Author: editor.udayarashmi@gmail.com

ವಿಜಯಪುರ: ಗುರು ಲಿಂಗ ಜಂಗಮ ಸೇವೆಗಳ ಮೂಲಕ ಕಾಯಕದ ಮಹತ್ವವನ್ನು ಸಾರಿದ ಕೀರ್ತಿ ೧೨ನೇ ಶತಮಾನದ ಶರಣರಿಗೆ ಸಲ್ಲುತ್ತದೆ. ಅನುಭವ ಮಂಟಪ ೧೨ನೇ ಶತಮಾನದ ನಿಜವಾದ ಸಂಸತ್ತು ಎಂದು ಜಿಲ್ಲಾ ಕೇಂದ್ರ ಕಾರಾಗ್ರಹದ ಅಧೀಕ್ಷಕ ಡಾ.ಆಯ್ ಜಿ ಮ್ಯಾಗೇರಿ ಅಭಿಪ್ರಾಯಪಟ್ಟರು.ಇಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ತಾಲೂಕು ಹಾಗೂ ನಗರ ಘಟಕ ಸಾಹಿತ್ಯ ಪರಿಷತ್ತಿನ ಸಹಯೋಗದಲ್ಲಿ ನಡೆದ ದತ್ತಿನಿಧಿ ಕಾಯ೯ಕ್ರಮದಲ್ಲಿ ಸಸಿಗೆ ನೀರುಣಿಸುವ ಮೂಲಕ ಕಾಯ೯ಕ್ರಮವನ್ನು ಉದ್ಘಾಟಿಸಿ, ಮಾತನಾಡಿದ ಅವರು, ಸತ್ಯ, ಶುದ್ಧ ಕಾಯಕದಿಂದ ಮಾಡಿದ ನಿಜವಾದ ಭಕ್ತಿ ಮಾತ್ರ ಶಿವಲಿಂಗಕ್ಕೆ ಸಲ್ಲುತ್ತದೆ ಎಂದರು.ದತ್ತಿನಿಧಿ ಕಾಯ೯ಕ್ರಮದ ನಿಮಿತ್ಯ ಶ್ರೀಮತಿ ಈರವ್ವ ಮಲ್ಲಪ್ಪ ಹಣಮಶೆಟ್ಟಿ, ದತ್ತಿ ದಾನಿಗಳು ಶ್ರೀ ಎಸ್.ಎಮ್ ಹಣಮಶೆಟ್ಟಿ. “ಕಾಯಕಯೋಗಿ ನುಲಿಯ ಚಂದಯ್ಯ” ನವರ ವಿಷಯದ ಕುರಿತು ಜಯಶ್ರೀ ಹಿರೇಮಠರವರು “ಉಪನ್ಯಾಸ ನೀಡುತ್ತಾ, ವಚನ ಸಾಹಿತ್ಯದ ಈ ಕಾಲಘಟ್ಟ ಕಾಯಕ ದಾಸೋಹಕ್ಕೆ ಹೆಸರುವಾಸಿಯಾದದ್ದು. ಇಂತಹ ಕಾಲದಲ್ಲಿ ವಿಜಯಪುರ ಜಿಲ್ಲೆಯ ಶಿವಣಗಿಯ ಶ್ರೇಷ್ಠ ಕಾಯಕ ಶರಣರಾದ ನುಲಿಯ ಚಂದಯ್ಯನವರ ಕಾಯಕದ ಮಹತ್ವವನ್ನು…

Read More

ಸಿಂದಗಿ: ಹಿಂದುಳಿದ ಬಡ ಜನರಿಗಾಗಿ ಮೋದಿ ಅವರ ಸೇವೆ ಅಮೂಲ್ಯವಾಗಿದೆ. ವಿಶೇಷವಾಗಿ ಬಂಜಾರಾ ಸಮುದಾಯದ ಅಭಿವೃದ್ಧಿಗಾಗಿ ಬಿಜೆಪಿ ಪಕ್ಷವು ಬಂಜಾರಾ ಅಭಿವೃದ್ಧಿ ನಿಗಮ ಸ್ಥಾಪಿಸುವುದರ ಮೂಲಕ ಲಂಬಾಣಿ ತಾಂಡಾಗಳನ್ನು ಕಂದಾಯ ಗ್ರಾಮಗಳಾಗಿ ಪರಿವರ್ತಿಸಿ ಅವುಗಳ ಅಭಿವೃದ್ಧಿಗೆ ಪಣ ತೊಟ್ಟಿದೆ ಎಂದು ಮಂಡಲ ಅಧ್ಯಕ್ಷ ಸಂತೋಷ ಪಾಟೀಲ ಡಂಬಳ ಹೇಳಿದರು.ಪಟ್ಟಣದಲ್ಲಿ ಪತ್ರಿಕಾ ಹೇಳಿಕೆ ನೀಡಿದ ಅವರು, ಲಂಬಾಣಿ ಜನಾಂಗದ ಸರ್ವೋತೋಮುಖ ಅಭಿವೃದ್ಧಿಗಾಗಿ ಶ್ರಮವಹಿಸಿ ಲಂಬಾಣಿ ಜನಾಂದವರಿಗೆ ಕೇಂದ್ರ ಮತ್ತು ರಾಜ್ಯದಲ್ಲಿ ಮಂತ್ರಿಸ್ಥಾನ ನೀಡಿದೆ. ಪ್ರಸಕ್ತ ಲೋಕಸಭಾ ಚುನಾವಣೆಯಲ್ಲಿ ಕಲಬುರಗಿ ಲೋಕಸಭೆಯಿಂದ ಡಾ.ಉಮೇಶ ಜಾದವರಿಗೆ ಬಿಜೆಪಿ ಟಿಕೆಟ್ ಕೊಡುವುದರ ಮೂಲಕ ಲಂಬಾಣಿ ಜನಾಂಗಕ್ಕೆ ಪ್ರಾತಿನಿದ್ಯ ಕೊಟ್ಟಿದೆ.ಪ್ರಸ್ತುತ ರಾಜ್ಯ ಕಾಂಗ್ರೇಸ್ ಸರ್ಕಾರವು ಲಂಬಾಣಿ ಜನಾಂಗದ ಯಾವುದೇ ಮಂತ್ರಿಸ್ಥಾನ ನೀಡದೇ ಮತ್ತು ಲೋಕಸಭೆಯಲ್ಲಿ ಯಾವುದೇ ಬಂಜಾರಾ ಸಮಾಜದ ವ್ಯಕ್ತಿಗೆ ಟಿಕೇಟ್ ನೀಡದೇ ಆ ಜನಾಂಗಕ್ಕೆ ದ್ರೋಹ ಎಸಗಿದೆ. ಪ್ರಸ್ತುತ ವಿಜಯಪುರ ಲೋಕಸಭೆ ಚುನಾವಣೆಯಲ್ಲಿ ಯಾವುದೇ ಉಹಾಪೋಹಗಳಿಗೆ ಕಿವಿಗೊಡದೇ ಮೋದಿ ಅವರನ್ನು ಬಂಜಾರಾ ಸಮಾಜ ಮತದಾರರು ಪ್ರಧಾನಿಯನ್ನಾಗಿ ಮಾಡುವ…

Read More

ಇಂಡಿ: ತಾಲೂಕಾ ಸ್ವೀಫ್ ಸಮಿತಿ, ತಾ.ಪಂ ಆಡಳಿತ ವತಿಯಿಂದ ಪಟ್ಟಣದಲ್ಲಿ ಕಾಲ್ನಡಿಗೆಯ ಮೂಲಕ ಮತದಾನದ ಕುರಿತು ಜಾಗೃತಿ ಜಾಥಾ ಹಮ್ಮಿಕೊಳ್ಳಲಾಗಿತ್ತು.ತಾ.ಪಂ ಆವರಣದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಮತದಾನ ಜಾಗೃತಿ ಜಾಥಾ ಕಾರ‍್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ತಾ.ಪಂ ಇಒ ನೀಲಗಂಗಾ ಬಬಲಾದ, ಸಂಸತ್ ಚುನಾವಣೆ ಹಿನ್ನೆಲೆಯಲ್ಲಿ ದೇಶದಲ್ಲಿ ಮತದಾನದ ಹಬ್ಬ ಆರಂಭವಾಗಿದೆ. ಪ್ರಜಾಪ್ರಭುತ್ವದ ಹಬ್ಬದಲ್ಲಿ ಪ್ರತಿಯೊಬ್ಬ ಮತದಾರರು ಕೂಡ ತಪ್ಪದೇ ಮತದಾನದಲ್ಲಿ ಭಾಗವಹಿಸಿ ತಮ್ಮ ಹಕ್ಕನ್ನು ಮಂಡಿಸಬೇಕು ಎಂದರು.ಪಟ್ಟಣದ ತಾ.ಪಂ ಆವರಣದಲ್ಲಿ ಸಾರ್ವತಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮಾನವ ಸರಪಳಿ ನಿರ್ಮಿಸಲಾಗಿತ್ತು. ನಂತರ ಮತದಾನದ ಕುರಿತು ಪ್ರತಿಜ್ಞಾ ವಿಧಿ ಬೋಧಿಸಲಾಯಿತು.ಸಹಾಯಕ ನಿರ್ದೇಶಕರು ಗ್ರಾಮೀಣ ನರೇಗಾ ಉದ್ಯೋಗ ಖಾತ್ರೆಯ ಸಂಜಯ ಖಡಗೇಕರ, ಟಿಎಚ್‌ಒ ಅರ್ಚನಾ ಕುಲಕರ್ಣಿ, ಪಶು ವೈದ್ಯಾಧಿಕಾರಿ ಬಿ.ಎಚ್. ಕನ್ನೂರ, ಎಇಇ ನಾಯಕ, ಬಿ.ಜೆ. ಇಂಡಿ, ಚಂದ್ರಶೇಖರ ವಾಲಿಕಾರ, ಅರಣ್ಯ ಇಲಾಖೆಯ ರಾಜೇಂದ್ರ ಹುನ್ನೂರ, ನಂದೀಪ ರಾಠೋಡ, ಅಪ್ಪಾಶಾ ಲಾಳಸೇರಿ, ಸಿ.ಜಿ. ಪಾರೆ, ಬಸವರಾಜ ಬಬಲಾದ, ಎಚ್.ಆರ್. ರಜಪೂರ ಮತ್ತಿತರಿದ್ದರು.

Read More

ವಿಜಯಪುರ: ಇಂಡಿ ತಾಲೂಕು ಪಂಚಾಯತ್ ಕಾರ್ಯಾಲಯದಲ್ಲಿ ತಾಲುಕು ಕಾರ್ಯನಿರ್ವಾಹಕ ಅಧಿಕಾರಿ ಅವರ ಅಧ್ಯಕ್ಷತೆಯಲ್ಲಿ ತಾಲೂಕು ಮಟ್ಟದ ಸ್ವಿಪ್ ಸಮಿತಿ ನೋಡಲ್ ಅಧಿಕಾರಿಗಳ ಸಭೆ ನಡೆಯಿತು. ಇದೇ ಸಂದರ್ಭದಲ್ಲಿ ಮತದಾರ ಪ್ರತಿಜ್ಞಾ ವಿಧಿಯನ್ನು ಬೋಧಿಸಲಾಯಿತು.

Read More

ವಿಜಯಪುರ: ಜಿಲ್ಲಾ ಪೊಲೀಸ್ ಧ್ವಜವಂದನಾ ಕಾರ್ಯಕ್ರಮವನ್ನು ಏ.೨ ರಂದು ಬೆಳಗ್ಗೆ ೮ ಗಂಟೆಗೆ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ.ನಿವೃತ್ತ ಪೊಲೀಸ್ ಉಪ ನಿರೀಕ್ಷಕರಾದ ಜಿ.ಎಸ್. ಚಕ್ಕಡಿ ಅವರು ಪೊಲೀಸ್ ಧ್ವಜ ವಂದನೆಯನ್ನು ಸ್ವೀಕರಿಸಲಿದ್ದಾರೆ. ಜಿಲ್ಲಾಧಿಕಾರಿ ಟಿ.ಭೂಬಾಲನ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕರಾದ ರಿಶಿ ಆನಂದ ಕಾರ್ಯಕ್ರಮಕ್ಕೆ ಆಹ್ವಾನಿಸಲಿದ್ದಾರೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಸೋನಾವಣೆ, ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಎಸ್. ಕೆ. ಮಾರಿಹಾಳ, ರಾಮನಗೌಡ ಹಟ್ಟಿ ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Read More

ವಿಜಯಪುರ: ಪಸಕ್ತ ಸನ್ ೨೦೨೪-೨೫ ನೇ ಸಾಲಿನ ಆಸ್ತಿ ತೆರಿಗೆಯನ್ನು ಏಪ್ರಿಲ್ ೩೦ ರ ಒಳಗಾಗಿ ಪಾವತಿಸುವ ಕರದಾತರಿಗೆ ಶೇ ೫% ರಿಯಾಯಿತಿಯನ್ನು ನೀಡಲಾಗುವುದು ಆದ್ದರಿಂದ ತೆರಿಗೆ ಪಾವತಿಸಿ ಇದರ ಲಾಭ ಪಡೆಯಬಹುದು. ಜೂನ್ ಒಳಗಾಗಿ ಪಾವತಿಸಿದಿದ್ದರೆ ಜೂಲೈ ತಿಂಗಳಿನಿಂದ ಪ್ರತಿ ತಿಂಗಳಿಗೆ ಶೇ ೨% ದಂಡದೊಂದಿಗೆ ಪಾವತಿಸಬೇಕಾಗುತ್ತದೆ ಎಂದು ವಿಜಯಪುರ ಮಹಾನಗರ ಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವ ಮೊತ್ತವನ್ನು ಸಕಾಲದಲ್ಲಿ ಪಾವತಿಸಲು ವಿಫಲರಾದ ಆಸ್ತಿ ಮಾಲೀಕರುಗಳ ವಿರುದ್ಧ ಕೆ.ಎಮ್.ಸಿ. ಕಾಯ್ದೆ ೧೯೭೬ ರ ಅಧಿನಿಯಮಗಳನ್ವಯ ಬಾಕಿ ಇರುವ ಮೊತ್ತಗಳನ್ನು ವಸೂಲಿ ಮಾಡಲು, ಆಸ್ತಿ ಕರ ಬಾಕಿ ಉಳಿಸಿಕೊಂಡವರ ವಿರುದ್ದ ನ್ಯಾಯಾಲಯದಲ್ಲಿ ದಾವೆ ದಾಖಲಿಸಲು, ಮತ್ತು ಆಸ್ತಿ ತೆರಿಗೆ ಬಾಕಿ ಇರುವ ಮೊತ್ತವನ್ನು ಜಪ್ತಿ ಮೂಲಕ ವಸೂಲಿ ಮಾಡಲು ಮಹಾನಗರ ಪಾಲಿಕೆ ಅಧಿಕಾರ ಹೊಂದಿರುತ್ತದೆ. ಕಾರಣ ಆಸ್ತಿ ಕರದಾತರು ಅವರ ವೈಯಕ್ತಿಕ ಆರ್ಥಿಕ ನಷ್ಟ, ಯಾವುದೇ ಅಹಿತಕರ ಸನ್ನಿವೇಶಗಳಿಗೆ ಅವಕಾಶ ನೀಡದೇ ಸಕಾಲದಲ್ಲಿ ಆಸ್ತಿ ತೆರಿಗೆ ಪಾವತಿಸಲು…

Read More

ವಿಜಯಪುರ: ಎಲೆಕ್ಟ್ರಾಲ್ ಬಾಂಡ್ ವಿಚಾರ ಬಹಿರಂಗವಾದ ಬಳಿಕ ಮೋದಿ ಅವರ ಮುಖವಾಡ ಕಳಚಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ.ರವಿವಾರ ಬಬಲೇಶ್ವರದಲ್ಲಿ ವಿ. ಎಸ್. ಪಾಟೀಲ ಅವರ ತೋಟದಲ್ಲಿ ನಡೆದ ಬಬಲೇಶ್ವರ ಪಟ್ಟಣ, ಸಾರವಾಡ ಮತ್ತು ಮಮದಾಪುರ ಜಿ. ಪಂ. ಕಾಂಗ್ರೆಸ್ ಮುಖಂಡರು, ಪದಾಧಿಕಾರಿಗಳು, ಯುವಕರು ಹಾಗೂ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು.ಸುಪ್ರೀಂ ಕೋರ್ಟ್ ಸೂಚನೆಯಂತೆ ಎಲೆಕ್ಟ್ರಾಲ್ ಬಾಂಡ್ ಖರೀದಿದಾರರ ಹೆಸರುಗಳು ಬಹಿರಂಗವಾದ ಬಳಿಕ ನಾ ಖಾವೂಂಗಾ, ನಾ ಖಾವೂಂಗಾ ಎಂದು ಹೇಳುವ ಮೋದಿ ಅವರ ಮುಖವಾಡ ಕಳಚಿದೆ. ಐಟಿ, ಇಡಿ, ಸಿಬಿಐ ಧಾಳಿಗೆ ಒಳಗಾದವರು ಎಲೆಕ್ಟ್ರಾಲ್ ಬಾಂಡ್ ಖರೀದಿಸಿ ಹಣ ನೀಡಿದ್ದಾರೆ. ಸುಪ್ರೀಂ ಕೋರ್ಟ್ ಆದೇಶ ನೀಡದಿದ್ದರೆ ಈ ವಿಚಾರ ಹೊರಗೆ ಬರುತ್ತಿರಲಿಲ್ಲ. ಕೆಲವು ಕಂಪನಿಗಳ ಮೂಲ ಆಸ್ತಿಗಿಂತಲೂ ಬಾಂಡ್ ಖರೀದಿಸಲು ನೀಡಿರುವ ಹಣ ಹೆಚ್ಚಾಗಿದೆ ಎಂದು ಅವರು ವಾಗ್ದಾಳಿ ನಡೆಸಿದರು.ಕಾಂಗ್ರೆಸ್ ಅಭ್ಯರ್ಥಿ ರಾಜು ಆಲಗೂರ ಅವರು…

Read More

ಸಿಂದಗಿ: ಆಧುನಿಕತೆಯ ಭರಾಟೆಗೆ ಪರಿಸರ ವಿನಾಶವಾಗುತ್ತಿದೆ.! ಪರಿಸರ ಚಕ್ರ ತಲೆಕೆಳಗಾಗಿ ಮಾರಕ ರೋಗಗಳು, ಪ್ರಕೃತಿ ವಿಕೋಪಗಳು ಘಟಿಸುತ್ತಿವೆ. ಈ ಮಧ್ಯೆ ನಮ್ಮ ನಡುವೆ ಚಿಲಿಪಿಲಿಯೆಂದು ಉಲಿಯುತ್ತಿದ್ದ ಪಕ್ಷಿಗಳು ಕಣ್ಮರೆಯಾಗುತ್ತಿವೆ ಎಂದು ಶಿಕ್ಷಕ ಸಿದ್ದಲಿಂಗ ಚೌದರಿ ಹೇಳಿದರುಲಿಟಲ್ ವಿಂಗ್ಸ್ ಪ್ರಿ ಸ್ಕೂಲನಲ್ಲಿ ಸೋಮವಾರ ಏಪ್ರಿಲ್ ಇಂದು ಹಮ್ಮಿಕೊಂಡ ಏಪ್ರಿಲ್ 1 ಕೂಲ್ ಡೇ ಕಾರ್ಯಕ್ರಮದಲ್ಲಿ ಮಕ್ಕಳಿಗೆ ಸಸಿ ವಿತರಿಸಿ ಮಾತನಾಡಿದ ಅವರು ಗಿರಮರಗಳು ನಾಶವಾದ ಪರಿಣಾಮ ಅಲ್ಲಿದ್ದ ಅನೇಕ ಪಕ್ಷಿಗಳು ಇಂದು ಮರೆಯಾಗಿವೆ. ಇನ್ನು ಮಳೆ ಸಮರ್ಪಕವಾಗಿ ಬಾರದೆ ಪ್ರಾಣಿಪಕ್ಷಿಗಳಿಗೆ ಕಾಡಿನಲ್ಲಿ ನೀರು ಸಿಗುವುದು ಕಷ್ಟವಾಗಿದೆ. ಹೀಗೆ ಆಹಾರ, ನೀರು, ಪ್ರಾಕೃತಿಕ ವೆಪರೀತ್ಯದಿಂದ ದಿನದಿಂದ ದಿನಕ್ಕೆ ಪಕ್ಷಿಗಳ ಸಂಕುಲ ನಶಿಸುತ್ತಿದೆ. ಇಂದಿನ ಮಕ್ಕಳು ಅನೇಕ ಪಕ್ಷಿಗಳನ್ನು ಚಿತ್ರಗಳ ಮೂಲಕ ಹಾಗೂ ಪಕ್ಷಿ ಸಂಗ್ರಹಾಲಯಗಳಲ್ಲಿ ವೀಕ್ಷಿಸುವಂತಹ ಸ್ಥಿತಿ ತಲೆದೋರಿದೆ. ಆದರೆ ನಮ್ಮ ಸರ್ಕಾರಗಳು ಮಾತ್ರ ಪ್ರಕೃತಿಯಲ್ಲಿ ಉಂಟಾಗುತ್ತಿರುವ ಅಸಮತೋಲನಕ್ಕೆ ಕಾರಣ ಹುಡುಕುವ ಅಥವಾ ಪ್ರಾಣಿ ಪಕ್ಷಿ ಸಂಕುಲ ವಿನಾಶ ತಪ್ಪಿಸುವತ್ತ ಗಮನ ಹರಿಸುತ್ತಿಲ್ಲ ಎಂದು…

Read More

ವಿಜಯಪುರ: ನಾಗಠಾಣ ಗ್ರಾಮ ಪಂಚಾಯಿತಿಯಲ್ಲಿ ಸೋಮವಾರ ವಲಸೆ ಯಾಕ್ರೀ, ನಿಮ್ಮೂರಲ್ಲಿ ಉದ್ಯೋಗ ಖಾತ್ರಿ” ಎಂಬ ಕೂಲಿ ಬೇಡಿಕೆ ಅಭಿಯಾನ ನಡೆಯಿತು.ಬರಗಾಲ ಇರುವದರಿಂದ ಬೇರೆ ಕಡೆ ವಲಸೆ ಹೊಗದೆ, ನಿಮ್ಮೂರಲ್ಲೆ ಇದ್ದು, ನರೇಗಾ ಯೋಜನೆಯಡಿ ಕೈಗೊಳ್ಳುವ ಕಾಮಗಾರಿಗಳಲ್ಲಿ ಕೆಲಸ ನಿರ್ವಹಿಸಲು ಕೂಲಿಕಾರರಿಗೆ ತಿಳಿಸಿ, “ವಲಸೆ ಯಾಕ್ರೀ, ನಿಮ್ಮೂರಲ್ಲಿ ಉದ್ಯೋಗ ಖಾತ್ರಿ” ಎಂಬ ಕೂಲಿ ಬೇಡಿಕೆ ಅಭಿಯಾನ ಕೂಲಿಕಾರರ ಸಮಕ್ಷಮದಲ್ಲಿ ಕೈಗೊಳ್ಳಲಾಯಿತು.ಬಳಿಕ ತಾಲೂಕಾ ಸ್ವೀಪ್ ಸಮೀತಿ ವತಿಯಿಂದ ಮತದಾರರ ಜಾಗೃತಿ ಅಭಿಯಾನ ಮಾಡಲಾಯಿತು. ಮತದಾನ ನಮ್ಮೆಲ್ಲರ ಹಕ್ಕು, ಲೋಕಸಭಾ 2024ರ ಚುನಾವಣೆಯಲ್ಲಿ ಕಡ್ಡಾಯವಾಗಿ ಮತದಾನ ಮಾಡಬೇಕೆಂದು ಸಹಾಯಕ ನಿರ್ದೇಶಕ (ನರೇಗಾ) ಕಾಸಿಮಸಾಬ ಮಸಳಿ ಕೂಲಿಕಾರರಿಗೆ ತಿಳಿಸಿದರು.ಈ ಸಂದರ್ಭದಲ್ಲಿ ಕು.ಅಮೃತಾ.ಕ.ನೀಲಜಗಿ, ಆಡಳಿತ ಸಹಾಯಕರು, ಶುಭಂ ಬಿರಾದಾರ, ತಾಂತ್ರಿಕ ಸಹಾಯಕರು, ಸಂಗಮೇಶ ಎಮ್ಮಿ, ತಾಲೂಕಾ ಸಾಮಾಜಿಕ ಪರಿಶೋಧನಾ ಸಂಯೋಜಕರು, ಬಿ.ಆರ್.ರಾಠೋಡ, ಪಿ.ಡಿ.ಓ., ಗ್ರಾಮ ಪಂಚಾಯಿತಿಯ ನಾಗಠಾಣ, ಗ್ರಾ.ಪಂ. ಸಿಬ್ಬಂದಿ ಹಾಗೂ ಚುನಾಯಿತ ಪ್ರತಿನಿಧಿಗಳು ಉಪಸ್ಥಿತರಿದ್ದರು.

Read More

ಚಡಚಣ: ಸಂತ ಜ್ಞಾನೇಶ್ವರ ಮತ್ತು ಸಂತ ನಾಮದೇವ ಅವರ ಕಾರ್ಯಗಳಿಗೆ ಆಧ್ಯಾತ್ಮಿಕ ಉತ್ತರಾಧಿಕಾರಿ ಎಂದು ಪರಿಗಣಿಸಲ್ಪಟ್ಟ ಸಂತ ಏಕನಾಥ ಮಹಾರಾಜರು ಮಹಾರಾಷ್ಟ್ರದ ಶ್ರೇಷ್ಠ ಸಂತರಾಗಿದ್ದರು. ಸಂತ ಏಕನಾಥರು ತಮ್ಮ ಆಧ್ಯಾತ್ಮಿಕ ಚಿಂತನೆಗೆ ಹೆಸರುವಾಸಿಯಾಗಿದ್ದರು ಎಂದು ಶಿಕ್ಷಕ ಅರ್ಜುನ ಅಡಕೆ ಹೇಳಿದರು.ರೇವತಗಾಂವ ಗ್ರಾಮದ ಸಿಂಹಗಢ ಮಹಾರಾಜರ ದೇವಸ್ಥಾನದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಸಂತ ಏಕನಾಥ ಮಹಾರಾಜರ ಷಷ್ಠಿ ತಿಥಿ ಕಾರ್ಯಕ್ರಮದ ಅಂಗವಾಗಿ ಸಂತ ಏಕನಾಥ ಮಹಾರಾಜರ ಭಾವಚಿತ್ರಕ್ಕೆ ನಮನ ಸಲ್ಲಿಸಿ ಅವರು ಮಾತನಾಡಿದರು.ಜನರನ್ನು ಜಾಗೃತಗೊಳಿಸುವ ಮತ್ತು ಧರ್ಮವನ್ನು ಕಾಪಾಡುವಲ್ಲಿ ಸಂತ ಏಕನಾಥರು ಮಾಡಿದ ಸಾಮೂಹಿಕ ಅಂದೋಲನ ಸ್ಮರಣೀಯವಾಗಿದೆ ಎಂದರು.ಮಹಾದೇವ ಬಿರಾದಾರ ಮಾತನಾಡಿ, ಲೌಕಿಕ ಅನ್ವೇಷಣೆಗಳು ಆಧ್ಯಾತ್ಮಿಕ ಅನ್ವೇಷಣೆಗಳಾಗಬಹುದು ಎಂಬುದನ್ನು ಏಕನಾಥ ಮಹಾರಾಜರ ಜೀವನ ಜನರಿಗೆ ತೋರಿಸಿದೆ ಎಂದು ಹೇಳಿದರು.ಬೆಳಗ್ಗೆ 9 ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ ಶಿರಾಡೋಣ ಗ್ರಾಮದ ಬಾಬುಶ್ಯಾ ಕರಾಂಡೆ ಮಹಾರಾಜರ ಅಮೃತವಾಣಿ ಜರುಗಿತು. ನಂತರ ಮರಾಠಿ ಹಾಗೂ ಕನ್ನಡ ಭಜನಾ ಕಾರ್ಯಕ್ರಮ ನಡೆಯಿತು. ಅನ್ನ ಸಂತರ್ಪಣೆ ಏರ್ಪಡಿಸಲಾಗಿತ್ತು.

Read More