Author: editor.udayarashmi@gmail.com

ಬ್ರಹ್ಮದೇವನಮಡು: ಸುಡು ಬಿಸಿಲು ಲೆಕ್ಕಸದೆಯೇ ಸಿಂದಗಿ ತಾಲೂಕಿನ ಬ್ರಹ್ಮದೇವನಮಡು-ಹೊನ್ನಳ್ಳಿಯಲ್ಲಿ ಮಂಗಳವಾರ ಬೆಳಗ್ಗೆಯಿಂದಲೇ ಹಿರಿಯರು, ಯುವಕರು, ಚಿಣ್ಣರು, ವಿವಿಧ ವಣ೯ದ ಬಣ್ಣಗಳನ್ನು ಕೈಯಲ್ಲಿಡಿದು ಬೀದಿಗಿಳಿದು ಬಣ್ಣದಾಟವಾಡಿ ಮಧ್ಶಾಹ್ನ ೧ರವರೆಗೆ ಸಂಭ್ರಮಿಸಿದರು.ಸೋಮವಾರ ರಾತ್ರಿವರೆಗೆ ಕಾಮದಹನ ಮಾಡಿದ್ದ ಯುವಕರು ಮಂಗಳವಾರ ಬೆಳಗ್ಗೆಯಿಂದಲೇ ಬಣ್ಣದಾಟದಲ್ಲಿ ತೊಡಗಿದ್ದರು. ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಂಚರಿಸುತ್ತಿದ್ದವರ ಮೇಲೆ ಸ್ನೇಹಿತರಿಗೆ ಪರಸ್ಪರ ಬಣ್ಣ ಹಚ್ಚಿ ಬೊಬ್ಬೆ ಹಾಕುತ್ತ ಕುಣಿದು ಕುಪ್ಪಳಿಸಿದರು.ಈ ವೇಳೆ ಬಣ್ಣದಾಟದಲ್ಲಿ ಗ್ರಾಮದ ಹಿರಿಯರಾದ ರುದ್ರಣ್ಣಸಾಹು ಮಾನಶೇಟ್ಟಿ, ಸಿದ್ದಯ್ಶ ಮಠ, ದೇವಿಂದ್ರ ತೊನಶ್ಶಾಳ, ಗುರಸಿದ್ದಪ್ಪ ಮನಗೂಳಿ, ನಿಂಗಣ್ಣ ಕೋರವಾರ, ನಡಗೇರಪ್ಪ ತಳವಾರ, ಮಲ್ಲಿಕಾಜು೯ನ ಯಲಗೋಡ, ಗೋಲ್ಲಾಳಪ್ಪ ಕರಿಕಲ್ಲ್, ಭೀಮು ಕೆಂಭಾವಿ, ಮಲ್ಲು ಅಲ್ಲಾಪೂರ, ಶ್ರವಣಕುಮಾರ ಕೆಂಭಾವಿ, ಶರಣು ಮನಗೂಳಿ, ಅಂಬ್ರುತ್ ದೊಡ್ಡಮನಿ, ಶರಣು ಹರಿಜನ, ಚನ್ನಪ್ಪ ಕೆಂಭಾವಿ, ಮುತ್ತು ಕರಿಕಲ್ಲ್ ಬಣ್ಣದಾಟದಲ್ಲಿ ಪಾಲ್ಗೊಂಡಿದ್ದರು.

Read More

ಇಂಡಿ, ಚಡಚಣ, ಅಪಜಲ್‌ಪುರ ತಾಲೂಕಿನ ಗ್ರಾಮಗಳಿಗೆ ನೀರು ಹರಿಸಲು ಡಿಸಿಎಂ ಡಿ.ಕೆ.ಶಿವಕುಮಾರ ಗೆ ಮನವಿ ಇಂಡಿ: ಪಟ್ಟಣ, ಚಡಚಣ ಮತ್ತು ಅಪಜಲ್‌ಪುರ ತಾಲೂಕಿನಲ್ಲಿ ಹರಿಯುವ ಭೀಮಾ ನದಿ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳಿಗೆ ಕುಡಿಯುವ ನೀರಿನ ಸಲುವಾಗಿ ಇಂಡಿ ಶಾಖಾ ಕಾಲುವೆಯಿಂದ ಒಂದು ಟಿ.ಎಂ.ಸಿ ನೀರು ಬಿಡಬೇಕೆಂದು ಆಗ್ರಹಿಸಿ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲರು ಮತ್ತು ಅಪಜಲಪುರ ಶಾಸಕ ಎಂ.ವೈ. ಪಾಟೀಲರು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಇವರಿಗೆ ಮನವಿ ಮಾಡಿದ್ದಾರೆ.ಪ್ರಸಕ್ತ ವರ್ಷ ಭೀಕರ ಬರಗಾಲ ಇರುವದರಿಂದ ನದಿ, ಕೆರೆ ಹಳ್ಳ ಕೊಳ್ಳಗಳು ಜಲಮೂಲಗಳು ಬತ್ತಿಹೋಗಿವೆ. ಜನ ಜಾನುವಾರುಗಳಿಗೆ ಕುಡಿಯುವ ನೀರಿನ ಅತೀವ ತೊಂದರೆ ಯಾಗುತ್ತಿವೆ. ಹೀಗಾಗಿ ಐ.ಬಿ.ಸಿ ಮುಖಾಂತರ ಎಸ್ಕೇಪ್ ಕಿಮಿ ೯೩, ೧೧೮, ೧೩೩, ೧೪೩,೧೬೦, ೧೬೭ ಮುಖಾಂತರ ಸುಮಾರು ಪ್ರತಿದಿನ ೧೫೦ ಕ್ಯೂಸೆಕ್ಸ ಭೀಮಾ ನದಿಗೆ ನೀರು ಹರಿಸಲು ಆಗ್ರಹಿಸಿದ್ದಾರೆ.ಮಹಾರಾಷ್ಟ್ರ ಸರಕಾರ ಪ್ರತಿ ವರ್ಷ ಬೇಸಿಗೆಯಲ್ಲಿ ಉಜನಿ ಆಣೆಕಟ್ಟಿನಿಂದ ಎರಡು ಟಿ.ಎಂ.ಸಿ ನೀರು ಬಿಡುತ್ತಿದ್ದರು. ಈ ಬಾರಿ ಬಿಟ್ಟಿಲ್ಲ. ಹೀಗಾಗಿ…

Read More

ಸಿಂದಗಿ: ನಗರದಲ್ಲಿ ಪ್ರತಿ ವರ್ಷದಂತೆ ಜನನಿಬಿಡ ಸ್ಥಳಗಳಲ್ಲಿ ಅಖಿಲ ಭಾರತ ಮಾನವೀಯತೆ ಸಂದೇಶ ವೇದಿಕೆ ಸಿಂದಗಿ ಘಟಕದ ವತಿಯಿಂದ ನೀರಿನ ಅರವಟಿಗೆಗಳನ್ನು ಅಳವಡಿಸಲಾಯಿತು.ಈ ವೇಳೆ ವೇದಿಕೆಯ ಸಂಚಾಲಕ ಮೌಲಾನಾ ದಾವುದ ನದ್ವಿ ಅವರು ಮಾತನಾಡಿ, ನೀರು ನೀಡುವುದು ಒಂದು ದೊಡ್ಡ ಪ್ರತಿಫಲದ ಸೇವೆ ಹಾಗೂ ಮಹಾ ಕಾರ್ಯಯಾಗಿದೆ. ಬೇಸಿಗೆಯ ಸಮಯದಲ್ಲಿ ಎಲ್ಲರಿಗೂ ಸಾಧ್ಯವಾದಷ್ಟು ಸಹಾಯ ಮಾಡುವುದು ನಮ್ಮ ನೈತಿಕ ಜವಾಬ್ದಾರಿಯಾಗಿದೆ. ಅಖಿಲ ಭಾರತ ಮಾನವೀಯತೆ ಸಂದೇಶ ವೇದಿಕೆಯು ಹತ್ತು ವರ್ಷಗಳಿಂದ ಸಿಂದಗಿ ನಗರದಲ್ಲಿ ಹಲವಾರು ಸೇವಾ ಚಟುವಟಿಕೆಗಳನ್ನು ನಡೆಸುತ್ತಿದೆ. ಪರಸ್ಪರ ಸಹಕಾರ ಮತ್ತು ಪ್ರೀತಿಯ ಮನೋಭಾವವನ್ನು ಬೆಳೆಸುವುದು ಈ ವೇದಿಕೆಯ ಉದ್ದೇಶವಾಗಿದೆ. ಮನುಷ್ಯರಲ್ಲಿ ಸಹೋದರತೆ, ಪ್ರೀತಿ ಮತ್ತು ಸಹಾನುಭೂತಿಯ ಗುಣವನ್ನು ಪ್ರಚುರಪಡಿಸುವ ಸಂದೇಶವಾಗಿದೆ. ಹಸಿವು, ಬಾಯಾರಿಕೆ ಮತ್ತು ಗಾಳಿಯು ಮಾನವ ಜೀವನದ ಮೂಲಭೂತ ಅವಶ್ಯಕತೆಗಳು. ಇವುಗಳಿಲ್ಲದ ಜೀವನವನ್ನು ಕಲ್ಪಿಸಿಕೊಳ್ಳುವುದು ಅಸಾಧ್ಯ. ಆದ್ದರಿಂದ ಈ ಮೂಲಭೂತ ವಸ್ತುಗಳನ್ನು ನಿರ್ಗತಿಕರಿಗೆ ತಲುಪಿಸುವುದು ಅವರಿಗಾಗಿ, ಅನುಕೂಲತೆಯನ್ನು ಸೃಷ್ಟಿಸುವುದು ನಮ್ಮ ಜವಾಬ್ದಾರಿ ಎಂದರು.ಮೌಲಾನಾ ಕಲೀಮುಲ್ಲಾ ಮೌಲಾನಾ ಮಕತೂಮ…

Read More

ವಿಜಯಪುರ: ಮಾ.೨೮ ರಿಂದ ೩೦ ರವರೆಗೆ ದಾವಣಗೆರೆಯ ದೃಶ್ಯಕಲಾ ಮಹಾವಿದ್ಯಾಲಯದ ದೃಶ್ಯವಿಶ್ವ ಕಲಾ ಗ್ಯಾಲರಿಯಲ್ಲಿ ನಗರದ ಕಲಾವಿದ ರಮೇಶ ಚವ್ಹಾಣ ಮತ್ತು ಛಾಯಾಗ್ರಾಹಕ ಸತೀಶ ಕಲಾಲ ಅವರ ಚಿತ್ರಕಲೆ ಮತ್ತು ಛಾಯಾಚಿತ್ರಗಳ ಪ್ರದರ್ಶನವನ್ನು ದೃಶ್ಯಕಲಾ ಮಹಾವಿದ್ಯಾಲಯ, ದಾವಣಗೆರೆ ಇದರ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದೆ.ಅಂದು ಬೆಳಿಗ್ಗೆ ೧೧.೩೦ ಗಂಟೆಗೆ ಈ ಪ್ರದರ್ಶನದ ಉದ್ಘಾಟನಾ ಕಾರ್ಯಕ್ರಮಕ್ಕೆ ದಾವಣಗೆರೆಯ ದೃಶ್ಯಕಲಾ ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ. ಜೈರಾಜ ಎಂ ಚಿಕ್ಕಪಾಟೀಲ ಇವರು ಅಧ್ಯಕ್ಷರಾಗಿಯೂ, ನಗರದ ಹಿರಿಯ ಪತ್ರಕರ್ತರು ಹಾಗೂ ಸಾಹಿತಿಗಳಾದ ಬಿ.ಎನ್.ಮಲ್ಲೇಶ್ರವರು ಉದ್ಘಾಟಕರಾಗಿಯೂ, ಬಾಲಾಜಿ ಪ್ರೇಮಿಂಗ್ ಬೆಂಗಳೂರು ಇದರ ಮುಖ್ಯಸ್ಥರಾದ ಡಾ. ಪ್ರಶಾಂತ ಹೆಗಡೆಯವರು ಮುಖ್ಯ ಅತಿಥಿಯಾಗಿಯೂ ಪಾಲ್ಗೊಳ್ಳಲಿದ್ದು, ಕಲಾ ವಿಮರ್ಶಕ ದತ್ತಾತ್ರೇಯ ಎನ್ ಭಟ್ ಇವರು ಕಲಾ ಪ್ರದರ್ಶನ ಕುರಿತು ಆಶಯ ನುಡಿಗಳನ್ನಾಡಲಿದ್ದಾರೆ. ದಾವಣಗೆರೆಯ ದೃಶ್ಯಕಲಾ ಮಹಾವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಡಾ. ಸತೀಶಕುಮಾರ್ ಪಿ ವಲ್ಲೇಪುರೆಯವರು ಗೌರವ ಉಪಸ್ಥಿತರಿರುವರು. ಈ ಕಲಾ ಪ್ರದರ್ಶನದಲ್ಲಿ ಚಿತ್ರಕಲಾಕೃತಿಗಳು ಹಾಗೂ ಛಾಯಾಚಿತ್ರಗಳು ಸೇರಿ ಒಟ್ಟು ಸುಮಾರು ೫೦ ಕಲಾಕೃತಿಗಳು ಪ್ರದರ್ಶನಗೊಳ್ಳಲಿವೆ.ಕ್ಯಾನವಾಸಿನ ಮೇಲೆ…

Read More

ಢವಳಗಿ: ಸಮೀಪದ ರೂಡಗಿ ಗ್ರಾಮದ ಶ್ರೀ ಯಲ್ಲಾಲಿಂಗ ಮಹಾರಾಜರ ಜಾತ್ರಾ ಮಹೋತ್ಸವ ಮಾಚ್೯ 29 ರಿಂದ ಎಪ್ರಿಲ್‌ 3ರ ವರೆಗೆ ಜರುಗಲಿದೆ. ಮಾರ್ಚ್ 29 ಮುಂಜಾನೆ 11ಗಂಟೆಗೆ ದೇವಸ್ಥಾನದ ಆವರಣದಲ್ಲಿದ್ದ ದೇವಿಗೆ ಉಡಿ ತುಂಬುವುದು. ಅಂದೆ ಸಂಜೆ 7 ಗಂಟೆಯಿಂದ ಎಪ್ರಿಲ್ 2ರ ವರೆಗೆ ಪ್ರತಿದಿನ ವೇದ ಮೂರ್ತಿ ಚೆನ್ನಮಲ್ಲಯ್ಯ ಹೀರೆಮಠ ಇವರಿಂದ ಮಹಾಪುರಾಣ ಜರುಗುವುದು. ಮಾರ್ಚ್ 2ರಂದು ಸಾಯಂಕಾಲ 4ಗಂಟೆಗೆ ಬ್ಯಾಕೋಡ ಗ್ರಾಮದ ಬಸನಗೌಡ ನರಸಲಗಿ ಮತ್ತು ಗ್ರಾಮಸ್ಥರಿಂದ ಅಗ್ನಿಪೂಜೆ ಕಾರ್ಯಕ್ರಮ ಜರುಗುವುದು. ಅಂದೆ ಸಂಜೆ 8 ಗಂಟೆಗೆ ಪುರಾಣ ಮಂಗಲೋತ್ಸವ ಮಾಡುವುದು. ನಂತರ ಕೊಡೆಕಲ್ ಬಸವೇಶ್ವರ ಪಲ್ಲಕ್ಕಿ, ಲಕ್ಕಮ್ಮ ದೇವಿ ಪಲ್ಲಕ್ಕಿ, ಕೆಂಚರಾಯ ಪಲ್ಲಕ್ಕಿ, ಲಗಮವ್ವದೇವಿ ಪಲ್ಲಕ್ಕಿ,ಹಾಗೂ ಯಲ್ಲಾಲಿಂಗೇಶ್ವರರ ಪಲ್ಲಕ್ಕಿಯು ಸೇರಿ ಗಂಗಾಸ್ಥಳ ಮಾಡಿಕೊಂಡು ಮರಳಿ ಮಠಕ್ಕೆ ಸಕಲ ವಾದ್ಯ ವೈಭವದೊಂದೆಗೆ ಬರಮಾಡಿಕೊಳ್ಳುವುದು. ಅಂದೇ ರಾತ್ರಿ 10 ಗಂಟೆಗೆ ಡೊಳ್ಳಿನ ಹಾಡಕಿ ಜರುಗುವುದು. ಎಪ್ರಿಲ್ 3 ಬುಧವಾರದಂದು ಮುಂಜಾನೆ 8 ಗಂಟೆಗೆ ಶ್ರೀ ಸಿದ್ಧಲಿಂಗೇಶ್ವರ ಮತ್ತು ಯಲ್ಲಾಲಿಂಗೇಶ್ವರರ ಗದ್ದುಗೆಗೆ…

Read More

ವಿಜಯಪುರ: ಲೋಕಸಭೆ ಚುನಾವಣೆ ನಿಮಿತ್ತ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ದಿ.28 ಗುರುವಾರ ಮ.12ಗಂ. ನಗರದ ರಾಣಿ ಚನ್ನಮ್ಮ ಸಮುದಾಯ ಭವನದಲ್ಲಿ ಮಹತ್ವದ ಸಭೆ ಜರುಗಲಿದೆ.ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ, ಜವಳಿ, ಸಕ್ಕರೆ ಮತ್ತು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ, ಶಾಸಕರಾದ ಅಪ್ಪಾಜಿ ನಾಡಗೌಡ, ಯಶವಂತರಾಯಗೌಡ ಪಾಟೀಲ, ವಿಠ್ಠಲ ಕಟಕದೊಂಡ, ಅಶೋಕ ಮನಗೂಳಿ, ವಿಧಾನ ಪರಿಷತ್ ಸದಸ್ಯರಾದ ಪ್ರಕಾಶ ಹುಕ್ಕೇರಿ, ಪ್ರಕಾಶ ರಾಠೋಡ, ಸುನೀಲಗೌಡ ಪಾಟೀಲ, ಇವರ ನೇತೃತ್ವದಲ್ಲಿ ಈ ಸಭೆ ನಡೆಯಲಿದೆ.ಈ ಸಭೆಯಲ್ಲಿ ವಿಜಯಪುರ ಲೋಕಸಭಾ ಚುನಾವಣಾ ಕಾಂಗ್ರೆಸ್ ಅಭ್ಯರ್ಥಿ ರಾಜು ಆಲಗೂರ ಅವರ ಗೆಲುವಿಗೆ ಕಾರ್ಯತಂತ್ರಗಳನ್ನು ರೂಪಿಸುವ ಚರ್ಚೆ ನಡೆಯಲಿದ್ದು, ಜಿಲ್ಲಾ ಕಾಂಗ್ರೆಸ್ ಸಮಿತಿಯ ಎಲ್ಲ ಪದಾಧಿಕಾರಿಗಳು, ಮಾಜಿ ಶಾಸಕರು, ಕಳೆದ ವಿಧಾನಸಭಾ ಚುನಾವಣೆಯ ಪರಾಜಿತ ಅಭ್ಯರ್ಥಿಗಳು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಕೆಪಿಸಿಸಿ ಸದಸ್ಯರು, ವಿವಿಧ ಅಂಗಘಟಕದ ಪದಾಧಿಕಾರಿಗಳು ಕಡ್ಡಾಯವಾಗಿ ಈ ಸಭೆಯಲ್ಲಿ ಪಾಲ್ಗೊಳ್ಳಲು ಜಿಲ್ಲಾ ಕಾಂಗ್ರೆಸ್ ಸಮಿತಿ ಪ್ರಧಾನ…

Read More

“ವೀಣಾಂತರಂಗ”- ವೀಣಾ ಹೇಮಂತ್ ಗೌಡ ಪಾಟೀಲ್, ಮುಂಡರಗಿ-ಗದಗ ಒಂದು ಕ್ಷಣ ಕಣ್ಣು ಮುಚ್ಚಿಕೊಂಡು ಈ ಜಗತ್ತನ್ನು ಕಲ್ಪನೆ ಮಾಡಿಕೊಳ್ಳಿ ಎಲ್ಲವೂ ಕೇವಲ ಬಿಳಿ ಇಲ್ಲವೇ ಕೇವಲ ಕಪ್ಪು ಬಣ್ಣವನ್ನು ಹೊಂದಿದ್ದರೆ ಹೇಗಿರುತ್ತದೆ ಎಂದು???. ಬೆಳ್ಳನೆಯ ಮೋಡ, ಬೆಳ್ಳನೆಯ ವಿಶಾಲ ಸಮುದ್ರ, ಬೆಳ್ಳನೆಯ ಗಿಡ ಮರಗಳು, ಬೆಳ್ಳನೆಯ ರಸ್ತೆಗಳು, ಬೆಳ್ಳನೆಯ ದೇಹದ ಆಕೃತಿಗಳು ಅಬ್ಬಬ್ಬಾ ಯಾವುದೂ ಚೆನ್ನಾಗಿರುವುದಿಲ್ಲ. ಅಷ್ಟರಲ್ಲಿಯೇ ಕಪ್ಪು ಮತ್ತು ಬಿಳಿ ಎರಡು ಬಣ್ಣಗಳನ್ನು ಕೂಡಿಸಿದ ಬಣ್ಣ ತುಸು ಹೆಚ್ಚೇ ಮನಮೋಹಕ ಎನಿಸುತ್ತದೆ.ಆದರೆ ಹಲವಾರು ಬಣ್ಣಗಳನ್ನು ಹೊಂದಿರುವ ಈ ಪ್ರಕೃತಿ ಅತ್ಯಂತ ಸುಂದರ, ನಯನ ಮನೋಹರವಾಗಿರುತ್ತದೆ. ಬಣ್ಣವಿಲ್ಲದ ಬದುಕು ಬರಡು ಎನಿಸುತ್ತದೆ. ಆಕಾಶದಲ್ಲಿ ತಿಳಿ ನೀಲಿ ಮೋಡಗಳು ಮತ್ತು ಕಪ್ಪು ಮೋಡಗಳು, ಹಸಿರು ಹಾಸಿದ ಗಿಡಮರಗಳು, ಆಕಾಶದ ನೀಲಿಯನ್ನೇ ಹೊದ್ದ ತಿಳಿ ನೀಲ ಸಾಗರ, ಕಪ್ಪನೆಯ ಟಾರು ರಸ್ತೆಗಳು, ಬೆಳ್ಳನೆಯ ಬೆಳ್ಳಕ್ಕಿಗಳು, ವಿಧವಿಧ ಬಣ್ಣದ ಪಕ್ಷಿಗಳು, ಪ್ರಾಣಿಗಳು ಹೀಗೆ ಬಣ್ಣಮಯ ಲೋಕ ನಮ್ಮದು. ಈ ಬಣ್ಣ ಬಣ್ಣದ ಲೋಕವನ್ನು ಬಣ್ಣಿಸಲು ಪದಗಳು…

Read More

ಕೊಲ್ಹಾರ: ಸಂಸದ ರಮೇಶ ಜಿಗಜಿಣಗಿಯವರಿಂದ ಏನೂ ಲಾಭವಾಗಿಲ್ಲ ಎನ್ನುವುದು ನಮ್ಮ ಟೀಕೆಯಲ್ಲ, ಇದು ವಾಸ್ತವ ಎಂದು ಕಾಂಗ್ರೆಸ್ ಪಕ್ಷದ ಲೋಕಸಭೆ ಅಭ್ಯರ್ಥಿ ರಾಜು ಆಲಗೂರ ಅವರು ಹೇಳಿದರು.ಪಟ್ಟಣದಲ್ಲಿ ಸೋಮವಾರ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಎರಡು ಸಲ ಚಿಕ್ಕೋಡಿ, ಮೂರು ಸಲ ವಿಜಯಪುರ ಎಂಪಿಯಾಗಿ ಅವರ ಸಾಧನೆ ಶೂನ್ಯ. ಜಿಲ್ಲೆಗಾಗಿ ಒಂದೇ ಒಂದು ಪ್ರಶ್ನೆಯನ್ನೂ ಅವರು ಕೇಳಿಲ್ಲ. ಇದು ಬದಲಾವಣೆ ಕಾಲವಾಗಿದ್ದು, ನನಗೆ ಅವಕಾಶ ನೀಡಿದರೆ ನನ್ನ ಅನುಭವ ಹಾಗೂ ಪ್ರಾಮಾಣಿಕ ಶ್ರಮದಿಂದ ಜಿಲ್ಲೆಯನ್ನು ಪ್ರಗತಿಯತ್ತ ಕೊಂಡೊಯ್ಯುತ್ತೇನೆ ಎಂದು ಹೇಳಿದರು.ಜಿಪಂ ಮಾಜಿ ಸದಸ್ಯ ಕಲ್ಲು ದೇಸಾಯಿ ಮಾತನಾಡಿ, ಮೂರು ಸಲ ಅಧಿಕಾರದಲ್ಲಿರುವ ಸದ್ಯದ ಸಂಸದರಿಂದ ಕೊಲ್ಹಾರ ಪಟ್ಟಣಕ್ಕೆ ಯಾವುದೇ ಉಪಯೋಗವಾಗಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.ಸದ್ಯದ ಕಾಂಗ್ರೆಸ್ ಅಭ್ಯರ್ಥಿ ರಾಜು ಆಲಗೂರ ಅವರು ಉತ್ತಮ ಸಂಘಟಕರು, ಅಭಿವೃದ್ಧಿ ಪರ ಚಿಂತಕರಾಗಿರುವುದರಿಂದ ಇವರನ್ನು ಗೆಲ್ಲಿಸುವುದು ನಮಗೆಲ್ಲ ಅನಿವಾರ್ಯವಾಗಿದೆ. ಜಿಲ್ಲೆ ಮತ್ತು ನಮ್ಮ ಪಟ್ಟಣದ ಪ್ರಗತಿಗೆ ಆಲಗೂರರು ಶ್ರಮಿಸಲಿದ್ದಾರೆ. ಸಾಮಾನ್ಯ ಜನರೂ ಜಿಗಜಿಣಗಿಯವರಿಂದ ಜುಗುಪ್ಸೆ ಹೊಂದಿದ್ದಾರೆ…

Read More

ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ದಾಖಲೆ ಸಹಿತ ಪ್ರತಿಕ್ರಿಯಿಸಿದ ಸಚಿವ ಕೃಷ್ಣ ಬೈರೇಗೌಡ ಬೆಂಗಳೂರು: ಗ್ಯಾರಂಟಿಗೆ ಕೇಂದ್ರ ಸರ್ಕಾರದ ನಯಾಪೈಸೆಯೂ ಬೇಕಾಗಿಲ್ಲ. ನಮ್ಮ ಗ್ಯಾರಂಟಿಗೆ ಬೇಕಾದ ಹಣವನ್ನು ನಾವೇ ಹೊಂದಿಸುತ್ತಿದ್ದೇವೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಹೇಳಿದ್ದಾರೆ.ರಾಜ್ಯಕ್ಕೆ ಜಿಎಸ್‌ಟಿ ತೆರಿಗೆ ಹಂಚಿಕೆ ಬಾಕಿ ಬಗ್ಗೆ ಭಾನುವಾರ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದ ಸಚಿವೆ ನಿರ್ಮಲಾ ಸೀತಾರಾಮನ್, ಕರ್ನಾಟಕಕ್ಕೆ ನೀಡಬೇಕಿರುವ ತೆರಿಗೆ ಪಾಲಿನಲ್ಲಿ ಯಾವುದೇ ಹಣ ಬಾಕಿ ಇಲ್ಲ ಎಂದು ಹೇಳಿದ್ದರು. ಇದರ ಬೆನ್ನಿಗೆ ಸೋಮವಾರ ವಿಕಾಸಸೌಧದಲ್ಲಿ ತುರ್ತು ಪತ್ರಿಕಾಗೋಷ್ಠಿ ನಡೆಸಿದ ಸಚಿವ ಕೃಷ್ಣ ಬೈರೇಗೌಡ ಅವರು ರಾಜ್ಯಕ್ಕೆ ಆಗುತ್ತಿರುವ ಅನ್ಯಾಯಗಳನ್ನು ದಾಖಲೆ ಸಮೇತ ಬಿಚ್ಚಿಟ್ಟಿದ್ದಾರೆ.ಕರ್ನಾಟದಿಂದ ರಾಜ್ಯಸಭೆಗೆ ಆಯ್ಕೆಯಾದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಂದಲೇ ರಾಜ್ಯಕ್ಕೆ ತೆರಿಗೆ ಹಂಚಿಕೆ ಅನುದಾನದಲ್ಲಿ ಅನ್ಯಾಯವಾಗುತ್ತಿದೆ. ಮಾರ್ಚ್‌ 31ಕ್ಕೆ ಅವರು ಮೈಸೂರಿಗೆ ಆಗಮಿಸುತ್ತಿದ್ದು, ಈ ಬಗ್ಗೆ ಬಹಿರಂಗ ಚರ್ಚೆಗೆ ಅವರು ಸಿದ್ದರಿದ್ದಾರ? ಯಾವುದೇ ರಾಜ್ಯಕ್ಕೆ 2019- 20ರಲ್ಲಿ ಕೊಟ್ಟಿದ್ದಕ್ಕಿಂತ ಕಡಿಮೆ ಅನುದಾನವನ್ನು ಕೊಡುವಂತಿಲ್ಲ ಎಂದು ಹಣಕಾಸು…

Read More

ಬಸವನಬಾಗೇವಾಡಿ: ಪಟ್ಟಣದ ಸೇರಿದಂತೆ ಅಖಂಡ ತಾಲೂಕಿನಲ್ಲಿ ಸೋಮವಾರ ಎಸ್ಎಸ್ಎಲ್ಸಿ ಪರೀಕ್ಷೆಗಳು ಸೋಮವಾರ ಆರಂಭವಾದವು. ಅಖಂಡ ತಾಲೂಕಿನಲ್ಲಿ ಒಟ್ಟು ೧೮ ಪರೀಕ್ಷಾ ಕೇಂದ್ರಗಳಿದ್ದು. ಒಟ್ಟು ೫,೫೨೩ ವಿದ್ಯಾರ್ಥಿಗಳು ಪರೀಕ್ಷೆಗೆ ಹೆಸರು ನೋಂದಾಯಿಸಿದ್ದಾರೆ. ಇದರಲ್ಲಿ ಇಂದು ೧೧೦ ವಿದ್ಯಾರ್ಥಿಗಳು ಗೈರು ಉಳಿಯುವ ಮೂಲಕ ಒಟ್ಟು ೫,೪೧೩ ವಿದ್ಯಾರ್ಥಿಗಳು ಸೋಮವಾರ ಪರೀಕ್ಷೆ ಬರೆದರು.ನಿಡಗುಂದಿಯ ಜಿವಿವಿಎಸ್ ಪ್ರೌಢಶಾಲೆಯಲ್ಲಿರುವ ಪರೀಕ್ಷಾ ಕೇಂದ್ರದಲ್ಲಿ ೪೭೦ ವಿದ್ಯಾರ್ಥಿಗಳು ಇರುವದರಿಂದಾಗಿ ಇದು ೧೮ ಪರೀಕ್ಷಾ ಕೇಂದ್ರಗಳಲ್ಲಿಯೇ ಅತಿ ಹೆಚ್ಚು ವಿದ್ಯಾರ್ಥಿಗಳು ಇರುವ ಪರೀಕ್ಷಾ ಕೇಂದ್ರವಾಗಿದೆ. ಹುಣಶ್ಯಾಳ ಪಿಬಿ ಗ್ರಾಮದ ಹತ್ತಿರುವಿರುವ ಸರ್ಕಾರಿ ಆದರ್ಶ ವಿದ್ಯಾಲಯದಲ್ಲಿರುವ ಪರೀಕ್ಷಾ ಕೇಂದ್ರದಲ್ಲಿ ಒಟ್ಟು ೧೭೭ ವಿದ್ಯಾರ್ಥಿಗಳು ಇರುವದರಿಂದಾಗಿ ಇದು ಅತಿ ಕಡಿಮೆ ಇರುವ ಪರೀಕ್ಷಾ ಕೇಂದ್ರವಾಗಿದೆ.ಪಟ್ಟಣದ ಬಾಲಕಿಯರು ಸರ್ಕಾರಿ ಪ್ರೌಢಶಾಲೆಯ ಸುತ್ತಮುತ್ತ ನಕಲು ಕೊಡಲು ಜನರು ಓಡಾಡುವ ದೃಶ್ಯಕಂಡುಬಂದಿತ್ತು. ಒಂದೆಡೆ ಎಸ್ಎಸ್ಎಲ್ಸಿ ಪರೀಕ್ಷೆಯನ್ನು ನಕಲು ಮುಕ್ತ, ಪಾರದರ್ಶಕವಾಗಿ ನಡೆಯುವಂತೆ ಶಿಕ್ಷಣ ಇಲಾಖೆಯು ಕಟ್ಟುನಿಟ್ಟಾಗಿ ಕ್ರಮ ಕೈಗೊಂಡರೂ ಇದು ಸೋಮವಾರ ಕಂಡುಬಂದಿತ್ತು. ಅಧಿಕಾರಿಗಳು ಇದರ ಕಡೆಗೆ ಕಟ್ಟುನಿಟ್ಟಿನ ಕ್ರಮ…

Read More