Author: editor.udayarashmi@gmail.com

“ವೀಣಾಂತರಂಗ”- ವೀಣಾ ಹೇಮಂತ್ ಗೌಡ ಪಾಟೀಲ್, ಮುಂಡರಗಿ-ಗದಗ ಇಡೀ ಜಗತ್ತಿನ ವಿವಿಧ ಭಾಷೆಗಳ ಸಾಹಿತ್ಯವನ್ನು ಗಮನಿಸಿದರೆ ಕನ್ನಡ ಸಾಹಿತ್ಯ ಅತ್ಯಂತ ಶ್ರೀಮಂತವಾಗಿದೆ ಎಂಬುದು ನಮ್ಮ ಅರಿವಿಗೆ ಬರುತ್ತದೆ ಬಹುಶಹ ಕನ್ನಡ ಸಾಹಿತ್ಯದಲ್ಲಿರುವ ಕಥೆ, ಕವನ, ಕಾವ್ಯ, ವಚನಗಳು, ಕೀರ್ತನೆಗಳು ಚಿಂತನಗಳು, ಸಿದ್ದಾಂತಗಳು, ಜನಪದ ಸಾಹಿತ್ಯ, ಪುರಾಣಗಳು ಪುಣ್ಯ ಕಥೆಗಳು,ಹನಿಗವನಗಳು ಮಿಡಿಗವನಗಳು, ಚುಟುಕಗಳು, ಸಾಂಗತ್ಯಗಳು,ದ್ವಿಪದಿಗಳು, ತ್ರಿಪದಿಗಳು, ಸುನೀತಗಳು ನಾಟಕಗಳು ಹೀಗೆ ಹತ್ತು ಹಲವು ಪ್ರಕಾರಗಳನ್ನು ನಾವು ಕಾಣಬಹುದು. ತಾವು ಬದುಕುತ್ತಿರುವ ರೀತಿ ಸಮಾಜದ ನೀತಿ ಹೆಣ್ಣು ಮಕ್ಕಳಿಗೆ ಇದ್ದ ಸೂಕ್ಷ್ಮವಾದ ಸಂವೇದನೆಗಳು ಆಕೆಯ ಆಸೆಯ ಆಕಾಂಕ್ಷೆಗಳು ತಲ್ಲಣಗಳು ಪ್ರೀತಿ ಪ್ರೇಮ ಕರುಣೆ ಮುಂತಾದ ನವರಸಗಳನ್ನು ಸುರಿಸುವ ಕೆಲವೊಮ್ಮೆ ಸಮಾಜವನ್ನು ಬಡಿದೆಚ್ಚರಿಸುವ ಸಾಹಿತ್ಯ ಹೆಣ್ಣು ಮಕ್ಕಳಿಂದ ಸೃಷ್ಟಿಯಾಯಿತು. ಈ ರೀತಿ ಸಾಹಿತ್ಯ ಸೃಷ್ಟಿಯಾಗುವ ಮುನ್ನ ಕಂತಿ ಎಂಬ ಮಹಿಳೆ ಮೊಟ್ಟಮೊದಲ ಬಾರಿ ಕವನಗಳನ್ನು ರಚಿಸಿದಳು ಎಂಬುದು ನಮ್ಮ ಗಮನಕ್ಕೆ ಬರುತ್ತದೆ, ಆದರೂ ಆಕೆಯ ಯಾವುದೆ ಕೃತಿಗಳು ಇಂದಿನವರೆಗೂ ಲಭ್ಯವಾಗಿಲ್ಲ. ಆದ್ದರಿಂದ ವಚನಕಾರ್ತಿ, ಕದಳಿಯ ಕರ್ಪೂರ…

Read More

ಸಿಂದಗಿ: ತಾಲೂಕಿನ ಕನ್ನೊಳ್ಳಿ ಗ್ರಾಮದ ಶ್ರೀ.ಡಿ. ಎಸ್.ಪಾಟೀಲ ಪದವಿ ಪೂರ್ವ ಮಹಾವಿದ್ಯಾಲಯದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟಣೆಗೊಂಡಿದ್ದು ಕಾಲೇಜಿನ ಫಲಿತಾಂಶ 98.43% ರಷ್ಟು ದಾಖಲಾಗಿದೆ.ಕುಮಾರಿ – ಸೌಮ್ಯ ಗೌರ 569/600 ಪ್ರಥಮ ಸ್ಥಾನ, ಕುಮಾರಿ – ಶಶಿಕಲಾ ಮಂಗೊಂಡಿ -568/600 ದ್ವಿತೀಯ ಸ್ಥಾನ, ಕುಮಾರಿ – ಪ್ರೀಯಾ ಸುಂಟ್ಯಾಣ 557/600 ತೃತೀಯ ಸ್ಥಾನ ಪಡೆದಿದ್ದಾರೆ. ಕಾಲೇಜಿನಲ್ಲಿ ಒಟ್ಟು 64 ವಿದ್ಯಾರ್ಥಿಗಳು ಪರೀಕ್ಷೆಗೆ ಹೆಸರು ನೋಂದಾಯಿಸಿದ್ದರು ಅದರಲ್ಲಿ 63 ವಿದ್ಯಾರ್ಥಿಗಳು ತೇರ್ಗಡೆ ಹೊಂದ್ದಿದ್ದಾರೆ. ಅದರಲ್ಲಿ 32 ವಿದ್ಯಾರ್ಥಿಗಳು ಅತ್ಯುತ್ತಮ ಶ್ರೇಣಿಯಲ್ಲಿ (ಡಿಸ್ಟಿಂಕ್ಷನ್), ಮತ್ತು 31 ವಿದ್ಯಾರ್ಥಿಗಳು ಉತ್ತಮ ಶ್ರೇಣಿ (ಪ್ರಥಮ ಶ್ರೇಣಿ)ಯಲ್ಲಿ ಉತ್ತೀರ್ಣರಾಗಿ ಕಾಲೇಜಿಗೆ ಕೀರ್ತಿ ತಂದಿದ್ದಾರೆ. ಈ ಸಾಧನೆ ತೋರಿದ ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾದ ಶ್ರೀ ಸಿದ್ದನಗೌಡ ಪಾಟೀಲ ಹಾಗೂ ಆಡಳಿತ ಮಂಡಳಿಯ ಸರ್ವ ಸದಸ್ಯರು, ಕಾಲೇಜಿನ ಪ್ರಚಾರ್ಯರಾದ ಶ್ರೀ ಐ.ಡಿ.ಪಡಶೆಟ್ಟಿ ಹಾಗೂ ಉಪನ್ಯಾಸಕ ಸಿಬ್ಬಂದಿ ವರ್ಗ ಹರ್ಷ ವ್ಯಕ್ತಪಡಿಸಿ ವಿದ್ಯಾರ್ಥಿಗಳಿಗೆ ಅಭಿನಂದಿಸಿದ್ದಾರೆ

Read More

ವಿಜಯಪುರ: ಸುಮಾರು ೧೦೦ ವರ್ಷಗಳ ಹಿಂದಿನ ಸಮಾಜದಲ್ಲಿ ಜಾತಿ ವ್ಯವಸ್ಥೆ ಬೇರು ಬಿಟ್ಟು ಸಮಾಜದಲ್ಲಿ ಒಂದು ಬಹುದೊಡ್ಡ ಕಂದಕವನ್ನೆ ನಿರ್ಮಿಸಿ ಶಿಕ್ಷಣ ಎನ್ನುವುದು ಕೆಲವರಿಗೆ ಮಾತ್ರ ಸಿಮಿತವಾಗಿರುವ ಕಾಲಘಟ್ಟದಲ್ಲಿ ದಲಿತ, ಶೋಷಿತ, ನಿರ್ಗತಿಕ, ಹಿಂದುಳಿದ ಪುರುಷ ಹಾಗೂ ಮಹಿಳೆಯರ ಶಿಕ್ಷಣಕ್ಕಾಗಿ ಸಮಾಜದಲ್ಲಿರುವ ತಾರತಮ್ಯಗಳನ್ನು ಎದುರಿಸಿ ಅನೇಕ ರೀತಿಯ ಸವಾಲುಗಳ ಮಧ್ಯ ಅಕ್ಷರ ಬೀಜ ಬಿತ್ತುವುದರೊಂದಿಗೆ ಬಹುದೊಡ್ಡ ಹೋರಾಟ ಮಾಡಿದ ಮಹಾನ ಮಹಾತ್ಮ ಜ್ಯೋತಿಬಾ ಫುಲೆ ಎಂದು ದಲಿತ ವಿದ್ಯಾರ್ಥಿ ಪರಿಷತ್ತಿನ ಮುಖಂಡ ಪ್ರಜ್ವಲ ಅಫಜಲಪುರ ಹೇಳಿದರು.ಜಿಲ್ಲೆಯ ದಲಿತ ವಿದ್ಯಾರ್ಥಿ ಪರಿಷತ್ ಜಿಲ್ಲಾ ಕೇಂದ್ರ ಕಚೇರಿಯಲ್ಲಿ ಮಹಾತ್ಮಾ ಜ್ಯೋತಿಬಾ ಫುಲೆ ಅವರ ಜಯಂತ್ಯುತ್ಸವನ್ನು ಭಾವಚಿತ್ರಕ್ಕೆ ಪೂಜೆ ಸಲ್ಲಿಸುವುದರೊಂದಿಗೆ ಆಚರಿಸಲಾಯಿತು.ತನ್ನ ಧರ್ಮಪತ್ನಿಯಾದ ಅಕ್ಷರದವ್ವ ಮಾತೆ ಸಾವಿತ್ರಿಬಾಯಿ ಫುಲೆ ಅವರೊಂದಿಗೆ ಜೊತೆಗೂಡಿ ಶಿಕ್ಷಣದಲ್ಲಿ ಬಹುದೊಡ್ಡ ಕ್ರಾಂತಿ ಮಾಡಿ ನೆರೆಯ ಮಹಾರಾಷ್ಟ್ರದಲ್ಲಿ ಪ್ರಾರಂಭವಾದ ಈ ಶಿಕ್ಷಣ ಕ್ರಾಂತಿ ದೇಶದ ಎಲ್ಲಕಡೆಗೂ ಪಸರಿಸಿ ಈ ನಾಡಿನಲ್ಲಿ ಎಲ್ಲರನ್ನು ಶಿಕ್ಷಣವಂತರಾಗಲು ಈ ದಂಪತಿಗಳ ಪಾತ್ರ ಎಂದಿಗೂ ಅಜರಾಮರವಾಗಿದೆ, ಆದ್ದರಿಂದ ಪ್ರತಿದಿನ…

Read More

ಜಾನಪದ ಸಂಭ್ರಮ | ಕಜಾಪ ವಡವಡಗಿ ವಲಯ ಘಟಕ ಉದ್ಘಾಟನೆ | ಗೋನಾಳ ಅಭಿಮತ ಬಸವನಬಾಗೇವಾಡಿ: ಜಾನಪದ ಸಂಸ್ಕೃತಿಯು ಆಚಾರ-ವಿಚಾರ, ನೀತಿ-ನಿಯಮ, ನಂಬಿಕೆ – ಸಂಪ್ರದಾಯ, ಮಾತು -ಹರಟೆ, ಮತ್ತು ಆಚರಣೆಗಳ ಮೂಲಕ ಮೌಖಿಕ ಪರಂಪರೆಯ ಮೂಲಕ ಜನರ ಒಳಿತಿಗಾಗಿ ಉಳಿದುಕೊಂಡಿವೆ. ಸಾರ್ವತ್ರಿಕ ಮೌಲ್ಯಗಳನ್ನು ಪ್ರತಿಪಾದಿಸುತ್ತ ಇಡಿ ಜಗತ್ತಿಗೆ ಮಾದರಿಯಾಗಿವೆ ಎಂದು ಕನ್ನಡ ಜಾನಪದ ಪರಿಷತ್ ಮುದ್ದೇಬಿಹಾಳ ತಾಲೂಕಾಧ್ಯಕ್ಷ ಎ ಆರ್ ಮುಲ್ಲಾ ಹೇಳಿದರು.ಬಸವನಬಾಗೇವಾಡಿ ತಾಲೂಕಿನ ಜಾಯವಾಡಗಿಯಲ್ಲಿ ಕನ್ನಡ ಜಾನಪದ ಪರಿಷತ್ ಜಿಲ್ಲಾ ಘಟಕ ವಿಜಯಪುರ ಮತ್ತು ತಾಲೂಕು ಘಟಕ ಬಸವನಬಾಗೇವಾಡಿ ಹಾಗೂ ಸೋಮನಾಥ ವ ಶಿವಪ್ಪ ಮುತ್ಯಾನ ಜಾತ್ರಾ ಸಮಿತಿ ಸಹಯೋಗದಲ್ಲಿ “ಜಾನಪದ ಸಂಭ್ರಮ” ಹಾಗೂ ” ಕ ಜಾ ಪ ವಡವಡಗಿ ವಲಯ ಘಟಕ” ಉದ್ಘಾಟಿಸಿ ಮಾತನಾಡಿದ ಅವರು ರಾಜ್ಯದಲ್ಲಿ ಡಾ ಎಸ್ ಬಾಲಾಜಿ ಮತ್ತು ಜಿಲ್ಲೆಯಲ್ಲಿ ಬಾಳನಗೌಡ ಪಾಟೀಲರ ನೇತೃತ್ವದಲ್ಲಿ ಜಾನಪದ ಸಂಸ್ಕೃತಿ ಉಳಿಸಿ ಬೆಳೆಸುವ ಕಾರ್ಯ ಭರದಿಂದ ಸಾಗುತ್ತಿದೆ. ಸಂಘ ಸಂಸ್ಥೆಗಳು ಸಹಕಾರ ನೀಡಬೇಕೆಂದು ಮನವಿ…

Read More

ವಿಜಯಪುರ: ಸುಳ್ಳು ಹೇಳುವವರನ್ನು ನಂಬದೇ ಸತ್ಯದ ಪರ ಇರುವವರಿಗೆ ಮತಹಾಕಿ ಗೆಲ್ಲಿಸಿ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಮತದಾರರಿಗೆ ಕರೆ ನೀಡಿದ್ದಾರೆ.ವಿಜಯಪುರ ನಗರದಲ್ಲಿ ಇಂದು ಬುಧವಾರ ಮುಸ್ಸಂಜೆ ನಡೆದ ನಾಗಠಾಣ ವಿಧಾನ ಸಭೆ ಕ್ಷೇತ್ರ ವ್ಯಾಪ್ತಿಯ ಚುನಾವಣೆ ಪ್ರಚಾರ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.ಪ್ರೊ.ರಾಜು ಆಲಗೂರ ಎರಡು ಬಾರಿ ಶಾಸಕರಾಗಿ, ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಕಟ್ಟಾ ಕಾಂಗ್ರೆಸ್ಸಿಗರಾಗಿ ಉತ್ತಮ ಕೆಲಸ ಮಾಡಿದ್ದಾರೆ. ಕಳೆದ ಸಲ ಜೆಡಿಎಸ್ ಗೆ ಟಿಕೇಟ್ ನೀಡಿದ ಹಿನ್ನೆಲೆ ಆಲಗೂರ ಅವರಿಗೆ ಚುನಾವಣೆಯಲ್ಲಿ ಟಿಕೆಟ್ ನೀಡಿರಲಿಲ್ಲ. ಈ ಬಾರಿ ಒಮ್ಮತದ ಅಭ್ಯರ್ಥಿಯಾಗಿ ಅವರಿಗೆ ಟಿಕೆಟ್ ನೀಡಲಾಗಿದೆ. ಅವರು ಶಾಸಕರಾಗಿ ವಿಧಾನಸಭೆಯಲ್ಲಿ ಮಾಡಿದಂತೆ ಲೋಕಸಭೆಯಲ್ಲಿ ವಿಜಯಪುರದ ಧ್ವನಿಯಾಗಿ ಕೆಲಸ ಮಾಡಲಿದ್ದಾರೆ ಎಂದು ಅವರು ಹೇಳಿದರು.ಸಂಸದ ರಮೇಶ ಜಿಗಜಿಣಗಿ ಅವರು ಯಾವುದೇ ಕೆಲಸ ಮಾಡಿಲ್ಲ. ರೇಲ್ವೆ ಮೇಲ್ಸೇತುವೆ ಕುರಿತು ಅವರು ಪ್ರಸ್ತಾಪಿಸುತ್ತಾರೆ. ಆದರೆ, ಈ ರೇಲ್ವೆ ಮೇಲ್ಸೇತುವೆಯಲ್ಲಿ ರಾಜ್ಯ…

Read More

ಸುಳ್ಳು ಸುದ್ದಿ ಪತ್ರಿಕಾ ತುಣುಕು ಹಂಚಿಕೆ | ಏಳು ಜನರ ವಿರುದ್ಧ ಪ್ರಕರಣ ದಾಖಲು | ಆರೋಪಿಗಳ ಬಂಧನಕ್ಕೆ ಪೊಲೀಸರ ಬಲೆ | ಬೆಂಗಳೂರು: ದಿನಪತ್ರಿಕೆಯಲ್ಲಿ ಪ್ರಕಟವಾಗಿದೆ ಎಂಬಂತೆ, ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಹೇಳಿಕೆ ನೀಡಿದ್ದಾರೆ ಎಂದು ಸುಳ್ಳು ಸುದ್ದಿ ಪತ್ರಿಕಾ ತುಣುಕು ಹಂಚಿಕೊಂಡು, ಕೋಮುಸಾಮರಸ್ಯಕ್ಕೆ ಧಕ್ಕೆ ತಂದ ಏಳು ಜನ ಕಿಡಿಗೇಡಿಗಳ ವಿರುದ್ಧ ಬೆಂಗಳೂರು ದಕ್ಷಿಣ ಸೆನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಆರೋಪಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ ಎನ್ನಲಾಗಿದೆ.ಬೆಂಗಳೂರು ನಿವಾಸಿ ಹರೀಶ್ ನಾಗರಾಜು ಎಂಬ ಸಾಮಾಜಿಕ ಕಾರ್ಯಕರ್ತರೊಬ್ಬರು ದೂರು ನೀಡಿದ್ದು, ಪ್ರಭಾಕರ್ ರೆಡ್ಡಿ, ವಸಂತ ಗಿಳಿಯಾರ್ ಸೇರಿದಂತೆ ಒಟ್ಟು ಏಳು ಜನರ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಸಾಮಾಜಿಕ ಜಾಲತಾಣ ವೇದಿಕೆಗಳಾದ ವಾಟ್ಸಾಪ್, ಫೇಸ್‌ಬುಕ್ ಮತ್ತು ಎಕ್ಸ್‌ ಖಾತೆಗಳಲ್ಲಿ ಸಿದ್ದರಾಮಯ್ಯ ಕುರಿತ ಸುಳ್ಳು ಸುದ್ದಿ ಪತ್ರಿಕಾ ತುಣುಕು ಹಂಚಿಕೊಂಡಿರುವವರ ವಿರುದ್ಧ ದೂರು ದಾಖಲಿಸಲಾಗಿದೆ.ಈ ಕುರಿತು ಸ್ವತಃ ಸಿದ್ಧರಾಮಯ್ಯ ತಮ್ಮ ಹೇಳಿಕೆ ಬಿಡುಗಡೆ ಮಾಡಿ ಸ್ಪಷ್ಟನೆ ನೀಡಿದ್ದು, ‘ಬಿಜೆಪಿ –…

Read More

ಮುದ್ದೇಬಿಹಾಳ: ಪಟ್ಟಣದ ಮಾರುತಿ ನಗರದ ನಿವಾಸಿ, ಹುಬ್ಬಳ್ಳಿಯ ವಿದ್ಯಾನಿಕೇತನ ಕಾಲೇಜು ವಿದ್ಯಾರ್ಥಿನಿ ಸಹನಾ ಈಳಗೇರ ೫೯೪ (೯೯%) ಅಂಕ ಗಳಿಸುವ ಮೂಲಕ ರಾಜ್ಯದಲ್ಲಿ ೫ನೇ ಸ್ಥಾನ ಪಡೆದು ತಾಲೂಕಿನ ಕೀರ್ತಿಯನ್ನು ಹೆಚ್ಚಿಸಿದ್ದಾಳೆ.

Read More

ಮುದ್ದೇಬಿಹಾಳ: ತಾಲೂಕಿನ ನಾಗರಬೆಟ್ಟ ಗ್ರಾಮದ ಆಕ್ಸಫರ್ಡ ಪಾಟೀಲ್ಸ್ ಸಮೂಹ ಶಿಕ್ಷಣ ಸಂಸ್ಥೆಯ ಎಸ್.ಡಿ.ವಿ.ವಿ ಟ್ರಸ್ಟ್ನ ಅಡಿಯಲ್ಲಿ ನಡೆಯುತ್ತಿರುವ ಆಕ್ಸಪರ್ಡ ಪಿಯು ಸಾಯಿನ್ಸ್ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯದಲ್ಲಿ ಸ್ಥಾನ ಗಿಟ್ಟಿಸುವ ಮೂಲಕ ಸಾಧನೆಗೈದಿದ್ದಾರೆ.ಅಮೃತಗೌಡ ಬಿರಾದಾರ ಹಾಗೂ ಆನಂದ ಶಂಕರಲಿಂಗಪ್ಪ ತಲಾ ೫೯೦ (೯೮.೩%) ಅಂಕಗಳನ್ನು ಪಡೆದು ರಾಜ್ಯಕ್ಕೆ ೯ನೇ ಸ್ಥಾನ ಹಾಗೂ ಜಿಲ್ಲೆಗೆ ದ್ವಿತೀಯ ಸ್ಥಾನ ಪಡೆದಿದ್ದಾರೆ. ಸಿದ್ರಾಮೇಶ ಢವಳಗಿ ಹಾಗೂ ಶ್ವೇತಾ ವಜ್ರಮಟ್ಟಿ ತಲಾ ೫೮೮ (೯೮%) ಅಂಕಗಳನ್ನು ಪಡೆದು ಕಾಲೇಜಿಗೆ ದ್ವೀತಿಯ ಸ್ಥಾನ ಮತ್ತು ಪೂಜಾ ಪಟ್ಟೇದ ಹಾಗೂ ರಾಧಿಕಾ ತಿಳ್ಳಿಹಾಳ ತಲಾ ೫೮೬(೯೭.೬೬%) ಅಂಕಗಳನ್ನು ಪಡೆದು ಕಾಲೇಜಿಗೆ ತೃತೀಯ ಸ್ಥಾನ ಪಡೆಯುವ ಮೂಲಕ ಸಾಧನೆ ಗೈದಿದ್ದಾರೆ.ಸಂಸ್ಥೆಯಲ್ಲಿ ಒಟ್ಟು ೯೦೩ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು ಶೇಕಡಾ ೧೦೦ಕ್ಕೆ ೧೦೦ರಷ್ಟು ಫಲಿತಾಂಶ ಪಡೆದು ಗಮನಸೆಳೆದಿದೆ. ಮಕ್ಕಳ ಈ ಸಾಧನೆಗೆ ಸಂಸ್ಥೆಯ ಅಧ್ಯಕ್ಷ ಎಂ.ಎಸ್.ಪಾಟೀಲ ಮತ್ತು ಕಾಲೇಜಿನ ಪ್ರಾಂಶುಪಾಲ ರೇವಣಸಿದ್ದ ಚಲವಾದಿ ಸೇರಿದಂತೆ ಎಲ್ಲ ಉಪನ್ಯಾಸಕರು ಮತ್ತು ಭೋಧಕೇತರ ಸಿಬ್ಬಂಧಿಗಳು ಹರ್ಷ ವ್ಯಕ್ತಪಡಿಸಿದ್ದಾರೆ.

Read More

ವಿಜಯಪುರ: ನಗರದ ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿಶುಕ್ರವಾರ ಮುಂಜಾನೆ 11:00 ಗಂಟೆಗೆ ಯುಗಾದಿ ಕಾವ್ಯ ಸಂಭ್ರಮ ಕಾರ್ಯಕ್ರಮ ಜರುಗಲಿದೆ. ಸಾನ್ನಿಧ್ಯವನ್ನು ಕನ್ನೂರ ಗುರಮಠದ ಸೋಮನಾಥ ಶಿವಾಚಾರ್ಯರು ವಹಿಸಲಿದ್ದಾರೆ. ಉದ್ಘಾಟಿನೆ ವಿಶ್ರಾಂತ ಡಿ ಎಸ್ ಪಿ ಬಸವರಾಜ ಚೌಕಿಮಠ ಮಾಡಲಿದ್ದಾರೆ. ಅಧ್ಯಕ್ಷತೆ ಡಿ ಎಸ್ ಪಿ ವಿಜಯಪುರ ಬಸವರಾಜ ಯಲಗಾರ ವಹಿಸುತ್ತಾರೆ.ಮುಖ್ಯ ಅತಿಥಿಗಳಾಗಿ ಜ್ಯೋತಿ ಚೌಕಿಮಠ, ಶಿಲ್ಪಾ ಯಲಗಾರ, ಈರಣ್ಣ ಬಿರಾದಾರಗೌಡರ, ಹೊನ್ನಪ್ಪ ಬಿಸನಾಳ, ಇಸಾಕ ಸಾರವಾಡ, ಜಗದೀಶ ಸಾಲಳ್ಳಿ ಆಗಮಿಸಲಿದ್ದಾರೆ.ಕವನ ವಾಚನ ಮಾಡುವ ಕವಿಗಳುಶೋಭಾ ಮೇಡೆಗಾರ, ಮಡಿವಾಳಮ್ಮ ನಾಡಗೌಡ, ಶಿಲ್ಪಾ ಬಸ್ಮೆ, ರೂಪಾ ರಜಪೂತ, ಶೋಭಾ ಹರಿಜನ, ಜಿ ಪಿ ಬಿರಾದಾರ, ಶಿವಾಜಿ ಮೋರೆ, ಶಿಲ್ಪಾ ಹಂಜಿ, ಪಾವ೯ತಿ ಸೊನ್ನದ, ಅಣ್ಣುಗೌಡ ಬಿರಾದಾರ, ಕಾಶಿರಾಯ ಹತ್ತಳ್ಳಿ, ಸಾವಿತ್ರಿ ಮೊನಾಜಿ, ಜಗದೀಶ ಬಿರಾದಾರ, ಅನ್ನಪೂರ್ಣ ಚೊಳಕೆ, ರುದ್ರಮ್ಮ ಗಿಡ್ಡಪ್ಪಗೋಳ, ಶಿವಲೀಲಾ ಕೊರವಾರ, ಶಿವಲೀಲಾ ಕೋರಿ, ಶಾಂತಲಾ ಪಾಟೀಲ, ಶ್ರೀಕಾಂತ ಮಾದರ, ಗಿರಿಜಾ ಪಾಟೀಲ, ಭಾರತಿ ಗೊಂಗಡಿ, ವಿದ್ಯಾ ಕಲ್ಯಾಣಶೆಟ್ಟಿ, ಸಿದ್ದನಗೌಡ ಕಾಶಿನಕುಂಟೆ, ಪ್ರತಿಭಾ…

Read More

ದೇವರಹಿಪ್ಪರಗಿ: ಪಟ್ಟಣದ ಬಿ.ಎಲ್‌ಡಿ.ಇ ಸಂಸ್ಥೆಯ ಎ.ಬಿ.ಸಾಲಕ್ಕಿ ಪದವಿಪೂರ್ವ ಮಹಾವಿದ್ಯಾಲಯದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಕಲಾ ವಿಭಾಗದಲ್ಲಿ ಶೇ ೯೮.೪೦ ಹಾಗೂ ವಾಣಿಜ್ಯ ವಿಭಾಗದಲ್ಲಿ ಶೇ ೯೭.೭೭ ಒಟ್ಟಾರೆ ಶೇ ೯೮.೨೩ ಫಲಿತಾಂಶ ಬಂದಿದೆ.ಕಲಾ ವಿಭಾಗದಲ್ಲಿ ದೀಪಾರಾಣಿ ತಳವಾರ ಸಮಾಜಶಾಸ್ತ್ರ ಹಾಗೂ ರಾಜ್ಯಶಾಸ್ತç ವಿಷಯಗಳಲ್ಲಿ ೧೦೦ಕ್ಕೆ ೧೦೦ ಅಂಕಗಳನ್ನು ಪಡೆದು ಶೇ ೯೭.೮೩ ಫಲಿತಾಂಶದೊಂದಿಗೆ ಪ್ರಥಮ, ಸೃಷ್ಠಿ ಹಡಗಲಿ ಕನ್ನಡ ಹಾಗೂ ಸಮಾಜಶಾಸ್ತ್ರ ವಿಷಯಗಳಲ್ಲಿ ೧೦೦ಕ್ಕೆ ೧೦೦ ಅಂಕಗಳಿಸಿ ಶೇ ೯೬.೮೩ ಫಲಿತಾಂಶದೊಂದಿಗೆ ದ್ವಿತೀಯ ಹಾಗೂ ಅಂಕಿತಾ ಕಾಖಂಡಕಿ ಮತ್ತು ದೀಪಾ ಪೂಜಾರಿ ಶೇ ೯೫.೩೩ ಫಲಿತಾಂಶದೊಂದಿಗೆ ತೃತೀಯ ಸ್ಥಾನ ಪಡೆದಿದ್ದಾರೆ.ವಾಣಿಜ್ಯ ವಿಭಾಗದಲ್ಲಿ ಸುಷ್ಮಾ ಬಾಗೇವಾಡಿ ಶೇ ೯೪.೬೭ ಫಲಿತಾಂಶದೊಂದಿಗೆ ಪ್ರಥಮ, ಕೀರ್ತಿ ಬಿರಾದಾರ ಶೇ ೯೩.೮೩ ಫಲಿತಾಂಶದೊಂದಿಗೆ ದ್ವಿತೀಯ ಹಾಗೂ ಲಕ್ಷ್ಮೀ ಬಿರಾದಾರ ಶೇ ೯೨.೮೩ ಫಲಿತಾಂಶದೊಂದಿಗೆ ತೃತೀಯ ಸ್ಥಾನ ಪಡೆದಿದ್ದಾಳೆ. ವಿದ್ಯಾರ್ಥಿನೀಯರ ಸಾಧನೆಗೆ ಪಾಲಕರು, ಸಂಸ್ಥೆಯ ಅಧ್ಯಕ್ಷರು, ಕಾರ್ಯದರ್ಶಿಗಳು, ಆಡಳಿತಾಧಿಕಾರಿಗಳು, ಸದಸ್ಯರು ಹಾಗೂ ಪ್ರಾಚಾರ್ಯರು, ಬೋಧಕ,…

Read More