Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಚುನಾವಣಾ ಬಾಂಡ್ ಗಳ ವಿವರ ನೀಡಲು SBI ನಕಾರS***ಮಾಹಿತಿ ಹಕ್ಕು ಕಾಯಿದೆ ಅಡಿ ನೀಡಲಾದ ಎರಡು ವಿನಾಯಿತಿ ಷರತ್ತುಗಳನ್ನು ಉಲ್ಲೇಖಿಸಿ ಮಾಹಿತಿ ನಿರಾಕರಿಸಿದ ಬ್ಯಾಂಕ್ ನವದೆಹಲಿ: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ ಬಿಐ) ಆರ್ ಟಿಐ ಅಡಿಯಲ್ಲಿ ಚುನಾವಣಾ ಬಾಂಡ್ ಗಳ ವಿವರಗಳನ್ನು ನೀಡುವುದಕ್ಕೆ ನಿರಾಕರಿಸಿದೆ. ದಾಖಲೆಗಳು ಚುನಾವಣಾ ಆಯೋಗದ ವೆಬ್ ಸೈಟ್ ನಲ್ಲಿದ್ದು, ಸಾರ್ವಜನಿಕವಾಗಿ ಲಭ್ಯವಿದ್ದರೂ ವಿಶ್ವಾಸಾರ್ಹ ಆಧಾರದಲ್ಲಿ ವೈಯಕ್ತಿಕ ಮಾಹಿತಿ ಇರುವ ಕಾರಣ ಅದನ್ನು ಆರ್ ಟಿಐ ನಲ್ಲಿ ನೀಡಲಾಗುವುದಿಲ್ಲ ಎಂದು ಹೇಳಿದೆ.ಚುನಾವಣಾ ಬಾಂಡ್ಗಳ ಯೋಜನೆ “ಅಸಂವಿಧಾನಿಕ ಮತ್ತು ಸ್ಪಷ್ಟವಾಗಿ ಅನಿಯಂತ್ರಿತವಾಗಿದೆ” ಎಂಬುದನ್ನು ಪರಿಗಣಿಸಿದ ಸುಪ್ರೀಂ ಕೋರ್ಟ್, ಏಪ್ರಿಲ್ 12, 2019 ರಿಂದ ಖರೀದಿಸಿದ ಬಾಂಡ್ಗಳ ಸಂಪೂರ್ಣ ವಿವರಗಳನ್ನು ಚುನಾವಣಾ ಆಯೋಗಕ್ಕೆ ಒದಗಿಸುವಂತೆ ಫೆಬ್ರವರಿ 15 ರಂದು ಎಸ್ಬಿಐಗೆ ನಿರ್ದೇಶನ ನೀಡಿತ್ತು ಅಷ್ಟೇ ಅಲ್ಲದೇ ಚುನಾವಣಾ ಆಯೋಗ ತನ್ನ ವೆಬ್ಸೈಟ್ನಲ್ಲಿ ಚುನಾವಣಾ ಬಾಂಡ್ ಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಮಾರ್ಚ್ 13 ರಂದು ಪ್ರಕಟಿಸಬೇಕೆಂದು ಹೇಳಿತ್ತು.ಮಾರ್ಚ್ 11 ರಂದು,…
ಚಡಚಣ: ಪಟ್ಟಣದ ಹೊರವಲಯದಲ್ಲಿರುವ ಸಂಗಪ್ಪ ಪಾವಲೆ ಅವರ ತೋಟದಲ್ಲಿ ಬಿದ್ದ ಸಿಡಿಲಿಗೆ ಎಮ್ಮೆ ಸಾವನಪ್ಪಿದ ಘಟನೆ ಬುಧವಾರ ಸಂಜೆ ನಡೆದಿದೆ.ಘಟನೆಯಲ್ಲಿ ಯಾವುದೇ ಜನರಿಗೆ ಪ್ರಾಣ ಹಾನಿಯಾಗಿಲ್ಲ ಎಂದು ತಿಳಿದು ಬಂದಿದೆ.
ಸಾಮೂಹಿಕ ಪ್ರಾರ್ಥನೆಯಲ್ಲಿ ಪಾಲ್ಗೊಂಡ ಸಚಿವ ಪಾಟೀಲ ವಿಜಯಪುರ: ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ರಂಜಾನ್ ಅಂಗವಾಗಿ ಇಂದು ಗುರುವಾರ ನಗರದಲ್ಲಿ ನಡೆದ ಸಾಮೂಹಿಕ ಪ್ರಾರ್ಥನೆಯಲ್ಲಿ ಪಾಲ್ಗೊಂಡರು.ವಿಜಯಪುರ ನಗರದ ದಖನಿ ಶಾಹಿ ಈದ್ಗಾದಲ್ಲಿ ಬೆಳಿಗ್ಗೆ ನಡೆದ ಸಾಮೂಹಿಕ ಪ್ರಾರ್ಥನೆಯಲ್ಲಿ ಪಾಲ್ಗೊಂಡ ಸಚಿವರು, ರಾಜ್ಯದಲ್ಲಿ ಉತ್ತಮ ಮಳೆ, ಬೆಳೆ, ಶಾಂತಿ, ಸೌಹಾರ್ದತೆಗಾಗಿ ಪ್ರಾರ್ಥನೆ ಸಲ್ಲಿಸಿದರು.ಈ ಸಂದರ್ಭದಲ್ಲಿ ಪ್ರಾರ್ಥನೆಯಲ್ಲಿ ಪಾಲ್ಗೊಂಡ ಜನರೊಂದಿಗೆ ಅವರು ಪರಸ್ಪರ ಶುಭಾಷಯ ವಿನಿಮಯ ಮಾಡಿದರು. ಅಲ್ಲದೇ, ಸಹೋದರತೆ, ಸಮಾನತೆ ಹಾಗೂ ಹಾಗೂ ಸರ್ವರ ಹಿತ ಬಯಸುವ ಈ ಹಬ್ಬ ಎಲ್ಲರಿಗೂ ಒಳಿತನ್ನುಂಟು ಮಾಡಲಿ ಎಂದು ಅವರು ಶುಭ ಹಾರೈಸಿದರು.ಈ ಸಂದರ್ಭದಲ್ಲಿ ನಾನಾ ಮುಖಂಡರು ಉಪಸ್ಥಿತರಿದ್ದರು.
ಬಿಟ್ಟಿ ಗ್ಯಾರಂಟಿ ಎನ್ನುತ್ತಿದ್ದವರಿಗೆ ವೇದಾಂತ್ ಉತ್ತರ :ಆಲಗೂರ ವಿಜಯಪುರ: ಕಲಾ ಮಾಧ್ಯಮದಲ್ಲಿ ರಾಜ್ಯಕ್ಕೆ ಮೊದಲ ರ್ಯಾಂಕ್ ಬಂದಿರುವ ಬಿಎಲ್ಡಿಇ ಸಂಸ್ಥೆಯ ಎಸ್.ಎಸ್. ಕಾಲೇಜಿನ ವಿದ್ಯಾರ್ಥಿ ವೇದಾಂತ ನಾವಿ ಭಾಗ್ಯಗಳ ನೆರವಿನಿಂದ ಬಂದ ಧೀಮಂತ ಹುಡುಗ ಎಂದು ಲೋಕಸಭೆ ಕಾಂಗ್ರೆಸ್ ಅಭ್ಯರ್ಥಿ ಪ್ರೊ.ರಾಜು ಆಲಗೂರ ಹೇಳಿದ್ದಾರೆ.ಸಾಧನೆ ಮಾಡಿರುವ ಈ ಹುಡಗನನ್ನು ಸತ್ಕರಿಸಿ, ಆತನ ಭವಿಷ್ಯಕ್ಕೆ ಶುಭ ಹರಸಿ ಮಾತನಾಡಿದ್ದಾರೆ.ಬಡ ಕುಟುಂಬದ ಈ ಪ್ರತಿಭಾವಂತನಿಗೆ ತಂದೆ ತೀರಿದ್ದಾನೆ. ತಾಯಿ ಮತ್ತು ಅಕ್ಕ ಇದ್ದಾರೆ. ಇವರ ಕುಟುಂಬ ನಿರ್ವಹಣೆಗೆ ಬಹಳ ಕಷ್ಟವಿತ್ತು. ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯರ ಸರಕಾರ ನೀಡಿದ ಭಾಗ್ಯ ಲಕ್ಷ್ಮಿ, ಗೃಹ ಲಕ್ಷ್ಮಿ ಯೋಜನೆಗಳೇ ಇವರಿಗೆ ಆಧಾರವಾಗಿದ್ದವು ಎಂದು ಸ್ವತಃ ವೇದಾಂತ್ ಉಪಕಾರ ಸ್ಮರಣೆಯಿಂದ ಹೇಳಿದ್ದಾನೆ. ಇದು ಜನಾನುರಾಗಿ, ಜನಪರ ಸರಕಾರದ ಸಾರ್ಥಕ್ಯವಾಗಿದೆ. ಕಷ್ಟ ಗೊತ್ತಿಲ್ಲದ, ಬಡವರ ಬವಣೆ ಅರಿಯದ ಜನ ಬಿಟ್ಟಿ ಭಾಗ್ಯ, ಪುಕ್ಕಟೆ ಗ್ಯಾರಂಟಿ ಎಂದು ಕುಹಕವಾಡಿದ್ದರು. ಅವರಿಗೆಲ್ಲ ಇಂತಹ ಉದಾಹರಣೆಗಳ ಮೂಲಕ ಉತ್ತರ ಸಿಗುತ್ತಲೇ ಇದೆ ಎಂದು ಆಲಗೂರ ಹೇಳಿದ್ದಾರೆ.ವೇದಾಂತ್ನಂತಹ…
ಮೋದಿ ಮತ್ತೆ ಪ್ರಧಾನಿಯಾಗುವುದು ನಿಶ್ಚಿತ :ಶಾಸಕ ಯತ್ನಾಳ ವಿಜಯಪುರ: ಕಳೆದ ಹತ್ತು ವರ್ಷಗಳ ಬಿಜೆಪಿ ಆಡಳಿತಾವಧಿಯಲ್ಲಿ ದೇಶದಲ್ಲಾದ ಬದಲಾವಣೆ, ಸಾಧನೆ, ಆರ್ಥಿಕ ಸುಧಾರಣೆ, ಜಾಗತಿಕ ಮನ್ನಣೆ, ಭ್ರಷ್ಟಾಚಾರ ರಹಿತ ಆಡಳಿತ ಜನಮನ ಗೆದ್ದು ಇಂದು ಮತ್ತೊಮ್ಮೆ ದೇಶಕ್ಕೆ ಮೋದಿ ಆಡಳಿತ ಬರಬೇಕೆಂಬುದು ಇಡಿ ದೇಶದ ಕೂಗಾಗಿದೆ. ವಿಶ್ವಮೆಚ್ಚಿದ ನಾಯಕ ನರೇಂದ್ರ ಮೋದಿಯವರು ಮತ್ತೊಮ್ಮೆ ಪ್ರಧಾನಿಯಾಗುವುದು ನಿಶ್ಚಿತ ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಅವರು ಬಿಜೆಪಿ ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದರು.ನಗರದ ಕೆ.ಹೆಚ್.ಬಿ ಕಾಲೋನಿಯಲ್ಲಿ ಹಮ್ಮಿಕೊಂಡಿದ್ದ ಪಾಲಿಕೆಯ ಐದು ವಾರ್ಡ್ ಗಳ ವ್ಯಾಪ್ತಿಯ ಪಂಡಿತ ದೀನ್ ದಯಾಳ ಉಪಾಧ್ಯಾಯ ಮಹಾಶಕ್ತಿ ಕೇಂದ್ರಗಳಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ ಜಿಗಜಿಣಗಿ ಅವರ ಪರ ಪ್ರಚಾರ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.ಕಾಂಗ್ರೆಸ್ಸಿಗರಿಗೆ ಮೋದಿ ಸರ್ಕಾರದ ವಿರುದ್ಧ ಆರೋಪ ಮಾಡಲು ಯಾವುದೇ ವಿಷಯ ಸಿಗುತ್ತಿಲ್ಲ. ಮೋದಿಯವರ ನೇತೃತ್ವದ ಕೇಂದ್ರ ಸರ್ಕಾರದ ಭ್ರಷ್ಟಾಚಾರ ರಹಿತ ಆಡಳಿತ, ಅಭಿವೃದ್ಧಿ ಪರ್ವ ಕಾಂಗ್ರೆಸ್ಸಿಗರ ಬಾಯಿ ಕಟ್ಟಿ ಹಾಕಿದೆ. ದೇಶದಲ್ಲಿ ಮೊದಲು…
ಮೋರಟಗಿ: ಈ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಗ್ರಾಮದ ಶ್ರೀ ಸಿದ್ದರಾಮೇಶ್ವರ ಶಿಕ್ಷಣ ಸೇವಾ ಸಮೀತಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಕಲಾ ವಿಭಾಗದಲ್ಲಿ ೧೦೩ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು ೧೦೩ ವಿದ್ಯಾರ್ಥಿಗಳು ಉತ್ತೀರ್ಣರಾಗಿ ಕಾಲೇಜಿನ ಕೀರ್ತಿ ಹೆಚ್ಚಿಸಿದ್ದಾರೆ.೧) ರಕ್ಷಿತಾ ಗೋಗಿ ೫೭೯(೯೬.೫೦%) ೨) ಆಕಾಶ ಮದರಿ ೫೭೮ (೯೬.೩೩%) ೩) ಮಹೇಶ್ ತಳವಾರ ೫೭೫(೯೫.೮೩%)ಮೂರು ವಿದ್ಯಾರ್ಥಿಗಳು ಉತ್ತಮ ಅಂಕಗಳನ್ನು ಪಡೆದು ಕಾಲೇಜಿಗೆ ಪ್ರಥಮ ದ್ವಿತೀಯ ಹಾಗೂ ತೃತೀಯ ಸ್ಥಾನ ಪಡೆದಿದ್ದಾರೆ.ಉತ್ತಮ ಸಾಧನೆ ಮಾಡಿ ಕಾಲೇಜಿನ ಕೀರ್ತಿ ಹೆಚ್ಚಿಸಿದ ಎಲ್ಲ ವಿದ್ಯಾರ್ಥಿಗಳಿಗೆ ಶ್ರೀಸಿದ್ದರಾಮೇಶ್ವರ ಶಿಕ್ಷಣ ಸಂಸ್ಥೆಯ ಚೇರಮೇನ್ ರು ಕಾರ್ಯದರ್ಶಿಗಳು ನಿರ್ದೇಶಕರುಗಳು ಮತ್ತು ಆಡಳಿತ ಮಂಡಳಿ ಶಿಕ್ಷಕರ ವರ್ಗ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
ಮೋರಟಗಿಯಲ್ಲಿ ಸಂಭ್ರಮದ ರಂಜಾನ್ ಆಚರಣೆ | ಸಾಮೂಹಿಕ ಪ್ರಾರ್ಥನೆ ಮೋರಟಗಿ: ಹುಟ್ಟು ಆಕಸ್ಮಿಕ, ಸಾವು ಅಂತೂ ನಿಶ್ಚಿತ. ಹುಟ್ಟು ಸಾವಿನ ಮದ್ಯದಲ್ಲಿ ದಾನ, ಧರ್ಮ, ಪರೋಪಕಾರ, ಮಾಡಿ ಪರ ಧರ್ಮದ ವ್ಯಕ್ತಿಯನ್ನು ಪ್ರೀತಿಯಿಂದ ಕಂಡು ಜೀವನ ಕಳೆಯಬೇಕು ಎಂದು ಅಂಜುಮನ್ ಸಮೀತಿ ಅಧ್ಯಕ್ಷ ಮುಸ್ಲಿಂ ಸಮುದಾಯದ ಹಿರಿಯ ಮುಖಂಡ ಮೈಬೂಬಸಾಬ ಕಣ್ಣಿ ಅಭಿಪ್ರಾಯ ವ್ಯಕ್ತಪಡಿಸಿದರು.ರಮಜಾನ್ ಹಬ್ಬದ ಪ್ರಯುಕ್ತ ಗುರುವಾರ ಗ್ರಾಮದ ಇದಗಾ ಮೈದಾನದ ಅವರಣದಲ್ಲಿ ಹಮ್ಮಿಕೊಂಡ ಸಾಮೂಹಿಕ ಪ್ರಾರ್ಥನೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.ಬಲಗೈಯಿಂದ ಕೊಟ್ಟ ದಾನ ಎಡಗೈಗೆ ಗೊತ್ತಾಗಬಾರದು ಅದು ಶ್ರೇಷ್ಠ ದಾನ, ಅನಾಥರು, ಅಂಗವಿಕಲರು, ನಿರ್ಗತಿಕರು ವೃದ್ಧರು ಕಂಡಲ್ಲಿ ಕೈಲಾದಷ್ಟು ಸಹಾಯ ಮಾಡಿ, ಇನ್ನೊಬ್ಬರಿಗೆ ಅನ್ಯ ಬಗೆಯಬೇಡಿ, ಇರುವಷ್ಟು ದಿನ ಶಾಂತಿ ಸಹಬಾಳ್ವೆಯಿಂದ ಜೀವನ ಕಳೆಯಬೇಕು. ಪರಮಾತ್ಮ ದೇಶದ ಎಲ್ಲ ಸಮುದಾಯದ ಬಾಂಧವರಿಗೆ ಅರೋಗ್ಯ ಕರುಣಿಸಲಿ ನಮ್ಮ ದೇಶಕ್ಕೆ ಸಮಯಕ್ಕೆ ಸರಿಯಾಗಿ ಮಳೆ ಬೆಳೆ ಆಗಲಿ ಎಂದು ಹಾರೈಸಿದರು.ನಂತರ ಸಾಮೂಹಿಕ ಪ್ರಾರ್ಥನೆ ಜರುಗಿತು. ಮೈಲಾನ ಮಂತ್ರವನ್ನು ಪಟಿಸಿದರು, ನಮಾಜ ನಂತರ…
ಸಂಭ್ರಮದ ರಮಜಾನ್ ಈದ್ ಆಚರಣೆ ಚಿಮ್ಮಡ: ಶಾಂತಿ, ಸಮಾನತೆಯ ಸಂಕೇತವಾಗಿರುವ ಪವಿತ್ರ ರಂಜಾನ್ ಹಬ್ಬವನ್ನು ಗ್ರಾಮದ ಮುಸ್ಲಿಂ ಬಾಂಧವರು ಸಡಗರ, ಸಂಭ್ರಮದೊಂದಿಗೆ ಪರಸ್ಪರ ಶುಭಾಷಯ ವಿನಿಮಯ ಮಾಡಿಕೊಳ್ಳುವ ಮೂಲಕ ಆಚರಿಸಿದರು.ಗ್ರಾಮದ ಈದ್ಗಾ ಮೈದಾನದಲ್ಲಿ ಗುರುವಾರ ಬೆಳಿಗ್ಗೆ ೯-೧೫ ಘಂ,ಗೆ ಸೇರಿದ ಬಾಂಧವರು ದುಆ ಮೂಲಕ ದೇಶಾದ್ಯಂತ ಶಾಂತಿ ಸೌಹಾರ್ದತೆ ಬೆಳಗಲಿ, ಪ್ರತಿಯೊಬ್ಬರು ಸನ್ಮಾರ್ಗದತ್ತ ಬರಲಿ, ಪ್ರತಿಯೊಬ್ಬರ ವಯಕ್ತಿಕ ತೊಂದರೆಗಳು ದೂರವಾಗಿ ನೆಮ್ಮದಿಯಿಂದ ಜೀವನ ನಡೆಸಲು ಅನುಗ್ರಹಿಸುವಂತೆ ಅಂಜುಮನ್ ಸಮೀತಿಯ ಅಧ್ಯಕ್ಷ ಹಾಫಿಜ ಸಲೀಮ ಜಮಖಂಡಿ, ಹಾಫಿಜ್ ಲಾಲ್ ಮೊಹಮ್ಮದ, ಹಾಫಿಜ ಆದಮ್ ಸರಕಾವಸ, ಸಾಮೂಹಿಕ ಪ್ರಾರ್ಥನೆ ನೆರವೇರಿಸಿ ಅಲ್ಲಾಹನಲ್ಲಿ ಪ್ರಾರ್ಥಿಸಿದರು. ಹಾಫಿಜ ಆಶಿಫ ಕೌಜಲಗಿಯವರು ಕಳೆದ ಒಂದು ತಿಂಗಳ ಕಾಲ ಸಾಮೂಹಿಕ ಕುರಾನ ಪಠನವನ್ನು (ತರಾವಿಹ ನಮಾಜ) ನೆರವೇರಿಸಿದರುಇದರ ಮೂಲಕ ಕಳೆದ ಒಂದು ತಿಂಗಳಿನಿಂದ ಆಚರಿಸಲಾಗುತಿದ್ದ ರೋಜಾ ( ಉಪವಾಸ ವೃತ ) ಆಚರಣೆಗೆ ವಿಧಾಯ ಹೇಳಲಾಯಿತು.ಸೌಹಾರ್ದತೆಯ ಅನಾವರಣ: ಕಳೆದ ಒಂದು ತಿಂಗಳಿನಿಂದ ಆಚರಿಸಲಾಗುತಿದ್ದ ರೋಜಾ ವ್ರತಧಾರಿಗಳಿಗೆ ರಾಜಕೀಯ ಮುಖಂಡರು ಸೇರಿದಂತೆ…
ವಿಜಯಪುರ: ತೊರವಿ ಭಾಗಕ್ಕೂ ನೀರಾವರಿ ಸೌಲಭ್ಯ ಕಲ್ಪಿಸಲು ಯೋಜನೆ ರೂಪಿಸಲಾಗಿದ್ದು, ತವರೂರಿನ ಋಣ ತೀರಿಸುವುದಾಗಿ ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ.ತೊರವಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರೊ.ರಾಜು ಆಲಗೂರ ಪರ ಬುಧವಾರ ರಾತ್ರಿ ಪ್ರಚಾರ ಕೈಗೊಂಡು ಅವರು ಮಾತನಾಡಿದರು.ರಾಜ್ಯ ಸರಕಾರ ಪ್ರತಿಯೊಬ್ಬರ ಮನೆಗಳಿಗೆ ಗ್ಯಾರಂಟಿ ಯೋಜನೆಗಳನ್ನು ತಲುಪಿಸಿದೆ. ಆದರೆ, ಕೇಂದ್ರ ಸರಕಾರ ಜನರ ಜೀವನವನ್ನು ಬೆಲೆ ಏರಿಕೆಯಿಂದ ದುರ್ಭರಗೊಳಿಸಿದೆ. ಪೆಟ್ರೋಲ್, ಅಡುಗೆ ಅನಿಲ ಬೆಲೆ ಹೆಚ್ಚಳವಾದಾಗ ಗದ್ದಲ ಉಂಟು ಮಾಡುತ್ತಿದ್ದ ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರಂಥವರು ಈಗ ಮೌನ ವಹಿಸಿದ್ದಾರೆ. ಚುನಾವಣೆ ಬಾಂಡ್ ಇವರ ನಿಜವಾದ ಮುಖವಾಡವನ್ನು ಬಯಲು ಮಾಡಿದೆ ಎಂದು ಅವರು ಹೇಳಿದರು.ನಾವು ಕೊಟ್ಟ ಭರವಸೆ ಈಡೇರಿಸಿ ಮತ ಕೇಳಲು ಬಂದಿದ್ದೇವೆ. ಸಬ್ ಕಾ ಸಾಥ್ ಎಂದವರು ಈಗ ದೇಶದಲ್ಲಿ ಬಿರುಕು ಮೂಡಿಸುತ್ತಿದ್ದಾರೆ. ಈ ಸಲ ಅವರಿಗೆ ಪ್ರಸ್ತಾಪಿಸಲು ಯಾವುದೇ ವಿಷಯಗಳಿಲ್ಲ. ಯಾವ ಗಾಳಿಯೂ ಇಲ್ಲ. ನಿಮ್ಮೂರಿನ…
ವಿಜಯಪುರ: ಜಿಲ್ಲೆಯ ಇಂಡಿ ತಾಲೂಕಿನ ಚಿಕ್ಕ ಗ್ರಾಮ ಚವಡಿಹಾಳ ಗ್ರಾಮದಲ್ಲಿರುವ ಶ್ರೀ ಭಾಗ್ಯವಂತಿ ವಿದ್ಯಾವರ್ಧಕ ಸಂಘದ ಶ್ರೀ ಭಾಗ್ಯವಂತಿ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ಪದವಿ ಪೂರ್ವ ಕಾಲೇಜಿನ ವ್ಯಾಸಂಗಮಾಡಿದ ಬಡವಮತ್ತು ರೈತರ ಮಕ್ಕಳಾದ ಬಾಲಕಿಯರು ಕಲಾ, ವಿಜ್ಞಾನ & ವಾಣಿಜ್ಯ ವಿಭಾಗದಲ್ಲಿ ೯೯%, ೯೮%, ಮತ್ತು ೯೬% ಅಂಕಗಳನ್ನು ಪಡೆದು ತಾಲೂಕಾ ಮಟ್ಟದಲ್ಲಿ ಪ್ರಥಮ ಶ್ರೇಣಿಯಲ್ಲಿ ಉತ್ತಿರ್ಣರಾಗಿ ಜಿಲ್ಲೆಯ ಶೈಕ್ಷಣಿಕಸಾಧನೆಗೆ ಗರಿ ಮೂಡಿಸಿದ್ದಾರೆ.ಇಂಡಿ ತಾಲೂಕಿನ ಗಡಿಭಾಗದಹಳ್ಳಿ ಚವಡಿಹಾಳ ಒಂದ ಚಿಕ್ಕ ಗ್ರಾಮ. ರೈತರು, ಬಡವರ ಮದ್ಯಮ ವರ್ಗದಮತ್ತು ಹಿಂದುಳಿದ ಶ್ರಮಜೀವಿಗಳು ಹೆಚ್ಚಿನ ಸಂಖ್ಯೆಯಲ್ಲಿ ವಾಸವಾಗಿರುವ ಜನಸಮುದಾಯದ ಈ ಹಳ್ಳಿಯಲ್ಲಿಹಿಂದುಳಿದ ವರ್ಗದ ಆಡಳಿತದಲ್ಲಿ ನಡೆಯುತ್ತಿರುವ ಶಿಕ್ಷಣ ಸಂಸ್ಥೆ ಶ್ರೀ ಭಾಗ್ಯವಂತಿ ವಿದ್ಯಾವರ್ಧಕ ಸಂಘ. ಇದು ಅಪ್ಪಟ ಗ್ರಾಮಿಣ ಪ್ರದೇಶವಾಗಿದ್ದು ಭಿಮಾತೀರದ ಸೆರಗಿನಲ್ಲಿದ್ದ ಈ ಗ್ರಾಮದ ಶಾಂತಪ್ಪ. ಪಂಚಪ್ಪ ದಶವಂತ ಎಂಬುವರುಈ ಭಾಗದ ಬಡಮಕ್ಕಳಿಗೆ ಶಿಕ್ಷಣ ದೊರೆತರೆ, ಬಡವ ಬದುಕು ಹಸನಾಗುವುದೆಂಬ ಯೋಚನೆಯಿಂದ ೧೯೯೧ರಲ್ಲಿಪ್ರಾಥಮಿಕ ಶಾಲೆಯಿಂದ ಶಿಕ್ಷಣ ಸಂಸ್ಥೆಯನ್ನು ಪ್ರಾರಂಭಿಸಿ, ೨೦೨೧ರಲ್ಲಿ ಪದವಿ…
