Author: editor.udayarashmi@gmail.com

ಸಿಂದಗಿ: ಶ್ರೀ ಶ್ರೀಕ್ಷೇತ್ರ ಧರ್ಮಸ್ಥಳ ಸಂಸ್ಥೆಯು ೫೨ ಕಾರ್ಯಕ್ರಮಗಳನ್ನು ನಿರ್ವಹಿಸುತ್ತಿದೆ ಎಂದು ತಾಲೂಕು ಯೋಜನಾಧಿಕಾರಿ ಗಿರೀಶಕುಮಾರ ಎಮ್ ಹೇಳಿದರು.ತಾಲೂಕಿನ ಯರಗಲ್ ಬಿಜೆ ಗ್ರಾಮದ ಭೀರಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಸಂಸ್ಥೆಯ ವತಿಯಿಂದ ೧ಲಕ್ಷ ರೂ. ದೇಣಿಗೆ ಡಿಡಿಯನ್ನು ವಿತರಿಸಿ ಮಾತನಾಡಿದ ಅವರು, ನಮ್ಮ ಸಂಸ್ಥೆಯು ನಿರ್ಗತಿಕರಿಗೆ ಮಾಶಾಸನಾ, ಸುಜ್ಞಾನ ನಿಧಿ, ಶಿಷ್ಯ ವೇತನ, ರುದ್ರಭೂಮಿ ವಾಸ್ತಲ್ಯ ಮನೆ ಮತ್ತು ಸಮುದಾಯ ಅಭಿವೃದ್ಧಿ ಕಾರ್ಯಕ್ರಮಗಳನ್ನು ನೀಡುತ್ತಿದೆ ಎಂದು ಹೇಳಿದರು.ಈ ವೇಳೆ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ಸಂತೋಷಕುಮಾರ ರೈ, ಕಮಿಟಿಯ ಸದಸ್ಯ ಮಡಿವಾಳಪ್ಪಗೌಡ ಕಡ್ಲಗೊಂಡ, ಹಾಶಿಮ ಅವಟಿ, ಬಸಯ್ಯ ಮಹಾ ಸ್ವಾಮಿಗಳು, ಖಾದಿರಬಾಷಾ ಬಂಕಲಗಿ, ಸಾಯಿಪಟೇಲ ಅವಟಿ, ಭೀಮಾಶಂಕರ ಪಾಟೀಲ್, ಗುಂಡಪ್ಪ ಭಾಸಗಿ, ಶರಣಪ್ಪ ಹೂಗಾರ, ಅಂಬಲೆಪ್ಪ ಬಾಲಪ್ಪಗೊಳ, ಕುಪೇಂದ್ರ ಪೂಜಾರಿ, ಬಸು ಘತ್ತರಗಿ, ಸಾತಪ್ಪ ಬಿ ಭಾಸಗಿ, ಸಿದ್ದಲಿಂಗ ಪೂಜಾರಿ, ಬಾಗಮ್ಮ ಪರಗೊಂಡ ಸೇರಿದಂತೆ ಒಕ್ಕೂಟದ ಅದ್ಯಕ್ಷರು, ವಲಯದ ಮೇಲ್ವಿಚಾರಕರು, ಸೇವಾ ಪ್ರತಿನಿದಿಗಳು, ಸಂಘದ ಸದಸ್ಯರು ಉಪಸ್ಥಿತರಿದ್ದರು.

Read More

ಬಸವನಬಾಗೇವಾಡಿ: ತಾಲೂಕಿನ ಜಾಯವಾಡಗಿ ಗ್ರಾಮದ ಆರಾಧ್ಯದೈವ ಸೋಮನಾಥೇಶ್ವರ, ಶಿವಪ್ಪ ಮುತ್ಯಾರ ಜಾತ್ರಾಮಹೋತ್ಸವದಂಗವಾಗಿ ಸೋಮವಾರ ಜೀಣೋದ್ಧಾರಗೊಂಡ ದೇವಸ್ಥಾನಕ್ಕೆ ಕಳಸಾರೋಹಣ ಸಂಭ್ರಮ, ಸಡಗರದಿಂದ ಜರುಗಿತು.ತಾಲೂಕಿನ ಕಾನ್ನಾಳ ಗ್ರಾಮದ ಸಜ್ಜನ ಬಂಧುಗಳಿಂದ ಹಾಗೂ ಗ್ರಾಮದ ಸದ್ಭಕ್ತರಿಂದ ದೇವಸ್ಥಾನದ ಕಳಸ ಹಾಗೂ ಜಾಯವಾಡಗಿ ಗ್ರಾಮದಿಂದ ಪಲ್ಲಕ್ಕಿ ಸಕಲ ವಾದ್ಯಮೇಳದೊಂದಿಗೆ ಮೆರವಣಿಗೆ ಮೂಲಕ ದೇವಸ್ಥಾನಕ್ಕೆ ಆಗಮಿಸಿದ ನಂತರ ಭಕ್ತರ ಜಯಘೋಷದೊಂದಿಗೆ ದೇವಸ್ಥಾನದ ಕಳಸಾರೋಹಣ ನೆರವೇರಿತು. ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಲಾಗಿತ್ತು.ಮೆರವಣಿಗೆಯಲ್ಲಿ ಸಂಗಪ್ಪ ಸಜ್ಜನ, ಶರಣಪ್ಪಮಾಸ್ತರ ಸಜ್ಜನ, ರಾಜಶೇಖರ ಸಜ್ಜನ, ಕುಮಾರ ನಾಗರೆಡ್ಡಿ, ಸಿದ್ದು ಹೂಗಾರ, ಚಂದ್ರಶೇಖರ ನಾಗರೆಡ್ಡಿ, ಮಂಜು ಈಳಗೇರ,ನೀಲಪ್ಪ ಮಂತ್ರಿ, ಸಿದ್ರಾಮ ಕಲ್ಲೂರ, ಚಂದಪ್ಪ ಕಾಮನಹಟ್ಟಿ, ರಾಜಶೇಖರ ಪಾಟೀಲ, ಮಹಾದೇವಪ್ಪಗೌಡ ಬಿರಾದಾರ, ಪರಶುರಾಮ ಪೂಜಾರಿ ಇತರರು ಇದ್ದರು. ರಾತ್ರಿ ಪಾಲಭಾವಿಯ ಬ್ರಹ್ಮಲಿಂಗೇಶ್ವರ ನಾಟ್ಯ ಸಂಘದಿಂದ ಯಾರ ವಿಶ್ವಾಸ ಯಾರಿಗೆ ಇಲ್ಲ ಎಂಬ ಸಾಮಾಜಿಕ ನಾಟಕ ಪ್ರದರ್ಶನಗೊಂಡಿತು.ಇಂದು ರಥೋತ್ಸವಃ ಪ್ರತಿ ವರ್ಷ ಯುಗಾದಿ ಪಾಡ್ಯದಿನದಂದು ನಡೆಯುವ ಸೋಮನಾಥೇಶ್ವರ, ಶಿವಪ್ಪ ಮುತ್ಯಾರ ರಥೋತ್ಸವ ಏ.೯ ರಂದು ನಡೆಯಲಿದೆ. ಬೆಳಗ್ಗೆ ತೇರಿನ…

Read More

ಬಸವನಬಾಗೇವಾಡಿ: ರಾಜ್ಯಕ್ಕೆ ಒಳ್ಳೆಯದು ಆಗಬೇಕು, ನೀರಾವರಿ ಯೋಜನೆ ಜಾರಿಯಾಗಬೇಕೆಂಬ ಸದುದ್ದೇಶದೊಂದಿಗೆ ಪಕ್ಷದ ವರಿಷ್ಠರು ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಜೆಡಿಎಸ್ ಪಕ್ಷವನ್ನು ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿದ್ದಾರೆ ವಿನಃ ವಿಲೀನಗೊಳಿಸಿಲ್ಲ. ಮೇ. ೭ ರಂದು ನಡೆಯಲಿರುವ ವಿಜಯಪುರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ, ಸಂಸದ ರಮೇಶ ಜಿಗಜಿಣಗಿ ಅವರನ್ನು ಬಹುಮತದೊಂದಿಗೆ ನಮ್ಮ ಕಾಯಕರ್ತರು ಆಯ್ಕೆ ಮಾಡಲು ಕಾರ್ಯತತ್ಪರಾಗಬೇಕೆಂದು ದೇವರಹಿಪ್ಪರಗಿ ಶಾಸಕ ರಾಜುಗೌಡ ಪಾಟೀಲ ಹೇಳಿದರು.ತಾಲೂಕಿನ ಕುದರಿಸಾಲವಾಡಗಿ ಗ್ರಾಮದ ಮಾದೇಶ್ವರ ದೇವಸ್ಥಾನದ ಕಲ್ಯಾಣ ಮಂಟಪದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ದೇವರಹಿಪ್ಪರಗಿ ಮತಕ್ಷೇತ್ರದ ಜೆಡಿಎಸ್ ಪಕ್ಷದ ಪದಾಧಿಕಾರಿಗಳ ಹಾಗೂ ಕಾರ್ಯಕರ್ತರ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ನಾನು ಪಕ್ಷದ ಸಿದ್ದಾಂತ ಮೊದಲಿನಿಂದಲೂ ಕಾರ್ಯನಿರ್ವಹಿಸುತ್ತಾ ಬಂದಿದ್ದೇನೆ. ಈ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯೊಂದಿಗೆ ಪಕ್ಷವು ಮೈತ್ರಿ ಮಾಡಿಕೊಂಡ ಹಿನ್ನೆಲೆಯಲ್ಲಿ ಪಕ್ಷದ ಕಾರ್ಯಕರ್ತರಿಗೆ ಈ ವಿಷಯ ತಿಳಿಸುವ ಉದ್ದೇಶದಿಂದ ಈ ಪೂರ್ವಭಾವಿ ಸಭೆ ಕರೆಯಲಾಗಿದೆ. ಮುಂಬರುವ ದಿನಗಳಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಪಕ್ಷ ಜಂಟಿಯಾಗಿ ಸಭೆ ಆಯೋಜನೆ ಮಾಡಲಾಗುತ್ತದೆ ಎಂದರು.ನಾನು…

Read More

ಆಲಮಟ್ಟಿ: ಹಿಂದೂಗಳ ಹೊಸ ವರ್ಷ ಯುಗಾದಿ. ಹೀಗಾಗಿ ಯುಗಾದಿ ಅಮವಾಸ್ಯೆಯ ದಿನ ದೇವರುಗಳ ಪಲ್ಲಕ್ಕಿಗಳನ್ನು ಕೃಷ್ಣೆಯಲ್ಲಿ ಸ್ನಾನ ಮಾಡಿಸುವುದು ನೂರಾರು ವರ್ಷಗಳ ಸಂಪ್ರದಾಯ.ಹೀಗಾಗಿ ಸೋಮವಾರ, ಬೆಳಿಗ್ಗೆಯಿಂದಲೇ ಅವಳಿ ಜಿಲ್ಲೆಯ ನಾನಾ ಕಡೆಯಿಂದ ನೂರಾರು ದೇವ, ದೇವತೆಗಳ ಪಲ್ಲಕ್ಕಿಗಳು ಆಲಮಟ್ಟಿಯತ್ತ ಬಂದವು.ಕೆಲವರು ನಡೆದುಕೊಂಡೇ ಪಲ್ಲಕ್ಕಿಯನ್ನು ಹೊತ್ತು ತಂದರೆ, ಇನ್ನೂ ಕೆಲವರು ಟ್ಯಾಕ್ಟರ್, ಎತ್ತಿನ ಬಂಡಿ, ನಾನಾ ವಾಹನಗಳಲ್ಲಿ ಪಲ್ಲಕ್ಕಿಯನ್ನು ಹೊತ್ತು ತರುತ್ತಿರುವುದು ಕಂಡು ಬಂತು.ನೂರಾರು ಪಲ್ಲಕ್ಕಿಗಳ ಸಮಾಗಮವೇ ಆಲಮಟ್ಟಿಯ ಕೃಷ್ಣಾ ತೀರದಲ್ಲಿ ಜರುಗಿತು.ನದಿಯ ಎರಡೂ ದಂಡೆಯ ಮೇಲೆ, ಛತ್ರಿ, ಚಾಮರ, ಪಲ್ಲಕ್ಕಿಗಳ ಸಂಭ್ರಮ, ಕಳಸದ ಮೆರವಣಿಗೆ, ಡೊಳ್ಳು ಕುಣಿತ, ಶಂಖ ಊದುವುದು, ಹಲಗೆ ವಾದನ ಮಾರ್ದನಿಸಿ, ಭಕ್ತಿಯ ಭಾವುಕತೆಯಲ್ಲಿ ತೇಲಿಸಿದವು.ವಿವಿಧ ಕಡೆಗಳಿಂದ ಬಂದ ಭಕ್ತರು ತಾವು ಮೊದಲ ನದಿಯಲ್ಲಿ ಮಿಂದು, ವ ಬಳಿಕ ಗಂಗಾ ಪೂಜೆ ನೆರವೇರಿಸಿದರು., ಮಡಿಯಲ್ಲಿಯೇ ಪಲ್ಲಕ್ಕಿ, ದೇವರ ಪರಿಕರಗಳು, ಉತ್ಸವ ಮೂರ್ತಿ, ಮುಖವಾಡಗಳು, ಆಭರಣಗಳನ್ನು ಶುಚಿಗೊಳಿಸಿ, ನಂತರ ಅಲಂಕರಿಸಿ ಪೂಜಿಸಿದರು. ಕೆಲವರು ಕಂಬಳಿ ಹಾಸಿ ಪಲ್ಲಕ್ಕಿಯನ್ನಿಟ್ಟು ಪೂಜೆ ಸಲ್ಲಿಸಿದರು.ದೇವರು:ಹನುಮಂತ,…

Read More

ಬಸವನಬಾಗೇವಾಡಿ: ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಾರ್ವತ್ರಿಕ ಲೋಕಸಭಾ ಚುನಾವಣೆಗೆ ನಿಯುಕ್ತಿಗೊಂಡಿರುವ ಮತಗಟ್ಟೆ ಅಧ್ಯಕ್ಷಾಧಿಕಾರಿಗಳಿಗೆ, ಮತಗಟ್ಟೆ ಅಧಿಕಾರಿಗಳಿಗೆ ಭಾನುವಾರ ಮೊದಲ ಹಂತದ ತರಬೇತಿ ಆಯೋಜಿಸಲಾಗಿತ್ತು.ಬೆಳಗ್ಗೆ ನಿಯುಕ್ತಿಗೊಂಡ ಪಿಆರ್ಓ, ಎಆರ್ಓ ಸಿಬ್ಬಂದಿಗಳು ಆಗಮಿಸಿ ಹಾಜರಾತಿಗೆ ಸಹಿ ಮಾಡಿದ ನಂತರ ತಮಗೆ ನಿಗದಿ ಪಡಿಸಿದ ಕೋಣೆಗಳಿಗೆ ತೆರಳಿ ಮಾಸ್ಟರ್ ಟ್ರೇನರ್ಗಳಿಂದ ಮತಗಟ್ಟೆ ಅಧ್ಯಕ್ಷಾಧಿಕಾರಿಗಳ ಮತ್ತು ಮತಗಟ್ಟಿ ಅಧಿಕಾರಿಗಳ ಕರ್ತವ್ಯಗಳು, ಚುನಾವಣಾ ಆಯೋಗ ನೀಡಿದ ಮಾಹಿತಿಗಳ ಕುರಿತು ತರಬೇತಿಯಲ್ಲಿ ಭಾಗವಹಿಸಿದರು. ತರಬೇತಿಯು ೧೧ ಕೋಣೆಗಳಲ್ಲಿ ಆಯೋಜನೆ ಮಾಡಲಾಗಿತ್ತು. ತರಬೇತಿಯಲ್ಲಿ ಪಿಆರ್ಓ, ಎಪಿಆರ್ಓಗಳಿಗೆ ಬೆಳಗ್ಗೆ ಪ್ರೊಜೆಕ್ಟರ್ ಮೂಲಕ, ಮಧ್ಯಾನ್ಹ ವಿದ್ಯುನ್ಮಾನ ಮತಯಂತ್ರಗಳ ಪ್ರಾತ್ಯಕ್ಷಿಕತೆ ಮೂಲಕ ಮಾಸ್ಟರ್ ಟ್ರೇನರ್, ಸೆಕ್ಟರ್ ಅಧಿಕಾರಿಗಳು ತರಬೇತಿ ನೀಡಿದರು. ತರಬೇತಿ ಕೋಣೆಗಳಿಗೆ ಜಿಲ್ಲಾ ತರಬೇತಿ ನೋಡಲ್ ಅಧಿಕಾರಿ ಶಂಕರಗೌಡ ಸೋಮನಾಳ ಭೇಟಿ ನೀಡಿ ವೀಕ್ಷಿಸಿದರು.ನ್ಯಾಯಸಮ್ಮತ, ಪಾರದರ್ಶಕ ಮತದಾನ ನಡೆಯುವಲ್ಲಿ ಚುನಾವಣೆಗೆ ನಿಯುಕ್ತಿಗೊಂಡ ಸಿಬ್ಬಂದಿಗಳು ಕರ್ತವ್ಯ ನಿರ್ವಹಿಸಬೇಕು. ತರಬೇತಿಯಲ್ಲಿ ತಮಗೆ ಉಂಟಾಗುವ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಬೇಕು. ಸಿಬ್ಬಂದಿಗಳು ಸೂಕ್ತವಾದ ತರಬೇತಿ ಪಡೆದುಕೊಂಡು ಈ ತಾಲೂಕಿನ…

Read More

ಕಲಕೇರಿಯಲ್ಲಿ ನಡೆದ ಜಿಪಂ ವ್ಯಾಪ್ತಿಯ ಸಭೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರೊ.ರಾಜು ಆಲಗೂರ ವಾಗ್ದಾಳಿ ಕಲಕೇರಿ: ದೇವರ ಹಿಪ್ಪರಗಿ ಮತಕ್ಷೇತ್ರದ ಕಲಕೇರಿಯಲ್ಲಿ ಭಾನುವಾರ ನಡೆದ ಜಿಪಂ ವ್ಯಾಪ್ತಿಯ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಕಾಂಗ್ರೆಸ್ ಪಕ್ಷದ ವಿಜಯಪುರ ಲೋಕಸಭೆ ಅಭ್ಯರ್ಥಿ ಪ್ರೊ.ರಾಜು ಆಲಗೂರ, ‘ದೇಶವನ್ನು ಬುಡದಿಂದ ಕಟ್ಟಿದ್ದು ಕಾಂಗ್ರೆಸ್ ಪಕ್ಷ ಆದರೆ ದೇಶವನ್ನು ಹಾಳುಗೆಡವಿ ಪಕೋಡ ಮಾರಲು ಹಚ್ಚಿದ್ದು ಮೋದಿಯವರ ಬಿಜೆಪಿ ಎಂದು ಹೇಳಿದರು.ನೀವೆಲ್ಲ ಸೌಖ್ಯದಿಂದ ಇರಬೇಕಾದರೆ ಕಾಂಗ್ರೆಸ್ ಪಕ್ಷ ಕೇಂದ್ರದಲ್ಲಿ ಅಧಿಕಾರಕ್ಕೆ ಬರಬೇಕು. ಜನರ ಜೀವನ ಸುಧಾರಿಸಬೇಕಾದರೆ ನಮ್ಮ ಪಕ್ಷಕ್ಕೆ ಮತ ನೀಡಿ, ರಾಜ್ಯ ಸರಕಾರ ನೀಡಿದ್ದ ಭರವಸೆಗಳೆಲ್ಲ ಈಡೇರಿಸಿದೆ. ನಮಗೆ ಓಟು ಕೇಳಲು ನೈತಿಕತೆ ಇದೆ. ಬಿಜೆಪಿಯವರ ಸುಳ್ಳಿನ ಮಾತಗಳನ್ನು ನಂಬಬೇಡಿ. ರಮೇಶ ಜಿಗಜಿಣಗಿಯವರು ಮೂವತ್ತು ವರ್ಷ ಲೋಕಸಭೆ ಸದಸ್ಯರಾಗಿ ಏನು ಮಾಡಿದ್ದಾರೆ ಹೇಳಿ. ಹಾಗಾಗಿ ಇದು ಬದಲಾವಣೆಯ ಸಮಯ, ಅವರನ್ನು ಬದಲಿಸಿ, ನಮಗೆ ಬೆಂಬಲಿಸಿ ಎಂದು ವಿನಂತಿಸಿದರು.ಮಾಜಿ ಶಾಸಕರಾದ ಶರಣಪ್ಪ ಸುಣಗಾರ ಮಾತನಾಡಿ ನುಡಿದಂತೆ ನಡೆದದ್ದು ಹಾಗೂ ಮುಂದೆಯೂ ನಡೆಯುವುದು…

Read More

ಮುದ್ದೇಬಿಹಾಳ: ಬಡವರ ಸೇವೆ ದೇವರ ಪೂಜೆ. ಬಡವರಲ್ಲಿ ಮಾನವೀಯತೆ ಮತ್ತು ದೈವತ್ವದ ಸ್ವರೂಪವನ್ನು ಕಾಣುವವರು ನಿಜವಾದ ಮಾನವರಾಗುತ್ತಾರೆ ಎಂದು ಕುಂಟೋಜಿ ಸಂಸ್ಥಾನ ಹಿರೇಮಠದ ಪೀಠಾಧಿಪತಿ ಡಾ.ಚನ್ನವೀರ ಶಿವಾಚಾರ್ಯರು ನುಡಿದರು.ಪಟ್ಟಣದ ಹುಡ್ಕೋ ಬಡಾವಣೆಯಲ್ಲಿ ಮನಿಯಾರ್ ಟ್ರಸ್ಟ್ ವತಿಯಿಂದ ಹಮ್ಮಿಕೊಳ್ಳಲಾಗಿದ್ದ, ರಂಜಾನ್ ಹಬ್ಬದ ದಿನಸಿ ಕಿಟ್ ವಿತರಣಾ ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿ ಅವರು ಮಾತನಾಡಿದರು.ಬಡವರು ಹಬ್ಬ ಆಚರಿಸಿದ ನಂತರದಲ್ಲೇ ನಾನು ಹಬ್ಬ ಆಚರಿಸುವೆ ಎಂದು ಸಂಕಲ್ಪತೊಟ್ಟು ಅಂದಾಜು ೨೪ ವರ್ಷಗಳಿಂದ ನಿರಂತರವಾಗಿ ರಂಜಾನ್ ಹಬ್ಬದ ದಿನಸಿ ಕಿಟ್ ವಿತರಣೆ ಮಾಡುತ್ತ, ಕಣ್ಣು ಕಳೆದುಕೊಂಡವರಿಗೆ ಉಚಿತವಾಗಿ ಶಸ್ತ್ರಚಿಕಿತ್ಸೆಯ ಸೇವೆ ನೀಡುವ ಮೂಲಕ, ಬಡವರ ಕಣ್ಣಲ್ಲಿ ತಮ್ಮ ತಂದೆ ತಾಯಿಗಳನ್ನು ಕಾಣುವ ಅಯ್ಯೂಬ ಮನಿವಾರ ಅವರ ಸೇವೆ ನಿಜಕ್ಕೂ ಶ್ಲಾಘನೀಯ. ಮುಂಬರುವ ದಿನಗಳಲ್ಲಿ ಇನ್ನಷ್ಟು ಹೆಚ್ಚಿನ ಬಡವರ ಸೇವೆ ನೀಡುವ ಶಕ್ತಿ ಭಗವಂತ ಅವರಿಗೆ ನೀಡಲಿ ಎಂದು ಆಶೀರ್ವದಿಸಿದರು.ಜಿಲ್ಲಾ ಪಂಚಾಯತ ಮಾಜಿ ಉಪಾಧ್ಯಕ್ಷ ಪ್ರಭುಗೌಡ ದೇಸಾಯಿ ಅವರು ಮಾತನಾಡಿ, ಯಾವುದೇ ಫಲಾಪೇಕ್ಷೆ ಇಲ್ಲದೇ ಮಾಡುವ ದಾನ…

Read More

ಮುದ್ದೇಬಿಹಾಳ: ಲೋಕಸಭಾ ಸಾರ್ವತ್ರಿಕ ಚುನಾವಣೆ ಹಿನ್ನೆಲೆ ಆರೋಗ್ಯ ಇಲಾಖೆಯ ವತಿಯಿಂದ ಮತದಾರರಲ್ಲಿ ಮತದಾನ ಜಾಗೃತಿ ಜಾಥಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.ಮತದಾನ ನಮ್ಮ ಹಕ್ಕು, ಯಾವ ಭಯವಿಲ್ಲದೆ-ಮತದಾನ ಮಾಡೋಣ, ೧೮ವರ್ಷ ಮೇಲ್ಪಟ್ಟವರು ಕಡ್ಡಾಯವಾಗಿ ಮತದಾನ ಮಾಡಿ ಎನ್ನುವ ಘೋಷಣೆಗಳೊಂದಿಗೆ ಆರೋಗ್ಯ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳು ಹಾಗೂ ಆಶಾ ಕಾರ್ಯಕರ್ತೆಯರು ಇಲ್ಲಿನ ತಾಲೂಕ ಆರೋಗ್ಯ ಅಧಿಕಾರಿಗಳ ಕಾರ್ಯಾಲಯದಿಂದ ಮುಖ್ಯ ಬಜಾರ್ ನಲ್ಲಿರುವ ಗ್ರಾಮ ದೇವತೆ ದೇವಸ್ಥಾನ, ಬಸವೇಶ್ವರ ವೃತ್ತ, ಬಸ್ ನಿಲ್ದಾಣ, ಕಿತ್ತೂರು ರಾಣಿ ಚನ್ನಮ್ಮ ವೃತ್ತ, ಸಂಗೊಳ್ಳಿ ರಾಯಣ್ಣ ವೃತ್ತ, ಅಂಬೇಡ್ಕರ ವೃತ್ತ ಸೇರಿಂದತೆ ಪ್ರಮುಖ ಬೀದಿಗಳಲ್ಲಿ ಸಾಗಿ ಜಾಗೃತಿ ಮೂಡಿಸಲಾಯಿತು.ಅಂಬೇಡ್ಕರ್ ವೃತದಲ್ಲಿ ಜಾಥಾ ಕಾರ್ಯಕ್ರಮವನ್ನು ಉದ್ದೇಶಿಸಿ ತಹಸೀಲ್ದಾರ್ ಬಸವರಾಜ ನಾಗರಾಳ ಮಾತನಾಡಿ, ಪ್ರಜಾಪ್ರಭುತ್ವದ ಆಧಾರ ಸ್ತಂಭ ಮತದಾನ. ೧೮ ವರ್ಷ ಮೇಲ್ಪಟ್ಟ ಎಲ್ಲರು ತಪ್ಪದೆ ಮತ ಚಲಾಯಿಸಿ ಸಂವಿಧಾನ ಪ್ರಕಾರ ಪ್ರಜೆಗಳೇ ಪ್ರಭುಗಳು ಎಂದು ನಿರೂಪಿಸಬೇಕು ಎಂದರು.ತಾಲೂಕ ಆರೋಗ್ಯ ಅಧಿಕಾರಿ ಡಾ.ಸತೀಶ ತಿವಾರಿ ಮಾತನಾಡಿ, ಯಾವುದೇ ಕಾರಣಕ್ಕೂ ಮತದಾನ ಮಾಡದೆ ಇರಕೂಡದು, ಪ್ರತಿಯೊಬ್ಬರು…

Read More

ಮುದ್ದೇಬಿಹಾಳ: ಪ್ರತೀ ವರ್ಷ ೬೦ ಬಡ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ನೀಡುತ್ತಿದ್ದೆವು. ಈ ವರ್ಷ ೧೦೦ ಬಡ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ನೀಡುವುದರ ಜೊತೆಗೆ, ಹೆಚ್ಚಿನ ಅಂಕ ಪಡೆದ ವಿದ್ಯಾರ್ಥಿಗಳಿಗೆ ಸ್ಕಾಲರ್ ಶಿಪ್ ನೀಡಲು ಮುಂದಾಗಿದ್ದೇವೆ ಎಂದು ತಾಲೂಕಿನ ನಾಗರಬೆಟ್ಟ ಆಕ್ಸ್ಫರ್ಡ ಪಾಟೀಲ್ಸ್ ಕಾಲೇಜಿನ ಮುಖ್ಯಸ್ಥ ಎಂ.ಎಸ್.ಪಾಟೀಲ ಹೇಳಿದರು.ಕಾಲೇಜು ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಟ್ಯಾಲೆಂಟ್ ಅವಾರ್ಡ ಸ್ಪರ್ಧೆಯ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ನಮ್ಮ ಭಾಗದಲ್ಲಿ ಸಾಕಷ್ಟು ಪ್ರತಿಭಾನ್ವಿತ ವಿದ್ಯಾರ್ಥಿಗಳಿದ್ದಾರೆ. ಆದರೆ ಹೆಚ್ಚಿನ ಫೀ ಭರಿಸಿ ಓದಿಸುವ ಶಕ್ತಿ ಅವರ ಪಾಲಕರಿಗೆ ಇಲ್ಲ. ಹಾಗಾಗಿ ಬಡ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸಂಪೂರ್ಣ ಉಚಿತ ಶಿಕ್ಷಣ ನೀಡಿ ಪ್ರೋತ್ಸಾಹಿಸುವುದರ ಜೊತೆಗೆ ಮುಂದಿನ ಶಿಕ್ಷಣಕ್ಕೆ ನಮ್ಮ ಸಂಸ್ಥೆಯ ಕೈಲಾದ ಸಹಾಯ ಹಸ್ತ ಚಾಚುವ ನಿರ್ಧಾರವನ್ನು ಮಾಡಿದ್ದೇವೆ. ಬಡ ಪ್ರತಿಭಾನ್ವಿತ ವಿದ್ಯಾರ್ಥಿ ಶಿಕ್ಷಣದಿಂದ ವಂಚಿತರಾಗಬಾರದು ಎನ್ನುವುದೇ ನಮ್ಮ ಸಂಸ್ಥೆಯ ಉದ್ದೇಶ ಎಂದರು.ಢವಳಗಿ ಸರ್ಕಾರಿ ಕಾಲೇಜಿನ ಪ್ರಾಂಶುಪಾಲ ನಾಗರಾಜ ಬಿರಾಜ್ದಾರ ಅವರು ಮಾತನಾಡಿ, ಕುಗ್ರಾಮದಲ್ಲಿ ಪ್ರಾರಂಭಿಸಲಾದ ಸಂಸ್ಥೆ…

Read More

ದೇವರಹಿಪ್ಪರಗಿ: ಜಾಲವಾದ ಗ್ರಾಮದ ಕರ್ನಾಟಕ ಪಬ್ಲಿಕ್ ಪ್ರೌಢಶಾಲೆಯ ವಿದ್ಯಾರ್ಥಿನಿ ಸುಜಾತಾ ಧರೆಪ್ಪ ಹಡಪದ ಇವಳು ಇತ್ತೀಚಿಗೆ ಜರುಗಿದ ಎನ್‌ಎಮ್‌ಎಮ್‌ಎಸ್ ಪರೀಕ್ಷೆಯಲ್ಲಿ ೧೧೪ ಅಂಕಗಳನ್ನು ಪಡೆದು ಸಿಂದಗಿ ತಾಲ್ಲೂಕಿಗೆ ಪ್ರಥಮ ಹಾಗೂ ವಿಜಯಪುರ ಜಿಲ್ಲೆಗೆ ತೃತಿಯ ಸ್ಥಾನವನ್ನು ಪಡೆದಿದ್ದಾಳೆ.ವಿದ್ಯಾರ್ಥಿನಿಯ ಈ ಸಾಧನೆಗೆ ಶಾಲೆಯ ಉಪಪ್ರಾಂಶುಪಾಲ ಅಶೋಕ ಹೊಸಗೌಡರ ಸೇರಿದಂತೆ ಸಿಬ್ಬಂದಿ, ಎಸ್‌ಡಿಎಮ್‌ಸಿ ಸದಸ್ಯರು, ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Read More