Subscribe to Updates
Get the latest creative news from FooBar about art, design and business.
What's Hot
Author: editor.udayarashmi@gmail.com
ಲೇಖನ- ಡಾ ಶಶಿಕಾಂತ ಪಟ್ಟಣಪೂನಾ – ರಾಮದುರ್ಗಮೊ: 9552002338 ಉದಯರಶ್ಮಿ ದಿನಪತ್ರಿಕೆ ಕರ್ನಾಟಕ ಸರಕಾರ ಎಲ್ಲಾ ಶರಣರ ಜಯಂತಿಗಳನ್ನು ಆಚರಿಸುವ ಒಳ್ಳೆಯ ಯೋಜನೆಯನ್ನು ರೂಪಿಸಿದೆ. ಆದರೆ ಕಳೆದ ೧೩ ವರ್ಷಗಳಿಂದ ನಿರಂತರವಾಗಿ ಅದೆಷ್ಟೋ ಮನವಿಗಳನ್ನು ಲೇಖನಗಳನ್ನು ಬರೆದು ಸರಕಾರಕ್ಕೆ ಜೇಡರ ದಾಸಿಮಯ್ಯ ಮತ್ತು ದೇವರ ದಾಸಿಮಯ್ಯ ಇಬ್ಬರೂ ಬೇರೆ ಬೇರೆ ಎಂಬ ಮನವಿ ಸಲ್ಲಿಸಿದರೂ ಸಹಿತ ಕುರುಡು ಕೆಪ್ಪರ ಸರಕಾರ ಇದಕ್ಕೆ ಸ್ಪಂದಿಸುತ್ತಿಲ್ಲ. ಇದು ಲಿಂಗಾಯತ ನೇಕಾರ ಸಮುದಾಯದವರಿಗೆ ಮಾಡುವ ಬಹು ದೊಡ್ಡ ದ್ರೋಹವಾಗಿದೆ. ದೇವರ ದಾಸಿಮಯ್ಯ ಮತ್ತು ಜೇಡರ ದಾಸಿಮಯ್ಯ ಬೇರೆ ಬೇರೆದೇವರ ದಾಸಿಮಯ್ಯ ಮತ್ತು ಜೇಡರ ದಾಸಿಮಯ್ಯ ಇಬ್ಬರೂ ಬೇರೆ ಬೇರೆ. ಪ್ರತಿ ವರ್ಷವೂ ಕರ್ನಾಟಕ ಸರಕಾರವು ಆದ್ಯ ವಚನಕಾರ ದೇವರ ದಾಸಿಮಯ್ಯನ ಜಯಂತಿಗೆ ಲಕ್ಷ ಲಕ್ಷ ಹಣ ಕೊಟ್ಟು ರಾಜ್ಯಾದಂತ ದೇವರ ದಾಸಿಮಯ್ಯನವರ ಜಯಂತಿಯನ್ನು ಆಚರಿಸುವ ಕಾರ್ಯಕ್ಕೆ ಇಳಿದಿರುವುದು ಹಾಸ್ಯಾಸ್ಪದವಾಗಿದೆ.ದೇವರ ದಾಸಿಮಯ್ಯ ೧೧ ನೆಯ ಶತಮಾನದ ಶಿವ ಭಕ್ತ , ಇಮ್ಮಡಿ ಜಯಸಿಂಹನ ಮಡದಿ ಸುಗ್ಗಲೆ ಇವಳಿಗೆ…
ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತು ರಾಜ್ಯಾಧ್ಯಕ್ಷ ಹುಲಿಕಲ್ ನಟರಾಜ ಅಭಿಮತ ಉದಯರಶ್ಮಿ ದಿನಪತ್ರಿಕೆ ಕಾಗವಾಡ: ತಾಲೂಕಿನ ಕವಲಗುಡ್ಡ ಹೊರ ವಲಯದಲ್ಲಿರುವ ಈಶ್ವರ್ ದುಂಡಪ್ಪ ತೆಗ್ಗಿನವರ ಇವರ ಮನೆಗೆ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತು ರಾಜ್ಯಾಧ್ಯಕ್ಷ ಹುಲಿಕಲ್ ನಟರಾಜ ಭೇಟಿ ನೀಡಿ ಪರಿಶೀಲಿಸಿದರು.ತಗ್ಗಿನವರ ಮನೆಯಲ್ಲಿ ಕಳೆದ ಮೂರು ವರ್ಷಗಳಿಂದ ಆಕಸ್ಮಿಕ ಬೆಂಕಿ ಹೊತ್ತಿಕೊಳ್ಳುತ್ತಿತ್ತು. ಇದನ್ನು ಮನಗಂಡು ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತು ಭೇಟಿಮಾಡಿ ಮನೆಯವರೊಂದಿಗೆ ಸಂದರ್ಶಿಸಿದಾಗ ಅಲ್ಲಿ ಯಾವುದೇ ರೀತಿಯ ಭಾನಾಮತಿ ಹಾಗೂ ಮಾಟ ಮಂತ್ರ ಇರುವುದಿಲ್ಲ. ಆತ್ಮವಿಶ್ವಾಸದಿಂದ ಧನಾತ್ಮಕ ಚಿಂತನೆ ಮಾಡಿದರೆ ಯಾವುದೇ ಭಯ ಬೇಡ ಎಂದು ಮನೆಯವರಿಗೆ ಆತ್ಮಸ್ಥೈರ್ಯ ನೀಡಿ ಬಹು ವರ್ಷಗಳಿಂದ ಕಂಡು ಬಂದಿರುವ ಸಮಸ್ಯೆಗೆ ಪರಿಹಾರ ನೀಡಲಾಯಿತು.ಈ ವೇಳೆ ಹುಲಿಕಲ್ ನಟರಾಜ ಮಾತನಾಡಿ, ಬಾನಾಮತಿ ಎಂಬುದು ಶತ್ರುಗಳಿಗೆ ಹಾನಿ ಮಾಡಲು ಅನಾರೋಗ್ಯ ತರಲು ಅಥವಾ ಕುಟುಂಬಗಳನ್ನು ಸರ್ವನಾಶ ಮಾಡಲು ನಡೆಸುವ ಕೆಟ್ಟ ಪ್ರಯೋಗ ಎಂಬ ಭಯ ಜನರಲ್ಲಿದೆ. ಇದರ ಭಯಕ್ಕೆ ಬಿದ್ದವರು ಮಾನಸಿಕವಾಗಿ ಕುಗ್ಗಿ ಹೋಗುತ್ತಾರೆ.…
ಉದಯರಶ್ಮಿ ದಿನಪತ್ರಿಕೆ ತಿಕೋಟಾ: ತಾಲೂಕಿನ ಬಿ.ಎಲ್. ಡಿ. ಇ. ಸಂಸ್ಥೆಯ ನೂತನ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದ ಕಂಪ್ಯೂಟರ್ ಸೈನ್ಸ್ ವಿಭಾಗದ ಸೈಬರ್ ಸೆಕ್ಯೂರಿಟಿ ವಿಷಯದ 2025-26 ನೇ ಸಾಲಿನ ಪರೀಕ್ಷೆಯಲ್ಲಿ ಮುಕ್ತೇಶ ವಾಲಿಕಾರ, ಪವನಕುಮಾರ ಬೋಸ್ಲೆ, ಪ್ರಮೋದ ಹೂಗಾರ, ವೀರೇಶ ಹಿರೇಮಠ, ಸಂಗಮೇಶ ವಳಸಂಗ, ಆದರ್ಶ ಗಗನಮಾಲಿ, ಅಕ್ಷತಾ ಅವಟಿ ವಿದ್ಯಾರ್ಥಿಗಳು ನೂರಕ್ಕೆ ನೂರರಷ್ಟು ಅಂಕಗಳನ್ನು ಪಡೆದು ಸಾಧನೆಗೈಯುವುದರ ಮೂಲಕ ವಿಭಾಗಕ್ಕೆ ಹಾಗೂ ಕಾಲೇಜಿಗೆ ಕೀರ್ತಿ ತಂದಿದ್ದಾರೆ.ಶೇ.೯೫ ಕ್ಕೂ ಹೆಚ್ಚು ಅಂಕಗಳನ್ನು ಪಡೆದ ಅಪ್ಸನಾ ಬೇವನೂರು, ಸುಮಿತ ಹಿರೇ ನಾಯಕ, ಐಶ್ವರ್ಯ ಅವಟಿ, ಗುರುಪ್ರಸಾದ ಮಠಪತಿ,ಐಶ್ವರ್ಯ ಜೇವೂರೆ,ಸುಮನ ವನರಾಶಿ, ಸುನೀತಾ ವನರಾಶಿ, ರೋಹಿಣಿ ಜಾಧವ, ಮಯೂರಿ ಜೇವೂರೆ, ಅಬ್ದುಲ್ ಬಾಗವಾನ್ ವಿದ್ಯಾರ್ಥಿಗಳ ಈ ಸಾಧನೆಗೆ ಕಾಲೇಜಿನ ಪ್ರಾಂಶುಪಾಲ ಪ್ರೊ.ಪಿ.ಎಸ್.ತೋಳನೂರ, ಸೈಬರ್ ಸೆಕ್ಯೂರಿಟಿ ವಿಷಯ ಉಪನ್ಯಾಸಕ ದೇವರಾಜ ಪಾಟೀಲ ಹಾಗೂ ಕಾಲೇಜಿನ ಸಿಬ್ಬಂದಿ ವರ್ಗ ಹರ್ಷ ವ್ಯಕ್ತಪಡಿಸಿದ್ದಾರೆ.
ರಾಜ್ಯದಲ್ಲಿ ಉಪ ಚುನಾವಣೆ ಹಿನ್ನೆಲೆ | ಮಾರ್ಚ್ 26 ರಂದು ಕಲಾಪದ ನಂತರ ಸದನ ಅನಿರ್ದಿಷ್ಟಾವಧಿ ಮುಂದೂಡಿಕೆ | ಸ್ಪೀಕರ್ ಯು ಟಿ ಖಾದರ್ ಪ್ರಕಟ ಬೆಂಗಳೂರು: ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ಉಪಚುನಾವಣೆ ಹಿನ್ನೆಲೆಯಲ್ಲಿ ಕರ್ನಾಟಕ ವಿಧಾನಸಭೆಯ ಬಜೆಟ್ ಅಧಿವೇಶನವನ್ನು ಒಂದು ದಿನ ಮುಂಚಿತವಾಗಿ ಮಾರ್ಚ್ 26 ರಂದು ಮುಕ್ತಾಯಗೊಳಿಸಲಾಗುತ್ತಿದೆ.ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2026-27ನೇ ಸಾಲಿನ ಬಜೆಟ್ ಮಂಡಿಸುವುದರೊಂದಿಗೆ ಮಾರ್ಚ್ 6 ರಂದು ಆರಂಭವಾದ ರಾಜ್ಯ ವಿಧಾನಮಂಡಲದ ಬಜೆಟ್ ಅಧಿವೇಶನವು ಮಾರ್ಚ್ 27 ರಂದು ಮುಕ್ತಾಯಗೊಳ್ಳಬೇಕಿತ್ತು.ವಿಧಾನಸಭೆಯ ಕಲಾಪ ಸಲಹಾ ಸಮಿತಿ (BAC) ಸಭೆಯ ನಂತರ ಸ್ಪೀಕರ್ ಯು ಟಿ ಖಾದರ್ ಅವರು ಮಂಗಳವಾರ ಸದನದಲ್ಲಿ ಈ ವಿಷಯ ಪ್ರಕಟಿಸಿದರು.ಕಲಾಪ ಸಮಿತಿ ಸಭೆ ನಿರ್ಧಾರದಂತೆ ಇಂದು (ಮಾರ್ಚ್ 24) ಬಜೆಟ್ ಮತ್ತು ಬೇಡಿಕೆಗಳ ಮೇಲಿನ ಚರ್ಚೆ ಮುಕ್ತಾಯವಾಗಲಿದೆ. ಈ ಚರ್ಚೆಗಳಿಗೆ ಮಾರ್ಚ್ 26 ರಂದು ಸಿಎಂ ಉತ್ತರ ನೀಡಲಿದ್ದು, ನಂತರ ಧನವಿನಿಯೋಗ ವಿಧೇಯಕವನ್ನು ಚರ್ಚೆಗೆ ತೆಗೆದುಕೊಂಡು ಅಂಗೀಕರಿಸಲಾಗುವುದು. ಮಾರ್ಚ್ 26 ರಂದು…
ಜಿಲ್ಲಾ ಮಟ್ಟದ ದೌರ್ಜನ್ಯ ನಿಯಂತ್ರಣ ೧೯೮೯ ಪ್ರತಿಬಂಧಕ ಕಾಯ್ದೆಯಡಿ ರಚಿತವಾದ ಜಿಲ್ಲಾ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಸ್ಮಶಾನ ಭೂಮಿ ಸಿಗುವುದೇ ಕಷ್ಟ. ಹಾಗಾಗಿ ಸ್ಮಶಾನ ಭೂಮಿ ಒತ್ತುವರಿ ಸರ್ವೆ ಮಾಡಿ, ಬೇಲಿ ಅಳವಡಿಸಿ, ಹದ್ದುಬಸ್ತ್ ಮಾಡಬೇಕು ಎಂದು ಜಿಲ್ಲಾಧಿಕಾರಿಗಳಾದ ಡಾ.ಆನಂದ ಕೆ. ಅವರು ಹೇಳಿದರು.ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ದೌರ್ಜನ್ಯ ನಿಯಂತ್ರಣ ೧೯೮೯ ಪ್ರತಿಬಂಧ ಕಾಯ್ದೆಯಡಿ ರಚಿತವಾದ ಜಿಲ್ಲಾ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸಭೆಯಲ್ಲಿದ್ದುಕೊಂಡು ಮಾತು ಕೇಳಿಸಿಕೊಂಡು ಹೋಗುವುದಲ್ಲ. ನಿಮ್ಮ ಹಂತದಲ್ಲಿ ಪರಿಹಾರ ಕಲ್ಪಿಸಬೇಕು. ಸ್ಮಶಾನ ಭೂಮಿ ಸಿಗುವುದೇ ಕಷ್ಟ. ಹಾಗಾಗಿ ಅದಕ್ಕೆ ಪರಿಹಾರ ಕೈಗೊಳ್ಳಬೇಕು. ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಗಮನಹರಿಸಬೇಕು ಎಂದು ಸೂಚಿಸಿದರು.ಎಲ್ಲೆಲ್ಲಿ ಸ್ಮಶಾನ ಸಮಸ್ಯೆ ಇದ್ದಲ್ಲಿ ಸಂಬಂಧಿಸಿದವರ ಗಮನಕ್ಕೆ ತರಬೇಕು. ಈ ಸಭೆಯಲ್ಲಿ ಚರ್ಚೆಯಾದ ವಿಷಯ ಹಾಗೂ ಸಮಸ್ಯೆಗಳನ್ನು ತಕ್ಷಣ ಇತ್ಯರ್ಥಪಡಿಸಬೇಕು ಎಂದರು.ವಸತಿ ನಿಲಯಗಳಲ್ಲಿ…
ಪರಿಶಿಷ್ಟ ಜಾತಿ- ಪರಿಶಿಷ್ಟ ಪಂಗಡದ ಅಲೆಮಾರಿ ಸಮುದಾಯಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಲ್ಲಾಧಿಕಾರಿ ಡಾ. ಆನಂದ ಕೆ. ಅಧಿಕಾರಿಗಳಿಗೆ ಸೂಚನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಲೆಮಾರಿ ಹಾಗೂ ಅರೆ ಅಲೆಮಾರಿ ಜನಾಂಗದವರು ವಾಸಿಸುವ ಕಾಲೋನಿಗಳಿಗೆ ಮೂಲಭೂತ ಸೌಲಭ್ಯ ಒದಗಿಸಿ,ಸರ್ಕಾರದ ಯೋಜನೆ ಅನುಷ್ಠಾನಗೊಳಿಸಿ ಅವರಿಗೆ ಸರ್ಕಾರ ನೀಡುವ ಸೌಲಭ್ಯ ಒದಗಿಸಿ ಎಂದು ಜಿಲ್ಲಾಧಿಕಾರಿ ಆನಂದ ಕೆ. ಅವರು ಅಧಿಕಾರಿಗಳಿಗೆ ಸೂಚಿಸಿದರು.ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಕರ್ನಾಟಕ ಪರಿಶಿಷ್ಟ ಜಾತಿ- ಪರಿಶಿಷ್ಟ ಪಂಗಡದ ಅಲೆಮಾರಿ ಸಮುದಾಯಗಳ ಒಂದನೇ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸಮುದಾಯ ಕೇಂದ್ರ, ಭೂ ಒಡೆತನ, ಅಂಗನವಾಡಿ ಕೇಂದ್ರ, ಗಂಗಾ ಕಲ್ಯಾಣ ಯೋಜನೆಯಡಿ ಆಯ್ಕೆಯಾದ ಫಲಾನುಭವಿಗಳಿಗೆ ಬೊರ್ ವೆಲ್ ಕೊರೆಯಿಸುವ ಬಗ್ಗೆ ಸದಸ್ಯರು ವಿಷಯ ಪ್ರಸ್ತಾಪಿಸಿದರು ಕುಡಿಯುವ ನೀರು, ವಿದ್ಯುತ್ ಸಮಸ್ಯೆ, ಮೂಲಭೂತ ಸೌಲಭ್ಯ ಒದಗಿಸಿ, ಈ ಸಮುದಾಯದ ಕಾಲೋನಿಗಳ ಮಕ್ಕಳಿಗಾಗಿ ಅಂಗನವಾಡಿ ಕೇಂದ್ರ ಸೌಲಭ್ಯ…
ಉದಯರಶ್ಮಿ ದಿನಪತ್ರಿಕೆ ಹೆಚ್ ಡಿ ಕೋಟೆ: ಸಂಪೂರ್ಣ ಒಳಮೀಸಲಾತಿ ಜಾರಿಗಾಗಿ ಮಾದಿಗ ಸಮುದಾಯ ಮಾಡು ಇಲ್ಲವೇ ಮಡಿ ಹೋರಾಟಕ್ಕೆ ಮುಂದಾಗಿದೆ. ಮಾರ್ಚ್ 27 ರಂದು ಸರ್ಕಾರಿ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯಲ್ಲಿ ಒಳಮೀಸಲಾತಿ ಜಾರಿ ಮಾಡದಿದ್ದರೆ ಎಂದೆಂದೂ ಕಂಡು ಕೇಳರಿಯದ ಉಗ್ರ ಹೋರಾಟಕ್ಕೆ ಸಜ್ಜಾಗಿದೆ. ತಮ್ಮ ರಕ್ತವನ್ನೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪಾರ್ಸಲ್ ಮಾಡಲು ಮುಂದಾಗಿದೆ.ಪಟ್ಟಣದಲ್ಲಿ ಹೆಚ್ ಡಿ ಕೋಟೆ ಮತ್ತು ಸರಗೂರು ತಾಲೂಕಿನ ಡಾ. ಬಾಬು ಜಗಜೀವನ್ ರಾಮ್ ವಿಚಾರ ವೇದಿಕೆಯ ಸದಸ್ಯರು, ಪದಾಧಿಕಾರಿಗಳು ರಕ್ತ ಕರಪತ್ರ ಚಳುವಳಿ ನಡೆಸಿದರು. ಸಂಪೂರ್ಣ ಒಳಮೀಸಲಾತಿ ಜಾರಿ ಮಾಡುವಂತೆ ತಮ್ಮ ರಕ್ತದಲ್ಲಿ ಪತ್ರ ಬರೆದು ಮುಖ್ಯಮಂತ್ರಿ ಸಿದ್ದರಾಮಯ್ಯ ವರಿಗೆ ಸ್ಪೀಡ್ ಪೋಸ್ಟ್ ಮಾಡಿದರು. ಅಲ್ಲದೆ ಮಾರ್ಚ್ 27 ರಂದು ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಜಾರಿ ಮಾಡುವ ಬಗ್ಗೆ ನಿರ್ಣಯ ಕೈಗೊಳ್ಳದಿದ್ದರೆ, ರಾಜ್ಯದಲ್ಲಿರುವ ಮಾದಿಗ ಸಮುದಾಯದ ಜನ, ತಮ್ಮ ದೇಹದಿಂದ 100 ಎಂಎಲ್ ರಕ್ತ ತೆಗೆದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸ್ಪೀಡ್ ಪೋಸ್ಟ್ ಮಾಡಬೇಕೆಂದು…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಮಹಿಳೆ ಅಬಲೆಯಲ್ಲ ಸಬಲೆ, ಅವಳಿಗೆ ಸಮಾಜದಲ್ಲಿ ಪುರುಷರಷ್ಟೆ ಸರಿಸಮಾನವಾದ ಅವಕಾಶಗಳು ಮಹಿಳೆಗೆ ದೊರೆಯಬೇಕು ಎಂದು ಮಹಿಳಾ ವಿಶ್ವವಿಧ್ಯಾಲಯದ ಸಹಾಯಕ ಪ್ರಾಧ್ಯಾಪಕಿ ಪ್ರತಿಮಾ ಪಾಟೀಲ ಹೇಳಿದರು.ನಗರದ ನವರಸಪುರ ಬಡಾವಣೆಯ ಸಿದ್ಧಾರ್ಥ ಕಾಲೋನಿಯ ಸಿದ್ದಿ ವಿನಾಯಕ ದೇವಸ್ಥಾನದಲ್ಲಿ ಸೋಮವಾರ ಸಂಜೆ ನಡೆದ ಮಹಿಳಾ ದಿನಾಚರಣೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.ಲಿಂಗ ತಾರತಮ್ಯ ಮಾಡದೆ ಅ ಮಹಿಳೆಯರಿಗೆ ಗೌರವ ಸಿಗಬೇಕು. ಮಹಿಳೆಯರಿಗೆ ಇರುವ ಹಕ್ಕುಗಳ ಕುರಿತು ಜಾಗೃತಿ ಮೂಡಿಸಬೇಕು. ಮಹಿಳಾ ಹಕ್ಕುಗಳು ಮತ್ತು ಹಿಂಸಾಚಾರದ ವಿರುದ್ಧದ ಹೋರಾಟವನ್ನು ಬಲಪಡಿಸುವ ಅರಿವು ಮೂಡಿಸಬೇಕು ಎಂದರು.ಹಾಸ್ಟೆಲ್ ವಾರ್ಡನ್ ಗೀತಾ ನಾಲತವಾಡ ಮಾತನಾಡಿ ಮಹಿಳಾ ಸಬಲೀಕರಣ, ಲಿಂಗ ಸಮಾನತೆ, ತಾರತಮ್ಯದ ನಿರ್ಮೂಲನೆ ಮತ್ತು ಮಹಿಳೆಯರ ಹಕ್ಕುಗಳಿಗಾಗಿ ಧ್ವನಿ ಎತ್ತುವ ಕಾರ್ಯವಾಗಬೇಕು ಎಂದರು.ಭರತನಾಟ್ಯ ಕಲೆಯಲ್ಲಿ ವಿಶೇಷ ಸಾಧನೆ ಮಾಡಿ ಬಹುಮಾನ ಪಡೆದ ಸಾಧನಾ ಬಸವರಾಜ ಕೊಟ್ಯಾಳ ಬಾಲಕಿಗೆ ಸನ್ಮಾನಿಸಲಾಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಮತಾ ನಾಯಕ ವಹಿಸಿದ್ದರು. ಕರುನಾ ಕುಲಕರ್ಣಿ , ಸುಮಂಗಲಾ ದೊಡಮನಿ, ಕಲೋನಿಯ ಎಲ್ಲ ಮಹಿಳೆಯರು ಭಾಗವಹಿಸಿದ್ದರು.ಪ್ರಾರ್ಥನೆಯನ್ನು ಶಿಲ್ಪಾ…
ಉದಯರಶ್ಮಿ ದಿನಪತ್ರಿಕೆ ಇಂಡಿ: ತಾಲೂಕಿನ ಶಿರಗೂರ ಗ್ರಾಮದ ರೈತರ ಜಮೀನಿನಲ್ಲಿ ಹಲವು ವರ್ಷಗಳಿಂದ ವಿದ್ಯುತ್ ಕಂಬ ಜೋತು ಬಿದ್ದಿರುವದು ಆತಂಕಕ್ಕೆ ಕಾರಣವಾಗಿದೆ.ಈ ಕುರಿತು ಅನೇಕ ಬಾರಿ ಇಲಾಖೆಗೆ ಮನವಿ ಸಲ್ಲಿಸಿದರೂ ಯಾವದೇ ಕ್ರಮ ಕೈಕೊಳ್ಳದಿರುವದು ರೈತರ ಅಕ್ರೋಶಕ್ಕೆ ಕಾರಣವಾಗಿದೆ.ಪ್ರತಿಯೊಬ್ಬರ ಜಮೀನಿನಲ್ಲಿ ಕಂಬ ಎರಡು ಕಡೆಯಿಂದ ವಾಲಿ ನಿಂತಿವೆ. ಮೇಲಿನ ವಿದ್ಯುತ್ ತಂತಿಗಳು ಕೂಡ ಅಸ್ಥಿರವಾಗಿದ್ದು ಅಪಾಯವನ್ನು ಮತ್ತಷ್ಟು ಹೆಚ್ಚಿಸುವಂತೆ ಮಾಡಿದೆ. ಈ ಪರಿಸ್ಥಿತಿಯಲ್ಲಿ ರೈತರು ತಮ್ಮ ದಿನ ನಿತ್ಯದ ಕೃಷಿ ಕಾರ್ಯ ಚಟುವಟಿಕೆಗಳನ್ನು ಭಯ ಭಿತಿಯಿಂದಲೇ ಮಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.ಈ ವಿದ್ಯುತ ಕಂಬಗಳು ಮಳೆ ಗಾಳಿ ಬಿಸಿದಾಗ ಇನ್ನಷ್ಟು ಜಾರುವ ಪರಿಸ್ಥಿತಿಯಲ್ಲಿದ್ದು ಯಾವದೇ ಪರಿಸ್ಥಿತಿಯಲ್ಲಿ ನೆಲಕ್ಕುರುಳುವ ಸಾದ್ಯತೆ ಹೆಚ್ಚಾಗಿದೆ. ಗಾಳಿಯ ರಭಸಕ್ಕೆ ವಿದ್ಯುತ್ ತಂತಿಗಳು ಪರಸ್ಪರ ಒಂದಕ್ಕೊಂದು ತಗುಲಿ ಬೆಂಕಿಯ ಕಿಡಿಗಳು ಹಾರುತ್ತಿದ್ದು ಬೆಳೆಗಳಿಗೆ ಅಪಾಯ ಎದುರಾಗಿದೆ.ಅಧಿಕಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿಲ್ಲ. “ರೈತರ ಹೊಲದಲ್ಲಿ ಅಷ್ಟೆ ಅಲ್ಲ, ರಸ್ತೆ ಮೇಲಿನ ತಂತಿಗಳು ಜೋತು ಬಿದ್ದಿವೆ. ಅನೇಕ ಬಾರಿ ವಿದ್ಯುತ್ ಇಲಾಖೆಗೆ…
