Subscribe to Updates
Get the latest creative news from FooBar about art, design and business.
What's Hot
Author: editor.udayarashmi@gmail.com
ಉದಯರಶ್ಮಿ ದಿನಪತ್ರಿಕೆ ಕೊಲ್ಹಾರ: ಆಧ್ಯಾತ್ಮ ಮತ್ತು ಪುರಾಣಗಳ ಮಹತ್ವವನ್ನು ಅರಿತುಕೊಂಡು ಜೀವನದಲ್ಲಿ ಅಳವಡಿಸಿಕೊಳ್ಳಬೇಕು.ಸಂಸ್ಕಾರಯುತ ಸಮಾಜ ನಿರ್ಮಾಣಕ್ಕೆ ಆಧ್ಯಾತ್ಮ ಮತ್ತು ಪುರಾಣಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ನಿವೃತ್ತ ಶಿಕ್ಷಕರಾದ ಬಸವರಾಜ ಹಂಗರಗಿ ಹೇಳಿದರು.ಪಟ್ಟಣದ ದಿಗಂಬರೇಶ್ವರ ಸಂಸ್ಥಾನ ಮಠದಲ್ಲಿ ದಿಗಂಬರೇಶ್ವರ ಜಾತ್ರಾ ಮಹೋತ್ಸವದ ನಿಮಿತ್ಯ ಹಮ್ಮಿಕೊಂಡ ಮೂರು ಲೋಕದ ಗಂಡ ಬಬಲಾದಿ ಸದಾಶಿವ ಸ್ವಾಮೀಜಿಗಳ ಪುರಾಣ ಪ್ರಾರಂಭೋತ್ಸವ ಮತ್ತು ಯುಗಾದಿಯ ಹೊಸ ವರ್ಷಾಚರಣೆ ಹಾಗೂ ಬೇವು ಬೆಲ್ಲ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಆಧ್ಯಾತ್ಮವು ಮನಸ್ಸಿಗೆ ಶಾಂತಿ ನೀಡುವುದಲ್ಲದೆ, ಮಾನವ ಜೀವನವನ್ನು ಪಾವನಗೊಳಿಸುತ್ತದೆ ಎಂದು ಹೇಳಿದರು.ಪುರಾಣಗಳು ಕಥೆಗಳ ಮೂಲಕ ಧರ್ಮ, ಸತ್ಯ ಮತ್ತು ನೀತಿ ಮೌಲ್ಯಗಳನ್ನು ಬೋಧಿಸುತ್ತವೆ. ಇಂದಿನ ಯುವಜನತೆ ಮತ್ತು ಮಕ್ಕಳಲ್ಲಿ ಸಂಸ್ಕಾರ ಬೆಳೆಸಲು ಪುರಾಣ ಪ್ರವಚನಗಳು ಮತ್ತು ಸತ್ಸಂಗಗಳು ಅಗತ್ಯ.“ಇಂದಿನ ಯುಗದಲ್ಲಿ ಮಕ್ಕಳಲ್ಲಿ ಪಾಲಕರ ಮಾತು ಕೇಳುವ ಸಂಸ್ಕೃತಿ ನಿಧಾನವಾಗಿ ಕುಗ್ಗುತ್ತಿದೆ. ಸಂಸ್ಕಾರಯುತ ಶಿಕ್ಷಣ, ಸತ್ಸಂಗ ಹಾಗೂ ಧಾರ್ಮಿಕ ಚಟುವಟಿಕೆಗಳ ಮೂಲಕ ಮಕ್ಕಳಲ್ಲಿ ಹಿರಿಯರಿಗೆ ಗೌರವ ಮತ್ತು ಪಾಲಕರ ಮಾತು…
ಪಶುವೈದ್ಯೆ ಡಾ.ಸಮೀಕ್ಷಾ ರೆಡ್ಡಿ ನಿಧನಕ್ಕೆ ಕರ್ನಾಟಕ ಪಶು ವೈದ್ಯಕೀಯ ಸಂಘದ ರಾಜ್ಯಾಧ್ಯಕ್ಷ ಡಾ.ಶಿವಶರಣಪ್ಪ ಜಿ.ಯಲಗೋಡ, ಪ್ರಧಾನ ಕಾರ್ಯದರ್ಶಿ ಡಾ.ರಾಮಚಂದ್ರಯ್ಯ ಎಂ ಸಂತಾಪ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಶಿವಮೊಗ್ಗದ ಮೃಗಾಲಯದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪಶುವೈದ್ಯೆ ಡಾ.ಸಮೀಕ್ಷಾ ರೆಡ್ಡಿಯವರು, ನೀರಾನೆಗೆ ಚಿಕಿತ್ಸೆ ನೀಡುವ ಸಂದರ್ಭದಲ್ಲಿ ದಾಳಿಗೊಳಗಾಗಿ ಇತ್ತೀಚೆಗೆ ಮೃತರಾಗಿದ್ದು, ಅವರ ನಿಧನವು ಪಶುವೈದ್ಯಕೀಯ ವೃತ್ತಿಗೆ ತುಂಬಲಾರದ ನಷ್ಟವನ್ನುಂಟು ಮಾಡಿದೆ ಎಂದು ಕರ್ನಾಟಕ ಪಶು ವೈದ್ಯಕೀಯ ಸಂಘ ರಾಜ್ಯಾಧ್ಯಕ್ಷ ಡಾ.ಶಿವಶರಣಪ್ಪ ಜಿ.ಯಲಗೋಡ ಮತ್ತು ಪ್ರಧಾನ ಕಾರ್ಯದರ್ಶಿ ಡಾ.ರಾಮಚಂದ್ರಯ್ಯ ಎಂ ಸಂತಾಪ ವ್ಯಕ್ತಪಡಿಸಿದ್ದಾರೆ. ಈ ಕುರಿತು ಸೋಮವಾರ ಪತ್ರಿಕಾ ಪ್ರಕಟಣೆ ಹೊರಡಿಸಿದ ಅವರು, ಡಾ.ಸಮೀಕ್ಷಾ ರೆಡ್ಡಿ ನಿಧನಕ್ಕೆ ಕರ್ನಾಟಕ ಪಶು ವೈದ್ಯಕೀಯ ಸಂಘವು ತೀವ್ರ ಸಂತಾಪ ವ್ಯಕ್ತಪಡಿಸುತ್ತದೆ ಎಂದಿದ್ದಾರೆ.ವನ್ಯಜೀವಿ ಪಶುವೈದ್ಯಕೀಯ ಸೇವೆಯನ್ನು ಉತ್ಸಾಹದಿಂದಲೇ ಆಯ್ಕೆ ಮಾಡಿಕೊಂಡು ನಿಷ್ಠೆಯಿಂದ ಕರ್ತವ್ಯ ನಿರ್ವಹಿಸುತ್ತಿದ್ದ ಡಾ.ಸಮೀಕ್ಷಾ ರೆಡ್ಡಿಯವರು ಕರ್ತವ್ಯಕ್ಕೆ ಹಾಜರಾದ ಕೇವಲ 1 ¾ ತಿಂಗಳಲ್ಲೇ ನಿರಾನೆ ದಾಳಿಗೆ ತುತ್ತಾಗಿರುವುದು ದುರದೃಷ್ಟಕರ.ಡಾ.ಸಮೀಕ್ಷಾ ರೆಡ್ಡಿಯವರ ಸಾವಿನ ಕುರಿತಾಗಿ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳು…
ಉದಯರಶ್ಮಿ ದಿನಪತ್ರಿಕೆ ಜಮಖಂಡಿ: 2025-26ನೇ ಸಾಲಿನ ಕಬ್ಬಿನ ಬಾಕಿ ಬಿಲ್ಲುಗಳನ್ನು ಇನ್ನೂ ಬಿಡುಗಡೆ ಮಾಡದ ಹಿನ್ನೆಲೆಯಲ್ಲಿ ಉತ್ತರ ಕರ್ನಾಟಕದ ಬಾಗಲಕೋಟೆ, ವಿಜಯಪುರ ಹಾಗೂ ಬೆಳಗಾವಿ ಜಿಲ್ಲೆಗಳ ಸಕ್ಕರೆ ಕಾರ್ಖಾನೆ ಮಾಲೀಕರ ವಿರುದ್ಧ ಜಿಲ್ಲಾ ರೈತ ಮುಖಂಡ ಈರಪ್ಪ ಹಂಚಿನಾಳ ತೀವ್ರ ಆಕ್ರೋಶ ವ್ಯಕ್ತಪಡಿಸಿ ಹೋರಾಟದ ಎಚ್ಚರಿಕೆ ನೀಡಿದರು.ನಗರದ ಎಸ್.ಆರ್. ಕ್ಲಬ್ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರೈತರು ವರ್ಷ ಪೂರ್ತಿ ಶ್ರಮಪಟ್ಟು ಬೆಳೆದ ಕಬ್ಬಿನ ಹಣವನ್ನು ಬಿಡುಗಡೆಗೆ ತಡಮಾಡುವುದು ಅನ್ಯಾಯವಾಗಿದ್ದು, ತಕ್ಷಣ ಬಾಕಿ ಬಿಲ್ಲುಗಳನ್ನು ಬಿಡುಗಡೆ ಮಾಡಬೇಕು.ಇಲ್ಲವಾದರೆ ರಾಜ್ಯ ಮಟ್ಟದ ಹೋರಾಟವನ್ನು ಪ್ರಾರಂಭಿಸಲಾಗುವುದು ಎಂದು ಕಠಿಣ ಎಚ್ಚರಿಕೆ ನೀಡಿದರು.ಮಾರ್ಚ್ 30 ರಂದು ಬೆಳಗ್ಗೆ 11 ಗಂಟೆಗೆ ಜಮಖಂಡಿ ತಾಲೂಕಿನ ದೇಸಾಯಿ ವೃತ್ತದಲ್ಲಿ ಸಾವಿರಾರು ಕಬ್ಬು ಬೆಳೆಗಾರರು ಸೇರಿ ಮಹಾ ಪ್ರತಿಭಟನೆ ನಡೆಸಲಿದ್ದಾರೆ. ಈ ಪ್ರತಿಭಟನೆಯಲ್ಲಿ ಭಾಗವಹಿಸಲು ಬಾಗಲಕೋಟೆ ಜಿಲ್ಲೆಯ ವಿವಿಧ ತಾಲೂಕುಗಳಿಂದ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ಕರೆ ನೀಡಲಾಗಿದೆ. ಹೋರಾಟದ ಮುಂದಿನ ಹಂತದ ರೂಪ ರೇಷೆಯನ್ನು ಅದೇ ದಿನ ನಿರ್ಧರಿಸಲಾಗುವುದು…
ಉದಯರಶ್ಮಿ ದಿನಪತ್ರಿಕೆ ಚಡಚಣ: ತಾಲೂಕಿನ ಹತ್ತಳ್ಳಿ ಗ್ರಾಮದಲ್ಲಿ ಮೂಲಭೂತ ಸೌಕರ್ಯಗಳ ಕೊರತೆ ಇರುವ ಹಿನ್ನೆಲೆಯಲ್ಲಿ ಕೆಆರ್ಎಸ್ ಪಕ್ಷದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಗ್ರಾ.ಪಂ.ಅಭಿವೃದ್ಧಿ ಅಧಿಕಾರಿ (ಪಿಡಿಒ) ಶಿವಾನಂದ ಬಿರಾದಾರ ಅವರಿಗೆ ಮನವಿ ಸಲ್ಲಿಸಿದರು.ಬೇಸಿಗೆಯ ಸಮಯದಲ್ಲಿ ಗ್ರಾಮದಲ್ಲಿ ಕುಡಿಯುವ ನೀರಿನ ತೀವ್ರ ಸಮಸ್ಯೆ ಎದುರಾಗಿದೆ. ಸಮರ್ಪಕ ನೀರಿನ ಸರಬರಾಜು ಇಲ್ಲದ ಕಾರಣ ಗ್ರಾಮಸ್ಥರು ಸಂಕಷ್ಟ ಅನುಭವಿಸುತ್ತಿದ್ದಾರೆ. ಕೂಡಲೇ ಶಾಶ್ವತ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕೆಂದು ಆಗ್ರಹಿಸಿದರು.ಗ್ರಾಮದಲ್ಲಿ ಒಳಚರಂಡಿ ವ್ಯವಸ್ಥೆ ಸರಿಯಾಗಿಲ್ಲದ ಕಾರಣ ನೀರು ರಸ್ತೆಯ ಮೇಲೆಯೇ ಹರಿದು ಪರಿಸರ ಅಸ್ವಚ್ಛವಾಗುತ್ತಿದೆ. ಇದರಿಂದ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆ ಹೆಚ್ಚಿದ್ದು, ಕೀಟ-ಕೀಟಕಗಳ ಸಂಖ್ಯೆ ಹೆಚ್ಚಾಗಿದೆ. ರಾತ್ರಿ ವೇಳೆ ಕಚ್ಚುಹುಳಗಳ ಕಾಟದಿಂದ ಗ್ರಾಮಸ್ಥರು ತೊಂದರೆ ಅನುಭವಿಸುತ್ತಿದ್ದಾರೆ. ಈ ಸಮಸ್ಯೆಯನ್ನು ತಕ್ಷಣ ಪರಿಹರಿಸಲು ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿದರು.ಇನ್ನು ಗ್ರಾಮದಲ್ಲಿ ರಸ್ತೆ ಬದಿಯ ವಿದ್ಯುತ್ ಕಂಬಗಳಿಗೆ ಬಲ್ಬ್ಗಳನ್ನು ಅಳವಡಿಸದಿರುವುದರಿಂದ ರಾತ್ರಿ ವೇಳೆ ಅಂಧಕಾರ ಆವರಿಸುತ್ತಿದ್ದು, ಸಾರ್ವಜನಿಕರಿಗೆ ಸಂಚಾರದಲ್ಲಿ ತೊಂದರೆ ಉಂಟಾಗಿದೆ. ಆದ್ದರಿಂದ ತುರ್ತಾಗಿ ಬೀದಿ ದೀಪಗಳ ವ್ಯವಸ್ಥೆ…
ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಒಳಮೀಸಲಾತಿ ರೊಸ್ಟರ್ ಹಂಚಿಕೆ ವಿರೋಧಿಸಿ, ಹಳೆಯ ನಿಯಮದಂತೆ ನೇಮಕಾತಿ ನಡೆಸಲು ಒತ್ತಾಯಿಸಿ ಬಂಜಾರ, ಭೋವಿ, ಕೊರಮ, ಕೊರಚ, ಚರ್ಮಕಾರ, ಸೂಕ್ಷ್ಮ ಪರಿಶಿಷ್ಟ ಜಾತಿಗಳ ರಾಜ್ಯ ಮಹಾ ಒಕ್ಕೂಟದಿಂದ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಮಾ.೨೪ರಂದು ಭೋವಿ ಗುರುಪೀಠದ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿಯವರ ನೇತೃತ್ವದಲ್ಲಿ ನಡೆಯುವ ಬೃಹತ್ ಪ್ರತಿಭಟನೆಯಲ್ಲಿ ಸಿಂದಗಿ ತಾಲೂಕಿನ ಬಂಜಾರ, ಭೋವಿ, ಕೊರಮ, ಕೊರಚ, ಚರ್ಮಕಾರ ಜಾತಿಗಳ ಸಮುದಾಯದ ಜನರು ಸ್ವಯಂ ಪ್ರೇರಿತರಾಗಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗ ವಹಿಸುವಂತೆ ಕರ್ನಾಟಕ ಮೀಸಲಾತಿ ಸಂರಕ್ಷಣಾ ಒಕ್ಕೂಟ (ಅ) ರಾಜ್ಯ ಸಮಿತಿಯ ಮುಖಂಡ ಪಂಡಿತ ಯಂಪೂರೆ ಮನವಿ ಮಾಡಿಕೊಂಡಿದ್ದಾರೆ.ಈ ಕುರಿತು ಪತ್ರಿಕಾ ಹೇಳಿಕ ನೀಡಿದ ಅವರು, ಒಳ ಮೀಸಲಾತಿ ಕುರಿತು ನಾಗಮೋಹನ್ದಾಸ್ ಆಯೋಗ ನೀಡಿರುವ ವರದಿ ಅವೈಜ್ಞಾನಿಕವಾಗಿದ್ದು ಒಳ ಮೀಸಲಾತಿ ಕುರಿತು ನಾಗಮೋಹನ್ದಾಸ್ ಆಯೋಗದ ವರದಿ ಅವೈಜ್ಞಾನಿಕವಾಗಿದ್ದು ಇದನ್ನು ರಾಜ್ಯ ಸರ್ಕಾರ ಇದನ್ನು ತಿರಸ್ಕಾರ ಮಾಡಿ ಎಲ್ಲ ಸಮುದಾಯದ ಹಿತಾಸಕ್ತಿಗಾಗಿ ನಮ್ಮ ಮಕ್ಕಳ ಮುಂದಿನ ಭವಿಷ್ಯಕ್ಕಾಗಿ ಮಾಡುವ ಹೋರಾಟ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಮೇ ಸಾಹಿತ್ಯ ಮೇಳ ವಿಜಯಪುರ ಬಳಗ, ದಲಿತ ಮತ್ತು ಪ್ರಗತಿಪರ ಸಂಘಟನೆಗಳ ಆಶ್ರಯದಲ್ಲಿ ಹಮ್ಮಿಕೊಳ್ಳಲಾದ ಬಿಜಾಪುರ ಬುದ್ಧ, ಬಸವ, ಬಾಬಾಸಾಹೇಬ ಅಂಬೇಡ್ಕರ್ ಪುಸ್ತಕ ಮೇಳದ ವಾಲ್ ಪೋಸ್ಟರ್ರನ್ನು ಚಿಂತಕ ಬಸವರಾಜ ಸೂಳಿಭಾವಿ ಅವರು ಬಿಡುಗಡೆಗೊಳಿಸಿದರು.ನಗರದ ಸಾರಿಪುತ್ರ-ಬೋಧಿಧಮ್ಮ ಬುದ್ಧವಿಹಾರದಲ್ಲಿ ಪುಸ್ತಕ ಮೇಳದ ಉಪಸಮಿತಿಯ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.ದರ್ಬಾರ್ ಹೈಸ್ಕೂಲ್ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿರುವ ಬಿಜಾಪುರ ಬುದ್ಧ, ಬಸವ, ಬಾಬಾಸಾಹೇಬ ಅಂಬೇಡ್ಕರ್ ಪುಸ್ತಕ ಮೇಳದ ಉಪಸಮಿತಿ ಸದಸ್ಯರು ಪುಸ್ತಕ ಮೇಳವನ್ನು ಯಶಸ್ವಿಗೊಳಿಸಲು ಪ್ರತಿಯೊಬ್ಬರೂ ಶ್ರಮಿಸಬೇಕೆಂದು ಹೇಳಿದರು.ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಎಸ್ಸಿ/ಎಸ್ಟಿ ಸರ್ಕಾರಿ ನೌಕರರ ಸಮನ್ವಯ ಸಮಿತಿಯ ಬಿ.ಎಚ್. ನಾಡಗಿರಿ, ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಘಟನಾ ಸಂಚಾಲಕ ಚನ್ನು ಕಟ್ಟಿಮನಿ, ಮಾನವ ಬಂಧುತ್ವ ವೇದಿಕೆಯ ಪ್ರಭುಗೌಡ ಪಾಟೀಲ, ನಿ, ಬೌದ್ಧವಿಹಾರ ನಿರ್ಮಾಣ ಸಮಿತಿ ಅಧ್ಯಕ್ಷ ರಾಜಶೇಖರ ಯಡಹಳ್ಳಿ, ಉಪಾಧ್ಯಕ್ಷ ಶಶಿಕಾಂತ ಹೊನವಾಡಕರ್, ಪ್ರಧಾನ ಕಾರ್ಯದರ್ಶಿ ನಾಗರಾಜ ಲಂಬು, ನಿರ್ದೇಶಕ ರಾಜೇಶ ತೊರವಿ, ಸಂಘಟಕರಾದ ಅನಿಲ ಹೊಸಮನಿ, ಯಮನಪ್ಪ ಗುಣಕಿ,…
ಉದಯರಶ್ಮಿ ದಿನಪತ್ರಿಕೆ ಇಂಡಿ: ಹಿಂದೆ ಒಂದು ಕಾಲವಿತ್ತು ಹೆಣ್ಣು ಹುಟ್ಟಿದರೆ ಹುಣ್ಣು ಅನ್ನುತ್ತಿದ್ದರು, ಇಂದು ಮಹಿಳೆ ಎಲ್ಲ ರಂಗಗಳಲ್ಲೂ ಪ್ರಗತಿ ಸಾದಿಸಿದ್ದು ಇಂದು ಹೆಣ್ಣು ಹುಟ್ಟಿದರೆ ಹೊನ್ನ ಬಂದತೆ ಆಗುತ್ತಿದೆ ಎಂದು ಶಾಸಕ ಯಶವಂತರಾಯಗೌಡ ಪಾಟೀಲರು ಹೇಳಿದರು.ನಗರ ಸ್ಪಂದನಾ ಆಸ್ಪತ್ರೆಯಲ್ಲಿ ಹೆಣ್ಣು ಮಗು ಸಹಜವಾಗಿಯಾಗಲಿ ಸಿಜರಿನ್ ಮುಖಾಂತರವಾಗಲಿ ಹುಟ್ಟಿದರೆ ಹೆರಿಗೆ ಖರ್ಚು ಉಚಿತ ಎಂದು ಮಹಿಳಾ ದಿನಾಚರಣೆಯ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು.ಭ್ರೂಣ ಹತ್ಯೆ ಬೇಡ, ಅದಕ್ಕಾಗಿ ಅವಕಾಶ ನೀಡಬಾರದು, ಬಸವಣ್ಣನವರ ಕಾಲದಿಂದಲೂ ಸಮಾಜದಲ್ಲಿ ಹೆಣ್ಣಿಗೆ ಸಮಾನತೆ ನೀಡಿದ್ದು ಇಂದಿನ ವರೆಗೂ ಅದು ಮುಂದು ವರೆದಿದೆ. ಹೆಣ್ಣು ತನ್ನ ತಂದೆಯ ಮನೆ ಬೆಳಗಿ ಗಂಡನ ಮನೆಯೂ ಬೆಳಗುತ್ತಿದ್ದಾಳೆ. ಹೀಗಾಗಿ ಹೆಣ್ಣು ಹೊನ್ನಾಗಿ ಪರಿವರ್ತನೆ ಯಾಗಿದ್ದಾರೆ ಎಂದರು.ಬುರಾಣಪುರ ಆರೂಢಮಠದ ಯೋಗೇಶ್ವರಿ ಮಾತಾಜಿ ಮಾತನಾಡಿ ಹೆನ್ನು ಹುಟ್ಟಿದರೆ ಹೆರಿಗೆ ಉಚಿತ ಎಂಬ ವಿಷಯ ಪ್ರತಿ ಮನೆ ತಲುಪಬೇಕು. ಎಲ್ಲ ಕಡೆಗೂ ಪ್ರಚಾರವಾಗಬೇಕು. ಈ ವಿಷಯ ಮಹಿಳೆ ಆಸಕ್ತಿ ವಹಿಸಿ ಎಲ್ಲರಿಗೂ ತಿಳಿಹೇಳಬೇಕು ಎಂದರು.ಆಸ್ಪತ್ರೆಯ ಆಡಳಿತ ಮಂಡಳಿ ಅಧ್ಯಕ್ಷ…
ದೇವರಹಿಪ್ಪರಗಿ ಶ್ರೀಮಡಿವಾಳ ಮಾಚಿದೇವ ಜನ್ಮಭೂಮಿ ಪ್ರತಿಷ್ಠಾನ ಕಲೆ, ಸಾಹಿತ್ಯ, ಸಾಂಸ್ಕೃತಿಕ ವೇದಿಕೆಯ ೫ನೇ ವಾರ್ಷಿಕೋತ್ಸವ | ಸಾಧಕರಿಗೆ ರಾಷ್ಟ್ರೀಯ ವೀರಗಣಾಚಾರಿ ಪ್ರಶಸ್ತಿ ಪ್ರದಾನ ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಕಲ್ಯಾಣ ಕ್ರಾಂತಿಯಲ್ಲಿ ಮಡಿವಾಳ ಮಾಚಿದೇವರು ಅಣ್ಣ ಬಸವಣ್ಣನ ಸೇರಿದಂತೆ ನೂರಾರು ಶರಣರ ವಚನಗಳನ್ನು ರಕ್ಷಿಸಿ ವಚನನಿಧಿರಕ್ಷಕರೆಂದೇ ಹೆಸರಾಗಿದ್ದಾರೆ ಎಂದು ಶಾಸಕ ರಾಜುಗೌಡ ಪಾಟೀಲ(ಕುದರಿ ಸಾಲವಾಡಗಿ) ಹೇಳಿದರು.ಪಟ್ಟಣದ ಕಲ್ಮೇಶ್ವರ ದೇವಸ್ಥಾನ ಸಭಾಭವನದಲ್ಲಿ ಭಾನುವಾರ ಜರುಗಿದ ಶ್ರೀಮಡಿವಾಳ ಮಾಚಿದೇವ ಜನ್ಮಭೂಮಿ ಪ್ರತಿಷ್ಠಾನ ಕಲೆ, ಸಾಹಿತ್ಯ, ಸಾಂಸ್ಕೃತಿಕ ವೇದಿಕೆಯ ೫ನೇ ವಾರ್ಷಿಕೋತ್ಸವ ಹಾಗೂ ರಾಷ್ಟ್ರೀಯ ವೀರಗಣಾಚಾರಿ ಪ್ರಶಸ್ತಿ ವಿತರಣಾ ಸಮಾರಂಭ ಉದ್ಘಾಟಿಸಿ ಮಾತನಾಡಿದರು. ಪಟ್ಟಣದಲ್ಲಿ ಪ್ರತಿಷ್ಠಾನದ ಮೂಲಕ ಪ್ರತಿವರ್ಷ ಇಂಥ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿರುವುದು ಅತ್ಯಂತ ಶ್ಲಾಘನೀಯ ಕಾರ್ಯ ಎಂದರು.ಗದ್ದಿಗೆಮಠದ ಮಡಿವಾಳೇಶ್ವರ ಸ್ವಾಮೀಜಿ ಆಶೀರ್ವಚನ ನೀಡಿದರು. ಹಾಗೂ ಕೊಕಟನೂರ ಗದ್ದಿಗೆಮಠದ ಶ್ರೀಗಳು ಸಾನಿಧ್ಯ ವಹಿಸಿದ್ದರು. ಸಂಚಾಲಕರಾದ ಬಿ.ಎಂ.ಪಾಟೀಲ ಪ್ರಾಸ್ತಾವಿಕವಾಗಿ ಮಾತನಾಡಿದರು.ಪ್ರತಿಷ್ಠಾನದ ಗೌರವಾಧ್ಯಕ್ಷ ಕಾಶೀಪತಿ ದೇವಣಗಾಂವ ಅಧ್ಯಕ್ಷತೆ ವಹಿಸಿದ್ದರು.ಸಮಾರಂಭದಲ್ಲಿ ರಾಷ್ಟ್ರೀಯ ವೀರಗಣಾಚಾರಿ ಪ್ರಶಸ್ತಿ ಪುರಸ್ಕೃತರಾದ ಡಾ.ಸತೀಶ ನಾಡಗೌಡ (ವೈದ್ಯಕೀಯ), ನಂದು…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕಲಬುರ್ಗಿಯ ಕೇಂದ್ರಿಯ ವಿಶ್ವವಿದ್ಯಾಲಯಕ್ಕೆ ಸಿಯುಇಟಿ ಮೂಲಕ ಸ್ನಾತಕೋತ್ತರ ಪರೀಕ್ಷೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಈಗಾಗಲೇ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭಗೊಂಡಿದ್ದು, ಜನವರಿ ೧೪ ರವರೆಗೆ ಪ್ರವೇಶ ಪಡೆದುಕೊಳ್ಳಬಹುದಾಗಿದೆ ಎಂದು ಕಲಬುರ್ಗಿ ಕೇಂದ್ರಿಯ ವಿವಿ ಹಿಂದಿ ವಿಭಾಗದ ಪ್ರಾಧ್ಯಾಪಕ ಪ್ರೊ.ಗಣೇಶ ಪವಾರ ಹೇಳಿದರು.ಸುದ್ದಿಗೋಷ್ಠಿಯಲ್ಲಿ ಈ ಕುರಿತು ವಿವರಣೆ ನೀಡಿದ ಅವರು, ವಿಶ್ವವಿದ್ಯಾಲಯದಲ್ಲಿ ಹಲವಾರು ಕೋರ್ಸ್ಗಳ ಅಧ್ಯಯನ ಅವಕಾಶವಿದ್ದು, ಇಂಗ್ಲಿಷ್, ಹಿಂದಿ, ಕನ್ನಡ, ಭಾಷಾಶಾಸ್ತ್ರ, ಜಾನಪದ ಮತ್ತು ಬುಡಕಟ್ಟು ಅಧ್ಯಯನ, ಅರ್ಥಶಾಸ್ತ್ರ, ಇತಿಹಾಸ, ಸಾರ್ವಜನಿಕ ಆಡಳಿತ, ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ,ಪ್ರವಾಸೋದ್ಯಮ – ಪ್ರಯಾಣ ನಿರ್ವಹಣೆ, ಮನೋವಿಜ್ಞಾನ, ಭುಗೋಳಶಾಸ್ತç, ಭೂವಿಜ್ಞಾನ, ಗಣಿತ ಮೊದಲಾದ ಕೋರ್ಸ್ಗಳ ಪ್ರವೇಶ ಜೊತೆಗೆ ಎಂ.ಟೆಕ್ ಪವರ್ ಆ್ಯಂಡ್ ಎನರ್ಜಿ ಸೋರ್ಸಸ್ ಇಂಜಿನಿಯರಿಂಗ್, ಆರ್ಎಫ್ ಮೈಕ್ರೋವೇವ್ ಇಂಜಿನಿಯರಿಂಗ್ನಲ್ಲಿ ಅಧ್ಯಯನಕ್ಕೆ ಅವಕಾಶವಿದೆ, ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತದಲ್ಲಿ ಎಂಪಿಎ, ಇನ್ಸುö್ಯಟ್ರುö್ಯಮೆಂಟಲ್ ಸಂಗೀತದಲ್ಲಿ ಎಂಪಿಎ, ಸಸ್ಯಶಾಸ್ತç, ಪ್ರಾಣಿ ಶಾಸ್ತç ಹೀಗೆ ಅನೇಕ ಕೋರ್ಸ್ಗಳ ಅಧ್ಯಯನಕ್ಕೆ ಅವಕಾಶವಿದೆ ಎಂದರು.ಕಲ್ಯಾಣ ಕರ್ನಾಟಕ ಭಾಗದ ವಿದ್ಯಾರ್ಥಿಗಳಿಗೆ ಶೇ.೮…
ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ಮಹಾತ್ಮರು ಮುತ್ತು ಇದ್ದಂತೆ. ಅವರು ಯಾವಾಗಲೂ ಅಮರರಾಗಿ ಉಳಿಯುತ್ತಾರೆ. ಅವರು ನೀಡಿದ ಸಂದೇಶಗಳು ಶಾಶ್ವತವಾಗಿ ಇರುತ್ತವೆ. ಇದನ್ನು ನಾವೆಲ್ಲರೂ ಅರಿತುಕೊಳ್ಳಬೇಕೆಂದು ಯರನಾಳ ವಿರಕ್ತಮಠದ ಗುರುಸಂಗನಬಸವ ಸ್ವಾಮೀಜಿ ಹೇಳಿದರು.ತಾಲೂಕಿನ ಯರನಾಳ ಗ್ರಾಮದ ವಿರಕ್ತಮಠದ ಕರ್ತೃು ಜಗದ್ಗುರು ಪಂಪಾಪತಿ ಶಿವಯೋಗಿಗಳ ಜಾತ್ರಾಮಹೋತ್ಸವ, ಬಂಥನಾಳದ ಸಂಗನಬಸವ ಸ್ವಾಮೀಜಿಯವರ 125ನೇ ಜಯಂತಿ, ನೂತನ ಮಹಾದ್ವಾರ ಲೋಕಾರ್ಪಣೆ ಮತ್ತು ದ್ವಿಸಹಸ್ರ ಮಾತೆಯರ ಉಡಿತುಂಬುವ ಕಾರ್ಯಕ್ರಮ ಹಾಗೂ ಮಹಾರಥೋತ್ಸವದಂಗವಾಗಿ ಹಮ್ಮಿಕೊಂಡಿದ್ದ ಬಂಥನಾಳ ಸಂಗನಬಸವ ಶಿವಯೋಗಿಗಳ ಪುರಾಣ ಮಹಾಮಂಗಲ ಕಾರ್ಯಕ್ರಮ ಹಾಗೂ ಸದ್ಭಾವನ ಬುತ್ತಿ ಊಟ ಕಾರ್ಯಕ್ರಮದ ನೇತೃತ್ವ ವಹಿಸಿ ಮಾತನಾಡಿದ ಅವರು, ಬಂಥನಾಳ ಸಂಗನಬಸವ ಶಿವಯೋಗಿಗಳು ಬರದ ನಾಡಾದ ವಿಜಯಪುರ ಜಿಲ್ಲೆಯಲ್ಲಿ ಶೈಕ್ಷಣಿಕ ಕ್ರಾಂತಿ ಮಾಡಿ ಜ್ಞಾನದಾಸೋಹಿಯಾಗಿದ್ದಾರೆ. ಇವರ ಇತಿಹಾಸವನ್ನು ಯುವಜನಾಂಗಕ್ಕೆ ತಿಳಿಸುವ ಉದ್ದೇಶದಿಂದ ಇವರ ಸ್ಮಾರಕ ಭವನವನ್ನು ವಿಜಯಪುರದಲ್ಲಿ ನಿರ್ಮಿಸಬೇಕಾದ ನಮ್ಮ-ನಿಮ್ಮೆಲ್ಲರ ಕರ್ತವ್ಯವಾಗಿದೆ. ಈ ಸ್ಮಾರಕದ ನಿರ್ಮಾಣಕ್ಕೆ ತಗಲುವ ವೆಚ್ಚವನ್ನು ಶ್ರೀಮಠದಿಂದ ಭರಿಸುವುದಾಗಿ ಹೇಳಿದರು.25 ದಿನಗಳ ಕಾಲ ಬಂಥನಾಳ ಸಂಗನಬಸವ ಶಿವಯೋಗಿಗಳ ಪುರಾಣ ನಡೆಸಿಕೊಟ್ಟ…
