Author: editor.udayarashmi@gmail.com

ಲೇಖಕರು- ಪ್ರಶಾಂತ ಕುಲಕರ್ಣಿಉಪನ್ಯಾಸಕರುಶ್ರೀ ಪದ್ಮರಾಜ ಬಿ.ಇಡ್ ಕಾಲೇಜು, ಸಿಂದಗಿ.ಫೋ: 9845442237 ಉದಯರಶ್ಮಿ ದಿನಪತ್ರಿಕೆ ಮಲ್ಲೇಶ ಎಂಬ ಹುಡುಗ ಸಣ್ಣ ಹಳ್ಳಿಯ ಬಡ ಮನೆಗೆ ಜನಿಸಿದ್ದರೂ, ಅವನ ಕನಸುಗಳು ಬಡತನಕ್ಕಿಂತಲೂ ಬಹಳ ದೊಡ್ಡವು. ತಂದೆ ಕಲ್ಲು ತೋಡಿ ಜೀವನ ನಡೆಸುವ ಕೂಲಿ ಕಾರ್ಮಿಕ. ತಾಯಿ ಮನೆಯ ಕೆಲಸಗಳಲ್ಲಿ ತೊಡಗಿಕೊಂಡ ಸರಳ ಗೃಹಿಣಿ. ಬದುಕು ಕಠಿಣ ಆದರೆ ಮಲ್ಲೇಶನ ಮನಸ್ಸು ಮಣ್ಣಿಗಿಂತ ಗಟ್ಟಿಯಾಗಿತ್ತು.ಹಳ್ಳಿಯವರಿಗಂತೂ ಅವನ ಕನಸು ನಕ್ಕು ನೋಡುವ ವಿಷಯ:“ಕಲ್ಲು ಹೊರುವವನ ಮಗ ಇಂಜಿನಿಯರ್ ಆಗ್ತಾನಾ?”ಆದರೆ ಮಲ್ಲೇಶ ಕೇಳುತ್ತಿರಲಿಲ್ಲ; ಕೇಳಿದರೂ ಮನಸ್ಸಿಗೆ ಹಾಕುತ್ತಿರಲಿಲ್ಲ.ಬೆಳಿಗ್ಗೆ ತಂದೆಯ ಜೊತೆ ಕಲ್ಲು ಹೊರುವ ಕೆಲಸ, ಮಧ್ಯಾಹ್ನ ಶಾಲೆ, ರಾತ್ರಿ ಓದು ಅವನ ಪ್ರತಿದಿನದ ಹೋರಾಟ. ಕೈಗಳಲ್ಲಿ ಕಲ್ಲಿನ ಧೂಳು ಇರ್ತಿದ್ದರೂ ಮನಸ್ಸಿನಲ್ಲಿ ಬೆಳಕಿನ ಕನಸು ಇದ್ದಿತು. ಗಣಿತ ಕಲಿಯುವಾಗ ಅವನು ಅಂಕೆಗಳನ್ನೇ ತನ್ನ ಮೇರೆಯ ಮೆಟ್ಟಲುಗಳಂತೆ ನೋಡುತ್ತಿದ್ದ.ಒಮ್ಮೆ ಶಾಲೆಯಲ್ಲಿ ಗುರುಗಳು ಹೇಳಿದ ಮಾತು ಅವನ ಬದುಕಿನ ದಿಕ್ಕು ಬದಲಿಸಿತು:“ಪ್ರತಿಯೊಂದು ದೊಡ್ಡ ಸಾಧನೆಯ ಹಿಂದೆ ಸಣ್ಣ ಸಣ್ಣ ಹೋರಾಟಗಳಿರುತ್ತವೆ.”ಈ ಮಾತೆ…

Read More

ಉದಯರಶ್ಮಿ ದಿನಪತ್ರಿಕೆ ಬೆಳಗಾವಿ: ಕಾವ್ಯ ಸಮಯ ಸಂದರ್ಭ ನೋಡಿ ಹುಟ್ಟುವುದಿಲ್ಲ ಅದು ಅಂತಃಸ್ಪೂರ್ತಿಯಾಗಿ ಸ್ಪಂದಿಸಿ ಕವಿಯ ಕಾವ್ಯವಾಗಿ ಹೊರಹೊಮ್ಮುತ್ತದೆ ಪುಸ್ತಕ ಪ್ರೀತಿಸುವವರು ಪುಸ್ತಕ ಓದುವವರು ನಿಜವಾದ ಸುಖಿಗಳು. ಇಂದಿನ ಧಾವಂತದ ದಿನಗಳಲ್ಲಿ ಪುಸ್ತಕ ಸಂಸ್ಕೃತಿ ತೀರಾ ಅಗತ್ಯವಾಗಿದೆ ಎಂದು ವಿದ್ವಾಂಸ ಡಾ ಬಸವರಾಜ ಜಗಜಂಪಿ ನುಡಿದರು.ಅವರಿಂದು ಬೆಳಗಾವಿಯ ಕನ್ನಡ ಸಾಹಿತ್ಯ ಭವನದಲ್ಲಿ ಬೆಳಗಾವಿ ಜಿಲ್ಲಾ ಲೇಖಕಿಯರ ಸಂಘದಿಂದ ನಡೆದ ಡಾ ಭವ್ಯಾ ಅಶೋಕ ಸಂಪಗಾರರವರ ನಾಳೆಗಳ ನೆಚ್ಚಿ ಕವನ ಸಂಕಲನ ಬಿಡುಗಡೆ ಸಮಾರಂಭದಲ್ಲಿ ಅಧ್ಯಕ್ಷ ಸ್ಥಾನದಿಂದ ಮಾತನಾಡುತ್ತಿದ್ದರು.ಮುಂದುವರಿದು ಸಾಹಿತ್ಯ ಪ್ರವೇಶಿಕರಿಗೆ ಹಿರಿಯ ಸಾಹಿತಿಗಳ ಸಾಹಿತ್ಯದ ಅಭ್ಯಾಸ ಅಗತ್ಯವಿದೆ. ಬರೆದಿದ್ದೆಲ್ಲ ಸಾಹಿತ್ಯವಾಗಲಾರದು. ಸತತ ಅಧ್ಯಯನ ಒಂದು ಒಳ್ಳೆಯ ಕೃತಿಗೆ ಕಾರಣವಾಗುತ್ತದೆಂದರು.ಬಾಲವಿಕಾಸ ಅಕಾಡೆಮಿ ಗೌರವ ಪ್ರಶಸ್ತಿ ಪುರಸ್ಕೃತ ಹಿರಿಯ ಸಾಹಿತಿ ಬಸವರಾಜ ಗಾರ್ಗಿ ಮುಖ್ಯ ಅತಿಥಿ ಸ್ಥಾನದಿಂದ ಬೆಳಗಾವಿ ಜಿಲ್ಲೆಯ ವೈದ್ಯ ಸಾಹಿತ್ಯ ಪರಂಪರೆ ಮತ್ತು ಮಹಿಳಾ ಸಾಹಿತಿಗಳ ಸಾಹಿತ್ಯ ಪರಂಪರೆ ಕುರಿತು ಮಾತನಾಡಿದರು.ಬೀಮ್ಸ ಆಡಳಿತಾಧಿಕಾರಿ ಡಾ ಸಿದ್ದು ಹುಲ್ಲೋಳಿ ಮಾತನಾಡಿ, ವೈದ್ಯಕೀಯ ಲೋಕದ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆ ಛತ್ರಪತಿ ಶಿವಾಜಿ ಮಹಾರಾಜ ಶಿಕ್ಷಣ ಸಂಸ್ಥೆಯ ವತಿಯಿಂದ ವಿಜಯಪುರ ಜಿಲ್ಲಾ ಕಾರ್ಯ ನಿರತ ಪತ್ರಕರ್ತ ಸಂಘದ ಅಧ್ಯಕ್ಷರಾಗಿ ಚುನಾಯಿತರಾದ ಅಧ್ಯಕ್ಷ ಹಾಗೂ ಪದಾಧಿಕಾರಿಗಳಿಗೆ ಸನ್ಮಾನಿಸಲಾಯಿತು.ನಗರದ ರವೀಂದ್ರನಾಥ ಠಾಗೋರ್ ಶಾಲಾ ಕಾಲೇಜಿನ ಆಡಳಿತ ಮಂಡಳಿಯ ಕಚೇರಿಯಲ್ಲಿ ಸಂಸ್ಥೆಯ ಅಧ್ಯಕ್ಷ ಶಿವಾಜಿ ಗಾಯಕವಾಡ ಇವರು ನೂತನ ಅಧ್ಯಕ್ಷ ಅಶೋಕ ಯಡಳ್ಳಿ, ಉಪಾಧ್ಯಕ್ಷ ಶಶಿ ಮೆಂಡೆಗಾರ, ಖಜಾಂಜಿ ರಾಹುಲ್ ಆಪ್ಟೆ ಹಾಗೂ ಕಾರ್ಯಕಾರಣಿ ಸದಸ್ಯ ಗುರುರಾಜ ಗದ್ದನಕೇರಿ ಇವರನ್ನು ಆತ್ಮೀಯವಾಗಿ ಸನ್ಮಾನಿಸಿದರು.‌ಈ ವೇಳೆ ಸಂಸ್ಥೆಯ ಸಾರ್ವಜನಿಕ ಸಂಪರ್ಕಾಧಿಕಾರಿ ವಿಜಯಕುಮಾರ ಸಾರವಾಡ, ಪ್ರಿನ್ಸಿಪಲ್ ಅಭಿಜಿತ ಗಾಯಕವಾಡ, ಶಿಕ್ಷಕರಾದ ಗಜಾನನ ಕಾಳೆ, ಪ್ರಲ್ಹಾದ ಹೂಗಾರ ಸೇರಿದಂತೆ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Read More

ಅಖಂಡ ಕರ್ನಾಟಕ ರೈತ ಸಂಘದ ವತಿಯಿಂದ ಪ್ರತಿಭಟನೆ | ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಮೂಲಕ ಮುಖ್ಯಮಂತ್ರಿಗಳಿಗೆ ಪತ್ರ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಮುಂಗಾರು ಹಂಗಾಮಿನಲ್ಲಿ ಬಿತ್ತನೆ ಮಾಡಿದ ತೊಗರಿ, ಹತ್ತಿ, ಶೇಂಗಾ, ಮೆಕ್ಕೆ ಜೋಳ, ಸಜ್ಜಿ, ಈರುಳ್ಳಿ ಸೇರಿದಂತೆ ಇನ್ನಿತರ ಬೆಳೆಗಳು ನಿರಂತರ ಮಳೆಯಿಂದ ಸಂಪೂರ್ಣ ಹಾನಿಯಾಗಿದ್ದು ಈರುಳ್ಳಿ ಪರಿಸ್ಥಿತಿಯಂತೂ ಕಣ್ಣಾರೆ ನೋಡದಂತಾಗಿದೆ. ಈರುಳ್ಳಿ ಹತ್ತಿರ ಹೋದರೆ, ಕೊಳೆತ ಈರುಳ್ಳಿ ಕೊಳೆತ ಹೆಣಕ್ಕಿಂತಲೂ ಕನಿಷ್ಠ ನಾರುತ್ತವೆ. ಇಂತಹ ಸಂದರ್ಭದಲ್ಲಿ ಸರ್ಕಾರ ಹಾನಿಗೊಳಗಾದ ಬೆಳೆಗೆ ಪರಿಹಾರ ನೀಡದೇ ಉದ್ದೇಶ ಪೂರ್ವಕವಾಗಿ ವಿಳಂಬ ನೀತಿ ಅನುಸಿರುತ್ತಿದ್ದು, ಇದನ್ನು ಖಂಡಿಸಿ ಅಖಂಡ ಕರ್ನಾಟಕ ರೈತ ಸಂಘದ ವತಿಯಿಂದ ವಿಜಯಪುರ ನಗರದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಕಾರ್ಯಕರ್ತರು ಜಮಾಯಿಸಿ ಬೃಹತ್ ಪ್ರತಿಭಟನೆ ನಡೆಸಿ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿಗಳ ಕಚೇರಿ ತಲುಪಿ ಮುಖ್ಯಮಂತ್ರಿಗಳಿಗೆ ಬರೆದ ಪತ್ರವನ್ನು ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಅವರಿಗೆ ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ಅಖಂಡ ಕರ್ನಾಟಕ ರೈತ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಅರವಿಂದ…

Read More

ಉದಯರಶ್ಮಿ ದಿನಪತ್ರಿಕೆ ಇಂಡಿ: ವೈಯಕ್ತಿಕವಾಗಿ ದೊಡ್ಡ ಪ್ರಮಾಣದಲ್ಲಿ ಮದುವೆಗಳನ್ನು ಆಯೋಜಿಸಲು ಆಗುವ ದುಬಾರಿ ಖರ್ಚುಗಳನ್ನು ಸಾಮೂಹಿಕ ವಿವಾಹ ಕಡಿಮೆ ಮಾಡುವದು ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳಿಗೆ ಸಹಕಾರಿ ಎಂದು ಕಾಶಿ ಜಗದ್ಗುರು ಡಾ. ಮಲ್ಲಿಕಾರ್ಜುನ ವಿಶ್ವಾರಾಧ್ಯ ಶಿವಾಚಾರ್ಯರರು ಆಶೀರ್ವಚನ ನೀಡಿದರು.ತಾಲೂಕಿನ ತಡವಲಗಾ ಜೋಡಗುಡಿಯಲ್ಲಿ ಶ್ರೀ ಮರುಳ ಸಿದ್ದೇಶ್ವರ ಜಾತ್ರೆ ನಿಮಿತ್ಯ ಹಮ್ಮಿಕೊಂಡ ಸಾಮೂಹಿಕ ವಿವಾಹ ಮತ್ತು ಸರ್ವ ದರ್ಮ ಸಭೆ ಉದ್ದೇಶಿಸಿ ಮಾತನಾಡಿದರು.ಶಾಸಕ ಯಶವಂತರಾಯಗೌಡ ಪಾಟೀಲರು ಮಾತನಾಡಿ ತಡವಲಗಾದ ಶ್ರೀ ಮರುಳ ಸಿದ್ದೇಶ್ವರ ದೇವಸ್ಥಾನ ಆಡಳಿತ ಮಂಡಳಿಯವರು ವಧು ವರರಿಗೆ ಉಡುಗೆ ಬಂಗಾರದ ಉಡುಗೊರೆ ನೀಡುವ ಜೊತೆಗೆ ಎರಡು ಕಡೆಯ ಬಂಧುಗಳಿಗೆ ಉಟೋಪಚಾರ ಮಾಡಿರುವ ಕಾರ್ಯ ಶ್ಲಾಘನೀಯ. ಸಾಮೂಹಿಕ ವಿವಾಹ ಕಾರ್ಯ ಬಡ ಮತ್ತು ಮಧ್ಯಮ ವರ್ಗದವರಿಗೆ ಪೂರಕ ಎಂದರು..ತಡವಲಗಾದ ಅಭಿನವ ರಾಚೋಟೇಶ್ವರ ಶಿವಾಚಾರ್ಯರರು, ನಾಗಠಾಣದ ಮಲ್ಲಿಕಾರ್ಜುನ ಶಿವಾಚಾರ್ಯರರು, ಆಲಮೇಲದ ಚಂದ್ರಶೇಖರ ಶಿವಾಚಾರ್ಯರರು, ಸಂಸದ ರಮೇಶ ಜಿಗಜಿಣಗಿ , ದೆಹಲಿ ನಿಕಟಪೂರ್ವ ಪ್ರತಿನಿಧಿ ಶಂಕರಗೌಡ ಪಾಟೀಲ , ಮಂಜುನಾಥ ವಂದಾಲ…

Read More

ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಪಟ್ಟಣದ ಶ್ರೀವೀರಭದ್ರೇಶ್ವರ ೧೩ ನೇ ವರ್ಷದ ಕಾರ್ತಿಕೋತ್ಸವದ ಅಂಗವಾಗಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಲಿವೆ.ಕಾರ್ತಿಕೋತ್ಸವದ ಪ್ರಯುಕ್ತ ಹುಬ್ಬಳ್ಳಿ ಶ್ರೀಸಿದ್ಧಾರೂಢರ ಪುರಾಣ ಇದೇ ದಿ:೧೮ ರಂದು ಮಂಗಳವಾರದಿಂದ ಡಿಸೆಂಬರ್ ೮ರವರೆಗೆ ರಾತ್ರಿ ೦೮ ಘಂಟೆಗೆ ಜರುಗುವುದು. ವಡಗೇರಾ ತಾಲ್ಲೂಕು ಯಡ್ರಾಮಿಯ ನಾಗಯ್ಯಸ್ವಾಮಿ ಹಿರೇಮಠ ಇವರಿಂದ ಪುರಾಣ, ಕೆರೂಟಗಿ ಗ್ರಾಮದ ರೇಣುಕಾಚಾರ್ಯ ಗವಾಯಿಗಳಿಂದ ಸಂಗೀತ ಸೇವೆ, ಸುರುಪುರ ರಾಜಶೇಖರ ಗೆಜ್ಜಿ ಇವರಿಂದ ತಬಲಾ ಸೇವೆ ಜರುಗಲಿವೆ.ಕಾರ್ಯಕ್ರಮದ ಅಂಗವಾಗಿ ತೊಟ್ಟಿಲುಕಾರ್ಯ, ಸುಮಂಗಲೆಯರಿಗೆ ಉಡಿತುಂಬುವದು ಲಿಂಗದೀಕ್ಷೆ ಹಾಗೂ ಅಯ್ಯಾಚಾರ, ಶ್ರೀವೀರಭದ್ರೇಶ್ವರ ಕಲ್ಯಾಣೋತ್ಸವ ಸಹಿತ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಲಿವೆ. ಡಿಸೆಂಬರ್ ೮ ಸೋಮವಾರರಂದು ಧರ್ಮಸಭೆ, ದಿ:೯ ಮಂಗಳವಾರ ಪಲ್ಲಕ್ಕಿ ಉತ್ಸವ ಕುಂಭ ಕಳಶ, ಸಕಲ ವಾಧ್ಯವೈಭವಗಳ ಸಹಿತ ನಾಡಿನ ಪುರವಂತರ ಸೇವೆಯೊಂದಿಗೆ ಜರುಗುವುದು. ಈ ಎಲ್ಲ ಕಾರ್ಯಗಳಲ್ಲಿ ಸಕಲ ಸದ್ಬಕ್ತರು ಭಾಗವಹಿಸಿ ಶೋಭೆ ತರಲು ಕಾರ್ತಿಕೋತ್ಸವ ಸಮಿತಿ ಪ್ರಕಟಣೆಯ ಮೂಲಕ ತಿಳಿಸಿದೆ.

Read More

ಬೆಳಗಾವಿ ಚಳಿಗಾಲ ಅಧಿವೇಶನದ ಮೊದಲ ಅವಧಿಯಲ್ಲೇ ಅವಕಾಶಕ್ಕೆ ಮನವಿ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಬರುವ ಡಿಸೆಂಬರ್ 8 ರಿಂದ ಬೆಳಗಾವಿಯ ಚಳಿಗಾಲ ಅಧಿವೇಶನದಲ್ಲಿ ಉತ್ತರ ಕರ್ನಾಟಕ ಭಾಗದ ಸಮಗ್ರ ಅಭಿವೃದ್ಧಿ ವಿಷಯ ಕುರಿತು ಚರ್ಚೆಗೆ ಅಧಿವೇಶನದ ಮೊದಲ ಅವಧಿಯಲ್ಲೇ ಹೆಚ್ಚಿನ ಸಮಯಾವಕಾಶ ಕಲ್ಪಿಸುವಂತೆ ನಗರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ರವರು ಸಭಾಧ್ಯಕ್ಷರಾದ ಯು.ಟಿ.ಖಾದರ್ ರವರಿಗೆ ಸೋಮವಾರ ಪತ್ರ ಬರೆದಿದ್ದಾರೆ.ಉತ್ತರ ಕರ್ನಾಟಕ ಮತ್ತು ದಕ್ಷಿಣ ಕರ್ನಾಟಕ ಭಾಗಗಳ ಅಭಿವೃದ್ಧಿ ಹಾಗೂ ಸ್ಥಾನಮಾನಗಳ ಹಂಚಿಕೆಯಲ್ಲಿ ಪ್ರಾದೇಶಿಕ ತಾರತಮ್ಯವನ್ನು ನಿವಾರಿಸುವುದು ಅತೀ ಅವಶ್ಯವಿದೆ. ಆದರೆ, ಪ್ರತಿ ಭಾರಿ ಅಧಿವೇಶನ ಜರುಗಿದಾಗ ಉತ್ತರ ಕರ್ನಾಟಕದ ಸಮಗ್ರ ಅಭಿವೃದ್ಧಿ ಕುರಿತು ಅಧಿವೇಶನದ ಕೊನೆಯ ದಿನಗಳಲ್ಲಿ ಚರ್ಚೆಗೆ ಅವಕಾಶ ನೀಡುತ್ತಿರುವುದರಿಂದ, ಕೊನೆಯ ದಿನಗಳಲ್ಲಿ ಶಾಸಕರು, ಸಚಿವರ ಹಾಜರಾತಿ ಕಡಿಮೆಯಾಗಿ ಚರ್ಚೆಯೇ ನಡೆಯುವುದಿಲ್ಲ.ಕಾರಣ ಉತ್ತರ ಕರ್ನಾಟಕ ಭಾಗದ ಸಮಗ್ರ ಅಭಿವೃದ್ಧಿ ದೃಷ್ಟಿಯಿಂದ ಇದೇ ಡಿಸೆಂಬರ್ 8 ರಿಂದ ಬೆಳಗಾವಿಯಲ್ಲಿ ನಡೆಯುವ ಚಳಿಗಾಲ ಅಧಿವೇಶನನದಲ್ಲಿ ಉತ್ತರ ಕರ್ನಾಟಕ ಭಾಗದ ಕೃಷ್ಣಾ ಮೇಲ್ದಂಡೆ…

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಆದ್ಯಾತ್ಮಿಕ ಚಿಂತಕರು, ಭಾವೈಕ್ಯದ ಹರಿಕಾರರು, ಸಮಾಜ ಸುಧಾರಕರು, ಲೋಕ ಕಲ್ಯಾಣಕ್ಕಾಗಿ ತಮ್ಮ ಬದುಕನ್ನೇ ಮುಡಿಪಾಗಿಟ್ಟವರಿಗೆ ಯಾವ ದೇಶ, ಯಾವ ಊರಾದರೇನೆ? ಗುರಿಯೊಂದೆ ಅವರ ಧ್ಯೇಯವಾಗಿರುತ್ತದೆ. ಇದಕ್ಕೆ ಉತ್ತಮ ನಿದರ್ಶನ ಎಂದರೆ ಹೆಬ್ಬಾಳದ ಪರಮಾನಂದರು. ತಮಿಳುನಾಡಿನ ಶಿವಕಂಚಿಯಲ್ಲಿ ಜನಿಸಿದರೂ ಅವರ ನಿಸ್ವಾರ್ಥ ಜೀವನ, ಸಮಾಜ ಸುಧಾರಣೆಯ ತುಡಿತ, ಜೀವನದ ರಹಸ್ಯ, ಆಧ್ಯಾತ್ಮಕ್ಕೆ ಮನಸೋತು ಹಲವಾರು ಜನ ಅವರ ಶಿಷ್ಯರಾದರು. ಪರಮಾನಂದರು ಸುತ್ತಾಡಿದ ಪ್ರದೇಶಗಳಲೆಲ್ಲಾ ದೇಗುಲ ನಿರ್ಮಿಸಿದರು. ಆ ಸಾಲಿನಲ್ಲಿ ಸಿಂದಗಿ ತಾಲೂಕಿನ ಚಾಂದಕವಟೆ ಗ್ರಾಮದಲ್ಲಿಯೂ ಅವರು ಸುತ್ತಾಡಿದ ಪ್ರತಿತಿ ಇರುವುದರಿಂದ ಪರಮಾನಂದರ ದೇಗುಲ ಇಲ್ಲಿದೆ.ಛಟ್ಟಿ ಜಾತ್ರೆ ಎಂದೇ ಸಿಂದಗಿ ತಾಲೂಕಿನಲ್ಲಿ ಪ್ರಸಿದ್ಧಿ ಪಡೆದುಕೊಂಡಿರುವ ಚಾಂದಕವಟೆ ಗ್ರಾಮದ ಪರಮಾನಂದರ ಜಾತ್ರೆಯು ವಿಶೇಷವಾಗಿ ಗಮನ ಸೆಳೆಯುತ್ತಿದೆ. ಐತಿಹಾಸಿಕ ಹಿನ್ನೆಲೆ ಹಾಗೂ ಆಧ್ಯಾತ್ಮಿಕವಾಗಿ ಬೆಳೆದು ಬಂದಿರುವ ಈ ಜಾತ್ರೆಯಲ್ಲಿ ಸಾವಿರಾರು ಭಕ್ತರು ಆಗಮಿಸಿ ಪ್ರಸಾದ ಸೇವನೆ ಮಾಡುತ್ತಾರೆ. ಈ ಮೂಲಕ ಛಟ್ಟಿ ಜಾತ್ರೆ ಜಾತ್ಯಾತೀತವಾಗಿ ಹಾಗೂ ಧಾರ್ಮಿಕವಾಗಿ ಬೆಳೆದು ಬಂದಿದೆ. ಸೋಮುವಾರ ನಡೆದ…

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ೧೧೦/೩೩/೧೧ಕೆವ್ಹಿ ಸಿಂದಗಿ ವಿದ್ಯುತ್ ವಿತರಣಾ ಕೇಂದ್ರದ ಮೇಲೆ ಬರುವ ಎಫ್-೧೩ ಕಲ್ಯಾಣ ನಗರ ಹಾಗೂ ಸಿಂದಗಿ ನಗರ-೦೧ ಮಾರ್ಗದ ಮೇಲೆ ತುರ್ತು ನಿರ್ವಹಣಾ ಕಾರ್ಯ ಕೈಗೊಳ್ಳುತ್ತಿರುವುದರಿಂದ, ಸದರಿ ಮಾರ್ಗಗಳ ಮೇಲೆ ಬರುವ ಬಂದಾಳ ರಸ್ತೆ, ಗೋಲಿಬಾರ ಮಡ್ಡಿ, ಬಿ.ಟಿ.ಸುಣಗಾರ, ಗಣೇಶ ಲೇಔಟ್ ಮತ್ತು ಸಿಂದಗಿ ನಗರ-೦೧ರ ಮಾರ್ಗದ ಮೇಲೆ ಬರುವ ಬಂದಾಳ ರೋಡ, ಸ್ವಾಮಿ ವಿವೇಕಾನಂದ ವೃತ್ತ, ಬಜಾರ್ ಏರಿಯಾ, ಕನಕದಾಸ ವೃತ್ತ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನ.೧೮ರಂದು ಬೆಳಿಗ್ಗೆ ೧೦ಗಂಟೆಯಿಂದ ಸಾಯಂಕಾಲ ೫ಗಂಟೆಯವರೆಗೆ ವಿದ್ಯುತ್ ವ್ಯತ್ಯೆಯ ಉಂಟಾಗಲಿದ್ದು, ಸದರಿ ಮಾರ್ಗಗಳ ಮೇಲೆ ಬರುವ ಗ್ರಾಹಕರು ಹಾಗೂ ಸಾರ್ವಜನಿಕರು ಸಹಕರಿಸಬೇಕು ಎಂದು ಸಿಂದಗಿ ಹೆಸ್ಕಾಂ ಉಪ-ವಿಭಾಗ ಸಹಾಯಕ ನಿರ್ವಾಹಕ ಅಭಿಯಂತರರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಅಂಕಿ-ಅಂಶ ತುಂಬಾ ಮಹತ್ವ ಪಡೆದುಕೊಂಡಿವೆ.ಇದನ್ನು ಅರಿತುಕೊಂಡು ಜಾಗರೂಕತೆಯಿಂದ ಬಳಸಿಕೊಂಡರೆ ಬದುಕು ಯಶಸ್ವಿಯಾಗುತ್ತದೆಯೆಂದು ಪ್ರೊ.ಪಿ.ಎಲ್.ಹಿರೇಮಠ ಹೇಳಿದರು.ಪಟ್ಟಣದ ಬಿ.ಎಲ್.ಡಿ.ಇ. ಸಂಸ್ಥೆಯ ಬಸವೇಶ್ವರ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದಲ್ಲಿ ಆಯ್.ಕ್ಯೂ.ಎ.ಸಿ.ಹಾಗೂ ಸಂಖ್ಯಾಶಾಸ್ತ್ರ ವಿಭಾಗದ ಸಹಯೋಗದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಸರ್ಕಾರದ ಸಂಖ್ಯಾಶಾಸ್ತ್ರ ಸೇವೆಗಳಲ್ಲಿನ ವೃತ್ತಿ ಅವಕಾಶಗಳು ಎಂಬ ವಿಷಯದ ಒಂದು ದಿನದ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಪ್ರತಿಯೊಂದು ಕ್ಷೇತ್ರವು ಸ್ಪರ್ಧೆಯಿಂದ ಕೂಡಿಕೊಂಡಿದೆ. ನಾವು ಸತತ ಪ್ರಯತ್ನ ಹಾಗೂ ನಿರಂತರವಾದ ಪರಿಶ್ರಮದಿಂದ ಮುನ್ನಡೆದರೆ ಸ್ಪರ್ಧೆಯಲ್ಲಿ ಮುಂದೆ ಬರಲು ಸಾಧ್ಯವಿದೆಯೆಂದು ಅಭಿಪ್ರಾಯಪಟ್ಟರು.ಸಂಪನ್ಮೂಲ ವ್ಯಕ್ತಿ ಪ್ರೊ.ಎನ್.ಎಸ್.ಪಾಟೀಲ ಮಾತನಾಡಿ, ಮಾನವನ ಜೀವನದ ಪ್ರತಿಯೊಂದು ಕ್ಷೇತ್ರದಲ್ಲಿ ಅಂಕಿ ಅಂಶಗಳೇ ಮುಖ್ಯವಾಗಿವೆ.ಸರ್ಕಾರದ ಪ್ರತಿಯೊಂದು ಇಲಾಖೆಗಳಲ್ಲಿ ಹಾಗೂ ಯೋಜನೆಗಳ ರೂಪುರೇಷೆಗಳಿಂದ ಹಿಡಿದು ಆರ್ಥಿಕ ಅಭಿವೃದ್ಧಿಯ ವಿಶ್ಲೇಷಣೆಯವರೆಗೆ ಅಂಕಿ ಸಂಖ್ಯೆಗಳ ಪ್ರಭುತ್ವ ಮರೆಯುವಂತಿಲ್ಲ. ಸರ್ಕಾರದ ಸಂಖ್ಯಾಶಾಸ್ತ್ರ ಇಲಾಖೆಯಲ್ಲಿರುವ ತಾಲೂಕು ಮತ್ತು ಜಿಲ್ಲೆಗಳಿಗೆ ಸಂಬಂಧಿಸಿದ ವಿವಿಧ ಇಲಾಖೆಗಳಲ್ಲಿನ ಹುದ್ದೆಗಳ ಅವಕಾಶಗಳು ದೊರಕಿಸಿಕೊಳ್ಳುವುದರ ಕುರಿತು ಮಾಹಿತಿ ನೀಡಿದರು.ಸಂಖ್ಯಾಶಾಸ್ತ್ರದ ಉಪನ್ಯಾಸಕ ಪಿ.ಎಸ್.ಹೊರಕೇರಿ ಅವರು…

Read More