Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಅಫಜಲಪುರ: ಭಾರತ ಸಂವಿಧಾನದಲ್ಲಿ ಮತದಾನದ ಅರ್ಹತೆ ಪಡೆದ ಪ್ರತಿಯೊಬ್ಬರು ಕಡ್ಡಾಯವಾಗಿ ಮತದಾನ ಮಾಡೂವ ಮೂಲಕ ಮತದಾನದ ಶ್ರೇಷ್ಠತೆಯನ್ನು ಕಾಪಾಡಿಕೊಳ್ಳಬೇಕು ಎಂದು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ ಹೇಳಿದರು.ಪಟ್ಟಣದ ತಾಲೂಕು ಸಭಾಂಗಣದಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ನಡೆದ ಮತದಾನದ ಪ್ರತಿಜ್ಞಾ ವಿಧಿ ಬೋಧನೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಚುನಾವಣೆಗಳು ಶಾಂತಿಯುತವಾಗಿ ನಡೆಯುವಂತೆ ಸಾರ್ವಜನಿಕರಲ್ಲಿ ಮತದಾನದ ಮಹತ್ವದ ಕುರಿತು ತಿಳಿ ಹೇಳಬೇಕು. ಅಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ಬರುವ ಪ್ರತಿಯೊಬ್ಬ ಸಿಬ್ಬಂದಿಗಳು ಮತದಾನದ ಕುರಿತು ಜಾಗೃತಿ ಮೂಡಿಸುವ ಕೆಲಸ ಮಾಡಬೇಕು. ಯಾವುದೇ ಆಸೆ ಆಮಿಷಗಳಿಗೊಳಗಾಗದೆ ಮತದಾನ ಮಾಡಬೇಕು ಎಂದು ಹೇಳಿದರು.ಈ ಸಂದರ್ಭದಲ್ಲಿ ಎಡಿ ರಮೇಶ ಪಾಟೀಲ, ಕ್ಷೇತ್ರ ಶಿಕ್ಷಣಾಧಿಕಾರಿ ಹಾಜಿಮಲಂಗ, ಪಿಡಿಒ ಈರಯ್ಯ ಹಿರೇಮಠ, ಪಾರ್ವತಿ ಪೂಜಾರಿ, ಮೇಗಾ ಪಾಟೀಲ, ಸಾವಿತ್ರಿ ಮೇತ್ರಿ, ಅನಸೂಯಾ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.
ಅಫಜಲಪುರ ಸರಕಾರಿ ಮಹಾವಿದ್ಯಾಲಯದಲ್ಲಿ ಎನ್ಎಸ್ಎಸ್ ಶಿಬಿರಕ್ಕೆ ಚಾಲನೆ ಅಫಜಲಪುರ: ವಿದ್ಯಾರ್ಥಿಗಳಲ್ಲಿ ಪಠ್ಯೇದ ಜೊತೆಗೆ ಪಠ್ಯೇತರ ಚುಟುವಟಿಕೆಗಳಲ್ಲಿ ತೊಡಗಿಸುವುದರಿಂದ ವಿದ್ಯಾರ್ಥಿಗಳಲ್ಲಿ ಸಮಾಜಿಕ ಕಳಕಳಿ ನೆಲೆಯೂರುತ್ತದೆ ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಸಮಾಜಿಕ ಜವಾಬ್ದಾರಿಯನ್ನು ಹೆಚ್ಚಿಸಿಕ್ಕೊಳ್ಳಬೇಕು ಎಂದು ಮಳೇಂದ್ರ ಮಠದ ವಿಶ್ವರಾಧ್ಯ ಮಳೇಂದ್ರ ಶಿವಾಚಾರ್ಯರು ಹೇಳಿದರು.ಪಟ್ಟಣದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ೨೦೨೩-೨೪ ನೇ ಸಾಲಿನ ಎನ್ಎಸ್ಎಸ್ ಶಿಬಿರದ ಸಾನಿಧ್ಯವಹಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಉನ್ನತ ವ್ಯಾಸಂಗ ಮಾಡಿದಷ್ಟೇ ಅವರಲ್ಲಿ ಉತ್ತಮ ಸಂಸ್ಕಾರ, ಪರಸ್ಪರ ಗೌರವ ಮನೋಬಾವನೆಯೂ ಕೂಡಾ ಬೆಳೆಸಿಕೊಳ್ಳಬೇಕು. ಎಲ್ಲ ಕ್ಷೇತ್ರದಲ್ಲಿ ಜನ ಮೆಚ್ಚುವಂತೆ ಇರಬೇಕಾದರೆ ಸೇವಾ ಮನೋಭಾವ ಹಿನ್ನಲೆಯ ಕಾರ್ಯಕ್ರಮಗಳು ನಡೆಯುತ್ತಿರಬೇಕು ಇಂದು ನಡೆಯುತ್ತಿರುವ ಶಿಬಿರವು ಎಲ್ಲರಿಗೂ ಸಹಕಾರಿಯಾಗಲಿ ಎಂದು ಹೇಳಿದರು.ಸಿಬ್ಬಂದಿ ಕಾರ್ಯಧರ್ಶಿ ಎಂ.ಎಸ್. ರಾಜೇಶ್ವರಿ ಮಾತನಾಡಿ, ಪ್ರಸ್ತುತ ದಿನಮಾನಗಳಲ್ಲಿ ವಿದ್ಯಾರ್ಥಿಗಳು ಎಲ್ಲ ಕ್ಷೇತ್ರಗಳಲ್ಲಿ ಆಸಕ್ತಿ ಹೊಂದಿರಬೇಕು. ಈ ನಿಟ್ಟಿನಲ್ಲಿ ಓದಿನೊಂದಿಗೆ ಸಾಮಾಜಿಕ ನೆಲಗಟ್ಟು ಅರಿತುಕ್ಕೊಳ್ಳಬೇಕು ಎಂದರು.ಪ್ರಾಚಾರ್ಯ ಮಾಣಿಕರಾವ್ ಕುಲಕರ್ಣಿ ಅಧ್ಯಕ್ಷತೆ ವಹಿಸಿ ಮಾತನಾಡಿ ಪ್ರತಿ ವರ್ಷ ಕಾಲೇಜಿನ ವತಿಯಿಂದ ಎನ್ಎಸ್ಎಸ್ಶಿಬಿರಗಳು…
ಇಂಡಿ: ಸರಕಾರ ನಿಯಮದ ಅನುಸಾರ ಪ್ರತಿ ವ್ಯಕ್ತಿಯು ವೃತ್ತಿಯಿಂದ ನಿವೃತಿ ಹೊಂದಬೇಕು. ಹೀಗಾಗಿ ನಿವೃತ್ತಿಯು ಪ್ರತಿಯೊಬ್ಬ ವ್ಯಕ್ತಿಯ ಜೀವನದ ಮಹತ್ವದ ಮೈಲುಗಲ್ಲು ಎಂದು ಸಮಾಜ ಕಲ್ಯಾಖೆ ಉಪ ನಿರ್ದೇಶಕ ಪುಂಡಲೀಕ ಮಾನವರ ಹೇಳಿದರು.ಅವರು ಸಮಾಜ ಕಲ್ಯಾಣ ಇಲಾಖೆಯಲ್ಲಿ ಪ್ರಥಮ ದರ್ಜೆ ಸಹಾಯಕರಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಎಸ್.ಐ.ಶಾಬಾದಿ ಇವರಿಗೆ ವೃತ್ತಿಯಿಂದ ನಿವೃತ್ತಿಯಾಗುವ ಸಮಾರಂಭದಲ್ಲಿ ಮಾತನಾಡಿದರು.ನಿವೃತ್ತ ಶಾಬಾದಿಯವರು ಮಾತನಾಡಿ, ಯೌವನದಲ್ಲಿ ಕಷ್ಟ ಪಟ್ಟು ದುಡಿದ ಪ್ರಯಾಣವು ಕೊನೆಗೊಂಡಿದೆ. ತಮ್ಮ ಸೇವೆ ಸಲ್ಲಿಸುವಾಗ ನೀಡಿದ ಹಿರಿಯ ಅಧಿಕಾರಿಗಳ ಮತ್ತು ಇಲಾಖೆಯ ಎಲ್ಲ ಸಿಬ್ಬಂದಿಯ ಸಹಕಾರ ಮರೆಯಲು ಅಸಾಧ್ಯ ಎಂದರು.ಇಂಡಿ ತಾಲೂಕಾ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಬಿ.ಜೆ.ಇಂಡಿ, ವಸತಿ ನಿಲಯ ಪಾಲಕ ಕುಲಪ್ಪ ಕೋರೆ, ಆನಂದ ಕಳಸಗೊಂಡ, ಶ್ರಿಮತಿ ಬಿರಾದಾರ ಶಾಬಾದಿ ಯವರು ಪ್ರಾಮಾಣಿಕ ಸೇವೆ ಕೊಂಡಾಡಿದರು.ಸಮಾರಂಭದಲ್ಲಿ ತಾಲೂಕಿನ ಎಲ್ಲ ವಸತಿ ನಿಲಯ ಪಾಲಕರು ಇಲಾಖೆಯ ಸಿಬ್ಬಂದಿ ಮತ್ತಿತರಿದ್ದರು.ಇದೇ ವೇಳೆ ಶಾಬಾದಿ ದಂಪತಿಗಳನ್ನು ಸನ್ಮಾನಿಸಲಾಯಿತು.
ಕೆಂಬಾವಿ: ಮುಸ್ಲಿಂ ಬಾಂಧವರ ಪವಿತ್ರ ರಂಜಾನ್ ವೃತಾಚರಣೆ ಈ ಪವಿತ್ರ ಮಾಸದ ಉಪವಾಸ ವ್ರತವನ್ನು ನಾಡಿನ ಎಲ್ಲೆಡೆ ಮುಸ್ಲಿಂ ಬಾಂಧವರ ಶ್ರದ್ಧಾಭಕ್ತಿಯಿಂದ ಆಚರಣೆ ಮಾಡುತ್ತಿದ್ದು ಅದರಲ್ಲೂ ಚಿಣ್ಣರು ಕೂಡ ಪವಿತ್ರ ಉಪವಾಸ ವ್ರತ ಕೈಗೊಂಡು ಗಮನ ಸೆಳೆದಿದ್ದಾರೆ ಯಾದಗಿರಿ ಜಿಲ್ಲೆಯ ಕೆಂಭಾವಿ ಪಟ್ಟಣದ ನಿವಾಸಿ 6 ವರ್ಷದ ಮೊಹಮ್ಮದ್ ಉಮರ್ ಅಕ್ಬರ್ ನಾಲತವಾಡ ಈ ವ್ರತ ಕೈಗೊಂಡು ಗಮನ ಸೆಳೆದಿದ್ದಾರೆ.
ಬಸವನಬಾಗೇವಾಡಿ: ಪಟ್ಟಣ ಸೇರಿದಂತೆ ಅಖಂಡ ತಾಲೂಕಿನಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಯ ಗಣಿತ ವಿಷಯ ಪರೀಕ್ಷೆ ಮಂಗಳವಾರ ಶಾಂತಿಯುತವಾಗಿ ಜರುಗಿತು. ಅಖಂಡ ತಾಲೂಕಿನ ಒಟ್ಟು ೧೮ ಪರೀಕ್ಷಾ ಕೇಂದ್ರಗಳಿವೆ. ಗಣಿತ ವಿಷಯ ಪರೀಕ್ಷೆಗೆ ೫,೪೪೬ ವಿದ್ಯಾರ್ಥಿಗಳು ನೋಂದಾಯಿಸಿದ್ದರು. ಇದರಲ್ಲಿ ೧೧೭ ವಿದ್ಯಾರ್ಥಿಗಳು ಗೈರು ಉಳಿಯುವ ಮೂಲಕ ೫,೩೨೯ ವಿದ್ಯಾರ್ಥಿಗಳು ಪರೀಕ್ಷೆ ಬರೆದರು. ಇಂದು ನಡೆದ ಪರೀಕ್ಷೆಯಲ್ಲಿ ಅಖಂಡ ತಾಲೂಕಿನಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಯು ವ್ಯವಸ್ಥಿತವಾಗಿ ನಡೆಯಿತು. ಯಾವುದೇ ಡಿಬಾರ್ ಆಗಿಲ್ಲ ಎಂದು ಕ್ಷೇತ್ರಶಿಕ್ಷಣಾಧಿಕಾರಿ ವಸಂತ ರಾಠೋಡ ತಿಳಿಸಿದರು.
ಬಸವನಬಾಗೇವಾಡಿ: ವಿಶ್ವಗುರು ಬಸವೇಶ್ವರರ ದಾಸೋಹ ತತ್ವವನ್ನು ಅಳವಡಿಸಿಕೊಳ್ಳುವ ಮೂಲಕ ಶೈಕ್ಷಣಿಕ ಕ್ಷೇತ್ರದಲ್ಲಿ ಅನೇಕ ವಿದ್ಯಾರ್ಥಿಗಳಿಗೆ ಜ್ಞಾನ, ಅನ್ನ ದಾಸೋಹವನ್ನು ಕೈಗೊಳ್ಳುವ ಮೂಲಕ ಇಡೀ ಜಗತ್ತಿಗೆ ದಾಸೋಹದ ಮಹತ್ವವನ್ನು ಸಿದ್ದಗಂಗಾ ಮಠದ ಡಾ.ಶಿವಕುಮಾರ ಸ್ವಾಮೀಜಿ ತಿಳಿಸಿಕೊಟ್ಟಿದ್ದರಿಂದಲೇ ಅವರ ಜನ್ಮ ದಿನವನ್ನು ದಾಸೋಹ ದಿನವನ್ನಾಗಿ ಆಚರಿಸುವ ಮೂಲಕ ಅವರಿಗೆ ಇಡೀ ನಾಡು ನಮನ ಸಲ್ಲಿಸುತ್ತಿದೆ ಎಂದು ಯರನಾಳ ವಿರಕ್ತಮಠದ ಗುರುಸಂಗನಬಸವ ಸ್ವಾಮೀಜಿ ಹೇಳಿದರು.ತಾಲೂಕಿನ ಸುಕ್ಷೇತ್ರ ಯರನಾಳ ಗ್ರಾಮದ ವಿರಕ್ತಮಠದ ಲಿಂ. ಪಂಪಾಪತಿ ಶಿವಯೋಗಿ ಜಾತ್ರಾಮಹೋತ್ಸವ ಹಾಗೂ ಗುರುಸಂಗನಬಸವ ಸ್ವಾಮೀಜಿಗಳ ಜನ್ಮಸುವರ್ಣ ಮಹೋತ್ಸವದಂಗವಾಗಿ ೧೭ ದಿನ ಕಾಲ ಹಮ್ಮಿಕೊಂಡಿರುವ ಸೊನ್ನಲಾಪೂರದ ಶಿವಯೋಗಿ ಸಿದ್ದರಾಮೇಶ್ವರ ಚರಿತ್ರೆ ಪುರಾಣದಲ್ಲಿ ಸೋಮವಾರ ಸಂಜೆ ದಾಸೋಹ ದಿನದಂಗವಾಗಿ ಹಮ್ಮಿಕೊಂಡಿದ್ದ ನುಡಿನಮನ ಕಾರ್ಯಕ್ರಮದ ಸಾನಿಧ್ಯ ವಹಿಸಿ ಮಾತನಾಡಿದ ಅವರು, ಡಾ. ಶಿವಕುಮಾರ ಸ್ವಾಮೀಜಿ ಅವರು ತಮಗಾಗಿ ಬದುಕದೇ ಇಡೀ ಸಮಾಜಕ್ಕಾಗಿ ಬದುಕಿದ ಸಂತ. ಇನ್ನೊಬ್ಬರ ಬದುಕು ಸುಂದರ ಮಾಡಬೇಕೆಂಬ ಸದುದ್ದೇಶದಿಂದ ನಾಡಿನ ಲಕ್ಷಾಂತರ ಮಕ್ಕಳಿಗೆ ಬೆಳಕಾದರು. ಇಡೀ ಸಮಾಜದ ಒಳಿತಿಗಾಗಿ ಶ್ರಮಿಸಿದರು. ಬಂಥನಾಳದ…
ಮುದ್ದೇಬಿಹಾಳ: ಅಸ್ಕಿ ಫೌಂಡೇಶನ್ ವತಿಯಿಂದ ಪಟ್ಟಣದ ಮಹೆಬೂಬ ನಗರದ ಮಕ್ಕಾ ಶಾದಿಮಹಲ್ ನಲ್ಲಿ ಮಾ.೩ ರಂದು ಸಂಜೆ ೬ ಗಂಟೆಗೆ ಇಫ್ತಿಯಾರ್ ಕೂಟವನ್ನು ಹಮ್ಮಿಕೊಳ್ಳಲಾಗಿದ್ದು, ಮುಸ್ಲಿಂ ಸಮಾಜದ ಎಲ್ಲ ಬಾಂಧವರು ಭಾಗಿಯಾಗುವಂತೆ ಫೌಂಡೇಶನ್ ಅಧ್ಯಕ್ಷ ಸಿ.ಬಿ.ಅಸ್ಕಿ ಕೋರಿದ್ದಾರೆ.
ತಿಕೋಟಾ: ವಿಧ್ಯಾರ್ಥಿ ಜೀವನದಲ್ಲಿ ಅಕ್ಷರ ಜ್ಞಾನದ ಜೊತೆ ಶಿಸ್ತು ಒಳ್ಳೆಯ ಸಂಸ್ಕಾರ ಪಡೆದುಕೊಂಡು ಸಮಾಜದಲ್ಲಿ ಉತ್ತಮ ನಾಗರಿಕರಾಗಿ ಬಾಳಬೇಕು ಎಂದು ಮುಖ್ಯೋಪಾಧ್ಯಾಯ ಎಸ್.ಎನ್.ತಡಲಗಿ ಹೇಳಿದರು.ತಾಲ್ಲೂಕಿನ ಬಾಬಾನಗರ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಹಿರೇಕುರುಬರ ವಸ್ತಿ ಶಾಲೆಯಲ್ಲಿ ಮಂಗಳವಾರ ನಡೆದ ಐದನೇ ತರಗತಿ ವಿಧ್ಯಾರ್ಥಿಗಳ ಬೀಳ್ಕೊಡುವ ಸಮಾರಂಭದಲ್ಲಿ ಅವರು ಮಾತನಾಡಿದರು.ಯಾವುದೇ ತಂದೆ ತಾಯಿ ಹಾಗೂ ಶಿಕ್ಷಕರು ಮಕ್ಕಳು ಕೆಟ್ಟವರಾಗಲಿ ಎಂದು ಬಯಸುವದಿಲ್ಲ. ಅವರು ಮಕ್ಕಳ ಕುರಿತು ಹಲವು ಕನಸುಗಳನ್ನು ಇಟ್ಟುಕೊಂಡಿರುತ್ತಾರೆ. ಅವರ ಕನಸು ಸಾಕಾರಗೊಳಿಸಲು ನಿಮ್ಮ ಜೀವನದಲ್ಲಿ ಉತ್ತಮ ನಡವಳಿಕೆ ಅಳವಡಿಕೊಳ್ಳಬೇಕು. ಶಿಕ್ಷಕ ತಾನು ಕಲಿಸಿದ ಕಲಿಕೆಯನ್ನು ಮಕ್ಕಳಿಂದ ವಾಪಸ್ಸು ಪಡೆದಾಗ ಸಂತೃಪ್ತನಾಗುತ್ತಾನೆ ಎಂದರು. ಈ ಸಂದರ್ಭದಲ್ಲಿ ಆನಂದ ಗಾರ್ಗಿ, ಕೆ.ಎಂ.ಗಳತಗಿ, ಎಂ.ಜಿ.ಕರ್ಜಗಿ, ಪಿ.ಎಸ್.ಗದ್ಯಾಳ, ಬಸವರಾಜ ನಾವಿ, ಯಲ್ಲಪ್ಪ ಜಂಪಾನಿ, ಸಾಬು ಹೊನವಾಡ, ಎಚ್.ಎಂ.ಕಾಲೆಬಾಗ್, ಸುನೀಲ ಕಠಾರೆ, ಎಸ್.ವೈ.ಬಾಗೆನವರ, ರಮೇಶ ಹಿರೇಕುರುಬರ, ಅಮೋಗಿ ವಿಜಾಪುರ ಇದ್ದರು.
ಮುದ್ದೇಬಿಹಾಳ: ಭಕ್ತರ ಆರಾಧ್ಯ ದೇವತೆ, ಬೇಡಿದ ಇಷ್ಟಾರ್ಥಗಳನ್ನು ಕರುಣಿಸುವ ಪಟ್ಟಣದ ಹಡಲಗೇರಿ ರಸ್ತೆಯಲ್ಲಿರುವ ಶ್ರೀ ಪದ್ಮಾವತಿ ದೇವಿಯ ರಥೋತ್ಸವ ವೈಭವದೊಂದಿಗೆ ನೆರವೇರಿತು.ಪಟ್ಟಣದ ಪ್ರಮುಖ ಜಾತ್ರೆಗಳಲ್ಲೊಂದಾದ ದೇವಿಯ ಜಾತ್ರೆಗೆ ಪ್ರತೀ ವರ್ಷದಂತೆ ಈ ವರ್ಷವೂ ಕೂಡಾ ಬೇರೆ ರಾಜ್ಯಗಳಿಂದ ಭಕ್ತರು ಕುಟುಂಬ ಸಮೇತ ಆಗಮಿಸಿದ್ದರು. ರಥೋತ್ಸವದ ವೇಳೆ ಭಕ್ತರು ಉತ್ತತ್ತಿ, ಬಾಳೆಹಣ್ಣು ಸಮರ್ಪಿಸಿ ತಮ್ಮ ಕೋರಿಯನ್ನು ಶ್ರೀ ದೇವಿಯ ಮುಂದಿಟ್ಟರು. ಬೆಳಿಗ್ಗೆಯಿಂದಲೇ ಸಕಲ ಪೂಜಾ ವಿಧಿ ವಿಧಾನಗಳು, ತೀರ್ಥ ಪ್ರಸಾದ ಕಾರ್ಯಕ್ರಮಗಳು ಜರುಗಿದವು.
ಮುದ್ದೇಬಿಹಾಳ: ಲೋಕಸಭೆ ಚುನಾವಣೆ ಕರ್ತವ್ಯಕ್ಕೆ ವಿಶೇಷ ಪ್ರಕರಣದ ಅಡಿ ವಿನಾಯ್ತಿ ನೀಡಬೇಕು ಮತ್ತು ಇನ್ನಿತರ ಕೆಲ ಬೇಡಿಕೆಗಳನ್ನು ಮುಂದಿಟ್ಟು ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳು ಇಲ್ಲಿನ ತಹಶೀಲ್ದಾರರಿಗೆ ಮಂಗಳವಾರ ಮನವಿ ಸಲ್ಲಿಸಿದರು.ಈ ವೇಳೆ ಸಂಘದ ಅಧ್ಯಕ್ಷ ಬಿ.ಎಚ್.ಮುದ್ನೂರ ಮಾತನಾಡಿ, ಈ ಹಿಂದೆ ನಡೆದ ಗ್ರಾ.ಪಂ ನ ಚುನಾವಣೆ ಮತ್ತು ವಿಧಾನಸಭಾ ಚುನಾವಣೆಗಳ ಸಂದರ್ಭದಲ್ಲಿ ಕರ್ತವ್ಯದಲ್ಲಿದ್ದ ನಮ್ಮ ಸಿಬ್ಬಂದಿಯನ್ನು ಹೊತ್ತೊಯ್ಯುವ ಬಸ್ ಅಪಘಾತವಾಗಿ ಸಾಕಷ್ಟು ಶಿಕ್ಷಕರು ತೊಂದರೆ ಅನುಭವಿಸುವಂತಾಗಿತ್ತು. ಆ ಸಂದರ್ಭದಲ್ಲಿ ಹಲವು ಅಧಿಕಾರಿಗಳು ಭೇಟಿ ನೀಡಿ ಸೂಕ್ತ ಪರಿಹಾರ ಕಲ್ಪಿಸುವ ಭರವಸೆ ನೀಡಿದ್ದರು. ಆದರೆ ಈ ವರೆಗೂ ಯಾವುದೇ ಪರಿಹಾರ ಬಂದಿಲ್ಲ. ಈ ಕೂಡಲೇ ಪರಿಹಾರಕ್ಕೆ ಸೂಕ್ತ ಕ್ರಮ ಕೈಗೊಳ್ಳಬೇಕು ಮತ್ತು ನೀಡಲಾದ ಕರ್ತವ್ಯವನ್ನು ಸರಿಯಾಗಿ ನಿಭಾಯಿಸುವ ನಮ್ಮ ಬೇಡಿಕೆಗಳನ್ನು ಈಡೇರಿಸಬೇಕು ಎಂದರು.ಖಜಾಂಚಿ ಎನ್.ಎಸ್.ತುರಡಗಿ ಮಾತನಾಡಿ, ಚುನಾವಣೆ ಕರ್ತವ್ಯವವನ್ನು ಸರಿಯಾಗಿ ನಿಭಾಯಿಸುವ ನಮ್ಮ ಸಮಸ್ಯೆಗಳಿಗೆ ಸ್ಪಂದಿಸಿದಲ್ಲಿ ಸ್ಮರಿಸುವದಾಗಿ ತಿಳಿಸಿದರು.ಈ ವೇಳೆ ಬಿ.ಎಸ್.ಹೊಳಿ, ಎಸ್.ಆರ್.ಪಾಟೀಲ, ಐ.ಎ.ಹಿರೇಮಠ, ಎಂ.ಬಿ.ಗುಡಗುಂಟಿ, ಎಸ್.ಜಿ.ಪಾಟೀಲ, ಎಸ್.ಎಂ.ಕಟ್ಟಿಮನಿ,…
