Subscribe to Updates
Get the latest creative news from FooBar about art, design and business.
Author: editor.udayarashmi@gmail.com
ವಿಜಯಪುರ: ಮಾರ್ಚ್ ೨೦೨೪ರಲ್ಲಿ ಜರಗಿದ ದ್ವಿತೀಯ ಪಿಯುಸಿ ಪರೀಕ್ಷೆಯ ಪಲಿತಾಂಶ ಬುಧವಾರದಂದು ಪ್ರಕಟವಾಗಿದ್ದು ವಿಜಯಪುರ ಜಿಲ್ಲೆ ಒಟ್ಟು ೯೪.೮೯% ಫಲಿತಾಂಶದೊಂದಿಗೆ ರಾಜ್ಯದಲ್ಲಿ ೩ನೇ ಸ್ಥಾನವನ್ನು ಪಡೆದಿದೆ ಎಂದು ಜಿಲ್ಲಾಧಿಕಾರಿ ಟಿ. ಭೂ ಬಾಲನ್ ಹೇಳಿದರು.ಜಿಲ್ಲಾಧಿಕಾರಿ ಕಚೇರಿಯಲ್ಲಿ ಬುಧವಾರದಂದು ಪ್ರಕಟಗೊಂಡ ಜಿಲ್ಲೆಯ ದ್ವಿತೀಯ ಪಿ ಯು ಸಿ ಫಲಿತಾಂಶ ಕುರಿತು ಮಾತನಾಡಿ ಕಲಾ ವಿಭಾಗದಲ್ಲಿ ೧೬,೨೧೫ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಅದರಲ್ಲಿ ೧೪,೧೭೪ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಒಟ್ಟು ೪,೦೮೮ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ೩,೭೨೫ ವಿದ್ಯಾರ್ಥಿಗಳ ಉತ್ತೀರ್ಣರಾಗಿದ್ದಾರೆ. ಇನ್ನೂ ವಿಜ್ಞಾನ ವಿಷಯದಲ್ಲಿ ೧೧,೫೩೩ ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆದಿದ್ದು ಅದರಲ್ಲಿ ೧೦,೯೪೪ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಕಳೆದ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಜಿಲ್ಲೆಯು ೫ನೇ ಸ್ಥಾನವನ್ನು ಹೊಂದಿತ್ತು. ಆದರೆ ಈ ವರ್ಷದ ಫಲಿತಾಂಶದಲ್ಲಿ ಸುಧಾರಣೆ ಕಂಡು ರಾಜ್ಯಕ್ಕೆ ಮೂರನೇ ಸ್ಥಾನ ಪಡೆದಿರುತ್ತದೆ. ಮುಂದಿನ ವರ್ಷದಲ್ಲಿ ಮೊದಲನೇ ಸ್ಥಾನ ಪಡೆಯಲು ಜಿಲ್ಲಾಡಳಿತದಿಂದ ತಯಾರಿ ನಡೆಸಲಾಗುವುದು. ಜಿಲ್ಲೆಯ ಫಲಿತಾಂಶ ಸುಧಾರಣೆಯಲ್ಲಿ ಶ್ರಮವಹಿಸಿದ ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ…
ವಿಜಯಪುರ: ಲೋಕಸಭಾ ಸಾರ್ವತ್ರಿಕ ಚುನಾವಣೆ ೨೦೨೪ ರ ನಾಮಪತ್ರಗಳನ್ನು ಸ್ವೀಕರಿಸಲು ಏ.೧೨ ರಿಂದ ೧೯ ರವರೆಗೆ ಚುನಾವಣಾ ಆಯೋಗ ಅವಕಾಶ ಕಲ್ಪಿಸಿರುತ್ತದೆ ಎಂದು ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿಗಳು ಆದ ಟಿ.ಭೂಬಾಲನ್ ಹೇಳಿದರು.ಜಿಲ್ಲಾಧಿಕಾರಿ ಕಚೇರಿಯಲ್ಲಿ ಬುಧವಾರ ಚುನಾವಣೆ ಅಧಿಸೂಚನೆ ಕುರಿತು ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ನಾಮಪತ್ರಗಳನ್ನು ಸರಕಾರಿ ರಜಾ ದಿನಗಳನ್ನು ಹೊರತುಪಡಿಸಿ ಬೆಳಗ್ಗೆ ೧೧ಗಂಟೆಯಿಂದ ಮಧ್ಯಾಹ್ನ ೩ರವರೆಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸ್ಥಾಪಿಸಲಾದ ಚುನಾವಣಾಧಿಕಾರಿಗಳ ಕಾರ್ಯಾಲಯದಲ್ಲಿ ಸ್ವೀಕರಿಸಲಾಗುವುದು ಎಂದು ತಿಳಿಸಿದರು.ನಾಮಪತ್ರ ಸಲ್ಲಿಸಲು ಏ.೧೯ ಕೊನೆಯ ದಿನವಾಗಿರುತ್ತದೆ. ೨೦ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ನಾಮಪತ್ರ ಹಿಂಪಡೆಯಲು ಏ.೨೨ರವರೆಗೆ ಕಾಲಾವಕಾಶವಿರುತ್ತದೆ. ಮೇ ೭ ರಂದು ಮತದಾನ ನಡೆಯಲಿದ್ದು, ಜು ೪ ರಂದು ಮತ ಎಣಿಕೆ ನಡೆಯಲಿದೆ. ಜು.೬ರಂದು ನೀತಿ ಸಂಹಿತೆ ಮುಕ್ತಾಯಗೊಳ್ಳಲಿದೆ ಎಂದು ಮಾಹಿತಿ ನೀಡಿದರು.ಜಿಲ್ಲೆಯಲ್ಲಿ ಏ.೧೦ ರ ಅಂತ್ಯಕ್ಕೆ ೧೯,೪೩,೫೬೬ ಮತದಾರರಿದ್ದು ೯,೮೬,೭೭೮ ಪುರುಷ ಹಾಗೂ ೯,೫೬,೫೭೮ ಮಹಿಳಾ ಮತ್ತು ೨೧೦ ಇತರೆ ಮತದಾರರಿದ್ದಾರೆ. ಈ ಪೈಕಿ ೪೩,೪೬೮ ಯುವ ಮತದಾರರು, ೨೧,೭೬೪ ವೀಕಲಚೇತನ,…
ಪ್ರಿಂಟಿಂಗ್ ಪ್ರೆಸ್ ಮಾಲಿಕರ ಸಭೆಯಲ್ಲಿ ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚನೆ ವಿಜಯಪುರ: ಲೋಕಸಭಾ ಸಾರ್ವತ್ರಿಕ ಚುನಾವಣೆ ೨೦೨೪ ರ ಹಿನ್ನೆಲೆಯಲ್ಲಿ ಚುನಾವಣಾ ಅಭ್ಯರ್ಥಿಗಳು ಕರಪತ್ರದಲ್ಲಿ ಅನುಮತಿ ಇಲ್ಲದ ಹಾಗೂ ಪ್ರಚೋದನಾಕಾರಿ ಅಂಶಗಳನ್ನು ಮುದ್ರಿಸಬಾರದು ಎಂದು ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿಟಿ ಟಿ.ಭೂಬಾಲನ್ ಸೂಚಿಸಿದರು.ಬುಧವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆಯದ ಪ್ರಿಂಟಿಂಗ್ ಪ್ರೆಸ್ ಮಾಲಿಕರ ಸಭೆಯಲ್ಲಿ ಮಾತನಾಡಿ, ಯಾವುದೇ ರೀತಿಯ ರಾಜಕೀಯ ಮತಪ್ರಚಾರ ಮತ್ತು ಕೋಮುಗಲಭೆ ಸೃಷ್ಟಿಸುವ ಪ್ಲೇಕ್ಸ್, ಕರಪತ್ರ, ಬ್ಯಾನರ್ಗಳನ್ನು ಮುದ್ರಿಸುವಂತಿಲ್ಲ. ಇದನ್ನು ಉಲ್ಲಂಘಿಸಿದರೆ ಪ್ರಜಾಪ್ರತಿನಿಧಿ ಕಾಯ್ದೆಯ ಪ್ರಕಾರ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದರು.ಅಭ್ಯರ್ಥಿಗಳು ಹಾಗೂ ಪ್ರಿಂಟಿಂಗ್ ಪ್ರೆಸ್ ಮಾಲಕರು ತಾವು ಮುದ್ರಿಸುವ ವಿಷಯಗಳ ಮಾದರಿಯನ್ನು ಜಿಲ್ಲಾಡಳಿತಕ್ಕೆ ಮೂರು ದಿನಗಳ ಮುಂಚಿತವಾಗಿ ತಿಳಿಸಬೇಕು. ಜಿಲ್ಲಾಡಳಿತದಿಂದ ಅನುಮತಿ ಪಡೆದ ನಂತರ ಕರಪತ್ರವನ್ನು ಮುದ್ರಿಸಬಹುದಾಗಿದೆ. ಹಾಗೂ ಕಡ್ಡಾಯವಾಗಿ ಕರಪತ್ರದಲ್ಲಿ ಮುದ್ರಕರ ಹೆಸರು, ಮುದ್ರಣ ಮಾಡಿದ ಕರಪತ್ರಗಳ ಸಂಖ್ಯೆಯನ್ನು ನಮೂದಿಸಬೇಕು ಎಂದು ತಿಳಿಸಿದರು.ಯಾವುದೇ ರೀತಿಯ ಅಪಪ್ರಚಾರ, ಸುಳ್ಳು ಮಾಹಿತಿ, ಕೋಮುಗಲಭೆ ಸೃಷ್ಟಿಸುವಂತಹ ಕರಪತ್ರ, ಪೋಸ್ಟರ್, ಬ್ಯಾನರ್ ಮುದ್ರಿಸಲು ಅನುಮತಿ…
ಚಿಮ್ಮಡ: ಇಂದಿನ ಆಧುನಿಕ ಯುಗದಲ್ಲಿ ಮನುಷ್ಯ ಸುಖ ಶಾಂತಿ ನೆಮ್ಮದಿ ಪಡೆಯಬೇಕಾದರೆ ಶರಣ ಮಹಾತ್ಮರ ತತ್ವಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದು ಸ್ಥಳಿಯ ವಿರಕ್ತಮಠದ ಶ್ರೀ ಪ್ರಭು ಮಹಾಸ್ವಾಮಿಗಳು ಹೇಳಿದರು.ಗ್ರಾಮದ ಶ್ರೀ ಪ್ರಭುಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ಮಂಗಳವಾರ ಹಮ್ಮಿಕೊಳ್ಳಲಾಗಿದ್ದ ಶ್ರೀ ವಿರಕ್ತ ಮಹಾಸ್ವಾಮಿಗಳ ೩೧ ಪುಣ್ಯಸ್ಮರಣೋತ್ಸವ ಹಾಗೂ ಅಕ್ಕ ಮಹಾದೇವಿ ಜಯಂತಿ ನಿಮಿತ್ಯವಾಗಿ ಅಥಣಿ ಶ್ರೀ ಮುರುಘೇಂದ್ರ ಶಿವಯೋಗಿಗಳವರ ಜೀವನ ದರ್ಶನ ಪ್ರವಚನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಜೀವನದ ಜಂಝಟಗಳ ನಡುವೆ ಜರ್ಜರಿತವಾದ ಮನುಷ್ಯರಿಗೆ ಈ ಧಾರ್ಮಿಕ ಕಾರ್ಯಕ್ರಮಗಳು ಮಾನಸಿಕ ಸಂತೋಷ ನೀಡುತ್ತವೆ ಸತತವಾಗಿ ಇಂಥಹ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವ ಮೂಲಕ ನೆಮ್ಮದಿ ಪಡೆಯಬೇಕೆಂದರು.ಕುಲವಳ್ಳಿ ಸುಕುಮಾರ ಯೋಗಾಶ್ರಮದ ಪ್ರವಚನಕಾರ ಓಂ ಗುರೂಜಿಯವರು ಮುರುಘೇಂದ್ರ ಶಿವಯೋಗಿಗಳವರ ಜೀವನ ದರ್ಶನ ಪ್ರವಚನ ನೀಡಿದರು.ಇದೇ ಸಂದರ್ಭದಲ್ಲಿ ಅಲ್ಲಮ ಪ್ರಭುದೇವರ ಜಯಂತೋತ್ಸವ ಕಾರ್ಯಕ್ರಮದ ನಿಮಿತ್ತ ತೊಟ್ಟಿಲು ಕಾರ್ಯಕ್ರಮ ಹಮ್ಮಿಕೊಳ್ಲಲಾಗಿತ್ತು.ಗ್ರಾಮದ ಪ್ರಮುಖರಾದ ರಾಮಣ್ಣ ಮುಗಳಖೋಡ, ಬಾಳಪ್ಪಾ ಹಳಿಂಗಳಿ, ಅಣ್ಣಪ್ಪಗೌಡ ಪಾಟೀಲ, ಗುರಪ್ಪ ಬಳಗಾರ ಗ್ರಾ.ಪಂ ಮಾಜಿ ಅಧ್ಯಕ್ಷ ಗುರಲಿಂಗಪ್ಪಾ…
– ಜಯಶ್ರೀ.ಜೆ. ಅಬ್ಬಿಗೇರಿ,ಉಪನ್ಯಾಸಕರು, ಸ ಪ ಪೂ ಕಾಲೇಜು, ಹಿರೇಬಾಗೇವಾಡಿ, ಬೆಳಗಾವಿ ಮೊದಲೆಲ್ಲ ಮುಂಜಾನೆದ್ದು ಪರಿಚಿತ ಮುಖಗಳು ಕಂಡಾಕ್ಷಣ ಮುಗುಳ್ನಗೆಯಿಂದ ನಮಸ್ಕರಿಸಿ, ಮುಂದೆ ಸಾಗುವ ಸಂಪ್ರದಾಯ ಚಾಲ್ತಿಯಲ್ಲಿತ್ತು. ಕೆಲ ಸ್ನೇಹಿತರು ಬೆಳಿಗ್ಗೆ ಬೆಳಿಗ್ಗೆನೆ ಕೈ ಹಿಡಿದುಕೊಂಡು ಕುಶಲೋಪರಿಯ ಮಾತಿಗಿಳಿದು, ಒಂದಿಷ್ಟು ಹರಟೆಗೂ ಚಾಲನೆ ನೀಡುತ್ತಿದ್ದರು. ಹಳ್ಳದ ದಡದಲ್ಲಿ, ಊರ ಹೊರಗಿನ ದೇವರ ಸನ್ನಿಧಿಯಲ್ಲಿ, ದೇವರ ಜಾತ್ರೆಯಲ್ಲಿ ಸ್ನೇಹಿತರು ಸಿಕ್ಕರಂತೂ ಸ್ವರ್ಗ ಮೂರೇ ಗೇಣು. ಕಾಲ ಕಳೇದಂತೆ ಜೀವನೋಪಾಯದ ಅನಿವಾರ್ಯತೆಯ ಹೆಸರಿನಲ್ಲಿ ಊರಿನಿಂದಾಚೆ ಹೋದವರೆಲ್ಲ ಒಟ್ಟಿಗೆ ಸೇರುವುದು ದೊಡ್ಡ ದೊಡ್ಡ ಹಬ್ಬ ಜಾತ್ರೆಗಳಲ್ಲಿ ಮಾತ್ರ. ನಡೆಯಿತು. ಉಳಿದ ದಿನಗಳಲ್ಲಿ ಕೂಡೋದು ಕಡಿಮೆ ಆಯಿತು. ಆದರೆ, ಸಿಕ್ಕಾಗ ಮಾತ್ರ ನಲಿವಿನ ಕ್ಷಣಗಳನ್ನು ಬದುಕಿನ ಪುಟಗಳಲ್ಲಿ ಅಚ್ಚೊತ್ತಿದಂತೆ ಬರೆದುಕೊಂಡು ಹೋಗುತ್ತಿದ್ದರು.ಇತ್ತೀಚಿನ ಆಧುನಿಕತೆಯ ಏದುಸಿರಿನ ಜೀವನದಲ್ಲಿ ಸ್ವಂತ ಊರಿಗೆ ಹೋಗುವುದಿರಲಿ, ಮನೆಯ ಹೊರಗಿನ ಅಂಗಳದಲ್ಲಿ ಕುಳಿತು ಪಕ್ಕದ ಮನೆಯವರೊಂದಿಗೆ ಎರಡು ಮಾತನಾಡಲೂ ಸಮಯ ಸಿಗುತ್ತಿಲ್ಲ. ನೋಡ ನೋಡುತ್ತಿದ್ದಂತೆಯೇ ಅಭಿವೃದ್ಧಿಯ ಹೆಸರಿನಲ್ಲಿ ನಮ್ಮೆಲ್ಲರ ಸಂಬಂಧಗಳ ನಡುವೆ ದೊಡ್ಡದೊಂದು ಎತ್ತರದ…
-ಕಬೂಲ್ ಆರ್ ಕೊಕಟನೂರದೇವರಹಿಪ್ಪರಗಿ, ವಿಜಯಪುರ ಜಿಲ್ಲೆ ಮಾನವ ತನ್ನ ಬದುಕಿನಲ್ಲಿ ಮಾಡುವ ಎಲ್ಲ ಪಾಪಗಳನ್ನು ವಿಮುಕ್ತಿಗೆ ಹಪಹಪಿಸಿ ಹೊಂದುವ ಮುಕ್ತಿ ಮಾರ್ಗದಡೆಗೆ ಸಾಗುವ ಸನ್ಮಾರ್ಗಕ್ಕೆ ಹತ್ತು ಹಲವು ಸಂಪ್ರದಾಯಗಳನ್ನು ಆಯಾ ಧರ್ಮಿಯರು ಹಾಕಿಕೊಂಡು ಬಂದಿದ್ದಾರೆ. ಇಸ್ಲಾಂ ಧರ್ಮಿಯರಿಗೆ ರಂಜಾನ್ ಮಾಸ ಪವಿತ್ರ ಮಾಸವಾಗಿದ್ದು, ಗೈದ ಪಾಪಗಳ ಪ್ರಾಯಶ್ಚಿತಕ್ಕೆ ಸೂಕ್ತ ಕಾಲವಾಗಿದೆ. ರಂಜಾನ್ ಮಾಸದ ಚಂದ್ರ ಗೋಚರಿಸುತ್ತಿದ್ದಂತೆ ನವ ಚೈತನ್ಯದ ಚಿಲುಮೆ ಗರಿಗೆದರುತ್ತದೆ, ಆತ್ಮವುಲ್ಲಾಸ ಉಕ್ಕೇರುತ್ತದೆ. ಪವಿತ್ರ ಕುರ್ಆನ್ನಲ್ಲಿ ಉಪದೇಶಿಸಿದಂತೆ ರಂಜಾನ್ ಮಾಸವು ಪರಲೋಕ ಸಾಧನೆಗಾಗಿ ಇರುವ ಬಂಡವಾಳ ಹೂಡಿಕೆ ಇದ್ದಂತೆ. ಸತ್ಯ, ವಿಶ್ವಾಸ, ಪ್ರತಿಫಲಾಪೇಕ್ಷೆಯಿಂದ ರಂಜಾನ್ ಉಪವಾಸವನ್ನು ಆಚರಿಸುವುದರ ಜೊತೆಗೆ ರಾತ್ರಿ ತರಾವೀಹ್ ನಮಾಜ್ ನಿರ್ವಹಿಸಿದರೆ ಹಿಂದಿನ ಪಾಪಗಳು ಕ್ಷಮಿಸಲ್ಪಡುವವು ಎಂಬ ನಂಬಿಕೆ ಬಲವಾಗಿದೆ.ರಂಜಾನ್ ಎಂಬ ಶಬ್ದಕ್ಕೆ ಸುಟ್ಟು ನಾಶಗೊಳಿಸು ಎಂಬರ್ಥವಿದೆ. ವರ್ಷದ ಹನ್ನೊಂದು ತಿಂಗಳಲ್ಲಿ ಮಾಡಿದ ಪಾಪಗಳನ್ನು ಕಳೆಯಲು ಪಶ್ಚಾತ್ತಾಪ ಪಟ್ಟು ಅಲ್ಲಾಹನ ಅನುಸರಣೆ ತರುವುದೇ ರಂಜಾನ್. ಈ ಪವಿತ್ರ ಮಾಸದಲ್ಲಿ ನಿರ್ವಹಿಸುವ ಉಪವಾಸ ಆಚರಣೆ ಆಗ ಮಾಡುವ ಪ್ರತಿಯೊಂದು…
-ಕಬೂಲ್ ಆರ್ ಕೊಕಟನೂರ ದೇವರಹಿಪ್ಪರಗಿ, ವಿಜಯಪುರ ಜಿಲ್ಲೆ ಮಾನವ ತನ್ನ ಬದುಕಿನಲ್ಲಿ ಮಾಡುವ ಎಲ್ಲ ಪಾಪಗಳನ್ನು ವಿಮುಕ್ತಿಗೆ ಹಪಹಪಿಸಿ ಹೊಂದುವ ಮುಕ್ತಿ ಮಾರ್ಗದಡೆಗೆ ಸಾಗುವ ಸನ್ಮಾರ್ಗಕ್ಕೆ ಹತ್ತು ಹಲವು ಸಂಪ್ರದಾಯಗಳನ್ನು ಆಯಾ ಧರ್ಮಿಯರು ಹಾಕಿಕೊಂಡು ಬಂದಿದ್ದಾರೆ. ಇಸ್ಲಾಂ ಧರ್ಮಿಯರಿಗೆ ರಂಜಾನ್ ಮಾಸ ಪವಿತ್ರ ಮಾಸವಾಗಿದ್ದು, ಗೈದ ಪಾಪಗಳ ಪ್ರಾಯಶ್ಚಿತಕ್ಕೆ ಸೂಕ್ತ ಕಾಲವಾಗಿದೆ. ರಂಜಾನ್ ಮಾಸದ ಚಂದ್ರ ಗೋಚರಿಸುತ್ತಿದ್ದಂತೆ ನವ ಚೈತನ್ಯದ ಚಿಲುಮೆ ಗರಿಗೆದರುತ್ತದೆ, ಆತ್ಮವುಲ್ಲಾಸ ಉಕ್ಕೇರುತ್ತದೆ. ಪವಿತ್ರ ಕುರ್ಆನ್ನಲ್ಲಿ ಉಪದೇಶಿಸಿದಂತೆ ರಂಜಾನ್ ಮಾಸವು ಪರಲೋಕ ಸಾಧನೆಗಾಗಿ ಇರುವ ಬಂಡವಾಳ ಹೂಡಿಕೆ ಇದ್ದಂತೆ. ಸತ್ಯ, ವಿಶ್ವಾಸ, ಪ್ರತಿಫಲಾಪೇಕ್ಷೆಯಿಂದ ರಂಜಾನ್ ಉಪವಾಸವನ್ನು ಆಚರಿಸುವುದರ ಜೊತೆಗೆ ರಾತ್ರಿ ತರಾವೀಹ್ ನಮಾಜ್ ನಿರ್ವಹಿಸಿದರೆ ಹಿಂದಿನ ಪಾಪಗಳು ಕ್ಷಮಿಸಲ್ಪಡುವವು ಎಂಬ ನಂಬಿಕೆ ಬಲವಾಗಿದೆ.ರಂಜಾನ್ ಎಂಬ ಶಬ್ದಕ್ಕೆ ಸುಟ್ಟು ನಾಶಗೊಳಿಸು ಎಂಬರ್ಥವಿದೆ. ವರ್ಷದ ಹನ್ನೊಂದು ತಿಂಗಳಲ್ಲಿ ಮಾಡಿದ ಪಾಪಗಳನ್ನು ಕಳೆಯಲು ಪಶ್ಚಾತ್ತಾಪ ಪಟ್ಟು ಅಲ್ಲಾಹನ ಅನುಸರಣೆ ತರುವುದೇ ರಂಜಾನ್. ಈ ಪವಿತ್ರ ಮಾಸದಲ್ಲಿ ನಿರ್ವಹಿಸುವ ಉಪವಾಸ ಆಚರಣೆ ಆಗ ಮಾಡುವ…
ಚಡಚಣ: ಈ ಸಲ ಮೋದಿಯವರ ಮೋಡಿ ನಡೆಯಲ್ಲ, ಅವರ ಮಾರಿ ನೋಡಿ ಓಟು ಹಾಕುವ ದಿನಗಳು ಹೋದವು ಎಂದು ಬೃಹತ್ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಹೇಳಿದರು.ಲೋಕಸಭೆ ಚುನಾವಣೆ ನಿಮಿತ್ತ ಬುಧವಾರ ನಡೆದ ಚಡಚಣ ಬ್ಲಾಕ್ನ ಪ್ರಚಾರ ಸಭೆಯಲ್ಲಿ ಮಾತನಾಡಿ, ಅಚ್ಛೇ ದಿನ್ ಅಂತ ಹೇಳಿ ಕೆಟ್ಟ ದಿನಗಳನ್ನು ಕೊಟ್ಟವರು ಮೋದಿ ಎಂದು ವಾಗ್ದಾಳಿ ನಡೆಸಿದರು.ಮೋದಿಯವರು ಹೇಳಿರುವ ಯಾವ ಭರವಸೆಯೂ ಈಡೇರಿಲ್ಲ. ಆದರೂ ಯುವಕರು ಭ್ರಮೆಯಲ್ಲಿ ತೇಲುತ್ತ ಮೋದಿ ಮೋದಿ ಎನ್ನುತ್ತಾರೆ. ಪೆಟ್ರೋಲ್, ಡೀಸೆಲ್, ಗ್ಯಾಸ್ ಬೆಲೆ ಅಜಗಜಾಂತರವಾಗಿ ಏರಿದೆ. ಸದ್ಯ ಚುನಾವಣಾ ಬಾಂಡ್ ಹಗರಣದಿಂದ ಮೋದಿಯವರ ಒಳ ಮರ್ಮ ಹೊರ ಬಂದಿದೆ ಎಂದರು.ಕೇಜ್ರಿವಾಲ್ ಬಂಧನಕ್ಕೆ ಕಾರಣವಾಗಿರುವ ಕಂಪನಿಯಿಂದಲೇ ಬಿಜೆಪಿ ಬಾಂಡ್ ಹೆಸರಲ್ಲಿ ದುಡ್ಡು ಹೊಡೆದಿದೆ. ಕಳ್ಳತನದಿಂದ ಪಡೆಯುತ್ತಿರುವುದನ್ನು ರಹದಾರಿಯಲ್ಲಿ ಪಡೆದಿದ್ದೇವೆ ಅಂತಲೂ ಇವರು ಹೇಳುತ್ತಾರೆ. ಸುಪ್ರೀಂ ಕೋರ್ಟ್ ಪದೇ ಪದೇ ಛೀಮಾರಿ ಹಾಕುತ್ತಿದೆ. ಇಡಿ, ಸಿಬಿಐ ಮೂಲಕ ಛೂ ಬಿಟ್ಟು ನಂತರ ಬಾಂಡ್ ಮೂಲಕ ಹಣ ಎತ್ತಿದ್ದಾರೆ.…
Udayarashmi kannada daily newspaper
ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವನ್ನು ಬುಧವಾರ ಬೆಳಗ್ಗೆ 10 ಗಂಟೆಗೆ ಪ್ರಕಟಿಸಲಾಗುವುದು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮಂಗಳವಾರ ತಿಳಿಸಿದೆ.ಮಾರ್ಚ್ 1ರಿಂದ ಮಾರ್ಚ್ 22ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ನಾಳೆ ಪ್ರಕಟಿಸಲಾಗುತ್ತಿದೆ. ಬೆಳಗ್ಗೆ 10 ಗಂಟೆಗೆ ಸುದ್ದಿಗೋಷ್ಠಿ ನಡೆಯಲಿದ್ದು,ಬಳಿಕ 11 ಗಂಟೆಗೆ ವೆಬ್ಸೈಟ್ನಲ್ಲಿ ವಿಜ್ಞಾನ, ವಾಣಿಜ್ಯ, ಕಲೆ ವಿಭಾಗ ಸೇರಿದಂತೆ ಎಲ್ಲಾ ವಿಭಾಗಗಳ ಫಲಿತಾಂಶವನ್ನು ಏಕಕಾಲದಲ್ಲಿ ಪ್ರಕಟಿಸಲಾಗುತ್ತಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.ಫಲಿತಾಂಶವನ್ನು karresults.nic.in ಅಥವಾ pue.kar.nic ಅಧಿಕೃತ ವೆಬ್ಸೈಟ್ ನಲ್ಲಿ ನಾಳೆ ಬೆಳಗ್ಗೆ 11 ಗಂಟೆಯ ನಂತರ ವೀಕ್ಷಿಸಬಹುದು.2024ರ ದ್ವಿತೀಯ ಪಿಯುಸಿ ಪರೀಕ್ಷೆಗೆ 6.9 ಲಕ್ಷ ವಿದ್ಯಾರ್ಥಿಗಳು ಹಾಜರಾಗಿದ್ದಾರೆ ಎಂದು ಅಂದಾಜಿಸಲಾಗಿದೆ. ಅವರಲ್ಲಿ 3.3 ಲಕ್ಷ ವಿದ್ಯಾರ್ಥಿಗಳಾಗಿದ್ದು, 3.6 ಲಕ್ಷ ವಿದ್ಯಾರ್ಥಿನಿಯರಾಗಿದ್ದರು.
