Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಸಿಂದಗಿ: ಗುಬ್ಬೇವಾಡ ಮತ್ತು ಬನ್ನೇಟ್ಟಿ ಪಿಎ ಗ್ರಾಮದ ರೈತರಿಗೆ ಸತತವಾಗಿ ಎರಡು ತಿಂಗಳಿಂದ ಸರಿಯಾಗಿ ವಿದ್ಯುತ್ ಪೂರೈಕೆಯಾಗದೇ ರೈತರು ಕಂಗಾಲಾಗಿ, ದನಕರುಗಳಿಗೆ ನೀರು ಪರದಾಡುವ ಸ್ಥಿತಿ ಎದುರಾಗಿದೆ ಎಂದು ರೈತ ಧರ್ಮಣ್ಣ ಗಬಸಾವಳಗಿ ಹೇಳಿದರು.ತಾಲೂಕಿನ ಗುಬ್ಬೇವಾಡ ಗ್ರಾಮದ ರೈತರಿಂದ ಪಟ್ಟಣದಲ್ಲಿರುವ ಹೆಸ್ಕಾಂ ಕಛೆರಿಗೆ ಬೀಗ ಜಡಿದು ಪ್ರತಿಭಟಿಸಿ ಮಾತನಾಡಿದ ಅವರು, ಈಗಾಗಲೇ ಎಇಇ ಅವರ ಗಮನಕ್ಕೆ ತಂದಿದ್ದರೂ ಅವರು ಯಾವುದೇ ಕ್ರಮಕೈಗೊಳ್ಳದೇ ದರ್ಪ ತೋರುತ್ತಿರುವುದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.ಬನ್ನೇಟ್ಟಿ ಮತ್ತು ಗುಬ್ಬೇವಾಡ ಗ್ರಾಮದ ರೈತರಿಗೆ ೩೫೦ವೋಲ್ಟ್ ವಿದ್ಯುತ್ ಪೂರೈಕೆ ಮಾಡಬೇಕು. ಮತ್ತು ರೈತರಲ್ಲಿ ಅಕ್ರಮವಾಗಿ ಹಣ ವಸೂಲಿ ಮಾಡುತ್ತಿರುವ ರೈತರ ಮೇಲೆ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದರು.ಇದೇ ಸಂದರ್ಭದಲ್ಲಿ ಶಿವಾನಂದ ಕೊಂಡಗೂಳಿ ಮಾತನಾಡಿ, ಈಗಾಗಲೇ ಕೊಳವೆಬಾವಿ ತೆರೆದ ಬಾವಿಗಳ್ಲಲಿ ನೀರಿಲ್ಲದೇ ಸಮಸ್ಯೆಗಳು ಸೃಷ್ಠಿಯಾಗಿದೆ. ಅದರಲ್ಲಿ ಹೆಸ್ಕಾಂ ವತಿಯಿಂದ ಸರಿಯಾಗಿ ವಿದ್ಯುತ್ ಪೂರೈಕೆಯಾಗುತ್ತಿಲ್ಲ. ಇದನ್ನು ಸರಿಪಡಿಸುವಂತೆ ಮನವಿ ಮಾಡಿಕೊಂಡರು.ಒಂದು ವೇಳೆ ಈ ಸಮಸ್ಯೆ ಪರಿಹರಿಸದಿದ್ದಲ್ಲಿ ಮತ್ತೆ ಇಲಾಖೆಯ ಮುಂದೆ ಪ್ರತಿಭಟನೆ ಮಾಡಲಾಗುವುದು ಎಂದು…
ಬಸವನಬಾಗೇವಾಡಿ: ಪಟ್ಟಣದ ತಹಸೀಲ್ದಾರ ಕಚೇರಿಯಲ್ಲಿ ತಾಲೂಕಾಡಳಿತ ಮತ್ತು ಸಮಾಜ ಕಲ್ಯಾಣ ಇಲಾಖೆಯಿಂದ ಹಸಿರು ಕ್ರಾಂತಿ ಹರಿಕಾರ, ಮಾಜಿ ಉಪಪ್ರಧಾನಿ ಡಾ.ಬಾಬು ಜಗಜೀವನರಾಮ ಅವರ ೧೧೭ ನೇ ಜನ್ಮ ದಿನಾಚರಣೆಯನ್ನು ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವದರಿಂದ ಶುಕ್ರವಾರ ಡಾ.ಬಾಬು ಜಗಜೀವನರಾಮ ಅವರ ಭಾವಚಿತ್ರಕ್ಕೆ ಸಾಂಕೇತಿಕವಾಗಿ ಪೂಜೆ, ಪುಷ್ಪನಮನ ಸಲ್ಲಿಸುವ ಮೂಲಕ ಆಚರಿಸಲಾಯಿತು.ಈ ಸಂದರ್ಭದಲ್ಲಿ ತಹಸೀಲ್ದಾರ ವೈ.ಎಸ್.ಸೋಮನಕಟ್ಟಿ, ತಾಲೂಕು ಪಂಚಾಯಿತಿ ಪ್ರಭಾರಿ ಕಾರ್ಯನಿರ್ವಾಹಕ ಅಧಿಕಾರಿ ಪ್ರಕಾಶ ದೇಸಾಯಿ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನರ್ದೇಶಕ ಗ್ರೇಡ್-೧ ಭವಾನಿ ಪಾಟೀಲ, ಲೋಕೋಪಯೋಗಿ ಇಲಾಖೆಯ ಎಇಇ ಜಿ.ವ್ಹಿ.ಕಿರಸೂರ, ಸಿಡಿಪಿಓ ನರ್ಮಲಾ ಸುರಪೂರ, ಗ್ರಾಮೀಣ ಕುಡಿಯುವ ನೀರು ಮತ್ತು ನರ್ಮಲ್ಯ ಇಲಾಖೆಯ ಎಇಇ ವಿ.ಬಿ.ಗೊಂಗಡಿ, ಹಿಂದುಳಿದ ರ್ಗಗಳ ಇಲಾಖೆಯ ಅಧಿಕಾರಿ ಸಿ.ಜಿ.ಬಿರಾದಾರ, ಪಶುವೈದ್ಯಾಧಿಕಾರಿ ಡಾ.ಪಂಚಾಕ್ಷರಿ ಸಂಖ, ಹೆಸ್ಕಾಂ ಇಲಾಖೆಯ ಸಿದ್ರಾಮ ಬಿರಾದಾರ, ಸಮಾಜ ಕಲ್ಯಾಣ ಇಲಾಖೆಯ ವ್ಯವಸ್ಥಾಪಕ ಎಂ.ಎನ್.ದಪೇದಾರ, ಜಿ.ಐ.ಬೆಕಿನಾಳ, ರಸೂಲಸಾಬ ಪಿಂಜಾರ, ವಿರೇಶ ಗೂಡಲಮನಿ, ಮಂಜು ಹಳ್ಳೂರ, ಡಿಎಸ್ಎಸ್ ಮುಖಂಡರಾದ ಅರವಿಂದ ಸಾಲವಾಡಗಿ, ಮಹಾಂತೇಶ ಸಾಸಾಬಾಳ ವಿವಿಧ…
ಬಸವನಬಾಗೇವಾಡಿ: ಗ್ರಾಮಗಳಲ್ಲಿನ ದೇವಸ್ಥಾನಗಳನ್ನು ಸ್ವಚ್ಚವಾಗಿಟ್ಟುಕೊಳ್ಳುವುದರ ಜೊತೆಗೆ ಅವುಗಳನ್ನು ಜೀರ್ಣೋದ್ಧಾರ ಮಾಡುವುದರಿಂದ ಗ್ರಾಮಗಳು ಪ್ರಗತಿ ಹೊಂದುತ್ತವೆ, ಗ್ರಾಮ ಪ್ರಗತಿ ಹೊಂದುವುದ್ದರಿಂದ ಜನರು ಅಭಿವೃದ್ಧಿ ಹೊಂದುತ್ತಾರೆ ಎಂದು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲೂಕು ಯೋಜನಾಧಿಕಾರಿ ಮಂಜುನಾಥ ಹೆಚ್.ಕೆ. ಹೇಳಿದರು.ತಾಲೂಕಿನ ಕಣಕಾಲ ಗ್ರಾಮದ ಮಡಿವಾಳೇಶ್ವರ ದೇವಸ್ಥಾನದ ಅನ್ನ ಛತ್ರಕ್ಕೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ದೇಸ್ಥಾನದ ಸಮಿತಿಗೆ ೧.೫ಲಕ್ಷ ರೂಪಾಯಿಗಳ ಚಕ್ ವಿತರಣೆ ಮಾಡಿ ಮಾತನಾಡಿದ ಅವರು, ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗಡೆ ಅವರು ಗ್ರಾಮದ ಮಡಿವಾಳೇಶ್ವರ ಅನ್ನ ಛತ್ರಕ್ಕೆ ಪ್ರಸಾದದ ರೂಪದಲ್ಲಿ ಸಹಾಯಧನವನ್ನು ನೀಡಿದ್ದಾರೆ ಅದನ್ನು ಸದ್ಭಳಕೆ ಮಾಡಿಕೊಂಡು ಅಭಿವೃದ್ಧಿಪಡಿಸಿಕೊಳ್ಳಲು ಮುಂದಾಗಬೇಕೆಂದು ಹೇಳಿದರು.ಈ ಸಂದರ್ಭದಲ್ಲಿ ಯೋಜನೆಯ ಮೇಲ್ವಿಚಾರಕ ಅನಂತಗೌಡ ರಂಗೊಳ್ಳಿ, ಗ್ರಾಮದ ಮುಖಂಡರಾದ ಶಂಕರಗೌಡ ಪಾಟೀಲ, ಮಲ್ಲಕಾಜಪ್ಪ ಅಂಗಡಿ, ಸಿದ್ಧನಗೌಡ ಪಾಟೀಲ, ಕಾಶೀನಾಥ ಸಜ್ಜನ, ಅಯ್ಯಪ್ಪ ದಿನ್ನಿ, ಗುಂಡುಭಟ್ ಜೋಶಿ, ಚನ್ನಬಸಪ್ಪ ಅಂಗಡಿ, ಮಾರುತಿ ಹಡಪದ, ಮಲ್ಲಪ್ಪ ಇಟಗಿ, ಸಿದ್ರಾಮ ಎತ್ತನಟ್ಟಿ ಸೇರಿದಂತೆ ಇತರರು ಇದ್ದರು.
ಬಸವನಬಾಗೇವಾಡಿ: ತಾಲೂಕಿನ ಕಣಕಾಲ ಗ್ರಾಮದ ನಿರ್ಗತಿಕ ವಯೋವೃದ್ಧೆ ಈರಮ್ಮ ಬಡಿಗೇರ ಅವರಿಗೆ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜ್ಞಾನವಿಕಾಸ ವಾತ್ಸಲ್ಯ ಕಾರ್ಯಕ್ರಮದಡಿಯ ನಿರ್ಮಿಸಿದ ವಾತ್ಸಲ್ಯ ಮನೆಯನ್ನು ಜನಜಾಗೃತಿ ವೇದಿಕೆಯ ಅಧ್ಯಕ್ಷ ಅಪ್ಪುಗೌಡ ಪಾಟೀಲ ಮನಗೂಳಿ ಬುಧವಾರ ಹಸ್ತಾಂತರಿಸಿದರು.ಈ ಸಂದರ್ಭದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲೂಕಾ ಯೋಜನಾಧಿಕಾರಿ ಮಂಜುನಾಥ ಎಚ್.ಕೆ. ಮಾತನಾಡಿ, ದಾರಿಯಲ್ಲಿ ವಾಸ ಮಾಡುವವರಿಗೆ, ಯಾರೂ ನೋಡದೇ ಇರುವ ನಿರ್ಗತಿಕರ ಬದುಕನ್ನು ಹಸನ್ನಾಗಿಸಿ ಅವರ ಬದುಕನ್ನು ಕಟ್ಟಿಕೊಡುವ ಉದ್ದೇಶದಿಂದ ಮಾತೃಶ್ರೀ ಹೇಮಾವತಿ ಅಮ್ಮನವರು ನಿರ್ಗತಿಕರಿಗೆ ಮನೆಯನ್ನು ಕಟ್ಟಿಕೊಡುವದು ಮನದಾಸೆ ಹೊಂದಿದ್ದಾರೆ. ವಯೋವೃದ್ಧೆಯಾಗಿರುವ ಈರಮ್ಮ ಬಡಿಗೇರ ಅವರಿಗೆ ಉಳಿಯಲು ಸರಿಯಾದ ಮನೆ ಇಲ್ಲದೇ ಇರುವದರಿಂದಾಗಿ ಮಾತೃಶ್ರೀ ಹೇಮಾವತಿ ಅಮ್ಮನವರ ಆಶಯದಂತೆ ವಾತ್ಸಲ್ಯ ಎಂಬ ಮನೆಯನ್ನು ಕಟ್ಟಿಕೊಡುವ ಮೂಲಕ ಅವರಿಗೆ ಈ ಮನೆಯನ್ನು ಹಸ್ತಾಂತರ ಮಾಡಲಾಗುತ್ತಿದೆ. ತಾಲೂಕಿನಲ್ಲಿ ಸುಮಾರು ೭೦ ಸದಸ್ಯರಿಗೆ ಪ್ರತಿ ತಿಂಗಳು ಮಾಶಾಸನ, ವರ್ಷದಲ್ಲಿ ಎರಢ್ಮೂರು ಸಲ ಪೌಷ್ಟಿಕ ಆಹಾರ ಸೇರಿ ಅವರಿಗೆ ಜೀವನಾವಶ್ಯಕ ಸಾಮಗ್ರಿಗಳನ್ನು ನೀಡಲಾಗುತ್ತಿದೆ ಎಂದರು.ಈ ಸಂದರ್ಭದಲ್ಲಿ ಕಣಕಾಲ…
ವಿಜಯಪುರ: ವಿದ್ವಾನ್ ಗುರುರಾಜ ಆಚಾರ್ಯ ಹೆರಕಲ್ ರಚಿಸಿರುವವ ಶ್ರೀಸಾಕ್ಷಿ ಪಂಚಾಂಗ ಲೋಕಾರ್ಪಣೆ ಕಾರ್ಯಕ್ರಮವನ್ನು ಇದೇ ದಿನಾಂಕ ೬ ರಂದು ಸಂಜೆ ೬ ಕ್ಕೆ ಇಲ್ಲಿನ ಗಣೇಶ ನಗರದ ಸಾಕ್ಷಿ ಹನುಮಾನ್ ಹಾಗೂ ಸಿದ್ಧವಿನಾಯಕ ದೇವಸ್ಥಾನದಲ್ಲಿ ಹಮ್ಮಿಕೊಳ್ಳಲಾಗಿದೆ.ಖ್ಯಾತ ಜ್ಯೋತಿಷಿ ವಿದ್ವಾನ್ ಶ್ರೀಕಾಂತ ಆಚಾರ್ಯ ಆಶ್ರೀತ ಕಾರ್ಯಕ್ರಮದ ಸಾನಿಧ್ಯ, ದೇವಸ್ಥಾನ ಸಮಿತಿ ಅಧ್ಯಕ್ಷ ಎಸ್.ಎಸ್.ಬೊಮ್ಮನಹಳ್ಳಿ ಅಧ್ಯಕ್ಷತೆ ವಹಿಸಲಿದ್ದಾರೆ. ಡಿವೈಎಸ್ಪಿ ಬಸವರಾಜ ಯಲಿಗಾರ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸುರೇಶ ಶೇಡಶ್ಯಾಳ, ರಾಘವ ಅಣ್ಣಿಗೇರಿ, ಶ್ರೀನಿವಾಸ ಬೆಟಗೇರಿ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.ಇದೇ ಸಂದರ್ಭದಲ್ಲಿ ಟಾಕಳಿಯ ಖ್ಯಾತ ಜ್ಯೋತಿಷಿ ನೀಲಕಂಠಯ್ಯ ಶ್ರೀಶೈಲಯ್ಯ ಹಿರೇಮಠ ಅವರನ್ನು ಸನ್ಮಾನಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಇಂಡಿ: ಪ್ರತಿಯೊಬ್ಬರ ಮತವೂ ಅಮೂಲ್ಯವಾದದ್ದು, ಎಲ್ಲರೂ ಚುನಾವಣೆ ವ್ಯವಸ್ಥೆಯಲ್ಲಿ ಪಾಲ್ಗೊಳ್ಳಬೇಕು. ತಮ್ಮ ಕುಟುಂಬ, ಸ್ನೇಹಿತರು ನೆರೆಹೊರೆಯವರು ನೈತಿಕ ಮತದಾನದ ಬಗ್ಗೆ ಜಾಗೃತಿ ಮೂಡಿಸಿ ಮತದಾನದ ಹಕ್ಕು ಚಲಾಯಿಸಲು ಪ್ರೇರೆಪಿಸಬೇಕೆಂದು ಚುನಾವಣೆ ರಾಯಭಾರಿ ರಾಜೇಶ ಪವಾರ ಹೇಳಿದರು.ಅವರು ಪಟ್ಟಣದಲ್ಲಿ ತಾಲೂಕಾ ಸ್ವೀಪ್ ಸಮಿತಿ, ತಾಪಂ ಇಂಡಿ, ತಾಲೂಕು ಆರೋಗ್ಯ ಇಲಾಖೆ, ಸಾರ್ವಜನಿಕ ಸರಕಾರಿ ಆಸ್ಪತ್ರೆ ಸಹಯೋಗದಲ್ಲಿ ನಡೆದ ಮತದಾನದ ಜಾಗೃತಿ ಜಾಥಾ ಕಾರ್ಯಕ್ರಮದಲ್ಲಿ ಮಾತನಾಡಿದರು.ತಾಲೂಕು ಸ್ವೀಪ್ ಸಮಿತಿ ಅಧ್ಯಕ್ಷೆ ಮತ್ತು ಇಒ ನೀಲಗಂಗಾ ಬಬಲಾದ ಮಾತನಾಡಿ ಮತದಾನ ಕೇವಲ ಹಕ್ಕಷ್ಟೇ ಅಲ್ಲ. ಕರ್ತವ್ಯವೂ ಹೌದು. ಯಾವದೇ ಆಮಿಷಗಳಿಗೆ ಒಳಗಾಗದೆ ಮತದಾನ ಮಾಡಬೇಕು ಎಂದರು.ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ತಾಲೂಕಾ ಆರೋಗ್ಯಾಧಿಕಾರಿ ಅರ್ಚನಾ ಕುಲಕರ್ಣಿ ಆಸ್ಪತ್ರೆಯ ಮುಖ್ಯಸ್ಥ ಐ.ಎಸ್.ಧಾರವಾಡಕರ, ವಿನೋದ ಸಜ್ಜನ, ಸಾಹಿಲ್ ಧನಶೆಟ್ಟಿ, ಡಾ|| ಪ್ರೀತಿ ಕೋಳೆಕರ, ಡಾ|| ಅಮೀತ ಕೋಳೆಕರ, ಡಾ|| ವಿಪುಲ್ ಕೋಳೆಕರ, ನಂದಿಪ ರಾಠೋಡ, ಪ್ರಭಾಕರ ಪೂಜಾರಿ, ರಾಮಗೌಡ ಸರಬಡಗಿ ಮತ್ತಿತರಿದ್ದರು.ನಂದೀಪ ರಾಠೋಡ ಇವರಿಂದ ಪ್ರತಿಜ್ಞಾ ವಿಧಿ ಬೋಧಿಸಲಾಯಿತು.
ವಿಜಯಪುರ: ಯಾವುದೇ ಕೊಳವೆಬಾವಿ ಕೊರೆಯುವ ಪೂರ್ವದಲ್ಲಿ ಸ್ಥಳಿಯ ಆಡಳಿತದಿಂದ ನಿರಪೇಕ್ಷಣಾ ಪತ್ರ ಪಡೆಯುವುದು ಕಡ್ಡಾಯವಾಗಿದೆ ಎಂದು ಜಿಲ್ಲಾಧಿಕಾರಿ ಟಿ. ಭೂಬಾಲನ್ ಹೇಳಿದರು.ಜಿಲ್ಲಾಧಿಕಾರಿ ಕಚೇರಿಯ ವಿ ಸಿ ಹಾಲ್ ನಲ್ಲಿ ಶುಕ್ರವಾವಾರ ಕಂದಾಯ, ಶಾಲಾ ಶಿಕ್ಷಣ, ಗ್ರಾಮೀಣ ಕುಡಿಯುವ ನೀರು ಮತ್ತು ಸರಬರಾಜು ಇಲಾಖೆ ಹಾಗೂ ಜಿಲ್ಲಾ ಪಂಚಾಯತ್ ಅಧಿಕಾರಿಗಳೊಂದಿಗೆ ತುರ್ತು ವಿಡಿಯೋ ಸಂವಾದ ಸಭೆ ನಡೆಸಿ ಮಾತನಾಡಿದ ಅವರು, ಇಂಡಿ ತಾಲೂಕಿನ ಲಚ್ಯಾಣ ತೋಟದ ಕೊಳವೆಬಾವಿಯಲ್ಲಿ ಸಿಲುಕಿದ್ದ ಮಗುವಿನ ಪ್ರಕರಣ ಭವಿಷ್ಯದಲ್ಲಿ ಮರುಕಳಿಸದಿರಲು ಗ್ರಾಮ, ಪಟ್ಟಣ ನಗರ ಯಾವುದೇ ಪ್ರದೇಶದಲ್ಲಾದರೂ ಕೊಳವೆಬಾವಿ ಕೊರೆಯವ ಮುನ್ನ ರೈತರು, ಸಾರ್ವಜನಿಕರಲ್ಲಿ ಅನುಮತಿ ಪಡೆಯುವುದು ಕಡ್ಡಾಯವಾಗಿರುತ್ತದೆ ಮತ್ತು ಸಫಲ/ವಿಫಲವಾದ ಕೊಳವೆಬಾವಿಗಳನ್ನು ಸುರಕ್ಷಿತವಾಗಿ ಮುಚ್ಚುವ ವ್ಯವಸ್ಥೆಯಾಗಬೇಕು ಎಂಬುದರ ಕುರಿತು ಸ್ಥಳಿಯ ಆಡಳಿತಾಧಿಕಾರಿಗಳು ಸೂಚನಾ ಫಲಕಗಳಲ್ಲಿ ಅಳವಡಿಸುವ ಮೂಲಕ ಜಾಗೃತಿ ಮೂಡಿಸಬೇಕು ಎಂದರು.ಈಗಾಗಲೇ ಕೊಳವೆಬಾವಿಗಳ ಸುರಕ್ಷತೆ ಕುರಿತಂತೆ ಸರಕಾರದ ಸುತ್ತೋಲೆ ಇದ್ದು ಅದನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವ ಕಾರ್ಯವಾಗಬೇಕು. ಗ್ರಾಮ ಪಂಚಾಯತ್ ಅಧಿಕಾರಿ, ಕಾರ್ಯದರ್ಶಿ ಮತ್ತು ಕಂದಾಯ ಇಲಾಖೆಯ ಗ್ರಾಮ…
ಸಿಂದಗಿ: ಹಸಿರು ಕ್ರಾಂತಿಯ ಮೂಲಕ ದೇಶದ ಅಹಾರ ಭದ್ರತೆಯನ್ನು ವಿಶ್ವ ಮಟ್ಟದಲ್ಲಿ ಗಮನ ಸೆಳೆಯುವ ನಿಟ್ಟಿನಲ್ಲಿ ಅತ್ಯಂತ ಯಶಸ್ವಿಯಾಗಿ ನಿಭಾಯಿಸಿದ ಕೀರ್ತಿ ಡಾ.ಬಾಬು ಜಗಜೀವನ್ ರಾಮ್ ರವರಿಗೆ ಸಲ್ಲುತ್ತದೆ ಎಂದು ಗ್ರೇಡ್ ೨ ತಹಶೀಲ್ದಾರ್ ಇಂದ್ರಾಬಾಯಿ ಬಳಗಾನೂರ ಹೇಳಿದರು.ಪಟ್ಟಣದ ತಾಲೂಕು ಆಡಳಿತ ವತಿಯಿಂದ ಏರ್ಪಡಿಸಿದ್ದ ಡಾ.ಬಾಬು ಜಗಜೀವನ್ರಾಮ್ ಅವರ ಜಯಂತಿಯಲ್ಲಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಅವರು ಮಾತನಾಡಿದರು.ಈ ವೇಳೆ ಕರ್ನಾಟಕ ಆದಿಜಂಭಾವ ಜನಸಂಘದ ಉತ್ತರ ಕರ್ನಾಟಕ ವಲಯಾಧ್ಯಕ್ಷ ಸಾಯಬಣ್ಣ ದೇವರಮನಿ ಮಾತನಾಡಿ, ೫೦ ವರ್ಷಗಳ ತಮ್ಮ ರಾಜಕೀಯ ಜೀವನದಲ್ಲಿ ಸಂವಿಧಾನದ ರಚನಾ ಸಭೆಯ ಸದಸ್ಯರಾಗಿ ಹಾಗೂ ರಾಷ್ಟ್ರ ನಾಯಕರಾಗಿ ಭಾರತದ ಉಪಪ್ರಧಾನಿಯಾಗಿ ಸೇವೆ ಸಲ್ಲಿಸಿದ್ದಾರೆ. ನೆಹರು ಅವರ ಸಂಪುಟದಲ್ಲಿ ಕೃಷಿ, ಆಹಾರ, ರೈಲ್ವೆ, ಸಾರಿಗೆ ಹಾಗೂ ಸಮುದಾಯ ಅಭಿವೃದ್ಧಿ, ಕಾರ್ಮಿಕ ಉದ್ಯೋಗಕ್ಕಾಗಿ ಹೆಚ್ಚು ಗಮನವಿಟ್ಟು ಶ್ರಮಿಸಿದರು ಎಂದರು.ಈ ವೇಳೆ ಜಿ.ಎಸ್.ರೋಡಗಿ, ಏಕನಾಥ ದ್ವಾಶ್ಯಾಳ, ರಾಜಕುಮಾರ ಭಾಸಗಿ, ಎ.ನಾರಾಯಣಸ್ವಾಮಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ: ಪಟ್ಟಣದ…
ಸಿಂದಗಿ: ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಮತ್ತು ಪಕ್ಷದವರು ನನ್ನನ್ನೇ ನೇರ ಗುರಿಯಾಗಿಸಿಕೊಂಡು ವಿಮರ್ಶೆ ಮಾಡುತ್ತಿದ್ದಾರೆ ಎಂದು ಬಿಜೆಪಿ ಲೋಕಸಭಾ ಅಭ್ಯರ್ಥಿ ರಮೇಶ ಜಿಗಜಿಣಗಿ ಹೇಳಿದರು.ಪಟ್ಟಣದ ಬಿಜೆಪಿ ಕಾರ್ಯಾಲಯದಲ್ಲಿ ಶುಕ್ರವಾರ ಸಾಯಂಕಾಲ ಲೋಕಸಭಾ ಚುನಾವಣಾ ನಿಮಿತ್ಯವಾಗಿ ಹಮ್ಮಿಕೊಂಡ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿಂದೆ ದೀನದಲಿತರ ಪರವಾಗಿ ಇರುವ ಅನುದಾನವನ್ನು ಯಾವ ಸರಕಾರಗಳೂ ಬೇರೊಂದಕ್ಕೆ ಬಳಕೆ ಮಾಡಿಕೊಂಡಿರಲಿಲ್ಲ. ಆದರೆ ರಾಜ್ಯ ಕಾಂಗ್ರೆಸ್ ಸರಕಾರ ದಲಿತರ ಎಸ್ಸಿಪಿಟಿ ಹಣವನ್ನು ಬೇರೆ ಬೇರೆ ಇಲಾಖೆಗೆ ಬಳಸಿದ್ದು ನ್ಯಾಯವೇ? ದಲಿತರನ್ನು ಕಾಂಗ್ರೆಸ್ ಪಕ್ಷ ಕೇವಲ ಮತ ಬ್ಯಾಂಕ್ ಆಗಿ ಬಳಕೆ ಮಾಡಿಕೊಳ್ಳುತ್ತಿದೆ. ರಾಜ್ಯದಲ್ಲಿ ದಲಿತರಿಗೆ ಅನ್ಯಾಯವಾದಾಗ ಎಸ್.ಸಿ ಮಹಾದೇವಪ್ಪ, ರಾಜು ಆಲಗೂರ ಏನು ಮಾಡುತ್ತಿದ್ದಿರಿ? ನನಗೆ ಕಾಂಗ್ರೆಸ್ ಪಕ್ಷಕ್ಕೆ ಆಫರ್ ಬಂದಾಗ ತಿರಸ್ಕರಿಸಲು ಕಾರಣ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಸಮಾಧಿಗೆ ಸ್ಥಳ ಕೊಡದ ಪಕ್ಷಕ್ಕೆ ನನಗೇನು ಎಂಬ ಕಾರಣಕ್ಕೆ ಬಿಜೆಪಿ ಪಕ್ಷ ಸೇರಿದ್ದೇನೆ. ಅದನ್ನು ಪಂಚತೀರ್ಥ ಮಾಡಿ ಪ್ರವಾಸಿ ಕ್ಷೇತ್ರವನ್ನಾಗಿ ಮಾಡಿದ್ದು ಬಿಜೆಪಿ ಸರಕಾರ ಎಂದು ಹೇಳಿದರು.ಈ…
ಮುಳಸಾವಳಗಿಯಲ್ಲಿ ನಡೆದ ಮಹಾಶಕ್ತಿ ಕೇಂದ್ರ ಕಾರ್ಯಕರ್ತರ ಸಭೆಯಲ್ಲಿ ಸಂಸದ ಜಿಗಜಿಣಗಿ ಸ್ಪಷ್ಠನೆ ದೇವರಹಿಪ್ಪರಗಿ: ಜಿಲ್ಲೆಯ ಅಭಿವೃದ್ಧಿಗೆ ೧ ಲಕ್ಷ ಕೋಟಿ ಅನುದಾನ ನೀಡಿದ ಪ್ರಧಾನಿ ಮೋದಿಯವರು ಮೂರನೇ ಬಾರಿಗೆ ಪ್ರಧಾನಿಯಾಗುವುದು ನಿಶ್ಚಿತ. ಅದಕ್ಕಾಗಿ ಬಿಜೆಪಿಗೆ ಮತ ನೀಡುವುದರ ಮೂಲಕ ದೇಶದ ಏಳಿಗೆಗೆ ಸಹಕರಿಸಿ ಎಂದು ಬಿಜೆಪಿ ಅಭ್ಯರ್ಥಿ, ಸಂಸದ ರಮೇಶ ಜಿಗಜಿಣಗಿ ಹೇಳಿದರು.ತಾಲ್ಲೂಕಿನ ಮುಳಸಾವಳಗಿ ಗ್ರಾಮದಲ್ಲಿ ಶುಕ್ರವಾರ ಜರುಗಿದ ಮಹಾಶಕ್ತಿ ಕೇಂದ್ರ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು. ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಮತ್ತು ಕಳೆದ ಬಿಜೆಪಿ ನೇತೃತ್ವದ ರಾಜ್ಯಸರ್ಕಾರ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದೆ. ಜಿಲ್ಲೆಯಲ್ಲಿ ಈಗ ಏಳು ರಾಷ್ಟ್ರೀಯ ಹೆದ್ದಾರಿಗಳ ನಿರ್ಮಾಣ ಕಾರ್ಯ ಆರಂಭಗೊಂಡಿದೆ. ಆದರೆ ಕಾಂಗ್ರೆಸ್ ಸರ್ಕಾರಗಳು ಮಾತ್ರ ಯಾವುದೇ ಅಭಿವೃದ್ಧಿ ಮಾಡದೇ ಮಕ್ಕಳು, ಸಂಬಂಧಿಗಳಿಗೆ ಅಧಿಕಾರ ದೊರಕಿಸುವುದರಲ್ಲಿ ನಿರತವಾಗಿದೆ. ಈ ಬಾರಿಯ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದೊಂದಿಗೆ ಮೈತ್ರಿಯಾಗಿದ್ದು ಅತ್ಯಂತ ಸಂತೋಷದ ವಿಷಯ. ಇದು ನನ್ನ ಕೊನೆಯ ಚುನಾವಣೆಯಾಗಿದ್ದು, ಮತ್ತೋಮ್ಮೆ ಗೆದ್ದು ಮೋದಿಯವರ ಕೈ ಬಲಪಡಿಸಬೇಕಾಗಿದೆ. ಆದ್ದರಿಂದ…
