Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಜೀವ ವೈವಿದ್ಯತೆ ಲೇಖನ:- ಸಂತೋಷ್ ರಾವ್ ಪೆರ್ಮುಡಪೆರ್ಮುಡ ಮನೆಪಟ್ರಮೆ ಗ್ರಾಮ ಮತ್ತು ಅಂಚೆಬೆಳ್ತಂಗಡಿ ತಾಲೂಕುದ.ಕ ಜಿಲ್ಲೆ-೫೭೪೧೯೮ದೂ: ೯೭೪೨೮೮೪೧೬೦ ಉದಯರಶ್ಮಿ ದಿನಪತ್ರಿಕೆ ಈ ಪಕ್ಷಿಯನ್ನು ‘ಇಂಪೇನ್ ಮೋನಲ್’ ಅಥವಾ ‘ಇಂಪೇನ್ ಫೆಸೆಂಟ್’ ಎಂದು ಕರೆಯಲಾಗುತ್ತದೆ. ಇದು ‘ಬೇಟೆ ಹಕ್ಕಿ’ಯ ಪ್ರಬೇಧಕ್ಕೆ ಸೇರಿದ್ದು, ಇದನ್ನು ನೇಪಾಳದಲ್ಲಿ ‘ಧನ್ಫೆ’ ಎಂದೂ ಕರೆಯುತ್ತಾರೆ. ಈ ಪಕ್ಷಿಯು ಉತ್ತರಾಖಾಂಡ್ ರಾಜ್ಯದ ರಾಜ್ಯ ಪಕ್ಷಿಯೂ ಆಗಿದ್ದು, ಇಲ್ಲಿ ಈ ಪಕ್ಷಿಯನ್ನು ‘ಮೋನಲ್’ ಎಂದು ಕರೆಯುತ್ತಾರೆ. ೨೦೦೭ರ ವರೆಗೆ ಈ ಪಕ್ಷಿಯು ಹಿಮಾಚಲ ಪ್ರದೇಶದ ರಾಜ್ಯ ಪಕ್ಷಿಯಾಗಿಯೂ ಗುರುತಿಸಿಕೊಂಡಿದ್ದು, ಈ ಪಕ್ಷಿಯನ್ನು ‘ಏಕ ಜೈವಿಕ ಕುಲ’ ಪ್ರಬೇಧಕ್ಕೆ ಸೇರಿದ್ದೆಂದೂ ಗುರುತಿಸಲಾಗಿದೆ. ಅಧ್ಯಯನದ ಪ್ರಕಾರ ವಾಯುವ್ಯ ಭಾರತದಲ್ಲಿರುವ ಗಂಡು ಮೋನಲ್ಗಳ ಕಂದು ಬಣ್ಣದ ಉದ್ದನೆಯ ಬಾಲವು ಇತರೆಲ್ಲಾ ಮೋನಲ್ಗಳಿಗಿಂತ ಕಡಿಮೆ ಉದ್ದವಿರುವುದನ್ನು ಗುರುತಿಸಲಾಗಿದೆ. ಇವುಗಳ ಎದೆಯ ಭಾಗವು ಗಾಢ ಹಸಿರು ಬಣ್ಣದಿಂದ ಕೂಡಿದ್ದು, ಇದು ಇವುಗಳಲ್ಲೂ ಉಪ ವರ್ಗಗಳ ಇರುವಿಕೆಯನ್ನು ಸೂಚಿಸುತ್ತದೆ. ‘ಹಿಮಾಲಯನ್ ಮೋನಲ್’ನ ವೈಜ್ಞಾನಿಕ ಹೆಸರು ‘ಲೇಡಿ ಮೇರಿ ಇಂಪೇ’ ಆಗಿದ್ದು,…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಇಲ್ಲಿನ ರಾಜಾಜಿನಗರದ ಪ್ರಗತಿ ಶಾಲೆಯ ೨೫ ನೇ ವರ್ಷದ ಬೆಳ್ಳಿ ಹಬ್ಬ ಕಾರ್ಯಕ್ರಮ ಪ್ರಯುಕ್ತ ನ.೧೭ ರಂದು ಬೆಂಗಳೂರು ರೆಸ್ಟೋರೆಂಟನ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿ ಜರುಗಿತು. ನ.೧೯ ರಂದು ಬೆಳಗ್ಗೆ ೮ ಗಂಟೆಗೆ ಮುರಾಣಕೇರಿಯ ಕಾಳಿಕಾ ದೇವಸ್ಥಾನದಿಂದ ಆರಂಭವಾಗುವ ಸರಸ್ವತಿ ಮೆರವಣಿಗೆ ಕಾಸಗೇರಿ, ರಾಜಾಜಿನಗರ,ರಾಮನಗರ ಮೂಲಕ ಪ್ರಗತಿ ಶಾಲೆ ತಲುಪಲಿದೆ.ಸಿದ್ಧೇಶ್ವರ ಬ್ಯಾಂಕ್ ನಿರ್ದೇಶಕ ಹರ್ಷಗೌಡ ಪಾಟೀಲ ಉದ್ಘಾಟಿಸುವರು. ಸಿದ್ಧಸಿರಿ ಸೌಹಾರ್ದ ಬ್ಯಾಂಕ್ ಅಧ್ಯಕ್ಷ ರಾಮನಗೌಡ ಪಾಟೀಲ (ಯತ್ನಾಳ) ಅಧ್ಯಕ್ಷತೆ ವಹಿಸಲಿದ್ದು, ಮಹಾನಗರಪಾಲಿಕೆ ಸದಸ್ಯ ಗಿರೀಶ ಬಿರಾದಾರ ನೇತೃತ್ವ ವಹಿಸುವರು. ಪ್ರಗತಿ ಶಾಲೆಯ ಆಡಳಿತ ಮಂಡಳಿ ನಿರ್ದೇಶಕ ಸಂಗಮೇಶ ಮನಹಳ್ಳಿ ಉಪಸ್ಥಿತರಿರುವರು.ಮಧ್ಯಾಹ್ನ ೧-೩೦ಕ್ಕೆ ಕನ್ನಡ ಪುಸ್ತಕ ಪರಿಷತ್ ಆಶ್ರಯದಲ್ಲಿ ಕನ್ನಡ ಪುಸ್ತಕ ಸಮ್ಮೇಳನ ಜರುಗಲಿದೆ. ತೋಂಟದ ಸಿದ್ಧಲಿಂಗಶ್ರೀ ಪುಸ್ತಕ ಪ್ರಶಸ್ತಿ ಪ್ರದಾನ, ಕವಿಗೋಷ್ಠಿ, ಉಪನ್ಯಾಸ ನಡೆಯಲಿದೆ.ನ.೨೩ ರಂದು ಬೆಳಗ್ಗೆ ೧೦ ಗಂಟೆಗೆ ಭಾರತ ಪಂಕ್ಷನ್ ಗಾರ್ಡನ್ ಒಳಾಂಗಣದಲ್ಲಿ ನಡೆಯುವ ಗುರುವಂದನೆಯಲ್ಲಿ ‘ಭಾರತದಲ್ಲಿ ಗುರು-ಶಿಷ್ಯ ಪರಂಪರೆ’ ವಿಷಯದ ಮೇಲೆ ೧ನೇ ಗೋಷ್ಠಿ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ತನ್ನ ಸಹೋದರನ ನೆರವಿನಿಂದ ಪ್ರಿಯತಮೆ ತನ್ನ ಪ್ರಿಯಕರನನ್ನೇ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ವಿಜಯಪುರ ನಗರದ ಜಾಮೀಯಾ ಮಸೀದಿ ಬಳಿ ಇರುವ ಅಮನ್ ಕಾಲೋನಿಯಲ್ಲಿ ವರದಿಯಾಗಿದೆ.ಕೊಲೆಗೀಡಾದ ದುರ್ದೈವಿಯನ್ನು ಸಮೀರ್ ಇನಾಮದಾರ (೨೬) ಎಂದು ಗುರುತಿಸಲಾಗಿದೆ. ಕೊಲಗೀಡಾಗಿರುವ ಸಮೀರ್ ತಯ್ಯಬಾ ಅವರ ಪ್ರಿಯಕರ ಎನ್ನಲಾಗಿದ್ದು, ತಯ್ಯಬಾ ತನ್ನ ಸಹೋದರರಾದ ಅಸ್ಲಮ್ ಬಾಗವಾನ ನೆರವಿನಿಂದ ಕತ್ತು ಹಿಸುಕಿ ಕೊಲೆ ಮಾಡಿದ್ದಾರೆ ಎಂಬ ಸಂಶಯ ವ್ಯಕ್ತವಾಗಿದ್ದು, ದಿನನಿತ್ಯ ಸಮೀರ್ ಕಿರುಕುಳ ನೀಡುತ್ತಿದ್ದು ಇದರಿಂದ ಬೇಸತ್ತು ಈ ಕೊಲೆ ನಡೆದಿದೆ ಎನ್ನಲಾಗಿದೆ. ತನಿಖೆ ಪೂರ್ಣಗೊಂಡ ಬಳಿಕವೇ ಸತ್ಯಾಂಶ ಹೊರಬರಲಿದೆ.ಸಮೀರ್ ಶವವನ್ನು ಮರಣೋತ್ತರ ಪರೀಕ್ಷೆಗೆ ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ. ಘಟನಾ ಸ್ಥಳಕ್ಕೆ ಗೋಳಗುಮ್ಮಟ ಪೊಲೀಸ್ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಗೋಳಗುಮ್ಮಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ತಾಲ್ಲೂಕಿನ ತಿಳಗೂಳ ಗ್ರಾಮದ ಸಾಹಿತಿ, ವ್ಯಕ್ತಿತ್ವ ವಿಕಸನ ತರಭೇತುದಾರ ಜಗದೀಶ ಸಾತಿಹಾಳ ತಮ್ಮ ಎರಡು ವರ್ಷದ ಮಗಳು ಬಸವಪ್ರೀಯಾ ಸಾತಿಹಾಳ ಇವರ ಜನ್ಮದಿನದ ಅಂಗವಾಗಿ ತಿಳಗೂಳ ಗ್ರಾಮದ ವಿವಿಧ ಸರ್ಕಾರಿ ಶಾಲಾ ಕಾಲೇಜುಗಳು, ಸಂಘ ಸಂಸ್ಥೆಗಳು, ವಿವಿದ ಕಛೇರಿಗಳಿಗೆ ಗೋಡೆ ಗಡಿಯಾರಗಳನ್ನು ಕಾಣಿಕೆಯಾಗಿ ನೀಡುವ ಮೂಲಕ ತಮ್ಮ ಮಗಳ ಹುಟ್ಟುಹಬ್ಬವನ್ನು ಆಚರಿಸಿದರು.ಜಗದೀಶ ಸಾತಿಹಾಳ ಇವರ ಕಾರ್ಯಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದಲ್ಲಿ ಡಿಸೆಂಬರ್ 7 ರಂದು ನಡೆಯಲಿರುವ ವೃಕ್ಷಥಾನ್ ಹೆರಿಟೇಜ್ ರನ್-2025ರ ಅಂಗವಾಗಿ ಮಕ್ಕಳಿಗೆ ಸ್ಥಳದಲ್ಲಿಯೇ ಚಿತ್ರ ಬಿಡಿಸುವ ಸ್ಪರ್ಧೆ ರವಿವಾರ ನಗರದ ಪ್ರಾಚೀನ ಸ್ಮಾರಕ ಗಗನ ಮಹಲ ಆವರಣದಲ್ಲಿ ನಡೆಯಿತು.ಪ್ರಾಥಮಿಕ ವಿಭಾಗ, ಹೈಸ್ಕೂಲು ವಿಭಾಗ ಹಾಗೂ ಪಿಯು ಕಾಲೇಜು ವಿಭಾಗ ಒಟ್ಟು ಮೂರು ವಿಭಾಗಗಳಲ್ಲಿ ನಡೆದ ಈ ಸ್ಪರ್ಧೆಯಲ್ಲಿ ಸುಮಾರು 400 ವಿದ್ಯಾರ್ಥಿಗಳು ಪಾಲ್ಗೊಂಡರು. ವಿದ್ಯಾರ್ಥಿಗಳಿಗಿಂತ ವಿದ್ಯಾರ್ಥಿನಿಯರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದು ಗಮನ ಸೆಳೆಯಿತು.ಹೆರಿಟೇಜ್ ರನ್ 21 ಕಿ. ಮೀ. ಓಟದಲ್ಲಿ ಪಾಲ್ಗೋಳ್ಳುವ ಕ್ರೀಡಾಪಟುಗಳು ಓಡುವ ವಿಜಯಪುರ ನಗರದಲ್ಲಿರುವ ಪ್ರಾಚೀನ ಸ್ಮಾರಕಗಳಾದ ಗೋಳಗುಮ್ಮಟ, ಸುಂದರೇಶ್ವರ ಮಂದಿರ, ಗಗನ ಮಹಲ್, ಶ್ರೀ ನರಸಿಂಹ ದೇವಸ್ಥಾನ, ಬಾರಾಕಮಾನ, ಇಬ್ರಾಹಿಂ ರೋಜಾ, ಶಿಕ್ಷಣ ಸಂಸ್ಥೆಗಳಾದ ಸೈನಿಕ ಶಾಲೆ, ಬಿ.ಎಲ್.ಡಿ.ಇ ಸಂಸ್ಥೆ ಶಾಲೆಗಳು, ಜ್ಞಾನಯೋಗಾಶ್ರಮ ಹಾಗೂ ವಿಜಯಪುರ ನಗರದೇವತೆ ಶ್ರೀ ಸಿದ್ಧೇಶ್ವರ ದೇವಸ್ಥಾನ ಸ್ಮಾರಕಗಳ ಮಹತ್ವ ಸಾರುವ ಚಿತ್ರಗಳನ್ನು ಬಿಡಿಸುವ ವಿಷಯವನ್ನು ನೀಡಲಾಗಿತ್ತು.ಕೈಯಲ್ಲಿ ಕುಂಚ ಮತ್ತು ಬಣ್ಣ ಹಿಡಿದು ಬಿಳಿಯ ಹಾಳೆಯ ಮೇಲೆ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎ.ವಿ.ಎಸ್ ಆಯರ್ವೇದ ಮಹಾವಿದ್ಯಾಲಯದ ಪುರುಷರ ಹಗ್ಗ ಜಗ್ಗಾಟ ತಂಡ ಶುಕ್ರವಾರ ನಡೆದ ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯದ ಕಲಬುರಗಿ ವಲಯ ಮಟ್ಟದ ಪುರುಷರ ಹಗ್ಗ ಜಗ್ಗಾಟ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನ ಪಡೆಯುವ ಮೂಲಕ ಕಾಲೇಜು ಮತ್ತು ಜಿಲ್ಲೆಗೆ ಕೀರ್ತಿ ತಂದಿದ್ದಾರೆ.ಬಾಗಲಕೋಟೆ ಜಿಲ್ಲೆಯ ಇಳಕಲ ನಗರದ ಎಸ್. ವಿ. ಎಂ ಆಯುರ್ವೇದ ಮಹಾವಿದ್ಯಾಲಯದಲ್ಲಿ ನಡೆದ ಈ ಪಂದ್ಯಾವಳಿಯಲ್ಲಿ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಈರಪ್ಪ ಇಕ್ಕಳಕಿ ಅವರ ಮಾರ್ಗದರ್ಶನದಲ್ಲಿ ತರಬೇತಿ ಪಡೆದು ಪ್ರಥಮ ಸ್ಥಾನ ಪಡೆದಿದ್ದಾರೆ.ವಿದ್ಯಾರ್ಥಿಗಳ ಈ ಸಾಧನೆಗೆ ಕಾಲೇಜಿನ ಪ್ರಾಚಾರ್ಯ ಡಾ. ಅಶೋಕ ಪಾಟೀಲ, ಉಪಪ್ರಾಚಾರ್ಯ ಡಾ. ಶಶಿಧರ ನಾಯಕ, ಶೈಕ್ಷಣಿಕ ಸಂಯೋಜಕ ಡಾ. ಕೆ. ಎ. ಪಾಟೀಲ, ಬೋಧಕ ಹಾಗೂ ಬೋಧಕರ ಹೊರತಾದ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಅಭಿನಂದನೆ ಸಲ್ಲಿಸಿ ಶುಭ ಕೋರಿದರು.
ಉದಯರಶ್ಮಿ ದಿನಪತ್ರಿಕೆ ಚಡಚಣ: ಪಟ್ಟಣದ ಆರಾಧ್ಯದೈವ ಶ್ರೀ ವೀರಭದ್ರೇಶ್ವರ ಜಾತ್ರೆಯು ಛಟ್ಟಿ ಅಮವಾಸ್ಯೆ ಬುಧವಾರ ದಿ. 19 ರಿಂದ 23 ರವರೆಗೆ 5 ದಿನಗಳ ಕಾಲ ಸಡಗರದಿಂದ ಜರುಗುವದು.ದಿ. 19 ಬುಧವಾರದಂದು ನಸುಕಿನ 4 ಗಂಟೆಗೆ ಶ್ರೀ ಸಿದ್ದಯ್ಯಾ ಸ್ವಾಮಿ ಇವರಿಂದ ದೇವರಿಗೆ ಎಣ್ಣೆ ಮಜ್ಜಲು, ಮಹಾರುದ್ರಾಭಿಷೇಕ, ಕಾಶಿ ಬಟ್ಟೆ ತೊಡಿಸುವದು, ಹೂ ಏರಿಸುವುದು, ಮಹಾಮಂಗಳಾರುತಿ ಜರುಗುವದು. ಶ್ರೀ ವೀರಭದ್ರ ದೇವರಿಗೆ ಎಲೆ ಪೂಜೆ, ಹೋಮ-ಹವನ, ಇತ್ಯಾದಿ ಪೂಜೆಗಳು ಜರುಗುವದು.ಮಧ್ಯಾಹ್ನ 3 ಗಂಟೆಗೆ ವೇದಮೂರ್ತಿ ಶ್ರೀ ಬಸಯ್ಯಶಾಸ್ತ್ರಿಗಳಿಂದ ಮಂತ್ರೋಪದೇಶಗಳೊಂದಿಗೆ ಅಗ್ನೀ ದೇವತೆಯ ಆವಾಹನೆ,ಪೂಜೆ,ಅಗ್ಗಿಪುಟುವು ಕಾರ್ಯಕ್ರಮವು ನಡೆಯುವುದು. ಸಾಯಂಕಾಲ 4 ಗಂಟೆಗೆ ಬಳ್ಳಾರಿಯ ಪ್ರಸಿದ್ದ ಕಲಾವಿದರಿಂದ ವೀರಗಾಸೆ ಕುಣಿತ. 5 ಗಂಟೆಯಿಂದ ಭಕ್ತಾದಿಗಳಿಂದ ದೀಪೋತ್ಸವ ಕಾರ್ಯಕ್ರಮ ಜರುಗುವುದು. ರಾತ್ರಿ 10:30 ಗಂಟೆಗೆ ವಿವಿಧ ಗ್ರಾಮಗಳಿಂದ ಬಂದ ಪ್ರಸಿದ್ದ ಪುರವಂತರು ಒಡುಪುಗಳನ್ನು ವೀರಭದ್ರದೇವರ ಲೀಲೆಗಳನ್ನು ಪುರವಂತರು ತಮ್ಮ ರುದ್ರಾವೇಷದೊಂದಿಗೆ ಹಾಡಿ ಕುಣಿಯುವ ಕಾರ್ಯಕ್ರಮ ಮತ್ತು ಸಾಂಭಾಳ ವಾದನ, ಪಲ್ಲಕ್ಕಿ ಸಮೇತ ಅಗ್ಗಿ ಪ್ರವೇಶ ಕಾರ್ಯಕ್ರಮ…
ಎಸ್.ಬಿ ಕಲಾ ಮತ್ತು ಕೆ.ಸಿ.ಪಿ ವಿಜ್ಞಾನ ಮಹಾವಿದ್ಯಾಲಯದಲ್ಲಿ ಡಾ.ಅರವಿಂದಕುಮಾರ್ ಕೋಟಗೊಂಡ ಅಭಿಮತ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಸಂಶೋಧನೆ, ನಾವೀನ್ಯತೆ ಮತ್ತು ಉದ್ಯಮಶೀಲತೆಗಾಗಿ ಅಗತ್ಯವಾದ ಜ್ಞಾನ ಮತ್ತು ಸಾಧನಗಳ ಅರಿವು ಇಂದಿನ ಬೋಧಕರಿಗೆ ಮತ್ತು ವಿದ್ಯಾರ್ಥಿಗಳು ಅವಶ್ಯಕವಾಗಿದೆ ಎಂದು ಬಿಎಲ್ಡಿಇ ಸಂಸ್ಥೆಯ ವಿ.ಪಿ ಡಾ. ಪಿ. ಜಿ. ಹಳಕಟ್ಟಿ ಇಂಜಿನಿಯರಿಂಗ್ ಕಾಲೇಜಿನ, ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ. ಅರವಿಂದಕುಮಾರ್ ಕೋಟಗೊಂಡ ಹೇಳಿದರು.ನಗರದ ಬಿ ಎಲ್ ಡಿ ಇ ಸಂಸ್ಥೆಯ ಎಸ್ ಬಿ ಕಲಾ ಮತ್ತು ಕೆ ಸಿ ಪಿ ವಿಜ್ಞಾನ ಮಹಾವಿದ್ಯಾಲಯದಲ್ಲಿ ಐಕ್ಯೂಎಸಿ, ಕಾಲೇಜಿನ ಸಂಸ್ಥೆಯ ನಾವೀನ್ಯತಾ ಪರಿಷತ್ತು (ಐಐಸಿ), ಸಂಶೋಧನೆ ಮತ್ತು ಅಭಿವೃದಿ ಕೋಶ, ಎಂಎಚ್ಆರ್ಡಿ ಇನ್ನೋವೇಶನ್ ಸೆಲ್ (ಭಾರತ ಸರ್ಕಾರ) ಸಹಯೋಗದಲ್ಲಿ ದಿನಾಂಕ ೧೭-೧೧-೨೦೨೫ ಸೋಮವಾರದಂದು ಜುರುಗಿದ “ನಿಮ್ಮ ಆಲೋಚನೆಗಳ ರಕ್ಷಣೆ: ಐಪಿಆರ್ (ಬೌದ್ಧಿಕ ಆಸ್ತಿ ಹಕ್ಕು) ಅವಲೋಕನ” ಎಂಬ ವಿಷಯದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಸಪನ್ಮೂಲ ವ್ಯಕ್ತಿಗಳಾಗಿ ಮಾತನಾಡಿದ ಅವರು ಸಂಶೋಧನೆ ಮತ್ತು ನಾವೀನ್ಯತೆಯಲ್ಲಿ ತೊಡಗಿರುವ…
ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಹಾಗೂ ಜಿಲ್ಲಾ ಕೈಗಾರಿಕಾ ಕೇಂದ್ರದ ಸಹಯೋಗ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಜಿಲ್ಲಾ ಕೈಗಾರಿಕಾ ಕೇಂದ್ರ, ಬೆಂಗಳೂರಿನ ಕೆ.ಸಿ.ಟಿ.ಯು ಹಾಗೂ ಬೆಂಗಳೂರಿನ ವಿ ಕೇರ್ ಸೊಸೈಟಿ ಇವರ ಸಹಯೋಗದಲ್ಲಿ ಎಂ.ಎಸ್. ಎಂ.ಇ. ಇವರ ಕಾರ್ಯಕ್ಷಮತೆಯನ್ನು ಹೆಚ್ಚಿಸುವುದು ಮತ್ತು ವೇಗಗೊಳಿಸುವ ಯೋಜನೆಯಡಿಯಲ್ಲಿ ಇನಕ್ಯೂಬೆಶನ್ ಅರಿವು ಮೂಡಿಸುವ ಕಾರ್ಯಕ್ರಮವನ್ನು ಸಿಕ್ಯಾಬ್ ಇನ್ ಸ್ಟಿಟ್ಯೂಟ್ ಆಫ್ ಇಂಜನಿಯರಿಂಗ್ ಮತ್ತು ಟೆಕ್ನಾಲಜಿ ಕಾಲೇಜಿನಲ್ಲಿ ಶನಿವಾರ ಹಮ್ಮಿಕೊಳ್ಳಲಾಗಿತ್ತು.ಸಿಡಾಕ್ನ ಜಂಟಿ ನಿರ್ದೇಶಕರಾದ ಸುಪ್ರಿತಾ ಬಳ್ಳಾರಿ ಮಾತನಾಡಿ, ಇಂಜಿನಿಯರಿಂಗ್ ಪದವಿಯ ನಂತರ ಸ್ವಂತ ಉದ್ಯಮ ಸ್ಥಾಪಿಸಲು ಪಡೆಯಬೇಕಾದ ಅಗತ್ಯ ವೃತ್ತಿ ನೈಪುಣ್ಯತೆ ತರಬೇತಿ ಮತ್ತು ಕೈಗಾರಿಕೆಗಳನ್ನು ಸ್ಥಾಪಿಸಲು ತೆಗೆದುಕೊಳ್ಳುವ ಕ್ರಮಗಳ ಕುರಿತಾಗಿ ವಿಸ್ತೃತವಾಗಿ ವಿವರಿಸಿದರು. ಸ್ವ ಉದ್ಯೋಗ ಸ್ಥಾಪಿಸುವ ಮೂಲಕ ತಾವು ಉದ್ಯೋಗಿಯಾಗುವುದಲದೇ ಇತರರಿಗೂ ಉದ್ಯೋಗ ನೀಡಲು ವಿಫುಲ ಅವಕಾಶ ಕಲ್ಪಿಸಿದಂತಾಗುತ್ತದೆ ಎಂದು ಅವರು ಹೇಳಿದರು.ಆರ್ಥಿಕ ಸಾಕ್ಷರತಾ ಆಪ್ತ ಸಮಾಲೋಚಕರಾದ ಈರಣ್ಣ ಚಿಮ್ಮಲಗಿ ಅವರು ಸ್ವುದ್ಯೋಗ ಕೈಗೊಳ್ಳಲು ಬ್ಯಾಂಕಿನ ಮೂಲಕ ದೊರೆಯುವ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ತುಮಕೂರಿನ ಗಾರ್ಡನ್ ರಸ್ತೆಯ ಅಯ್ಯಪ್ಪ ಸ್ವಾಮಿ ದೇವಾಲಯ ಸಾರಥ್ಯದಲ್ಲಿ ನಡೆದ ಪೊಲೀಸ್ ರಮೇಶ ಹಾಡಿರುವ ಶ್ರೀ ಶಾಸ್ತ ಗಾನಾಮೃತ ಧ್ವನಿ ಸುರುಳಿ ಬಿಡುಗಡೆ ಸಮಾರಂಭದಲ್ಲಿ ಜಿಲ್ಲೆಯ ಸಿಂದಗಿ ತಾಲೂಕಿನ ಬೋರಗಿ ಗ್ರಾಮದ (ಬೆಂಗಳೂರು ಪೊಲೀಸ್ ಹೆಟ್ ಕಾನ್ಸ್ಟೇಬಲ್) ಮೌಲಾಲಿ ಆಲಗೂರಗೆ ಸಾಹಿತ್ಯ ಸೇವೆಯನ್ನು ಗುರುತಿಸಿ ಸನ್ಮಾನಿಸಲಾಯಿತು.ಇದೇ ವೇಳೆ ತುಮಕೂರಿನ ಹಿರೇಮಠದ ಸಂಸ್ಥಾನದ ಶ್ರೀ ಶಿವಾನಂದ ಶಿವಾಚಾರ್ಯ ಮಹಾಸ್ವಾಮಿಗಳು, ಬೆಳ್ಳಾವಿ ಖಾರದ ಮಠದ ಶ್ರೀ ವೀರ ಬಸವ ಮಹಾಸ್ವಾಮಿಗಳು, ಅಯ್ಯಪ್ಪ ಸ್ವಾಮಿ ಮಠದ ಅಧ್ಯಕ್ಷರಾದ ಟಿ.ಬಿ ಶೇಖರ ಗುರುಸ್ವಾಮಿಗಳು, ಗಾಯಕ ಹೆಡ್ ಕಾನ್ಸ್ಟೇಬಲ್ ರಮೇಶ, ಖ್ಯಾತ ಹಿಂದುಸ್ತಾನಿ ಗಾಯಕ ಸಿದ್ದೇಂದ್ರಕುಮಾರ್ ಹಿರೇಮಠ, ಸಾಹಿತಿ ರಮೇಶ ನಂದಿಕೋಲ್ ಆಕಾಶವಾಣಿ ನಿರೂಪಕಿ ಸಂಧ್ಯಾ ಭಟ್ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.
