Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಇಂಡಿ: ಒಂದು ಸೂಜಿಯು ತಯಾರಾಗದ ಸ್ಥಿತಿಯಲ್ಲಿದ್ದ ಮತ್ತು ಬಡತನವನ್ನೆ ಹೊಂದಿದ್ದ ದೇಶವನ್ನು ಆರ್ಥಿಕವಾಗಿ ಊಸಿರಾಡುವಂತೆ ಮಾಡಿದ್ದು ಕಾಂಗ್ರೆಸ್ ಪಕ್ಷ ದೇಶಕ್ಕೆ ಕಾಂಗ್ರೆಸ್ ಅಕ್ಷದ ಕೊಡುಗೆ ಅಪಾರವಾಗಿದೆ ಎಂದು ಕಾಂಗ್ರೆಸ್ ಪಕ್ಷದ ಲೋಕಸಭಾ ಅಧ್ಯರ್ಥಿ ರಾಜು ಆಲಗೂರ ಹೇಳಿದರು.ತಾಲೂಕಿನ ತಾಂಬಾ ಗ್ರಾಮದ ಶಾದಿ ಮಹಲ್ನಲ್ಲಿ ಚುನಾವಣಾ ಪ್ರಚಾರಾರ್ಥ ಹಮ್ಮಿಕೊಂಡ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು.ಸಂವಿಧಾನ ರಚಿಸಿದ್ದು ಕಾಂಗ್ರೆಸ್, ದುರ್ಬಲರನ್ನು ಎತ್ತಿಹಿಡಿದ ಪಕ್ಷ ಕಾಂಗ್ರೆಸ್, ನಮ್ಮ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಚುನಾವಣೆಯಲ್ಲಿ ಕೊಟ್ಟ ಬರವಸೆಯಂತೆ ೫ಗ್ಯಾರೆಂಟಿಗಳನ್ನು ಕೇವಲ ೮ತಿಂಗಳಲ್ಲಿ ಜಾರಿಗೊಳಿಸಿ ನುಡಿದಂತೆ ನಡೆದಿದ್ದಾರೆ. ಕೇಂದ್ರದಲ್ಲೂ ಕಾಂಗ್ರೆಸ್ ಅಧಿಕಾರ ಹಿಡಿದರೆ ಅಲ್ಲಿಯೂ ಗ್ಯಾರೆಂಟಿಗಳು ಜಾರಿಯಾಗಲಿವೆ. ಜಿಗಜಿಣಗಿಯವರು ಮೂರುಸಲ ಸಂಸದರಾದರು ಲೋಕಸಭೆಯಲ್ಲಿ ಒಂದೇ ಒಂದು ಪ್ರಶ್ನೆ ಕೇಳಿಲ್ಲ. ಎಲ್ಲರು ಒಕ್ಕಟ್ಟಾಗಿ ಎಲ್ಲ ಸಮಾಜಬಾಂದವರು ಕಾಂಗ್ರೆಸ್ ಪಕ್ಷಕ್ಕೆ ಮತನೀಡಿ ಎಂದು ವಿನಂತಿಸಿದರು.ಸಿಂದಗಿ ಶಾಸಕ ಅಶೋಕ ಮನಗೂಳಿ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪ್ರಮಾಣ ವಚನ ತಗೆದುಕೊಂಡ ತಕ್ಷಣ ಘೋಷಿಸಿದ್ದ ಗ್ಯಾರೆಂಟಿಗಳು ಜಾರಿಗೆತಂದರು. ಈ ಹಿಂದೆ ಮುಖ್ಯಮಂತ್ರಿ ಇದ್ದಾಗ ಅನ್ನ ಭಾಗ್ಯವನ್ನು ನೀಡಿ ಬಡವರ…
ಇಂಡಿ: ಸಮಾನತೆಯ ಸಮಾಜ ನಿರ್ಮಾಣಗೊಳ್ಳುವಲ್ಲಿ ಡಾ. ಬಾಬು ಜಗಜೀವನರ ಕೊಡುಗೆ ಅಪಾರವಾಗಿದೆ. ಸಮಾಜದಲ್ಲಿ ಸಮಾನತೆ ಇರಬೇಕು.ಅರ್ಥಿಕವಾಗಿ ಮುಂದುವರೆದರೆ ಮಾನವ ಸ್ವಾವಲಂಬನೆ ಪಡೆಯಲು ಸಾದ್ಯ ಎಂದು ಕರೆ ನೀಡಿದ ಡಾ. ಬಾಬು ಜಗಜೀವನರಾಮರ ಕಾರ್ಯ ಶ್ರೇಷ್ಠವಾದುದು ಎಂದು ಕಂದಾಯ ಉಪವಿಬಾಗಾಧಿಕಾರಿ ಅಬೀದ ಗದ್ಯಾಳ ಹೇಳಿದರು.ಅವರು ಪಟ್ಟಣದ ಮಿನಿ ವಿಧಾನಸೌಧದಲ್ಲಿ ನಡೆದ ಡಾ. ಬಾಬು ಜಗಜೀವನರಾಮದ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.ಭಾರತದ ಉಪಪ್ರಧಾನಿಯಾಗಿ, ಕೇಂದ್ರ ಸರಕಾರದಲ್ಲಿ ವಿವಿಧ ಮಂತ್ರಿಗಳಾಗಿ ದೇಶದಲ್ಲಿರುವ ಜಾತಿ ಪದ್ದತಿ ಕೆಡುಕುಗಳನ್ನು ಶೋಧಿಸಿ ದೂರ ಮಾಡಿ ಬದಲಾವಣೆ ತರುವ ಕೆಲಸ ಮಾಡಿದರು ಎಂದರು.ತಹಸೀಲ್ದಾರ ಮಂಜುಳಾ ನಾಯಕ, ಸಮಾಜ ಕಲ್ಯಾಣ ಅಧಿಕಾರಿ ಬಿ.ಜೆ.ಇಂಡಿ, ಚಂದ್ರಶೇಖರ ಹೊಸಮನಿ ಮಾತನಾಡಿದರು.ಚುನಾವಣೆ ಶಿರಸ್ತೆದಾರ ಆರ್.ಬಿ.ಮೂಗಿ, ಎಂ.ಬಿ.ಕೊಡತೆ, ಎಸ್.ಆರ್.ಮುಜಗೊಂಡ, ಪ್ರದೀಪ ಡೊಳ್ಳಿನ, ಶಿವು ಬಗಲಿ, ರಮೇಶ ಧರೆಣ್ಣನವರ, ಅಮರ ಬಾಸೂತಕರ, ದತ್ತಾ ಬಂಡೆನವರ, ರಾಜು ಪಡಗಾನೂರ, ಮೀರಾ ವಾಘಮೋರೆ ಮತ್ತಿತರಿದ್ದರು.
ಅಫಜಲಪುರ: ರೈತರು, ಸಾರ್ವಜನಿಕರು ನೀರಿಗಾಗಿ ಕೊರೆಸುವ ಕೊಳವೆ ಬಾವಿಗಳು ನೀರಿಲ್ಲದಿದ್ದರೆ ಬಾಯಿ ತೆರೆದು ಬಿಡುವ ಬದಲಿಗೆ ಮುಚ್ಚುವ ಕೆಲಸಮಾಡಿ ಎಂದು ತಹಸೀಲ್ದಾರ ಸಂಜೀವಕುಮಾರ ದಾಸರ್, ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆ ಎಇಇ ಬಾಬುರಾವ್ ಜ್ಯೋತಿ ಮನವಿ ಮಾಡಿದರು.ಅವರು ಪತ್ರಿಕಾ ಹೇಳಿಕೆ ನೀಡಿ ಮಾತನಾಡುತ್ತಾ, ತೆರೆದ ಕೊಳವೆ ಬಾವಿಯಲ್ಲಿ ಬಿದ್ದು ಮಗು ಜೀವನ್ಮರಣ ಹೋರಾಟ ನಡೆಸಿ ಬದುಕಿ ಉಳಿದ ಘಟನೆ ಲಚ್ಯಾಣ ಗ್ರಾಮದಲ್ಲಿ ನಡೆದಿದೆ. ಅಂತಹ ಘಟನೆ ಬೇರೆ ಎಲ್ಲೂ ನಡೆಯದಂತೆ ಎಚ್ಚರಿಕೆ ವಹಿಸಬೇಕಾಗುತ್ತದೆ. ಬರಗಾಲ ಆವರಿಸಿ ಎಲ್ಲಾ ಜಲಮೂಲಗಳು ಬತ್ತಿ ಹೋಗುತ್ತಿವೆ. ಅನೇಕ ರೈತರು, ಸಾರ್ವಜನಿಕರು ನೀರಿಗಾಗಿ ಕೊಳವೆ ಬಾವಿಗಳನ್ನು ಕೊರೆಸುತ್ತಿದ್ದೀರಿ. ಜಲಮೂಲ ಲಭ್ಯವಾಗದಿದ್ದರೆ ಅವುಗಳನ್ನು ಕೂಡಲೇ ಮುಚ್ಚಿಸುವ ಕೆಲಸ ಮಾಡಿ. ಅನೇಕ ಕಡೆ ಹೀಗೆ ಕೊಳವೆ ಬಾವಿಯಲ್ಲಿ ಬಿದ್ದ ಮಕ್ಕಳು ಜೀವ ಕಳೆದುಕೊಂಡಿರುವ ಸಾಕಷ್ಟು ಘಟನೆಗಳು ಇವೆ. ಆದ್ದರಿಂದ ಅಮೂಲ್ಯ ಜೀವಗಳ ರಕ್ಷಣೆ ನಮ್ಮೆಲ್ಲರ ಹೊಣೆಯಾಗಿದ್ದು ಮಕ್ಕಳು, ಯಾವುದೇ ಪ್ರಾಣಿ ಪಕ್ಷಿಗಳು ತೆರೆದ ಕೊಳವೆ ಬಾವಿಗಳಲ್ಲಿ ಬಿದ್ದು ಜೀವ…
ವಿಜಯಪುರ: ನಮ್ಮ ರಕ್ಷಣೆಗಾಗಿ, ದೇಶ ಉಳಿವಿಗಾಗಿ ನಮ್ಮ ಮತ ಬಿಜೆಪಿಗೆ ಹಾಕುವ ಕಾಲ ಬಂದಿದೆ. ನಮ್ಮವರು, ನಮ್ಮ ಮನೆಗಳು ಉಳಿಯಬೇಕೆಂದರೆ ಮೋದಿಯವರು ಮತ್ತೊಮ್ಮೆ ಪ್ರಧಾನಿ ಆಗಬೇಕು ಎಂದು ನಗರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.ನಗರದ ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ಶನಿವಾರ ನಡೆದ ಬಿಜೆಪಿ ಸಂಸ್ಥಾಪನಾ ದಿನಾಚರಣೆ ಹಾಗೂ ನಗರ ಮಂಡಲದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.ದೇಶದಲ್ಲಿ ಕಳೆದ ೧೦ ವರ್ಷಗಳಲ್ಲಿ ಆಗಿರುವ ಅಭಿವೃದ್ಧಿಯಿಂದ ಯಾರನ್ನು ಕೇಳಿದರೂ ಮೋದಿಗೆ ಮತ ಎನ್ನುತ್ತಾರೆ. ಯಾವ ಗ್ಯಾರಂಟಿಯೂ ಬೇಡ, ನಮಗೆ ಮೋದಿಯವರೇ ಗ್ಯಾರಂಟಿ ಎನ್ನುತ್ತಿದ್ದಾರೆ. ದೇಶ ಉಳಿಯಬೇಕೆಂದರೆ, ಸನಾತನ ಧರ್ಮ ಉಳಿಯಬೇಕೆಂದರೆ ದೇಶಕ್ಕೆ ಮೋದಿಯವರು ಅನಿವಾರ್ಯ. ಎಲ್ಲರೂ ಕಂಕಣ ಬದ್ಧರಾಗಿ ಮೋದಿ ಸರ್ಕಾರದ ಸಾಧನೆಗಳನ್ನು ಮನೆ ಮನೆಗೆ ಮುಟ್ಟಿಸಲು ಸಲಹೆ ನೀಡಿದರು.ಅಲ್ಪಸಂಖ್ಯಾತರ ಅಭಿವೃದ್ಧಿಯೇ ಕಾಂಗ್ರೆಸ್ ಮೂಲಮಂತ್ರವಾಗಿದೆ. ಅವರ ಪ್ರಣಾಳಿಕೆಯಲ್ಲಿ ಕಾಶ್ಮೀರದ ೩೭೦ ಕಲಂ ರದ್ದು, ಅಲ್ಪಸಂಖ್ಯಾತರ ರಕ್ಷಣೆಗಾಗಿ ಮತ್ತೊಂದು ಹೊಸ ಕಾನೂನು ಜಾರಿ, ಅಗ್ನಿಪಥ್ ರದ್ದು ಹೀಗೆ ಪ್ರತಿಯೊಂದು ದೇಶ…
ಬಸವನಬಾಗೇವಾಡಿ: ಪಟ್ಟಣ ಸೇರಿದಂತೆ ತಾಲೂಕಿನಲ್ಲಿರುವ ಮತಗಟ್ಟೆ ಕೇಂದ್ರಗಳಲ್ಲಿ ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಶನಿವಾರ ನನ್ನ ಮತಗಟ್ಟೆ ಸ್ವಚ್ಛ ಮತಗಟ್ಟೆ ಅಭಿಯಾನಯಂಗವಾಗಿ ಸ್ವಚ್ಛ ಶನಿವಾರ ಜರುಗಿತು.ತಾಲೂಕಿನ ವಿವಿಧ ಮತಗಟ್ಟೆ ಕೇಂದ್ರ, ಗ್ರಾಮ ಪಂಚಾಯಿತಿಗಳಲ್ಲಿ ಈ ಅಭಿಯಾನ ಹಮ್ಮಿಕೊಳ್ಳುವ ಮೂಲಕ ಮತದಾನ ಜಾಗೃತಿ ಅಭಿಯಾನವನ್ನು ಸಹ ಕೈಗೊಳ್ಳಲಾಯಿತು. ಕಡಿಮೆ ಮತದಾನವಾಗಿರುವ ಮತಗಟ್ಟೆ ಕೇಂದ್ರದಲ್ಲಿ ವಿಶೇಷ ಅಭಿಯಾನ ಹಮ್ಮಿಕೊಳ್ಳಲಾಗಿತ್ತು. ಎಲ್ಲೆಡೆ ಮತದಾನ ಪ್ರತಿಜ್ಞಾವಿಧಿ ಬೋಧಿಸುವ ಮೂಲಕ ಮತದಾನದ ಮಹತ್ವವನ್ನು ಮತ ಬಾಂಧವರಿಗೆ ತಿಳಿಸಲಾಯಿತು.ಪಟ್ಟಣದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಅಭಿಯಾನದಲ್ಲಿ ಪುರಸಭೆ ಮುಖ್ಯಾಧಿಕಾರಿ ಎಚ್.ಎಸ್.ಚಿತ್ತರಗಿ, ತಾಪಂ ಪ್ರಭಾರಿ ಇಓ, ತಾಲೂಕು ಸ್ವೀಪ್ ಸಮಿತಿ ಅಧ್ಯಕ್ಷ ಪ್ರಕಾಶ ದೇಸಾಯಿ, ಪುರಸಭೆ ಆರೋಗ್ಯ ನಿರೀಕ್ಷಕ ಮಹೇಶ ಹಿರೇಮಠ, ಶಾಲೆಯ ಸಿಬ್ಬಂದಿ ವರ್ಗ, ಪೌರಕಾರ್ಮಿಕರು ಇದ್ದರು.ತಾಲೂಕಿನ ವ್ಯಾಪ್ತಿಯಲ್ಲಿ ಬರುವ ಎಲ್ಲ ಗ್ರಾಮ ಪಂಚಾಯಿತಿಗಳಲ್ಲಿ ಜರುಗಿದ ಅಭಿಯಾನದಲ್ಲಿ ಅಭಿವೃದ್ಧಿ ಅಧಿಕಾರಿಗಳು, ಗ್ರಾಮ ಪಂಚಾಯಿತಿ ಸಿಬ್ಬಂದಿಗಳು, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತರು, ತಾಲೂಕು ಐಇಸಿ ಸಂಯೋಜಕರು ಇತರರು ಭಾಗವಹಿಸಿದ್ದರು.
ಬಸವನಬಾಗೇವಾಡಿ: ಜಿಲ್ಲೆಯ ಅಭಿವೃದ್ಧಿಗಾಗಿ ಕಳೆದ ೧೦ ವರ್ಷದಲ್ಲಿ ಸಾಕಷ್ಟು ಅನುದಾನ ತರುವ ಅಭಿವೃದ್ಧಿಗೆ ನಾಂದಿ ಹಾಡಿದ್ದೇನೆ. ಇದು ನನ್ನ ಕೊನೆಯ ಚುನಾವಣೆಯಾಗಿರುವದರಿಂದಾಗಿ ವಿಜಯಪುರ ಜಿಲ್ಲೆ ಇನ್ನಷ್ಟು ಅಭಿವೃದ್ಧಿಗಾಗಿ ಎಲ್ಲ ಕಾರ್ಯಕರ್ತರು ಶ್ರಮಿಸಿ ಬಹುಮತದೊಂದಿಗೆ ಆಯ್ಕೆ ಮಾಡುವ ಮೂಲಕ ಮೂರನೇ ಬಾರಿಗೆ ನರೇಂದ್ರ ಮೋದಿ ಅವರನ್ನು ದೇಶದ ಪ್ರಧಾನಿಯನ್ನಾಗಿ ಮಾಡಬೇಕೆಂದು ಸಂಸದ, ಲೋಕಸಭೆ ಬಿಜೆಪಿ ಅಭ್ಯರ್ಥಿ ರಮೇಶ ಜಿಗಜಿಣಗಿ ಹೇಳಿದರು.ಬಸವನಬಾಗೇವಾಡಿ ಮತಕ್ಷೇತ್ರದ ಗೊಳಸಂಗಿ ಗ್ರಾಮದ ಸಂಗಮೇಶ್ವರ ಕಲ್ಯಾಣ ಮಂಟಪದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಗೊಳಸಂಗಿ ಶಕ್ತಿಕೇಂದ್ರದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ, ಕುಡಿಯುವ ನೀರು ಯೋಜನೆ, ಗ್ರಾಮೀಣ ರಸ್ತೆ, ಎನ್ಟಿಪಿಸಿ, ರೈಲ್ವೆ ಬ್ರಾಡಗೇಜ್ ಸೇರಿದಂತೆ ಹಲವಾರು ಕಾರ್ಯಕ್ರಮಗಳನ್ನು ಅನುಷ್ಠಾನಕ್ಕೆ ತರುವ ಮೂಲಕ ಅಭಿವೃದ್ಧಿ ಮಾಡಲಾಗಿದೆ. ನಾನು ಕಳೆದ ೪೫ ವರ್ಷಗಳಿಂದ ರಾಜಕಾರಣದಲ್ಲಿದ್ದುಕೊಂಡು ಕೇಂದ್ರ, ರಾಜ್ಯದಲ್ಲಿ ಸಚಿವನಾಗಿ, ಸಂಸದನಾಗಿ ಜನರ ಆಶೀರ್ವಾದ ಬಲದಿಂದ ಕಾರ್ಯನಿರ್ವಹಿಸಿದ್ದೇನೆ. ವಿಜಯಪುರ ಜಿಲ್ಲೆಯಲ್ಲಿ ಇನ್ನಷ್ಟು ಅಭಿವೃದ್ಧಿ ಮಾಡುವ ಆಸೆ ನನ್ನದಾಗಿದೆ. ಈ ಆಸೆಯನ್ನು ಪೂರೈಸಲು ಮತಬಾಂಧವರು ಆಯ್ಕೆ…
ಅಫಜಲಪುರ: ತಾಲೂಕಿನ ಸೊನ್ನ ಬ್ಯಾರೇಜ್ನಿಂದ ನೀರನ್ನು ಬ್ಯಾರೇಜ್ನ ಕೆಳಭಾಗಕ್ಕೆ ಹರಿಸಬೇಕೆಂದು ಆಗ್ರಹಿಸಿ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ರಸ್ತೆ ತಡೆ ಮಾಡಿ ಪ್ರತಿಭಟನೆ ಮಾಡಲಾಯಿತು.ಪ್ರತಿಭಟನೆ ಉದ್ದೇಶಿಸಿ ಕೆಪಿಆರ್ಎಸ್ ಜಿಲ್ಲಾಧ್ಯಕ್ಷ ಶರಣಬಸಪ್ಪ ಮಮಶೆಟ್ಟಿ ಮಾತನಾಡಿ, ಸೊನ್ನ ಬ್ಯಾರೇಜ್ ನಲ್ಲಿ ತಕ್ಕಮಟ್ಟಿಗೆ ನೀರು ಇದೆ, ಅಲ್ಲದೇ ನಾರಾಯಣಪುರ ಜಲಾಶಯದಿಂದ ನೀರು ಹರಿಸಲಾಗಿದೆ. ಹೀಗಿದ್ದರೂ ಕೂಡ ನದಿ ಪಾತ್ರದ ಗ್ರಾಮಗಳ ಜನರಿಗೆ ಕುಡಿಯುವ ನೀರಿನ ಸಮಸ್ಯೆ ಆಗುತ್ತಿದೆ. ಜನ ಜಾನುವಾರುಗಳಿಗೆ ನೀರು ಬೇಕು. ಇಂತಹ ಭೀಕರ ಬರಗಾಲದ ಸಮಯದಲ್ಲಿ ಜನಸಾಮಾನ್ಯರು ಕುಡಿಯುವ ನೀರು ಬೇಕೆಂದು ೧೯ ದಿನಗಳಿಂದ ಗುಡ್ಡೇವಾಡಿ ಗ್ರಾಮದಲ್ಲಿ ಧರಣಿ ಸತ್ಯಾಗ್ರಹ ಮಾಡುತ್ತಿದ್ದಾರೆ. ಯಾರೊಬ್ಬರೂ ಅವರ ಕಷ್ಟ ಕೇಳುತ್ತಿಲ್ಲ ಕೂಡಲೇ ಅಧಿಕಾರದಲ್ಲಿದ್ದವರು ಜನರ ಸಮಸ್ಯೆಗೆ ಸ್ಪಂದಿಸಿ ನೀರು ಹರಿಸುವ ಕೆಲಸ ಮಾಡಬೇಕು ಎಂದು ಒತ್ತಾಯಿಸಿದರು.ರೈತ ಹೋರಾಟಗಾರ ಸಿದ್ದರಾಮ ದಣ್ಣೂರ, ಅಶೋಕ ಹೂಗಾರ ಮಾತನಾಡುತ್ತಾ ನೀರಿಲ್ಲದೆ ಖಾಲಿಯಾಗಿರುವ ಭೀಮಾ ನದಿಯಲ್ಲಿ ನಾವು ಕಳೆದ ೧೯ ದಿನಗಳಿಂದ ನೀರಿಗಾಗಿ ಧರಣಿ ಕುಳಿತಿದ್ದೇವೆ. ಜವಾಬ್ದಾರಿ ಇರುವ ಶಾಸಕರು ಸ್ಥಳಕ್ಕೆ ಬಂದು…
ಅಫಜಲಪುರ: ಬಿಜೆಪಿ ಪಕ್ಷದ ಅಫಜಲಪುರ ತಾಲೂಕು ಅಲ್ಪಸಂಖ್ಯಾತರ ಮೋರ್ಚಾಕ್ಕೆ ನೂತನ ಅಧ್ಯಕ್ಷರನ್ನಾಗಿ ಅರ್ಜುಣಗಿ ಗ್ರಾಮದ ಚಾಂದಶೇಕ್ ಅವರನ್ನು ನೇಮಕ ಮಾಡಲಾಗಿದೆ ಎಂದು ತಾಲೂಕು ಅಧ್ಯಕ್ಷ ವಿದ್ಯಾಧರ ಮಂಗಳೂರೆ ತಿಳಿಸಿದ್ದಾರೆ.ಮಹಿಮೂದ ಡಾಂಗೆ, ಅಕ್ಬರ ನಬಿಸಾಬ್ ಪ್ರಧಾನ ಕಾರ್ಯದರ್ಶಿಗಳಾಗಿ ನೇಮಿಸಲಾಗಿದೆ. ಅನ್ವರ ಖಾಜಿಮೀಯಾ ಶೇಕ್, ಮಹಮದ್ ಆರೀಫ, ರಶೀದ ಪಟೇಲ, ಸೈಫನಸಾಬ ಚೌಧರಿ ಇವರನ್ನು ಉಪಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಸೊಂದುಸಾಬ ಶೇಕ, ಸದ್ದಾಂ, ಖುದ್ವಾನ ನದಾಫ, ಜೈನಾಬಿ ಇವರನ್ನು ಕಾರ್ಯದರ್ಶಿಗಳಾಗಿ ನೇಮಿಸಲಾಗಿದೆ. ಖಾಜಾ ಮೈನೂದ್ದೀನ ಮುಲ್ಲಾ ಇವರನ್ನು ಖಜಾಂಚಿಯಾಗಿ ನೇಮಿಸಿ ಪಕ್ಷದ ಜವಾಬ್ದಾರಿಗಳನ್ನು ವಹಿಸಲಾಗಿದೆ ಎಂದರು.
ಅಫಜಲಪುರ: ಭಾರತೀಯ ಜನತಾ ಪಾರ್ಟಿ ತಾಲೂಕು ಘಟಕದ ಎಸ್ಸಿ ಮೋರ್ಚಾ ತಾಲೂಕು ಅಧ್ಯಕ್ಷರಾಗಿ ಮುಖಂಡ ರಮೇಶ ನೂಲಾ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ತಾಲೂಕು ಅಧ್ಯಕ್ಷ ವಿದ್ಯಾಧರ ಮಂಗಳೂರೆ ತಿಳಿಸಿದ್ದಾರೆ.ಪನ್ನು ಪವಾರ, ನಿಂಗಣ್ಣ ವಳಕಟ್ಟಿ ಪ್ರಧಾನ ಕಾರ್ಯದರ್ಶಿಗಳಾಗಿ, ನಾಗಪ್ಪ ಮಂಜಾಳಕರ, ಶ್ರೀಮಂತ ಭಂಡಾರಿ, ಭೀಮರಾಯ ಹರಳಯ್ಯ, ಯುವರಾಜ ಚವ್ಹಾಣ ಅವರನ್ನು ಉಪಾಧ್ಯಕ್ಷರನ್ನಾಗಿ, ಸಂತೋಷ ಚವ್ಹಾಣ, ಯಲ್ಲಪ್ಪ ನಡುವಿನಕೇರಿ, ಸುಧಾಕರ ರಾಠೋಡ, ಜೈಭೀಮ ಹಾದಿಮನಿ ಇವರನ್ನು ಕಾರ್ಯದರ್ಶಿಗಳನ್ನಾಗಿ, ಹಣಮಂತ ಹೊಸಮನಿ ಇವರನ್ನು ಖಜಾಂಚಿಯನ್ನಾಗಿ ನೇಮಿಸಿ ಪಕ್ಷದ ಜವಾಬ್ದಾರಿಗಳನ್ನು ವಹಿಸಲಾಗಿದೆ ಎಂದರು.
ಅಫಜಲಪುರ: ೧೦ನೇ ತರಗತಿ ಪರೀಕ್ಷೆಗಳು ಆರಂಭಗೊಂಡಿದ್ದು ಕರ್ತವ್ಯ ಲೋಪದ ಅಡಿಯಲ್ಲಿ ಇಬ್ಬರು ಮುಖ್ಯ ಪರೀಕ್ಷಾ ಅಧಿಕ್ಷಕರನ್ನು ಅಮಾನತ್ತುಗೊಳಿಸಿ ಆದೇಶ ಹೊರಡಿಸಲಾಗಿದೆ ಎಂದು ಬಿಇಒ ಹಾಜಿಮಲಂಗ ಇಂಡಿಕರ ತಿಳಿಸಿದ್ದಾರೆ.ತಾಲೂಕಿನ ಕರ್ಜಗಿ ಹಾಗೂ ಮಣೂರ ಪರೀಕ್ಷಾ ಕೇಂದ್ರಗಳಲ್ಲಿನ ಸಿಸಿ ಕ್ಯಾಮರಾಗಳು ಕಳ್ಳತನವಾಗಿದ್ದು ಕರ್ತವ್ಯ ನಿರ್ಲಕ್ಷ್ಯದ ಆರೋಪದಡಿ ಮಣೂರ ಪರೀಕ್ಷಾ ಮುಖ್ಯ ಅಧೀಕ್ಷಕ ಸುರೇಶ ಕೊರಚಗಾಂವ ಹಾಗೂ ಕರ್ಜಗಿ ಪರೀಕ್ಷಾ ಕೇಂದ್ರದ ಮುಖ್ಯ ಪರೀಕ್ಷಾ ಅಧೀಕ್ಷಕಿ ಸುನಂದಾ ಭಿಂಗೆ ಅವರನ್ನು ಅಮಾನತ್ತು ಮಾಡಿ ಡಿಡಿಪಿಐ ಸಕ್ರೆಪ್ಪಗೌಡ ಬಿರಾದಾರ ಆದೇಶ ಹೊರಡಿಸಿದ್ದಾರೆ ಎಂದು ತಿಳಿಸಿದ್ದಾರೆ. ಕರ್ಜಗಿ ಹಾಗೂ ಮಣೂರ ಪರೀಕ್ಷಾ ಕೇಂದ್ರಗಳಲ್ಲಿ ತಲಾ ೧೦ ರಿಂದ ೧೨ ಸಿಸಿ ಕ್ಯಾಮರಾಗಳಿದ್ದವು ಅವುಗಳನ್ನೆಲ್ಲಾ ಒಡೆದು ಹಾಕಿದ್ದಲ್ಲದೆ ಸರ್ವಿಸ್ ವೈರ್, ಕೇಬಲ್ ವೈರ್ ಸಹಿತ ಕಿತ್ತು ಹಾಕಲಾಗಿದೆ. ಈ ಘಟನೆ ೨ ದಿನದ ಪರೀಕ್ಷೆಯ ಬಳಿಕ ನಡೆದಿದೆ ಎಂದ ಅವರು ಏ.೨ ರಂದು ಶಿರವಾಳ ಗ್ರಾಮದ ಪರೀಕ್ಷಾ ಕೇಂದ್ರದಲ್ಲಿ ಅನಧಿಕೃತ ಪ್ರವೇಶ ಮಾಡಿದ ಆರೋಪದಡಿ ಪ್ರೌಢಶಾಲೆ ಶಿಕ್ಷಕ ಭೀಮಾಶಂಕರ ಅವರನ್ನು…
