Author: editor.udayarashmi@gmail.com

ತಾಳಿಕೋಟಿ: ಪ್ರತಿ ತಾಲೂಕುಗಳಲ್ಲಿ ನ್ಯಾಯಾಲಯ ಸ್ಥಾಪನೆಗೆ ನಿರ್ಧರಿಸಿದ್ದು ಅದರ ಭಾಗವಾಗಿ ತಾಳಿಕೋಟೆಯಲ್ಲಿ ನ್ಯಾಯಾಲಯ ಸ್ಥಾಪನೆಯಾಗುತ್ತಿದೆ. ಇಲ್ಲಿರುವ ಪ್ರಕರಣಗಳನ್ನು ಗಮನಿಸಿದರೆ ಪೂರ್ಣ ಪ್ರಮಾಣದ ನ್ಯಾಯಾಲಯದ ಅವಶ್ಯಕತೆ ಇದೆ. ಆದರೆ ಸದ್ಯ ವಾರದಲ್ಲಿ ಎರಡು ದಿನ ಕಲಾಪ ನಡೆಸಲು ಅನುಮತಿ ದೊರೆತಿದೆ ಎಂದು ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಮತ್ತು ವಿಜಯಪುರ ಜಿಲ್ಲೆಯ ಆಡಳಿತಾತ್ಮಕ ನ್ಯಾಯಮೂರ್ತಿ ಅಶೋಕ ಕಿಣಗಿ ಹೇಳಿದರು. ತಾಳಿಕೋಟೆ ಪಟ್ಟಣದ ಹಳೆಯ ಪುರಸಭೆಯ ಆವರಣದಲ್ಲಿ ಜಿಲ್ಲಾ ನ್ಯಾಯಾಂಗ, ಲೋಕೋಪಯೋಗಿ ಇಲಾಖೆ ವಿಜಯಪುರ ಹಾಗೂ ಮುದ್ದೇಬಿಹಾಳ ನ್ಯಾಯವಾದಿಗಳ ಸಂಘದ ಸಂಯುಕ್ತಾಶ್ರಯದಲ್ಲಿ ನೂತನವಾಗಿ ಪ್ರಾರಂಭವಾದ ಸಿವಿಲ್ ಜಡ್ಜ್ ಮತ್ತು ಜೆಎಂಎಫ್ಸಿ ನ್ಯಾಯಾಲಯ ಉದ್ಘಾಟನೆ ನೆರವೇರಿಸಿ ಶನಿವಾರ ಮಾತನಾಡಿದರು.ಇಂಡಿ-ಮುದ್ದೇಬಿಹಾಳಕ್ಕೆ ಜಿಲ್ಲಾ ನ್ಯಾಯಾಲಯ ಪ್ರಾರಂಭಿಸಲು ಪ್ರಸ್ತಾವನೆ ಸಲ್ಲಿಕೆಯಾಗಿವೆ. ಅಲ್ಲದೇ ಪಟ್ಟಣದಲ್ಲಿ ನ್ಯಾಯಾಲಯದ ಸಮುಚ್ಛಯ ನಿರ್ಮಾಣಕ್ಕೆ 110 ವಿದ್ಯುತ್ ಸ್ಥಾವರದ ಹಿಂದಿನ 165/ಬಿ ನಿವೇಶನ ಮಂಜೂರಿಗೆ ಪ್ರಸ್ತಾವನೆ ಸಲ್ಲಿಸಿದೆ ಎಂದರು.ಮುದ್ದೇಬಿಹಾಳ ವಕೀಲರ ಸಂಘದ ಅಧ್ಯಕ್ಷ ಶಶಿಕಾಂತ ಶಿ ಮಾಲಗತ್ತಿ ಪ್ರಾಸ್ತಾವಿಕವಾಗಿ ಮಾತನಾಡಿ, ನಾಗರಿಕರ ಬಹುದಿನ ಬೇಡಿಕೆಯಿದು, ಕಳೆದ ಏಳೆಂಟು…

Read More

ರಾಜು ಆಲಗೂರ ಗೆಲುವಿಗೆ ಶ್ರಮಿಸಿ :ಶಾಸಕ ನಾಡಗೌಡ ತಾಳಿಕೋಟಿ: ಕಾಂಗ್ರೆಸ್ ಪಕ್ಷದ ಲೋಕಸಭೆ ಅಭ್ಯರ್ಥಿ ರಾಜು ಆಲಗೂರ ಅವರ ಗೆಲುವಿಗೆ ನಮ್ಮೆಲ್ಲ ಮುಖಂಡರು ಹಾಗೂ ಕಾರ್ಯಕರ್ತರು ಇಂದಿನಿಂದಲೇ ಕಾರ್ಯಪ್ರವೃತ್ತರಾಗಬೇಕು ಎಂದು ಮುದ್ದೇಬಿಹಾಳ ಮತಕ್ಷೇತ್ರದ ಶಾಸಕ ಹಾಗೂ ಕರ್ನಾಟಕ ಸರ್ಕಾರದ ಸಾಬೂನು ಮತ್ತು ಮಾರ್ಜಕ ನಿಗಮದ ಅಧ್ಯಕ್ಷ ಸಿ ಎಸ್ ನಾಡಗೌಡ ಅಪ್ಪಾಜಿ ಹೇಳಿದರು.ಶನಿವಾರ ಪಟ್ಟಣದ ಶ್ರೀ ಸಂಗಮೇಶ್ವರ ಸಭಾಭವನದಲ್ಲಿ ಲೋಕಸಭೆ ಚುನಾವಣೆ ಪ್ರಯುಕ್ತ ಕರೆದ ತಾಳಿಕೋಟಿ ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು.ರಾಜ್ಯದಲ್ಲಿ ಈಗ ಕಾಂಗ್ರೆಸ್ ಪಕ್ಷದ ಸರಕಾರ ಆಡಳಿತದಲ್ಲಿದೆ. ಐದು ಗ್ಯಾರಂಟಿಗಳನ್ನು ಜಾರಿಗೆ ತಂದು ನಮ್ಮ ಸರ್ಕಾರವು ರಾಜ್ಯದ ಜನರ ವಿಶ್ವಾಸವನ್ನು ಗಳಿಸಿದೆ. ಆದರೆ ಇದರ ಕುರಿತು ಬಿಜೆಪಿಯವರು ಅವರಲ್ಲಿ ತಪ್ಪು ಅಭಿಪ್ರಾಯಗಳನ್ನು ಮೂಡಿಸುತ್ತಿದ್ದಾರೆ. ಬಿಜೆಪಿಯವರಿಗೆ ದ್ವೇಷದ ರಾಜಕಾರಣ ಮಾಡುವುದು ಬಿಟ್ಟು ಬೇರೇನು ಬರುವುದಿಲ್ಲ. ಕೇವಲ ಭಾವನಾತ್ಮಕ ವಿಷಯಗಳನ್ನು ತೆಗೆದುಕೊಂಡು ಚುನಾವಣೆಗಳನ್ನು ಎದುರಿಸುತ್ತಿದ್ದಾರೆ. ಅವರ ಈ ಮುಖವಾಡವನ್ನು ಕಳಚುವ ಕೆಲಸ ನಮ್ಮ ಕಾರ್ಯಕರ್ತರು ಮಾಡಬೇಕಾಗಿದೆ. ಯಾರು ಏನೇ ಮಾಡಿದರೂ…

Read More

ಶೇ.೧೦೦ ಮತದಾನದ ಗುರಿ :ಜಿಪಂ ಸಿಇಓ ರಿಶಿ ಆನಂದ ವಿಜಯಪುರ: ಜಿಲ್ಲೆಯಲ್ಲಿ ಶೇ.೧೦೦ರಷ್ಟು ಮತದಾನ ಚಲಾಯಿಸುವ ಗುರಿಯುನ್ನು ಹೊಂದಲಾಗಿದೆ. ಮತದಾನ ಮಾಡುವಂತೆ ಜಾಗೃತಿ ಮೂಡಿಸುವಲ್ಲಿ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಇದಕ್ಕೆ ಪೂರಕವಾಗಿ ಎಲ್ಲಾ ಅಧಿಕಾರಿ, ಸಿಬ್ಬಂದಿಗಳು ಸಮನ್ವಯದಿಂದ ಸಹಕರಿಸಿ ಗುರಿ ತಲುಪುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಶಿ ಆನಂದ ಹೇಳಿದರು.ಸೋಮುವಾರ ಜಿಲ್ಲಾ ಪಂಚಾಯತ್ ಕಚೇರಿಯ ಸಭಾಂಗಣದಲ್ಲಿ ಲೋಕಸಭಾ ಚುನವಣೆ-೨೦೨೪ರ ಹಿನ್ನೆಲೆಯಲ್ಲಿ ಮತದಾನದ ಜಾಗೃತಿ ಕುರಿತು ಭಿತ್ತಿಪತ್ರಗಳು, ಬ್ಯಾನರ್ ಗಳು, ಪೋಸ್ಟರ್ ಗಳು, ಸರ್ಕಾರಿ ಕಛೇರಿಗಳಲ್ಲಿ ರವಾನೆಯಾಗುವ ಪತ್ರಗಳ ಮೇಲೆ ಮುದ್ರಿಸಲು ಶೀಲುಗಳು ಹಾಗೂ ಇತರೆ ಸಾಮಗ್ರಿಗಳನ್ನು ಉದ್ಘಾಟಿಸಿ ಮಾತನಾಡಿದರು.ಜಿಲ್ಲೆಯಲ್ಲಿ ಮತದಾನದ ಪ್ರಮಾಣ ಹೆಚ್ಚಿಸುವುದು ನಮ್ಮೆಲ್ಲರ ಜವಾಬ್ದಾರಿ. ಮತದಾನ ಮಾಡುವ ಮೂಲಕ ನಮ್ಮ ಹಕ್ಕನ್ನು ಚಲಾಯಿಸಿ ಕರ್ತವ್ಯವನ್ನು ನಿಭಾಯಿಸೋಣ. ಹಾಗೆಯೇ ಪ್ರಸ್ತುತ ವರ್ಷ ಲೋಕಸಭಾ ಚುನಾವಣೆ-೨೦೨೪ರ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ವಿಶೇಷವಾಗಿ ಹಲವಾರು ಮತದಾನ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಆದ್ದರಿಂದ ಜಿಲ್ಲಾ ಪಂಚಾಯತಿಯ ಎಲ್ಲ ಅಧಿಕಾರಿಗಳು ಹಾಗೂ…

Read More

ವಿಜಯಪುರ: ಬಂಜಾರ ಸಮಾಜಕ್ಕೆ ಸೂಕ್ತ ಸ್ಥಾನಮಾನ ಕಲ್ಪಿಸುವ ಹೊಣೆಯನ್ನು ನುಡಿದಂತೆ ನಡೆಯುವ ಹೆಮ್ಮೆಯ ನಾಯಕ ಬಸನಗೌಡ ಪಾಟೀಲ ಯತ್ನಾಳ ಅವರು ತೆಗೆದುಕೊಂಡಿದ್ದು, ಕಾರಣ ಅವರ ಮೇಲೆ ನಂಬಿಕೆಯಿಟ್ಟು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಂಜಾರ ಸಮಾಜ ಬಾಂಧವರು ಬಿಜೆಪಿ ಬೆಂಬಲಿಸೋಣ ಎಂದು ಬಿಜೆಪಿ ನಗರ ಮಂಡಲದ ಎಸ್.ಸಿ ಮೋರ್ಚಾ ಅಧ್ಯಕ್ಷ ಪ್ರಕಾಶ ಚವ್ಹಾಣ ಹೇಳಿದ್ದಾರೆ.ಈ ಕುರಿತಂತೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ಅಭಿವೃದ್ಧಿ, ಸುರಕ್ಷತೆಗಾಗಿ ದೇಶಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಅನಿವಾರ್ಯ. ಭಾರತೀಯ ಜನತಾ ಪಾರ್ಟಿ ಕಲಬುರ್ಗಿಯಲ್ಲಿ ಲೋಕಸಭಾ ಟಿಕೆಟ್ ಟಿಕೆಟ್ ನೀಡಿದ್ದಲ್ಲದೆ, ಸದಾ ನಮ್ಮ ಸಮುದಾಯದ ಅಭಿವೃದ್ಧಿ ಪರ ಕೆಲಸ ಮಾಡಿದೆ. ನಮ್ಮ ನಾಯಕ ಬಸನಗೌಡ ಪಾಟೀಲ ಯತ್ನಾಳರು ಕೂಡ ಎಲ್ಲಾ ರೀತಿಯ ಸಹಾಯ ಸಹಕಾರ ಮಾಡಿದ್ದಾರೆ. ಅವರು ಮಾತು ಕೊಟ್ಟರೆ ಅದರಂತೆ ನಡೆದುಕೊಳ್ಳುತ್ತಾರೆ. ಮುಂಬರುವ ದಿನಗಳಲ್ಲಿ ನಮ್ಮ ಸಮಾಜಕ್ಕೆ ಸೂಕ್ತ ಸ್ಥಾನ ಕೊಡುವ ನಿಟ್ಟಿನಲ್ಲಿ ಮಾತು ಕೊಟ್ಟಿದ್ದಾರೆ. ಹೀಗಾಗಿ ಜಗತ್ತು ಒಪ್ಪಿಕೊಂಡಿರುವ ಮಹಾನ್ ನಾಯಕ ನರೇಂದ್ರ ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿ…

Read More

-ಸಂತೋಷ ಎಸ್ ಬಂಡೆ ಶಿಕ್ಷಕರು, ನಾಗಠಾಣ ಯುಗ ಯುಗಾದಿ ಕಳೆದರೂ ಯುಗಾದಿ ಮರಳಿ ಬರುತಿದೆ ಯುಗಾದಿ ಹಬ್ಬ ಬದುಕಿನಲ್ಲಿ ಹೊಸತನವನ್ನು ಅಳವಡಿಸುವ –ಎಚ್ಚರಿಸುವ ಹಬ್ಬವೂ ಹೌದು, ಋತುಗಳ ರಾಜನ ಆಗಮನದ ಹಬ್ಬವಾದ ಈ ಯುಗಾದಿ ಪ್ರತಿಯೊಬ್ಬರ ಬಾಳಿನಲ್ಲಿ ಹೊಸ ಹರುಷ ತರುವ ಹಬ್ಬವೇ ಆಗಿದೆ. ಈ ಹಿನ್ನೆಲೆಯಲ್ಲೆ ರಾಷ್ಟ್ರಕವಿ ಜಿ.ಎಸ್.ಶಿವರುದ್ರಪ್ಪ ಯುಗಾದಿ ಕುರಿತು ಹೀಗೆ ಹಾಡಿರುವದು.‘ಒಳಿತು ಕೆಡುಕು ಏನು ಬಂದರುಇರಲಿ ಎಲದ್ದಕ್ಕೂ ಸ್ವಾಗತಯುಗ-ಯುಗಾದಿಗೆಹೊಸತು ಹರ್ಷವು ಬರಲಿ ಬಾರದೆ ಹೋಗಲಿಬಂದ ಚೈತ್ರ ಚಿರವಿನೂತನಮಂದಹಾಸವೇ ಉಳಿಯಲಿ!,,,,,ಎಂದು ಯುಗಾದಿ ಕುರಿತು ಹಾಡಿ ಹೊಗಳಿದ್ದಾರೆ.ಕನಸು ಮತ್ತು ವಾಸ್ತವಗಳ ಸಂಗಮವಾದ ಯುಗದ ‘ಆದಿ’ ಯುಗಾದಿ ಮತ್ತೆ ಬಂದಿದೆ. ಕನಸುಗಳನ್ನು ಸಾಕಾರಗೊಳಿಸುವ ಚೈತನ್ಯ ಮತ್ತು ವಾಸ್ತವಗಳಿಗೆ ಮುಖಾಮುಖಿಯಾಗಿ ಸೆಣಸುವ ದೃಢ ಸಂಕಲ್ಪ ಮಾಡಬೇಕೆಂಬ ಸಂದೇಶ ಸಾರುವ ಈ ಹಬ್ಬ ಬೇವು-ಬೆಲ್ಲದ ಹಬ್ಬವೂ ಆಗಿದೆ. ಹಳೆಯದನ್ನು ಮರೆತು ಹೊಸದರತ್ತ ಅಡಿ ಇಡುವ ಹೊಸ ಆಲೋಚನೆಯತ್ತ ಕರೆದೊಯ್ದು ಬದುಕನ್ನು ಚಲನಶೀಲಗೊಳಿಸುವ ಈ ಹಬ್ಬ ಹಿಂದೂ ಧರ್ಮಿಯರಿಗೆ ಅಮೃತ ಘಳಿಗೆಯೂ ಹೌದು! ಹೊಸ ಚೈತನ್ಯವನ್ನು…

Read More

ಬಬಲೇಶ್ವರ: ವಿಕಸಿತ‌ ಭಾರತದ ಸಂಕಲ್ಪ ತೊಟ್ಟಿರುವ ಸಮರ್ಥ ನಾಯಕ ನರೇಂದ್ರ ಮೋದಿಯವರು ಮೂರನೇ ಬಾರಿ ದೇಶದ ಪ್ರಧಾನಿಯಾಗುವುದನ್ನು ತಪ್ಪಿಸಲು ಯಾವ ಶಕ್ತಿಯಿಂದಲೂ‌ ಸಾಧ್ಯವಿಲ್ಲ. ಅವರು 3 ನೇ ಬಾರಿ ಪ್ರಧಾನಿಯಾಗಲು ಸಂಸತ್ ನಲ್ಲಿ ನಾನು ಅವರ ಪರವಾಗಿ ಮತ್ತೆ ಕೈ ಎತ್ತಬೇಕೆಂಬುದು ನನ್ನ ಕೊನೆಯ ಆಸೆಯಾಗಿದೆ ಎಂದು ಸಂಸದ ಹಾಗೂ ವಿಜಯಪುರ ಲೋಕಸಭಾ ಕ್ಷೇತ್ರದ ಎನ್.ಡಿ.ಎ ಮೈತ್ರಿಕೂಟದ ಅಭ್ಯರ್ಥಿ ರಮೇಶ ಜಿಗಜಿಣಗಿ ಅಭಿಲಾಷೆ ವ್ಯಕ್ತಪಡಿಸಿದರು.ಲೋಕಸಭಾ ಚುನಾವಣಾ ಪ್ರಚಾರಾರ್ಥ ಬಬಲೇಶ್ವರ ಮತಕ್ಷೇತ್ರದ ಮಮದಾಪುರ ಬಿಜೆಪಿ ಮಹಾಶಕ್ತಿ‌ ಕೇಂದ್ರದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕರ್ತರ ಸಭೆಯಲ್ಲಿ‌ ಅವರು ಮಾತನಾಡಿದರು.ದೇಶದ ರಕ್ಷಣೆ ಮತ್ತು ಉಳಿವಿಗಾಗಿ ಈ ಹಿಂದೆ ಎರಡು ಬಾರಿ ಮೋದಿಯವರ ಪರವಾಗಿ ಕೈ ಎತ್ತಲು ವಿಜಯಪುರ ಜನ ನನಗೆ ಅವಕಾಶ ಮಾಡಿಕೊಟ್ಟಿದ್ದೀರಿ. ಇನ್ಮುಂದೆ ನಾನು‌ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ಆದರೆ ಮೋದಿಯವರನ್ನು ಮೂರನೇ ಸಲ ಪ್ರಧಾನಿ ಮಾಡಲು ನಾನು ಈ ಬಾರಿಯೂ ಕೈ ಎತ್ತಬೇಕು ಎಂಬುದು ನನ್ನ ಕೊನೆಯ ಆಸೆ. ಹಾಗಾಗಿ ಈ ಬಾರಿಯೂ ವಿಜಯಪುರ ಜನತೆ ನನಗೆ…

Read More

ಎಕ್ಸಲೆಂಟ್ ಕಾಲೇಜ್ ಆಫ್ ನರ್ಸಿಂಗ ಕಾಲೇಜಿನ ವಿದ್ಯಾರ್ಥಿಗಳ ದೀಪದಾನ ಕಾರ್ಯಕ್ರಮ ವಿಜಯಪುರ: ಅತ್ಯಂತ ಪವಿತ್ರವಾದ ವೃತ್ತಿಯಾಗಿರುವ ನರ್ಸ್ ವೃತ್ತಿಯಲ್ಲಿ ತಾವು ಪ್ರಾಮಾಣಿಕವಾಗಿ ಕೆಲಸಮಾಡಿ ನೀವೆಲ್ಲರೂ ಆ ವೃತ್ತಿಯ ಘನತೆ ಗೌರವವನ್ನು ಹೆಚ್ಚಿಸಬೇಕು. ಆ ಮೂಲಕ ರೋಗಿಗಳ ಮುಖದಲ್ಲಿ ನಗು ಮೂಡಿಸುವ ಪ್ರಾಮಾಣಿಕ ಪ್ರಯತ್ನ ಮಾಡಿ ಎಕ್ಸಲೆಂಟ್ ಕಾಲೇಜ್ ಆಫ್ ನರ್ಸಿಂಗ್ ಕಾಲೇಜಿನ ಕೀರ್ತಿಯನ್ನು ಹೆಚ್ಚಿಸಬೇಕೆಂದು ಎಕ್ಸಲೆಂಟ್ ಸಮೂಹ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕ ಅಧ್ಯಕ್ಷ ಬಸವರಾಜ ಕೌಲಗಿ ಹೇಳಿದರು.ಅವರು ನಗರದಲ್ಲಿ ನಡೆದ ಮಾತೋಶ್ರೀ ಗೌರಮ್ಮ ಅಪ್ಪಾಸಾಹೇಬ ಬಬಲೇಶ್ವರ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಎಕ್ಸಲೆಂಟ್ ಕಾಲೇಜ್ ಆಫ್ ನರ್ಸಿಂಗ ಕಾಲೇಜಿನ ಪ್ರಸಕ್ತ ಶೈಕ್ಷಣಿಕ ವರ್ಷದ ವಿದ್ಯಾರ್ಥಿಗಳ ದೀಪದಾನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕಾರ್ಯಕ್ರಮವನ್ನು ಉದ್ಘಾಟಿಸಿದ ನಂದಿ ಸಕ್ಕರೆ ಕಾರ್ಖಾನೆಯ ಅಧ್ಯಕ್ಷ ಕುಮಾರ ದೇಸಾಯಿ ಅವರು ಮಾತನಾಡಿ ” ಈ ಕಾಲೇಜಿನ ವಿದ್ಯಾರ್ಥಿಗಳ ಶೈಕ್ಷಣಿಕ ಚಟುವಟಿಕೆಗಳ ಜೊತೆಗೆ ಸಾಂಸ್ಕೃತಿಕ ಹಾಗೂ ಕ್ರೀಡಾ ಚಟುವಟಿಕೆಗಳಲ್ಲಿ ನಿಮ್ಮ ಉತ್ತಮ ಸಾಧನೆ ಹಾಗೂ ತಾವೆಲ್ಲರೂ ಪಡೆದಿರುವ ಬಹುಮಾನಗಳನ್ನು ನೋಡಿದರೆ…

Read More

ರಾಜಸ್ಥಾನದ ಅಜ್ಮೀರ್‌ನಲ್ಲಿ ರ್‍ಯಾಲಿಯನ್ನುದ್ದೇಶಿಸಿ ಪ್ರಧಾನಿ ಮೋದಿ ನರೇಂದ್ರ ಮೋದಿ ಟೀಕೆ ದೆಹಲಿ: ಕಾಂಗ್ರೆಸ್ ಪ್ರಣಾಳಿಕೆ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಹರಿಹಾಯ್ದಿದ್ದು, ಅವರ ಪ್ರಣಾಳಿಕೆ ಸುಳ್ಳಿನ ಕಂತೆ, ಅದರ ಪ್ರತಿಯೊಂದು ಪುಟದಲ್ಲೂ ಭಾರತವನ್ನು ಛಿದ್ರಗೊಳಿಸುವ ಪ್ರಯತ್ನಗಳನ್ನು ನಡೆಸುತ್ತಿದೆ ಎಂದು ಹೇಳಿದ್ದಾರೆ.ಶನಿವಾರ ರಾಜಸ್ಥಾನದ ಅಜ್ಮೀರ್‌ನಲ್ಲಿ ರ್‍ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, ಕಾಂಗ್ರೆಸ್ ತನ್ನ ಪ್ರಣಾಳಿಕೆಯನ್ನು “ಸಾರ್ವಜನಿಕವಾಗಿ ಬಿಡುಗಡೆ” ಮಾಡಲು ಜೈಪುರದಲ್ಲಿ ಕಾರ್ಯಕ್ರಮವನ್ನು ಆಯೋಜಿಸಿದೆ. ಪ್ರಣಾಳಿಕೆಯಲ್ಲಿನ ಪಕ್ಷದ ಆಲೋಚನೆಗಳು ಸ್ವಾತಂತ್ರ್ಯ ಪೂರ್ವದ ಅವಧಿಯಲ್ಲಿ ಮುಸ್ಲಿಂ ಲೀಗ್‌ನ ಆಲೋಚನೆಗಳನ್ನು ಹೋಲುತ್ತವೆ ಎಂದು ಆರೋಪಿಸಿದರು.ಪ್ರಣಾಳಿಕೆಯ ರೂಪದಲ್ಲಿ ಸುಳ್ಳಿನ ಕಂತೆಗಳನ್ನು ಬಿಡುಗಡೆ ಮಾಡಿದೆ. ಅವರು ಪ್ರಣಾಳಿಕೆಯ ಪ್ರತಿ ಪುಟದಲ್ಲೂ ಭಾರತವನ್ನು ಒಡೆಯುವ ಪ್ರಯತ್ನಗಳನ್ನು ಮಾಡಲಾಗಿದೆ. ಸ್ವಾತಂತ್ರ್ಯದ ಮೊದಲು ಮುಸ್ಲಿಂ ಲೀಗ್ ಹೊಂದಿದ್ದ ಆಲೋಚನೆಗಳಂತೆ ಅವರ ಪ್ರಣಾಳಿಕೆ ಇದೆ. ಇಂದಿನ ಭಾರತದ ಬಗ್ಗೆ ಆ ಯುಗದ ಆಲೋಚನೆಗಳನ್ನು ಪ್ರಣಾಳಿಕೆಯಲ್ಲಿ ಪ್ರಕಟಿಸಿದ್ದು ಕಮ್ಯುನಿಸ್ಟ್ ಮತ್ತು ಎಡಪಂಥೀಯ ಚಿಂತನೆಗಳಿಂದ ಪ್ರಾಬಲ್ಯ ಹೊಂದಿದೆ” ಎಂದಿದ್ದಾರೆ.ಇಂದಿನ ಕಾಂಗ್ರೆಸ್ ತತ್ವ ಮತ್ತು ನೀತಿಗಳಿಂದ ವಂಚಿತವಾಗಿದೆ ಎಂದ ಮೋದಿ, ಪಕ್ಷವು…

Read More

ವಿಜಯಪುರ: ಮಾಜಿ ಉಪ ಪ್ರಧಾನಿಗಳಾದ ಡಾ.ಬಾಬು ಜಗಜೀವನರಾಮ ರವರ ೧೧೭ನೇ ಜಯಂತಿಯನ್ನು ವಿಜಯಪುರ ನಗರದ ಗೋದಾವರಿ ಹೋಟೆಲ್ ಹತ್ತಿರ ಸರ್ಕಲ್‌ದಲ್ಲಿ ಎಸ್.ಬಿ.ಗ್ರೂಫ್ ವತಿಯಿಂದ ಆಚರಣೆ ಮಾಡಲಾಯಿತು.ಎಸ್.ಪಿ.ಗ್ರೂಫ್ ಅಧ್ಯಕ್ಷರಾದ ಶರಣು ಬ್ಯಾಳಿರವರು ಡಾ.ಬಾಬು ಜಗಜೀವನರಾಮ ರವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಮಾತನಾಡುತ್ತ ಡಾ. ಬಾಬು ಜಗಜೀವನ ರಾಮ್ ರವರು ಯಾವುದೇ ಕೆಲಸ ಮಾಡುವಾಗ ಅಲ್ಲಿ ಯಾವುದೇ ತರಹದ ದ್ವೇಷ ಅಸೂಹೆಗಳಿಗೆ ಎಡೆಮಾಡಿ ಕೊಡದೆ ಬುದ್ದಿವಂತಿಕೆಯಿAದ ಆಗಬೇಕಾದ ಕೆಲಸವನ್ನು ಮಾಡಿ ಮುಗಿಸುತ್ತಿದ್ದರು. ಇವರು ತಾವು ಮಾಡಿದ ಕಾರ್ಯದ ಕುರಿತು ಎಂದಿಗೂ ಪ್ರಚಾರ ಪಡೆಯುತ್ತಿರಲಿಲ್ಲ. ಇದರೊಂದಿಗೆ ಅವರು ಮಾಡಿದ ಅನೇಕ “ಸಾಮಾಜಿಕ ಪರಿವರ್ತನೆ” ಯ ಕೆಲಸಗಳು ಇನ್ನುವರೆಗೆ ಜನಮಾನಸದಲ್ಲಿ ಅಚ್ಚಳಿಯದಂತೆ ಉಳಿದಿವೆ. ಡಾ. ಬಾಬು ಜಗಜೀವನರಾಮ್ ರವರು ತಮ್ಮ ಅಧಿಕಾರ ಅವಧಿಯಲ್ಲಿ ಎಲ್ಲ ಜಾತಿ-ಮತ-ಪಂಥ ಎನ್ನದೇ ಜನರಿಗೆ ಹಲವಾರು ಜನಪರ ಯೋಜನೆಗಳನ್ನು ನೀಡಿದ ಕೀರ್ತಿ ಇವರಿಗೆ ಸಲ್ಲುತ್ತದೆ. ಇವರು ಮಾದರ ಸಮುದಾಯದಲ್ಲಿ ಜನಿಸಿದರೂ ಸಹ ಎಂದಿಗೂ ಆ ಜಾತಿ ಈ ಜಾತಿ ಎಂಬ ಮೇಲು-ಕೀಳು ಎಂಬ…

Read More