Author: editor.udayarashmi@gmail.com

ಮುದ್ದೇಬಿಹಾಳ: ಖಾಸಗಿ ಶಾಲೆಗಳ ಶಿಕ್ಷಕರಿಗೆ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯ ಕರ್ತವ್ಯಕ್ಕೆ ತೆಗೆದುಕೊಳ್ಳಲು ಸರಕಾರದ ಮಟ್ಟದಲ್ಲಿ ತೀರ್ಮಾನವಾಗಬೇಕಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಎಸ್.ಸಾವಳಗಿ ಹೇಳಿದರು.ಪಟ್ಟಣದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದಲ್ಲಿ ಖಾಸಗಿ ಅನುದಾನ ರಹಿತ ಶಾಲೆಯ ಶಿಕ್ಷಕರುಗಳಿಗೆ ಸರಕಾರಿ ಮತ್ತು ಅನುದಾನಿತ ಶಾಲೆಯ ಶಿಕ್ಷಕರಿಗೆ ನೀಡುವ ಜವಾಬ್ದಾರಿಯನ್ನು ನೀಡಿಲ್ಲವೆಂದು ೫,೮ ಮತ್ತು ೯ನೇ ತರಗತಿ ಬಾಹ್ಯ ಪರೀಕ್ಷೆಗಳ ಉತ್ತರ ಪತ್ರಿಕೆಗಳ ಮೌಲ್ಯ ಮಾಪನಕ್ಕೆ ಹಾಜರಾಗುವುದಿಲ್ಲವೆಂದು ಹಠ ಹಿಡಿದು ಬೇಡಿಕೆ ಈಡೇರಿಸುವಂತೆ ನೀಡಿದ ಮನವಿಯನ್ನು ಸ್ವೀಕರಿಸಿ ಅವರು ಮಾತನಾಡಿದರು.ಖಾಸಗಿ ಶಾಲೆಯ ಶಿಕ್ಷಕರ ನೋವಿನ ಸಮಸ್ಯೆ ಅರಿವಾಗಿದೆ. ತಕ್ಷಣ ಮೇಲಿನ ಅಧಿಕಾರಿಗಳಿಗೆ ಅರ್ಜಿಯನ್ನು ರವಾನೆಮಾಡಿ ನ್ಯಾಯ ಒದಗಿಸುವ ಪ್ರಯತ್ನ ಮಾಡುತ್ತೇನೆ. ತ್ವರಿತವಾಗಿ ಮೌಲ್ಯಮಾಪನ ಕಾರ್ಯಕ್ಕೆ ಮುಂದಾಗುವಂತೆ ತಿಳಿಸಿದರು.ಇದೇ ವೇಳೆ ಅನುದಾನ ರಹಿತ ಸಹ ಶಿಕ್ಷಕರುಗಳ ಸಂಘದ ಅಧ್ಯಕ್ಷ ಬಸವರಾಜ ಭಜಂತ್ರಿ ಮಾತನಾಡಿ ೧೫-೨೦ ವರ್ಷಗಳ ಸೇವಾ ಅನುಭವ ಹೊಂದಿದ ಖಾಸಗಿ ಶಾಲೆಯ ಶಿಕ್ಷಕರನ್ನು ಗುರುತಿಸದಿರುವದು ಬೇಸರ ತಂದಿದೆ. ಎಸ್.ಎಸ್.ಎಲ್.ಸಿ ಆಂತರಿಕ ಅಂಕ ಪರಿಶೀಲನಾ ಸಮಿತಿಯಲ್ಲಿ ಓರ್ವ ಸದಸ್ಯನನ್ನಾಗಿ…

Read More

ಜೆಡಿಎಸ್-ಬಿಜೆಪಿ ಮುಖಂಡರ ಸಮನ್ವಯ ಸಭೆಯಲ್ಲಿ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್‌.ಡಿ.ದೇವೇಗೌಡ ಕರೆ ಬೆಂಗಳೂರು: ನಗರದಲ್ಲಿ ಶುಕ್ರವಾರ ನಡೆದ ಲೋಕಸಭಾ ಚುನಾವಣಾ ಮುಖಂಡರ ಸಭೆಯಲ್ಲಿ ಪಾಲ್ಗೊಂಡಿದ್ದ ಜಾತ್ಯತೀತ ಜನತಾದಳ (ಜೆಡಿಎಸ್) ರಾಷ್ಟ್ರೀಯ ಅಧ್ಯಕ್ಷರಾದ ಎಚ್‌ಡಿ ದೆವೇಗೌಡ ಅವರು, ಮಂಡ್ಯ ಜೆಡಿಎಸ್ ಅಭ್ಯರ್ಥಿ ಹಾಗೂ ಮೈಸೂರು ಮತ್ತು ಚಾಮರಾಜನಗರ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಕೆಲಸ ಮಾಡುವಂತೆ ಮುಖಂಡರಲ್ಲಿ ಮನವಿ ಮಾಡಿದರು.ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ ನಡೆಸಿದ ಅವರು, “ನರೇಂದ್ರ ಮೋದಿ ಅವರು ದುರ್ಬಲ ಪ್ರಧಾನಮಂತ್ರಿ, ನಾನು ಪ್ರಬಲ ಸಿಎಂ ಎಂದು ಕೊಚ್ಚಿಕೊಂಡ ಸಿದ್ದರಾಮಯ್ಯ ಅವರ ಗರ್ವಭಂಗ ಈ ಲೋಕಸಭೆ ಚುನಾವಣೆಯಲ್ಲಿ ಆಗಬೇಕು” ಎಂದು ಗುಡುಗಿದ್ದಾರೆ.ಜೆಡಿಎಸ್-ಬಿಜೆಪಿ ಸಮನ್ವಯ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ‘ನರೇಂದ್ರ ಮೋದಿಯಂತಹ ಜಗಮೆಚ್ಚಿದ ನಾಯಕರ ಬಗ್ಗೆ ಲಘುವಾಗಿ ಮಾತನಾಡಿರುವ ಸಿದ್ದರಾಮಯ್ಯ ಅವರಿಗೆ ಈ ಚುನಾವಣೆಯಲ್ಲಿ ಪಾಠ ಕಲಿಸಬೇಕು. ಮೈಸೂರಿನಲ್ಲಿ ಮೈತ್ರಿ ಅಭ್ಯರ್ಥಿ ಗೆಲ್ಲಿಸಿ, ಸಿದ್ದರಾಮಯ್ಯ ಗರ್ವಭಂಗ ಮಾಡಿ’ ಎಂದು ಚಾಮುಂಡೇಶ್ವರಿ ಕ್ಷೇತ್ರದ ಶಾಸಕರು, ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷರಾದ…

Read More

ವಿಜಯಪುರ: ಮಿಸಲು ಲೋಕಸಭಾ ಚುನಾವಣೆ ನಿಮಿತ್ತ ಕಾಂಗ್ರೆಸ್ ಅಭ್ಯರ್ಥಿ ರಾಜು ಆಲಗೂರ ಅವರು ದಿ.31 ರವಿವಾರ ಬಬಲೇಶ್ವರ ವಿಧಾನಸಭಾ ಕ್ಷೇತ್ರ ಹಾಗೂ ಇಂಡಿ ವಿಧಾನಸಭಾ ಕ್ಷೇತ್ರದಲ್ಲಿ ಪ್ರಚಾರ ಸಭೆಗಳನ್ನು ಕೈಗೊಂಡಿದ್ದಾರೆ.ದಿ.31 ರವಿವಾರ ಬೆ.10ಗಂ. ಬಬಲೇಶ್ವರದಲ್ಲಿ ವಿ.ಎಸ್.ಪಾಟೀಲ ಅವರ ತೋಟದಲ್ಲಿ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಅವರ ನೇತೃತ್ವದಲ್ಲಿ ನಡೆಯಲಿರುವ ಸಭೆಯಲ್ಲಿ ಬಬಲೇಶ್ವರ ಪಟ್ಟಣ, ಸಾರವಾಡ ಜಿಲ್ಲಾ ಪಂಚಾಯತ ಮತ್ತು ಕಾಖಂಡಕಿ ಜಿಲ್ಲಾ ಪಂಚಾಯತ ಮುಖಂಡರು, ಪದಾಧಿಕಾರಿಗಳು, ಯುವಕರು, ಕಾರ್ಯಕರ್ತರು ಸಭೆಯಲ್ಲಿ ಉಪಸ್ಥಿತರಿರಲಿದ್ದಾರೆ.ನಂತರ ಸಂ.4 ಗಂ. ಇಂಡಿ ವಿಧಾನಸಭಾ ಕ್ಷೇತ್ರದ ಇಂಡಿ ನಗರದ ಅಮರ ಹೋಟೆಲ್ ಹತ್ತಿರ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ ಅವರ ನೇತೃತ್ವದಲ್ಲಿ ಏರ್ಪಡಿಸಿದ ಪ್ರಚಾರ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಪ್ರಧಾನಕಾರ್ಯದರ್ಶಿ ವಸಂತ ಹೊನಮೊಡೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಚಿಮ್ಮಡ: ಘೋಷಣೆ ಮಾಡಿದ್ದೇಲ್ಲವನ್ನು ಈಡೇರಿಸುವ ದೇಶದ ಏಕೈಕ ಪಕ್ಷವೆಂದರೆ ಅದು ಕಾಂಗ್ರೆಸ ಪಕ್ಷವಾಗಿದ್ದು ಪ್ರಸಕ್ತ ಲೋಕಸಭಾ ಚುನಾವಣೆಗಾಗಿ ಕ್ಷೇತ್ರದ ಎಲ್ಲ ಭಾಗಗಳ ಅವಶ್ಯಕತೆಗನುಸಾರ ಪ್ರೆತ್ಯೇಕ ಪ್ರಣಾಳಿಕೆ ರಚಿಸಲಾಗುವುದೆಂದು ಬಾಗಲಕೋಟ ಲೋಕಸಭಾ ಅಭ್ಯರ್ಥಿ ಸಂಯುಕ್ತಾ ಪಾಟೀಲ ಹೇಳಿದರು.ಗ್ರಾಮದ ಉಮೇಶ ಪೂಜಾರಿಯವರ ತೋಟದ ಮನೆಯ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಎಲ್ಲರನ್ನು ಒಗ್ಗೂಡಿಸಿಕೊಂಡು ಹೋಗುವ ನಮ್ಮ ತಂದೆಯವರ ಸರಳತೆಗೆ ವರಿಷ್ಠರು ನನಗೆ ತಮ್ಮ ಸೇವೆ ಮಾಡುವ ಈ ಜವಾಬ್ದಾರಿ ನೀಡಿದ್ದು, ರಾಜ್ಯ ಸರಕಾರದ ಜನಪರ ಯೋಜನೆಗಳಿಂದಾಗಿ ರಾಜ್ಯ, ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಅನುಕೂಲಕರ ವಾತಾವರಣವಿದ್ದು ಕಾರ್ಯಕರ್ತರು ಬೂತ ಮಟ್ಟದಲ್ಲಿ ಶೃಮಿಸಿದ್ದೇ ಆದಲ್ಲಿ ಈ ಭಾರಿ ಅತೀ ಹೆಚ್ಚು ಅಂತರದ ಗೆಲುವು ನಮ್ಮದಾಗಲಿದೆ ಎಂದರು.ಕಾಂಗ್ರೆಸ್ ಧುರೀಣ ಸಿದ್ದು ಕೊಣ್ಣೂರ ಮಾತನಾಡಿ, ಬಿಜೆಪಿ ಅವಧಿಯ ಹತ್ತು ವರ್ಷಗಳಲ್ಲಿ ದೇಶದಲ್ಲಿ ಬಡವರು, ರೈತರು ಕಂಗಾಲಾಗಿದ್ದು ರೈತರ ಸಾಲ ಮನ್ನಾ ಮಾಡಿದ್ದು, ಬಡವರಿಗಾಗಿ ಯೋಜನೆಗಳನ್ನು ರೂಪಿಸಿ ಜಾರಿಗೊಳಿಸಿದ್ದು ಕಾಂಗ್ರೆಸ್ ಪಕ್ಷವಾಗಿದ್ದು ಈ ಕಾರ್ಪೋರೆಟ್ ಆಡಳಿತದ ಬಿಜೆಪಿ…

Read More

ವಿಜಯಪುರ: ವಿಜಯಪುರ ಮೀಸಲು ಲೋಕಸಭಾ ಕ್ಷೇತ್ರದಿಂದ ಕರ್ನಾಟಕ ರಾಷ್ಟ್ರಸಮಿತಿ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದು ಪಕ್ಷದ ಕಾರ್ಯಕರ್ತರು, ಮುಖಂಡರು ಗೆಲುವಿಗೆ ಶ್ರಮಿಸಿ ದೇಶದ ಅಭಿವೃದ್ಧಿಗೆ ಸಹಕರಿಸಬೇಕೆಂದು ಅಭ್ಯರ್ಥಿ ಗಣಪತಿ ರಾಠೋಡ ಮನವಿ ಮಾಡಿದರು.ವಿಜಯಪುರ ಪಕ್ಷದ ಕಚೇರಿಯಲ್ಲಿ ಕೆ.ಆರ್.ಎಸ್. ಪಕ್ಷದ ಬಿ ಫಾರ್ಮ್ ಪಡೆದ ನಂತರ ಮಾತನಾಡಿದ ಅವರು, ಜೆಡಿಎಸ್, ಕಾಂಗ್ರೆಸ್, ಬಿಜೆಪಿ ಪಕ್ಷದ ದುರಾಡಳಿತದಿಂದ ಜನತೆ ರೋಸಿಹೋಗಿದ್ದು ಹಣ ಸಂಪಾದನೆ ಮಾಡುವುದನ್ನೇ ರಾಜಕೀಯವನ್ನಾಗಿ ಮಾಡಿಕೊಂಡಿರುವುದರಿಂದ ಜನರ ಕಷ್ಟಗಳು ರಾಜಕಾರಣಿಗಳಿಗೆ ತಿಳಿಯುತ್ತಿಲ್ಲ. ಈ ಪಕ್ಷಗಳದ್ದು ಕೇವಲ ಇನ್ವೆಸ್ಟ್ಮೆಂಟ್ ರಾಜಕೀಯವಾಗಿದ್ದು, ಪಾರದರ್ಶಕ ಆಡಳಿತ ನೀಡುವಲ್ಲಿ ವಿಫಲರಾಗಿದ್ದಾರೆ. ಜನರಿಗೆ ಪಾರದರ್ಶಕ ಆಡಳಿತದ ಅವಶ್ಯಕತೆ ಇದ್ದು, ನಮ್ಮ ಪಕ್ಷದ ತತ್ವ ಸಿದ್ಧಾಂತವೂ ಇದೇ ಆಗಿದೆ. ಚುನಾವಣೆಗಳಲ್ಲಿ ಹಣ, ಹೆಂಡದ ಆಸೆ ಆಮಿಷವೊಡ್ಡದೆ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸವನ್ನು ನಮ್ಮ ಪಕ್ಷ ಮಾಡಲಿದೆ. ಜನರ ಸಮಸ್ಯೆಗಳನ್ನು ಆಲಿಸಿ ಅವುಗಳನ್ನು ಈಡೇರಿಸಲು ನಮ್ಮ ಪಕ್ಷವು ಪಣ ತೊಟ್ಟಿದ್ದು ಲೋಕಸಭಾ ಚುನಾವಣೆಯಲ್ಲಿ ನಮ್ಮ ಪಕ್ಷವು ವಿಜಯಪುರ ಲೋಕಸಭಾ ಕ್ಷೇತ್ರದಿಂದ ನಾನು ಸ್ಪರ್ಧಿಸುತ್ತಿದ್ದು ಪಕ್ಷದ…

Read More

ವಿಜಯಪುರ: ಬಂಜಾರ ಸಮಾಜದ ಬಗ್ಗೆ ನನಗೆ ಮೊದಲಿನಿಂದಲೂ ಗೌರವ ಇದೆ. ಬಂಜಾರ ಸಮಾಜದವರು ಯಾರು? ಅವರ ವೋಟ್ ನನಗೆ ಬೇಡ ಎಂದು ಎಲ್ಲಿಯೂ ಹೇಳಿಕೆ ನೀಡಿಲ್ಲ. ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್‌ನ ಕೆಲವರು ದುರುದ್ದೇಶದಿಂದ ತಪ್ಪು ಸಂದೇಶವನ್ನು ಬಿತ್ತುತ್ತಿದ್ದಾರೆ’ ಎಂದು ಸಂಸದ ರಮೇಶ ಜಿಗಜಿಣಗಿ ಪತ್ರಿಕಾ ಹೇಳಿಕೆ ಮೂಲಕ ಪ್ರತಿಕ್ರಿಯಿಸಿದ್ದಾರೆ.‘ಬಂಜಾರ ಸಮಾಜದ ಬಿಜೆಪಿ ಟಿಕೆಟ್ ಆಕಾಂಕ್ಷಿಯೊಬ್ಬರು ಪಕ್ಷದ ಕಚೇರಿಗೆ ಮುತ್ತಿಗೆ ಹಾಕಿ ನನ್ನ ವಿರುದ್ಧ ಪ್ರತಿಭಟನೆ ನಡೆಸಿ ಅನಗತ್ಯ ಆರೋಪ ಮಾಡಿರುವ ಬಗ್ಗೆ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡುವಾಗ ನಾನು ಬಂಜಾರ ಸಮಾಜಕ್ಕೆ ಅವಮಾನ ಮಾಡಿಲ್ಲ’ ಎಂದು ಸ್ಪಷ್ಟಪಡಿಸಿದರು. ‘ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದವರು ನಮ್ಮ ಜಿಲ್ಲೆಯವರಲ್ಲ ನೆರೆಯ ಬಾಗಲಕೋಟೆ ಜಿಲ್ಲೆಯಿಂದ ಕರೆತಂದಿದ್ದರು. ಅಭ್ಯರ್ಥಿ ಬದಲಿಸಿ ಎಂದು ಈಗ ಹೇಳುವ ಬದಲು ಪಕ್ಷಕ್ಕಾಗಿ ಶ್ರಮಿಸಿದರೆ ಭವಿಷ್ಯದಲ್ಲಿ ಅವರಿಗೆ ಅವಕಾಶಗಳು ಲಭಿಸುತ್ತವೆ ಎಂದು ಹೇಳಿಕೆ ನೀಡಿದ್ದೇನೆ’ ಎಂದು ತಿಳಿಸಿದರು.‘ನನ್ನ ರಾಜಕೀಯ ಜೀವನದಲ್ಲಿ ಇದುವರೆಗೆ ಯಾವುದೇ ಸಮಾಜದವರಿಗೂ ಅನ್ಯಾಯ ಮಾಡಿಲ್ಲ, ಅವಮಾನ ಮಾಡಿಲ್ಲ ಎಲ್ಲ ಸಮಾಜದವರನ್ನು ಹೆಗಲ ಮೇಲೆ ಹೊತ್ತುಕೊಂಡು…

Read More

ವಿಜಯಪುರ: ನಗರದ ಪ್ರಗತಿ ಸಾಹಿತ್ಯ ವೇದಿಕೆಯ ವತಿಯಿಂದ ನಿಡಗುಂದಿ ಪಟ್ಟಣದ ಬಸವರಾಜ ಹಾವೇರಿಯವರಿಗೆ ಅವರ ಸ್ವಗೃಹದಲ್ಲಿ ಸನ್ಮಾನ ಮಾಡಲಾಯಿತು.ಆರೋಗ್ಯ ಇಲಾಖೆಯ ನೌಕರರಾದ ಬಸವರಾಜರವರು ಕನ್ನಡ ಡಿ.ಟಿ.ಪಿ.ಬಲ್ಲವರಾಗಿದ್ದು, ಹಲವಾರು ಕವಿಗಳ ಕವನಸಂಕಲನದ ಹಸ್ತಪ್ರತಿಗಳನ್ನು ಕವಿಗಳಿಂದ ಯಾವುದೆ ರೀತಿಯ ಹಣ ಪಡೆಯದೆ ಉಚಿತವಾಗಿ ಡಿ.ಟಿ.ಪಿ.ಕೆಲಸ ಮಾಡುತ್ತಿರುವ ಇವರ ನಿಸ್ವಾರ್ಥಕಾರ್ಯ ಮತ್ತು ಕನ್ನಡಸೇವೆಯನ್ನು ಕಂಡು ಈ ಸನ್ಮಾನ ಮಾಡಲಾಗಿದೆ ಎಂದು ವೇದಿಕೆಯ ಸಂಸ್ಥಾಪಕ ಪ್ರಕಾಶ ಜಹಾಗೀರದಾರ ಹೇಳಿದರು.ಈ ಕಾರ್ಯಕ್ರಮದಲ್ಲಿ ರಾಚಪ್ಪ ಹಾವೇರಿ, ಶ್ರೀಮತಿ ನೀಲಮ್ಮ, ಗಿರೀಶ್ ಹೂಗಾರ, ರಾಜು ಪಟ್ಟಣಶೆಟ್ಟಿ, ಉಮೇಶ್ ಮತ್ತು ಅಶೋಕರವರು ಭಾಗವಹಿಸಿ ಬಸವರಾಜರವರ ಕನ್ನಡ ಸೇವೆಯ ಬಗ್ಗೆ ಮಾತನಾಡಿದರು.

Read More

ವಿಜಯಪುರ: ಆಕಸ್ಮಿಕವಾಗಿ ಗ್ಯಾಸ್ ಸಿಲಿಂಡರ್ ಸೋರಿಕೆಯಿಂದ ಬೆಂಕಿ ಅವಘಡ ಸಂಭವಿಸಿದ ರಾಜಾಜಿನಗರದ ಮಹಾದೇವ ದಿಂಡವಾರ ಅವರ ಮನೆಗೆ, ನಗರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ಅವರು ಶುಕ್ರವಾರ ಭೇಟಿ ನೀಡಿ ಸಾಂತ್ವನ ಹೇಳಿ, ವೈಯಕ್ತಿಕವಾಗಿ ರೂ.50 ಸಾವಿರ ಸಹಾಯಧನ ನೀಡಿದರು.ಮಾ.19 ರಂದು ನಡೆದ ದುರ್ಘಟನೆಯಲ್ಲಿ ಓರ್ವ ಬಾಲಕ ಮೃತಪಟ್ಟಿದ್ದು, ಮೂರು ಜನರು ಗಾಯಗೊಂಡಿದ್ದರು. ಈ ಹಿನ್ನೆಲೆ ಮನೆಗೆ ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿ, ಸಹಾಯಧನ ನೀಡಿದರು.ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿಯಮಿತದ ನಿರ್ದೇಶಕ ರಾಮನಗೌಡ ಪಾಟೀಲ ಯತ್ನಾಳ, ಬಿಜೆಪಿ ನಗರ ಮಂಡಲದ ಅಧ್ಯಕ್ಷ ಶಂಕರ ಹೂಗಾರ ಮತ್ತಿತರರು ಇದ್ದರು.

Read More

ರಾಜೇಂದ್ರಕುಮಾರ್ ಬಿರಾದಾರ ಸಾಂಸ್ಕೃತಿಕ ವೇದಿಕೆಯ ಮಾಸಿಕ ಪುಸ್ತಕ ಪರಿಚಯ ಕಾರ್ಯಕ್ರಮ ವಿಜಯಪುರ: ಪುಸ್ತಕಗಳ ಓದು ಮನುಷ್ಯನೊಳಗೆ ಹೊಸ ಹೊಸ ಆಲೋಚನೆಗಳನ್ನು ಹುಟ್ಟು ಹಾಕುತ್ತವೆ ಎಂದು ಸಮಾಜ ಸೇವಕಿ ಉಮಾ ಪಾಟೀಲ ಹೇಳಿದರು.ನಗರದ ಸಾಯಿ ರೆಸಿಡೆನ್ಸಿ ಬಡಾವಣೆಯ ಮನು ಪತ್ತಾರ ಕಲಕೇರಿ ಅವರ ಮನೆಯಲ್ಲಿ ಆಯೋಜಿಸಿದ ಓದುಗರ ಚಾವಡಿಯ ರಾಜೇಂದ್ರಕುಮಾರ್ ಬಿರಾದಾರ ಸಾಂಸ್ಕೃತಿಕ ವೇದಿಕೆ ಅಡಿಯಲ್ಲಿ ಹಮ್ಮಿಕೊಂಡ ಮಾಸಿಕ ಪುಸ್ತಕ ಪರಿಚಯ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಅವಸರದ ಈ ದಿನಮಾನಗಳಲ್ಲಿ ಓದುವ ಪ್ರಕ್ರಿಯೆ ನಿಧಾನವೆಂದು ಭಾವಿಸಬಾರದು ನಿಧಾನವಾದ ಓದು ಬದುಕನ್ನು ಸುಭದ್ರವಾಗಿ ಕಟ್ಟಿಕೊಡುವ ಶಕ್ತಿ ಹೊಂದಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿ, ಓದುಗರ ಚಾವಡಿಯ ಮನೆ ಮನೆಯ ಈ ಪುಸ್ತಕ ಪರಿಚಯ ಕಾರ್ಯಕ್ರಮ ನಿರಂತರವಾಗಿ ನಡೆಯಲಿ ಎಂದು ಹಾರೈಸಿದರು.ಇಂಡಿ ತಾಲ್ಲೂಕಿನ ಹಿರೆಮಸಳಿ ಗ್ರಾಮದ ಯುವ ಕಥೆಗಾರ ಅನಿಲ್ ಗುನ್ನಾಪೂರ ಅವರ ‘ಕಲ್ಲು ಹೂವಿನ ನೆರಳು’ ಕಥಾ ಸಂಕಲನವನ್ನು ನಾಗಠಾಣ ಪಬ್ಲಿಕ್ ಶಾಲೆಯ ಶಿಕ್ಷಕ ಶಿವಶರಣಪ್ಪ ಶಿರೂರು ಪರಿಚಯಿಸಿ, ಆಧುನಿಕತೆಯ ಮೋಹದ ಸೆಳೆತಕ್ಕೆ ಸಿಕ್ಕು…

Read More

ಬೆಳಗಾವಿ: ಮಂಡ್ಯದಿಂದ ಕುಮಾರಸ್ವಾಮಿಗೆ ಟಿಕೆಟ್‌ ಸಿಕ್ಕ ಹಿನ್ನೆಲೆ ಸಹಜವಾಗಿ ಸಂಸದೆ ಸುಮಲತಾಗೆ ಬೇಸರ ಆಗಿರುತ್ತೆ, ಆದರೆ, ಸುಮಲತಾ ಅವರು ಸಮಾಧಾನದಿಂದ ಇದ್ದರೆ ಮುಂದಿನ ದಿನಗಳಲ್ಲಿ ಪಕ್ಷದಲ್ಲಿ ಸೂಕ್ತ ಸ್ಥಾನಮಾನ ಸಿಗುವ ಭರವಸೆಯನ್ನು ಹೈಕಮಾಂಡ್‌ ಕೊಟ್ಟಿದೆ ಎಂದು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ.ಬೆಳಗಾವಿಯಲ್ಲಿ ಮಾತನಾಡಿದ ಅವರು, ಬೆಳಗಾವಿಯಲ್ಲಿ ಜಗದೀಶ್ ಶೆಟ್ಟರ್ ಗೆಲ್ಲಿಸುವ ಸಂಬಂಧ ಸಭೆ ಮಾಡಿದ್ದೇವೆ. ಎಲ್ಲರೂ ಸೇರಿ ಶೆಟ್ಟರ್ ಅವರನ್ನು ಹೆಚ್ಚಿನ ಅಂತರದಲ್ಲಿ ಗೆಲ್ಲಿಸಬೇಕು. ರಾಜ್ಯದ 28ಕ್ಷೇತ್ರಗಳನ್ನು ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಗೆಲ್ಲುತ್ತದೆ. ಎಲ್ಲಿಯೂ ಅಸಮಾಧಾನ ಆತಂಕ ಏನೂ ಇಲ್ಲ. ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡರು ಪ್ರಚಾರಕ್ಕಾಗಿ ಎಲ್ಲಾ ಸ್ಥಳಗಳಿಗೆ ತೆರಳಲು ಒಪ್ಪಿಕೊಂಡಿದ್ದಾರೆ ಎಂದು ತಿಳಿಸಿದರು.ಜಗದೀಶ್ ಶೆಟ್ಟರ್ ಅವರು ತುಂಬಾ ಒಳ್ಳೆಯ ನಾಯಕರಾಗಿದ್ದರಿಂದ ಅವರನ್ನು ನಾವು ಒತ್ತಾಯಿಸಿ ವಾಪಸ್ ಬಿಜೆಪಿಗೆ ಕರೆಸಿಕೊಂಡಿದ್ದೇವೆ. ಇದೀಗ ಅವರು ತುಂಬಾ ಉತ್ಸಕತೆಯಿಂದ ಲೋಕಸಭೆಗೆ ಸ್ಪರ್ಧಿಸುತ್ತಿದ್ದಾರೆ. ಎಲ್ಲರೂ ಒಗ್ಗಟ್ಟಾಗಿಯೇ ಕೆಲಸ ಮಾಡುತ್ತಿದ್ದೇವೆ. ಬೆಳಗಾವಿ ಜಿಲ್ಲೆಯ ಎರಡೂ ಕ್ಷೇತ್ರಗಳನ್ನು ದೊಡ್ಡ ಅಂತರದಲ್ಲಿ ಗೆಲ್ಲುತ್ತೇವೆ ಎಂದು ವಿಶ್ವಾಸ…

Read More