Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ಪಟ್ಟಣದ ಪಟ್ಟಣದ ಉತ್ತರಾದಿ ಮಠದಲ್ಲಿ ಮಧ್ವನವಮಿ ಕಾರ್ಯಕ್ರಮವನ್ನು ಮಂಗಳವಾರ ಶ್ರದ್ಧಾ-ಭಕ್ತಿಗಳಿಂದ ಆಚರಿಸಲಾಯಿತು. ಮಧ್ವನವಮಿಯಿಂಗವಾಗಿ ಬೆಳಗ್ಗೆ 9 ಗಂಟೆಗೆ ಮುಖ್ಯಪ್ರಾಣ ದೇವರಿಗೆ ಹಾಗೂ ವೃಂದಾವನಕ್ಕೆ ಪಂಚಾಮೃತ ಅಭಿಷೇಕ, ವಿಶೇಷ ಪೂಜೆ, ವಾಯುಸ್ತುತಿ ಪುನಶ್ಚರಣ, ಭಜನಾ ಕಾರ್ಯಕ್ರಮ ಮುಂತಾದವು ನಡೆದವು. ನಂತರ ಶ್ರೀಮನ್ ಮಧ್ವಾಚಾರ್ಯರ ಭಾವಚಿತ್ರ ಹಾಗೂ ಸುಮಧ್ವ ವಿಜಯ ಗ್ರಂಥಗಳೊಂದಿಗೆ ಪಲ್ಲಕ್ಕಿ ಸೇವೆ ಹಾಗೂ ರಥೋತ್ಸವ ಸೇವೆಗಳು ವಿಜೃಂಭಣೆಯಿಂದ ಜರುಗಿದವು.ಈ ಸಂದರ್ಭದಲ್ಲಿ ಶ್ರೀಮಠದ ಅಧ್ಯಕ್ಷ ವಸಂತಾಚಾರ್ಯ ಇಂಗಳೇಶ್ವರ ಅವರು ಮಾತನಾಡಿ, ಮಧ್ವಾಚಾರ್ಯರು ಬದರಿಕಾಶ್ರಮಕ್ಕೆ ತೆರಳಿದ ದಿನವನ್ನು ಸ್ಮರಿಸುವುದಕ್ಕೆ ಮಧ್ವನವಮಿಯನ್ನು ಆಚರಿಸಲಾಗುತ್ತದೆ. ಮಧ್ವಮತದಲ್ಲಿ ಹುಟ್ಟಿದ ಪ್ರತಿಯೊಬ್ಬರಿಗೂ ಶ್ರೀಮದಾಚಾರ್ಯರ ಸ್ಮರಣೆ ಅನುದಿನವೂ ಅವಶ್ಯಕ ಎಂದು ತಿಳಿಸಿದರು.ಶ್ರೀಮಠದ ಸದ್ಭಕ್ತ ಆನಂದ ಜಿ.ಕುಲಕರ್ಣಿ ಅವರು ಇಂದಿನ ಕಾರ್ಯಕ್ರಮದ ಸಮಸ್ತ ಸೇವಾ ಕೈಂಕರ್ಯ ಹಾಗೂ ತೀರ್ಥ ಪ್ರಸಾದದ ವ್ಯವಸ್ಥೆಯನ್ನು ಕೈಗೊಂಡಿದ್ದರು. ಶ್ರೀಮಠದ ಅರ್ಚಕ ವಾದಿರಾಜಾಚಾರ್ಯ ಯಜುರ್ವೇದಿ, ಶ್ರೀಮಠದ ಆಡಳಿತ ಮಂಡಳಿಯ ಸದಸ್ಯರು ಹಾಗೂ ನೂರಾರು ಸದ್ಭಕ್ತರು ಹಾಗೂ ಮಹಿಳೆಯರು ಈ ಉತ್ಸವದಲ್ಲಿ ಪಾಲ್ಗೊಂಡು ವೇದಾಂತ ಸಾಮ್ರಾಜ್ಯದ…

Read More

ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ಪಟ್ಟಣದಲ್ಲಿ ಕರ್ಕಶವಾದ ಶಬ್ದವನ್ನು ಉಂಟು ಮಾಡುವ ಜೊತೆಗೆ ಶಬ್ದ ಮಾಲಿನ್ಯ ಹರಡಿ ಸಾರ್ವಜನಿಕವಾಗಿ ತುಂಬಾ ತೊಂದರೆ ಉಂಟುಮಾಡುವ ಬೈಕ್ ಗಳನ್ನುಪಿಐ ಗುರುಶಾಂತ ದಾಶ್ಯಾಳ ನೇತೃತ್ವದಲ್ಲಿ ವಶಪಡಿಸಿಕೊಂಡು ಬೈಕ್ ಸೈಲೆನ್ಸರ ಕಿತ್ತುಹಾಕಿ ಬೈಕ್ ಸವಾರರಿಗೆ ಸೂಕ್ತ ಎಚ್ಚರಿಕೆ ನೀಡಿ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳಲಾಯಿತು.ಪಟ್ಟಣದಲ್ಲಿ ಕರ್ಕಶ ಶಬ್ದದಿಂದ ಶಬ್ದ ಮಾಲಿನ್ಯ, ಸೈಲೆನ್ಸರ್ ದಿಂದ ಹೆಚ್ಚು ಹೊಗೆಯಿಂದಾಗಿ ವಾಯುಮಾಲಿನ್ಯ ಉಂಟಾಗುತ್ತಿರುವದನ್ನು ಗಮನಿಸಿದ ಪೊಲೀಸ್ ಇಲಾಖೆಯು ಇಂತಹ ಕಾರ್ಯಾಚರಣೆ ಕೈಗೊಂಡಿರುವದಕ್ಕೆ ಪ್ರಜ್ಞಾವಂತರಿಂದ ಇಲಾಖೆಯ ಬಗ್ಗೆ ಮೆಚ್ಚುಗೆ ವ್ಯಕ್ತವಾಗಿದೆ.ಈ ಕಾರ್ಯಾಚರಣೆಯಲ್ಲಿ ಪೊಲೀಸ್ ಸಿಬ್ಬಂದಿಗಳಾದ ಜಗದೀಶ ತಕ್ಕೋಡ, ಮಹಾಂತೇಶ ಸಜ್ಜನ ಇತರರು ಇದ್ದರು.

Read More

ಕರ್ನಾಟಕ ಕಾಟ್ ಸೀಡ್ಸ್ ಹತ್ತಿ ಮೀಲ್ ಕಾರ್ಖಾನೆ ಉದ್ಘಾಟಿಸಿದ ಇಂಡಿ ಶಾಸಕ ಯಶವಂತ್ರಾಯಗೌಡ ಪಾಟೀಲ ಅಭಿಮತ ಉದಯರಶ್ಮಿ ದಿನಪತ್ರಿಕೆ ಆಲಮೇಲ: ರೈತರ ಹಿತ ಕಾಪಾಡುವಲ್ಲಿ ಎಲ್ಲ ಪಕ್ಷದ ಸರ್ಕಾರಗಳು ವಿಫಲವಾಗಿವೆ. ರೈತರಿಗೆ ಒಳಿತು ಮಾಡುವದಾಗಿ ಹೆಳುತ್ತಾರೆ ವಿನಹ ರೈತರ ಬೆಳೆಗೆ ಯೋಗ್ಯ ಬೆಲೆ ನಿಗದಿಗೊಳಿಸುವ ಕಾನೂನು ಜಾರಿಗೊಳಿಸಲು ಯಾವುದೆ ಸರ್ಕಾರ ಆಸಕ್ತಿ ತೋರದಿರುವದು ವಿಪರ್ಯಾಸ ಎಂದು ಇಂಡಿ ಶಾಸಕ ಯಶವಂತ್ರಾಯಗೌಡ ಪಾಟೀಲ ಹೇಳಿದರು. ಆಲಮೇಲ ಸಮೀಪದ ಇಂಡಿ ತಾಲೂಕಿನ ತೆಗ್ಗೆಹಳ್ಳಿ ಕ್ರಾಸ್ ಹತ್ತಿರ ನಿರ್ಮಾಣ ಮಾಡಿರುವ ಕರ್ನಾಟಕ ಕಾಟ್ ಸೀಡ್ಸ್ ಹತ್ತಿ ಮೀಲ್ ಕಾರ್ಖಾನೆ ಉದ್ಘಾಟಿಸಿ ಮಾತನಾಡುತ್ತ ಹೆಳಿದರು. ಆಲಮೇಲ ಇಂಡಿ ತಾಲೂಕಿನ ಮದ್ಯದಲ್ಲಿ ನಿರ್ಮಾಣವಾಗಿರುವ ಈ ಹತ್ತಿ ಮಿಲ್ ಪ್ರಾರಂಭವಾಗಿದ್ದರಿಂದ ನಾಲ್ಕರಿಂದ ಐದು ತಾಲೂಕಿನ ರೈತರಿಗೆ ಅನಕೂಲವಾಗಲಿದೆ ಕಾರ್ಖಾನೆ ಮಾಲಿಕರು ರೈತರಿಗೆ ಯಾವುದೆ ಅನ್ಯಾಯಮಾಡದೆ ಯೋಗ್ಯ ಬೇಲೆ ನೀಡಿ ರೈತರಿಗೆ ಪ್ರೋತ್ಸಹ ನೀಡಿದರೆ ರೈತರು ಅಂತಹ ಕಾರ್ಖಾನೆ ಗಳಿಗೆ ಸಹಕಾರ ನೀಡುತ್ತಾರೆ ಎಂದೆರು. ನಿಜವಾದ ರೈತರ ಹಿತ ಕಾಪಾಡುವ ಉದ್ದಿಮೆದಾರರು…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಸರಕಾರಿ ನೌಕರರ ಸಹಕಾರಿ ಬ್ಯಾಂಕಿನಲ್ಲಿ 77ನೇ ಗಣರಾಜ್ಯೋತ್ಸವದ ರಾಷ್ಟ್ರ ದ್ವಜಾರೋಹಣವನ್ನು ಬ್ಯಾಂಕಿನ ಅಧ್ಯಕ್ಷರಾದ ಅರ್ಜುನ ಲಮಾಣಿ ಇವರು ನೆರವೇರಿಸಿದರು.ರಾಷ್ಟ್ರದ್ವಜಾರೋಹಣ ನೆರವೇರಿಸಿ ಮಾತನಾಡಿದ ಅಧ್ಯಕ್ಷ ಅರ್ಜುನ ಲಮಾಣಿ ಇಡೀ ಜಗತ್ತಿಗೆ ಮಾದರಿಯಾದ ನಮ್ಮ ಸಂವಿಧಾನ ನಮ್ಮೆಲ್ಲರಿಗೂ ಹೆಮ್ಮೆ. ಇಂತಹ ಪವಿತ್ರ ಸಂವಿಧಾನ ಸಂರಕ್ಷಿಸೋಣ. ಪ್ರತಿಯೊಬ್ಬರೂ ನಿಯಮಗಳನ್ನು ಪಾಲಿಸುತ್ತ ಸಂವಿಧಾನ ಪಾಲಿಸೋಣ ಎಂದರು.ಈ ಸಂದರ್ಭದಲ್ಲಿ ಸರ್ಕಾರಿ ನೌಕರರ ಬ್ಯಾಂಕಿನ ನಿರ್ದೇಶಕರಾದ ಪ್ರವಾಸೋಧ್ಯಮ ಇಲಾಖೆಯ ಸಹಾಯಕ ನಿರ್ದೇಶಕ ಅರವಿಂದ ಭೋ ಹೂಗಾರ, ತಹಸೀಲ್ದಾರ್ ಪ್ರಶಾಂತ ಚನಗೊಂಡ, ಎಸ್ ಎಸ್ ಜುಬೇರ, ಬ್ಯಾಂಕಿನ ಪ್ರಧಾನ ವ್ಯವಸ್ಧಾಪಕರಾದ ಎಮ್ ಕೆ ಜೋಶಿ, ವ್ಯವಸ್ಧಾಪಕರಾದ ಸಿ.ಎಸ್.ಹಿರೇಮಠ ಹಾಗೂ ಎಲ್ಲ ಸಿಬ್ಬಂದಿಗಳು ಹಾಜರಿದ್ದರು.

Read More

ಸದುಪಯೋಗಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಕರೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ, ಜೀವನೋಪಾಯ ಇಲಾಖೆ, ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮ, ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಇವರ ಸಹಯೋಗದಲ್ಲಿ ಫೆಬ್ರವರಿ ೨ರಂದು ಕೌಶಲ್ಯದಿಂದ ಉದ್ಯೋಗದ ಕಡೆಗೆ ಯುವ ಸಮೃದ್ಧಿ ಸಮ್ಮೇಳನದ ಬೃಹತ್ ಉದ್ಯೋಗ ಮೇಳವು ಅಂದು ರಂದು ಬೆಳಿಗ್ಗೆ ೯.೩೦ ರಿಂದ ಸಂಜೆ ೫ರವರೆಗೆ ದರಬಾರ ಸಮೂಹ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಆಯೋಜಿಸಲಾಗಿದೆ.ಈ ಮೇಳದಲ್ಲಿ ಉತ್ತರ ಕರ್ನಾಟಕ ಭಾಗದ ಯುವನಿಧಿ ಫಲಾನುಭವಿಗಳು ಹಾಗೂ ಎಸ್.ಎಸ್.ಎಲ್.ಸಿ. ಪಿ.ಯು.ಸಿ, ಐ.ಟಿ.ಐ, ಡಿಪ್ಲೋಮಾ, ಪದವಿ, ಸ್ನಾತ್ತಕೊತ್ತರ ಪದವಿ ಹಾಗೂ ಇಂಜಿನೀಯರಿಂಗ್ ಪದವಿಯಲ್ಲಿ ಉತ್ತೀರ್ಣರಾದವರು ತಮ್ಮ ಹೆಸರನ್ನು ನೋಂದಣಿ ಮಾಡಿಕೊಂಡು, ಉದ್ಯೋಗಮೇಳದಲ್ಲಿ ಭಾಗವಹಿಸಿ, ತಮ್ಮ ಆಸಕ್ತಿ ಹಾಗೂ ಅರ್ಹತೆಗೆ ಅನುಗುಣವಾಗಿ ಉದ್ಯೋಗ ಪಡೆದುಕೊಳ್ಳುವಂತೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಕರ್ಯ ಅಭಿವೃದ್ಧಿ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಂ.ಬಿ.ಪಾಟೀಲ ಮಾಹಿತಿ ನೀಡಿದರು.ಅವರು ಗಣರಾಜ್ಯೋತ್ಸವದ ಅಂಗವಾಗಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದ ನಂತರ ಜಿಲ್ಲಾ…

Read More

ಗಾಂಧಿ ಭವನದಲ್ಲಿ ಧ್ವಜಾರೋಹಣ ನೆರವೇರಿಸಿದ ಡಿಸಿ ಡಾ.ಆನಂದ.ಕೆ ಸಲಹೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಗಣರಾಜ್ಯೋತ್ಸವ ದಿನಾಚರಣೆ ಅಂಗವಾಗಿ ಸೋಮವಾರ ನಗರದ ಜಿಲ್ಲಾ ಪಂಚಾಯತಿಯ ರಸ್ತೆಯಲ್ಲಿರುವ ಗಾಂಧಿ ಭವನದಲ್ಲಿ ಜಿಲ್ಲಾಧಿಕಾರಿ ಡಾ.ಆನಂದ.ಕೆ ಅವರು ರಾಷ್ಟ್ರ ಧ್ವಜಾರೋಹಣ ನೆರವೇರಿಸಿ, ಗಣರಾಜ್ಯೋತ್ಸವದ ಶುಭಾಶಯ ತಿಳಿಸಿದ ಅವರು, ನಮ್ಮ ಸಂವಿಧಾನದ ಆಶಯಗಳಿಗನುಗುಣವಾಗಿ ಕಾರ್ಯನಿರ್ವಹಿಸಿ, ನಮಗೆ ಸಂವಿಧಾನ ಕಲ್ಪಿಸಿರುವ ಮೂಲಭೂತ ಹಕ್ಕುಗಳಂತೆ ಅದರಲ್ಲಿ ಅಡಕವಾಗಿರುವ ಕರ್ತವ್ಯಗಳನ್ನು ಪಾಲಿಸೋಣ ಎಂದು ಹೇಳಿದರು.ಈ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಕೆ.ಕೆ.ಚವ್ಹಾಣ,ಜಿಲ್ಲಾ ನಿರೂಪಣಾಧಿಕಾರಿ ನಿರದಮಲಾ ಸುರಪೂರ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಅಧಿಕಾರಿ ದೀಪಾ ಕಾಳೆ, ವಾರ್ತಾಧಿಕಾರಿ ಅಮರೇಶ ದೊಡಮನಿ, ವಾರ್ತಾ ಇಲಾಖೆಯ ಸುರೇಶ ಅಂಬಿಗೇರ, ಶ್ರೀಮತಿ ಮಂಜುಳಾ ದುರಗನ್ನವರ, ವೈಷ್ಣವಿ, ರತ್ನಾಂಜಲಿ, ಮಿಥುನ ಬನಸೋಡೆ, ನಾಗೇಶ ಸೇರಿದಂತೆ ಪೀಟರ್ ಅಲೆಕ್ಸಾಂಡರ್, ಬಾಪುಗೌಡ ಪಾಟೀಲ ಶೇಗುಣಸಿ ಹಾಗೂ ನೇತಾಜಿ ಗಾಂಧಿ ಸೇರಿದಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿ,ಸಿಬ್ಬಂದಿ ಸಾರ್ವಜನಿಕರು, ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Read More

ವಿಜಯಪುರ ಜಿಲ್ಲೆಯಲ್ಲಿ ಹೆಸರಾಂತ ಕಂಪನಿಗಳು ಹೂಡಿಕೆಗೆ ಆಸಕ್ತಿ | ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ದಿ ಖಾತೆ ಸಚಿವ ಡಾ. ಎಂ.ಬಿ.ಪಾಟೀಲ ಭವಿಷ್ಯ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಬರದ ನಾಡು ಎಂಬ ಹಣೆಪಟ್ಟಿ ಅಂಟಿಕೊಂಡಿದ್ದ ವಿಜಯಪುರ ಜಿಲ್ಲೆಯಲ್ಲಿ ಹೆಸರಾಂತ ರಾಷ್ಟ್ರೀಯ-ಅಂತರರಾಷ್ಟ್ರೀಯ ಮಟ್ಟದ ಕಂಪನಿಗಳು ಹೂಡಿಕೆ ಮಾಡಲು ಆಸಕ್ತಿ ತೋರಿದ್ದು, ಈ ಭಾಗದಲ್ಲಿ ವಿವಿಧ ಕಾರ್ಖಾನೆ ಕಂಪನಿಗಳ ಸ್ಥಾಪನೆಯಿಂದ ಜಿಲ್ಲೆಯಲ್ಲಿ ಉದ್ಯೋಗ ಸೃಷ್ಟಿಯಾಗುವುದಲ್ಲದೇ, ಭವಿಷ್ಯದಲ್ಲಿ ವಿಜಯಪುರ ಜಿಲ್ಲೆಯ ಮ್ಯಾನುಫ್ಯಾಕ್ಚರ್ ಕ್ಲಸ್ಟರ್‌ವಾಗಿ ರೂಪಗೊಳ್ಳಲಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ದಿ ಖಾತೆ ಸಚಿವರಾದ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ ಅವರು ಹೇಳಿದರು.ಜಿಲ್ಲಾಡಳಿತದ ವತಿಯಿಂದ ಸೋಮವಾರ ನಗರದ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಗಣರಾಜ್ಯೋತ್ಸವದ ಅಂಗವಾಗಿ ರಾಷ್ಟ್ರಧ್ವಜಾರೋಹಣ ನೆರವೇರಿಸಿ,ನಂತರ ಧ್ವಜವಂದನೆ ಸ್ವೀಕರಿಸಿ, ತೆರೆದ ವಾಹನದಲ್ಲಿ ಪೆರೇಡ್ ತಂಡಗಳ ಪರಿವೀಕ್ಷಣೆ ನಡೆಸಿ, ಗಣರಾಜ್ಯೋತ್ಸವ ಸಂದೇಶ ನೀಡಿದ ಅವರು, ಸ್ವಿಟ್ಜರ್ಲೆಂಡ್ ದೇಶದ ದಾವೋಸ್ ನಗರದಲ್ಲಿ ನಡೆದ ವಿಶ್ವ ಆರ್ಥಿಕ ಸಮಾವೇಶದಲ್ಲಿ ನಾನು ನೋಕಿಯಾ,…

Read More

ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ನಿರಾಣಿ ಸಮೂಹ ಸಂಸ್ಥೆಯ ಸಹಕಾರಿ ಸಂಘದ ಸದುಪಯೋಗವನ್ನು ಎಲ್ಲರೂ ಪಡೆದುಕೊಳ್ಳಬೇಕು ಎಂದು ಮಾಜಿ ಶಾಸಕ ಸೋಮನಗೌಡ ಪಾಟೀಲ (ಸಾಸನೂರ) ಹೇಳಿದರು.ಪಟ್ಟಣದಲ್ಲಿ ಭಾನುವಾರ ವಿಶಾಲ ಎಂಆರ್‌ಎನ್ ಸೌಹಾರ್ದ ಪತ್ತಿನ ಸಹಕಾರಿ ಸಂಘ ನಿಯಮಿತ ಜಮಖಂಡಿ ಇದರ ೧೦ನೇ ಶಾಖೆಯ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು, ಲಾಕರ್ ಉದ್ಘಾಟಿಸಿ ಮಾತನಾಡಿದರು.ನಿರಾಣಿ ಒಡೆತನದ ಸಕ್ಕರೆ ಕಾರ್ಖಾನೆಗಳು ಅತಿ ಹೆಚ್ಚು ಸಕ್ಕರೆ ಉತ್ಪಾದಿಸಿ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಾ ಬಂದಿವೆ ಎಂದರು.ಶಾಸಕ ರಾಜುಗೌಡ ಪಾಟೀಲ(ಕುದರಿ ಸಾಲವಾಡಗಿ) ಶಾಖೆ ಉದ್ಘಾಟಿಸಿ ಮಾತನಾಡಿ, ಪಟ್ಟಣದ ಜನತೆ ಆರ್ಥಿಕವಾಗಿ ಸಬಲರಾಗಿರುವುದರಿಂದ ಈ ಸೌಹಾರ್ದ ಸಂಘ ಅತ್ಯುತ್ತಮ ಶಾಖೆಯಾಗಿ ಹೊರಹೊಮ್ಮಲಿದೆ ಎಂದರು.ವಿಧಾನ ಪರಿಷತ್ ಸದಸ್ಯ ಹಣಮಂತ ನಿರಾಣಿ ಪ್ರಾಸ್ತಾವಿಕವಾಗಿ ಮಾತನಾಡಿ, ಸೌಹಾರ್ದ ಸಂಘ ನೊಂದಣಿಯಾಗಿ ೫ ವರ್ಷಗಳಾಗಿದ್ದು, ಒಟ್ಟು ೬೩೦೦ ಸದಸ್ಯರನ್ನು ಹೊಂದಿದೆ. ಜೊತೆಗೆ ೨೪೦ ಕೋಟಿಗೂ ಹೆಚ್ಚು ಠೇವಣಿಯನ್ನು ಹೊಂದಿದೆ. ಸದಸ್ಯರಿಗೆ ಕೋರ ಬ್ಯಾಂಕಿಂಗ್, ಎಸ್‌ಎಂಎಸ್ ಸೌಲಭ್ಯದೊಂದಿಗೆ ಆರ್‌ಟಿಜಿಎಸ್ ಹಾಗೂ ನೆಪ್ಟ್ ಸೌಲಭ್ಯ ಒದಗಿಸಲಾಗಿದೆ. ಮುಂದಿನ ದಿನಗಳಲ್ಲಿ ೨೫ ಶಾಖೆಗಳು,…

Read More

ಉದಯರಶ್ಮಿ ದಿನಪತ್ರಿಕೆ ಇಂಡಿ: ಕ್ಷೇತ್ರದ ಸರ್ವಾಂಗೀಣ ಅಭಿವೃಧ್ಧಿಗೆ ಶ್ರಮಿಸುತ್ತಿದ್ದು, ಮತಕ್ಷೇತ್ರದಲ್ಲಿ ಇನ್ನೂ ಆಗಬೇಕಾದ ಕಾರ್ಯಗಳನ್ನು ಶೀಘ್ರವೇ ಮಾಡಲು ಕ್ರಮ ಕೈಗೊಳ್ಳಲಾಗುತ್ತಿದೆ. ಅಧಿಕಾರಿ ವರ್ಗ ಉತ್ತಮ ಕಾರ್ಯ ಮಾಡುತ್ತಿರುವುದರಿಂದಲೇ ಸರಕಾರದ ಯೋಜನೆಗಳು ಸಮರ್ಪಕವಾಗಿ ಜನರಿಗೆ ಮುಟ್ಟುತ್ತಿವೆ ಎಂದು ಶಾಸಕ ಯಶವಂತ್ರಾಯಗೌಡ ಪಾಟೀಲ ಹೇಳಿದರು.ಅವರು ನಗರದ ಕ್ರೀಡಾಂಗಣದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.ಇಂಡಿ ಪುರಸಭೆಯನ್ನು ನಗರಸಭೆಯಾಗಿ ಮೇಲ್ದರ್ಜೆರಿಸಿದ್ದು, ಈಗಾಗಲೆ ಜನರಿಗೆ ೨೪*೭ ನೀರು ಒದಗಿಸಲಾಗುತ್ತಿದೆ. ತಾಲ;ಊಕಿನಲ್ಲಿ ಹತ್ತು ಹಲವು ಕಾಲೇಜುಗಳನ್ನು ತಂದು ಶೈಕ್ಷಣಿಕ ರಂಗದಲ್ಲಿ ಬದಲಾವಣೆ ಮಾಡಲಾಗುತ್ತಿದೆ. ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಅತ್ಯತ್ತಮವಾಗಿ ಪರೀಕ್ಷೆ ಬರೆಯಲು ಕಾರ್ಯಾಗಾರಗಳನ್ನು ಮಾಡಲಾಗುತ್ತಿದೆ. ಮುಂದಿನ ವರ್ಷ ಜಿಟಿಟಿಸಿ ಕಾಲೇಜು ಆರಂಭಗೊಳ್ಳಲಿದೆ ಎಂದು ತಿಳಿಸಿದರು.ಲಿಂಬೆ ಅಭಿವೃಧ್ಧಿ ಮಂಡಳಿ ಮುಖಾಂತರ ರೈತರಿಗೆ ಅನುಕೂಲ ಕಲ್ಪಿಸುವ ಯೋಜನೆಗಳನ್ನು ಹಾಕಿಕೊಳ್ಳಲಾಗುತ್ತಿದೆ. ಕೋಲ್ಡ ಸ್ಟೋರೇಜ್ ಸೇರಿದಂತೆ ಇನ್ನಿತರ ಕಾರ್ಯ ಮಾಡಲು ಕ್ರಮ ಕೈಗೊಳ್ಳಲಾಗುವುದು. ಶೀಘ್ರದಲ್ಲೇ ಲಿಂಬೆ ಅಭಿವೃಧ್ಧಿ ಮಂಡಳಿಯಲ್ಲಿ ನಡೆದಿರುವ ಕಾರ್ಯಕ್ರಮಗಳು ಹಾಗೂ ಆಗಬೇಕಾದ ಕಾರ್ಯಗಳ ಕುರಿತು ಒಂದು ದಿನ ಸೆಮಿನಾರ್ ಮಾಡಲಾಗುವುದು ಎಂದು ತಿಳಿಸಿದರು.ಕೈಗಾರಿಕೆ ಅಭಿವೃಧ್ದಿಗೆ ಸಂಬಂಧಿಸಿದಂತೆ ಕೈಗಾರಿಕೆ…

Read More

ಉದಯರಶ್ಮಿ ದಿನಪತ್ರಿಕೆ ಹೆಚ್ ಡಿ ಕೋಟೆ: ಶೋಷಿತ ವರ್ಗದ ಏಳಿಗೆಗಾಗಿ, ನೊಂದವರ ಧ್ವನಿಯಾಗಿ, ಅನ್ಯಾಯಗೊಳಗಾದ ಸರ್ವ ಸಮುದಾಯದ ಶ್ರೇಯೋಭಿವೃದ್ಧಿಗಾಗಿ ರಾಜ್ಯವ್ಯಾಪಿ ಶ್ರಮಿಸುತ್ತಾ ಬರುತ್ತಿರುವ ಕರ್ನಾಟಕ ರಾಜ್ಯ ಭೀಮ್ ಸೇನೆ ಸಂಘಟನೆಗೆ ನೂತನ ಪದಾಧಿಕಾರಿಗಳ ನೇಮಕ ಮಾಡಲಾಯಿತು.ಪಟ್ಟಣದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ನಸೀರ್ ಅಹಮದ್ ಅವರನ್ನು ಅಲ್ಪಸಂಖ್ಯಾತರ ಘಟಕದ ಮೈಸೂರು ಜಿಲ್ಲಾಧ್ಯಕ್ಷರನ್ನಾಗಿ ಅಪ್ಸರ್ ಪಾಷಾ ಅವರನ್ನು ಅಲ್ಪಸಂಖ್ಯಾತರ ಘಟಕದ ಹೆಚ್ ಡಿ ಕೋಟೆ ತಾಲೂಕು ಅಧ್ಯಕ್ಷರನ್ನಾಗಿ ಮತ್ತು ನಜೀರ್ ಅಹಮದ್ ಅವರನ್ನು ತಾಲೂಕು ಕಾರ್ಯದರ್ಶಿಯನ್ನಾಗಿ ನೇಮಕ ಮಾಡಿ ನೇಮಕಾತಿ ಪ್ರಮಾಣ ಪತ್ರ ನೀಡಲಾಯಿತು.ಸಂಸ್ಥಾಪಕ ಕಂ. ರಾಜ್ಯಾಧ್ಯಕ್ಷ ಸರ್ವೇಶ್ ಮಾತನಾಡಿ, ಸಂಘಟನೆ ವತಿಯಿಂದ ಫೆಬ್ರವರಿ 23 ರಂದು ನಾಲ್ವಡಿ ಕೃಷ್ಣರಾಜ ಒಡೆಯರ್ ಹೆಸರಿನಲ್ಲಿ ಬೃಹತ್ ಉದ್ಯೋಗ ಮೇಳ ಹಮ್ಮಿಕೊಂಡಿದ್ದು, ನಿರುದ್ಯೋಗ ಯುವಕ, ಯುವತಿಯರು, ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ, ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ಮನವಿ ಮಾಡಿದರು.ಅಲ್ಪ ಸಂಖ್ಯಾತರ ಯುವ ಘಟಕದ ರಾಜ್ಯಾಧ್ಯಕ್ಷ ನಯಾಜ್ ಪಾಷಾ, ವಕ್ಫ್ ಸಲಹಾ ಸಮಿತಿಯ ಮೈಸೂರು ಜಿಲ್ಲಾ ಸದಸ್ಯ ಶರಪುದ್ದೀನ್ ಮಾತನಾಡಿದರು.ಮೈಸೂರು…

Read More