Author: editor.udayarashmi@gmail.com

ವಿಜಯಪುರ ಜಿಲ್ಲಾಡಳಿತದಿಂದ ವಿಜೃಂಭಣೆಯ ಅಂಬೇಡ್ಕರ ಜಯಂತ್ಯುತ್ಸವ | ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಡಾ. ಎಂ.ಬಿ.ಪಾಟೀಲ ಅಭಿಮತ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಬುದ್ದ ಬಸವ, ಅಂಬೇಡ್ಕರ್ ಅವರ ವಿಚಾರಧಾರೆಗಳು ಎಂದೆಂದಿಗೂ ಪ್ರಸ್ತುತವಾಗಿದ್ದು, ಅವರ ತತ್ವಾದರ್ಶಗಳನ್ನು ಪ್ರತಿಯೊಬ್ಬರೂ ನಿತ್ಯ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲ ಸೌಲಭ್ಯ ಅಭಿವೃದ್ಧಿ ಇಲಾಖೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಂ.ಬಿ. ಪಾಟೀಲ ಹೇಳಿದರು.ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಮಂಗಳವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡ ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ ೧೩೫ನೇ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಪ್ರತಿಯೊಬ್ಬ ಮಹಾಪುರುಷರು ಮೂಢನಂಬಿಕೆಯಂತಹ ಅನಿಷ್ಠ ಪದ್ಧತಿಗಳ ವಿರುದ್ಧ ತಮ್ಮ ಚಿಂತನೆಗಳನ್ನು ಅರುಹಿದವರು. ಘನತೆಯಿಂದ ಬದುಕುವ ಚಿಂತನೆಗಳನ್ನು ಜಗತ್ತಿಗೆ ಸಾರಿದ್ದಾರೆ. ಹಾಗಾಗಿ ಮಹಾನ್ ಪುರುಷರ ಚಿಂತನೆಗಳು ಎಲ್ಲ ಕಾಲಕ್ಕೂ ಪ್ರಸ್ತುತ ಎಂದರು. ಸಮಾನತೆ,ಸ್ವಾತಂತ್ರ‍್ಯ, ಅಭಿವ್ಯಕ್ತಿ, ಗೌರವಯುತ ಹಾಗೂ ಘನತೆ ಜೀವನ…

Read More

ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಭಾರತರತ್ನ ಡಾ.ಅಂಬೇಡ್ಕರ್ ಯಾವುದೇ ಜಾತಿ, ಧರ್ಮ, ಮತ, ಪಂಥಗಳಿಗೆ ಸೀಮಿತವಾಗದೇ ಮಹಾಮಾನವತಾವಾದಿಯಾಗಿ ವಿಶ್ವಮಾನವರೆನಿಸಿದ್ದಾರೆ ಎಂದು ತಹಶೀಲ್ದಾರ ನಿಂಗಪ್ಪ ಬಿರಾದಾರ ಹೇಳಿದರು.ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆ ಹಾಗೂ ಪಟ್ಟಣ ಪಂಚಾಯಿತಿಯಿಂದ ಮಂಗಳವಾರ ಜರುಗಿದ ಡಾ. ಅಂಬೇಡ್ಕರವರ ೧೩೫ ನೇ ಜಯಂತಿಯಲ್ಲಿ ಪಾಲ್ಗೊಂಡು, ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಪಂಚಾಯಿತಿ ಸಭಾಭವನದ ಕಾರ್ಯಕ್ರಮದಲ್ಲಿ ಮಾತನಾಡಿದರು.ಕರ್ನಾಟಕ ಬ್ಯಾಂಕ್ ಬಬಲೇಶ್ವರ ಶಾಖೆಯ ವ್ಯವಸ್ಥಾಪಕ ನಟರಾಜ ಮಿಶಿ ಉಪನ್ಯಾಸ ನೀಡಿ, ಅಂಬೇಡ್ಕರ್ ಅವರ ಸಮಗ್ರ ಜೀವನವೇ ಆದರ್ಶ. ಸಂವಿಧಾನದ ಪಿತಾಮಹರಾದ ಇವರು ಮಾನವೀಯ ಮೌಲ್ಯಗಳು, ಶಿಕ್ಷಣ ಹಾಗೂ ಸಮಾನತೆಯ ಪ್ರತಿಪಾದನೆಯ ಪ್ರಮುಖ ಹರಿಕಾರರೆನಿಸಿದ್ದಾರೆ ಎಂದರು.ದಲಿತ ಸಮಾಜ ಸುಧಾರಣಾ ಸಮೀತಿ ಅಧ್ಯಕ್ಷ ಕಾಶೀನಾಥ ತಳಕೇರಿ, ಪ್ರಕಾಶ ಗುಡಿಮನಿ, ಮಾತನಾಡಿದರು. ಇದೇ ಸಂದರ್ಭದಲ್ಲಿ ಮೊಹರೆ ಹಣಮಂತ್ರಾಯ ವೃತ್ತದಿಂದ ಪಟ್ಟಣ ಪಂಚಾಯಿತಿವರೆಗೆ ಅಂಬೇಡ್ಕರ್ ಭಾವಚಿತ್ರದ ಮೆರವಣಿಗೆ ಜರುಗಿತು.ತಾಲ್ಲೂಕು ಪಂಚಾಯಿತಿ ಇಓ ಭಾರತಿ ಚೆಲುವಯ್ಯ, ಸಿಂದಗಿ ಕ್ಷೇತ್ರ ಶಿಕ್ಷಣಾಧಿಕಾರಿ ಎಮ್.ಜಿ. ಯಡ್ರಾಮಿ,…

Read More

ಸಿಂದಗಿ ಪಟ್ಟಣದ ವಿವಿಧೆಡೆ ಡಾ. ಬಿ.ಆರ್.ಅಂಬೇಡ್ಕರ್ ಜಯಂತಿ ಆಚರಣೆ ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ರವರು ನೀಡಿದ ಅದ್ಭುತ ಸಂದೇಶಗಳು, ಇಂದಿಗೂ ಸಹ ಜನಜನಿತವಾಗಿದ್ದು, ಸಂದೇಶಗಳನ್ನು ಪಾಲಿಸುವ ಪ್ರತಿ ಪ್ರಜೆಯೂ ಜೀವನದಲ್ಲಿ ಎಂದೂ ಕುಗ್ಗಲಾರ ಎಂದು ಸಂಸ್ಥೆಯ ಅಧ್ಯಕ್ಷ ಆರ್.ಡಿ.ಕುಲಕರ್ಣಿ ಹೇಳಿದರು.ಸಿಂದಗಿ ಪಟ್ಟಣದ ರಾಂಪೂರ ರಸ್ತೆಯಲ್ಲಿರುವ ಪ್ರೇರಣಾ ಪಬ್ಲಿಕ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಸಂಸ್ಥೆಯ ಅಧ್ಯಕ್ಷ ಆರ್.ಡಿ.ಕುಲಕರ್ಣಿ ಅವರ ನೇತೃತ್ವದಲ್ಲಿ ಆಯೋಜಿಸಿದ್ದ ಡಾ.ಬಿ.ಆರ್ ಅಂಬೇಡ್ಕರ್ ರವರ ೧೩೫ನೇ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಭಾರತಕ್ಕೆ ಬಾಬಾಸಾಹೇಬರು ನೀಡಿದ ಕೊಡುಗೆ ಅನನ್ಯ. ಅವರ ತತ್ವಾದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಬದುಕು ಸಾಗಿಸಬೇಕು. ಅವರ ತತ್ವ ಸಿದ್ಧಾಂತದ ಮೇಲೆ ನಾವೆಲ್ಲರೂ ನಡೆಯಬೇಕು ಎಂದರು.ಈ ಸಮಾರಂಭದಲ್ಲಿ ಸಂಸ್ಥೆಯ ನಿರ್ದೇಶಕ ಪಿ.ಡಿ.ಕುಲಕರ್ಣಿ, ಶಾಲೆಯ ಮುಖ್ಯ ಗುರುಮಾತೆ ಎಸ್.ಆಯ್.ಅಸ್ಕಿ, ಎಮ್.ಪಿ.ಬುಕ್ಕಾ, ಶಿಕ್ಷಕರಾದ ಸತೀಶ ಕುಲಕರ್ಣಿ, ಅಲ್ತಾಫ್ ತಾಂಬೋಳಿ, ಕಿರಣ ಕುಲಕರ್ಣಿ, ಸಂತೋಷ ಕುಂಟೋಜಿ, ಅಕ್ಷಯ ಯಲಗಟ್ಟಿ, ಶ್ರೀಕಾಂತ ಹೂನಳ್ಳಿ ಮತ್ತು ಬಿ.ಎಸ್.ಪಾಟೀಲ, ಎಸ್.ವಿ.ಕಡಣಿ, ಎಮ್.ಎಮ್.ಜುಮನಾಳ, ಎಮ್.ಜಿ.…

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ನಗರದ ಸರ್ಕಾರಿ ಆದರ್ಶ ವಿದ್ಯಾಲಯದ ಶಿಕ್ಷಕ ರಮೇಶ ಚಟ್ಟರಕಿ ಅವರನ್ನು ಶಾಲಾ ಶಿಕ್ಷಣ ಇಲಾಖೆ ಉಪ-ನಿರ್ದೇಶಕರು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯಲು ತಮಗೆ ಬೇಕಾಗಿರುವ ಪರೀಕ್ಷಾ ಕೇಂದ್ರ ಹಾಕಿಸಿ ಕೊಡುವ ವಿಚಾರವಾಗಿ ವಿದ್ಯಾರ್ಥಿಗಳಿಂದ ಹಣ ಪಡೆದ ವಿಚಾರವಾಗಿ ವಿದ್ಯಾರ್ಥಿಗಳೊಂದಿಗೆ ಮಾತನಾಡಿರುವ ಆಡಿಯೊ ಸಾಮಾಜಿಕ ಜಾಲತಾಣ ಹಾಗೂ ಸುದ್ಧಿವಾಹಿನಿಗಳಲ್ಲಿ ಹರಿದಾಡಿದ್ದು ಗಮನಿಸಲಾಗಿದ್ದು, ಎಸ್‌ಎಸ್‌ಎಲ್‌ಸಿ ಪರೀಕ್ಷಾ ಸಮಯದಲ್ಲಿ ವಿನಾಕಾರಣ ವಿದ್ಯಾರ್ಥಿಗಳಲ್ಲಿ ಗೊಂದಲ ಸೃಷ್ಟಿ ಮಾಡುವ ಮೂಲಕ ಶಿಕ್ಷಕರಿಗೆ ಸರಿಯಲ್ಲದ ರೀತಿಯಲ್ಲಿ ವರ್ತನೆ ಮಾಡಿರುವುದು ಮೇಲ್ನೊಟಕ್ಕೆ ಕಂಡ ಬಂದ ದಿಸೆಯಲ್ಲಿ ಈ ವಿಷಯ ಇಲಾಖೆಗೆ ಮುಜಗರ ಉಂಟು ಮಾಡಿದೆ. ಇದನ್ನು ಗಂಭೀರವಾಗಿ ಪರಿಗಣಿಸಿದ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಬಿ.ಯಡ್ರಾಮಿ ಅವರು ಸ್ಪಷ್ಟ ಅಭಿಪ್ರಾಯವನ್ನು ಕಾರ್ಯಾಲಯಕ್ಕೆ ಸಲ್ಲಿಸಿದ್ದಾರೆ. ಆರೋಪಗಳ ಇಲಾಖಾ ವಿಚಾರಣೆಯನ್ನು ಕಾಯ್ದಿರಿಸಿ ತತ್‌ಕ್ಷಣದಿಂದ ಜಾರಿಗೆ ಬರುವಂತೆ ಸೇವೆಯಿಂದ ಅಮಾನತ್ತುಗೊಳಿಸಲಾಗಿದೆ ಎಂದು ಶಾಲಾ ಶಿಕ್ಷಣ ಇಲಾಖೆ ಉಪ-ನಿರ್ದೇಶಕರು ಆದೇಶಿಸಿದ್ದಾರೆ.

Read More

ಕೊಲ್ಹಾರದಲ್ಲಿ ಆಯೋಜಿಸಿದ್ದ ಡಾ. ಬಿ.ಆರ್.ಅಂಬೇಡ್ಕರ್ ಹಾಗೂ ಡಾ.ಬಾಬು ಜಗಜೀವನರಾಮ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ತಹಶೀಲ್ದಾರ ಎಸ್.ಎಸ್.ಮ್ಯಾಗೇರಿ ಅಭಿಮತ ಉದಯರಶ್ಮಿ ದಿನಪತ್ರಿಕೆ ಕೊಲ್ಹಾರ: ನವ ಭಾರತದ ನಿರ್ಮಾಣಕ್ಕೆ ಸುಭದ್ರ ಅಡಿಪಾಯ ಹಾಕಿದ ಶ್ರೇಷ್ಠ ದಾರ್ಶನಿಕ ಡಾ. ಬಿ.ಆರ್. ಅಂಬೇಡ್ಕರ್ ಅವರು ಸಂವಿಧಾನ ರಚನೆ ಮೂಲಕ ಪ್ರಜಾಪ್ರಭುತ್ವದ ಮಹತ್ವವನ್ನು ಸಾರುತ್ತಾ ಸಮಾನತೆಯ ಸಂದೇಶವನ್ನು ದೇಶಕ್ಕೆ ನೀಡಿದ ಮಹಾನ್ ಚೇತನ ಎಂದು ತಹಶೀಲ್ದಾರ ಎಸ್.ಎಸ್. ಮ್ಯಾಗೇರಿ ಹೇಳಿದರು.ತಾಲೂಕು ಆಡಳಿತ, ತಾಲೂಕು ಪಂಚಾಯತ್, ಪಟ್ಟಣ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಪಟ್ಟಣದ 12ನೇ ವಾರ್ಡಿನ ಸಮುದಾಯ ಭವನದಲ್ಲಿ ಆಯೋಜಿಸಿದ್ದ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಹಾಗೂ ಹಸಿರು ಕ್ರಾಂತಿಯ ಹರಿಕಾರ ಬಾಬು ಜಗಜೀವನರಾಮ ಅವರ 119ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಗ್ಯಾರಂಟಿ ಯೋಜನೆಗಳ ತಾಲೂಕು ಅಧ್ಯಕ್ಷ ಸಂತೋಷ ಗಣಾಚಾರಿ ಮಾತನಾಡಿದರು.ಶಿಕ್ಷಕರಾದ ಜಗದೀಶ ಕಾಂಬಳೆ ಮತ್ತು ಸಂಗಮೇಶ ದಶವಂತ ಉಪನ್ಯಾಸ ನೀಡಿದರು.ಕಬಡ್ಡಿ ಪಟು ಪ್ರಜ್ವಲ ಚಂದ್ರಶೇಖರ ಈಟಿ ಅವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು.ಪಟ್ಟಣದಲ್ಲಿ ಅಂಬೇಡ್ಕರ್ ಹಾಗೂ…

Read More

ಸಮಗ್ರ ತನಿಖೆ ನಡೆಸಲು ವಿಶೇಷ ತನಿಖಾ ತಂಡ‌ ರಚನೆ ಮಾಡಬೇಕು ಎಂದು ಸಂಸದ ರಮೇಶ ಜಿಗಜಿಣಗಿ ಹಕ್ಕೊತ್ತಾಯ ಉದಯರಶ್ಮಿ ದಿನಪತ್ರಿಕೆ ವಿಜಯಪುರ: 2025-26 ನೇ ಸಾಲಿನ ಅನುದಾನಿತ, ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಮಾನ್ಯತೆ ನವೀಕರಣ, ಪ್ರಥಮ ಮಾನ್ಯತೆ ನೀಡುವಲ್ಲಿ ಕೋಟ್ಯಂತರ ರೂ. ಹಗರಣ ನಡೆದಿದ್ದು, ಕೂಡಲೇ ಇದನ್ನು ಸಮಗ್ರ ತನಿಖೆ ನಡೆಸಲು ವಿಶೇಷ ತನಿಖಾ ತಂಡ‌ ರಚನೆ ಮಾಡಬೇಕು ಸಂಸದ ರಮೇಶ ಜಿಗಜಿಣಗಿ ಹಕ್ಕೊತ್ತಾಯ ಮಂಡಿಸಿದರು.ಮಂಗಳವಾರ ಬಿಜೆಪಿ ಕಾರ್ಯಾಲಯದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಇದು ಕೇವಲ ಹಗರಣವಲ್ಲ, ಮಕ್ಕಳ ಭವಿಷ್ಯದ ದೃಷ್ಟಿಕೋನದ ಪ್ರಶ್ನೆ, ಮುಂದೆ ನಿಯಮಾವಳಿ ಮೀರಿವೆ ಎಂದು ಶಾಲೆಗಳನ್ನು ಬಂದ್ ಮಾಡಿದರೆ ಆ ಮಕ್ಕಳು ಎಲ್ಲಿಗೆ ಹೋಗಬೇಕು? ಎಂದು ಪ್ರಶ್ನಿಸಿದರು.ಈ ವಿಷಯವಾಗಿ ತಪ್ಪಾಗಿದೆ ಎಂದು ಶಿಕ್ಷಣ ಸಚಿವರು ಹೇಳಿದ್ದಾರೆ, ಆದರೆ ತಪ್ಪಾಗಿದೆ ಎಂದು ಹೇಳಿ ಸುಮ್ಮನೆ ಕುಳಿತರೇ ಸಾಕೇ? ಎಂದು ಪ್ರಶ್ನಿಸಿದರು.ಈ ಹಗರಣದ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸುವಂತೆ ರಾಜ್ಯಪಾಲರಿಗೆ, ಮುಖ್ಯಮಂತ್ರಿ,8 ಶಿಕ್ಷಣ…

Read More

ಹಸಿವು ನೀಗಿಸುವ ‘ಇಂದಿರಾ ಕ್ಯಾಂಟೀನ್’ ಉದ್ಘಾಟಿಸಿದ ಶಾಸಕ ಲಕ್ಷ್ಮಣ ಸವದಿ | ಜನಸಾಮಾನ್ಯರೊಂದಿಗೆ ಕುಳಿತು ಉಪಾಹಾರ ಸೇವನೆ ಉದಯರಶ್ಮಿ ದಿನಪತ್ರಿಕೆ ಅಥಣಿ: ಬಡವರು, ಕಾರ್ಮಿಕರು ಹಾಗೂ ಸಾರ್ವಜನಿಕರ ಹಸಿವು ನೀಗಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ರೂಪಿಸಿರುವ ಮಹತ್ವಾಕಾಂಕ್ಷಿ ಯೋಜನೆಯಾದ ’ಇಂದಿರಾ ಕ್ಯಾಂಟೀನ್’ಅನ್ನು ಶಾಸಕ ಹಾಗೂ ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು ಅಧಿಕೃತವಾಗಿ ಉದ್ಘಾಟಿಸಿದರು.ಪಟ್ಟಣದಲ್ಲಿ ನೂತನವಾಗಿ ನಿರ್ಮಿಸಲಾದ ಇಂದಿರಾ ಕ್ಯಾಂಟೀನ್ ಕಟ್ಟಡದ ರಿಬ್ಬನ್ ಕತ್ತರಿಸುವ ಮೂಲಕ ಚಾಲನೆ ನೀಡಿದ ಶಾಸಕರು, ಬಳಿಕ ಸಾರ್ವಜನಿಕರೊಂದಿಗೆ ಸಾಲಿನಲ್ಲಿ ನಿಂತು ತಾವೇ ತಟ್ಟೆ ಹಿಡಿದು ಆಹಾರ ಪಡೆದು, ಉಪಹಾರ ಸೇವಿಸುವ ಮೂಲಕ ಆಹಾರದ ಗುಣಮಟ್ಟ ಪರೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.ನಂತರ ಮಾತನಾಡಿದ ಶಾಸಕ ಲಕ್ಷ್ಮಣ ಸವದಿ ಅವರು, “ಗ್ರಾಮೀಣ ಭಾಗದಿಂದ ಪಟ್ಟಣಕ್ಕೆ ಬರುವ ರೈತರು, ಕೂಲಿ ಕಾರ್ಮಿಕರು ಹಾಗೂ ಬಡ ವಿದ್ಯಾರ್ಥಿಗಳಿಗೆ ಹೊಟ್ಟೆತುಂಬ ಊಟ ಸಿಗಬೇಕು ಎನ್ನುವುದು ಈ ಯೋಜನೆಯ ಮುಖ್ಯ ಆಶಯವಾಗಿದೆ ಎಂದರು.ಪಟ್ಟಣದ ಆಯಕಟ್ಟಿನ ಜಾಗದಲ್ಲಿ ಈ ಕ್ಯಾಂಟೀನ್ ಆರಂಭವಾಗಿರುವುದರಿಂದ ನಿತ್ಯ ನೂರಾರು ಜನರಿಗೆ ಅನುಕೂಲವಾಗಲಿದೆ.ಈ…

Read More

ಡಾ. ಬಿ.ಆರ್.ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಶಾಸಕ ಲಕ್ಷ್ಮಣ ಸವದಿ ಘೋಷಣೆ ಉದಯರಶ್ಮಿ ದಿನಪತ್ರಿಕೆ ಅಥಣಿ: “ಬಾಬಾಸಾಹೇಬ್ ಅಂಬೇಡ್ಕರ್ ಅವರು ಜೀವನದುದ್ದಕ್ಕೂ ತುಳಿತಕ್ಕೊಳಗಾದವರ ಸಮಾನತೆಗಾಗಿ ಹೋರಾಡಿದವರು. ಅವರ ವಿಚಾರಧಾರೆಗಳು ಕೇವಲ ಒಂದು ಸಮಾಜಕ್ಕೆ ಸೀಮಿತವಾಗದೆ, ಎಲ್ಲರೂ ಒಗ್ಗೂಡಿ ಆಚರಿಸಿದಾಗ ಮಾತ್ರ ಜಯಂತಿಗಳಿಗೆ ನಿಜವಾದ ಅರ್ಥ ಸಿಗುತ್ತದೆ,” ಎಂದು ಶಾಸಕ ಲಕ್ಷ್ಮಣ ಸವದಿ ಹೇಳಿದರು.ಅವರು ತಾಲೂಕು ಆಡಳಿತ, ತಾಲೂಕು ಪಂಚಾಯತ ಪುರಸಭೆ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಪಟ್ಟಣದ ತೋಟಗಾರಿಕಾ ಇಲಾಖೆ ಆವರಣದಲ್ಲಿ ಆಯೋಜಿಸಲಾಗಿದ್ದ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿಪಟ್ಟಣದ ಉದ್ಯಾನವನ ಪಕ್ಕದಲ್ಲಿ 1.50 ಕೋಟಿ ರೂ. ವೆಚ್ಚದಲ್ಲಿ ಅತ್ಯಾಧುನಿಕ ಡಿಜಿಟಲ್ ಗ್ರಂಥಾಲಯ ನಿರ್ಮಿಸಲಾಗುವುದು. ಇದರ ಟೆಂಡರ್ ಪ್ರಕ್ರಿಯೆ ಅಂತಿಮ ಹಂತದಲ್ಲಿದ್ದು, 15 ದಿನಗಳಲ್ಲಿ ಭೂಮಿ ಪೂಜೆ ನೆರವೇಸಲಿದ್ದೆವೆ. ಸ್ಪರ್ಧಾತ್ಮಕ ಪರೀಕ್ಷೆ ಬರೆಯುವ ಬಡ ವಿದ್ಯಾರ್ಥಿಗಳಿಗೆ ಇದು ಅನುಕೂಲವಾಗಲಿದೆತಾಲೂಕಿನಲ್ಲಿ ಈಗಾಗಲೇ ಪಶು ವೈದ್ಯಕೀಯ ಕಾಲೇಜು ಆರಂಭವಾಗಿದೆ. 508 ಕೋಟಿ ರೂ. ವೆಚ್ಚದ ಕೃಷಿ ಕಾಲೇಜು…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನೋಡಲು ತನ್ನಂತಿಲ್ಲ ಎಂಬ ಕಾರಣಕ್ಕೆ ತಂದೆಯೋರ್ವ ಪುತ್ರನನ್ನೇ ಕೊಲೆ ಮಾಡಿದ ವಿಲಕ್ಷಣ ಘಟನೆಯೊಂದು ಬೆಳಕಿಗೆ ಬಂದಿದೆ.ವಿಜಯಪುರ ತಾಲೂಕಿನ ನಾಗಠಾಣ ಗ್ರಾಮದಲ್ಲಿ ಕಳೆದ ಮಾರ್ಚ್‌ನಲ್ಲಿಯೇ ಈ ಘಟನೆ ನಡೆದಿದ್ದು, ಇದೀಗ ಅಸಲಿಯತ್ತು ಬಯಲಾಗಿದೆ.ಈ ಮೊದಲು ಮಗು ಕಾಣೆಯಾಗಿದೆ ಎಂದು ದೂರು ಕೊಟ್ಟಿದ್ದ ಕುಟುಂಬಸ್ಥರೇ ಇದೀಗ ತಂದೆಯೇ ಪುತ್ರನನ್ನು ಕೊಂದಿದ್ದಾನೆಂದು ದೂರು ದಾಖಲಿಸಿದ್ದು, ಇಡೀ ಪ್ರಕರಣ ರೋಚಕ ತಿರುವು ಪಡೆದಿದೆ.ಘಟನೆ ವಿವರ:ನಾಗಠಾಣ ಗ್ರಾಮದ ಮಲ್ಲಿಕಾರ್ಜುನ ಅರಕೇರಿ ಎಂಬಾತ ಮಾ.15 ರಂದು ತನ್ನ ಆರು ವರ್ಷದ ಪುತ್ರ ಸಿದ್ಧಾರ್ಥನನ್ನು ಶಾಲೆಗೆ ಸೇರಿಸುವುದಾಗಿ ಮನೆಯಿಂದ ಕರೆದೊಯ್ದಿದ್ದಾನೆ. ಬಳಿಕ ಮನೆಗೆ ಬಂದು ಮಗನನ್ನು ಶಾಲೆಗೆ ಸೇರಿಸಿದ್ದಾಗಿ ತಿಳಿಸಿದ್ದಾನೆ. ಏಪ್ರೀಲ್ 1 ರಂದು ಸಿದ್ಧಾರ್ಥನ ಜನ್ಮ ದಿನವಿದ್ದು, ಆಚರಣೆಗಾಗಿ ಕರೆತರಲು ಮಲ್ಲಿಕಾರ್ಜುನನ ಪತ್ನಿ ಭಾಗ್ಯಶ್ರೀ ದುಂಬಾಲು ಬಿದ್ದಿದ್ದಾಳೆ. ಕಡೇ ಪಕ್ಷ ಫೋನ್ ಮಾಡಿಯಾದರೂ ಮಗನೊಂದಿಗೆ ಮಾತನಾಡಿಸು ಎಂದು ಒತ್ತಾಯಿಸಲಾಗಿ ಯಾರ ಜೊತೆಗೋ ಮಾತನಾಡಿಸಿದ್ದು, ಮಗನ ಕೈಗೆ ಮೊಬೈಲ್ ಕೊಡುವಂತೆ ಹೇಳಿದಾಗ, ಆತ ಮಾತನಾಡಲು ನಿರಾಕರಿಸುತ್ತಿರುವುದಾಗಿ ಅಪರಿಚಿತರು…

Read More