Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ಇಂಡಿ: ವೈಯಕ್ತಿಕವಾಗಿ ದೊಡ್ಡ ಪ್ರಮಾಣದಲ್ಲಿ ಮದುವೆಗಳನ್ನು ಆಯೋಜಿಸಲು ಆಗುವ ದುಬಾರಿ ಖರ್ಚುಗಳನ್ನು ಸಾಮೂಹಿಕ ವಿವಾಹ ಕಡಿಮೆ ಮಾಡುವದು ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳಿಗೆ ಸಹಕಾರಿ ಎಂದು ಕಾಶಿ ಜಗದ್ಗುರು ಡಾ. ಮಲ್ಲಿಕಾರ್ಜುನ ವಿಶ್ವಾರಾಧ್ಯ ಶಿವಾಚಾರ್ಯರರು ಆಶೀರ್ವಚನ ನೀಡಿದರು.ತಾಲೂಕಿನ ತಡವಲಗಾ ಜೋಡಗುಡಿಯಲ್ಲಿ ಶ್ರೀ ಮರುಳ ಸಿದ್ದೇಶ್ವರ ಜಾತ್ರೆ ನಿಮಿತ್ಯ ಹಮ್ಮಿಕೊಂಡ ಸಾಮೂಹಿಕ ವಿವಾಹ ಮತ್ತು ಸರ್ವ ದರ್ಮ ಸಭೆ ಉದ್ದೇಶಿಸಿ ಮಾತನಾಡಿದರು.ಶಾಸಕ ಯಶವಂತರಾಯಗೌಡ ಪಾಟೀಲರು ಮಾತನಾಡಿ ತಡವಲಗಾದ ಶ್ರೀ ಮರುಳ ಸಿದ್ದೇಶ್ವರ ದೇವಸ್ಥಾನ ಆಡಳಿತ ಮಂಡಳಿಯವರು ವಧು ವರರಿಗೆ ಉಡುಗೆ ಬಂಗಾರದ ಉಡುಗೊರೆ ನೀಡುವ ಜೊತೆಗೆ ಎರಡು ಕಡೆಯ ಬಂಧುಗಳಿಗೆ ಉಟೋಪಚಾರ ಮಾಡಿರುವ ಕಾರ್ಯ ಶ್ಲಾಘನೀಯ. ಸಾಮೂಹಿಕ ವಿವಾಹ ಕಾರ್ಯ ಬಡ ಮತ್ತು ಮಧ್ಯಮ ವರ್ಗದವರಿಗೆ ಪೂರಕ ಎಂದರು..ತಡವಲಗಾದ ಅಭಿನವ ರಾಚೋಟೇಶ್ವರ ಶಿವಾಚಾರ್ಯರರು, ನಾಗಠಾಣದ ಮಲ್ಲಿಕಾರ್ಜುನ ಶಿವಾಚಾರ್ಯರರು, ಆಲಮೇಲದ ಚಂದ್ರಶೇಖರ ಶಿವಾಚಾರ್ಯರರು, ಸಂಸದ ರಮೇಶ ಜಿಗಜಿಣಗಿ , ದೆಹಲಿ ನಿಕಟಪೂರ್ವ ಪ್ರತಿನಿಧಿ ಶಂಕರಗೌಡ ಪಾಟೀಲ , ಮಂಜುನಾಥ ವಂದಾಲ…

Read More

ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಪಟ್ಟಣದ ಶ್ರೀವೀರಭದ್ರೇಶ್ವರ ೧೩ ನೇ ವರ್ಷದ ಕಾರ್ತಿಕೋತ್ಸವದ ಅಂಗವಾಗಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಲಿವೆ.ಕಾರ್ತಿಕೋತ್ಸವದ ಪ್ರಯುಕ್ತ ಹುಬ್ಬಳ್ಳಿ ಶ್ರೀಸಿದ್ಧಾರೂಢರ ಪುರಾಣ ಇದೇ ದಿ:೧೮ ರಂದು ಮಂಗಳವಾರದಿಂದ ಡಿಸೆಂಬರ್ ೮ರವರೆಗೆ ರಾತ್ರಿ ೦೮ ಘಂಟೆಗೆ ಜರುಗುವುದು. ವಡಗೇರಾ ತಾಲ್ಲೂಕು ಯಡ್ರಾಮಿಯ ನಾಗಯ್ಯಸ್ವಾಮಿ ಹಿರೇಮಠ ಇವರಿಂದ ಪುರಾಣ, ಕೆರೂಟಗಿ ಗ್ರಾಮದ ರೇಣುಕಾಚಾರ್ಯ ಗವಾಯಿಗಳಿಂದ ಸಂಗೀತ ಸೇವೆ, ಸುರುಪುರ ರಾಜಶೇಖರ ಗೆಜ್ಜಿ ಇವರಿಂದ ತಬಲಾ ಸೇವೆ ಜರುಗಲಿವೆ.ಕಾರ್ಯಕ್ರಮದ ಅಂಗವಾಗಿ ತೊಟ್ಟಿಲುಕಾರ್ಯ, ಸುಮಂಗಲೆಯರಿಗೆ ಉಡಿತುಂಬುವದು ಲಿಂಗದೀಕ್ಷೆ ಹಾಗೂ ಅಯ್ಯಾಚಾರ, ಶ್ರೀವೀರಭದ್ರೇಶ್ವರ ಕಲ್ಯಾಣೋತ್ಸವ ಸಹಿತ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಲಿವೆ. ಡಿಸೆಂಬರ್ ೮ ಸೋಮವಾರರಂದು ಧರ್ಮಸಭೆ, ದಿ:೯ ಮಂಗಳವಾರ ಪಲ್ಲಕ್ಕಿ ಉತ್ಸವ ಕುಂಭ ಕಳಶ, ಸಕಲ ವಾಧ್ಯವೈಭವಗಳ ಸಹಿತ ನಾಡಿನ ಪುರವಂತರ ಸೇವೆಯೊಂದಿಗೆ ಜರುಗುವುದು. ಈ ಎಲ್ಲ ಕಾರ್ಯಗಳಲ್ಲಿ ಸಕಲ ಸದ್ಬಕ್ತರು ಭಾಗವಹಿಸಿ ಶೋಭೆ ತರಲು ಕಾರ್ತಿಕೋತ್ಸವ ಸಮಿತಿ ಪ್ರಕಟಣೆಯ ಮೂಲಕ ತಿಳಿಸಿದೆ.

Read More

ಬೆಳಗಾವಿ ಚಳಿಗಾಲ ಅಧಿವೇಶನದ ಮೊದಲ ಅವಧಿಯಲ್ಲೇ ಅವಕಾಶಕ್ಕೆ ಮನವಿ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಬರುವ ಡಿಸೆಂಬರ್ 8 ರಿಂದ ಬೆಳಗಾವಿಯ ಚಳಿಗಾಲ ಅಧಿವೇಶನದಲ್ಲಿ ಉತ್ತರ ಕರ್ನಾಟಕ ಭಾಗದ ಸಮಗ್ರ ಅಭಿವೃದ್ಧಿ ವಿಷಯ ಕುರಿತು ಚರ್ಚೆಗೆ ಅಧಿವೇಶನದ ಮೊದಲ ಅವಧಿಯಲ್ಲೇ ಹೆಚ್ಚಿನ ಸಮಯಾವಕಾಶ ಕಲ್ಪಿಸುವಂತೆ ನಗರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ರವರು ಸಭಾಧ್ಯಕ್ಷರಾದ ಯು.ಟಿ.ಖಾದರ್ ರವರಿಗೆ ಸೋಮವಾರ ಪತ್ರ ಬರೆದಿದ್ದಾರೆ.ಉತ್ತರ ಕರ್ನಾಟಕ ಮತ್ತು ದಕ್ಷಿಣ ಕರ್ನಾಟಕ ಭಾಗಗಳ ಅಭಿವೃದ್ಧಿ ಹಾಗೂ ಸ್ಥಾನಮಾನಗಳ ಹಂಚಿಕೆಯಲ್ಲಿ ಪ್ರಾದೇಶಿಕ ತಾರತಮ್ಯವನ್ನು ನಿವಾರಿಸುವುದು ಅತೀ ಅವಶ್ಯವಿದೆ. ಆದರೆ, ಪ್ರತಿ ಭಾರಿ ಅಧಿವೇಶನ ಜರುಗಿದಾಗ ಉತ್ತರ ಕರ್ನಾಟಕದ ಸಮಗ್ರ ಅಭಿವೃದ್ಧಿ ಕುರಿತು ಅಧಿವೇಶನದ ಕೊನೆಯ ದಿನಗಳಲ್ಲಿ ಚರ್ಚೆಗೆ ಅವಕಾಶ ನೀಡುತ್ತಿರುವುದರಿಂದ, ಕೊನೆಯ ದಿನಗಳಲ್ಲಿ ಶಾಸಕರು, ಸಚಿವರ ಹಾಜರಾತಿ ಕಡಿಮೆಯಾಗಿ ಚರ್ಚೆಯೇ ನಡೆಯುವುದಿಲ್ಲ.ಕಾರಣ ಉತ್ತರ ಕರ್ನಾಟಕ ಭಾಗದ ಸಮಗ್ರ ಅಭಿವೃದ್ಧಿ ದೃಷ್ಟಿಯಿಂದ ಇದೇ ಡಿಸೆಂಬರ್ 8 ರಿಂದ ಬೆಳಗಾವಿಯಲ್ಲಿ ನಡೆಯುವ ಚಳಿಗಾಲ ಅಧಿವೇಶನನದಲ್ಲಿ ಉತ್ತರ ಕರ್ನಾಟಕ ಭಾಗದ ಕೃಷ್ಣಾ ಮೇಲ್ದಂಡೆ…

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಆದ್ಯಾತ್ಮಿಕ ಚಿಂತಕರು, ಭಾವೈಕ್ಯದ ಹರಿಕಾರರು, ಸಮಾಜ ಸುಧಾರಕರು, ಲೋಕ ಕಲ್ಯಾಣಕ್ಕಾಗಿ ತಮ್ಮ ಬದುಕನ್ನೇ ಮುಡಿಪಾಗಿಟ್ಟವರಿಗೆ ಯಾವ ದೇಶ, ಯಾವ ಊರಾದರೇನೆ? ಗುರಿಯೊಂದೆ ಅವರ ಧ್ಯೇಯವಾಗಿರುತ್ತದೆ. ಇದಕ್ಕೆ ಉತ್ತಮ ನಿದರ್ಶನ ಎಂದರೆ ಹೆಬ್ಬಾಳದ ಪರಮಾನಂದರು. ತಮಿಳುನಾಡಿನ ಶಿವಕಂಚಿಯಲ್ಲಿ ಜನಿಸಿದರೂ ಅವರ ನಿಸ್ವಾರ್ಥ ಜೀವನ, ಸಮಾಜ ಸುಧಾರಣೆಯ ತುಡಿತ, ಜೀವನದ ರಹಸ್ಯ, ಆಧ್ಯಾತ್ಮಕ್ಕೆ ಮನಸೋತು ಹಲವಾರು ಜನ ಅವರ ಶಿಷ್ಯರಾದರು. ಪರಮಾನಂದರು ಸುತ್ತಾಡಿದ ಪ್ರದೇಶಗಳಲೆಲ್ಲಾ ದೇಗುಲ ನಿರ್ಮಿಸಿದರು. ಆ ಸಾಲಿನಲ್ಲಿ ಸಿಂದಗಿ ತಾಲೂಕಿನ ಚಾಂದಕವಟೆ ಗ್ರಾಮದಲ್ಲಿಯೂ ಅವರು ಸುತ್ತಾಡಿದ ಪ್ರತಿತಿ ಇರುವುದರಿಂದ ಪರಮಾನಂದರ ದೇಗುಲ ಇಲ್ಲಿದೆ.ಛಟ್ಟಿ ಜಾತ್ರೆ ಎಂದೇ ಸಿಂದಗಿ ತಾಲೂಕಿನಲ್ಲಿ ಪ್ರಸಿದ್ಧಿ ಪಡೆದುಕೊಂಡಿರುವ ಚಾಂದಕವಟೆ ಗ್ರಾಮದ ಪರಮಾನಂದರ ಜಾತ್ರೆಯು ವಿಶೇಷವಾಗಿ ಗಮನ ಸೆಳೆಯುತ್ತಿದೆ. ಐತಿಹಾಸಿಕ ಹಿನ್ನೆಲೆ ಹಾಗೂ ಆಧ್ಯಾತ್ಮಿಕವಾಗಿ ಬೆಳೆದು ಬಂದಿರುವ ಈ ಜಾತ್ರೆಯಲ್ಲಿ ಸಾವಿರಾರು ಭಕ್ತರು ಆಗಮಿಸಿ ಪ್ರಸಾದ ಸೇವನೆ ಮಾಡುತ್ತಾರೆ. ಈ ಮೂಲಕ ಛಟ್ಟಿ ಜಾತ್ರೆ ಜಾತ್ಯಾತೀತವಾಗಿ ಹಾಗೂ ಧಾರ್ಮಿಕವಾಗಿ ಬೆಳೆದು ಬಂದಿದೆ. ಸೋಮುವಾರ ನಡೆದ…

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ೧೧೦/೩೩/೧೧ಕೆವ್ಹಿ ಸಿಂದಗಿ ವಿದ್ಯುತ್ ವಿತರಣಾ ಕೇಂದ್ರದ ಮೇಲೆ ಬರುವ ಎಫ್-೧೩ ಕಲ್ಯಾಣ ನಗರ ಹಾಗೂ ಸಿಂದಗಿ ನಗರ-೦೧ ಮಾರ್ಗದ ಮೇಲೆ ತುರ್ತು ನಿರ್ವಹಣಾ ಕಾರ್ಯ ಕೈಗೊಳ್ಳುತ್ತಿರುವುದರಿಂದ, ಸದರಿ ಮಾರ್ಗಗಳ ಮೇಲೆ ಬರುವ ಬಂದಾಳ ರಸ್ತೆ, ಗೋಲಿಬಾರ ಮಡ್ಡಿ, ಬಿ.ಟಿ.ಸುಣಗಾರ, ಗಣೇಶ ಲೇಔಟ್ ಮತ್ತು ಸಿಂದಗಿ ನಗರ-೦೧ರ ಮಾರ್ಗದ ಮೇಲೆ ಬರುವ ಬಂದಾಳ ರೋಡ, ಸ್ವಾಮಿ ವಿವೇಕಾನಂದ ವೃತ್ತ, ಬಜಾರ್ ಏರಿಯಾ, ಕನಕದಾಸ ವೃತ್ತ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನ.೧೮ರಂದು ಬೆಳಿಗ್ಗೆ ೧೦ಗಂಟೆಯಿಂದ ಸಾಯಂಕಾಲ ೫ಗಂಟೆಯವರೆಗೆ ವಿದ್ಯುತ್ ವ್ಯತ್ಯೆಯ ಉಂಟಾಗಲಿದ್ದು, ಸದರಿ ಮಾರ್ಗಗಳ ಮೇಲೆ ಬರುವ ಗ್ರಾಹಕರು ಹಾಗೂ ಸಾರ್ವಜನಿಕರು ಸಹಕರಿಸಬೇಕು ಎಂದು ಸಿಂದಗಿ ಹೆಸ್ಕಾಂ ಉಪ-ವಿಭಾಗ ಸಹಾಯಕ ನಿರ್ವಾಹಕ ಅಭಿಯಂತರರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಅಂಕಿ-ಅಂಶ ತುಂಬಾ ಮಹತ್ವ ಪಡೆದುಕೊಂಡಿವೆ.ಇದನ್ನು ಅರಿತುಕೊಂಡು ಜಾಗರೂಕತೆಯಿಂದ ಬಳಸಿಕೊಂಡರೆ ಬದುಕು ಯಶಸ್ವಿಯಾಗುತ್ತದೆಯೆಂದು ಪ್ರೊ.ಪಿ.ಎಲ್.ಹಿರೇಮಠ ಹೇಳಿದರು.ಪಟ್ಟಣದ ಬಿ.ಎಲ್.ಡಿ.ಇ. ಸಂಸ್ಥೆಯ ಬಸವೇಶ್ವರ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದಲ್ಲಿ ಆಯ್.ಕ್ಯೂ.ಎ.ಸಿ.ಹಾಗೂ ಸಂಖ್ಯಾಶಾಸ್ತ್ರ ವಿಭಾಗದ ಸಹಯೋಗದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಸರ್ಕಾರದ ಸಂಖ್ಯಾಶಾಸ್ತ್ರ ಸೇವೆಗಳಲ್ಲಿನ ವೃತ್ತಿ ಅವಕಾಶಗಳು ಎಂಬ ವಿಷಯದ ಒಂದು ದಿನದ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಪ್ರತಿಯೊಂದು ಕ್ಷೇತ್ರವು ಸ್ಪರ್ಧೆಯಿಂದ ಕೂಡಿಕೊಂಡಿದೆ. ನಾವು ಸತತ ಪ್ರಯತ್ನ ಹಾಗೂ ನಿರಂತರವಾದ ಪರಿಶ್ರಮದಿಂದ ಮುನ್ನಡೆದರೆ ಸ್ಪರ್ಧೆಯಲ್ಲಿ ಮುಂದೆ ಬರಲು ಸಾಧ್ಯವಿದೆಯೆಂದು ಅಭಿಪ್ರಾಯಪಟ್ಟರು.ಸಂಪನ್ಮೂಲ ವ್ಯಕ್ತಿ ಪ್ರೊ.ಎನ್.ಎಸ್.ಪಾಟೀಲ ಮಾತನಾಡಿ, ಮಾನವನ ಜೀವನದ ಪ್ರತಿಯೊಂದು ಕ್ಷೇತ್ರದಲ್ಲಿ ಅಂಕಿ ಅಂಶಗಳೇ ಮುಖ್ಯವಾಗಿವೆ.ಸರ್ಕಾರದ ಪ್ರತಿಯೊಂದು ಇಲಾಖೆಗಳಲ್ಲಿ ಹಾಗೂ ಯೋಜನೆಗಳ ರೂಪುರೇಷೆಗಳಿಂದ ಹಿಡಿದು ಆರ್ಥಿಕ ಅಭಿವೃದ್ಧಿಯ ವಿಶ್ಲೇಷಣೆಯವರೆಗೆ ಅಂಕಿ ಸಂಖ್ಯೆಗಳ ಪ್ರಭುತ್ವ ಮರೆಯುವಂತಿಲ್ಲ. ಸರ್ಕಾರದ ಸಂಖ್ಯಾಶಾಸ್ತ್ರ ಇಲಾಖೆಯಲ್ಲಿರುವ ತಾಲೂಕು ಮತ್ತು ಜಿಲ್ಲೆಗಳಿಗೆ ಸಂಬಂಧಿಸಿದ ವಿವಿಧ ಇಲಾಖೆಗಳಲ್ಲಿನ ಹುದ್ದೆಗಳ ಅವಕಾಶಗಳು ದೊರಕಿಸಿಕೊಳ್ಳುವುದರ ಕುರಿತು ಮಾಹಿತಿ ನೀಡಿದರು.ಸಂಖ್ಯಾಶಾಸ್ತ್ರದ ಉಪನ್ಯಾಸಕ ಪಿ.ಎಸ್.ಹೊರಕೇರಿ ಅವರು…

Read More

ಪ್ರಧಾನಿ ನರೇಂದ್ರ ಮೋದಿ ಭೇಟಿಯಾದ ಸಿಎಂ ಸಿದ್ದರಾಮಯ್ಯ | ಬಾಕಿಯಿರುವ ಹಲವು ಬೇಡಿಕೆಗಳ ಈಡೇರಿಕೆಗೆ ಮನವಿ ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ, ರಾಜ್ಯಕ್ಕೆ ಸಂಬಂಧಿಸಿದಂತೆ ಬಹುದಿನಗಳಿಂದ ಬಾಕಿಯಿರುವ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಮಾಡಿದ್ದಾರೆ.ಸೋಮವಾರ ಸಂಜೆ ಪ್ರಧಾನಿ ಮೋದಿ ಭೇಟಿ ಬಳಿಕ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ರಾಯಚೂರಿನಲ್ಲಿ ಏಮ್ಸ್ ಸ್ಥಾಪನೆ, ಕಬ್ಬು ಬೆಲೆ ನಿಗದಿ, 2,100 ಕೋಟಿ ರೂ.ಗಳಿಗೂ ಹೆಚ್ಚು ಪ್ರವಾಹ ಪರಿಹಾರ ಬಿಡುಗಡೆ ಮತ್ತು ನಿರ್ಣಾಯಕ ನೀರಾವರಿ ಯೋಜನೆಗಳಿಗೆ ಅನುಮೋದನೆ ನೀಡುವಂತೆ ಮನವಿ ಸಲ್ಲಿಸಿರುವುದಾಗಿ ತಿಳಿಸಿದರು.ರಾಯಚೂರಿನಲ್ಲಿ ಏಮ್ಸ್ ಸ್ಥಾಪನೆ: ರಾಯಚೂರಿನಲ್ಲಿ ಏಮ್ಸ್‌ ಸ್ಥಾಪನೆಗೆ ಅನುಮೋದನೆ ನೀಡುವಂತೆ ಪ್ರಧಾನಿ ಮೋದಿ ಅವರಿಗೆ ಮನವಿ ಸಲ್ಲಿಸಿದ್ದೇನೆ. ರಾಯಚೂರು ಜಿಲ್ಲೆಯು ಆರೋಗ್ಯ ರಕ್ಷಣೆ, ಶಿಕ್ಷಣ ಹಾಗೂ ತಲಾ ಆದಾಯದ ಮಟ್ಟದಲ್ಲಿ ಆರಂಭಿಕ ಹಂತದಲ್ಲಿದೆ. ದಲಿತರು ಹಾಗೂ ಹಿಂದುಳಿದ ವರ್ಗಗಳು ಹೆಚ್ಚಿನ ಸಂಖ್ಯೆಯಲ್ಲಿರುವ ಜಿಲ್ಲೆಯ ಜನರಿಗೆ ಗುಣಮಟ್ಟದ ರೆಫರೆಲ್ ವೈದ್ಯಕೀಯ…

Read More

ಉದಯರಶ್ಮಿ ದಿನಪತ್ರಿಕೆ ತಿಕೋಟಾ: ಪಟ್ಟಣದ ಮಲ್ಲಾರಟ್ಟಿ ಬೀದಿಯಲ್ಲಿ ಹೆಸ್ಕಾಮ ಅದಿಕಾರಿಗಳು ಪರಿಶೀಲನೆ ನಡೆಸಿ ಅಕ್ರಮ ವಿದ್ಯುತ ಸಂಪರ್ಕ ಕಂಡು ಬಂದ ಹಿನ್ನಲೆ ಶಾಖಾಧಿಕಾರಿಯಾದ ಸೋಮನಗೌಡ ಅವಟಿ, ಹಾಗೂ ಮೆಲ್ವಿಚಾರಕರಾದ ಸೋಮಣ್ಣ ನೀಡೋಣಿ ಸಿಬ್ಬಂದಿಗಳೊಂದಿಗೆ ದಾಳಿ ನಡೆಸಿ ಅಕ್ರಮ ವಿದ್ಯುತ್ ಸಂಪರ್ಕದಾರರಿಗೆ ನೋಟಿಸ ಜಾರಿ ಮಾಡಿ ವಿದ್ಯುತ ಸಂಪರ್ಕ ಕಟ್ಟ ಮಾಡಿ ಕಾನೂನು ಕ್ರಮಕ್ಕೆ ಮುಂದಾಗಿದ್ದಾರೆ.ಅಕ್ರಮ ವಿದ್ಯುತ್ ಸಂಪರ್ಕದಿಂದ ಅವಘಡ ಸಂಬವಿಸುತ್ತಿದ್ದು ಮತ್ತು ವಿದ್ಯುತ ಕೂಡಾ ಸೋರಿಕೆ ಆಗುವದರಿಂದ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿ ಸಂಬಂದ ಪಟ್ಟವರ ಮೇಲೆ ಕಾನೂನಿನ ಕ್ರಮ ಕೈಗೋಳ್ಳಲಾಗುವುದೆಂದು ಎಚ್ಚಿರಿಕೆ ನೀಡಿದರು.ಈ ವೇಳೆ ಸಂಜು ಪವಾರ, ರಾಣೋಭಾ ಮಿಸ್ಸಾಳ, ಶರಣು ಬನ್ನೆನವರ, ಹಸನ ಬಾಗವಾನ, ಶಿವಪ್ಪ ಕೋರಿ, ಹಾಗೂ ೨೪*೭ ಸಿಬ್ಬಂದಿಗಳು ಇದ್ದರು.

Read More

ಉದಯರಶ್ಮಿ ದಿನಪತ್ರಿಕೆ ಚಡಚಣ: ಅಕ್ಷರ ನಾದ ಕಲೆ, ಸಾಹಿತ್ಯ, ಸಾಂಸ್ಕೃತಿಕ ವೇದಿಕೆ ಬೆಂಗಳೂರು ಇವರು ಕೊಡಮಾಡುವ ಅಂತರಾಷ್ಟ್ರೀಯ ಐಮಾ ಅವಾರ್ಡ ಪ್ರಶಸ್ತಿಗೆ ಜಿಗಜೇವಣಿಯ ಗದ್ಯಾಳ ವಸ್ತಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯಗುರು ಮಾಳಪ್ಪ ವಾಘಮೋರೆ ಅವರು ಸಾಹಿತ್ಯ ಕ್ಷೇತ್ರದಲ್ಲಿ ಸಲ್ಲಿಸಿದ ಸಾಧನೆಯನ್ನು ಗುರುತಿಸಿ ಈ ಪ್ರಶಸ್ತಿಯನ್ನು ನೀಡಲಾಯಿತು.ಇತ್ತೀಚಿಗೆ ಬೆಂಗಳೂರಿನ ಜೆ.ಎಸ್.ಎಸ್ ಸಭಾ ಮಂಟಪದಲ್ಲಿ ನಡೆದ ಸಮಾರಂಭದಲ್ಲಿ ಅಕ್ಷರ ನಾದ ಸಂಸ್ಥೆಯ ರಾಜ್ಯಾಧ್ಯಕ್ಷೆ ಹಾಗೂ ಸಂಸ್ಥಾಪಕಿ ಡಾ| ಶೃತಿ ಮಧೂಸುದರನ್ ಅವರು ಮಾಳಪ್ಪ ವಾಘಮೋರೆ ಅವರಿಗೆ ಪ್ರಶಸ್ತಿ ಪತ್ರ ನೀಡಿ ಗೌರವಿಸಿದರು.

Read More

ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಪಟ್ಟಣದ ಶ್ರೀಸಿದ್ದೇಶ್ವರ ಸ್ವಾಮೀಜಿ ಪಿ.ಯು ಕಾಲೇಜು ವಿದ್ಯಾರ್ಥಿ ಅವಿನಾಶ ತಳಕೇರಿ ಇವನು ಕಲಬುರಗಿ ನಗರದ ಚಂದ್ರಶೇಖರ ಪಾಟೀಲ ಕ್ರೀಡಾಂಗಣದಲ್ಲಿ ಜರುಗಿದ ಪಿ.ಯು ಕಾಲೇಜುಗಳ ರಾಜ್ಯಮಟ್ಟದ ಕ್ರೀಡಾಕೂಟದ ಚಕ್ರಎಸೆತ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟçಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾನೆ.ವಿದ್ಯಾರ್ಥಿಯ ಸಾಧನೆಗೆ ಸಂಸ್ಥೆಯ ಅಧ್ಯಕ್ಷ ವಿ.ಕೆ.ಪಾಟೀಲ, ಪ್ರಾಂಶುಪಾಲ, ತರಬೇತಿದಾರ, ಶಿಕ್ಷಕ ಸಿಬ್ಬಂದಿ ವಿದ್ಯಾರ್ಥಿಗಳು ಹರ್ಷ ವ್ಯಕ್ತಪಡಿಸಿದ್ದಾರೆ.

Read More