Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಶಿವಮೊಗ್ಗದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಮಾಜಿ ಸಚಿವ ಈಶ್ವರಪ್ಪ ಶಿವಮೊಗ್ಗ: “ನಾಳೆ ಬೆಳಿಗ್ಗೆ ಬಿಜೆಪಿ ರಾಜ್ಯಾಧ್ಯಕ್ಷರನ್ನು ಬದಲಾಯಿಸಿದರೆ, ನಾನು ಚುನಾವಣಾ ಕಣದಿಂದ ಹಿಂದೆ ಸರಿಯುತ್ತೇನೆ” ಎಂದು ಮಾಜಿ ಸಚಿವ ಈಶ್ವರಪ್ಪ ಹೇಳಿದ್ದಾರೆ.ಶಿವಮೊಗ್ಗದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಅಪ್ಪ-ಮಕ್ಕಳ ಕೈಯಲ್ಲಿ ಪಕ್ಷ ಇದೆ. ಪಕ್ಷವನ್ನು ಶುದ್ದೀಕರಣಗೊಳಿಸುವುದು ನನ್ನ ಉದ್ದೇಶ. ಈ ಉದ್ದೇಶವನ್ನು ಮೋದಿ, ಅಮಿತ್ ಶಾ ಅವರೂ ಒಪ್ಪಬಹುದು. ನಾನು ಒಪ್ಪಿಸುತ್ತೇನೆ ಎಂದಿದ್ದಾರೆ.ಅಮಿತ್ ಶಾ ಅವರು ನನಗೆ ಕರೆ ಮಾಡಿದ್ದರು. ನಾನು ನನ್ನ ಉದ್ದೇಶ ಹೇಳಿದ್ದೇನೆ. ಅವರು ಚುನಾವಣೆಗೆ ಸ್ಪರ್ಧಿಸಬೇಡಿ ಎಂದು ಹೇಳಿದರು. ನಾನು ಹಿಂದುತ್ವದ ಬಗ್ಗೆ, ಹಿಂದುಳಿದವರಿಗೆ ಟಿಕೆಟ್ ಸಿಗದ ಬಗ್ಗೆ ಮತ್ತು ಪಕ್ಷದಲ್ಲಿರುವ ಅವ್ಯವಸ್ಥೆಗಳನ್ನು ಸರಿಪಡಿಸಲು ಸ್ಪರ್ಧಿಸುತ್ತಿರುವುದಾಗಿ ಹೇಳಿದ್ದೇನೆ ಎಂದು ತಿಳಿಸಿದ್ದಾರೆ. ಅಮಿತ್ ಶಾ ಅವರು ನನ್ನನ್ನು ದೆಹಲಿಗೆ ಹೋಗಲು ಹೇಳಿದ್ದಾರೆ. ನಾನು ಯಾವುದೇ ಬೇಡಿಕೆ ಇಡದಂತೆ ಮನವಿ ಮಾಡಿದ್ದೇನೆ. ಅವರು, ಬೇಡಿಕೆ ಅಲ್ಲ ಪ್ರಾರ್ಥನೆ ಎಂದಿದ್ದಾರೆ. ದಯವಿಟ್ಟು ನೀವು ನನ್ನ ಬಳಿ ಪ್ರಾರ್ಥನೆ ಮಾಡಿಬೇಡಿ ಎಂದಿದ್ದೇನೆ. ನಾನು ದೆಹಲಿಗೆ…
ಇಂಡಿ: ಮತದಾನದ ಬಗ್ಗೆ ಜನರಿಗೆ ಮನವರಿಕೆ ಮಾಡಿಸುವದು ಸಮಾಜ ಸೇವೆಯ ಕೆಲಸ, ಅದನ್ನು ಎಲ್ಲರೂ ಪ್ರಾಮಾಣಿಕವಾಗಿ ಮಾಡೋಣ ಎಂದು ತಾ.ಪಂ ಸ್ವೀಪ್ ಸಮಿತಿ ಅಧ್ಯಕ್ಷ ಹಾಗೂ ಇಒ ನೀಲಗಂಗಾ ಬಬಲಾದ ಹೇಳಿದರು.ಪಟ್ಟಣದ ತಾ.ಪಂ ಭವನದಲ್ಲಿ ತಾ.ಪಂ ಸ್ವೀಪ್ ಸಮಿತಿಯಿಂದ ಹಮ್ಮಿಕೊಂಡಿದ್ದ ಬೈಕ್ ರ್ಯಾಲಿಗೆ ಚಾಲನೆ ನೀಡಿ ಮಾತನಾಡಿದರು.ಮತದಾನದ ಮೇಲೆ ದೇಶದ ಅಭಿವೃದ್ದಿ ಹಾಗೂ ಭದ್ರತೆ ನಿಂತಿರುತ್ತದೆ. ನಮ್ಮ ಮತದಾನದ ಹಕ್ಕನ್ನು ಕಡ್ಡಾಯವಾಗಿ ಪಾಲಿಸಿ ಉತ್ತಮ ಸಮಾಜ ನಿರ್ಮಾನಕ್ಕೆ ನಾಂದಿ ಹಾಡೋಣ. ಮತದಾರರಿಗೆ ಜಾಗೃತಿ ಮೂಡಿಸುವ ಸಲುವಾಗಿ ವಿವಿಧ ಕಾರ್ಯಕ್ರಮಗಳನ್ನು ತಾಲೂಕಿನಲ್ಲಿ ಹಮ್ಮಿಕೊಂಡಿದ್ದು ಆ ಮೂಲಕ ಮತದಾನ ಪ್ರಾಮುಖ್ಯತೆ ಹಾಗೂ ಮತದಾರರ ಕರ್ತವ್ಯದ ಬಗ್ಗೆ ಮನವರಿಕೆ ಮಾಡೋಣ ಎಂದರು.ಕಂದಾಯ ಉಪವಿಭಾಗಾಧಿಕಾರಿ ಮತ್ತು ಸಹಾಯಕ ಚುನಾವಣೆ ಅಧಿಕಾರಿ ಅಬೀದ್ ಗದ್ಯಾಳ ಮಾತನಾಡಿ, ಯಾರೂ ಮತದಾನದಿಂದ ದೂರ ಉಳಿಯದಂತೆ ನೋಡಿಕೊಳ್ಳುವದು ನಮ್ಮೇಲ್ಲರ ಕರ್ತವ್ಯ.ಎಲ್ಲರಿಗೂ ಕಡ್ಡಾಯವಾಗಿ ಮತದಾನ ಮಾಡಿಸಬೇಕು ಎಂದರು.ನಂತರ ಬೈಕ್ ರ್ಯಾಲಿ ಹಸಿರು ನಿಶಾನೆ ತೋರಿಸಿ ಚಾಲನೆ ನೀಡಿದರು. ಬೈಕ್ ರ್ಯಾಲಿ ಸಿಂದಗಿ ರಸ್ತೆ, ಮಿನಿ…
ವಿಜಯಪುರ : ಕಾಂಗ್ರೆಸ್ ಸರಕಾರ ಯಾವಾಗಲೂ ಶೋಷಿತ, ಬಡವ, ನಿರ್ಗತಿಕ ಹಾಗೂ ಸಮಾಜದ ಕಟ್ಟಕಡೆಯ ಕೆಳವರ್ಗದ ಎಲ್ಲರ ಹಿತ ಕಾಪಾಡುವ ಪಕ್ಷ ಯಾವುದಾದರೂ ಇದ್ದರೆ ಅದು ಕಾಂಗ್ರೆಸ್ ಮಾತ್ರ, ಅದೇ ತರಹ ಬಂಜಾರ ಸಮುದಾಯದ ಪರ ಕೂಡಾ ಸದಾ ಜೊತೆಗಿದ್ದು ಬೆಂಬಲಿಸಿ ಸಮಾಜವನ್ನು ಮುನ್ನಡೆಗೆ ತರುವಲ್ಲಿ ಮಹತ್ವದ ಪಾತ್ರ ವಹಿಸಿದೆ ಆದ್ದರಿಂದ ಬಂಜಾರ ಸಮುದಾಯದ ಎಲ್ಲ ಮತದಾರರು ಈ ಬಾರಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ರಾಜು ಆಲಗೂರ ಅವರನ್ನು ಬಹುಮತದಿಂದ ಆರಿಸಿ ತರುವಂತೆ ಯುವ ಕಾಂಗ್ರೆಸನ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಂತೋಷ ಪೂಜಾರಿ ವಿನಂತಿಸಿಕೊಂಡಿದಾರೆ.ಈ ಕುರಿತು ಮಂಗಳವಾರ ಪತ್ರಿಕಾ ಹೇಳಿಕೆ ನೀಡಿದ ಅವರು, ಮಾಜಿ ಶಾಸಕರು ಮತ್ತು ಸಚಿವರಾದ ಕೆ.ಟಿ.ರಾಠೋಡ ಅವರ ಪುತ್ರ ಪ್ರಕಾಶ ರಾಠೋಡ ಅವರಿಗೆ ಒಂದು ಅವಧಿಯ ಹಿಂದೆ ಕಾಂಗ್ರೆಸ್ನಿಂದ ಟಿಕೇಟ್ ನೀಡಿ ಸಮುದಾಯದ ಪರ ಕಾಂಗ್ರೆಸ್ ಇದೆ ಎನ್ನುವುದನ್ನು ಸಾಬೀತುಪಡಿಸಿದೆ.ಅದೇ ತರಹ ಕಳೆದ ಬಾರಿ ಕಾಂಗ್ರೆಸ್ ಹಾಗೂ ಜೆ.ಡಿ.ಎಸ್ ಸಮಿಶ್ರ ಸರರ್ಕಾರವಿದ್ದಾಗ ಶ್ರೀಮತಿ ಸುನಿತಾ ಚವ್ಹಾಣ ಅವರನ್ನು…
ಕೊಲ್ಹಾರ: ಪಟ್ಟಣದ ಮುಳುಗಡೆ ಸಂತ್ರಸ್ತರ ವಿರುದ್ದ ಹೂಡಿರುವ ಮೊಕದ್ದಮೆಯನ್ನು ಹಿಂಪಡೆಯಬೇಕು ಸಂತ್ರಸ್ತರಿಗೆ ಆಗಿರುವ ಅನ್ಯಾಯವನ್ನು ಅಧಿಕಾರಿಗಳು ಸರಿಪಡಿಸಬೇಕು ಇಲ್ಲದಿದ್ದರೆ ಅನಿವಾರ್ಯವಾಗಿ ಅನ್ಯಾಯದ ವಿರುದ್ದ ತಹಶೀಲ್ದಾರ ಕಚೇರಿಯ ಮುಂದೆ ಅಮರಣಾಂತ ಉಪವಾಸ ಸತ್ಯಾಗ್ರಹ ಮಾಡಬೇಕಾಗುತ್ತದೆ ಎಂದು ಮಾಜಿ ಸಚಿವ ಎಸ್.ಕೆ.ಬೆಳ್ಳುಬ್ಬಿ ಹೇಳಿದರು.ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪತ್ರ ಬರೆದು ಆಗ್ರಹಿಸಿರುವ ಅವರು ಪುನರ್ವಸತಿ ಮತ್ತು ಪುನರ್ನಿರ್ಮಾಣ ಇಲಾಖೆಯ ಅಧಿಕಾರಿಗಳ ಬೇಜವಾಬ್ದಾರಿತನದಿಂದ ಕೊಲ್ಹಾರ ಪುನರ್ವಸತಿ ಕೆಂದ್ರದಲ್ಲಿ ನಿವೇಷನಗಳ ಹಂಚಿಕೆಯ ಮಾಲಿಕತ್ವ ಬದಲಾವಣೆ ಹಾಗೂ ಖಾಲಿ ಇರುವ ಜಾಗದಲ್ಲಿ ನಕ್ಷೆಯನ್ನು ತಯಾರಿಸಿ ನಿವೇಶನಗಳ ಹಂಚಿಕೆ ಮಾಡಿರುವ ಕುರಿತು ಹತ್ತು ವರ್ಷಗಳ ಹಿಂದೆ ಸಚಿವ ಶಿವಾನಂದ ಪಾಟೀಲ ವಿಧಾನಸಭೆಯಲ್ಲಿ ಪ್ರಶ್ನೆ ಮಾಡಿದ ಪ್ರಯುಕ್ತ ವಿಚಾರಣೆ ಮಾಡಲು ಅಧಿಕಾರಿಗಳಿಗೆ ಸೂಚಿಸಿದಾಗ ಅಧಿಕಾರಿಗಳು ವಿಚಾರಣೆ ಮಾಡುವ ನೆಪದಲ್ಲಿ ವಿನಾಕಾರಣ ತೊಂದರೆ ಕೊಡುತ್ತಿರುವದನ್ನು ನಾನು ಸಹಿಸುವದಿಲ್ಲ ಎಂದರು.ಕೊಲ್ಹಾರ ಪುನರ್ವಸತಿ ಕೇಂದ್ರವು ೫೦೦ ಎಕರೆ ವಿಶಾಲವಾದ ಜಾಗೆಯನ್ನು ಹೊಂದಿದ್ದು ಹಳೆ ಗ್ರಾಮದ ೧೪೯೮ ಆಸ್ತಿಗಳನ್ನು ಮೂಲಾಧಾರವಾಗಿಟ್ಟುಕೊಂಡು ಪುನರ್ವಸತಿ ಕೆಂದ್ರದಲ್ಲಿ ನಿವೇಷನಗಳನ್ನು ಹಂಚಿಕೆ ಮಾಡುವಾಗ…
ವಿಜಯಪುರ: ನಗರದಲ್ಲಿರುವ ಸಿದ್ಧಸಿರಿ ಸೌಹಾರ್ದ ಸಹಕಾರಿ ಸಂಘ ನಿ. ಮುಖ್ಯ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಕರ್ನಾಟಕ ರಾಜ್ಯ ಸಂಯುಕ್ತ ಸಹಕಾರಿಯ ನಿರ್ದೇಶಕರಾದ ರಾಮನಗೌಡ ಪಾಟೀಲ ಯತ್ನಾಳ ಅವರು, ಕರ್ನಾಟಕ ರಾಜ್ಯಾದ್ಯಂತ ಕಾರ್ಯನಿರ್ವಹಿಸುತ್ತಿರುವ ೧೫೯ ಸಿದ್ಧಸಿರಿ ಸೌಹಾರ್ದ ಶಾಖೆಗಳ ಶೇರುದಾರರು ಹಾಗೂ ಗ್ರಾಹಕರಿಗಾಗಿ ಯುಗಾದಿ ಪ್ರಯುಕ್ತ ಹಿಂದೂ ಕ್ಯಾಲೆಂಡರ್ ಬಿಡುಗಡೆಗೊಳಿಸಿದರು.ನಂತರ ಮಾತನಾಡಿದ ಅವರು, ಯುಗಾದಿ ಅಂಗವಾಗಿ ಬಿಡುಗಡೆಗೊಳಿಸಲಾದ ಹಿಂದೂ ಕ್ಯಾಲೆಂಡರ್ ದಲ್ಲಿ ಹಿಂದೂಗಳ ಹಬ್ಬ ಹರಿದಿನಗಳು, ಮುಹೂರ್ತ, ರಾಹು ಕಾಲ, ಗೂಳಿ ಕಾಲ, ಯಮಗಂಡ ಕಾಲ ಸೇರಿದಂತೆ ಪ್ರತಿ ದಿನದ ಮಹತ್ವ, ಪಂಚಾಂಗದಲ್ಲಿ ಬರುವ ಅನೇಕ ಮಾಹಿತಿಗಳನ್ನು ಕ್ಯಾಲೆಂಡರ್ ನಲ್ಲಿ ಅಳವಡಿಸಲಾಗಿದೆ ಎಂದು ತಿಳಿಸಿದರು.ಜಂಟಿ ವ್ಯವಸ್ಥಾಪಕರಾದ ರಾಘವ ಅಣ್ಣಿಗೇರಿ ಮಾತನಾಡಿ, ಸಿದ್ಧಸಿರಿ ಸೌಹಾರ್ದ ಸಹಕಾರಿಯ ಅಧ್ಯಕ್ಷರು ಹಾಗೂ ನಗರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ಅವರ ಅಪೇಕ್ಷೆಯಂತೆ, ವಿಜಯಪುರ ನಗರದ ಗುರುರಾಜ ಆಚಾರ್ ಹೆರಕಲ್ ಇವರು, ಸಂಪೂರ್ಣ ಮುಹೂರ್ತಗಳನ್ನು ತೆಗೆದು, ಸಮಗ್ರ ಮಾಹಿತಿಗಳನ್ನೊಳಗೊಂಡ ಕ್ಯಾಲೆಂಡರ್ ಸಿದ್ಧಪಡಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ. ಕಳೆದ ೧೦ ವರ್ಷಗಳಿಂದ…
ದೇವರಹಿಪ್ಪರಗಿ: ಚಿತ್ರದುರ್ಗದ ಲೋಕಸಭೆಯ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ತಳವಾರ ಸಮುದಾಯದ ವಿರೋಧಿಯಾಗಿದ್ದು, ಈ ಬಾರಿಯ ಚುನಾವಣೆಯಲ್ಲಿ ತಕ್ಕಪಾಠ ಕಲಿಸಲಾಗುವುದು ಎಂದು ಕೋಲಿ ಕಬ್ಬಲಿಗ ಯುವವೇದಿಕೆ ರಾಜ್ಯಾಧ್ಯಕ್ಷ ಶಿವಾಜಿ ಮೆಟಗಾರ ಹೇಳಿದ್ದಾರೆ.ಪಟ್ಟಣದಲ್ಲಿ ಮಂಗಳವಾರ ಪತ್ರಿಕೆಯೊಂದಿಗೆ ಮಾತನಾಡಿ, ಗೋವಿಂದ ಕಾರಜೋಳ ಕಳೆದ ಬಿಜೆಪಿ ಸರ್ಕಾರದಲ್ಲಿ ಸಮಾಜಕಲ್ಯಾಣ ಇಲಾಖೆಯ ಮಂತ್ರಿಯಾಗಿದ್ದ ಸಮಯದಲ್ಲಿ ತಳವಾರ ಸಮುದಾಯಕ್ಕೆ ಎಸ್.ಟಿ ಮೀಸಲಾತಿ ನೀಡುವ ವಿಚಾರದಲ್ಲಿ ಗೊಂದಲಕ್ಕೆ ಅವಕಾಶ ನೀಡಿ ತಳವಾರ ಎಸ್.ಟಿ ಗೆಜೆಟ್ ಆಗಿದ್ದರೂ ತಮ್ಮ ವಿರೋಧ ವ್ಯಕ್ತಪಡಿಸುವುದರ ಮೂಲಕ ೨ ವರ್ಷ ಮೀಸಲಾತಿ ಸಿಗದಂತೆ ನೋಡಿಕೊಂಡರು. ಆಗ ಇಡೀ ತಳವಾರ ಸಮುದಾಯ ಸತತ ಹೋರಾಟದ ಮೂಲಕ ಎಸ್.ಟಿ ಪ್ರಮಾಣಪತ್ರ ಪಡೆಯುವಂತಾಯಿತು. ಅದಕ್ಕೆ ತಕ್ಕ ಪಾಠವಾಗಿ ೩೫ ಸಾವಿರ ಸಮುದಾಯದ ಮತದಾರರು ಅವರ ವಿರುದ್ಧ ಮತ ಚಲಾಯಿಸಿ ಮುಧೋಳದಲ್ಲಿ ಅವರ ಸೋಲಿಗೆ ಕಾರಣರಾದರು.ಗೋವಿಂದ ಕಾರಜೋಳ ಎಲ್ಲ ಸಮುದಾಯಗಳ ಮೀಸಲಾತಿಯ ವಿರೋಧಿಯಾಗಿದ್ದು, ಅವಕಾಶವಾದಿ ರಾಜಕಾರಣಿಯಾಗಿದ್ದಾರೆ. ಎಲ್ಲಿ ತಳವಾರ ಸಮುದಾಯ ಸೇರಿದಂತೆ ಬೇರೆ ಬೇರೆ ಸಮುದಾಯಗಳಿಗೆ ಮೀಸಲಾತಿ ದೊರೆತರೇ, ಇವರಿಗೆ ಅಧಿಕಾರ…
ಮುದ್ದೇಬಿಹಾಳ: ಕರ್ನಾಟಕ ಭೀಮ್ ಸೇನೆಯ ಜಿಲ್ಲಾ ಉಪಾಧ್ಯಕ್ಷರನ್ನಾಗಿ ತಾಲೂಕಿನ ಯಲ್ಲಪ್ಪ ಚಲವಾದಿಯವರನ್ನು ಆಯ್ಕೆ ಮಾಡಿ ರಾಜ್ಯಾಧ್ಯಕ್ಷ ಶಂಕರ ರಾಮಲಿಂಗಯ್ಯ ಆದೇಶಿಸಿದ್ದಾರೆ.
ವಿಜಯಪುರ: ಜನ ಸೇವೆ ಮಾಡುವುದಕ್ಕೆ ಒಳ್ಳೆಯ ಹೃದಯವಿರಬೇಕೆ ಹೊರತು ಅಧಿಕಾರವಲ್ಲ. ಅಧಿಕಾರವೆಂಬುದು ಕೇವಲ ಸೇವೆ ಮಾಡುವುದಕ್ಕೆ ಇರುವಂತ ಒಂದು ಅವಕಾಶ ಅದನ್ನು ನಾನು ಸಮರ್ಪಕವಾಗಿ ಬಳಕೆ ಮಾಡಿಕೊಂಡಿದ್ದೇನೆ. ನಿಸ್ವಾರ್ಥ ಸೇವೆ ಮಾಡುವ ಮೂಲಕ ಸಮಾಜದ ಹಲವಾರು ರಂಗಗಳಲ್ಲಿ ತೊಡಗಿಸಿಕೊಂಡಿದ್ದೇನೆ. ಅದರ ಒಂದು ಭಾಗವೇ ಇಂದು ಆರೋಗ್ಯ ಕ್ಷೇತ್ರದಲ್ಲಿ ಸಿದ್ಧೇಶ್ವರ ಸಂಸ್ಥೆ ಹೊಸ ಕ್ರಾಂತಿ ಮಾಡುತ್ತಿದೆ ಎಂದು ವಿಜಯಪುರದ ನಗರ ಶಾಸಕರಾದ ಬಸನಗೌಡ ರಾ ಪಾಟೀಲ್ ಯತ್ನಾಳ ಹೇಳಿದರು.ಇಂಡಿ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ನೂತನವಾಗಿ ನಿರ್ಮಾಣ ಮಾಡಲಾದ ಸಿದ್ಧೇಶ್ವರ ೨೪/೭ ಮೆಡಿಕಲ್ನ ಐದನೇ ಮಳಿಗೆಯ ಲೋಕಾರ್ಪಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ವಿಜಯಪುರ ನಗರವನ್ನು ಮಾದರಿಯ ನಗರವನ್ನಾಗಿ ಮಾಡುವ ಉದ್ಧೇಶದಿಂದ ಶತಮಾನದ ಇತಿಹಾಸವುಳ್ಳ ಸಿದ್ಧೇಶ್ವರ ಸಂಸ್ಥೆಯನ್ನು ಆರೋಗ್ಯ ಕ್ಷೇತ್ರದ ಕಡೆಗೆ ಮುಖಮಾಡಿ ನಿಲ್ಲುವಂತೆ ಮಾಡಿದ್ದರ ಪರಿಣಾಮವಾಗಿ ಸಿದ್ಧಸಿರಿ ಹಾಗೂ ಸಿದ್ಧೇಶ್ವರ ಸಂಸ್ಥೆಯ ಸಹಯೋಗದಲ್ಲಿ ಶ್ರೀ ಸಿದ್ಧೇಶ್ವರ ಲೋಕ ಕಲ್ಯಾಣ ಚಾರಿಟೇಬಲ್ ಟ್ರಸ್ಟ್ ಸ್ಥಾಪನೆಯಾಯಿತು. ಇದರ ಮೂಲಕವಾಗಿ ಶ್ರೀ ಈಶ್ವರಗೌಡ ರಾ ಪಾಟೀಲ್…
ಮತದಾನದ ಜಾಗೃತಿಯ ಭಿತ್ತಿ ಪತ್ರಗಳು & ಸಾಮಗ್ರಿ ಹಸ್ತಾಂತರಿಸಿದ ಸಿಇಓ ರಿಷಿ ಆನಂದ ಕರೆ ವಿಜಯಪುರ: ಜಿಲ್ಲೆಯಲ್ಲಿ ಮತದಾನದ ಪ್ರಮಾಣ ಹೆಚ್ಚಿಸುವುದು ನಮ್ಮೆಲ್ಲರ ಜವಾಬ್ದಾರಿ. ಮತದಾನ ಮಾಡುವ ಮೂಲಕ ನಮ್ಮ ಹಕ್ಕನ್ನು ಚಲಾಯಿಸಿ ನಮ್ಮ ಕರ್ತವ್ಯವನ್ನು ಸಮರ್ಪಕವಾಗಿ ನಿಭಾಯಿಸಬೇಕು. ಪ್ರಸ್ತುತ ವರ್ಷ ಲೋಕಸಭಾ ಚುನಾವಣೆ-೨೦೨೪ರ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ವಿಶೇಷವಾಗಿ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಯಶಸ್ವಿಗೊಳಿಸಲು ಉದ್ದೇಶಿಸಲಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ರಿಶಿ ಆನಂದ ಮಾತನಾಡಿದರು.ಮಂಗಳವಾರ ವಿಜಯಪುರ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಲೋಕಸಭಾ ಚುನವಣೆ-೨೦೨೪ರ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ತಾಲೂಕುಗಳ ತಾಲೂಕು ಪಂಚಾಯತಿಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಮತದಾನದ ಜಾಗೃತಿ ಕುರಿತು ಭಿತ್ತಿ ಪತ್ರಗಳು, ಬ್ಯಾನರ್ಗಳು, ಜಿಂಗಲ್ಸ್, ಸೆಲ್ಫಿಸ್ಟ್ಯಾಂಡ್ಗಳು ಹಾಗೂ ಇತರೆ ಸಾಮಗ್ರಿಗಳನ್ನು ಹಸ್ತಾಂತರಿಸಿ ಅವರು ಮಾತನಾಡಿದರು.ಜಿಲ್ಲೆಯ ಪ್ರತಿ ಗ್ರಾಮಗಳಲ್ಲಿ ಶೇ.೧೦೦ರಷ್ಟು ಮತದಾನ ಗುರಿ ಮುಟ್ಟಲು ಅಧಿಕಾರಿಗಳು ಕಾರ್ಯೋನ್ಮುಖರಾಗಬೇಕು. ಮತದಾನದ ಕುರಿತು ಜಾಗೃತಿ ಮೂಡಿಸುವ ಕಾರ್ಯವಾಗಬೇಕಾಗಿದೆ. ಗ್ರಾಮೀಣ ಮಟ್ಟದಲ್ಲಿ ಅನೇಕ ಜನರು ಬೇರೆ ರಾಜ್ಯ ಹಾಗೂ ಬೇರೆ ಜಿಲ್ಲೆಗಳಿಗೆ ವಲಸೆ ಹೋಗಿರುತ್ತಾರೆ…
ವಿಜಯಪುರ: ಮಂಗಳವಾರ ನಡೆದ ಎಸ್ಎಸ್ಎಲ್ಸಿ ಗಣಿತ ಪತ್ರಿಕೆಗೆ ಜಿಲ್ಲೆಯ ೧೨೭ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಜರುಗಿದ್ದು, ಪರೀಕ್ಷೆಗೆ ನೋಂದಣಿಯಾದ ಒಟ್ಟು ೪೦,೬೨೬ ವಿದ್ಯಾರ್ಥಿಗಳಲ್ಲಿ ೩೯,೭೦೦ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ ೯೨೬ ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ ಎಂದು ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಎನ್.ಎಚ್. ನಾಗೂರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
