Subscribe to Updates
Get the latest creative news from FooBar about art, design and business.
Author: editor.udayarashmi@gmail.com
ವಿಜಯಪುರ: ಗುರುವಾರ ನಡೆದ ಎಸ್ಎಸ್ಎಲ್ಸಿ ತೃತೀಯ ಭಾಷಾ ಪತ್ರಿಕೆಗೆ ಜಿಲ್ಲೆಯ ೧೨೭ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಜರುಗಿದ್ದು, ಪರೀಕ್ಷೆಗೆ ನೋಂದಣಿಯಾದ ಒಟ್ಟು ೪೦,೫೪೨ ವಿದ್ಯಾರ್ಥಿಗಳಲ್ಲಿ ೩೯,೫೯೦ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ ೯೫೨ ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ ಎಂದು ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಎನ್.ಎಚ್. ನಾಗೂರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿಜಯಪುರ: ಸಾರ್ವತ್ರಿಕ ಲೋಕಸಭಾ ಚುನಾವಣೆ-೨೦೨೪ರ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ವಿಶೇಷವಾಗಿ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಯಶಸ್ವಿಗೊಳಿಸಲು ಉದ್ದೇಶಿಸಲಾಗಿದೆ. ಜಿಲ್ಲೆಯ ಮತದಾನವು ಶೇ.೧೦೦ ರಷ್ಟು ಆಗಬೇಕು. ಅದಕ್ಕಾಗಿ ಎಲ್ಲರೂ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾ ಸ್ವೀಪ್ ನೋಡಲ್ ಅಧಿಕಾರಿ ಸಿ.ಆರ್. ಮುಂಡರಗಿ ಹೇಳಿದರು.ಅವರು ಜಿಲ್ಲಾ ಸ್ವೀಪ್ ಸಮಿತಿ ಹಾಗೂ ಕಾರ್ಮಿಕ ಇಲಾಖೆ ವಿಜಯಪುರ ಇವರ ಸಹಯೋಗದಲ್ಲಿ ವಿಜಯಪುರ ನಗರದ ಹೊಸ ಬಸ್ ನಿಲ್ದಾಣ(ಸ್ಯಾಟ್ ಲೈಟ್)ದ ಹತ್ತಿರ ನೆರೆದಿರುವ ದಿನಗೂಲಿ ಕಾರ್ಮಿಕರು, ಪಾಟೀಲ ಪ್ಲಾನೆಟ್ ಶೋರೂಮ್ ಹಾಗೂ ಬಿಜ್ಜರಗಿ ಟಾಟಾ ಮೋಟರ್ಸ್ ಕಂಪೆನಿಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಕಾರ್ಮಿಕರೊಂದಿಗೆ ಮತದಾರರ ಜಾಗೃತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿಕೊಂಡು ಮಾತನಾಡಿದರು.ಮತದಾನ ಎಂಬುದು ನಮ್ಮ ಜವಾಬ್ದಾರಿಯಷ್ಟೇ ಅಲ್ಲ, ಹಕ್ಕು. ಸದೃಡ ಸಮಾಜ ನಿರ್ಮಾಣ ಮಾಡಲು ಮತದಾನ ಸಹಕಾರಿಯಾಗುತ್ತದೆ. ಕುಟುಂಬ, ನೆರೆಹೊರೆಯ ಜನರಿಗೆ ಮತದಾನದ ಮಹತ್ವವನ್ನು ಸಾರಿ ಜಾಗೃತಿ ಮೂಡಿಸಬೇಕಾಗಿದೆ. ಮತದಾನ ದಿನದಂದು ಎಲ್ಲ ಕಾರ್ಮಿಕರಿಗೆ ವೇತನ ಸಹಿತ ರಜೆ ಘೋಷಿಸಲಾಗಿದೆ. ಇದರ ಸದುಪಯೋಗ ಪಡೆದುಕೊಂಡು ಮತದಾನ ಮಾಡಿ ಪ್ರಜಾಪ್ರಭುತ್ವದ ಹಬ್ಬವನ್ನು ನಾವೆಲ್ಲರೂ ಮತದಾನ…
ವಿಜಯಪುರ: ಜಿಲ್ಲೆಯ ನಾಗಠಾಣ ಗ್ರಾಮದಲ್ಲಿ ಕೆರೆ ಹೂಳೆತ್ತುವ ಕಾಮಗಾರಿ ನಡೆಯುತ್ತಿದ್ದ ಸ್ಥಳಕ್ಕೆ ಏ.04ರಂದು ತಾಲೂಕು ಪಂಚಾಯತಿಯ ಕಾರ್ಯನಿರ್ವಾಹಕ ಅಧಿಕಾರಿ ಹೊಂಗಯ್ಯ.ಕೆ ರವರು ಭೇಟಿ ನೀಡಿ ಪರಿಶೀಲಿಸಿದರು.ಈ ವೇಳೆ ಮಾತನಾಡಿದ ಅವರು, ಬರಗಾಲ ಇರುವ ಕಾರಣ ಎಲ್ಲ ಕೂಲಿಕಾರರು ನರೇಗಾ ಯೋಜನೆಯಲ್ಲಿ ಕೆಲಸ ಮಾಡಿ, ಯೋಜನೆಯ ಉಪಯೋಗವನ್ನು ಪಡೆದುಕೊಳ್ಳಬೇಕು. ಮತ್ತು ಬೇರೆ ಕಡೆ ಕೆಲಸಕ್ಕೆ ಹೋದರೆ, ಅಲ್ಲಿ ಕೊಡುವ ಕೂಲಿ ಮೊತ್ತಕ್ಕಿಂತ, ನರೇಗಾ ಯೋಜನೆಯ ಕೂಲಿ ಮೊತ್ತ ಹೆಚ್ಚು ಅಂದರೆ ರೂ.349/- ಇರುತ್ತದೆ, ಆದ ಕಾರಣ ಇನ್ನೂ ಹೆಚ್ಚು ಜನರಿಗೆ ಕೂಲಿ ಕೆಲಸಕ್ಕೆ ಕರೆದುಕೊಂಡು ಬನ್ನಿರಿ ಎಂದು ಕೂಲಿಕಾರರಿಗೆ ಕರೆ ನೀಡಿದರು.ಬಳಿಕ ತಾಲೂಕಾ ಸ್ವೀಪ್ ಸಮೀತಿ ವತಿಯಿಂದ ಮತದಾರರ ಜಾಗೃತಿ ಅಭಿಯಾನ ಮಾಡಲಾಯಿತು. ಮತದಾರರ ಪ್ರತಿಜ್ಞಾ ವಿಧಿ ಹೇಳಲಾಯಿತು. ಲೋಕಸಭಾ 2024ರ ಚುನಾವಣೆಯಲ್ಲಿ ಎಲ್ಲರು ಕಡ್ಡಾಯವಾಗಿ ಮತದಾನ ಮಾಡಬೇಕೆಂದು ಸ್ವೀಪ್ ನೋಡಲ್ ಅಧಿಕಾರಿ ಹಾಗೂ ಕಾರ್ಯನಿರ್ವಾಹಕ ಅಧಿಕಾರಿ ಹೊಂಗಯ್ಯ.ಕೆ ರವರು ಅಲ್ಲಿರುವ ಕೂಲಿಕಾರರಿಗೆ ಮಾಹಿತಿ ನೀಡಿದರು.ಈ ಸಂದರ್ಭದಲ್ಲಿ ಪರಶುರಾಮ ಶಾಹಪೂರ, ತಾಂತ್ರಿಕ ಸಂಯೋಜಕರು,…
ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,- ವಿವೇಕಾನಂದ. ಎಚ್. ಕೆ. ಬೆಂಗಳೂರು ಎಂದೋ ಆಗಬಹುದು ಎಂದು ಊಹಿಸಿದ್ದ ಜಾಗತಿಕ ತಾಪಮಾನದ ಬಿಸಿ ಈಗ ಭಾರತದೊಳಗೆ, ಕರ್ನಾಟಕವನ್ನು ಪ್ರವೇಶಿಸಿ ನಮ್ಮ ನಮ್ಮ ಮನೆಯೊಳಗೆ ದೇಹ ಸುಡುವಷ್ಟು ಹತ್ತಿರ ಬಂದಿದೆ..ಅದರ ದುಷ್ಪರಿಣಾಮಗಳು ಮುಂದೆಂದೂ ಆಗಬಹುದು ಎಂದು ಇಡೀ ಆಡಳಿತ ವ್ಯವಸ್ಥೆ ಮತ್ತು ಸಮಾಜ ಭಾವಿಸಿತ್ತು. ಆದರೆ ಅದು ಎಲ್ಲರ ನಿರೀಕ್ಷೆಗಳನ್ನು ಹುಸಿ ಮಾಡಿ ಅತ್ಯಂತ ತೀವ್ರವಾಗಿ ನಮ್ಮನ್ನು ಕಾಡಲು ಪ್ರಾರಂಭಿಸಿದೆ..ಹಣ ಕೇಂದ್ರಿತ ಅಭಿವೃದ್ಧಿಯ ಹಿಂದೆ ಬಿದ್ದ ಮಾನವ ಸಮಾಜ ಪರಿಸರವನ್ನು ನಿರ್ಲಕ್ಷಿಸಿರುವುದು ಮಾತ್ರವಲ್ಲ ನಾಶಪಡಿಸುವುದನ್ನು ನಿರಂತರವಾಗಿ ಮಾಡುತ್ತಾ ಸಾಗಿದ್ದರ ಫಲಿತಾಂಶ ಈಗ ನಾವು ಅನುಭವಿಸಬೇಕಾಗಿದೆ..ಗಾಳಿ ನೀರು ಆಹಾರ ಕಲುಷಿತವಾಗುತ್ತಿರುವುದಕ್ಕಿಂತ ಅಪಾಯಕಾರಿಯಾಗಿ ವಾತಾವರಣದಲ್ಲಿ ಉಷ್ಣ ತಾಪಮಾನ ಹೆಚ್ಚಾಗುತ್ತಿರುವುದು ಅತ್ಯಂತ ಗಂಭೀರವಾಗಿ ಪರಿಗಣಿಸಬೇಕಾಗಿದೆ..ಮೊದಲು ಕೆಲವೇ ಜಿಲ್ಲೆಗಳಿಗೆ ಸೀಮಿತವಾಗಿದ್ದ ತೀವ್ರ ತಾಪಮಾನ ಈಗ ರಾಜ್ಯದ ಎಲ್ಲಾ ಕಡೆ ಏಕಪ್ರಕಾರವಾಗಿ ವರದಿಯಾಗುತ್ತಿದೆ. ಬಹುತೇಕ 40 ಡಿಗ್ರಿ ಸೆಲ್ಸಿಯಸ್ ನ ಆಸು ಪಾಸಿನಲ್ಲಿ ಕರ್ನಾಟಕ ರಾಜ್ಯ ಕುದಿಯುತ್ತಿದೆ..ಪ್ರಾಕೃತಿಕವಾಗಿ, ಸ್ವಾಭಾವಿಕವಾಗಿ ಸಂಭವಿಸುವ ವೈಪರೀತ್ಯ ಗಳಿಗೆ…
ಸಂತೋಷ್ ರಾವ್ ಪೆರ್ಮುಡ (ವ್ಯಕ್ತಿತ್ವ ವಿಕಸನ ತರಬೇತುದಾರರು)ಪೆರ್ಮುಡ ಮನೆ, ಪಟ್ರಮೆ ಗ್ರಾಮ ಅಂಚೆ ಬೆಳ್ತಂಗಡಿ ತಾಲೂಕು, ದ.ಕ ಜಿಲ್ಲೆ-೫೭೪೧೯೮ದೂ: ೯೭೪೨೮೮೪೧೬೦ ಇಡೀ ವಿಶ್ವವೇ ಕೊರೋನಾ ಮಹಾಮಾರಿಗೆ ತತ್ತರಿಸಿ ಈಗಷ್ಟೇ ಈ ಜಾಡ್ಯದಿಂದ ನಿಧಾನವಾಗಿ ಹೊರಗೆ ಬರುತ್ತಿದೆ. ಇಂದು ಜನರ ಜೀವನ ಶೈಲಿಯಲ್ಲಿ ಬಹಳಷ್ಟು ಕೊರೋನಾ ಕಾರಣದಿಂದ ಬದಲಾವಣೆಗಳಾಗಿದ್ದು, ಇದುವರೆಗೂ ಬೇಕಾಬಿಟ್ಟಿಯಾಗಿ ಎಲ್ಲೆಂದರಲ್ಲಿ ರಾಜಾರೋಷವಾಗಿ ಅಲೆದಾಡುತ್ತಿದ್ದ ಮಂದಿ ಇಂದು ಮನೆಯಿಂದ ಹೊರಗೆ ಕಾಲಿಡುವ ಮೊದಲು ಹಲವು ಬಾರಿ ಯೋಚಿಸುವಂತೆ ಆಗಿದೆ. ಮನೆಯೊಳಗೆ ಕುಳಿತು ಉಂಟಾಗುವ ಏಕತಾನತೆಯನ್ನು ಕಳೆಯಲು ಈ ಎಲ್ಲಾ ಚಟುವಟಿಕೆಗಳಲ್ಲಿ ನಮ್ಮನ್ನು ನಾವು ತೊಡಗಿಸಿಕೊಳ್ಳಬಹುದು.ವಿವಿಧ ಜರ್ನಲ್ ಹಾಗೂ ಬ್ಲಾಗ್ಗಳನ್ನು ಪ್ರಾರಂಭಿಸಬಹುದು:ನಿಮಗೆ ಬರವಣಿಗೆಯ ಕ್ಷೇತ್ರದಲ್ಲಿ ಆಸಕ್ತಿಯಿದ್ದರೆ, ನಿಮ್ಮ ಜೀವನದ ಸವಿನೆನಪುಗಳು, ಅಜ್ಜಿ ಹೇಳಿದ ಹಳೆಯ ಕಥೆಗಳು ಮತ್ತು ವಿಶೇಷ ಸನ್ನಿವೇಶಗಳು, ವಿಶೇಷ ಸಾಧನೆಗಳು, ಬಾಲ್ಯದ ಅನುಭವಗಳು ಮತ್ತು ರೋಚಕ ಸಂದರ್ಭಗಳನ್ನು ಬರೆದು ಅವುಗಳನ್ನು ನಿಮ್ಮದೇ ಆದ ಜರ್ನಲ್ ಯಾ ಬ್ಲಾಗ್ಗಳಲ್ಲಿ ಆನ್ಲೈನ್ ಮೂಲಕ ಮತ್ತು ಕೂ ಅಪ್ಲಿಕೇಶನ್ ಮೂಲಕ ಸಂಚಿಕೆಗಳಂತೆ ಗೆಳೆಯರೊಂದಿಗೆ ಹಂಚಿಕೊಳ್ಳಬಹುದು.ಗೊತ್ತಿರುವ…
ತಾಂಬಾ: ‘ದೇಶಕ್ಕೆ ಕಾಂಗ್ರೆಸ್ ಮಾತ್ರ ಪರ್ಯಾಯ’ ಎಂದು ಲೋಕಸಭೆ ಕಾಂಗ್ರೆಸ್ ಅಭ್ಯರ್ಥಿ ರಾಜು ಆಲಗೂರ ಹೇಳಿದರು.ಸಿಂದಗಿ ಮತಕ್ಷೇತ್ರದ ತಾಂಬಾದಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಮಾತನಾಡಿ, ದೇಶವೀಗ ಬದಲಾವಣೆ ಬಯಸಿದೆ. ವಿಜಯಪುರ ಲೋಕಸಭೆ ಕ್ಷೇತ್ರದ ಜನರೂ ಹೊಸ ಬೆಳಕಿನ ನಿರೀಕ್ಷೆಯಲ್ಲಿದ್ದಾರೆ. ತಮಗೆ ಮತ ನೀಡಿ ಆರಿಸಿ ಕಳಿಸಿದ್ದೇ ಆದರೆ, ಜಿಲ್ಲೆ ಹಿಂದೆಂದೂ ಕಂಡರಿಯದ ಅಭಿವೃದ್ಧಿ ಮಾಡಿ ತೋರಿಸುವೆ. ನಿಮ್ಮೆಲ್ಲರ ನಂಬಿಕೆ ಉಳಿಸಿಕೊಳ್ಳುವೆ ಎಂದು ಭರವಸೆ ನೀಡಿದರು.ಶಾಸಕರಾದ ಅಶೋಕ ಮನಗೂಳಿ ಮಾತನಾಡಿ, ಕಾಂಗ್ರೆಸ್ ಪಕ್ಷದಿಂದ ಮಾತ್ರ ಜನ ಹಿತ ಸಾಧ್ಯ. ಇಷ್ಟು ವರ್ಷ ನೀವು ಕೇಂದ್ರ ಸರಕಾರದಿಂದ ಬರುವ ನಿಮ್ಮ ಹಕ್ಕಿನಿಂದ ವಂಚಿತರಾಗಿದ್ದೀರಿ. ನಿಮ್ಮ ಬದುಕು ಹಸನಾಗಲು ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕಿ. ಮೋದಿಯವರು ಭಾವನಾತ್ಮಕ ವಿಷಯ ಕೆದಕಿ ಜನರನ್ನು ಪ್ರಚೋದಿಸುತ್ತಾರೆ. ಫುಲ್ವಾಮಾ, ರಾಮ ಮಂದಿರ ಎನ್ನುತ್ತಾರೆ. ಕಾಂಗ್ರೆಸ್ನ ಕೆಲಸಗಳನ್ನು ನೋಡಿ ನೀವು ಮತ ಹಾಕಿ ಎಂದು ಮನವಿ ಮಾಡಿದರು.ಮುಖಂಡರಾದ ಎಸ್.ಎಂ. ಪಾಟೀಲ ಗಣಿಹಾರ, ಜಿ.ಪಂ. ಸದಸ್ಯ ಗುರಣ್ಣಗೌಡ ಪಾಟೀಲ ಚಾಂದಕವಟೆ, ರವಿ ಚವ್ಹಾಣ,…
Udayarashmi kannada daily newspaper Udayarashmi kannada daily newspaper
ಬಸವನಬಾಗೇವಾಡಿ: ತಾಲೂಕಿನ ಹೂವಿನಹಿಪ್ಪರಗಿ ಗ್ರಾಮದಲ್ಲಿ ಪ್ರತ್ಯೇಕವಾಗಿ ಇಬ್ಬರು ವ್ಯಕ್ತಿಗಳು ತಮ್ಮ ಅನಾರೋಗ್ಯದಿಂದ ಮನನೊಂದು ನೇಣಿಗೆ ಶರಣಾದ ಘಟನೆ ಜರುಗಿದೆ.ಗ್ರಾಮದ ಸಿದ್ದಪ್ಪ ಪಕೀರಪ್ಪ ಅಂಬಿಗೇರ(೪೩) ಅವರು ಮೂಲವ್ಯಾದಿಯಿಂದ ಬಳಲುತ್ತಿರುವದರಿಂದಾಗಿ ಅವರು ಮನನೊಂದು ತಮ್ಮ ಮನೆಯಲ್ಲಿ ಏ.೨, ಮಂಗಳವಾರದಂದು ಸಂಜೆ ಸುಮಾರಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಹುಣಶ್ಯಾಳ ಪಿಬಿ ಗ್ರಾಮದ ಭೀಮಪ್ಪ ಗಿರಿಯಪ್ಪ ಡೋಣೂರ(ಹಳ್ಳಿ) (೮೪) ಅವರು ತೀವ್ರ ಅನಾರೋಗ್ಯದಿಂದ ಬಳಲುತ್ತಿರುವದರಿಂದಾಗಿ ಹೂವಿನಹಿಪ್ಪರಗಿ ಗ್ರಾಮದ ಬಸ್ ನಿಲ್ದಾಣದಲ್ಲಿ ಏ.೨ ಮತ್ತು ೩ ರ ಬೆಳಗಿನ ಜಾವದ ಮಧ್ಯದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಎರಡು ಘಟನಾ ಸ್ಥಳಕ್ಕೆ ಪಿಐ ವಿಜಯ ಮರಗುಂಡಿ, ಪಿಎಸ್ಐ ರವಿ ಪವಾರ, ಎಎಸ್ಐ ಎಂ.ಐ.ತಳವಾರ, ಎ.ಎಚ್.ರೆಡ್ಡೇರ ಭೇಟಿ ನೀಡಿ ಪರಿಶೀಲನೆ ಮಾಡಿದರು. ಈ ಕುರಿತು ಬಸವನಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಎಸ್.ಬಿ.ವಿಸ್ಡಮ್ ಕರಿಯರ್ ಅಕಾಡೆಮಿಯ ಕಾರ್ಯಕ್ರಮದಲ್ಲಿಡಾ.ಅಮೃತಾನಂದ ಸ್ವಾಮೀಜಿ ಅಭಿಮತ ವಿಜಯಪುರ: ಒಂದು ರಾಷ್ಟ್ರ ಸರ್ವತೋಮುಖ ಬೆಳವಣಿಗೆ ಆಗಬೇಕಾದರೆ ಯುವಕರ ಜ್ಞಾನ ಮತ್ತು ಬಲ, ರೈತರ ಶ್ರಮ, ರಾಜಕಾರಣಿಗಳ ದೇಶಾಭಿಮಾನ ಮಹತ್ವದಾಯಕ ಎಂದು ಬಾಲಗಾಂವ ಗುರುದೇವ ಆಶ್ರಮದ ಡಾ.ಅಮೃತಾನಂದ ಮಹಾಸ್ವಾಮಿಗಳು ಹೇಳಿದರು.ಶ್ರೀಗಳು ವಿಜಯಪುರ ನಗರದ ಪ್ರತಿಷ್ಠಿತ ಸ್ಪರ್ಧಾತ್ಮಕ ತರಬೇತಿ ಕೇಂದ್ರ ಎಸ್.ಬಿ.ವಿಸ್ಡಮ್ ಕರಿಯರ್ ಅಕಾಡೆಮಿಯಲ್ಲಿ ಜರುಗಿದ “ರಾಷ್ಟ್ರ ನಿರ್ಮಾಣದಲ್ಲಿ ಯುವಕರ ಪಾತ್ರ” ಎಂಬ ವಿಷಯದ ಕುರಿತು ಉಪನ್ಯಾಸ ನೀಡಿ ಮಾರ್ಗದರ್ಶನ ಮಾಡಿದರು.ಯುವಕರು ರಾಷ್ಟ್ರದ ಶಕ್ತಿ. ಯುವಕರಲ್ಲಿ ದೇಶಪ್ರೇಮ ಸೇವಾ ಮನೋಭಾವ ಯಾವುದೇ ಪಲಾಪೇಕ್ಷೆ ಇಲ್ಲದೆ ಅರ್ಪಣಾ ಮನೋಭಾವದಿಂದ ಬರಬೇಕು. ರಾಷ್ಟ್ರದ ಜಲಸಂಪತ್ತು ಹಾಗೂ ಪ್ರಕೃತಿ ಸಂಪತ್ತನ್ನು ಹಾಳಾಗದಂತೆ ಕಾಯುವುದು ಯುವಕರ ದೊಡ್ಡ ಜವಾಬ್ದಾರಿಯಾಗಿದೆ. ಶಿಸ್ತು ಸಮಯ ಪಾಲನೆ ಹಾಗೂ ದೇಶಪ್ರೇಮವನ್ನು ಇಂದಿನ ಯುವಕರು ಮೈಗೂಡಿಸಿಕೊಳ್ಳಬೇಕು ಎಂದು ಕಿವಿಮಾತು ನೀಡಿದರು.ಸಂಸ್ಥೆಯ ಗೌರವ ಅಧ್ಯಕ್ಷ ಶರಣಯ್ಯ ಎಸ್. ಭಂಡಾರಿಮಠ ಮಾತನಾಡಿ, ರಾಷ್ಟ್ರದ ಅಳಿವು ಉಳಿವು ಯುವಕರ ಕೈಯಲ್ಲಿದೆ. ನಮ್ಮ ರಾಷ್ಟ್ರದಲ್ಲಿರುವ ಯುವಕರು ದೈಹಿಕವಾಗಿ, ಮಾನಸಿಕವಾಗಿ, ಜ್ಞಾನಾತ್ಮಕವಾಗಿ ಸದೃಢರಾದರೆ…
ಢವಳಗಿ: ಸಮೀಪದ ರೂಡಗಿ ಗ್ರಾಮದ ಶ್ರೀ ಯಲ್ಲಾಲಿಂಗ ಮಹಾರಾಜರ ಜಾತ್ರಾ ಮಹೋತ್ಸವದ ಅಂಗವಾಗಿ ಬುಧವಾರ ಅದ್ದೂರಿಯಾಗಿ ರಥೋತ್ಸವ ಜರುಗಿತು.ತೇರಿಗೆ ಭಕ್ತರು ಉತ್ತತ್ತಿ,ಬಾಳೆಹಣ್ಣು , ಚುರುಮುರಿ,ಎಸೆದು ತಮ್ಮ ಭಕ್ತಿಯನ್ನು ಸಮರ್ಪಿಸಿದರು.ಇದಕ್ಕೂ ಮೊದಲು ಶ್ರೀ ಸಿದ್ದಲಿಂಗೇಶ್ವರ ಮತ್ತು ಯಲ್ಲಾಲಿಂಗೇಶ್ವರ ಗದ್ದುಗೆಗೆ ರುದ್ರಾಭಿಷೇಕ ಮತ್ತು ಶ್ರೀ ಅಕ್ಕ ಮಹಾದೇವಿ ಮಹಿಳಾ ಸಂಘ ರೂಢಗಿ ಇವರಿಂದ ಪಂಚಮುಖಿ ಪಲ್ಲಕ್ಕಿಗಳಿಗೆ ಮಹಾಪೂಜೆ ಮತ್ತು ಶ್ರೀ ಸಿದ್ದಲಿಂಗ ದೇವರು ಶ್ರೀ ಖಾಸ್ಗತೇಶ್ವರ ಮಠ ತಾಳಿಕೋಟಿ ಇವರ ಸಮ್ಮುಖದಲ್ಲಿ ಶ್ರೀ ಯಲ್ಲಾಲಿಂಗ ಮಹಾರಾಜರು ಪುಣ್ಯಶ್ರಮ ರೂಢಗಿ ಹಾಗೂ ಶ್ರೀ ತಿಪ್ಪಣ್ಣ ಪೂಜಾರಿ ಇವರಿಂದ ಮುಂಜಾನೆ 11 ಘಂಟೆಗೆ ಅಗ್ನಿ ಪ್ರವೇಶ ಮಾಡಿ ಭಕ್ತಿ ಸಮರ್ಪಿಸಿದರು. ನಂತರ ಸಾಯಂಕಾಲ 6 ಘಂಟೆಗೆ ರೂಢಗಿ ಗ್ರಾಮಸ್ಥರಿಂದ ಮತ್ತು ಸುತ್ತಮುತ್ತಲಿನ ಗ್ರಾಮದ ಸಹಸ್ರಾರು ಭಕ್ತರು ಸೇರಿ ತೇರು ಎಳೆದು ಸಂಭ್ರಮಿಸಿದರು.ಇದೇ ವೇಳೆ ಗ್ರಾಮದ ಹಿರಿಯರಾದ ಬಸವರಾಜ ದೋಡಮನಿ, ಶಿವಾನಂದ ಕೋರಿ ಎಸ್ ಪೀ ಸೇವಾಲಾಲ್, ಶ್ರೀಶೈಲ ದೊಡಮನಿ, ಬಸವರಾಜ ವಡ್ಡರ, ಬಸವರಾಜ ಬೆಲ್ಲದ, ಸಂಗಮೇಶ ಹಾರಿವಾಳ,…
