Author: editor.udayarashmi@gmail.com

ಲೇಖನ- ಡಾ ಶಶಿಕಾಂತ ಪಟ್ಟಣರಾಮದುರ್ಗಮೊ: 9552002338 ಉದಯರಶ್ಮಿ ದಿನಪತ್ರಿಕೆ ಹಡಪದ ಅಪ್ಪಣ್ಣನವರು 12ನೇ ಶತಮಾನದ ವಚನಕಾರರು ಮತ್ತು ಬಸವಣ್ಣನವರ ಆಪ್ತ ಕಾರ್ಯದರ್ಶಿ. ಇವರು ಬಸವಣ್ಣನವರ ಬಲಗೈ ಬಂಟರೆಂದು ಪ್ರಸಿದ್ಧರು. ‘ಅನುಭವ ಮಂಟಪದಲ್ಲಿ’ ಪ್ರಮುಖ ಪಾತ್ರ ವಹಿಸಿದ್ದರು. ಇವರು ‘ಬಸವಪ್ರಿಯ ಕೂಡಲ ಚೆನ್ನಬಸವಣ್ಣ’ ಎಂಬ ಅಂಕಿತನಾಮದಲ್ಲಿ 250ಕ್ಕೂ ಹೆಚ್ಚು ವಚನಗಳನ್ನು ರಚಿಸಿದ್ದಾರೆ. ಇವರ ಪತ್ನಿ ಲಿಂಗಮ್ಮನವರು ಕೂಡ ವಚನಗಾರ್ತಿಯಾಗಿದ್ದರುಅಪ್ಪಣ್ಣನ ಹೆಸರಿನ ಹಿಂದೆ ಸೇರಿದ ‘ಸಂಗಮೇಶ್ವರ’ (ಕೂಡಲಸಂಗಮ) ಈತನ ಸ್ಥಳವಾಗಿರಬೇಕು. ವಚನಗಳಲ್ಲಿ ಲಿಂಗ ತತ್ವ ಷಟಸ್ಥಲ ಬೋಧೆ ಕಾಯಕ ದಾಸೋಹದ ಮಹತ್ವ ಮುಂತಾದ ಅನೇಕ ವಿಷಯಗಳ ಮೇಲೆ ಭಿನ್ನ ಚಿಂತನೆ ನಡೆಸಿದವರು.ಎಲ್ಲವೂ ತಾತ್ವಿಕವಾಗಿವೆ. ಅನ್ಯಮತ ಖಂಡನೆ, ಶಿವಪಾರಮ್ಯ ಸ್ಥಾಪನೆಗೆ ವಿಶೇಷ ಸ್ಥಾನ ಸಂದಿದೆ. ಶರಣಸ್ತುತಿ, ಶೂನ್ಯಸಿಂಹಾಸನ, ಅನುಭವ ಮಂಟಪಗಳ ಉಲ್ಲೇಖ, ಪ್ರಭುದೇವರು ಕಲ್ಯಾಣಕ್ಕೆ ಬಂದ ಪ್ರಸಂಗ ಮತ್ತು ಆರೋಗಣೆ ನಡೆಸಿದ ಸಂದರ್ಭಗಳನ್ನು ಪ್ರಸ್ತಾಪಿಸುವುದು ಮಹತ್ವದ ಅಂಶಗಳೆನಿಸಿವೆ. ತುಂಬ ದೀರ್ಘವಾಗಿದ್ದು ಗದ್ಯಲಕ್ಷಣವನ್ನು ಹೊಂದಿದ ರಚನೆಗಳ ಜೊತೆಗೆ ಮುಕ್ತಕ ರೂಪದ ವಚನಗಳೂ ಸಮಾವೇಶಗೊಂಡಿವೆ.ಲಿಂಗತತ್ವ ಸಂಗಮೇಶ್ವರ ಅಪ್ಪಣ್ಣನಿಗೆ ಅಪಾರವಾಗಿದೆ.…

Read More

ಸಿ.ಎಂ. ಡಿ.ಕೆ. ಶಿವಕುಮಾರಗೆ ಮಾಜಿ ಸಚಿವ ಶಿವಾನಂದ ಪಾಟೀಲ ಮನವಿ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಯ ಜನ ಜಾನುವಾರುಗಳ ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಲಾಲಬಹದ್ದೂರ ಶಾಸ್ತ್ರಿ ಸಾಗರ (ಆಲಮಟ್ಟಿ) ಜಲಾಶಯದಿಂದ ಕಾಲುವೆಗಳಿಗೆ ನೀರು ಬಿಡುಗಡೆ ಮಾಡಲು ಆದೇಶ ಮಾಡುವಂತೆ ಬಸವನಬಾಗೇವಾಡಿ ಶಾಸಕರಾದ ಮಾಜಿ ಸಚಿವ ಶಿವಾನಂದ ಪಾಟೀಲ ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರಿಗೆ ಮನವಿ ಮಾಡಿದ್ದಾರೆ.ಈ ಕುರಿತು ಮುಖ್ಯಮಂತ್ರಿಗಳಿಗೆ ಪತ್ರ ಬರೆದಿರುವ ಶಿವಾನಂದ ಪಾಟೀಲ ಅವರು, ಆಲಮಟ್ಟಿ ಜಲಾಶಯ ಮುಂಗಾರಿನಲ್ಲಿ ಭರ್ತಿಯಾಗದಿದ್ದರೂ ಹಿಂಗಾರಿನಲ್ಲಿ ಭರ್ತಿಯಾಗುವ ವಿಶ್ವಾಸ ಇದೆ. ಜಲಾಶಯ ಹಿಂಗಾರಿನಲ್ಲೂ ಭರ್ತಿಯಾದ ಹಲವು ನಿದರ್ಶನಗಳಿವೆ. ಹೀಗಾಗಿ ಈಗಲೇ ಜಲಾಶಯದಿಂದ ಕಾಲುವೆಗಳಿಗೆ ನೀರು ಬಿಡುಗಡೆ ಮಾಡಿದರೆ ಭವಿಷ್ಯದ ದಿನಗಳಲ್ಲಿ ನೀರಿನ ಕೊರತೆಯಾಗಬಹುದು ಎಂದು ಆತಂಕ ಪಡುವ ಅಗತ್ಯವಿಲ್ಲ ಎಂದು ಅವರು ಮುಖ್ಯಮಂತ್ರಿಗಳಿಗೆ ಬರೆದಿರುವ ಪತ್ರದಲ್ಲಿ ವಿವರಿಸಿದ್ದಾರೆ.ಜಲಾಶಯದಲ್ಲಿ ಈಗ ಬಳಸಬಹುದಾದ ನೀರಿನ ಪ್ರಮಾಣ 70 ಟಿಎಂಸಿ ಅಡಿ ನೀರಿದೆ. ಜಲಾಶಯ ಭರ್ತಿಯಾಗಲು 35 ಟಿಎಂಸಿ ಅಡಿ ಅಗತ್ಯವಿದೆ.…

Read More

ಲೇಖನ- ಜಯಶ್ರೀ.ಜೆ. ಅಬ್ಬಿಗೇರಿ.ಇಂಗ್ಲೀಷ್ ಉಪನ್ಯಾಸಕರುಬೆಳಗಾವಿಮೊ: ೯೪೪೯೨೩೪೧೪೨ ಉದಯರಶ್ಮಿ ದಿನಪತ್ರಿಕೆ ಪ್ರಸಿದ್ಧ ಲೇಖಕಿ, ರಾಜಕೀಯ ಕಾರ್ಯಕರ್ತೆ ಮತ್ತು ಉಪನ್ಯಾಸಕಿಯಾಗಿ ಜಗತ್ತಿನಾದ್ಯಂತ ಲಕ್ಷಾಂತರ ವಿಕಲಚೇತನರಿಗೆ ಧೈರ್ಯದ ಸಂಕೇತವಾಗಿರುವ ಹೆಲೆನ್ ಕೆಲ್ಲರ್ ಜೀವನದ ಹಾದಿ ತುಂಬಾ ಕಠಿಣವಾಗಿತ್ತು. ಅವರು ಕೇವಲ ೧೯ ತಿಂಗಳ ಮಗುವಾಗಿದ್ದಾಗ ತೀವ್ರ ಜ್ವರದ ಕಾರಣದಿಂದಾಗಿ ತಮ್ಮ ದೃಷ್ಟಿ ಮತ್ತು ಕೇಳುವ ಸಾಮರ್ಥ್ಯವನ್ನು ಕಳೆದುಕೊಂಡರು. ಇಂಥ ಪರಿಸ್ಥಿತಿಯಲ್ಲಿ ಅವರಿಗೆ ಮಾತು ಕಲಿಯುವುದು ಸಹ ಅಸಾಧ್ಯವಾಗಿತ್ತು. ಸುತ್ತಲಿನ ಸಮಾಜದೊಂದಿಗೆ ಸಂಪರ್ಕವೇ ಇಲ್ಲದೇ ಕತ್ತಲೆಯಲ್ಲಿ ಮುಳುಗುವಂತಾಗಿತ್ತು. ಹೆಲೆನ್ ಕೆಲ್ಲರ್ ಜಾಗದಲ್ಲಿ ಬೇರೆ ಯಾರೂ ಇದ್ದಿದ್ದರೆ ಇಡೀ ಜೀವನವನ್ನು ನಿರಾಸೆಯಿಂದ ಕಳೆದುಬಿಡುತ್ತಿದ್ದರು. ಆದರೆ ಹೆಲನ್ ಕೆಲ್ಲರ್ ಹಾಗೆ ಮಾಡಲಿಲ್ಲ. ತಮ್ಮ ಶಿಕ್ಷಕಿ ಸಹಾಯದಿಂದ ಬ್ರೈಲ್ ಲಿಪಿಯನ್ನು ಕಲಿತರು. ವಿಶ್ವವಿದ್ಯಾಲಯದಿಂದ ಕಲೆ ಪ್ರದರ್ಶನದಲ್ಲಿ ಪದವಿ ಪಡೆದ ಮೊದಲ ಕಿವುಡ ಮತ್ತು ಕುರುಡು ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಇದೆಲ್ಲ ಸಾಧ್ಯವಾಗಿದ್ದು ಅವರ ನಿರಂತರ ಪರಿಶ್ರಮ ಮತ್ತು ಅಪ್ರತಿಮ ಧೈರ್ಯದಿಂದ.ಧೈರ್ಯದ ಹಾದಿಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದಿದೆ ಇಲ್ಲವೇ ಫೇಲ್ ಆಗುತ್ತೇನೆ…

Read More

ಉದಯರಶ್ಮಿ ದಿನಪತ್ರಿಕೆ ಬದಾಮಿ: 2026–27ನೇ ಶೈಕ್ಷಣಿಕ ವರ್ಷದ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗಾಗಿ ಬಾಗಲಕೋಟೆ ನಗರದ ತುಂಗಳ ವಿಜ್ಞಾನ ಪದವಿ ಪೂರ್ವ ಕಾಲೇಜು ಜು.೧೮ ಬೆಳಿಗ್ಗೆ 10:30ಕ್ಕೆ”ಅಂಕುರ” ಎಂಬ ಶೀರ್ಷಿಕೆಯಡಿ ಸ್ವಾಗತ ಕಾರ್ಯಕ್ರಮ ನವನಗರದ ಕಲಾಭವನದಲ್ಲಿ ಆಯೋಜಿಸಲಾಗಿದೆ.ಕಾರ್ಯಕ್ರಮದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಮಹಾಭಾರತದ ವೀರ ಅಭಿಮನ್ಯುವಿನ*ಸ ಸಾಹಸಮಯ ಜೀವನಗಾಥೆಯನ್ನು ನಾಟಕ ರೂಪದಲ್ಲಿ ಮನಮೋಹಕವಾಗಿ ಪ್ರದರ್ಶಿಸಲಿದ್ದಾರೆಂದು ಕಾಲೇಜ್ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯಾದ್ಯಂತ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆ ಪ್ರಗತಿಯಲ್ಲಿದೆ.ಮತಗಟ್ಟೆ ಮಟ್ಟದ ಅಧಿಕಾರಿಗಳು ಜೂನ್ ೩೦ ರಿಂದ ಮನೆ ಮನೆಗೆ ಭೇಟಿ ನೀಡಿ ಮತದಾರರಿಗೆ ಗಣತಿ ನಮೂನೆಯ ವಿತರಿಸುವ ಕಾರ್ಯ ಭರದಿಂದ ನಡೆಯುತ್ತಿದ್ದು, ಜುಲೈ ೧೩ ರವರೆಗೆ ಜಿಲ್ಲೆಯ ಪ್ರಗತಿ ವರದಿಯ ಅನುಸಾರ ೧೯,೦೭,೫೮೩ ಗಣತಿ ನಮೂನೆ ವಿತರಿಸಲಾಗಿದೆ. ಅವುಗಳಲ್ಲಿ ೭,೨೭,೯೩೩ ಗಣಕೀಕರಣಗೊಂಡ ಗಣತಿ ನಮೂನೆಗಳಿವೆ ಎಂದು ಜಿಲ್ಲಾ ಚುನಾವಣಾ ಅಧಿಕಾರಿಗಳಾದ ಜಿಲ್ಲಾಧಿಕಾರಿ ಡಾ. ಆನಂದ್ ಕೆ. ಅವರು ತಿಳಿಸಿದ್ದಾರೆ. ಮತದಾರರ ಪಟ್ಟಿಯಂತೆ ಜಿಲ್ಲೆಯಲ್ಲಿ ಒಟ್ಟು ೧೯,೮೨,೧೧೪ ಮತದಾರರು ಇದ್ದು, ಇವರಿಗೆ ಮನೆ-ಮನೆಗೆ ತೆರಳಿ ಗಣತಿ ನಮೊನೆಗಳನ್ನು ವಿತರಿಸಿ ಅಗತ್ಯ ಮಾಹಿತಿಯನ್ನು ಸಂಗ್ರಹಿಸುವ ಕಾರ್ಯ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.ಗಣತಿ ನಮೂನೆಗಳ ವಿತರಣೆ ಹಾಗೂ ಡಿಜಟಲೀಕರಣ ಕಾರ್ಯ ಜೂನ್ ೩೦ ರಿಂದ ಜುಲೈ ೨೯ ವರೆಗೆ ನಡೆಯಲ್ಲಿದ್ದು, ಈ ಅವಧಿಯಲ್ಲಿ ಮತದಾರರು ತಮ್ಮ ವಿವರಗಳನ್ನು ಪರಿಶೀಲಿಸಿ ಅಗತ್ಯ ದಾಖಲೆಗಳೊಂದಿಗೆ ನಮೂನೆಗಳನ್ನು ಸಲ್ಲಿಸಬಹುದಾಗಿದೆ. ೧,೭೦೭ ಮತದಾರರು ಆನ್ ಲೈನ್ ಮೂಲಕ…

Read More

ವಿಜಯಪುರ ಡಿಎಚ್ ಒ ಡಾ. ಸಂಪತ್ತಕುಮಾರ ಗುಣಾರಿ ಅಭಿಮತ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ತಾಯಿ ಮರಣ ಪ್ರಮಾಣ ಮತ್ತು ತೊಂದರೆ ತಡೆಗಟ್ಟುವುದು ವಿಶ್ವ ಜನಸಂಖ್ಯೆ ದಿನಾಚರಣೆಯ ಉದ್ದೇಶವಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಾದ ಡಾ. ಸಂಪತ್ತ ಗುಣಾರಿ, ಹೇಳಿದರು.ಜಿಲ್ಲಾ ಆಸ್ಪತ್ರೆಯ ಆವರಣದಲ್ಲಿರುವ ನರ್ಸಿಂಗ್ ಕಾಲೇಜಿನ ಆವರಣದಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ ಕಾರ್ಯಕ್ರಮವನ್ನುದ್ದೇಶಿಸಿ ಅವರು ಮಾತನಾಡಿದರು.ಆರೋಗ್ಯಕರ ಸಮಯದಲ್ಲಿ ಗರ್ಭಧಾರಣೆ ಹಾಗೂ ಮಕ್ಕಳ ನಡುವೆ ಆರೋಗ್ಯಕರ ಅಂತರ ಕಾಪಾಡುವವರಿಂದ ತಾಯಿ ಮತ್ತು ಮಕ್ಕಳ ಆರೋಗ್ಯ ವೃದ್ಧಿಸುವದರೊಂದಿಗೆ ಅನಗತ್ಯ ಗರ್ಭಧಾರಣೆಯನ್ನು ತಡೆಗಟ್ಟಬಹುದಾಗಿದೆ ಎಂದ ಅವರು, ಮಹಿಳೆಯರ ಸಂತಾನೋತ್ಪತ್ತಿ ಆರೋಗ್ಯದ ಗುಣಮಟ್ಟ ಸುಧಾರಣೆ ಗರ್ಭಧಾರಣೆಗೆ ಆರೋಗ್ಯಕರ ಸಮಯ ಮತ್ತು ಗರ್ಭಧಾರಣೆಗಳ ನಡುವಿನ ಅಂತರವನ್ನು ಉತ್ತೇಜಿಸಬೇಕಿದೆ ಎಂದರು.ಭಾರತ ಸ್ವಾತಂತ್ರ‍್ಯ ಪಡೆದುಕೊಂಡಾಗ ದೇಶದ ಜನಸಂಖ್ಯೆ ಕೇವಲ ೩೩ ಕೋಟಿ ಇತ್ತು. ಕಳೆದ ೭೯ ವರ್ಷಗಳಲ್ಲಿ ಜನಸಂಖ್ಯೆಯ ವಿಷಯದಲ್ಲಿ ಹಲವು ಮಹತ್ವದ ಬದಲಾವಣೆ ಮಾಡಲಾಗಿದೆ. ಪ್ರಸ್ತುತ ಭಾರತ ಜನಸಂಖ್ಯೆ ೧೪೪ ಕೋಟಿಗೂ ಅಧಿಕ ಜನಸಂಖ್ಯೆ ಹೊಂದಿದೆ. ಆದ್ದರಿಂದ ವಿಶ್ವದಲ್ಲಿ…

Read More

ಬೂದಿಹಾಳ-ಫೀರಾಪೂರ ನೀರಾವರಿ ಯೋಜನೆ ಪೂರ್ಣಗೊಳಿಸಲು ಹಾಗೂ ಬರಪೀಡಿತ ಜಿಲ್ಲೆ ಘೋಷಣೆಗೆ ಒತ್ತಾಯ ಉದಯರಶ್ಮಿ ದಿನಪತ್ರಿಕೆ ತಾಳಿಕೋಟೆ: ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ(ವಾಸುದೇವ ಮೇಟಿ ಬಣ)ದ ನೇತೃತ್ವದಲ್ಲಿ ಇದೇ ದಿ. ೧೬ ರಂದು ತಾಳಿಕೋಟೆ ನಗರದಲ್ಲಿ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ (ವಾಸುದೇವ ಮೇಟಿ) ಬಣದ ಯಾದಗಿರಿ ಜಿಲ್ಲಾ ಅಧ್ಯಕ್ಷ ಮಲ್ಲನಗೌಡ ಹಗರಟಗಿ ಅವರು ಹೇಳಿದರು.ಮಂಗಳವಾರ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ(ವಾಸುದೇವ ಮೇಟಿ ಬಣ)ದ ನೇತೃತ್ವದಲ್ಲಿ ಕರೆಯಲಾದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಭಾಗದ ರೈತರ ಜೀವನಾಡಿಯಾಗಲಿರುವ ಬೂದಿಹಾಳ-ಫೀರಾಪೂರ ಏತ ನೀರಾವರಿ ಯೋಜನೆಯು ಮುಕ್ತಾಯ ಹಂತಕ್ಕೆ ಬಂದಿದ್ದು ಸದ್ಯ ಎಫ್‌ಐಸಿ ಕಾಲುವೆ ನಿರ್ಮಾಣ ಕಾಮಗಾರಿ ಆಬೇಕಾಗಿದೆ ಈ ಯೋಜನೆ ಪೂರ್ಣಗೊಳ್ಳುವದರಿಂದ ತಾಳಿಕೊಟೆ-ದೇವರ ಹಿಪ್ಪರಗಿ ಅವಳಿ ತಾಲೂಕಿನ ೫೦ ಸಾವಿರ ಏಕರೆ ಭೂಮಿ ನೀರಾವರಿಗೆ ಒಳಪಡಲಿದೆ ಅಲ್ಲದೇ ಹುಣಸಗಿ-ಸುರಪೂರ ತಾಲೂಕಿನ ೪೩…

Read More

ಇಂಡಿಯಲ್ಲಿ ಜೆಡಿಎಸ್ ಯುವಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಆರೋಪ ಉದಯರಶ್ಮಿ ದಿನಪತ್ರಿಕೆ ಇಂಡಿ: ರಾಜ್ಯದಲ್ಲಿ ಭೀಕರ ಬರಗಾಲ ಎದುರಾಗಿದ್ದು ರಾಜ್ಯ ಸರಕಾರ ರೈತರ ನೆರವಿಗೆ ಧಾವಿಸದೆ ರೈತ ಸಮುದಾಯವನ್ನು ಕಡೆಗಣನೆ ಮಾಡುತ್ತಿದೆ. ಸಂಬಂಧಪಟ್ಟ ಇಲಾಖೆಗಳಿಗೆ ಸಚಿವ ಸ್ಥಾನವನ್ನೂ ನೀಡಿಲ್ಲ ಮುಖ್ಯವಾಗಿ ರೈತರಿಗೆ ಅವಶ್ಯವಿರುವ ಕೃಷಿ ಹಾಗೂ ತೋಟಗಾರಿಕೆ ಸಚಿವ ಸ್ಥಾನವೂ ಖಾಲಿ ಇದೆ. ಈ ಸರಕಾರ ಸಂಪೂರ್ಣ ನಿಷ್ಕ್ರೀಯವಾಗಿದೆ ಎಂದು ಜೆಡಿಎಸ್ ಯುವಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದರು.ನಗರದ ಪ್ರವಾಸಿಮಂದಿರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೃಷ್ಣಾ ಕಾಲುವೆಗೆ ಈಗಾಗಲೇ ಒಂದುವರೆ ಟಿಎಂಸಿ ನೀರು ಹರಿಸುವದಾಗಿ ಕಲಬುರಗಿ ಆಯುಕ್ತರು ತಿಳಿಸಿದ್ದರು ಬೇಗನೇ ನೀರು ಬಿಡಬೇಕು ಇಲ್ಲದಿದ್ದರೆ ಒತ್ತಡ ಹೇರುವದಾಗಿ ತಿಳಿಸಿದರು.ಸಂಪುಟ ರಚನೆ ಮಾಡದೆ ಇರುವುದರಿಂದ ಇಂಡಿ ತಾಲೂಕಿನ ಭೀಮಾ ನದಿ ದಂಡೆಯ ಗ್ರಾಮಗಳಿಗೆ ಕುಡಿಯುವ ನೀರಿನ ತೊಂದರೆ ಇದ್ದು ಅದಕ್ಕಾಗಿ ಕೇಂದ್ರ ಸಚಿವ ಕುಮಾರಸ್ವಾಮಿಯವರು ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೆಂದ್ರ ಫಡ್ನವೀಸ್ ಅವರ ಜೊತೆ ಚರ್ಚೆ ಮಾಡಲಿದ್ದಾರೆ.ಕೆಎಸ್ ಎನ್‌ಡಿಎಂಸಿ ವರದಿ ಪ್ರಕಾರ ರಾಜ್ಯದ…

Read More

ರಾಜ್ಯ ಸರ್ಕಾರದ ಕ್ರಮವನ್ನು ಖಂಡಿಸಿ, ರೈತರೊಂದಿಗೆ ಚರ್ಚಿಸಲು ಜುಲೈ 15 ರಂದು ಮಟ್ಟಿಹಾಳ ಕ್ರಾಸ್‌ನಲ್ಲಿ ಸಭೆ ಉದಯರಶ್ಮಿ ದಿನಪತ್ರಿಕೆ ಕೊಲ್ಹಾರ: ಪ್ರಸಕ್ತ ಸಾಲಿನ ಮುಂಗಾರು ಮಳೆ ಸಮರ್ಪಕವಾಗಿ ಆಗದ ಹಿನ್ನೆಲೆ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಮಳೆಯ ಕೊರತೆಯಿಂದ ಬಿತ್ತನೆ ಕಾರ್ಯಗಳು ಸ್ಥಗಿತಗೊಂಡಿದ್ದು, ಅವಳಿ ಜಿಲ್ಲೆಗಳ ಏತ ನೀರಾವರಿ ಯೋಜನೆಗಳಿಗೆ ನೀರು ಬಿಡಲು ವಿಳಂಬ ಮಾಡುತ್ತಿರುವ ಸರ್ಕಾರದ ಕ್ರಮವನ್ನು ಖಂಡಿಸಿ, ರೈತರೊಂದಿಗೆ ಚರ್ಚಿಸಲು ಬುಧವಾರ ಜುಲೈ 15 ರಂದು ಬೆಳಗ್ಗೆ 10.30ಕ್ಕೆ ತಾಲೂಕಿನ ಮಟ್ಟಿಹಾಳ ಕ್ರಾಸ್‌ನಲ್ಲಿ ಸಭೆ ಕರೆಯಲಾಗಿದೆ. ಈ ಸಭೆಗೆ ಜಿಲ್ಲೆಯ ಎಲ್ಲಾ ರೈತ ಬಂಧುಗಳು ಆಗಮಿಸಬೇಕು ಎಂದು ಮಾಜಿ ಸಚಿವ ಎಸ್.ಕೆ. ಬೆಳ್ಳುಬ್ಬಿ ಮನವಿ ಮಾಡಿದ್ದಾರೆ.ಮಂಗಳವಾರ ಪಟ್ಟಣದ ಸ್ವಗೃಹದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ಅವಳಿ ಜಿಲ್ಲೆಯಲ್ಲಿರುವ ಏತ ನೀರಾವರಿ ಯೋಜನೆಗಳನ್ನು ಪ್ರಾರಂಭಿಸಿ, ಅವುಗಳನ್ನು ಶಾಶ್ವತವಾಗಿ ನೀರಾವರಿ ಸಲಹಾ ಸಮಿತಿಯಿಂದ ಹೊರತೆಗೆದು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.ಪ್ರಸಕ್ತ ಮುಂಗಾರು ಮಳೆ ಸರಿಯಾಗಿ ಆಗದಿರುವುದು ಮತ್ತು ಕೃಷ್ಣಾ ನದಿಗೆ ತಡವಾಗಿ…

Read More