Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಸಿಂದಗಿ: ಭಾರತದಲ್ಲಿ ತಾಯಿಗೆ ಪವಿತ್ರವಾದ ಸ್ಥಾನವಿದೆ. ಆದರೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಶಿವರಾಜ್ ಎಸ್.ತಂಗಡಗಿಯವರ ತಾಯಿಯನ್ನು ಹೀನಾ ಪದ ಬಳಸಿ ಹಿಯ್ಯಾಳಿಸಿ ಅಪಮಾನ ಮಾಡಿರುವ ಬಿಜೆಪಿಯ ಸಿ.ಟಿ.ರವಿ ಯವರು ಈ ಕೂಡಲೇ ಇಡೀ ಹೆಣ್ಣು ಕುಲಕ್ಕೆ ಕ್ಷಮೆ ಕೇಳಬೇಕು, ಇಲ್ಲದೇ ಹೋದರೆ ಉಗ್ರವಾದ ಹೋರಾಟ ನಡೆಸುವುದು ಅನಿವಾರ್ಯವಾಗುತ್ತದೆ ಎಂದು ಭೋವಿ ವಡ್ಡರ ಸಮಾಜದ ತಾಲೂಕಾಧ್ಯಕ್ಷ ಪಂಡಿತ ಯಂಪೂರೆ ಎಚ್ಚರಿಕೆ ನೀಡಿದ್ದಾರೆ.ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ರಾಜಕೀಯ ವ್ಯವಸ್ಥೆಯಲ್ಲಿ ರಾಜಕಾರಣಿಗಳು ಟೀಕೆ ಮಾಡುವುದು ಸರ್ವ ಸಾಮಾನ್ಯ, ಟೀಕೆ ಜೊತೆಯಲ್ಲಿ ಆರೋಪ-ಪ್ರತ್ಯಾರೋಪ ಮಾಡುವುದು ನಿರಂತರವಾಗಿ ನಡೆಯುತ್ತಿರುವುದನ್ನು ಗಮನಿಸುತ್ತಿದ್ದೇವೆ. ಆದರೆ ಹೆಣ್ಣು ಸಂಕುಲವನ್ನು ಕೀಳಾಗಿ ಕಂಡು ಅವಮಾನಿಸಿ ಮಾತನಾಡಿರುವುದು ಕಾಣಲು ಸಾಧ್ಯವಿಲ್ಲ. ಶಿಸ್ತಿನ ಪಕ್ಷವೆಂದು ಹೇಳಿಕೊಂಡಿರುವ ಸಿ.ಟಿ.ರವಿ ಯವರ ಬಾಯಿಯಿಂದ ಇಂತಹ ಕೆಟ್ಟ ಪದಗಳನ್ನು ಬಳಸಿರುವುದು ಇಡೀ ಅವರ ಪಕ್ಷಕ್ಕೆ, ಅವರ ರಾಜಕೀಯ ವ್ಯಕ್ತಿತ್ವಕ್ಕೆ ಶೋಭೆ ತರುವಂತಹದ್ದಲ್ಲ. ಭಾರತಾಂಭೆಯನ್ನು ಅವಮಾನಿಸಿರುವ ಹೀನ ಮನಸ್ಥಿತಿಯ ವಿಕೃತ ಆಲೋಚನೆಯ ಸಿ.ಟಿ.ರವಿ ಯವರನ್ನು ಗಡಿಪಾರು…
ಸಿಂದಗಿ: ಕಾಂಗ್ರೆಸ್ ಪಕ್ಷದ ಮುಂದಾಲೋಚನೆ, ನಾಯಕರ ಸಮಯಪ್ರಜ್ಞೆ ಹಾಗೂ ಕೊಟ್ಟ ಭರವಸೆಗಳನ್ನು ಈಡೇರಿಸಿ ಕೊಟ್ಟ ಮಾತಿನಂತೆ ನಡೆದ ಸರಕಾರ ಕಾಂಗ್ರಸ್ ಸರಕಾರವಾಗಿದೆ ಎಂದು ಬ್ಲಾಕ್ ಕಾಂಗ್ರೆಸ್ ಸಮಿತಿ ತಾಲೂಕಾಧ್ಯಕ್ಷ ಸುರೇಶ ಪೂಜಾರ ಹೇಳಿದರು.ಪಟ್ಟಣದ ಬ್ಲಾಕ್ ಕಾಂಗ್ರೆಸ್ ಕಾರ್ಯಾಲಯದಲ್ಲಿ ಹಮ್ಮಿಕೊಂಡ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ವ್ಯಕ್ತಿಯೊರ್ವನನ್ನು ತೋರಿಸಿ ಮತ ಕೇಳುತ್ತಿದೆ. ಹಾಗಾಗಿ ಈ ಬಾರಿ ವಿಜಯಪುರ ಜಿಲ್ಲೆಯಲ್ಲಿ ಕಾಂಗ್ರೆಸ್ ಗೆದ್ದೇ ಗೆಲ್ಲುತ್ತದೆ. ಏಕೆಂದರೆ ಎಲ್ಲ ಪಕ್ಷದಲ್ಲಿ ಟಿಕೆಟಗಾಗಿ ಪೈಪೋಟಿ ಇತ್ತು. ಕಾಂಗ್ರೆಸ್ ಪಕ್ಷದಲ್ಲಿ ಮಾತ್ರ ಪಕ್ಷದ ಗೆಲುವು ಸಾಧಿಸುವ ನಿಟ್ಟಿನಲ್ಲಿ ಎಲ್ಲರೂ ಒಮ್ಮತದಿಂದ ರಾಜೂ ಆಲಗೂರ ಅವರನ್ನು ಆಯ್ಕೆ ಮಾಡಲಾಗಿದೆ.ಸಿಂದಗಿ ವ್ಯಾಪ್ತಿಯಲ್ಲಿ ಬರುವ ಜಿಲ್ಲಾ ಪಂಚಾಯತ್ ಮತಕ್ಷೇತ್ರಗಳಲ್ಲಿ ಎ.೦೨ರಿಂದ ಕಾಂಗ್ರೆಸ್ ಕಾರ್ಯಕರ್ತರ ಸಭೆಯನ್ನು ಹಮ್ಮಿಕೊಳ್ಳಲಾಗುವುದು. ಎ.೦೨ರಂದು ಕನ್ನೊಳ್ಳಿ ಗ್ರಾಮದ ಬೆಳಿಗ್ಗೆ ೧೦ಗಂಟೆಗೆ ಸಿದ್ದಲಿಂಗೇಶ್ವರ ಕಲ್ಯಾಣ ಮಂಟಪ, ಮದ್ಯಾಹ್ನ ೧ಗಂಟೆಗೆ ಯಂಕಂಚಿಯ ಬೀರಲಿಂಗೇಶ್ವರ ಕಲ್ಯಾಣ ಮಂಟಪ, ಸಾಯಂಕಾಲ ೪ಗಂಟೆಗೆ ಮೋರಟಗಿಯಲ್ಲಿ, ೬ಗಂಟೆಗೆ ದೇವಣಗಾವ ಗ್ರಾಮದಲ್ಲಿ ಹಮ್ಮಿಕೊಳ್ಳಲಾಗುವುದು. ಎ.೦೩ರಂದು ತಾಂಬಾ ಗ್ರಾಮದ ಶಾದಿ ಮಹಲನಲ್ಲಿ,…
ಮುದ್ದೇಬಿಹಾಳ: ಅಗ್ನಿಶಾಮಕದಳದ ಸಿಬ್ಬಂದಿಗಳ ಸಮಯ ಪ್ರಜ್ಞೆಯಿಂದ ಭಾರೀ ಅನಾಹುತವೊಂದು ತಪ್ಪಿದ ಘಟನೆ ಪಟ್ಟಣದ ಬಿದರಕುಂದಿ ರಸ್ತೆಯ ಪೆಟ್ರೋಲ್ ಪಂಪ ಬಳಿಯ ಗುಜರಿ ಅಂಗಡಿಯಲ್ಲಿ ನಡೆದಿದೆ.ಅಬ್ದುಲಹಮೀದ ಢವಳಗಿ ಎಂಬುವವರಿಗೆ ಸೇರಿದ ಗುಜರಿ ಸರಕಿಗೆ ಏಕಾಏಕಿ ಬೆಂಕಿ ಹತ್ತಿದ್ದು, ಅಗ್ನಿಶಾಮಕದವರಿಗೆ ಕರೆ ಮಾಡಿ ತಿಳಿಸಿದ್ದಾರೆ. ಸಮಯಕ್ಕೆ ಸರಿಯಾಗಿ ಹಾಜರಾದ ಸಿಬ್ಬಂದಿಗಳಾದ ರಮೆಶ ಚಳ್ಳಣ್ಣವರ, ಸುಭಾಷ್ ರಾಠೋಡ, ಭೀಮರಾವ ನಾಟೆಕಾರ, ಮಸ್ತಾನ್ ಮುಲ್ಲಾಗೋಳ, ಪ್ರಕಾಶ ಸುಬ್ಬಣ್ಣಗೋಳ, ಮಹೇಶ ಕರಡ್ಡಿ, ಸಿದ್ದಣ್ಣ ಪೊಲೇಶಿ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಘಟನಾ ಸ್ಥಳಕ್ಕೆ ಪಿಎಸ್ಐ ಸಂಜೀವ ತಿಪರೆಡ್ಡಿ ಭೇಟಿ ನೀಡಿ ಪರಿಶೀಲಿದ್ದಾರೆ.
ಮುದ್ದೇಬಿಹಾಳ: ಮೇ.೭ ರಂದು ನಡೆಯುವ ಲೋಕಸಭಾ ಚುನಾವಣೆಯಲ್ಲಿ ಎಲ್ಲರೂ ಕಡ್ಡಾಯವಾಗಿ ಮತದಾನ ಮಾಡಬೇಕು. ಪ್ರಜಾಪ್ರಭುತ್ವದ ಹಬ್ಬದಲ್ಲಿ ಭಾಗಿಯಾಗಿ ನಿಮ್ಮ ಹಕ್ಕು ಚಲಾಯಿಸಿ ಎಂದು ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಎಸ್.ಕಲ್ಮನಿ ಹೇಳಿದರು.ತಾಲೂಕಿನ ಗೋನಾಳ ಗ್ರಾಮದಲ್ಲಿ ಪ್ರಗತಿಯಲ್ಲಿದ್ದ ನರೇಗಾ ಕಾಮಗಾರಿ ಸ್ಥಳದಲ್ಲಿ ಹಿರೇಮುರಾಳ ಗ್ರಾಮ ಪಂಚಾಯತಿ ಮತ್ತು ತಾಲೂಕು ಸ್ವೀಪ್ ಸಮಿತಿ ಸಹಯೋಗದಲ್ಲಿ ಭಾನುವಾರ ನಡೆದ ಮತದಾನ ಜಾಗೃತಿ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.ಪ್ರಜಾಪ್ರಭುತ್ವದ ಭದ್ರ ಬುನಾದಿಗೆ ಮತದಾನ ಬಹುಮುಖ್ಯ ಪಾತ್ರ ವಹಿಸಿದೆ. ಪ್ರತಿಯೊಬ್ಬ ಪ್ರಜೆಗೂ ತನ್ನ ಹಕ್ಕನ್ನು ಚಲಾಯಿಸಲು ಅವಕಾಶ ನೀಡಲಾಗಿದೆ. ಪ್ರಜೆಗಳ ಆಯ್ಕೆಯಿಂದ ಸದೃಢ ಸರ್ಕಾರಗಳ ರಚನೆಯಾಗುತ್ತದೆ. ಆದ್ದರಿಂದ ಯಾರು ಮತದಾನದಿಂದ ವಂಚಿತರಾಗದೆ ನಿಮ್ಮ ಹಕ್ಕು ಚಲಾಯಿಸಿ ಎಂದು ಮನವಿ ಮಾಡಿದರು.ಹಿರೇಮುರಾಳ ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಕೆ.ಎಚ್.ಕುಂಬಾರ ನರೇಗಾ ಕೂಲಿಕಾರರಿಗೆ “ಮತದಾನ ಪ್ರತಿಜ್ಞೆ ವಿಧಿ” ಬೋಧಿಸಿದರು. ಈ ವೇಳೆ ಗ್ರಾ.ಪಂ. ಎಸ್ಡಿಎ ಎನ್.ಜಿ.ಬಿರಾದಾರ, ತಾಂತ್ರಿಕ ಸಹಾಯಕ ಆಶೀಫ್ ಗೋಗಿ, ಜಿಕೆಎಂ ಶಿವಲೀಲಾ ಪಾಟೀಲ್ ಸೇರಿದಂತೆ ಗ್ರಾ.ಪಂ.ಸಿಬ್ಬಂದಿ ಇದ್ದರು.
ಸಿಂದಗಿ: ನಿರಂತರ ಸೇವೆಯಲ್ಲಿ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಸೇವೆ ಸಲ್ಲಿಸಿದ ಪ್ರತಿಯೊಬ್ಬರಿಗೂ ಶ್ರೀಶೈಲ ಮಲ್ಲಿಕಾರ್ಜುನನ ಆಶೀರ್ವಾದ ಸದಾ ಇರಲಿ ಎಂದು ರಮೇಶ ಹೂಗಾರ ಹೇಳಿದರು.ಸಿಂದಗಿ ಸದ್ಭಕ್ತರಿಂದ ಶ್ರೀಶೈಲ ಪಾದಯಾತ್ರಿಗಳಿಗೆ ಸತತವಾಗಿ ೧೭ ವರ್ಷಗಳಿಂದ ತೆಲಂಗಾಣ ರಾಜ್ಯದ ಗದ್ವಾಲ್ ಜಿಲ್ಲೆಯ ಗಟ್ಟು ಗ್ರಾಮದಲ್ಲಿ ಹಮ್ಮಿಕೊಂಡ ದಾಸೋಹ ಸೇವೆಯಲ್ಲಿ ನಿರತರಾಗಿ ಮಾತನಾಡಿದ ಅವರು, ಮಹಾರಾಷ್ಟ್ರ ಮತ್ತು ಕರ್ನಾಟಕ ರಾಜ್ಯದಿಂದ ಆಗಮಿಸುವ ಭಕ್ತಾದಿಗಳಿಗೆ ಸಿಂದಗಿಯ ಗುತ್ತಿಗೇದಾರ ಮುತ್ತು ಮುಂಡೇವಾಡಗಿ ಅವರ ನೇತೃತ್ವದ ತಂಡದಿಂದ ಸತತವಾಗಿ ೧೭ವರ್ಷಗಳಿಂದ ತೆಲಂಗಾಣ ರಾಜ್ಯದ ಗದ್ವಾಲ್ ಜಿಲ್ಲೆಯ ಗಟ್ಟು ಗ್ರಾಮದಲ್ಲಿ ದಾಸೋಹ ಸೇವೆ ನಡೆಯುತ್ತಿದೆ. ಬೆಳಿಗ್ಗೆ ಅಲ್ಪೋಪಹಾರ, ಮಧ್ಯಾಹ್ನ ಊಟದ ಸೇವೆ ನಿರಂತರವಾಗಿ ಜರುಗುತ್ತಿದೆ. ಮತ್ತು ಸಿಂದಗಿಯ ಧನ್ವಂತರಿ ಆಸ್ಪತ್ರೆಯ ವತಿಯಿಂದ ಪ್ರಥಮ ಹಂತದ ಚಿಕಿತ್ಸೆ ಸೇವೆ ಮಾಡಲಾಗುತ್ತಿದೆ. ಸಿಂದಗಿಯ ಹಲವಾರು ಭಕ್ತಾದಿಗಳು ದಾಸೋಹಕ್ಕೆ ಸ್ವ-ಇಚ್ಛೆಯಿಂದ ಸಹಾಯ ಮಾಡುತ್ತಾ ಬಂದಿದ್ದಾರೆ. ಅದರಂತೆ ಗಟ್ಟು ಗ್ರಾಮದ ಭಕ್ತಾದಿಗಳು ನಮಗೆ ಬೆಂಬಲವಾಗಿ ನಿಂತಿರುವುದು ಆತ್ಮಸ್ಥೈರ್ಯ ತುಂಬಿದೆ ಎಂದರು.ಆರು ದಿನಗಳ ಕಾಲ ನಡೆಯುವ ಈ ಸೇವೆಯಲ್ಲಿ…
ವಿಜಯಪುರ: ಇತ್ತೀಚಿಗೆ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯ ವ್ಯಾಪ್ತಿಯ ಬಿಕಾಂ ಎರಡನೇ ಸೆಮಿಸ್ಟರ್ ಫೈನಾನ್ಸಿಯಲ್ ಮ್ಯಾನೇಜ್ಮೆಂಟ್ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಗಂಭೀರವಾಗಿ ಪರಿಗಣಿಸುವಂತೆ ಹುಣಶ್ಯಾಳ ಜಿಲ್ಲಾ ಪಂಚಾಯತಿ ಸೇವಾ ಆಕಾಂಕ್ಷಿ ಬಂಗಾರೆಮ್ಮ ಮಾನಪ್ಪ ದೊಡಮನಿ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.ಪ್ರಶ್ನೆ ಪತ್ರಿಕೆ ಸೋರಿಕೆಯಾದ ವರದಿ ವೃತ್ತಪತ್ರಿಕೆಗಳಲ್ಲಿ ಬಂದ ವಿಷಯ ಪ್ರಸ್ತಾಪಿಸಿ, ಇದರಿಂದ ಸಮಾಜ ಸುಶಿಕ್ಷಿತದಿಂದ ಅಶಿಕ್ಷಿತದ ಕಡೆಗೆ ಸಾಗುತ್ತದೆ, ಇದು ಅಕ್ಷಮ್ಯ ಎಂದರು. ಇಂತಹ ಘಟನೆಗಳಿಂದ ಕಷ್ಟಪಟ್ಟು ಪರೀಕ್ಷೆಗೆ ತಯಾರಿ ನಡೆಸಿ, ದೂರದ ಊರುಗಳಿಂದ ಪ್ರಯಾಣಿಸಿ, ಸರಿಯಾಗಿ ಊಟ, ನಿದ್ರೆ ಇಲ್ಲದೆ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳ ಆತ್ಮವಿಶ್ವಾಸ ಕುಂದಿಸುತ್ತದೆ.ಎಸ್.ಎಸ್.ಎಲ್.ಸಿ ಯಿಂದ ಸ್ಪರ್ಧಾತ್ಮಕ ಪರೀಕ್ಷೆಗಳ ವರೆಗೆ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾಗುವ ವಿಷಯ ಇತ್ತೀಚಿಗೆ ಸಾಮಾನ್ಯವಾಗಿವೆ. ಇದರಿಂದ ವಿದ್ಯಾರ್ಥಿಗಳಿಗೆ ಗೊಂದಲವಾಗುತ್ತದೆ ಹಾಗೂ ಪ್ರಾಮಾಣಿಕ, ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅನ್ಯಾಯವಾಗುತ್ತಿದೆ, ಇಂತಹ ಘಟನೆಗಳಿಗೆ ಕಾರಣರಾದ ವಿಶ್ವವಿದ್ಯಾಲಯ ಹಾಗೂ ಪರೀಕ್ಷಾ ಮಂಡಳಿಗಳ ಮೇಲುಸ್ತುವಾರಿಗಳ ಮೇಲೆ ಶಿಸ್ತು ಕ್ರಮ ಜರುಗಿಸಬೇಕು.ನಕಲಿ ಅಭ್ಯರ್ಥಿಗಳ ಹಾಜರಿ, ಉತ್ತರ ಪತ್ರಿಕೆಗಳ ನಕಲು, ದಾಖಲೆಗಳನ್ನು ತಿರುಚುವುದು, ಮೆರಿಟ್ ಪಟ್ಟಿ ಸಿದ್ಧಪಡಿಸುವಲ್ಲಿ…
ಅಕಾಲಿಕ ಆಣೆಕಲ್ಲು ಮಳೆ ಹಾಗೂ ಬಿರುಗಾಳಿಗೆ ಬೆಳೆಹಾನಿ | ಪ್ರತಿಭಟನೆ ಎಚ್ಚರಿಕೆ ವಿಜಯಪುರ: ಶನಿವಾರ ಸಂಜೆ ಸುರಿದ ಅಕಾಲಿಕ ಆಣೆಕಲ್ಲು ಮಳೆ ಹಾಗೂ ಭೀಕರ ಗಾಳಿಯಿಂದ ಜಿಲ್ಲೆಯ ಹಲವೆಡೆ ಲಿಂಬೆ, ದ್ರಾಕ್ಷಿ, ದಾಳಿಂಬೆ, ಮಾವು, ಚಿಕ್ಕು, ತೆಂಗು ಸೇರಿದಂತೆ ವಿವಿಧ ರೀತಿಯ ತೋಟಗಾರಿಕೆ ಬೆಳೆಗಳು ನೆಲಕ್ಕೆ ಉರುಳಿವೆ, ಜೊತೆಗೆ ಸಿಡಿಲು ಬಡಿದು ಎತ್ತು, ಕುರಿ, ಕೋಳಿಗಳು ಸಾವನ್ನಪ್ಪಿರುವ ಘಟನೆಗಳು ನಡೆದು ರೈತರಿಗೆ ಸಾಕಷ್ಟು ನಷ್ಟವುಂಟಾಗಿದೆ ನಷ್ಟಗೊಂಡ ರೈತರಿಗೆ ಪರಿಹಾರ ನೀಡಬೇಕೆಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಅವರಿಗೆ ಮನವಿ ಸಲ್ಲಿಸಿ ಪರಿಹಾರಕ್ಕಾಗಿ ಆಗ್ರಹಿಸಿದರು.ಈ ವೇಳೆ ಜಿಲ್ಲಾಧ್ಯಕ್ಷ ಸಂಗಮೆಶ ಸಗರ ಮಾತನಾಡುತ್ತಾ, ಶನಿವಾರ ರಾತ್ರಿ ಜಿಲ್ಲೆಯ ಹಲವು ಕಡೆ ಏಕಾಏಕಿ ಅಕಾಲಿಕ ಆಣೆಕಲ್ಲು ಮಳೆ ಹಾಗೂ ಭೀಕರ ಗಾಳಿಯಿಂದಾಗಿ ರೈತರಿಗೆ ಅಪಾರ ಪ್ರಮಾಣದ ನಷ್ಟ ಉಂಟಾಗಿರುವುದು ಕಂಡು ಬಂದಿದೆ, ಸಮೀಪದ ಜಂಬಗಿ(ಆಹೇರಿ) ಮಾದಾಳ ವಸ್ತಿ ಎಂಭ ಗ್ರಾಮದ ಸುಮಾರು ೪೦-೫೦ ರೈತರ…
ತಿಕೋಟಾ: ಅಖಂಡ ಭಾರತ ದೇಶದೆಲ್ಲೆಡೆ ಆರು ಸಾವಿರಕ್ಕೂ ಹೆಚ್ಚು ಲಿಂಗಗಳನ್ನು ಸ್ಥಾಪನೆ ಮಾಡಿ ಜನರಲ್ಲಿ ಭಕ್ತಿ ಭಾವ ಹಾಗೂ ದೇಶ ಭಕ್ತಿ ಮೂಡಿಸುವ ಕಾರ್ಯ ಮಾಡುತ್ತಾ ಹಲವು ಪವಾಡಗಳನ್ನು ಮಾಡಿದ ಕೀರ್ತಿ ನವದೆಹಲಿಯ ಜೈ ಭಾರತ ಮಾತಾ ಸೇವಾ ಸಮಿತಿ ಸಂಸ್ಥಾಪಕ ಅಧ್ಯಕ್ಷ ಶ್ರೀ ಹವಾಮಲ್ಲಿನಾಥ ಮಹಾರಾಜರಿಗೆ ಸಲ್ಲುತ್ತದೆ ಎಂದು ಪ್ರವಚನಕಾರ ಬಾಬುರಾವ ಮಹಾರಾಜ ಹೇಳಿದರು.ತಾಲ್ಲೂಕಿನ ಕನಮಡಿ ಗ್ರಾಮದಲ್ಲಿ ಶನಿವಾರ ಸಂಜೆ ನಡೆದ ಶ್ರೀ ಮುರುಘೇಂದ್ರ ಶಿವಯೋಗಿಗಳ ಶತಮಾನೋತ್ಸವ ಮೂರ್ತಿ ಪ್ರತಿಷ್ಠಾಪನೆ ಹಾಗೂ ಗೋಪುರ ಕಳಸಾರೋಹಣ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತಾನಾಡಿದರು.ಜನರಲ್ಲಿ ದೇಶಾಭಿಮಾನ ಬೆಳೆಯಬೇಕು. ಎಲ್ಲ ಭಕ್ತರು ಪರಿಶುದ್ಧವಾದ ಜೀವನ ನಡೆಸಬೇಕು. ಶಾಂತಿ ಸಮಾಧಾನ ಪಡೆದುಕೊಳ್ಳಬೇಕು. ಹಗಲು ರಾತ್ರಿ ಎನ್ನದೇ ದೇಶ ಸೇವೆಗೆ ತನ್ನ ಜೀವವನ್ನೆ ಮುಡುಪಾಗಿಟ್ಟ ಸೈನಿಕರನ್ನು ಕಂಡಾಗ, ಬಿಸಿಲು ಗಾಳಿ ಎನ್ನದೆ ಎಲ್ಲರಿಗೂ ಅನ್ನ ನೀಡುವ ಶ್ರಮ ಜೀವಿ ರೈತರನ್ನು ಕಂಡಾಗ, ಅಕ್ಷರ ಕಲಿಸಿ ಜ್ಞಾನ ನೀಡುವ ಶಿಕ್ಷಕರನ್ನು ಕಂಡಾಗ ಎಲ್ಲರ ಮನ ಮೀಡಿಯಬೇಕೆಂಬುದು ಹವಾ…
ಚಿಮ್ಮಡ: ನಮ್ಮ ಭಾಗದಲ್ಲಿಯೂ ಕಡಿಮೆ ಶುಲ್ಕದಲ್ಲಿ ವಿಶ್ವ ಗುಣಮಟ್ಟದ ಶಿಕ್ಷಣ ನೀಡುವ ಉದ್ದೇಶದಿಂದ ಪ್ರಾರಂಭಿಸಲಾಗಿರುವ ಶಿಕ್ಷಣ ಸಂಸ್ಥೆಗೆ ಈ ಭಾಗದ ರೈತರು, ಶಿಕ್ಷಣ ಪ್ರೇಮಿ ಪಾಲಕರು ಸಹಕಾರ ನೀಡಬೇಕಾಗಿದೆ ಎಂದು ಶಾಸಕ ಸಿದ್ದು ಸವದಿ ಹೇಳಿದರು.ಗ್ರಾಮದ ಶ್ರೀ ಪ್ರಭುಲಿಂಗೇಶ್ವರ ಇಂಟರನ್ಯಾಷನಲ್ ಸ್ಕೂಲ್ ಆವರಣದಲ್ಲಿ ರವಿವಾರ ಹಮ್ಮಿಕೊಳ್ಳಲಾಗಿದ್ದ ಬೇಸಿಗೆ ಶಿಬಿರ ಪ್ರಾರಂಭೋತ್ಸವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಗುಣಮಟ್ಟದ ಶಿಕ್ಷಣಕ್ಕಾಗಿ ನಮ್ಮ ಭಾಗದಿಂದ ಮೂಡಬಿದರಿ, ಉಡುಪಿ, ಮಂಗಳೂರು ವಿದ್ಯಾಕೇಂದ್ರಗಳಿಗೆ ಪ್ರತೀವರ್ಷ ನೂರಾರು ವಿದ್ಯಾರ್ಥಿಗಳು ಪ್ರವೇಶ ಪಡೆಯುತಿದ್ದು. ಆ ಭಾಗದಿಂದ ವಿದ್ಯಾರ್ಥಿಗಳು ನಮ್ಮ ಶಿಕ್ಷಣ ಸಂಸ್ಥೆಯಲ್ಲಿ ಪ್ರವೇಶ ಪಡೆಯುವಂಥಹ ಗುಣಮಟ್ಟದ ಶಿಕ್ಷಣವನ್ನು ಕಡಿಮೆ ಶುಲ್ಕದಲ್ಲಿ ನೀಡುವ ಉದ್ದೇಶ ಈ ಸಂಸ್ಥೆ ಹೊಂದಿದ್ದು ಇದೇ ಶೈಕ್ಷಣಿಕ ವರ್ಷದಲ್ಲಿ ಪ್ರವೇಶಗಳು ಪ್ರಾರಂಭವಾಗಲಿವೆ ಎಂದರು.ನಿವೃತ್ತ ಪ್ರಾಂಶುಪಾಲ ಎಸ್.ಎಸ್. ಹೂಲಿ ಮಾತನಾಡಿ ಪ್ರತಿಯೊಬ್ಬ ಪಾಲಕರು ತಾವು ಎಷ್ಠೆ ತೊಂದರೆಯಲ್ಲಿದ್ದರು ತಮ್ಮ ಮಕ್ಕಳ ಶಿಕ್ಷಣ, ಭವಿಷ್ಯದ ಕುರಿತು ಯಾವುದೇ ರಾಜಿ ಮಾಡಿಕೊಳ್ಳದೆ ಶಿಕ್ಷಣ ನೀಡುತ್ತಿರುವುದು ಒಳ್ಳೆಯ ಬೆಳವಣಿಗೆ ಯಾಗಿದ್ದು ಅವರ…
ದೇವರಹಿಪ್ಪರಗಿ: ಗ್ರಾಮದ ೪ ಮತ್ತು ೫ ನೇ ವಾರ್ಡಿನ ಕುಡಿಯುವ ನೀರಿನ ಸಮಸ್ಯೆಗೆ ಸ್ಪಂದಿಸದ ಗ್ರಾಮ ಪಂಚಾಯಿತಿ ಸಿಬ್ಬಂದಿ ವಿರುದ್ಧ ಮಹಿಳೆಯರು ಖಾಲಿ ಕೊಡಗಳನ್ನು ಇಟ್ಟು ಕೂಡಲೇ ನೀರು ಪೂರೈಸಲು ಆಗ್ರಹಿಸಿದರು.ತಾಲ್ಲೂಕಿನ ಕೋರವಾರ ಗ್ರಾಮದಲ್ಲಿ ಸೋಮವಾರ ಮಹಿಳೆಯರು ಖಾಲಿ ಕೊಡಗಳೊಂದಿಗೆ ಗ್ರಾಮ ಪಂಚಾಯಿತಿಗೆ ಆಗಮಿಸಿ ಕುಡಿಯುವ ನೀರಿನ ಸಮಸ್ಯೆಯ ಗಂಭೀರತೆಯ ಕುರಿತು ಸಿಬ್ಬಂದಿಯ ಗಮನ ಸೆಳೆದರು.ಈ ಸಂದರ್ಭದಲ್ಲಿ ಅನಸುಬಾಯಿ ಬಿರಾದಾರ ಮಾತನಾಡಿ, ನಮ್ಮ ವಾರ್ಡುಗಳಲ್ಲಿ ನೀರಿನ ಸಮಸ್ಯೆ ತಲೆದೋರಿದೆ. ನೀರು ಸಮಯಕ್ಕೆ ಸರಿಯಾಗಿ ಪೂರೈಸಲು ಹಲವು ಬಾರಿ ಮನವಿ ಮಾಡಿದರೂ ಪಂಚಾಯಿತಿ ಅಧಿಕಾರಿಗಳು ಹಾಗೂ ಸಿಬ್ಬಂದಿ ಸ್ಪಂದಿಸುತ್ತಿಲ್ಲ. ಹೀಗಾದರೆ ನೀರಿಗಾಗಿ ಮಹಿಳೆಯರು ಯಾರನ್ನು ಕೇಳಬೇಕು? ಗ್ರಾಮದಲ್ಲಿ ೨೫ ಕೊಳವೆಭಾವಿ ಹಾಗೂ ೩ ಭಾವಿಗಳಿದ್ದರೂ ಅವುಗಳಲ್ಲಿ ನೀರಿನ ಕೊರತೆ ಕಂಡು ಬಂದಿದೆ. ಆದ್ದರಿಂದ ಗ್ರಾಮ ಪಂಚಾಯಿತಿ ಪರ್ಯಾಯ ವ್ಯವಸ್ಥೆ ಕಲ್ಪಿಸಿ ನೀರು ಪೂರೈಸಲು ಮುಂದಾಗಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ಗ್ರಾಮ ಪಂಚಾಯಿತಿ ಮುಂದೆ ಉಗ್ರ ಹೋರಾಟ ಮಾಡಬೇಕಾಗುವುದು ಎಂದು ಎಚ್ಚರಿಸಿ ನಂತರ ಗ್ರಾಮ…
