Author: editor.udayarashmi@gmail.com

ವಿಜಯಪುರ: ಕೆಪಿಟಿಸಿಎಲ್ ವತಿಯಿಂದ ೧೧೦/೧೧ಕೆವಿ ಭೂತನಾಳ ವಿದ್ಯುತ್ ವಿತರಣಾ ಕೇಂದ್ರದಲ್ಲಿ ೨೦ಎಂವಿ, ೧೧೦/೩೩ ಕೆವಿ ಶಕ್ತಿ ಪರಿವರ್ತಕ ಛೇಧಕ ದುರಸ್ತಿ ಕಾಮಗಾರಿ ಕೈಗೊಳ್ಳುವುದರಿಂದ ಮಾ.೨೯ ರಂದು ಬೆಳಗ್ಗೆ ೮ ಗಂಟೆಯಿಂದ ಮದ್ಯಾಹ್ನ ೧ರವರೆಗೆ ಭೂತನಾಳ ವಿದ್ಯುತ್ ವಿತರಣಾ ಕೇಂದ್ರದಿಂದ ಹೋರಹೋಗುವ ೩೩ಕೆವಿ ತಿಡಗುಂದಿ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಲ್ಲಾ ೧೧ಕೆವಿ ವಿದ್ಯುತ್ ಮಾರ್ಗಗಳು ಹಾಗು ೩೩ಕೆವಿ ಅರಕೇರಿ ಮಾರ್ಗಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.ಆದ ಕಾರಣ ಗ್ರಾಹಕರು ಹಾಗೂ ಸಾರ್ವಜನಿಕರು ಸಹಕರಿಸಬೇಕು ಎಂದು ವಿಜಯಪುರ ಹೆಸ್ಕಾಂ ಕಾರ್ಯ ಮತ್ತು ಪಾಲನ ವಿಭಾಗದ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ವಿಜಯಪುರ: ಜಿಲ್ಲಾಡಳಿತ ವತಿಯಿಂದ ಗುರುವಾರ ಜಿಲ್ಲಾಧಿಕಾರಿಗಳ ಸಭಾಭವನದಲ್ಲಿ ಶ್ರೀ ಅಗ್ನಿಬನ್ನಿರಾಯ ಜಯಂತಿಯನ್ನು ಚುನಾವಣಾ ನೀತಿ ಸಂಹಿತೆ ಜಾರಿಯಾಗಿರುವುದರಿಂದ ಸರಳ ಹಾಗೂ ಸಾಂಕೇತಿಕವಾಗಿ ಆಚರಿಸಲಾಯಿತು.ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಶ್ರೀ ಅಗ್ನಿಬನ್ನಿರಾಯ ರವರ ಭಾವಚಿತ್ರಕ್ಕೆ ಪೂಜೆ ಹಾಗೂ ಪುಷ್ಪಾರ್ಚನೆ ಮಾಡಿದರು. ಈ ವೇಳೆ ತಹಶೀಲ್ದಾರ ಕವಿತಾ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಬ್ಯುಬ್ ದ್ರಾಕ್ಷಿ ಸೇರಿದಂತೆ ಜಿಲ್ಲಾಧಿಕಾರಿ ಕಚೇರಿ ಸಿಬ್ಬಂದಿಗಳು ಉಪಸ್ಥಿತರಿದ್ದರು.

Read More

ವಿಜಯಪುರ: ದೇವಣಗಾಂವ ಬಳಿ ನಿರ್ಮಿಸಲಾಗಿರುವ ಅಂತರ ಜಿಲ್ಲಾ ಚೆಕ್ ಪೋಸ್ಟ್ ಗೆ ಡಿಸಿ ಹಾಗೂ ಎಸ್ಪಿ ಗುರುವಾರ ಭೇಟಿ ನೀಡಿದರು.ಈ ವೇಳೆ ಮಾತನಾಡಿದ ಜಿಲ್ಲಾ ಪೊಲೀಸ್ ವರಿಷ್ಠ್ಠಾಧಿಕಾರಿ ಋಷಿಕೇಶ್ ಸೋನಾವಣೆ, ಅನುಮಾನಾಸ್ಪದ ವಾಹನಗಳು ಅಥವಾ, ವ್ಯಕ್ತಿ ಕಂಡು ಬಂದರೇ ಕೂಲಂಕುಶವಾಗಿ ಪರಿಶೀಲನೆ ನಡೆಸಬೇಕು. ಅಕ್ರಮವಾಗಿ ಹಣ ಹಾಗೂ ಮದ್ಯ ಸಾಗಾಟ ಮಾಡುತ್ತಿರುವುದು ಕಂಡು ಬಂದಲ್ಲಿ, ತಕ್ಷಣವೇ ಕಾರ್ಯಪ್ರವೃತ್ತರಾಗಿ, ಮೇಲಾಧಿಕಾರಿಗಳ ಗಮನಕ್ಕೆ ತರಬೇಕು ಎಂದು ತಿಳಿಸಿದರು.

Read More

ವಿಜಯಪುರ: ಲೋಕಸಭಾ ಸಾರ್ವತ್ರಿಕ ಚುನಾವಣೆ-೨೦೨೪ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಗುರುವಾರದಂದು ಇಂಡಿ ತಾಲೂಕಿನ ಅಗರಖೇಡ ಹತ್ತಿರದ ಚಿಕ್ಕಮಣೂರು ಕ್ರಾಸ್ ಹಾಗೂ ಹಿಂಗಾಣಿ ಬಳಿ ನಿರ್ಮಿಸಲಾಗಿರುವ ಚೆಕ್ ಪೋಸ್ಟ್ ಮತ್ತು ಇಂಡಿ ಪಟ್ಟಣದಲ್ಲಿ ಸ್ಥಾಪಿಸಿರುವ ಭದ್ರತಾ ಕೊಠಡಿಗೆ ಭೇಟಿ ನೀಡಿ ಕಾರ್ಯ ವೈಖರಿಯನ್ನು ಪರಿಶೀಲಿಸಿದರು.ಈ ವೇಳೆ ಭದ್ರತಾ ಕೊಠಡಿಯಲ್ಲಿ ಇರಿಸಲಾಗಿರುವ ಇ ವಿ ಎಂ ಭದ್ರತೆಯನ್ನು ಕೂಲಂಕುಸವಾಗಿ ಪರಿಶೀಲಿಸಿದರು. ಚೆಕ್‌ಪೋಸ್ಟ್ಗಳಲ್ಲಿನ ಅಧಿಕಾರಿ ಮತ್ತು ಸಿಬ್ಬಂದಿಯ ಹಾಜರಾತಿ, ಶಾಮಿಯಾನ, ಕುಡಿಯುವ ನೀರು ಸೇರಿದಂತೆ ಚೆಕ್ ಪೋಸ್ಟ್ ಗಳ ವ್ಯವಸ್ಥೆಯ ಬಗ್ಗೆ ಮಾಹಿತಿ ಪಡೆದರು.ಚೆಕ್‌ಪೋಸ್ಟ್ಗಳು ಸರಿಯಾಗಿ ಕಾರ್ಯ ನಿರ್ವಹಿಸಬೇಕು. ಚೆಕ್‌ಪೋಸ್ಟ್ಗಳಿಗೆ ನಿಯೋಜನೆಗೊಂಡ ಎಲ್ಲ ಅಧಿಕಾರಿಗಳು ಮತ್ತು ಸಿಬ್ಬಂದಿ ಸರಿಯಾದ ಸಮಯಕ್ಕೆ ಪಾಳಿ ಅನುಸಾರ ಹಾಜರಾಗಿ ಕಾರ್ಯ ನಿರ್ವಹಿಸಬೇಕು. ಪ್ರತಿಯೊಂದು ವಾಹನವನ್ನು ತಪಾಸಣೆಗೆ ಒಳಪಡಿಸಬೇಕು ಎಂದು ಜಿಲ್ಲಾಧಿಕಾರಿಗಳು ಸ್ಥಳದಲ್ಲಿದ್ದ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.ಈ ವೇಳೆ ಜಿಲ್ಲಾ ಪೊಲೀಸ್ ವರಿಷ್ಠ್ಠಾಧಿಕಾರಿ ಋಷಿಕೇಶ್ ಸೋನಾವಣೆ, ಇಂಡಿ ಉಪವಿಭಾಗಾಧಿಕಾರಿ ಅಭೀದ್ ಗದ್ಯಾಳ ತಹಶೀಲ್ದಾರ ಮಂಜುಳಾ ನಾಯಕ…

Read More

ವಿಜಯಪುರ: ನಾರಾಯಣಪೂರ ಜಲಾಶಯದಿಂದ ಭೀಮಾನದಿಗೆ ಜನ ಜಾನುವಾರಗಳಿಗೆ ಕುಡಿಯುವ ಉದ್ದೇಶಕ್ಕಾಗಿ ೧ ಟಿಎಂಸಿ ನೀರು ಬಿಡುಗಡೆ ಮಾಡಲಾಗುತ್ತಿರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲಾಧಿಕಾರಿ ಟಿ.ಭೂಬಾಲನ್ ಇಂಡಿ ತಾಲೂಕಿನ ಹಿಂಗಣಿ ಬ್ಯಾರೆಜ್‌ಗೆ ಗುರುವಾರ ಭೇಟಿ ನೀಡಿ ಪರಿಶೀಲಿಸಿದರುಕುಡಿಯುವ ಉದ್ದೇಶಕ್ಕಾಗಿ ನೀರನ್ನು ಹರಿಸಲಾಗುತ್ತಿರುವುದರಿಂದ ಭೀಮಾನದಿ ನದಿ ನೀರನ್ನು ಅವಲಂಬಿಸಿದ ಬಹುಹಳ್ಳಿ ಕುಡಿಯುವ ನೀರಿನ ಯೋಜನೆಯ ಸಮರ್ಪಕ ಸಾಕಾರಕ್ಕೆ ಅಧಿಕಾರಿಗಳು ತಕ್ಷಣದಿಂದಲೇ ಜಾಗೃತೆ ವಹಿಸಿಕೊಂಡು, ಕಡ್ಡಾಯವಾಗಿ ಯಾವುದೇ ಕಾರಣಕ್ಕೂ ನೀರು ಪೋಲಾಗದಂತೆ ಹಾಗೂ ಅಂತಿಮ ಸೂಚಿತ ಪ್ರದೇಶಗಳಿಗೆ ಕುಡಿಯುವ ನೀರು ತಲುಪುವಂತೆ ಆದ್ಯತೆ ನೀಡಿ ಕಾರ್ಯನ್ಮೋಮುಖರಾಗಬೇಕು ಎಂದು ಸೂಚಿಸಿದರು.ಅನ್ಯ ಚಟುವಟಿಕೆಗಳಿಗೆ ನೀರನ್ನು ಬಳಸುವುದನ್ನು ಅಧಿಕಾರಿಗಳು ಕಟ್ಟುನಿಟ್ಟಾಗಿ ತಪ್ಪಿಸಬೇಕು. ಡಿಸೇಲ್, ಮೋಟಾರು ಯಂತ್ರಗಳ ಮೂಲಕ ನೀರನ್ನು ಎತ್ತುವುದನ್ನು ತಡೆಯಬೇಕು. ಹಗಲು-ರಾತ್ರಿ ಪಾಳಿಯಲ್ಲಿ ವಾಚ್-ವಾರ್ಡ ಮಾಡಬೇಕು. ನದಿ ಪಾತ್ರಗಳಲ್ಲಿ ಬರುವ ಬ್ಯಾರೇಜ್‌ಗಳು ತುಂಬಿಸುವಲ್ಲಿ ಎಲ್ಲಾ ಇಲಾಖೆಯ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದರು.ಈ ವೇಳೆ ಇಂಡಿ ಉಪವಿಭಾಗಾಧಿಕಾರಿ ಅಭೀದ್ ಗದ್ಯಾಳ, ತಹಶೀಲ್ದಾರ ಮಂಜುಳಾ ನಾಯಕ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು…

Read More

ದೇವರಹಿಪ್ಪರಗಿ: ವಿಜಯಪುರ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ದೇವರಹಿಪ್ಪರಗಿ ವಿಧಾನಸಭೆ ಪ್ರಚಾರ ಉಸ್ತುವಾರಿಗಳಾಗಿ ವಿಧಾನ ಪರಿಷತ್ ಸದಸ್ಯ ಸುನೀಲಕುಮಾರ ಪಾಟೀಲ, ಮಾಜಿ ಶಾಸಕ ಶರಣಪ್ಪ ಸುಣಗಾರ, ಸುಭಾಸ್ ಛಾಯಾಗೋಳ (ಕೋರವಾರ), ಡಾ.ಪ್ರಭುಗೌಡ ಲಿಂಗದಳ್ಳಿ (ಚಬನೂರ), ಆನಂದ ದೊಡ್ಡಮನಿ (ಬ.ಸಾಲೋಡಗಿ), ಗೌರಮ್ಮ ಮುತ್ತತ್ತಿ (ಹಾಲ್ಯಾಳ), ಬಶೀರ್‌ಅಹ್ಮದ್ ಕಸಾಬ್ (ಬೇಪಾರಿ), ಬಾಳಾಸಾಹೇಬಗೌಡ ಪಾಟೀಲ (ಸಾತಿಹಾಳ), ಜಿ.ಪಂ ಮಾಜಿಸದಸ್ಯ ಎಸ್.ಎಮ್. ದೇಸಾಯಿ, ಸಾಯಿಕುಮಾರ ಬಿಸನಾಳ (ಕಡ್ಲೇವಾಡ ಪಿಸಿಎಚ್), ಸಂಚಾಲಕರಾಗಿ ಬಿ.ಎಸ್.ಪಾಟೀಲ (ಯಾಳಗಿ) ನಿಯೋಜನೆಗೊಂಡಿದ್ದಾರೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಪ್ರಕಟಣೆ ತಿಳಿಸಿದೆ.

Read More

ಮುದ್ದೇಬಿಹಾಳ: ತಾಲೂಕಿನ ಗೋನಾಳ ಎಸ್.ಎಚ್.ಗ್ರಾಮದಲ್ಲಿ ನಿರ್ಮಿಸುತ್ತಿರುವ ರಸ್ತೆ ನಿರ್ಮಾಣಕ್ಕೆ ರೈತ ಪರೂತಯ್ಯ ಹಿರೇಮಠ ಜಿಲ್ಲಾಧಿಕಾರಿಗೆ ಮತ್ತು ವಿಜಯಪುರದ ಲೊಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಇಂಜಿನೀಯರ್ ಗೆ ತಕರಾರು ಸಲ್ಲಿಸಿದ್ದಾರೆ.ಈ ಕುರಿತು ದೂರಿನ ಸ್ವೀಕೃತಿ ಪ್ರತಿ ಮಾಧ್ಯಮಕ್ಕೆ ನೀಡಿ ಮಾತನಾಡಿದ ಅವರು, ಗೋನಾಳ ಗ್ರಾಮದ ಸರ್ವೇ ನಂಬರ್ ೧೦, ೧೧, ೧೨ ಈ ಜಮೀನುಗಳಲ್ಲಿ ಗೋನಾಳ ಗ್ರಾಮದ ಮಳೆಯ, ಕೊಳಚೆ, ಕಾಲುವೆಯ, ಹಡಲಗೇರಿ ರಸ್ತೆಯಿಂದ ಬರುವ ಹೀಗೆ ಎಲ್ಲ ನೀರು ರಸ್ತೆಗುಂಟ ಹರಿದು ಬಂದು ನಿಲ್ಲುತ್ತಿರುವದರಿಂದ ಯಾವುದೇ ವ್ಯವಸಾಯ ಮಾಡಲು ಸಾಧ್ಯವಾಗುತ್ತಿಲ್ಲ. ಇದರಿಂದ ನಮಗೆ ತುಂಬಿಬಾರದ ಹಾನಿ ಉಂಟಾಗುತ್ತಿದ್ದು, ಸಧ್ಯ ನಿರ್ಮಿಸುತ್ತಿರುವ ರಸ್ತೆಯ ಬದಿ ನೀರು ಹರಿದು ಹೋಗಲು ಯಾವುದೇ ಚರಂಡಿ ನಿರ್ಮಿಸುವ ವ್ಯವಸ್ಥೆ ಕೂಡ ಮಾಡಿಲ್ಲ. ಈ ಸಮಸ್ಯೆ ಬಗ್ಗೆ ಹಿಂದೆ ಹಲವಾರು ಬಾರಿ ದೂರಿದರೂ ಯಾವುದೇ ಪ್ರಯೋಜನವಾಗಿಲ್ಲ. ಹಾಗಾಗಿ ಹಿಂದೆ ತಕರಾರು ನೀಡಿದ ಕಾರಣ ಕಾಮಗಾರಿಯನ್ನ ತಡೆಹಿಡಿಯಲಾಗಿತ್ತು. ಸಧ್ಯ ಅದೇ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಲಾಗಿದೆ. ಈಗಾಗಲೇ ನ್ಯಾಯ ಕೋರಿ ನಾವು…

Read More

ವಿಜಯಪುರದಲ್ಲಿ ಪಕ್ಷದ ಮುಖಂಡರು, ಪದಾಧಿಕಾರಿಗಳ ಸಭೆಯಲ್ಲಿ ಸಚಿವ ಎಂ.ಬಿ. ಪಾಟೀಲ ಭವಿಷ್ಯ ವಿಜಯಪುರ: ಈ ಸಲದ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ರಾಜ್ಯ ಮತ್ತು ದೇಶದೆಲ್ಲೆಡೆ ಭರ್ಜರಿ ಯಶಸ್ಸು ಕಾಣಲಿದೆ ಎಂದು ಬೃಹತ್ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ವಿಶ್ವಾಸದಿಂದ ಹೇಳಿದರು.ಲೋಕಸಭೆ ಅಭ್ಯರ್ಥಿ ರಾಜು ಆಲಗೂರ ಪರ ಗುರುವಾರ ನಗರದ ಕಿತ್ತೂರು ಚೆನ್ನಮ್ಮ ಭವನದಲ್ಲಿ ನಡೆದ ಜಿಲ್ಲೆಯ ಪಕ್ಷದ ಮುಖಂಡರು, ಪದಾಧಿಕಾರಿಗಳ ಮಹತ್ವದ ಸಭೆಯಲ್ಲಿ ಅವರು ಮಾತನಾಡಿದರು.ಮುಖ್ಯಮಂತ್ರಿ ಸಿದ್ದರಾಮಯ್ಯನವರು ನೀಡಿದ್ದ ಬಹುತೇಕ ಭರವಸೆಯನ್ನು ಈಡೇರಿಸಿದ್ದಾರೆ. ಕಳೆದ ಬಿಜೆಪಿಯ ಯಡಿಯೂರಪ್ಪರ ಸರಕಾರ ನೀಡಿದ್ದ ಆರು ನೂರು ಭರವಸೆಯಲ್ಲಿ ಐದು ನೂರಕ್ಕೂ ಹೆಚ್ಚು ಭರವಸೆಗಳು ಹಾಗೇ ಉಳಿದಿವೆ. ಇದಲ್ಲದೇ ದೇಶದಲ್ಲಿ ಸಾಮಾನ್ಯರ ಜೀವನ ಸ್ಥಿತಿ ಚಿಂತಾಜನಕವಾಗಿದ್ದು, ಇದೆಲ್ಲ ಮರೆಮಾಚಲು ಬರೀ ಭಾವನಾತ್ಮಕ ವಿಚಾರಗಳನ್ನು ಅವರು ಎತ್ತುತ್ತಿದ್ದಾರೆ. ಜನರಿಗೆ ಇವರ ಆಟ ಆರ್ಥವಾಗಿದೆ ಎಂದು ಟೀಕಿಸಿದರು.ರಾಜು ಆಲಗೂರ ಅವರು ಒಂದು ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ಗೆಲ್ಲಲಿದ್ದಾರೆ. ಇದರಲ್ಲಿ ಯಾವ ಸಂಶಯವೂ…

Read More

ಆಲಮಟ್ಟಿ: ಅನುದಾನದ ಕೊರತೆಯ ಹಿನ್ನಲೆಯಲ್ಲಿ ಕೆಬಿಜೆಎನ್ ಎಲ್ ಅರಣ್ಯ ಇಲಾಖೆ ಪ್ರತಿ ವರ್ಷ ರೈತರಿಗೆ ಕಡಿಮೆ ದರದಲ್ಲಿ ವಿತರಿಸುತ್ತಿದ್ದ ಸಸಿ ಈ ವರ್ಷ ವಿತರಿಸುತ್ತಿಲ್ಲ.ಪ್ರತಿ ವರ್ಷ ಉತ್ಕೃಷ್ಟ ಗುಣಮಟ್ಟದ 176 ಕ್ಕೂ ವಿವಿಧ ಜಾತಿಯ 10 ಲಕ್ಷ ಸಸಿಗಳನ್ನು ಬೆಳೆಸಿ ಅವುಗಳನ್ನು ಅತ್ಯಂತ ಕಡಿಮೆ ಬೆಲೆ ರೈತರಿಗೆ ಮಾರುತ್ತಿದ್ದ ಆಲಮಟ್ಟಿಯ ಕೆಬಿಜೆಎನ್ ಎಲ್ ಅರಣ್ಯ ಇಲಾಖೆಯ ಸಸಿಗಳನ್ನು ಮಾರುತ್ತಿತ್ತು.ಪ್ರತಿ ವರ್ಷ ಜೂನ್ ನಲ್ಲಿ ಸಸಿಗಳ ವಿತರಣೆ ನಡೆಯುತ್ತಿತ್ತು. ರಾತ್ರಿಯಿಡಿ ಸರದಿಯಲ್ಲಿ ಕಾಯ್ದು ಇಲ್ಲಿಯ ಸಸಿಗಳನ್ನು ರೈತರು ಒಯ್ಯುತ್ತಿದ್ದರು. ಇಲ್ಲಿಯ ಸಸಿಗಳಿಗೆ ಬೇಡಿಕೆಯೂ ಹೆಚ್ಚಿತ್ತು. ಅರಣ್ಯ ಇಲಾಖೆಯ ಸಸಿಗಳಿಗಷ್ಟೇ ಸೀಮಿತಗೊಳ್ಳದೇ, ಅರಣ್ಯ ಸಸಿಗಳ ಜತೆ ಹಣ್ಣು, ತೋಟಗಾರಿಕೆ, ಅಲಂಕಾರಿಕ, ಔಷಧೀಯ , ಕೃಷಿ, ಧಾರ್ಮಿಕ ಮಹತ್ವದ ಸಸಿಗಳು ಸೇರಿ ನಾನಾ 150 ಕ್ಕೂ ಅಧಿಕ ಜಾತಿಯ ಗುಣಮಟ್ಟದ, ರೋಗಾಣುರಹಿತ ಸಸಿಗಳು ಕಡಿಮೆ ಬೆಲೆಗೆ ದೊರೆಯುವುದರಿಂದ ಬೇಡಿಕೆ ಹೆಚ್ಚಿತ್ತು.ಸಸಿಗಳನ್ನು ದೇಶದ ನಾನಾ ನರ್ಸರಿಗಳಿಂದ ತರಿಸಿ ಇಲ್ಲಿ ಮಣ್ಣು, ಗೊಬ್ಬರ, ಗೋಮೂತ್ರ ಸೇರಿ ವಿಶೇಷ ಆರೈಕೆಯೊಂದಿಗೆ…

Read More

ಮುದ್ದೇಬಿಹಾಳ: ಗುಜರಿ ವ್ಯಾಪಾರಿಯೋರ್ವನಿಗೆ ಸಂಬಂಧಿಸಿದ ಗುಜರಿ ಸರಕಿಗೆ ಆಕಸ್ಮಿಕವಾಗಿ ಹತ್ತಿಕೊಂಡ ಬೆಂಕಿಯ ಪರಿಣಾಮ ಅಪಾರ ಪ್ರಮಾಣದ ಹಾನಿ ಸಂಭವಿಸಿದ ಘಟನೆ ಪಟ್ಟಣದ ಲಕ್ಷ್ಮೀ ಚಿತ್ರಮಂದಿರ ಬಳಿ ನಡೆದಿದೆ.ಬಯಲು ಜಾಗೆಯಲ್ಲಿ ಶೇಖರಿಸಿಟ್ಟ ಸರಕಿಗೆ ಇದ್ದಕ್ಕಿಂತೆ ಬೆಂಕಿ ತಗುಲಿ ಸುತ್ತಲೆಲ್ಲ ವ್ಯಾಪಿಸತೊಡಗಿದ್ದು, ಸ್ಥಳೀಯ ಅಗ್ನಿಶಾಮಕದಳವರಿಗೆ ಕರೆ ಮಾಡಲಾಗಿ ಮತ್ತೊಂದು ಕಾರ್ಯಾಚರಣೆಯಲ್ಲಿ ತೊಡಗಿದ್ದು ತಾಳಿಕೋಟೆಯ ವಾಹನ ಹಾಜರಾಗಿ ಬೆಂಕಿಯನ್ನು ನಂದಿಸುವಲ್ಲಿ ಸಫಲವಾಗಿದೆ.ಘಟನಾ ಸ್ಥಳಕ್ಕೆ ಸಿಪಿಐ ಮಲ್ಲಿಕಾರ್ಜುನ ತುಳಸಿಗೇರಿ ಸಿಬ್ಬಂದಿಯೊಂದಿಗೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಈ ಕುರಿತು ಯಾವುದೇ ದೂರು ದಾಖಲಾಗಿಲ್ಲ

Read More