಳಖೇಡ, ಅಪ್ಪಾಕರ ಚಿಕ್ಕಸಿಂದಗಿ, ನಬಿರಸೂಲ್ ಮಣೂರ, ಅಷ್ಫಾಕ್ ಚಿಕ್ಕಸಿಂದಗಿ, ರಾಜೇಸಾಬ್ ಚಿಕ್ಕಸಿಂದಗಿ, ಇಬ್ರಾಹಿಂ ತಾಂಬೋಳಿ, ಕಾಶೀನಾಥ ಕಡ್ಲೇವಾಡ, ಯಾಕೂಬ್ ನದಾಫ್, ದಾದಾ ತಾಂಬೋಳಿ ಇದ್ದರು.
ಸಿಂದಗಿ: ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಶ್ರೀ ಪದ್ಮರಾಜ ಮಹಿಳಾ ಸ್ವತಂತ್ರ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ಪದವಿ ಪೂರ್ವ ಕಾಲೇಜಿನ ಕಲಾ ವಿಭಾಗದಿಂದ ಪರೀಕ್ಷೆಗೆ ಹಾಜರಾದ ಒಟ್ಟು ೧೭೩ ಜನ ವಿದ್ಯಾರ್ಥಿನಿಯರಲ್ಲಿ ೫೪ ವಿದ್ಯಾರ್ಥಿನಿಯರು ಅತ್ಯುನ್ನತ ಶ್ರೇಣಿ, ೧೦೧ ವಿದ್ಯಾರ್ಥಿನಿಯರು ಪ್ರಥಮ ಶ್ರೇಣಿ, ೧೧ ವಿದ್ಯಾರ್ಥಿನಿಯರು ದ್ವಿತೀಯ ಶ್ರೇಣಿಯಲ್ಲಿ ಪಾಸಾಗಿದ್ದಾರೆ.ವಾಣಿಜ್ಯ ವಿಭಾಗದಿಂದ ಪರೀಕ್ಷೆಗೆ ಹಾಜರಾದ ಒಟ್ಟು ೪೬ ವಿದ್ಯಾರ್ಥಿನಿಯರಲ್ಲಿ ೧೩ ಅತ್ಯುನ್ನತ ಶ್ರೇಣಿ, ೨೮ ವಿದ್ಯಾರ್ಥಿನಿಯರು ಪ್ರಥಮ ಶ್ರೇಣಿ, ಇಬ್ಬರು ವಿದ್ಯಾರ್ಥಿನಿಯರು ದ್ವಿತೀಯ ಶ್ರೇಣಿಯಲ್ಲಿ ತೆರ್ಗಡೆಹೊಂದಿದ್ದಾರೆ.ವಿಜ್ಞಾನ ಭಾಗದಿಂದ ಪರೀಕ್ಷೆಗೆ ಹಾಜರಾದ ೩೩ ವಿದ್ಯಾರ್ಥಿನಿಯರಲ್ಲಿ ೧೦ ಅತ್ಯುನ್ನತ ಶ್ರೇಣಿ, ೨೦ ಪ್ರಥಮ ಶ್ರೇಣಿ, ೦೩ ದ್ವಿತೀಯ ಶ್ರೇಣಿಯಲ್ಲಿ ತೆರ್ಗಡೆಯಾಗಿದ್ದಾರೆ. ವಿಜ್ಞಾನ ವಿಭಾಗದಲ್ಲಿ ಕಾಲೇಜಿನ ಒಟ್ಟು ಫಲಿತಾಂಶ ೧೦೦ಕ್ಕೆ ೧೦೦% ರಷ್ಟಾಗಿರುತ್ತದೆ.ಭೂಗೋಳಶಾಸ್ತ್ರ ವಿಷಯದಲ್ಲಿ ೩ ಜನ ವಿದ್ಯಾರ್ಥಿನಿಯರು, ರಾಜ್ಯಶಾಸ್ತ್ರ ವಿಷಯದಲ್ಲಿ ಇಬ್ಬರು ವಿದ್ಯಾರ್ಥಿನಿಯರು, ಅರ್ಥಶಾಸ್ತ್ರ, ಶಿಕ್ಷಣಶಾಸ್ತ್ರ, ಇತಿಹಾಸ ವಿಷಯದಲ್ಲಿ ಒರ್ವ ವಿದ್ಯಾರ್ಥಿನಿಯು ೧೦೦ ಕ್ಕೆ ೧೦೦ ಅಂಕಗಳನ್ನು ಪಡೆದುಕೊಂಡು ಕಾಲೇಜಿನ…
ಚಡಚಣ: ಸಮೀಪದ ಧುಮಕನಾಳ ಗ್ರಾಮದಲ್ಲಿ ಪ್ರತಿ ವರ್ಷದಂತೆ ಪವಿತ್ರ ರಂಜಾನ್ ಹಬ್ಬದಂದು ಮುಸ್ಲಿಂ ಬಾಂಧವರು ಪರಸ್ಪರ ಸಂಭ್ರಮ ಸಡಗರದಿಂದ ಈದ್-ಉಲ್-ಪಿತ್ರ್ ಹಬ್ಬವನ್ನು ಆಚರಿಸಿ ಪ್ರೀತಿಗೆ ಪಾತ್ರರಾದರು.ರಂಜಾನ್ ಹಬ್ಬದ ಸಂಕೇತ ದಾನ,ಪರಸ್ಪರ ಬಾಂಧವ್ಯ, ಬೆಸಯುವಂತಿತ್ತು ಗ್ರಾಮದ ಎಲ್ಲ ಮುಸ್ಲಿಂ ಇದ್ಗಾ ಮೈದಾನದಲ್ಲಿ ಪವಿತ್ರ ಸಾಮೂಹಿಕವಾಗಿ ಪ್ರಾರ್ಥನೆ ಸಲ್ಲಿಸಿ ನಾಡಿನ ಒಳಿತಿಗಾಗಿ,ಸುಖ ಶಾಂತಿ,ನೆಮ್ಮದಿಗಾಗಿ ವಿಶೇಷ ಪ್ರಾರ್ಥನೆ ಸಲ್ಲಿಸಿ ಪರಸ್ಪರ ಶುಭಾಶಯಗಳು ವಿನಿಮಯ ಮಾಡಿಕೊಂಡರು.
ಸಿಂದಗಿ: ತಾಲೂಕಿನ ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಮೋರಟಗಿ ಗ್ರಾಮದ ಶ್ರೀ ಸಿದ್ದರಾಮೇಶ್ವರ ಶಿಕ್ಷಣ ಸೇವಾ ಸಮಿತಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಕಲಾ ವಿಭಾಗದಲ್ಲಿ ೧೦೩ ವಿದ್ಯಾರ್ಥಿಗಳು ಪರೀಕ್ಷೆ ಹಾಜರಿದ್ದು ೧೦೩ ವಿದ್ಯಾರ್ಥಿಗಳು ಉತ್ತೀರ್ಣರಾಗಿ ಕಾಲೇಜಿನ ಕೀರ್ತಿಯನ್ನು ಹೆಚ್ಚಿಸಿದ್ದಾರೆ.ಕಲಾ ವಿಭಾಗದಲ್ಲಿ ರಕ್ಷಿತಾ ಗೋಗಿ ೫೭೯(ಶೇ.೯೮%) ಪ್ರಥಮ, ಆಕಾಶ ಮದರಿ ೫೭೮ (ಶೇ.೯೬.೩೩) ದ್ವಿತೀಯ, ಮಹೇಶ ತಳವಾರ ೫೭೫ (೯೫.೮೩%) ತೃತೀಯ ಸ್ಥಾನ ಪಡೆದಿದ್ದಾರೆ.ವಿದ್ಯಾರ್ಥಿಗಳ ಈ ಉತ್ತಮ ಸಾದನೆಗೆ ಕಾಲೇಜಿನ ಅಧ್ಯಕ್ಷರು, ಆಡಳಿತ ಮಂಡಳಿ ಸದಸ್ಯರು, ಕಾಲೇಜಿನ ಪ್ರಚಾರ್ಯರು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ್ದಾರೆ.
