Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಚಡಚಣದಲ್ಲಿ ಭಾರತೀಯ ಕಿಸಾನ್ ಸಂಘದ ವತಿಯಿಂದ ವಿವಿಧ ಬೇಡಿಕೆ ಆಗ್ರಹಿಸಿ ಚಡಚಣ ತಹಶೀಲದಾರರಿಗೆ ಮನವಿ ಉದಯರಶ್ಮಿ ದಿನಪತ್ರಿಕೆ ಚಡಚಣ: ಪಟ್ಟಣದ ತಹಶೀಲದಾರ ಸಂಜಯ ಇಂಗಳೆ ಅವರಿಗೆ ರೈತರ ವಿವಿಧ ಬೇಡಿಕೆಗಳಾದ ನಿರಾವರಿ ಯೋಜನೆಗಳ ಕಾಮಗಾರಿಗಳನ್ನು ಶೀಘ್ರದಲ್ಲಿ ಪೂರ್ತಿಗೊಳಿಸುವಂತೆ ಹಾಗೂ ಕರ್ನಾಟಕ ಸರಕಾರದ ಗಮನಕ್ಕೆ ತರುವಂತೆ ಭಾರತೀಯ ಕಿಸಾನ್ ಸಂಘದ ಚಡಚಣ ತಾಲೂಕ ಅಧ್ಯಕ್ಷ ಶಾಂತುಗೌಡ ಬಿರಾದಾರ ಅವರು ಗುರುವಾರ ಮನವಿ ಸಲ್ಲಿಸಿದರು.ರೇವಣಸಿದ್ದೇಶ್ವರ ಏತ ನೀರಾವರಿ ಯೋಜನೆ ಫೇಸ್-2 ರಲ್ಲಿ ಬರುವ ಬಬಲೇಶ್ವರ ಮತ್ತು ನಾಗಠಾಣ ಮತಕ್ಷೇತ್ರದ ನೀರಾವರಿ ವಂಚಿತ ಎಲ್ಲ ಹಳ್ಳಿಗಳಿಗೆ ನೀರನ್ನು ಹರಿಸಲು ಶೀಘ್ರ ಕ್ರಮ ಕೈಗೊಳ್ಳಬೇಕು.ಆಲಮಟ್ಟಿ ಆಣೆಕಟ್ಟು 519.6 ಮೀ(1705 ಫೂಟ) ರಿಂದ 524.256 (1719 ಫೂಟ) ಮೀಟರ್ಗೆ ಎತ್ತರಿಸುವಂತೆ ಮತ್ತು ಡೋಣಿ ನದಿ ಹೂಳೆತ್ತಲು ಹಣ ಕಾಯ್ದಿರಿಸುವಂತೆ ಹೇಳಿದ ಅವರು ಜಿಗಜೇವಣಿ ಕೆರೆ ಸಂಪೂರ್ಣವಾಗಿ ಭರ್ತಿ ಆಗಿರುವುದರಿಂದ ಕಾಲುವೆಗಳು ಸಂಪೂರ್ಣವಾಗಿ ಹಾಳಾಗಿದ್ದು ಎರಡು ಕಾಲುವೆಗಳನ್ನು ದುರಸ್ತಿಗೊಳಿಸಿ ಮತ್ತು ಚಡಚಣ ಹಳ್ಳಕ್ಕೆ ನೀರು ಹರಿಸಲು ಕ್ರಮ ತೆಗೆದುಕೊಳ್ಳಬೇಕೆಂದು ಸರಕಾರಕ್ಕೆ…
ಉದಯರಶ್ಮಿ ದಿನಪತ್ರಿಕೆ ಕೆಂಭಾವಿ: ಕನ್ನಡ ಸಾಹಿತ್ಯವನ್ನು ಶ್ರೀಮಂತಗೊಳಿಸಿದ, ಆದ್ಯ ವಚನಕಾರರು, ಸತ್ಯ ಶರಣರು, ದಾಸ ಶ್ರೇಷ್ಠರು, ಸೂಫಿ ಸಂತರು, ತತ್ವಪದಕಾರರು, ದಾರ್ಶನಿಕರು, ಹಾಗೂ ಜನಪದರು ಈ ಮಣ್ಣಿನ ಕಣ ಕಣದಲ್ಲಿಯೂ ಕಂಗೊಳಿಸುತ್ತಿದ್ದಾರೆ ಎಂದು ಹಿರಿಯ ಸಾಹಿತಿ ಹಾಗೂ ನಿವೃತ್ತ ಶಿಕ್ಷಕ, ಪ್ರಹ್ಲಾದಚಾರ್ಯ ಜೋಶಿ ಹೇಳಿದರು.ಪಟ್ಟಣದ ಗಾಯತ್ರಿ ಕಲ್ಯಾಣ ಮಂಟಪದಲ್ಲಿ ರವಿವಾರ ಸಂಜೆ ವಲಯ ಕನ್ನಡ ಸಾಹಿತ್ಯ ಪರಿಷತ್ತು ಹಮ್ಮಿಕೊಂಡಿದ್ದ ‘2024-25 ನೇ ಸಾಲಿನ ವರ್ಷದ ವ್ಯಕ್ತಿ ಪ್ರಶಸ್ತಿ’ ಪ್ರಧಾನ ಸಮಾರಂಭದಲ್ಲಿ ವರ್ಷದ ವ್ಯಕ್ತಿ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಅವರು ಮಾಹಿತಿ ತಂತ್ರಜ್ಞಾನ ಬೆಳೆದಂತೆ ಸಾಹಿತ್ಯ, ಕಲೆ, ಸಂಗೀತ, ನೃತ್ಯ, ನಾಟಕ, ಬಯಲಾಟ, ಡೊಳ್ಳು ಕುಣಿತ ಮತ್ತು ವೀರಗಾಸೆ, ಹಂತಿ ಪದಗಳು, ಜನಪದ ಸಂಸ್ಕೃತಿ ಕಣ್ಮರೆಯಾಗುತ್ತಿರುವುದಕ್ಕೆ ಕಳವಳ ವ್ಯಕ್ತಪಡಿಸಿದ ಅವರು ಯುವಪೀಳಿಗೆ ಹಾಗೂ ಸಾಹಿತ್ಯ ಪರಿಷತ್ತು ಮುಂದಿನ ಜನಾಂಗಕ್ಕೆ ಪರಿಚಯಿಸುವ ಮೂಲಕ ಕವಿ ಕಲಾವಿದರನ್ನು ಗುರುತಿಸಿ ಪ್ರೋತ್ಸಾಹಿಸುವ ಕಾರ್ಯ ಮುಂದುವರಿಸಿಕೊಂಡು ಬರುವಲ್ಲಿ ಪ್ರಮುಖ ಪಾತ್ರ ವಹಿಸಬೇಕೆಂದವರು, ಎಲೆಮರೆಯ ಕಾಯಿಯಂತೆ ಇರುವ ನನ್ನನು ಗುರುತಿಸಿ…
ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ತಾಲೂಕಿನ ಇಂಗಳೇಶ್ವರ ಗ್ರಾಮದ ವಿರಕ್ತಮಠದಲ್ಲಿ ಕನ್ನಡ ಜಾನಪದ ಪರಿಷತ್ ಜಿಲ್ಲಾ ಮತ್ತು ತಾಲೂಕು ಘಟಕ ಹಾಗೂ ಪಡಗಾನೂರಿನ ಮಾತೋಶ್ರೀ ಸುಗಲಾಬಾಯಿಗೌಡತಿ ಪಾಟೀಲ ಜಾನಪದ ಪ್ರತಿಷ್ಠಾನ (ರಿ) ಹಾಗೂ ಪ್ರೇಮದೀಪ ಯುವ ಸಾಹಿತ್ಯ ವೇದಿಕೆ ಸಹಯೋಗದಲ್ಲಿ ವಚನ ಶಿಲಾ ಮಂಟಪದ ನಿರ್ಮಾತೃ ಲಿಂ. ಚನ್ನಬಸವ ಸ್ವಾಮೀಜಿಯವರ ನುಡಿನಮನ ಕಾರ್ಯಕ್ರಮ ಜ.11 ರಂದು ಬೆಳಗ್ಗೆ 10 ಹಮ್ಮಿಕೊಳ್ಳಲಾಗಿದೆ.ಸಾನಿಧ್ಯವನ್ನು ಶ್ರೀಮಠದ ಜಗದ್ಗುರು ಡಾ. ಸಿದ್ದಲಿಂಗ ಸ್ವಾಮೀಜಿ ವಹಿಸುವರು. ಅಧ್ಯಕ್ಷತೆಯನ್ನು ಕನ್ನಡ ಜಾನಪದ ಪರಿಷತ್ತಿನ ಜಿಲ್ಲಾಧ್ಯಕ್ಷ ಬಾಳನಗೌಡ ಪಾಟೀಲ ವಹಿಸುವರು. ಜಾನಪದ ಸಾಹಿತಿ ಶಂಕರ ಬೈಚಬಾಳ ನುಡಿನಮನ ಸಲ್ಲಿಸುವರು. ಕಾರ್ಯಕ್ರಮದಲ್ಲಿ ಭಜನೆ, ರಿವಾಯತ, ಚೌಡಕಿ, ಹಂತಿ ಮತ್ತು ಸಂಪ್ರದಾಯ ಕಲಾವಿದರು ಶ್ರೀಗಳ ಕುರಿತು ಹಾಡು ಹೇಳುವರು. ಕಾರ್ಯಕ್ರಮದಲ್ಲಿ ಸಾಹಿತಿಗಳು, ಶಿಕ್ಷಕರು, ಕಜಾಪ ಪದಾಧಿಕಾರಿಗಳು, ಮಠದ ಭಕ್ತರು ಭಾಗವಹಿಸಲಿದ್ದಾರೆ ಎಂದು ಕನ್ನಡ ಜಾನಪದ ಪರಿಷತ್ತಿನ ತಾಲೂಕಾಧ್ಯಕ್ಷ ದೇವೇಂದ್ರ ಗೋನಾಳ ತಿಳಿಸಿದ್ದಾರೆ.
ಮೋರಟಗಿಯಲ್ಲಿ ರೂ.೧ಕೋಟಿ ವೆಚ್ಚದ ಕೆರೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ ಉದಯರಶ್ಮಿ ದಿನಪತ್ರಿಕೆ ಮೋರಟಗಿ: ನಮ್ಮ ಸರಕಾರ ಅಧಿಕಾರಕ್ಕೆ ಬಂದು ಎರಡು ವರ್ಷ ಕಳೆದಿವೆ, ರಾಜ್ಯದ ಜನತೆಗೆ ಕೊಟ್ಟ ಮಾತಿನಂತೆ ಪಂಚ ಯೋಜನೆಗಳನ್ನು ಅತ್ಯಂತ ಪಾರದರ್ಶಕವಾಗಿ ನೀಡುವುದರ ಜೊತೆಗೆ ಮತ ಕ್ಷೇತ್ರದ ಅಭಿವೃದ್ಧಿಗೆ ಸ್ಪಂದಿಸುತ್ತಿದೆ ಸಾರ್ವಜನಿಕರು ಸರಕಾರದ ಯೋಜನೆಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.೪೭೦೨ ಕೆರೆಗಳ ಆದುನಿಕರಣ ಪ್ರಧಾನ ಕಾಮಗಾರಿಗಳ ಅಡಿಯಲ್ಲಿ ಮಂಜೂರಾದ ಒಂದು ಕೋಟಿ ವೆಚ್ಚದ ಕೆರೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.ಜ್ಯಾತಿ ಮತ ಪಂಥ ಪಕ್ಷ ಪಾತವಿಲ್ಲದೆ ಇಲ್ಲಿಯವರೆಗೆ ನಮ್ಮ ಸರಕಾರ ಪಂಚ ಗ್ಯಾರಂಟಿ ಯೋಜನೆಗಳಿಗೆ ೧ ಲಕ್ಷದ ೮ ಸಾವಿರ ಕೋಟಿ ಕೊಡುವುದರ ಜೊತೆಗೆ ಎಲ್ಲ ಮತಕ್ಷೇತ್ರದ ಕುಡಿಯುವ ನೀರು, ರಸ್ತೆ, ಚರಂಡಿ, ಶಾಲೆ ಕಾಲೇಜು ಮಠ ಮಾನ್ಯಗಳ ಅಭಿವೃದ್ಧಿಗೆ ಅತ್ಯಂತ ಪ್ರಾಮಾಣಿಕವಾಗಿ ಸ್ಪಂದಿಸಿ ಅಭಿವೃದ್ಧಿಯತ್ತ ಸಾಗುತ್ತಿದೆ ಕೆರೆ ಅಭಿವೃದ್ಧಿ ಜೊತೆಗೆ ನೀರಿನ ಬವಣೆ ನೀಗಿಸುವ ನಿಟ್ಟಿನಲ್ಲಿ ಮುಖ್ಯ ಕೇನಾಲ್ ಮುಖಾಂತರ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಪ್ರಸ್ತುತ ಇಂದಿನ ದಿನಗಳಲ್ಲಿ ಮಕ್ಕಳಿಗೆ ಆತ್ಮರಕ್ಷಣೆಯ ಅವಶಕ್ಯತೆಯಿದೆ. ಜೀವನ ಸಂಕೀರ್ಣಮಯವಾಗುತ್ತಿದ್ದು, ಅನೇಕ ಸಂದರ್ಭಗಳಲ್ಲಿ ಮಕ್ಕಳ ಮೇಲೆ ಹಲ್ಲೆ, ದೌರ್ಜನ್ಯ ಮತ್ತು ಮಾನಸಿಕ ಮತ್ತು ದೈಹಿಕ ಹಿಂಸೆಯಂತಹ ದುಷ್ಕೃತ್ಯಗಳು ನಡೆಯುತ್ತಿವೆ. ಆದ್ದರಿಂದ ಮಕ್ಕಳಲ್ಲಿ ಆತ್ಮಸ್ಥೈರ್ಯ, ಆತ್ಮರಕ್ಷಣೆ ಮತ್ತು ಮಾನಸಿಕ ಆತ್ಮಬಲವನ್ನು ಹೆಚ್ಚಿಸುವದರೊಂದಿಗೆ ಸಾಮಾಜಿಕವಾಗಿ ಜಾಗರೂಕರನ್ನಾಗಿ ಮಾಡಲು ಕರಾಟೆ ತರಬೇತಿ ಅತಿ ಅವಶ್ಯಕವಾಗಿದೆ ಎಂದು ಪ್ರೊ. ಎಂ.ಎಸ್.ಖೊದ್ನಾಪೂರ ಅವರು ಅಭಿಪ್ರಾಯಪಟ್ಟರು.ನಗರದ ಅಥಣಿ ರಸ್ತೆಯ ಅಲ್-ಅಮೀನ ಆಸ್ಪತ್ರೆಯ ಎದುರಿಗೆ ಎನ್.ಜಿ,ಓ ಕಾಲನಿಯ ಜೈ ಶ್ರೀ ಆಂಜನೇಯ ದೇವಸ್ಥಾನದ ೬ ನೇಯ ವರ್ಷದ ಜಾತ್ರಾ ಮಹೋತ್ಸವದ ಅಂಗವಾಗಿ ಹಮ್ಮಿಕೊಂಡ ಮಕ್ಕಳಿಗಾಗಿ ಕರಾಟೆ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.ಇಂದಿನ ಶಿಕ್ಷಣ ವ್ಯವಸ್ಥೆಯಲ್ಲಿ ಮಕ್ಕಳು ಶಾಲೆ, ಪಾಠ-ಪ್ರವಚನ, ಹೋಮ್ ವರ್ಕ, ಟ್ಯೂಷನ್ ಹೀಗೆ ಶಿಕ್ಷಣ ಕೇವಲ ಜ್ಞಾನಾರ್ಜನೆಗಾಗಿ ಎನ್ನುವಂತಾಗಿದೆ. ಮಕ್ಕಳು ಬೌದ್ಧಿಕ, ಮಾನಸಿಕ ಮತ್ತು ದೈಹಿಕ ಚಟುವಟಿಕೆಗಳಲ್ಲಿ ಸಕ್ರೀಯವಾಗಿ ಪಾಲ್ಗೊಂಡಾಗ ಮಾತ್ರ ಸರ್ವಾಂಗೀಣ ಪ್ರಗತಿ ಹೊಂದುವರು. ಆದ್ದರಿಂದ ತರಬೇತಿ ಮಕ್ಕಳ ದೈಹಿಕ ಮತ್ತು ಮಾನಸಿಕ…
ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ಪಟ್ಟಣದಲ್ಲಿ ಓಡಾಡುವ ಎಲ್ಲ ಅಟೋ ಚಾಲಕರು ಅಟೋ ಲೈಸನ್ಸ್, ಚಾಲಕರ ಲೈಸನ್ಸ್, ವಿಮೆ ಹೊಂದುವ ಮೂಲಕ ಕಡ್ಡಾಯವಾಗಿ ರಸ್ತೆ ಸುರಕ್ಷತಾ ನಿಯಮಗಳನ್ನು ಅನುಸರಿಸಬೇಕು. ರಸ್ತೆ ಸುರಕ್ಷತಾ ನಿಯಮಗಳು ನಿಮಗಾಗಿಯೇ ಇವೆ.ಅವುಗಳನ್ನು ಪಾಲಿಸದರೇ ನಿಮಗೆ ಯಾವುದೇ ರೀತಿಯ ತೊಂದರೆಯಾಗುವದಿಲ್ಲ ಎಂದು ಡಿವೈಎಸ್ಪಿ ಬಲ್ಲಪ್ಪ ನಂದಗಾಂವಿ ಹೇಳಿದರು.ಪಟ್ಟಣದ ಪೊಲೀಸ್ ಠಾಣಾ ಆವರಣದಲ್ಲಿ ಪೊಲೀಸ್ ಇಲಾಖೆಯು ಶನಿವಾರ ಹಮ್ಮಿಕೊಂಡಿದ್ದ ರಸ್ತೆ ಸುರಕ್ಷತಾ ಜಾಗೃತಿ ಸಪ್ತಾಹ-2026 ಅಭಿಯಾನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಎಲ್ಲ ಚಾಲಕರು ರಸ್ತೆ ಸುರಕ್ಷತಾ ನಿಯಮಗಳನ್ನು ಪಾಲಿಸಬೇಕು. ರಸ್ತೆಯಲ್ಲಿ ಅಡ್ಡಾತಿಡ್ಡಿಯಾಗಿ ತಮ್ಮ ಅಟೋಗಳನ್ನು ನಿಲ್ಲಿಸುವಂತಾಗಬಾರದು. ನಿಗದಿ ಸ್ಥಳದಲ್ಲಿ ತಮ್ಮ ಅಟೋಗಳನ್ನು ನಿಲ್ಲಿಸಬೇಕು. ಅಪ್ರಾಪ್ತ ವಯಸ್ಕರಿಗೆ ಯಾವುದೇ ಕಾರಣಕ್ಕೂ ಮ್ಮ ಅಟೋಗಳನ್ನು ಕೊಡಬಾರದು. ಒಂದು ವೇಳೆ ಇಂತಹವರು ಚಾಲನೆ ಮಾಡುವದು ಕಂಡುಬಂದರೆ ನಾವು ಕಾನೂನು ಕ್ರಮ ತೆಗೆದುಕೊಳ್ಳಬೇಕಾಗುತ್ತದೆ. ತಮ್ಮ ಅಟೋಗಳಲ್ಲಿ ಯಾವುದೇ ಕಾರಣಕ್ಕೂ ಅಶ್ಲೀಲವಾದ ಹಾಡುಗಳನ್ನು ಹಚ್ಚಬಾರದು. ಇದು ಬಸವನಾಡು ಇರುವದರಿಂದ ತಮ್ಮ ಅಟೋಗಳಲ್ಲಿ ವಚನಗಳನ್ನು ಹಾಕುವ ಮೂಲಕ ಇತರರಿಗೆ ಮಾದರಿಯಾಗಬೇಕಿದೆ.…
ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ ಕುರಿತು ಚರ್ಚಿಸಲು ವಿಶೇಷ ಅಧಿವೇಶನ | ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಘೋಷಣೆ ಮಂಗಳೂರು: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ(MGNREGA)ಗೆ ಸಂಬಂಧಿಸಿದ ವಿಷಯಗಳನ್ನು ಚರ್ಚಿಸಲು ರಾಜ್ಯ ಸರ್ಕಾರ ವಿಧಾನಸಭೆಯ ವಿಶೇಷ ಅಧಿವೇಶನ ನಡೆಸಲಿದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಶನಿವಾರ ಘೋಷಿಸಿದ್ದಾರೆ.ಮಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಡಿಕೆ ಶಿವಕುಮಾರ್, ಗ್ರಾಮೀಣ ಉದ್ಯೋಗ ಯೋಜನೆಯನ್ನು ರಕ್ಷಿಸಲು ಸರ್ಕಾರ ಜನವರಿ 26 ರಿಂದ ಫೆಬ್ರವರಿ 2 ರವರೆಗೆ ರಾಜ್ಯಾದ್ಯಂತ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ಪಾದಯಾತ್ರೆ ನಡೆಸಲಿದೆ ಎಂದರು.”MGNREGA ಉಳಿಸಲು, AICC ಒಂದು ಕಾರ್ಯಕ್ರಮವನ್ನು ಯೋಜಿಸಿದೆ. ಆದಾಗ್ಯೂ, ಕರ್ನಾಟಕಕ್ಕೆ ಸಂಬಂಧಿಸಿದಂತೆ, ನಾವು ವಿಭಿನ್ನ ಕಾರ್ಯಕ್ರಮವನ್ನು ಯೋಜಿಸಿದ್ದೇವೆ. MGNREGA ಕುರಿತು ನಾವು ವಿಧಾನಸಭೆಯ ವಿಶೇಷ ಅಧಿವೇಶನವನ್ನು ಕರೆಯುತ್ತಿದ್ದೇವೆ. ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ MGNREGA ಉಳಿಸಿ ಪಾದಯಾತ್ರೆ ಆಯೋಜಿಸುತ್ತಿದ್ದೇವೆ” ಎಂದು ಡಿಸಿಎಂ ತಿಳಿಸಿದರು.ಈ ಪಾದಯಾತ್ರೆಯ ಮೂಲಕ, MGNREGA ಯೋಜನೆ ಬದಲಿಗೆ ವಿಕಸಿತ್ ಭಾರತ್ – ರೋಜ್ಗಾರ್…
ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಪಕ್ಷದ ಸಂಘಟನೆಗೆ ಸಹಕಾರಿಯಾಗುವಂತೆ ಹೂವಿನಹಿಪ್ಪರಗಿ ಬಿಜೆಪಿ ಮಂಡಲ ರಚನೆ ಮಾಡಲು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರಗೆ ಮನವಿ ಸಲ್ಲಿಸಲಾಯಿತು.ಬೆಂಗಳೂರು ಬಿಜೆಪಿ ಕಾರ್ಯಾಲಯದಲ್ಲಿ ಗುರುವಾರ ಬಿಜೆಪಿ ರಾಜ್ಯಾಧ್ಯಕ್ಷರನ್ನು ಭೇಟಿ ಮಾಡಿದ ದೇವರಹಿಪ್ಪರಗಿ ಹಾಗೂ ಸಿಂದಗಿ ಮತಕ್ಷೇತ್ರದ ಬಿಜೆಪಿ ಧುರೀಣರು ಹಾಗೂ ಪದಾಧಿಕಾರಿಗಳು ಮಂಡಲ ರಚನೆಯ ಕುರಿತು ಗಮನ ಸೆಳೆದರು.ಈ ಸಂದರ್ಭದಲ್ಲಿ ಮಾಜಿಶಾಸಕ ಸೋಮನಗೌಡ ಪಾಟೀಲ(ಸಾಸನೂರ) ಮಾತನಾಡಿ, ದೇವರಹಿಪ್ಪರಗಿ ವಿಧಾನಸಭಾ ಕ್ಷೇತ್ರ ಸುಮಾರು ೧೩೫ ಕಿ.ಮೀ ವಿಸ್ತಾರವಾಗಿದ್ದು ಮುಂಬರುವ ಜಿಲ್ಲಾ, ತಾಲ್ಲೂಕು, ವಿಧಾನಸಭಾ ಹಾಗೂ ಲೋಕಸಭಾ ಚುನಾವಣೆಗಳ ಕಾರಣದಿಂದ ಮತ್ತು ಮುಖ್ಯವಾಗಿ ಪಕ್ಷದ ಸಂಘಟನಾತ್ಮಕ ದೃಷ್ಟಿಯಿಂದ ಅನುಕೂಲವಾಗುವಂತೆ ೪ ಜಿಲ್ಲಾ ಪಂಚಾಯಿತಿಗಳನ್ನೊಳಗೊAಡ ಹೂವಿನಹಿಪ್ಪರಗಿ ಮಂಡಲ ರಚನೆ ಮಾಡುವುದು ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ರಾಜ್ಯಾಧ್ಯಕ್ಷರು ಅಗತ್ಯಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಮನವಿ ಸಲ್ಲಿಸಿದರು.ಮನವಿಗೆ ಸ್ಪಂದಿಸಿದ ರಾಜ್ಯಾಧ್ಯಕ್ಷ ಹಾಗೂ ರಾಜ್ಯ ಪ್ರಧಾನಕಾರ್ಯದರ್ಶಿಗಳಾದ ಪಿ.ರಾಜೀವ ಮತ್ತು ಪ್ರೀತಮ್ಗೌಡ ನೂತನ ಮಂಡಲ ರಚನೆಯ ಭರವಸೆ ನೀಡಿದರು.ಸಿಂದಗಿ ಮತಕ್ಷೇತ್ರದ ಮಾಜಿ ಶಾಸಕ ರಮೇಶ ಭೂಸನೂರ, ದೇವರಹಿಪ್ಪರಗಿ ಮಂಡಲ ಅಧ್ಯಕ್ಷ…
ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ತಾಲ್ಲೂಕಿನ ಮುಳಸಾವಳಗಿ ಗ್ರಾಮದ ರಾಜಶೇಖರ ಬಿರಾದಾರ ಕುಟುಂಬಕ್ಕೆ ಸೇರಿದ ಕಬ್ಬು ವಿದ್ಯುತ್ ಅವಘಡದಿಂದ ಬೆಂಕಿಗೆ ಆಹುತಿಯಾಗಿದ್ದು ಸುಮಾರು ೯ ಎಕರೆ ಬೆಳೆ ಸುಟ್ಟು ಭಸ್ಮವಾದ ಘಟನೆ ಶುಕ್ರವಾರ ಜರುಗಿದೆ.ಗ್ರಾಮದ ಸರ್ವೇ ನಂ.೩೨೨/೨ ಹಾಗೂ ೩೨೩ರಲ್ಲಿ ಬೆಳೆಯಲಾಗಿದ್ದ ಕಬ್ಬು ಬೆಳೆ ವಿದ್ಯುತ್ ಅವಘಡದಿಂದ ಬೆಂಕಿ ತಗುಲಿ ಹಾನಿಗೀಡಾಗಿದೆ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಸಿಬ್ಬಂದಿ ಸುಮಾರು ಗಂಟೆಗಳ ಕಾಲ ಹರಸಾಹಸ ಪಟ್ಟರು, ಪ್ರಯತ್ನ ಫಲಿಸಲಿಲ್ಲ. ಬೆಂಕಿ ನಂದಿಸುವುದರಲ್ಲಿ ಬಹುತೇಕ ಸುಟ್ಟು ಕರಕಲಾಗಿತ್ತು. ಕಬ್ಬು ಕಟಾವಿಗೆ ಬಂದು ಕಾರ್ಖಾನೆಗೆ ಸಾಗಿಸಬೇಕು ಎನ್ನುವಷ್ಟರಲ್ಲಿ ಈ ಘಟನೆ ಸಂಭವಿಸಿದೆ. ಘಟನೆಯಲ್ಲಿ ೮೦ ಸ್ಪಿಂಕರ್ ಪೈಪ್ಗಳು, ೪೦ ಪಿವಿಸಿ ಪೈಪ್ಗಳು, ೪೦೦ ಅಡಿ ಕೇಬಲ್ ವೈರ್ ಸೇರಿದಂತೆ ಒಟ್ಟು ೧೫.೯೫ ಲಕ್ಷ ರೂ.ಗಳ ಹಾನಿಯಾಗಿದೆ. ಘಟನಾ ಸ್ಥಳಕ್ಕೆ ಕಂದಾಯ, ಕೃಷಿ, ಹೆಸ್ಕಾಂ ಅಧಿಕಾರಿಗಳು ಭೇಟಿ ನೀಡಿದ್ದು, ದೇವರಹಿಪ್ಪರಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಹಲವಾರು ತಿಂಗಳಿನಿಂದ ವಿದ್ಯುತ್ ಅವಘಡದಿಂದ ಕಬ್ಬು ಬೆಳೆ…
ದೇವರಹಿಪ್ಪರಗಿಯಲ್ಲಿ ಉತ್ತಮ ಶಿಕ್ಷಕ ಮತ್ತು ಅಂಗನವಾಡಿ ಕಾರ್ಯಕರ್ತೆ ಪ್ರಶಸ್ತಿ ವಿತರಣೆ ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಶಾಲೆ ಮತ್ತು ಅಂಗನವಾಡಿಗಳು ಮಕ್ಕಳಿಗೆ ಸಂಸ್ಕಾರಯುತ ಶಿಕ್ಷಣದ ಮೂಲಕೇಂದ್ರಗಳಾಗಿವೆ. ಎಂದು ತಹಶೀಲ್ದಾರ ನಿಂಗಣ್ಣ ಬಿರಾದಾರ ಹೇಳಿದರು.ಪಟ್ಟಣದ ಶಾಸಕರ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಸ್ನೇಹಸಂಸ್ಥೆ, ಐಎಲ್ಪಿ-ಕಲಿಕಾ ಚೇತನ ಯೋಜನೆಯಡಿ ಜರುಗಿದ ಉತ್ತಮ ಶಿಕ್ಷಕ ಮತ್ತು ಅಂಗನವಾಡಿ ಕಾರ್ಯಕರ್ತೆ ಪ್ರಶಸ್ತಿ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.ಇಂದು ಸ್ಥಳೀಯ ಮಟ್ಟದಲ್ಲಿ ಇಂತವರನ್ನು ಗುರುತಿಸಿ ಪ್ರಶಸ್ತಿ ನೀಡಿರುವುದು ತುಂಬಾ ಒಳ್ಳೆಯ ಕಾರ್ಯ. ನಾವು ಪಡೆದುಕೊಂಡ ಪ್ರಶಸ್ತಿಗಳು ನಮ್ಮ ಕರ್ತವ್ಯ ಮತ್ತು ಜವಾಬ್ದಾರಿಯನ್ನು ಹೆಚ್ಚಿಸುತ್ತವೆ ಎಂದರು.ಪಟ್ಟಣ ಪಂಚಾಯಿತಿ ಉಪಾಧ್ಯಕ್ಷ ರಮೇಶ ಮಸಬಿನಾಳ ಮಾತನಾಡಿ, ಸದೃಢ ಮತ್ತು ಸಮರ್ಥ ಸಮಾಜದ ನಿರ್ಮಾಣಕ್ಕೆ ಶಿಕ್ಷಣವೇ ಭದ್ರಬುನಾದಿ. ಶಿಕ್ಷಣ ಗುಣಮಟ್ಟದಿಂದ ಕೂಡಿರಬೇಕೆಂದರೆ ಶಿಕ್ಷಕ,ಪಾಲಕ, ಬಾಲಕ ಈ ಮೂವರು ಕೊಂಡಿಯಾಗಿ ಇರಬೇಕು ಎಂದು ಹೇಳುತ್ತಾ, ಶಿಕ್ಷಕರ, ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರ ಕಾರ್ಯ ಶ್ಲಾಘಿಸಿದರು.ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಎ.ಎಚ್ ವಾಲೀಕಾರ ಮಾತನಾಡಿ, ದೇಶದ ಭವಿಷ್ಯ ಅಡಗಿರುವುದು…
