Author: editor.udayarashmi@gmail.com

ವಿಜಯಪುರ: ಚಡಚಣ ತಾಲೂಕಿನ ಬರಡೋಲಾ ಗ್ರಾಮದ ಸರ್ಕಾರಿ ಉರ್ದು ಕಿರಿಯ ಪ್ರಾಥಮಿಕ ಶಾಲಾ ಶಿಕ್ಷಕಿಯಾದ ಬೀಬಿಆಯಿಶಾ ಅಬ್ದುಲ್‌ಅಜೀಬ್ ಖಾಜಿ ಅವರು ದಿನಾಂಕ ೩೧-೦೫-೨೦೨೩ರಿಂದ ಶಾಲಾ ಕರ್ತವ್ಯಕ್ಕೆ ಅನಧಿಕೃತ ಗೈರು ಆಗಿದ್ದು, ಅವರು ಈ ಕೂಡಲೇ ಕರ್ತವ್ಯಕ್ಕೆ ಹಾಜರಾಗುವಂತೆ ಚಡಚಣ ಕ್ಷೇತ್ರ ಶಿಕ್ಷಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ವಿಜಯಪುರದಲ್ಲಿ ನಡೆದ ಪೊಲೀಸ್ ಕಲ್ಯಾಣ ಹಾಗೂ ಧ್ವಜ ದಿನಾಚರಣೆ ವಿಜಯಪುರ: ಪೊಲೀಸ್ ಪೇದೆಯಿಂದ ಹಿಡಿದು ಐಜಿಪಿವರೆಗಿನ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಯ ಸೇವೆಯು ಸದಾ ಸ್ಮರಿಸುವಂತಾಗಿರುತ್ತದೆ ಎಂದು ಜಿಲ್ಲಾಧಿಕಾರಿ ಟಿ. ಭೂಬಾಲನ್ ಹೇಳಿದರು.ನಗರದ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಪೊಲೀಸ್ ಇಲಾಖೆಯಿಂದ ಹಮ್ಮಿಕೊಂಡಿದ್ದ ವಿಜಯಪುರ ಜಿಲ್ಲಾ ಪೊಲೀಸ್ ಕಲ್ಯಾಣ ಹಾಗೂ ಧ್ವ್ವಜ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ದೇಶದಲ್ಲಿ ಎಷ್ಟೇ ಸಮಸ್ಯೆಗಳು ಉಧ್ಭವಿಸಿದರೂ ಕಾನೂನನ್ನು ಅನುಷ್ಠಾನಗೊಳಿಸಿ ಸಾರ್ವಜನಿಕರು ನೆಮ್ಮದಿಯಿಂದ ಇರಲು ಪೊಲೀಸ್ ಇಲಾಖೆ ಶ್ರಮಿಸುವದರಿಂದ ಪೊಲೀಸ್ ಸೇವೆ ಸ್ಮರಣೀಯವಾಗಿದೆ ಎಂದರು.ನಿವೃತ್ತರಾಗಿರುವ ಪೊಲೀಸ್ ಸಿಬ್ಬಂದಿ ಮತ್ತು ಅಧಿಕಾರಿಗಳ ಸೇವೆಯನ್ನು ಸ್ಮರಿಸಿ, ಗೌರವಿಸುವುದವುದಕ್ಕಾಗಿಯೇ ಪೊಲೀಸ್ ಕಲ್ಯಾಣ ಹಾಗೂ ಧ್ವ್ವಜ ದಿನಾಚರಣೆ ಆಚರಿಸಲಾಗುತ್ತದೆ. ನಿವೃತ್ತರಾದವರಿಗೆ ಸಮಸ್ಯೆಗಳೆನಾದರೂ ಇದ್ದಲ್ಲಿ ಜಿಲ್ಲಾಡಳಿತವನ್ನು ಸಂಪರ್ಕಿಸಿದಲ್ಲಿ ಸಮಸ್ಯೆ ಬಗೆಹರಿಸಲು ಪ್ರಯತ್ನಿಸಲಾಗುವುದು. ವಿವಿಧ ಇಲಾಖೆಗಳಿಂದ ಸಿಗುವ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳಬೇಕು. ಪ್ರಸ್ತುತ ಚುನಾವಣೆ ಕರ್ತವ್ಯಕ್ಕೆ ನಿಯೋಜನೆಗೊಂಡಿರುವ ಪೊಲೀಸ್ ಸಿಬ್ಬಂದಿ ಉತ್ಸಾಹದಿಂದ ಕರ್ತವ್ಯ ನಿರ್ವಹಿಸುವದರೊಂದಿಗೆ ನ್ಯಾಯ ಸಮ್ಮತ, ನಿಷ್ಪಕ್ಷಪಾತವಾಗಿ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದರು.ಜಿಲ್ಲಾ ಪಂಚಾಯತ್…

Read More

ವಿಜಯಪುರ: ಮತದಾರರಲ್ಲಿ ರಾಜಕೀಯ ಪ್ರಜ್ಞೆ ಮೂಡಿದರೆ, ದೇಶದಲ್ಲಿ ಮತ್ತು ನಮ್ಮ ಲೋಕಸಭೆ ಕ್ಷೇತ್ರದಲ್ಲೂ ಬದಲಾವಣೆ ನಿಶ್ಚಿತ ಎಂದು ಕಾಂಗ್ರೆಸ್‌ನ ಲೋಕಸಭೆ ಅಭ್ಯರ್ಥಿ ಪ್ರೊ.ರಾಜು ಆಲಗೂರ ವಿಶ್ವಾಸ ವ್ಯಕ್ತಪಡಿಸಿದರು.ತಾಲೂಕಿನ ಮುಳಸಾವಳಗಿಯಲ್ಲಿ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಪ್ರಚಾರ ಸಭೆಯಲ್ಲಿ ಮಾತನಾಡಿ, ತಮಗೊಂದು ಅವಕಾಶ ನೀಡಿದರೆ ಜಿಲ್ಲೆಯ ಅಭಿವೃದ್ಧಿಗೆ ಬದ್ಧ ಎಂದರು. ರಾಜ್ಯ ಸರಕಾರದ ಕೆಲಸ ಕೇದ್ರದಲ್ಲೂ ಮುಂದುವರಿಯಲಿವೆ. ಕೆಲಸ ಮಾಡುವವರಿಗೆ ಆದ್ಯತೆ ನೀಡಿ ಎಂದು ಮನವಿ ಮಾಡಿದರು.ಮಾಜಿ ಶಾಸಕ ಶರಣಪ್ಪ ಸುಣಗಾರ ಮಾತನಾಡಿ, ಮೋದಿ ಮತ್ತು ಸದ್ಯದ ಸಂಸದರು ಬರೀ ಮಾತೇ ಆಡುತ್ತಾರೆ. ದಶಕದಿಂದ ದೇಶಕ್ಕಾಗಲೀ ವಿಜಯಪುರ ಲೋಕಸಭೆ ಕ್ಷೇತ್ರಕ್ಕಾಗಲಿ ನಯಾ ಪೈಸೆಯ ಲಾಭವಾಗಿಲ್ಲ ಎಂದು ಹೇಳಿದರು. ರಾಜ್ಯ ಸರಕಾರ ಹೇಳಿದಂತೆ ನಡೆದುಕೊಂಡಿದೆ ಎನ್ನುವುದಕ್ಕೆ ಗ್ಯಾರಂಟಿಗಳು ಲಾಗೂ ಆಗಿದ್ದೇ ಸಾಕ್ಷಿ. ಹೆಣ್ಣುಮಕ್ಕಳು, ಯುವಕರಲ್ಲದೇ ಎಲ್ಲ ರ‍್ಗದ ಜನಕ್ಕೆ ಪ್ರತಿ ತಿಂಗಳು ಆರು ಸಾವಿರ ರೂ.ನಷ್ಟು ಹಣ ಬಂದು, ರ‍್ಥಿಕ ಸ್ಥಿತಿ ಸುಧಾರಿಸಿದೆ. ಬಡವರ, ದೀನರ ಬದುಕು ಹಸನಾಗಿದೆ. ಸದ್ಯ ಕಾಂಗ್ರೆಸ್‌ನ ಲೋಕಸಭೆ ಅಭ್ರ‍್ಥಿಗೆ ಮತ…

Read More

ಕನ್ನೊಳ್ಳಿಯ ಪ್ರಚಾರ ಸಭೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ರಾಜು ಆಲಗೂರ ನುಡಿ ಸಿಂದಗಿ: ಒಂದು ಸೂಜಿಯೂ ತಯಾರಾಗದ ಸ್ಥಿತಿಯಲ್ಲಿದ್ದ, ಬಡತನವನ್ನೇ ಹೊದ್ದಿದ್ದ ದೇಶವನ್ನು ಆರ‍್ಥಿಕವಾಗಿ ಉಸಿರಾಡುವಂತೆ ಮಾಡಿದ್ದು ಕಾಂಗ್ರೆಸ್ ಪಕ್ಷ ಎಂದು ಕಾಂಗ್ರೆಸ್‌ನ ಲೋಕಸಭೆ ಅಭ್ಯರ್ಥಿ ಪ್ರೊ.ರಾಜು ಆಲಗೂರ ಹೇಳಿದರು.ಸಿಂದಗಿ ತಾಲ್ಲೂಕಿನ ಕನ್ನೊಳ್ಳಿಯಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿ, ಸಂವಿಧಾನ ರಕ್ಷಿಸಿದ್ದು ನಾವು. ದುರ‍್ಬಲರನ್ನು ಎತ್ತಿ ಹಿಡಿದದ್ದು ನಮ್ಮ ಪಕ್ಷ. ಬರೀ ಮಾತಿನಿಂದ ಹೊಟ್ಟೆ ತುಂಬಿಸುತ್ತಿರುವವರು ಈಗ ಎಲ್ಲವೂ ನಾವೇ ಮಾಡಿದ್ದೇವೆ ಎನ್ನುತ್ತಿದ್ದಾರೆ ಎಂದರು.ಪ್ರಧಾನಿ ಮೋದಿಯವರೇ ಗ್ಯಾರಂಟಿಗಳನ್ನು ಟೀಕಿಸಿದರು. ಸದ್ಯ ಅವರೇ ಸಿದ್ದರಾಮಯ್ಯರ ಆಡಳಿತದಿಂದ ಪ್ರೇರಿತರಾಗಿ ಅವರೇ ‘ಮೋದಿ ಗ್ಯಾರಂಟಿ’ ಎಂದು ಪ್ರಚಾರ ಪಡೆಯುತ್ತಿದ್ದಾರೆ. ಕಳೆದ ಹತ್ತು ವರ‍್ಷಗಳಲ್ಲಿ ಏನೇನೂ ಮಾಡಲಿಲ್ಲ. ನುಡಿದಂತೆ ನಡೆದವರು ನಾವು. ಜನರಿಗೆ ಹೇಳಿದಂತೆ ರಾಜ್ಯ ಸರಕಾರ ನಡೆದುಕೊಂಡಿದೆ. ಹೆಣ್ಣುಮಕ್ಕಳ, ಯುವಕರ ಮನ ಗೆದ್ದಿದೆ. ಹೀಗಾಗಿ ಕೇಂದ್ರದಲ್ಲೂ ಕಾಂಗ್ರೆಸ್ ಅಧಿಕಾರ ಹಿಡಿದರೆ ಅಲ್ಲಿಯೂ ಗ್ಯಾರಂಟಿಗಳು ಜಾರಿಯಾಗಲಿವೆ. ಜಿಗಜಿಣಗಿಯವರು ಮೂರು ಸಲ ಸಂಸದರಾದರೂ ಒಂದು ಪೈಸೆಯ ಕೆಲಸ ಮಾಡಿಲ್ಲ,…

Read More

ವರುಣಾ ಕ್ಷೇತ್ರದ ಸಾರ್ವಜನಿಕ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮೈಸೂರು: ಮೈಸೂರು-ಕೊಡಗು ಹಾಗೂ ಚಾಮರಾಜನಗರ ಲೋಕಸಭಾ ಕ್ಷೇತ್ರ ಗೆಲ್ಲಲು ಪಣ ತೊಟ್ಟಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ತಾವು ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರೆಯಬೇಕು ಎಂದರೆ ಈ ಚುನಾವಣೆಯಲ್ಲಿ 60 ಸಾವಿರ ಲೀಡ್ ಕೊಡಬೇಕು ಎಂದು ತಾವು ಪ್ರತಿನಿಧಿಸುತ್ತಿರುವ ವರುಣಾ ಕ್ಷೇತ್ರದ ಮತದಾರರಿಗೆ ಕೇಳಿಕೊಂಡಿದ್ದಾರೆ.ಸೋಮವಾರ ಬಿಳಿಗೆರೆಯಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಸಿದ್ದರಾಮಯ್ಯ, ನಾನು ಸಿಎಂ ಸ್ಥಾನದಲ್ಲಿ ಇರಬೇಕೋ ಬೇಡವೋ? ನಾನು ಸಿಎಂ ಸ್ಥಾನದಲ್ಲಿರಬೇಕು ಅಂದರೇ ವರುಣಾ ಕ್ಷೇತ್ರದಲ್ಲಿ 60 ಸಾವಿರ ಲೀಡ್ ಕೊಟ್ಟು ಕಾಂಗ್ರೆಸ್ ಅಭ್ಯರ್ಥಿಯನ್ನು ಗೆ‍ಲ್ಲಿಸಿ ಎಂದು ಮನವಿ ಮಾಡಿದರು.ವರುಣಾ ನನ್ನ ಪಾಲಿಗೆ ಅದೃಷ್ಟದ ಕ್ಷೇತ್ರ. ನಿಮ್ಮಿಂದ ಎರಡು ಬಾರಿ ಮುಖ್ಯಮಂತ್ರಿಯಾದೆ. ವರುಣಾ ಕ್ಷೇತ್ರದಲ್ಲಿ 60 ಸಾವಿರ ಲೀಡ್ ಕೊಡಿ. ನನಗಿಂತ ಹೆಚ್ಚು ಲೀಡ್ ಕೊಟ್ಟು ಸುನಿಲ್ ಬೋಸ್ ಗೆಲ್ಲಿಸಿ. ಆಗ ನನ್ನನ್ನು ಯಾರೂ ಮುಟ್ಟಲ್ಲ ಎಂದು ಹೇಳಿದರು.ನಮ್ಮ ಕಾಂಗ್ರೆಸ್ ಪಕ್ಷದ ಗ್ಯಾರಂಟಿಗಳಿಂದಾಗಿ ರಾಜ್ಯದಲ್ಲಿ ಹೆಣ್ಣುಮಕ್ಕಳ ಆರ್ಥಿಕ‌ ಸಾಮರ್ಥ್ಯ ಹೆಚ್ಚಿದೆ. ದುಡಿಯುವ…

Read More

“ವೀಣಾಂತರಂಗ*- ವೀಣಾ ಹೇಮಂತ್ ಗೌಡ ಪಾಟೀಲ್, ಮುಂಡರಗಿ-ಗದಗ ವಿಶ್ವದ ಅತಿ ದೊಡ್ಡ ಪ್ರಜಾತಂತ್ರ ರಾಷ್ಟ್ರವಾದ ಭಾರತದಲ್ಲಿ ಇದೀಗ ಮತ್ತೊಂದು ಬಾರಿ ಚುನಾವಣೆ ಎಂಬ ಪ್ರಜಾಪ್ರಭುತ್ವದ ಮಹಾಯಜ್ಞ ಪ್ರಾರಂಭವಾಗಿದೆ. ಭಾರತ ಒಂದು ಸಾಂವಿಧಾನಿಕ ರಾಷ್ಟ್ರವಾಗಿದ್ದು ಇಲ್ಲಿ ಗಣತಂತ್ರ ವ್ಯವಸ್ಥೆಯು ಜಾರಿಯಲ್ಲಿದೆ. 29 ರಾಜ್ಯಗಳ 550ಕ್ಕೂ ಹೆಚ್ಚು ಲೋಕಸಭಾ ಸೀಟುಗಳು ಮತ್ತು ನಮ್ಮ ಕರ್ನಾಟಕ ರಾಜ್ಯದಲ್ಲಿ 224 ವಿಧಾನಸಭಾ ಸೀಟುಗಳು ಮತ್ತು 28 ಲೋಕಸಭಾ ಸೀಟುಗಳನ್ನು ಹೊಂದಿರುವ ವಿಶ್ವದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಪ್ರತಿ ಐದು ವರ್ಷಕ್ಕೊಮ್ಮೆ ಪ್ರಜಾಪ್ರತಿನಿಧಿಗಳ ಆಯ್ಕೆ ನಡೆಯುತ್ತದೆ. ವಿವಿಧ ರಾಷ್ಟ್ರೀಯ ಪಕ್ಷಗಳು ತಮ್ಮ ಪಕ್ಷದ ಪ್ರಣಾಳಿಕೆಗಳೊಂದಿಗೆ ಜನರ ಅಭಿವೃದ್ಧಿಗಾಗಿ ಕಾರ್ಯನಿರ್ವಹಿಸುವ ಪಣತೊಟ್ಟು ಚುನಾವಣೆಯ ಅಖಾಡಕ್ಕೆ ಇಳಿಯುತ್ತವೆ.ಗ್ರಾಮ ಪಂಚಾಯತಿ, ಜಿಲ್ಲಾ ಪಂಚಾಯತಿ, ಪುರಸಭೆ, ನಗರ ಸಭೆ, ಮಹಾನಗರಪಾಲಿಕೆ ವಿಧಾನಸಭಾ ಸದಸ್ಯರು ಮೆಂಬರ್ ಆಫ್ ಲೆಜಿಸ್ಲೇಟಿವ್ ಅಸೆಂಬ್ಲಿ (ಮೇಲ್ಮನೆ ಮತ್ತು ಕೆಳಮನೆ ಸದಸ್ಯರು) ಮೆಂಬರ್ ಆಫ್ ಲೆಜಿಸ್ಲೇಟಿವ್ ಕೌನ್ಸಿಲ್ ಸದಸ್ಯರು ರಾಜ್ಯದಲ್ಲಿ ಆಡಳಿತದ ಭಾಗವಾಗಿ ಚುನಾಯಿಸಲ್ಪಟ್ಟರೆ ಲೋಕಸಭೆಯಲ್ಲಿ ಲೋಕಸಭಾ ಮತ್ತು ರಾಜ್ಯಸಭಾ…

Read More

ವಿಜಯಪುರ: ವಿಜಯಪುರದಲ್ಲಿ ಬೇಬಿ ಸೈನ್ಸ್ ಐವಿಎಫ್ ಕ್ಲಿನಿಕ್ಸ್ ಪ್ರಾರಂಭವಾಗಿದೆ. ಇದರಿಂದ ಗ್ರಾಮಾಂತರ ಜನರಿಗೂ ಬಂಜೆತನ ಸಮಸ್ಯೆ ಪರಿಹರಿಸಿಕೊಳ್ಳಲು ಸೂಕ್ತವಾಗಲಿದೆ ಎಂದು ಜಿಲ್ಲಾ ಶಸ್ತ್ರ ಚಿಕಿತ್ಸಕರಾದ ಡಾ. ಶಿವಾನಂದ ಮಾಸ್ತಿಹೊಳಿ ಇಂದಿಲ್ಲಿ ಹೇಳಿದರು.ಬೇಬಿ ಸೈನ್ಸ್ ಐವಿಎಫ್ ಕ್ಲಿನಿಕ್ಸ್ವು ನಗರದ ಹೋಟೇಲ್‌ದಲ್ಲಿ ಹೆರಿಗೆ ಮತ್ತು ಪ್ರಸೂತಿ ರೋಗ ತಜ್ಞರಿಗಾಗಿ ಏರ್ಪಡಿಸಿದ ಬಂಜೆತನ ನಿವಾರಣಾ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡುತ್ತ, ಇದು ಕೇವಲ ಮೆಟ್ರೋ-ಪಾಲಿಟಿನ್ ನಗರಗಳಲ್ಲಿ ಸಿಗುವ ಬಂಜೆತನ ಎಂಬ ಸಮಸ್ಯೆಗೆ ಪರಿಹಾರವನ್ನು ಈಗ ಜಿಲ್ಲಾ ಕೇಂದ್ರಗಳಲ್ಲಿ ಸಿಗುವಂತೆ ಅನೇಕ ಕ್ಲಿನಿಕ್ಸ್ ಹುಟ್ಟಿಕೊಳ್ಳುತ್ತಿವೆ. ಅದರಲ್ಲಿ ಬೇಬಿ ಸೈನ್ಸ್ ಐವಿಎಫ್ ಕ್ಲಿನಿಕ್ಸ್ವು ಪ್ರಾರಂಭವಾಗಿದ್ದು, ಬಂಜೆತನ ಸಮಸ್ಯೆಯಿಂದ ಬಳಲುವ ಗ್ರಾಮಾಂತರ ರೋಗಿಗಳು ತಮ್ಮ ಸಮೀಪದ ಕೇಂದ್ರಗಳಲ್ಲಿ ಪಡೆದುಕೊಳ್ಳಲು ಸಹಕಾರಿಯಾಗುತ್ತದೆ ಎಂದವರು ಹೇಳಿದರು.ಈ ಸೇವೆಯಲ್ಲಿ ೧೬ ವರ್ಷ ಸಕ್ರೀಯವಾಗಿ ಸೇವೆ ಸಲ್ಲಿಸಿದ ಬೇಬಿ ಸೈನ್ಸ್ ಐವಿಎಫ್ ಕ್ಲಿನಿಕ್ಸ್ದ ವ್ಯವಸ್ಥಾಪಕ ನಿರ್ದೇಶಕರಾದ ಡಾ. ಸಿ.ಎಸ್.ಮಂಜುನಾಥ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ನಮ್ಮ ಕ್ಲೀನಿಕ್ ಬೆಂಗಳೂರು, ದೆಹಲಿ, ಗುರುಗಾಂ, ಮುಂಬೈ, ಬಿಜಾಪುರ, ಮಂಗಳೂರು ಕೊಲಾರ…

Read More

ಚಿಮ್ಮಡ: ಪಾದಯಾತ್ರೆ ಮೂಲಕ ಆಂಧ್ರಪ್ರದೇಶದ ಶ್ರೀಶೈಲ ಕ್ಷೇತ್ರಕ್ಕೆ ಹೊರಟಿದ್ದ ಗ್ರಾಮದ ಶ್ರೀಶೈಲ ಮಲ್ಲಪ್ಪ ಧಡೂತಿ (೨೪) ಹೃದಯಾಘಾತದಿಂದಾಗಿ ನಿಧನ ಹೊಂದಿದ ಘಟನೆ ಶನಿವಾರ ನಡೆದಿದೆ.ಮಾರ್ಚ ೨೫ ರಂದು ಗ್ರಾಮದಿಂದ ಪಾದಯಾತ್ರೆ ಮೂಲಕ ಶ್ರೀಶೈಲ ಕ್ಷೇತ್ರಕ್ಕೆ ಹೊರಟಿದ್ದ ಶ್ರೀಶೈಲ ಧಡೂತಿ ರಾಯಚೂರ ಜಿಲ್ಲೆಯ ಮಾನ್ವಿ ತಾಲೂಕಿನ ಚಿಕ್ಕ ಕೋಟ್ನೆಕಲ್ ಬಳಿ ದಣಿದು ಮಲಗಿದ್ದಾಗ ಅಲ್ಲಿಯೇ ಹೃದಯಾಘಾತದಿಂದ ನಿಧನಹೊಂದಿದ್ದಾನೆ.ಮಾನ್ವಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ.

Read More

ಚಿಮ್ಮಡ: ಗ್ರಾಮದ ಸರ್ವಧರ್ಮಿಯರ ಆರಾದ್ಯ ದೈವ ಶ್ರೀ ಯಮನೂರಪ್ಪನ (ರಾಜಾಬಾಗ್ ಸವಾರ) ಉರುಸು ಮಹೋತ್ಸವ ಎರಡು ದಿನಗಳಕಾಲ ವಿಜ್ರಂಬನೆಯಿಂದ ನಡೆದು ಶನಿವಾರ ರಾತ್ರಿ ಪ್ರಸಾದ ವಿತರಣೆಯೊಂದಿಗೆ ಮಂಗಲಗೊಂಡಿತು.ಗ್ರಾಮದ ಎಲ್ಲ ಸಮುದಾಯಗಳ ಬಕ್ತಾದಿಗಳು ಸೇರಿ ಸೌಹಾರ್ದ್ಯತೆಯಿಂದ ನೆರವೇರಿಸಲಾಗುವ ಈ ಉರುಸು ಮಹೋತ್ಸವದಲ್ಲಿ ಶುಕ್ರವಾರ ಗಂಧ ಕಾರ್ಯಕ್ರಮ ನೆರವೇರಿದರೆ, ಶನಿವಾರದಂದು ಗ್ರಾಮದ ಸರ್ವ ಧರ್ಮೀಯ ಭಕ್ತರಿಂದ ಮುದ್ದೆ ಸಕ್ಕರೆ, ಗಂಧದ ನೈವೆದ್ಯ ಅರ್ಪಣೆ ಕಾರ್ಯಕ್ರಮ ಹಾಗೂ ರಾತ್ರಿ ಸಾರ್ವಜನಿಕ ಪ್ರಸಾದ ವ್ಯವಸ್ಥೆ ಕೈಗೊಳ್ಳಲಾಗಿತ್ತು.ಇತರೆಲ್ಲೆಡೆ ಮುಸ್ಲೀಮ್ ಬಾಂಧವರಿಂದ ನೆರವೇರಲ್ಪಡುವ ಈ ಉರುಸು ಮಹೋತ್ಸವವನ್ನು ಗ್ರಾಮದ ಸರ್ವ ಸಮಾಜ ಬಾಂಧವರ ಸಹಕಾರದೊಂದಿಗೆ ರೈತರಾದ ಬಳಗಾರ ಸಹೋದರರು ತಮ್ಮ ಸ್ವಂತ ಖರ್ಚಿನಿಂದ ಪ್ರತಿವರ್ಷ ವಿಜ್ರಂಭಣೆಯಿಂದ ಉರುಸು ನೆರವೇರಿಸಿಕೊಂಡು ಬರುತ್ತಿದ್ದುದು ಈ ಭಾಗದ ವಿಶೇಷ.

Read More

ವಿಜಯಪುರ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪ್ರತಿಯೊಬ್ಬ ಅರ್ಹ ಮತದಾರರು ಕಡ್ಡಾಯವಾಗಿ ಮತ ಚಲಾಯಿಸುವ ಮೂಲಕ ಸುಭದ್ರ ರಾಷ್ಟ್ರ ನಿರ್ಮಾಣದಲ್ಲಿ ಕೈ ಜೋಡಿಸಬೇಕು ಎಂದು ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಶಿವಾನಂದ ಮಾಸ್ತಿಹೊಳಿ ಕರೆ ನೀಡಿದರು.ಮಾ.೩೧ರ ರವಿವಾರದಂದು ನಗರದ ಜಿಲ್ಲಾ ಆಸ್ಪತ್ರೆಯಲ್ಲಿ ರೋಟರಿ ಕ್ಲಬ್ ವಿಜಯಪುರ ಇವರ ಸಹಯೋಗದಲ್ಲಿ ಹಮ್ಮಿಕೊಂಡ ಸ್ವಚ್ಛ ಭಾರತ, ಮಿತ ನೀರು ಬಳಕೆ ಹಾಊ ಮತದಾರ ಪ್ರತಿಜ್ಞಾವಿಧಿ ಸ್ವೀಕಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿ, ಮನುಷ್ಯನ ಉತ್ತಮ ಆರೋಗ್ಯ ಕಾಪಾಡುವಲ್ಲಿ ಸ್ವಚ್ಛತ್ರೆ ಅತಿ ಮುಖ್ಯವಾಗಿರುತ್ತದೆ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರು ಸ್ವಚ್ಛತೆಗೆ ಆದ್ಯತೆ ನೀಡಬೇಕು. ಅದರಂತೆ ಜಗತ್ತಿನ ಅತ್ಯಅಮೂಲ್ಯವಾದ ವಸ್ತು ನೀರು. ಇದರ ಸದುಪಯೋಗವಾಗಬೇಕು. ನೀರು ಎಲ್ಲೆಂದರಲ್ಲಿ ಚೆಲ್ಲದೇ ಅವಶ್ಯಕತೆಯನುಸಾರವಾಗಿ ಮಿತವಾಗಿ ನೀರನ್ನು ಬಳಸುವಂತೆ ಕರೆ ನೀಡಿದ ಅವರು, ಅತಿಯಾದ ಬಳಕೆಯಿಂದ ಮುಂದಿನ ಪೀಳಿಗೆ ಮೇಲೆ ಬೀರುವ ಪರಿಣಾಮ ಕುರಿತು ವಿವರವಾಗಿ ಮಾತನಾಡಿದರು.ಇದೇ ಸಂದರ್ಭದಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಎಲ್ಲರಿಗೆ ಮತದಾನ ಪ್ರತಿಜ್ಞಾ ವಿಧಿ ಬೋಧಿಸಲಾಯಿತು.ಅಧ್ಯಕ್ಷರು ರೋಟರಿ ಕ್ಲಬ್ ಅಧ್ಯಕ್ಷರಾದ ಮಲ್ಲ್ಲಿರ್ಕಾಜುನ ಕಲಾದಗಿ…

Read More