Author: editor.udayarashmi@gmail.com

ಅಫಜಲಪುರ: ಲೋಕಸಭೆ ಚುನಾವಣೆ ಹಿನ್ನೆಲೆ ತಾಲೂಕಿನ ಎಲ್ಲಾ ಮತಗಟ್ಟೆಗಳನ್ನು ಸಜ್ಜುಗೊಳಿಸುವ ಕೆಲಸ ಮಾಡಿಕೊಳ್ಳಿ. ಮುಖ್ಯವಾಗಿ ಮತಗಟ್ಟೆಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಕಡ್ಡಾಯವಾಗಿ ಕಲ್ಪಿಸಿ ಎಂದು ಪಿಡಿಒಗಳಿಗೆ ತಾ.ಪಂ ಇಒ ಚಂದ್ರಶೇಖರ ತಿಳಿಸಿದರು.ಅವರು ತಾಲೂಕಿನ ಕರ್ಜಗಿ ಗ್ರಾ.ಪಂನ ಮತಗಟ್ಟೆಗೆ ಭೇಟಿ ನೀಡಿ ಮತಗಟ್ಟೆಗಳನ್ನು ಪರೀಶೀಲನೆ ನಡೆಸಿ ಮಾತನಾಡುತ್ತಾ ಮತಗಟ್ಟೆಗಳಲ್ಲಿ ಮೂಲಭೂತ ಸೌಯರ್ಕಗಳಾದ ಕುಡಿಯುವ ನೀರು, ರ‍್ಯಾಂಪ್, ಶೌಚಾಲಯ ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿ ಎಂದ ಅವರು ಹೆಚ್ಚಿನ ಮತದಾನವಾಗುವ ನಿಟ್ಟಿನಲ್ಲಿ ಜನರಲ್ಲಿ ಜಾಗೃತಿ ಮೂಡಿಸಿ ಎಂದು ಸಲಹೆ ನೀಡಿದರು.ಈ ಸಂದರ್ಭದಲ್ಲಿ ಪಿಡಿಒ ಮಹಾಂತೇಶ ಯಾಡಗಿ, ಶಿವಕುಮಾರ, ರಾಜಶೇಖರ ಕುಂಬಾರ ಸೇರಿದಂತೆ ಗ್ರಾ.ಪಂ ಸಿಬ್ಬಂದಿಗಳು ಇದ್ದರು.

Read More

ಅಫಜಲಪುರ: ಸಮಾಜವಾದಿ ಪಕ್ಷದ ನೂತನ ರಾಜ್ಯ ಉಪಾಧ್ಯಕ್ಷರನ್ನಾಗಿ ಮಹಾಂತೇಶ ಡಿ ಪಾಟೀಲ್ ಸೊನ್ನ ಅವರನ್ನು ನೇಮಕ ಮಾಡಲಾಗಿದೆ ಎಂದು ರಾಜ್ಯಾಧ್ಯಕ್ಷ ಎನ್. ಮಂಜಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಮಹಾಂತೇಶ ಪಾಟೀಲ್ ಅವರ ಸಂಘಟನಾ ಶಕ್ತಿಯನ್ನು ಗುರುತಿಸಿ ರಾಜ್ಯ ಉಪಾಧ್ಯಕ್ಷ ಹುದ್ದೆಗೆ ನೇಮಿಸಲಾಗಿದೆ. ಪಾಟೀಲ ಅವರು ಈ ಮೊದಲು ಉಪನ್ಯಾಸಕರಾಗಿ, ಜೆಡಿಎಸ್ ಪಕ್ಷದ ತಾಲೂಕು ಅಧ್ಯಕ್ಷರಾಗಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಕೆಲಸ ಮಾಡಿದ್ದಾರೆ. ಅಲ್ಲದೆ ಹಿಂದುಳಿದ ವರ್ಗಗಳ ಸಲಹಾ ಮಂಡಳಿಯ ಸದಸ್ಯರಾಗಿಯೂ ಸೇವೆ ಸಲ್ಲಿಸಿದ ಅನುಭವ ಹೊಂದಿದ್ದಾರೆ. ಹೀಗಾಗಿ ಇವರ ರಾಜಕೀಯ ಜೀವನದ ಹಿರಿತನದ ಆಧಾರದ ಮೇಲೆ ಸಮಾಜವಾದಿ ಪಕ್ಷದ ರಾಜ್ಯ ಉಪಾಧ್ಯಕ್ಷರಾಗಿ ನೇಮಕ ಮಾಡಲಾಗಿದೆ. ಅವರು ಪಕ್ಷದ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಿ ಪಕ್ಷ ಸಂಘಟನೆ ಮಾಡುವಲ್ಲಿ ಸಫಲರಾಗುತ್ತಾರೆನ್ನುವ ಆಶಾಭಾವನೆ ಇದೆ ಎಂದರು.

Read More

ವಿಜಯಪುರ: ಆಂದ್ರಪ್ರದೇಶದ ಶ್ರೀಶೈಲ ಮಲ್ಲಿಕಾರ್ಜುನ ಕ್ಷೇತ್ರಕ್ಕೆ ಕರ್ನಾಟಕದಿಂದ ಲಕ್ಷಾಂತರ ಭಕ್ತರು ವಾಹನದ ಮೂಲಕ ಹಾಗೂ ಪಾದಯಾತ್ರೆ ಮೂಲಕ ಮಲ್ಲಯ್ಯನ ದರ್ಶನಕ್ಕೆ ಸಾಗುತ್ತಾರೆ. ಕೆಲವರು ಭೀಮನಕೊಳ್ಳದಿಂದ ಮಾತ್ರ ಬೆಟ್ಟಗುಡ್ಡದಲ್ಲಿ ಪಾದಯತ್ರೆ ಕೈಗೊಳ್ಳುತ್ತಾರೆ.ಭೀಮನಕೊಳ್ಳದಿಂದ ಪಾದಯಾತ್ರೆ ಹೊರಟ ಭಕ್ತಾದಿಗಳಲ್ಲಿ ಎಂಬತ್ತರ ವಯಸ್ಸಿನ ಅಥಣಿ ತಾಲ್ಲೂಕಿನ ನಂದೇಶ್ವರ ಗ್ರಾಮದ ದೇವಕಿ ಮಹಾದೇವ ಮೆಲಗಡೆ ಎಂಬುವವಳು ಪಾದಯಾತ್ರೆ ಸಂದರ್ಭದಲ್ಲಿ ಸುಸ್ತಾಗಿ ನಡೆಯದೇ ಕುಳಿತಿದ್ದಳು. ಹಲವು ಭಕ್ತರ ಹಾಗೂ ಯುವಕರ ದಂಡು ಪಾದಯಾತ್ರೆ ಮೂಲಕ ಸಾಗುತ್ತಿದ್ದರು. ಅಜ್ಜಿಯನ್ನು ನೋಡಿದ ಸಿಂದಗಿ ಮೂಲದ ಯುವಕ ಸಂದೀಪ ವಡಗೋಗಿ ಅವಳನ್ನು ಬೆನ್ನು ಮೇಲೆ ಎತ್ತಿಕೊಂಡು ನಾಲ್ಕೈದು ಕೀ.ಮೀ ಸಾಗಿದನು ಎಂದು ಜೊತೆಯಲ್ಲಿದ್ದ ಅರಣ್ಯ ಅಧಿಕಾರಿ ಪ್ರವೀಣ ಹುನ್ನೂರ ಮಾಹಿತಿ ನೀಡಿದರು.ಶ್ರೀಶೈಲ ಮಲ್ಲಯ್ಯನ ದರ್ಶನಕ್ಕೆ ಕಾಡಿನಲ್ಲಿ ಸಾಲು ಸಾಲಾಗಿ ಯುವಕರಿಂದ ಹಿಡಿದು ವಯಸ್ಸಾದವರು ಕೂಡಾ ಈ ಯುಗಾದಿ ಹಬ್ಬದ ಸಂದರ್ಭದಲ್ಲಿ ಪಾದಯಾತ್ರೆ ಮೂಲಕ ಸಾಗುವ ದೃಶ್ಯ ಕಾಣುತ್ತದೆ.

Read More

ವಿಜಯಪುರ: ಶನಿವಾರ ನಡೆದ ಎಸ್‌ಎಸ್‌ಎಲ್‌ಸಿ ದ್ವೀತಿಯ ಭಾಷೆ ಪತ್ರಿಕೆಗೆ ಜಿಲ್ಲೆಯ ೧೨೭ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಜರುಗಿದ್ದು, ಪರೀಕ್ಷೆಗೆ ನೋಂದಣಿಯಾದ ಒಟ್ಟು ೪೦,೭೩೦ ವಿದ್ಯಾರ್ಥಿಗಳಲ್ಲಿ ೩೯,೭೫೨ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ ೯೭೮ ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ ಎಂದು ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಎನ್.ಎಚ್. ನಾಗೂರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ವಿಜಯಪುರ: ಲೋಕಸಭೆ ಸಾರ್ವತ್ರಿಕ ಚುನಾವಣೆ-೨೦೨೪ರ ಸಲುವಾಗಿ ಪ್ರಿಸೈಡಿಂಗ್, ಸಹಾಯಕ ಪ್ರಿಸೈಡಿಂಗ್ ಅಧಿಕಾರಿಗಳಿಗೆ ಏಪ್ರಿಲ್ ೭ರಂದು ಬೆಳಗ್ಗೆ ೯.೩೦ ಘಂಟೆಗೆ ತರಬೇತಿ ಕಾರ್ಯಕ್ರಮ ಏರ್ಪಡಿಸಲಾಗಿದೆ.ಮುದ್ದೇಬಿಹಾಳ ಮತಕ್ಷೇತ್ರ ವ್ಯಾಪ್ತಿಯಲ್ಲಿ ಎಮ್.ಜಿ.ವಿ.ಸಿ ಕಾಲೇಜು ನಲ್ಲಿ, ದೇವರ ಹಿಪ್ಪರಗಿ ಮತಕ್ಷೇತ್ರದಲ್ಲಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ಪ್ರಾಥಮಿಕ ಹಾಗೂ ಪ್ರೌಡ ಶಾಲೆಯಲ್ಲಿ, ಬಸವನ ಬಾಗೇವಾಡಿ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಬಸವೇಶ್ವರ ಪಿಯು ಕಾಲೇಜಿನಲ್ಲಿ, ಬಬಲೇಶ್ವರ ಮತಕ್ಷೇತ್ರ ವ್ಯಾಪ್ತಿಯಲ್ಲಿ ವಿವಿ ದರಬಾರ ಪ್ರೌಡ ಶಾಲೆ ಹಾಗೂ ಪಿಯು ಕಾಲೇಜಿ ವಿಜಯಪುರನಲ್ಲಿ, ನಾಗಠಾಣ ಮತಕ್ಷೇತ್ರ ವ್ಯಾಪ್ತಿಯಲ್ಲಿ ಪಿಡಿಜೆ ಪ್ರೌಡ ಶಾಲೆ ವಿಜಯಪುರ, ಇಂಡಿ ಮತಕ್ಷೇತ್ರ ವ್ಯಾಪ್ತಿಯಲ್ಲಿ ಸರ್ಕಾರಿ ಆದರ್ಶ ವಿದ್ಯಾಲಯದಲ್ಲಿ, ಸಿಂದಗಿ ಮತಕ್ಷೇತ್ರ ವ್ಯಾಪ್ತಿಯಲ್ಲಿ ಆರ್ ಡಿ. ಪಾಟೀಲ್ ಕಾಲೇಜಿನಲ್ಲಿ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.ಆದ್ದರಿಂದ ಚುನಾವಣೆ ಕರ್ತವ್ಯಕ್ಕೆ ನಿಯೋಜನೆಗೊಂಡ ಪ್ರಿಸೈಡಿಂಗ್, ಸಹಾಯಕ ಪ್ರಿಸೈಡಿಂಗ್ ಅಧಿಕಾರಿಗಳು ತರಬೇತಿಗೆ ಕಡ್ಡಾಯವಾಗಿ ಹಾಜರು ಇರಬೇಕು ಎಂದು ಚುನಾವಣೆ ಅಧಿಕಾರಿಯೂ ಆದ ಜಿಲ್ಲಾಧಿಕಾರಿ ಟಿ. ಭೂಬಾಲನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಇಂದು ವಿಶ್ವ ಆರೋಗ್ಯ ದಿನ ಲೇಖನ: ಸಂತೋಷ ಎಸ್ ಬಂಡೆ,ಶಿಕ್ಷಕರು, ನಾಗಠಾಣ ಒತ್ತಡದ ಮಟ್ಟವನ್ನು ಕಡಿಮೆ ಮಾಡಬಹುದು. ಆರೋಗ್ಯಕರ ಮತ್ತು ಸಕ್ರಿಯವಾಗಿರಲು ವ್ಯಾಯಾಮವು ಅತ್ಯುತ್ತಮ ಮಾರ್ಗವಾಗಿದೆ. ಅದು ಓಟ, ಈಜು, ಯೋಗ, ನೃತ್ಯ, ಹೈಕಿಂಗ್ ಆಗಿರಬಹುದು. ಈ ವಿಶ್ವ ಆರೋಗ್ಯ ದಿನದಂದು, ನಿಮ್ಮ ದೈನಂದಿನ ದಿನಚರಿಗೆ ವ್ಯಾಯಾಮವನ್ನು ಸೇರಿಸಿ, ಮತ್ತು ನಿಮ್ಮ ಆರೋಗ್ಯ ಸ್ಥಿತಿಯಲ್ಲಿ ನೀವು ವ್ಯತ್ಯಾಸವನ್ನು ಅನುಭವಿಸುವಿರಿ.’ಆರೋಗ್ಯ ನಿಜವಾದ ಸಂಪತ್ತೇ ಹೊರತು, ಚಿನ್ನ, ಬೆಳ್ಳಿಯ ತುಂಡುಗಳಲ್ಲ’ ಎಂದು ರಾಷ್ಟ್ರಪಿತ ಮಹಾತ್ಮ ಗಾಂಧಿ ಹೇಳಿದ್ದನ್ನು ಇಲ್ಲಿ ಸ್ಮರಿಸಬಹುದು. – ಸಂತೋಷ ಎಸ್ ಬಂಡೆ,ಶಿಕ್ಷಕರು, ನಾಗಠಾಣ.

Read More

ವಿಜಯಪುರ:ಈ ಹಿಂದೆ ಯಾವ ಸಂಸದರೂ ಮಾಡದ ಅಭಿವೃದ್ಧಿ ಕಾರ್ಯವನ್ನು ಕಳೆದ ೧೫ ವರ್ಷ ಸಂಸದನಾಗಿ ಜಿಲ್ಲೆಯಲ್ಲಿ ಅಭಿವೃದ್ಧಿ ಕೆಲಸ ಮಾಡಿದ್ದೇನೆಂದು ವಿಜಯಪುರ ಲೋಕಸಭೆಯ ಎನ್‌ಡಿಎ ಅಭ್ಯರ್ಥಿ ರಮೇಶ ಜಿಗಜಿಣಗಿ ಹೇಳಿದರು.ಶನಿವಾರ ಬಸವನ ಬಾಗೇವಾಡಿ ಮತಕ್ಷೇತ್ರದ ಕೂಡಗಿ ಗ್ರಾಮದಲ್ಲಿ ಆಯೋಜಿಸಲಾಗಿದ್ದ ಬಿಜೆಪಿ ಮಹಾಶಕ್ತಿ ಕೇಂದ್ರದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ ಇಲ್ಲಿನ ಕೂಡಗಿ ಎನ್‌ಟಿಪಿಸಿ,ಮನಗೂಳಿ ಬ್ರಿಜ್ ಸೇರಿದಂತೆ ಅನೇಕ ಅಭವೃದ್ಧಿ ಕಾರ್ಯ ಮಾಡಿದ್ದೇನೆ. ೧೨ ಚುನಾವಣೆಗಳನ್ನು ಗೆದ್ದರೂ ನನಗೂ ಯಾವುದೇ ಹಮ್ಮು-ಬಿಮ್ಮು ಇಲ್ಲದೇ ಸಣ್ಣ ಕಾರ್ಯಕರ್ತನಾಗಿ ಕೆಲಸ ಮಾಡುತ್ತಿದ್ದೇನೆ. ಎಲ್ಲರಗಿಂತ ಸಣ್ಣವನಾಗಿ ಎಲ್ಲರಿಗೂ ಕಾಕಾ, ಮಾಮಾ,ಬಾಬಾ ಅಂತ ಗೌರವ ಸಲ್ಲಿಸಿ ಇಷ್ಟು ವರ್ಷ ರಾಜಕಾರಣ ಮಾಡಿದ್ದೇನೆಂದು ತಿಳಿಸಿದರು.ನರೇಂದ್ರ ಮೊದಿ ೩ನೇ ಬಾರಿ ಪ್ರಧಾನಿಯಾಗಲು ಎಲ್ಲೂರೂ ನನಗೆ ಆಶಿರ್ವಾದ ಮಾಡುವದರ ಜೊತೆಗೆ ಮೋದಿ ಅವರು ಕಳೆದ ೧೦ ವರ್ಷಗಳ ಆಡಳಿತದಲ್ಲಿ ದೇಶದ ಅಭಿವೃದ್ಧಿ ಜೊತೆಗೆ ಉತ್ತರ ಭಾರತದ ಎಲ್ಲ ದೇವಸ್ಥಾನಗಳನ್ನು ಅಭಿವೃದ್ಧಿಗೊಳಿಸಿದ್ದಾರೆ. ಅವರು ಮತ್ತೆ ಪ್ರಧಾನಿಯಾಗಲು ನನಗೆ ಬೆಂಬಲಿಸುವAತೆ ಮನವಿ ಮಾಡಿದರು.ಬಂಜಾರಾ ಸಮುದಾಯವನ್ನು ನನ್ನ ವಿರುದ್ಧ…

Read More

ವಿಜಯಪುರ: ನಮ್ಮ ರಕ್ಷಣೆಗಾಗಿ, ದೇಶ ಉಳಿವಿಗಾಗಿ ನಮ್ಮ ಮತ ಬಿಜೆಪಿಗೆ ಹಾಕುವ ಕಾಲ ಬಂದಿದೆ. ನಮ್ಮವರು, ನಮ್ಮ ಮನೆಗಳು ಉಳಿಯಬೇಕೆಂದರೆ ಮೋದಿಯವರು ಮತ್ತೊಮ್ಮೆ ಪ್ರಧಾನಿ ಆಗಬೇಕು ಎಂದು ನಗರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.ನಗರದ ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ಶನಿವಾರ ನಡೆದ ಬಿಜೆಪಿ ಸಂಸ್ಥಾಪನಾ ದಿನಾಚರಣೆ ಹಾಗೂ ನಗರ ಮಂಡಲದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.ದೇಶದಲ್ಲಿ ಕಳೆದ ೧೦ ವರ್ಷಗಳಲ್ಲಿ ಆಗಿರುವ ಅಭಿವೃದ್ಧಿಯಿಂದ ಯಾರನ್ನು ಕೇಳಿದರೂ ಮೋದಿಗೆ ಮತ ಎನ್ನುತ್ತಾರೆ. ಯಾವ ಗ್ಯಾರಂಟಿಯೂ ಬೇಡ, ನಮಗೆ ಮೋದಿಯವರೇ ಗ್ಯಾರಂಟಿ ಎನ್ನುತ್ತಿದ್ದಾರೆ. ದೇಶ ಉಳಿಯಬೇಕೆಂದರೆ, ಸನಾತನ ಧರ್ಮ ಉಳಿಯಬೇಕೆಂದರೆ ದೇಶಕ್ಕೆ ಮೋದಿಯವರು ಅನಿವಾರ್ಯ. ಎಲ್ಲರೂ ಕಂಕಣ ಬದ್ಧರಾಗಿ ಮೋದಿ ಸರ್ಕಾರದ ಸಾಧನೆಗಳನ್ನು ಮನೆ ಮನೆಗೆ ಮುಟ್ಟಿಸಲು ಸಲಹೆ ನೀಡಿದರು.ಅಲ್ಪಸಂಖ್ಯಾತರ ಅಭಿವೃದ್ಧಿಯೇ ಕಾಂಗ್ರೆಸ್ ಮೂಲಮಂತ್ರವಾಗಿದೆ. ಅವರ ಪ್ರಣಾಳಿಕೆಯಲ್ಲಿ ಕಾಶ್ಮೀರದ ೩೭೦ ಕಲಂ ರದ್ದು, ಅಲ್ಪಸಂಖ್ಯಾತರ ರಕ್ಷಣೆಗಾಗಿ ಮತ್ತೊಂದು ಹೊಸ ಕಾನೂನು ಜಾರಿ, ಅಗ್ನಿಪಥ್ ರದ್ದು ಹೀಗೆ ಪ್ರತಿಯೊಂದು ದೇಶ…

Read More

ವಿಜಯಪುರ: ಬಿ.ಎಲ್.ಡಿ.ಇ ಸಂಸ್ಥೆಯ ಎ.ವಿ.ಎಸ್. ಆಯುರ್ವೇದ ಮಹಾವಿದ್ಯಾಲಯ ಆಸ್ಪತ್ರೆಯಲ್ಲಿ ಸ್ವಸ್ಥವೃತ್ತ ವಿಭಾಗದ ವತಿಯಿಂದ ವಿಶ್ವ ಆರೋಗ್ಯ ದಿನಾಚಾರಣೆ ಅಂಗವಾಗಿ ಏಪ್ರಿಲ್ 8 ರಂದು ಸೋಮವಾರ ಮಧುಮೇಹ (ಸಕ್ಕರೆ ಕಾಯಿಲೆ) ಪೀಡಿತ ರೋಗಿಗಳಿಗೆ ಉಚಿತ ರಕ್ತ ತಪಾಸಣೆ ಹಾಗೂ ಆಯುರ್ವೇದ ಔಷಧಿ ವಿತರಣೆ ಶಿಬಿರವನ್ನು ಆಯೋಜಿಸಲಾಗಿದೆ.ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕಾಲೇಜಿನ ಪ್ರಾಚಾರ್ಯ ಡಾ. ಸಂಜಯ ಕಡ್ಲಿಮಟ್ಟಿ ಅವರು ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಆಸಕ್ತರು ಮೊಬೈಲ್ ಸಂಖ್ಯೆ- 8904446624 ಗೆ ಸಂಪರ್ಕಿಸಲು ಕೋರಲಾಗಿದೆ.

Read More