Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ತಾಲ್ಲೂಕಿನ ಕೊಂಡಗೂಳಿ ಗ್ರಾಮದ ಸ್ವಾಮಿ ವಿವೇಕಾನಂದ ಚಾರಿಟೇಬಲ್ ಟ್ರಸ್ಟ್ ವತಿಯಿಂದ ‘ಸರಕಾರಿ ಶಾಲೆ ಉಳಿಸಿ, ಬೆಳೆಸಿ’ ಅಭಿಯಾನ ಜರುಗಿತು.ಗ್ರಾಮದ ಶಾಲಾ ಆವರಣದಲ್ಲಿ ಶುಕ್ರವಾರ ಜರುಗಿದ ಅಭಿಯಾನದಲ್ಲಿ ಟ್ರಸ್ಟ ವತಿಯಿಂದ ಸರಕಾರಿ ಶಾಲೆ ಮಕ್ಕಳ ಶಿಕ್ಷಣಕ್ಕೆ ಇಬ್ಬರು ಅತಿಥಿ ಶಿಕ್ಷಕರು, ಸ್ಮಾರ್ಟ್ ಬೋರ್ಡ್, ಉಚಿತ ಕಂಪ್ಯೂಟರ್ ಕಲಿಕೆಗೆ ಸಹಾಯ, ಉಚಿತ ಪ್ರವಾಸ ಸೌಲಭ್ಯ ನೀಡುವುದಾಗಿ ಘೋಷಣೆ ಮಾಡಲಾಯಿತು.ನಂತರ ಪಿಎಸ್‌ಐ ಮಂಜುನಾಥ್ ಮಾಗಣಗೇರಿ ಇವರಿಂದ ನೋಟ ಬುಕ್, ಗೋಲ್ಡ್ ಮೆಡಲ್ ಹಾಗೂ ಪ್ರಶಸ್ತಿ ಪ್ರದಾನ ಮಾಡಲಾಯಿತು.ಎಸ್‌ಡಿಎಂ ಸಿ ಅಧ್ಯಕ್ಷ ಈರಣ್ಣ ಗಾಣಿಗೇರ, ಪಿಕೆಪಿಎಸ್ ಅಧ್ಯಕ್ಷ ಜಗದೀಶ ಪಾಟೀಲ. ಮುಖ್ಯಶಿಕ್ಷಕ ಬಿ.ಬಿ.ಅಗ್ನಿ, ಶಿಕ್ಷಕ ಜಿ.ಪಿ.ಹೊಕ್ಕುಂಡಿ, ಶಿಕ್ಷಕಿ ಹಸೀನಾ, ಸ್ವಾಮಿ ವಿವೇಕಾನಂದ ಟ್ರಸ್ಟ್ ಅಧ್ಯಕ್ಷ ಅಕ್ಷಯ ಗೊಬ್ಬೂರ , ಸಂಸ್ಥಾಪಕ ಅಧ್ಯಕ್ಷ ತಿಪ್ಪಣ್ಣ ಹೆಬ್ಬಾಳ, ಗೌರವಾಧ್ಯಕ್ಷ ಮಹಿಬೂಬ್ ಖಾಜಿ, ಕಾರ್ಯದರ್ಶಿ ಶಿವಾನಂದ ಬಸವಪಟ್ಟಣ , ನಿವೃತ್ತ ಶಿಕ್ಷಕ ಎಂ.ಬಿ. ಹೆರಕಲ್, ಶಿವು ಗೊಬ್ಬೂರ, ಶಿವು ಕೊಳ್ಳಾರಿ, ಕಮಲಸಾಬ್ , ಬಾಳು, ರವಿ, ಸಹಿತ…

Read More

ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಸಹಕಾರ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯಗಳನ್ನು ಇಟ್ಟುಕೊಂಡು ೭೧ ವರ್ಷಗಳಿಂದ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮ ಆಚರಿಸಲಾಗುತ್ತಿದೆ ಎಂದು ಸಮೃದ್ಧಿ ಸಹಕಾರ ಸಂಘದ ಅಧ್ಯಕ್ಷೆ ಸಂಗೀತಾ ನಾಯಿಕ ಹೇಳಿದರು.ಪಟ್ಟಣದ ಸಮೃದ್ಧಿ ಸಹಕಾರ ಸಂಘದ ಆವರಣದಲ್ಲಿ ಶುಕ್ರವಾರ ಸಹಕಾರ ಸಪ್ತಾಹದ ಅಂಗವಾಗಿ ಸಹಕಾರ ಪಿತಾಮಹ ಎಸ್.ಎಸ್.ಪಾಟೀಲ ಹಾಗೂ ಅಂಬೇಡ್ಕರ್ ಅವರ ಭಾವಚಿತ್ರಗಳಿಗೆ ಪೂಜೆ ಸಲ್ಲಿಸಿ ನಂತರ ಸಹಕಾರ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.ನವೆಂಬರ್ ೧೪ರಿಂದ ೨೦ರವರೆಗೆ ೭೨ನೇ ಅಖಿಲ ಭಾರತ ಸಹಕಾರ ಸಪ್ತಾಹ ಜರುಗಲಿದೆ. ಆತ್ಮನಿರ್ಭರ ಭಾರತ ಸಾಧನೆಗೆ ವಾಹಕಗಳಾಗಿ ಸಹಕಾರ ಸಂಸ್ಥೆಗಳು ಎಂಬ ಧ್ಯೇಯದೊಂದಿಗೆ ಈ ಸಪ್ತಾಹ ಆರಂಭಗೊಂಡಿದೆ ಎಲ್ಲ ಸಹಕಾರಿಗಳು ತಪ್ಪದೇ ಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದು ಮಾಹಿತಿ ನೀಡಿದರು.ಸಂಘದ ಮಾರ್ಗದರ್ಶಕ ಆರ್.ಆರ್.ನಾಯಿಕ, ನಿರ್ದೇಶಕರುಗಳಾದ ಬಸವರಾಜ ಬಬಲೇಶ್ವರ, ವೆಂಕಟೇಶ ಕುಲಕರ್ಣಿ, ಮಂಜುನಾಥ ಒಂಟೆತ್ತಿನ, ಸುಭಾಸ ಜಾಧವ, ಎ.ಎಸ್.ಬಿರಾದಾರ(ಹರನಾಳ) ಸಿಬ್ಬಂದಿ ಬಸವರಾಜ ಸಜ್ಜನ, ಲತಾ ತಡಪಟ್ಟಿ, ಅಕ್ಷಯ ರಾಠೋಡ, ಶರಣಯ್ಯ ಹಿರೇಮಠ, ಬಸವರಾಜ ಹಿರೇಮಠ, ವಿರೇಶ ವಡ್ಡೋಡಗಿ ಇದ್ದರು.

Read More

ಉದಯರಶ್ಮಿ ದಿನಪತ್ರಿಕೆ ಇಂಡಿ: ರಾಜ್ಯದಲ್ಲಿ ಹನಿ ಹನಿ ಬಿಸಿ ಬಿಸಿ ಕಹಾನಿ ಹೊರಗಡೆ ಬಂದಿದೆ. ಹೌದು.. ಸದಾ ರಕ್ತಪಾತಕ್ಕೆ ಹೆಸರುವಾಸಿಯಾಗಿರುವ ಭೀಮಾತೀರದಲ್ಲಿ ಇದೀಗ ಹನಿಟ್ರ್ಯಾಪ್‌ಗೆ ಸುದ್ದಿ ಆಗಿದೆ.ವಿಜಯಪುರ ಜಿಲ್ಲೆಯ ಇಂಡಿಪಟ್ಟಣದಲ್ಲಿ ಹನಿಟ್ರ್ಯಾಪ್ ಪ್ರಕರಣವೊಂದು ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಹನಿಟ್ರ್ಯಾಪ್ ಮಾಡಿಸಿ ದೊಡ್ಡ ಮೊತ್ತಕ್ಕೆ ಬೇಡಿಕೆ ಇಟ್ಟಿದ್ದಾರೆ. ಈ ಹಿನ್ನೆಲೆ ವ್ಯಕ್ತಿಯೋರ್ವಪ್ರಕಾಶ ಹರಳಯ್ಯ (ಬ್ಯಾಂಕ್ ಮ್ಯಾನೇಜರ್) ಪ್ರಕಾಶ ಹರಳಯ್ಯ ಪೊಲೀಸ ಠಾಣೆಯ ಮೆಟ್ಟಿಲೇರಿದ್ದಾನೆ.ಈ ಹನಿಟ್ರ್ಯಾಪ್ ನಡೆಸಿದ ತಾಯಿ ಮಗ ಹಾಗೂ ಯುಟ್ಯೂಬರ್ ಸೇರಿ ನಾಲ್ಕು ಜನರ ವಿರುದ್ದ ಪೊಲೀಸ್ ಪ್ರಕರಣ ದಾಖಲಾಗಿದೆ. ಈ ಕುರಿತು ಇಂಡಿ ಶಹರ ಪೊಲೀಸ ಠಾಣೆಯಲ್ಲಿ ಕೇಸ್ ದಾಖಲಾಗಿದೆ.ಇಂಡಿ ಪಟ್ಟಣದ ಡಿ.ವೈ.ಎಸ.ಪಿ ಕಾರ್ಯಾಲಯದ ಪಕ್ಕದಲ್ಲಿರುವ ಪುಟ್‌ಪಾತ್ ರಸ್ತೆಯ ಮೇಲೆ ಎಳೆ ನೀರು ಮಾರುತ್ತಿದ್ದ ಮಹಿಳೆ ಸುವರ್ಣ ಗಂಡ ರಾಹುಲ್ ಹೊನಸೂರೆ, ಮಹಿಳೆಯ ಮಗ ಅಮುಲ್ ರಾಹುಲ್ ಹೊನಸೂರೆ, ಹಂಜಗಿ ಗ್ರಾಮದ ಮಹೇಶ ಬಗಲಿ ಹಾಗೂ ಪತ್ರಕರ್ತ ಎಂದು ಹೇಳಿಕೊಂಡ ವೃತ್ತಿಯಲ್ಲಿ ಹೋಮ್‌ಗಾರ್ಡ ಆಗಿರುವ ತೌಶಿಪ್ ಖರೋಶಿ ಎಂಬುವರು…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗೆ ಹೊಸದಾಗಿ ಮಂಜೂರಾಗಿರುವ ಎರಡು ಮೆಟ್ರಿಕ್ ನಂತರದ ಇಂಜಿನಿಯರಿಂಗ್ ಮತ್ತು ವೈದ್ಯಕೀಯ ಬಾಲಕರ-ಬಾಲಕೀಯರ ೧೦೦ ಸಂಖ್ಯಾಬಲದ ವಸತಿ ನಿಲಯಗಳಿಗೆ ಬಾಡಿಗೆ ಕಟ್ಟಡದ ಅವಶ್ಯಕತೆವಿದ್ದು, ಮಾಲೀಕರಿಂದ ಅರ್ಜಿ ಆಹ್ವಾನಿಸಲಾಗಿದೆ.ವಸತಿ ನಿಲಯಗಳ ಸಂಖ್ಯಾಬಲಕ್ಕೆ ಅನುಗುಣವಾಗಿ ಸಾಕಷ್ಟು ಸ್ಥಳಾವಕಾಶವಿರುವ ಸುಸಜ್ಜಿತ ಮೂಲಭೂತ ಸೌಕರ್ಯವುಳ್ಳ ಹೆಚ್ಚಿನ ಪ್ರಮಾಣದಲ್ಲಿ ಶೌಚಾಲಯ ಹಾಗೂ ಸ್ನಾನದ ಗೃಹಗಳು, ಸೋಲಾರ್ ವಾಟರ್ ಹೀಟರ್, ಸಾಕಷ್ಟು ಪ್ರಮಾಣದಲ್ಲಿ ನೀರು ಹೊಂದಿರುವ ಕಟ್ಟಡಗಳ ಅವಶ್ಯಕತೆ ಇದ್ದು, ಆಸಕ್ತ ಕಟ್ಟಡ ಮಾಲೀಕರು ಬಾಡಿಗೆ ಕಟ್ಟಡ ನೀಡುವವರು ನವೆಂಬರ್ ೨೧ರೊಳಗಾಗಿ ತಾಲೂಕಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಛೇರಿ, ಡಿ ದೇವರಾಜ ಅರಸು ಭವನ, ಜಿಲ್ಲಾ ಪಂಚಾಯತ ಕಛೇರಿ ಹತ್ತಿರ, ಕನಕದಾಸ ಬಡಾವಣೆ, ವಿಜಯಪುರ ಕಚೇರಿ ಅಗತ್ಯ ದಾಖಲಾತಿ ಸಲ್ಲಿಸಬಹುದಾಗಿದೆ.ಈ ಕುರಿತು ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ:೦೮೩೫೨-೨೬೭೯೯೩ ಸಂಪರ್ಕಿಸಬಹುದಾಗಿದೆ ಎಂದು ವಿಜಯಪುರ ತಾಲೂಕಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದಿಂದ ೨೦೨೫-೨೬ನೇ ಸಾಲಿಗೆ ಉದ್ಯೋಗಿನಿ ಯೋಜನೆ, ಚೇತನಾ ಯೋಜನೆ, ಧನಶ್ರೀ ಯೋಜನೆ, ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆ ಹಾಗೂ ಮಾಜಿ ದೇವದಾಸಿ ಮಹಿಳೆಯರ ಪುನರ್ವಸತಿ ಯೋಜನೆಗಳಿಗೆ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಸೇವಾ ಸಿಂಧು ಪೋರ್ಟಲ್‌ನಲ್ಲಿ ಅರ್ಹ ಫಲಾನುಭವಿಗಳು ಹತ್ತಿರದ ಬಾಪೂಜಿ ಸೇವಾ ಕೇಂದ್ರ, ಗಾಮ ಒನ್, ಕರ್ನಾಟಕ ಒನ್ ಕೇಂದ್ರಗಳಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.ಧನಶ್ರೀ ಯೋಜನೆ, ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆಗಳಿಗೆ ಆನ್‌ಲೈನ್ ಅಥವಾ ಆಪ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದ್ದು, ಆಪ್‌ಲೈನ್ ಮೂಲಕ ಅರ್ಜಿ ಸಲ್ಲಿಸುವವರು ನಿಗದಿತ ಅವಧಿಯೊಳಗೆ ಅವಶ್ಯಕ ದಾಖಲಾತಿಗಳೊಂದಿಗೆ ಉನಿರ್ದೇಶಕರ ಕಛೇರಿ,ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಸಲ್ಲಿಸುವುದು. ಅರ್ಜಿ ಸಲ್ಲಿಸಲು ಡಿಸೆಂಬರ್ ೧೫ ಕೊನೆಯ ದಿನವಾಗಿದೆ.ಹೆಚ್ಚಿನ ಮಾಹಿತಿಗಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಕಚೇರಿ ಅಥವಾ ದೂರವಾಣಿ ಸಂಖ್ಯೆ:೦೮೩೫೨-೨೯೫೩೫೩ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮೂಲಕ ಮಕ್ಕಳ ಮತ್ತು ಯುವಜನರ ಕಲಾಪ್ರತಿಭೆಯನ್ನು ಗುರುತಿಸಿ ಅವರಿಗೆ ಉತ್ತೇಜನ ನೀಡುವ ಹಾಗೂ ಕಲಾ ನೈಪುಣ್ಯವನ್ನು ವೃದ್ಧಿಗೊಳಿಸುವತ್ತ ಪ್ರೋತ್ಸಾಹಿಸಲು ಕಲಾ ಪ್ರತಿಭೋತ್ಸವ ಕಾರ್ಯಕ್ರಮಕ್ಕಾಗಿ ಅರ್ಜಿ ಸಲ್ಲಿಸುವ ಅವಧಿಯನ್ನು ನ.೨೦ರವರೆಗೆ ವಿಸ್ತರಿಸಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಪ್ರಕಟಣೆ ತಿಳಿಸಿದೆ.ಕಲಾವಿದರು-ಅಭ್ಯರ್ಥಿಗಳು ತಮ್ಮ ಸ್ವವಿವರಗಳೊಂದಿಗೆ ಅರ್ಜಿಯಲ್ಲಿ ಕಲಾಪ್ರಕಾರದ ವಿವರವನ್ನು ಸ್ಪಷ್ಟವಾಗಿ ನಮೂದಿಸಿ ಅರ್ಜಿ ಹಾಗೂ ಅಗತ್ಯ ದಾಖಲೆಗಳನ್ನು ನಗರದ ಸ್ಟೇಷನ್ ರಸ್ತೆಯಲ್ಲಿರುವ ಸಹಾಯಕ ನಿರ್ದೇಶಕರ ಕಚೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ,ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರ ಇಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರನ್ನು ಸಂಪರ್ಕಿಸಬಹುದಾಗಿ ಎಂದು ಪ್ರಕಟಣೆ ತಿಳಿಸಿದೆ.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ (ಸಿಡಾಕ್) ಮತ್ತು ಜಿಲ್ಲಾ ಕೈಗಾರಿಕಾ ಕೇಂದ್ರ ಇವರ ಸಹಯೋಗದಲ್ಲಿ ಪರಿಶಿಷ್ಟ ಜಾತಿ ನಿರುದ್ಯೋಗಿಗಳಿಗೆ ಬೆಂಗಳೂರಿನ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ ಪ್ರಾಯೋಜಿಸಿದ ಹತ್ತು ದಿನಗಳ ಉದ್ಯಮಶೀಲತಾಭಿವೃದ್ಧಿ ತರಬೇತಿ ಕಾರ್ಯಕ್ರಮ ವನ್ನು ಮುದ್ದೇಬಿಹಾಳದಲ್ಲಿ ಆಯೋಜಿಸಲಾಗಿದೆ.ಸ್ವುದ್ಯೋಗ ಸ್ಥಾಪಿಸಲು ಇರುವ ಅವಕಾಶ, ಕೈಗಾರಿಕಾ ಇಲಾಖೆ ಮತ್ತು ಬ್ಯಾಂಕ್‌ನಿಂದ ಸಿಗುವ ಸಹಾಯ ಸೌಲಭ್ಯ, ಮಾರುಕಟ್ಟೆ ಸಮೀಕ್ಷೆ, ಮಾರುಕಟ್ಟೆ ನಿರ್ವಹಣೆ ಹಾಗೂ ಬ್ಯುಸಿನೆಸ್ ಪ್ಲ್ಯಾನ್ ತಯಾರಿಸುವ ವಿಧಾನವನ್ನು ತರಬೇತಿಯಲ್ಲಿ ನೀಡಲಾಗುವುದು.ಆಸಕ್ತ ೨೦ ರಿಂದ ೪೦ ವರ್ಷ ವಯೋಮಾನದವರು ನವೆಂಬರ್ ೨೦ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ನವೆಂಬರ್ ೨೨ರ ಬೆಳಿಗ್ಗೆ ೧೦ ಗಂಟೆಗೆ ಮುದ್ದೇಬಿಹಾಳ ಪುರಸಭೆ ಹತ್ತಿರದಲ್ಲಿರುವ ಸಾಯಿ ಕಂಪ್ಯೂಟರ್ ಟ್ರೆನಿಂಗ್ ಇನ್ನಸ್ಟಿಟ್ಯುಟ್‌ನಲ್ಲಿ ಆಧಾರ ಕಾರ್ಡ್, ಜಾತಿ ಮತ್ತು ಆದಾಯ ಪ್ರಮಾಣ ಪತ್ರದ ಪ್ರತಿ ಹಾಗೂ ಎರಡು ಪಾಸಪೊರ್ಟ್ ಸೈಜ್ ಫೋಟೋದೊಂದಿಗೆ ಹಾಜರಿರುವಂತೆಯೂ, ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ: ೬೩೬೦೪೫೬೭೨೯ ಹಾಗೂ ೯೪೪೮೬೪೫೮೫೯ಗೆ ಸಂಪರ್ಕಿಸಬಹುದಾಗಿದೆ ಎಂದು ಸಿಡಾಕ್‌ನ ಜಂಟಿ…

Read More

ಡಾ. ಎಂ.ಎಂ.ಕಲಬುರ್ಗಿ ಸಮಗ್ರ ಸಾಹಿತ್ಯ 40 ಸಂಪುಟಗಳ ಲೋಕಾರ್ಪಣೆ ಸಮಾರಂಭದಲ್ಲಿ ಸಚಿವ ಎಂ.ಬಿ.ಪಾಟೀಲ ಹೇಳಿಕೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಬಸವಾದಿ ಶರಣರು ಮತ್ತು ಅವರ ವಚನ ಸಾಹಿತ್ಯವನ್ನು ವಿಶ್ವದ ನಾನಾ ಭಾಷೆಗಳಿಗೆ ಅನುವಾದಿಸಿ ಪ್ರಸಾರ ಮಾಡುವ ಯೋಜನೆ ಪೂರ್ಣಗೊಳಿಸಲು ರೂ. 5 ಕೋ. ಅನುದಾನ ನೀಡುವುದಾಗಿ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ.ಶನಿವಾರ ನಗರದ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯ ಗ್ರಂಥಾಲಯ ಸಭಾಂಗಣದಲ್ಲಿ ವಚನಪಿತಾಮಹ ಡಾ. ಫ. ಗು. ಹಳಕಟ್ಟಿ ಸಂಶೋಧನ ಕೇಂದ್ರ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಡಾ. ಎಂ.ಎಂ.ಕಲಬುರ್ಗಿ ಸಮಗ್ರ ಸಾಹಿತ್ಯ 40 ಸಂಪುಟಗಳ ಲೋಕಾರ್ಪಣೆ ಸಮಾರಂಭದಲ್ಲಿ ಅವರು ಮಾತನಾಡಿದರು.ವಚನಪಿತಾಮಹ ಡಾ. ಫ. ಗು. ಹಳಕಟ್ಟಿ ಅವರು ಬಸವಾದಿ ಶರಣರನ್ನು ಬೆಳಕಿಗೆ ತಂದಿದರೆ, ಕಲಬುರ್ಗಿಯವರು ಹಳಕಟ್ಟಿಯವರ ಸಮಗ್ರ ಸಾಹಿತ್ಯವನ್ನು ಸಂಪಾದಿಸುವ ಮೂಲಕ ಅವರ ಸಂಶೋಧನೆ ಮತ್ತು ಸಾಹಿತ್ಯವನ್ನು ಬೆಳಕಿಗೆ ತಂದಿದ್ದಾರೆ. ಅಲ್ಲದೇ, ಸಂಶೋಧನ ಕೇಂದ್ರದಿಂದ ಆದಿಲ್ ಶಾಹಿ ಅರಸರ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಬಿಎಲ್‌ಡಿಇ ಸಂಸ್ಥೆಯ ಎಸ್.ಬಿ.ಕಲಾ ಮತ್ತು ಕೆ.ಸಿ.ಪಿ ವಿಜ್ಞಾನ ಕಾಲೇಜಿನಿಂದ ಸಾಲುಮರದ ತಿಮ್ಮಕ್ಕ ಅವರಿಗೆ ಹಸಿರು ಗೌರವ ನಮನವಿಜಯಪುರದ ಬಿಎಲ್‌ಡಿಇ ಸಂಸ್ಥೆಯ ಎಸ್.ಬಿ.ಕಲಾ ಮತ್ತು ಕೆ.ಸಿ.ಪಿ ವಿಜ್ಞಾನ ಮಹಾವಿದ್ಯಾಲಯದಲ್ಲಿ ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ನಿಧನದ ಹಿನ್ನೆಲೆ ಮಹಾವಿದ್ಯಾಲಯದ ಆವರಣದಲ್ಲಿ ಸಸಿಗಳನ್ನು ನೆಡುವುದರ ಮೂಲಕ ಸಂತಾಪ ಸೂಚಿಸಲಾಯಿತು.

Read More

ಉದಯರಶ್ಮಿ ದಿನಪತ್ರಿಕೆ ಇಂಡಿ: ತಾಲೂಕಿನ ತಡವಲಗಾ ಗ್ರಾಮದ ಗಣೇಶ ನಗರದ ಶ್ರೀ ಶಾಂತಾಬಾಯಿ ಎಂ ಖೇಡ ಪ್ರೌಢ ಶಾಲೆಯ ವಿದ್ಯಾರ್ಥಿನಿ ರೂಪಾ ದೇವರನಾವದಗಿ ಜಿಲ್ಲಾಮಟ್ಟದಲ್ಲಿ ನಡೆದ ಕ್ರೀಡಾಕೂಟದಲ್ಲಿ ಭಾಗವಹಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.ವಿಜಯಪುರ ನಗರದ ಕ್ರೀಡಾಂಗಣದಲ್ಲಿ ಬಾಲಕ ಮತ್ತು ಬಾಲಕಿಯರ ಮೇಲಾಟ ಸ್ಪರ್ಧೆಗಳಲ್ಲಿ ಭಾಗವಹಿಸಿ, ಅದರಲ್ಲಿ 100 ಮೀ ಮತ್ತು 200 ಮೀ ಓಟದ ಸ್ಪರ್ಧೆಯಲ್ಲಿ ಪ್ರಥಮ ಬರುವ ಮೂಲಕ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾಳೆಂದು ದೈಹಿಕ‌‌ ಶಿಕ್ಷಣ ಶಿಕ್ಷಕರ ಸಂಘದ ತಾಲ್ಲೂಕು ಅಧ್ಯಕ್ಷ ಹಾಗೂ ಖೇಡ ಶಾಲೆಯ ದೈ.ಶಿ ಪ್ರಕಾಶ ಐರೋಡಗಿ ಮಾಹಿತಿ ನೀಡಿದ್ದಾರೆ.ಇನ್ನು ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷ , ಕಾರ್ಯದರ್ಶಿ, ನಿರ್ದೇಶಕರು ಹಾಗೂ ಶಾಲಾ ಶಿಕ್ಷಕ ಹಾಗೂ ಸಿಬ್ಬಂದಿ ವರ್ಗದವರು ವಿಧ್ಯಾರ್ಥಿನಿ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿ ಶ್ಲಾಘಿಸಿದ್ದಾರೆ.

Read More