Author: editor.udayarashmi@gmail.com

ತಿಕೋಟಾ: ವಿಶ್ವ ಶಾಂತಿಗಾಗಿ ಹಾಗೂ ವಿಶ್ವದ ಉದ್ದಾರಕ್ಕಾಗಿ ವೀರಶೈವ ಧರ್ಮ ಸ್ಥಾಪನೆಯಾಗಿದೆ ಎಂದು ಬಸವನ ಬಾಗೇವಾಡಿಯ ಪದ್ಮರಾಜ ಒಡೆಯರ ಸಂಸ್ಥಾನ ಹಿರೇಮಠದ ಷ.ಬ್ರ. ಶಿವಪ್ರಕಾಶ ಶಿವಾಚಾರ್ಯ ಸ್ವಾಮೀಜಿ ಹೇಳಿದರು.ತಾಲ್ಲೂಕಿನ ಕನಮಡಿ ಗ್ರಾಮದಲ್ಲಿ ಶುಕ್ರವಾರ ಸಂಜೆ ನಡೆದ ರೇಣುಕಾಚಾರ್ಯ ಜಯಂತಿ ಕಾರ್ಯಕ್ರಮದಲ್ಲಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದ ಅವರು ವೀರಶೈವ ಧರ್ಮದ ಮೂಲ ಸಂಸ್ಥಾಪಕರು ರೇಣುಕಾಚಾರ್ಯ ಭಗವತ್ಪಾದಕರಾಗಿದ್ದಾರೆ. ಆದಿ ಜಗದ್ಗುರು ಶಂಕರಾಚಾರ್ಯರಿಗೆ ಚಂದ್ರಮೌಳಿ ಲಿಂಗ ಕೊಟ್ಟು ಆಶಿರ್ವಾದ ಮಾಡಿದವರು ಇವರೇ ಆಗಿದ್ದು, ಪ್ರತಿಯೊಬ್ಬರು ಮನೆಯಲ್ಲಿ ಅವರ ಭಾವಚಿತ್ರ ಇಟ್ಟು ಪೂಜಿಸಿ ನೆನಪಿಸಿಕೊಳ್ಳಬೇಕು ಎಂದರು.ಪ್ರವಚನಕಾರ ಬಾಬುರಾವ ಮಹಾರಾಜ ಮಾತನಾಡಿ ಆತ್ಮಸಾಕ್ಷಿಯಾಗಿ ಇದ್ದವರಿಗೆ, ತತ್ವಜ್ಞಾನಿಗೆ ತುತ್ತು ಅನ್ನ ನೀಡಿದವನಿಗೆ ಶಾಂತಿ ಆನಂದ ಸಿಗುತ್ತದೆ. ಎಲ್ಲರ ರೂಪದಲ್ಲಿ ಮಹಾನ ವ್ಯಕ್ತಿಗಳು ಇದ್ದಾರೆ.ವಿಜಯಕುಮಾರ ಸ್ವಾಮೀಜಿ ಮಾತನಾಡಿ ರೇಣುಕಾಚಾರ್ಯರ ಕೀರ್ತಿ, ವಿಚಾರ ಸಾಹಿತ್ಯಕ್ಕೆ ಕೊಟ್ಟ ಕೊಡುಗೆ ಅಪಾರವಾಗಿದೆ. ಅವರು ರಚಿಸಿದ ಸಿದ್ದಾಮನತ ಶಿಖಾಮಣಿ ಗ್ರಂಥ ಧರ್ಮವನ್ನು ಸಂರಕ್ಷಿಸುತ್ತದೆ ಎಂದರು.ಈ ಸಂದರ್ಭದಲ್ಲಿ ಗ್ರಾಮದ ಸುಭಾಸಗೌಡ ಪಾಟೀಲ, ಎಂ.ಆರ್.ತುಂಗಳ, ಶಿವಪುತ್ರ ಅವಟಿ, ಶಂಕರಗೌಡ…

Read More

ವಿಜಯಪುರ: ನಗರದ ದರಬಾರ ಪಿಯು ಕಾಲೇಜಿನ ನಿವೃತ್ತ ಪ್ರಾಚಾರ್ಯರು ಮತ್ತು ಹಿರಿಯ ಪತ್ರಕರ್ತರಾಗಿದ್ದ ಮೋಹನ ತಿಳಗೂಳ(81) ಅವರ ನಿಧನಕ್ಕೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಸಂತಾಪ ಸೂಚಿಸಿದ್ದಾರೆ.ಮೋಹನ ತಿಳಗೂಳ ಅವರ ನಿಧನರಾದ ಸುದ್ದಿ ತಿಳಿದು ಅತೀವ ದುಃಖವಾಗಿದೆ. ದೇವರು ಅವರ ಆತ್ಮಕ್ಕೆ ಶಾಂತಿ ನೀಡಲಿ. ಅವರ ಅಗಲಿಕೆಯ ನೋವನ್ನು ಭರಿಸುವ ಶಕ್ತಿಯನ್ನು ಕುಟುಂಬ ವರ್ಗಕ್ಕೆ ನೀಡಲಿ ಎಂದು ಕಂಬನಿ ಮಿಡಿದಿದ್ದಾರೆ.ಶಿಕ್ಷಕರಾಗಿ ಮತ್ತು ಪ್ರಾಚಾರ್ಯರಾಗಿ ಉತ್ತಮ ಸೇವೆ ಸಲ್ಲಿಸಿದ್ದರು. ಅವರ ಕೈಯಲ್ಲಿ ಕಲಿತ ಸಾವಿರಾರು ವಿದ್ಯಾರ್ಥಿಗಳು ಈಗ ನಾನಾ ಕ್ಷೇತ್ರಗಳಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ. ಅಷ್ಟೇ ಅಲ್ಲ, ಅವರು ಇಂಡಿಯನ್ ಎಕ್ಸಪ್ರೆಸ್ ವರದಿಗಾರಾಗಿಯೂ ಉತ್ತಮ ಸೇವೆ ಸಲ್ಲಿಸಿದ್ದಾರೆ. ಜನಪರ ವರದಿಗಳ ಮೂಲಕ ಗಮನ ಸೆಳೆದಿದ್ದರು. ಅವರ ಅಗಲಿಕೆಯಿಂದ ಹಿರಿಯ ಪತ್ರಕರ್ತರೊಬ್ಬರನ್ನು ಕಳೆದುಕೊಂಡಂತಾಗಿದೆ ಎಂದು ಸಚಿವ ಎಂ. ಪಿ. ಪಾಟೀಲ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.ಆಶಾ ಎಂ. ಪಾಟೀಲ ಸಂತಾಪ: ಮೋಹನ ತಿಳಗೂಳ…

Read More

ಸಿಂದಗಿ: ಕಿಂಡರ್ ಗಾರ್ಟನ್ ಮಕ್ಕಳ ಭವಿತವ್ಯದ ಬುನಾದಿಗೆ ಅತ್ಯವಶ್ಯವಾಗಿದ್ದು ಹೊಸ ಶಿಕ್ಷಣ ನೀತಿಯಲ್ಲಿ ಸರ್ಕಾರ ಹೆಚ್ಚಿನ ಮಹತ್ವ ನೀಡಿದೆ ಎಂದು ಎಚ್.ಜಿ. ಕಾಲೇಜಿನ ಪ್ರಾಚಾರ್ಯ ಎ. ಆರ್.ಹೆಗ್ಗಣದೊಡ್ಡಿ ಹೇಳಿದರು.ಅವರು ನಗರದ ಬಂದಾಳ ರಸ್ತೆಯಲ್ಲಿರುವ ವಿವೇಕ ಇಂಟರ್ನ್ಯಾಷನಲ್ ಪಬ್ಲಿಕ್ ಸ್ಕೂಲಿನ ಪೂರ್ವ ಪ್ರಾಥಮಿಕ ಶಾಲಾ ಮಕ್ಕಳ ಪದವಿ ಪ್ರಧಾನ ಸಮಾರಂಭದ ಹಾಗೂ ಕಿಂಡರ್ ಗಾರ್ಟನ್ ಡೇ ಮುಖ್ಯ ಅತಿಥಿಗಳಾಗಿ ಮಾತನಾಡಿದರು.ಪ್ರೊಬೆಲರ ಕಿಂಡರ್ ಗಾರ್ಟನ್ ಪದ್ಧತಿ ನಮ್ಮ ನರ್ಸರಿ ಶಾಲೆಯಲ್ಲಿ ಅಳವಡಿಸಿಕೊಳ್ಳಲಾಗಿದೆ. ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗೆ ನಮ್ಮ ಶಾಲೆ ಶ್ರಮಿಸುತ್ತಿದೆ ಎಂದರು.ಪ್ರಾಸ್ತಾವಿಕವಾಗಿ ಮಾತನಾಡಿದ ಪ್ರಾಚಾರ್ಯ ಶಾ ನಿಮೋಲ್ ರಾಬಿನ್ ರವರು, ನಮ್ಮ ಶಾಲೆಯಲ್ಲಿ ಬುನಾದಿ ಹಂತದಿಂದಲೇ ಗುಣಾತ್ಮಕ ಶಿಕ್ಷಣ ನೀಡುತ್ತಿದ್ದು, ಪಾಲಕರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದರು.ಸಂಸ್ಥೆಯ ಅಧ್ಯಕ್ಷ ನೀಲಮ್ಮ ಹೆಗ್ಗಣದೊಡ್ಡಿ ವೇದಿಕೆ ಮೇಲೆ ಉಪಸ್ಥಿತರಿದ್ದರು.ಪ್ರಿಯದರ್ಶಿನಿ ಕಾರ್ಯಕ್ರಮ ನಿರೂಪಿಸಿದರು. ಟೆನಿ ರಾಬಿನ್ ಸ್ವಾಗತಿಸಿದರು. ನೀತು ಮೇಡಂ ವಂದಿಸಿದರು.

Read More

ಮಾ.೩೧ ಮತ್ತು ಏಪ್ರಿಲ್ ೧೪ರಂದು ‘ಆಳ್ವಾಸ್ ಶೈಕ್ಷಣಿಕ ವಿದ್ಯಾರ್ಥಿವೇತನ ಪ್ರವೇಶ ಪರೀಕ್ಷೆ’ (ಸಿಬಿಎಸ್‌ಸಿ, ಐಸಿಎಸ್‌ಇ, ರಾಜ್ಯ ಪಠ್ಯಕ್ರಮ) ಮೂಡುಬಿದಿರೆ: ನಾಲ್ಕು ದಶಕಗಳಿಂದ ನಾಡಿನ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುತ್ತಾ ಶೈಕ್ಷಣಿಕ, ಕ್ರೀಡಾ ಹಾಗೂ ಸಾಂಸ್ಕೃತಿಕ ದತ್ತು ಸ್ವೀಕಾರ, ಸಹಾಯಧನ, ಪ್ರೋತ್ಸಾಹಧನ, ವಿವಿಧ ಶಿಷ್ಯವೇತನ, ಬಹುಮಾನ, ಪುರಸ್ಕಾರಗಳನ್ನು ನೀಡುತ್ತಾ ಬಂದಿರುವ ‘ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ’ವು ಈ ಬಾರಿ ಪಿಯುಸಿ (ಪದವಿ ಪೂರ್ವ) ವಿದ್ಯಾರ್ಥಿಗಳಿಗೆ ಎರಡು ವರ್ಷಕ್ಕೆ ೧೦ ಕೋಟಿಗೂ ಅಧಿಕ ಮೌಲ್ಯದ ಶೈಕ್ಷಣಿಕ ವಿದ್ಯಾರ್ಥಿ ವೇತನ ಫೋಷಿಸಿದೆ.೧೦ನೇ ತರಗತಿ (ಎಸ್ಸೆಸ್ಸೆಲ್ಸಿ)ಯಲ್ಲಿ ಸಿಬಿಎಸ್‌ಸಿ (ಕೇಂದ್ರೀಯ ಪ್ರೌಢಶಿಕ್ಷಣ ಮಂಡಳಿ) ಐಸಿಎಸ್‌ಇ (ಭಾರತೀಯ ಪ್ರೌಢಶಿಕ್ಷಣದ ಪ್ರಮಾಣ ಪತ್ರ) ಹಾಗೂ ರಾಜ್ಯ ಪಠ್ಯಕ್ರಮ (ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿ) ಪರೀಕ್ಷೆ ಬರೆದ ವಿದ್ಯಾರ್ಥಿಗಳು ಈ ಶೈಕ್ಷಣಿಕ ವಿದ್ಯಾರ್ಥಿ ವೇತನ ಪರೀಕ್ಷೆಯನ್ನು ಬರೆಯಬಹುದು.ವಿದ್ಯಾರ್ಥಿಗಳ ಪ್ರವೇಶ ಪರೀಕ್ಷೆಯ ಅಂಕಗಳನ್ನು ಪರಿಗಣಿಸಿ ವಿದ್ಯಾರ್ಥಿ ವೇತನಕ್ಕೆ ಆಯ್ಕೆ ಮಾಡಲಾಗುವುದು. ವಿದ್ಯಾರ್ಥಿ ವೇತನಕ್ಕೆ ಅರ್ಹತೆ ಪಡೆದ ವಿದ್ಯಾರ್ಥಿಗಳು ದೇಶದಲ್ಲೇ ಅತ್ಯುತ್ತಮ ಹಾಗೂ ಅನನ್ಯ ಮಾದರಿಯ…

Read More

ವಿಜಯಪುರ: ದಲಿತ ವಿದ್ಯಾರ್ಥಿ ಪರಿಷತ್ತಿನ ಸಂಸ್ಥಾಪಕ ಅಧ್ಯಕ್ಷ ಶ್ರೀನಾಥ ಪೂಜಾರಿ, ರಾಜ್ಯ ಸಂಚಾಲಕ ಬಾಲಾಜಿ ಕಾಂಬಳೆ, ಜಿಲ್ಲಾ ಸಂಚಾಲಕ ಅಕ್ಷಯ ಅಜಮನಿ ಅವರ ಮಾರ್ಗದರ್ಶನದಂತೆ ಜಿಲ್ಲಾ ಸಹ ಸಂಚಾಲಕ ಮಹಾದೇವ ಚಲವಾದಿ ಅವರು ನೂತನ ಕೋಲಾರ ತಾಲೂಕಿನ ಪದಾಧಿಕಾರಿಗಳಿಗೆ ಜಿಲ್ಲಾ ಕಛೇರಿಯಲ್ಲಿ ಆದೇಶ ಪ್ರತಿ ನೀಡಿ ಸಂಘಟನೆಯ ಬಗ್ಗೆ ತಿಳಿ ಹೇಳಿದರು.ತಾಲೂಕಿನ ಯಾವುದೇ ವಿದ್ಯಾರ್ಥಿಗೆ ಸಮಸ್ಯೆಯಾದರೆ ತಕ್ಷಣದಲ್ಲಿ ಸ್ಪಂದಿಸಿ ಸಂಬಂಧಿಸಿದ ಅಧಿಕಾರಿಗಳ ಗಮನಕ್ಕೆ ತಂದು ಪರಿಹರಿಸಬೇಕು ಎಂದು ಅವರು ಹೇಳಿದರು.ಈ ವೇಳೆ ಕೋಲಾರ ತಾಲೂಕಾ ಸಂಚಾಲಕರಾಗಿ ಬಸವರಾಜ ಚಲವಾದಿ, ಸಹ ಸಂಚಾಲಕರಾಗಿ ಶರಣಪ್ಪ ರೊಳ್ಳಿ, ಪ್ರಧಾನ ಕಾರ್ಯದರ್ಶಿಯಾಗಿ ಮಾರುತಿ ಕುದರಿ, ಸಾಂಸ್ಕೃತೀಕ ಸಂಘಟನಾ ಕಾರ್ಯದರ್ಶಿಯಾಗಿ ಸುರೇಶ ಮು ತಳಕೇರಿ, ಸಾಮಾಜಿಕ ಸಂಘಟನಾ ಕಾರ್ಯದರ್ಶಿಯಾಗಿ ಪ್ರಕಾಶ ಖಜಾಪೂರ, ಖಜಾಂಚಿಯಾಗಿ ದೀಪಕ ರೋಳ್ಳಿ, ಮಾಧ್ಯಮ ವಕ್ತಾರರಾಗಿ ರಾಜು ಕೋರ್ತಿ, ಸಂಘಟನಾ ಸಂಪರ್ಕ ಕಾರ್ಯದರ್ಶಿಯಾಗಿ ಬಸವರಾಜ ಚಂ ಚ¯ವಾದಿ, ಸಂಘಟನಾ ಕಾರ್ಯದರ್ಶಿಯಾಗಿ ಯಮನಪ್ಪ ಹೊಸಮನಿ ಅವರನ್ನು ಆಯ್ಕೆ ಮಾಡಿ ಆದೇಶ ಪ್ರತಿ ನೀಡಲಾಯಿತು.ಈ ಸಂದರ್ಭದಲ್ಲಿ ಮುಖಂಡರಾದ…

Read More

ವಿಜಯಪುರ: ಜಿಲ್ಲಾ ಕಾಂಗ್ರೆಸ ಪರಿಶಿಷ್ಠ ಜಾತಿಯ ಅಧ್ಯಕ್ಷ ರಮೇಶ ಗುಬ್ಬೆವಾಡ ಅವರು ಗುರುವಾರದಂದು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಮಹಾದೇವ ಚಲವಾದಿ ಅವರಿಗೆ ಪರಿಶಿಷ್ಠ ಜಾತಿಯ ಜಿಲ್ಲಾ ಸಂಘಟನಾ ಕಾರ್ಯದಶಿಯಾಗಿ ಆದೇಶ ಪ್ರತಿ ನೀಡಿ ಪಕ್ಷದ ತತ್ವ ಹಾಗೂ ಸಿದ್ದಾಂತಗಳ ಕುರಿತು ಹೇಳಿದರುಈ ವೇಳೆ ಮಾತನಾಡಿದ ಅವರು ರಾಜ್ಯ ಹಾಗೂ ಕೇಂದ್ರ ಕಾಂಗ್ರೆಸ್ ಪಕ್ಷದ ಮುಖಂಡರ ಮಾರ್ಗದರ್ಶನದಲ್ಲಿ ಜಿಲ್ಲೆಯ ಮುಖಂಡರುಗಳ ಮಾರ್ಗದರ್ಶನದಲ್ಲಿ ಪಕ್ಷ ಸಂಘಟನೆ ಮಾಡಬೇಕು, ಪಕ್ಷದ ಎಲ್ಲಾ ಜನಪರ ಯೋಜನೆಗಳನ್ನು ಜಿಲ್ಲೆಯ ಮನೆ ಮನೆಗೂ ತಲುಪಿಸುವ ಮಹತ್ತರ ಜವಾಬ್ದಾರಿ ನಮ್ಮೆಲ್ಲರದಾಗಿದೆ, ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಹಗಲಿರುಳು ಪಕ್ಷದ ಅಭ್ಯರ್ಥಿಯ ಪರವಾಗಿ ಜಿಲ್ಲೆಯ ಮನೆ ಮನೆಗೂ ತೆರಳಿ ಮತಯಾಚನೆ ಮಾಡುವುದರ ಮೂಲಕ ರಾಜು ಆಲಗೂರ ಅವರನ್ನು ಬಹುಮತದಿಂದ ಆರಿಸಿ ತರಬೇಕಾದ ಶ್ರದ್ದೆ ಹಾಗೂ ನಿಷ್ಠೆಯ ಕೆಲಸ ಮಾಡಬೇಕಿದೆ ಎಂದರುಈ ಸಂದರ್ಬದಲ್ಲಿ ಜಿಲ್ಲಾಧ್ಯಕ್ಷರು ಹಾಗೂ ಲೋಕಸಭಾ ಅಭ್ಯರ್ಥಿಯಾದ ರಾಜು ಆಲಗೂರ, ಮುಖಂಡರಾದ ಅಬ್ದುಲ್ ಹಮ್ಮೀದ ಮುಶ್ರೀಫ, ವಸಂತ ಹೊನಮೊಡೆ ಸೇರಿದಂತೆ ಅನೇಕರ ಕಾಂಗ್ರೆಸ್ ಮುಖಂಡರು…

Read More

“ಆರೋಗ್ಯ ಅಂಗಳ” – ರೇಷ್ಮಾ ಬಿಸಿಲಿನ ತಾಪ ಏರಿಕೆಯಾಗುತ್ತಲೇ ಇದೆ. ಇದರೊಂದಿಗೆ ಆರೋಗ್ಯ ಸಮಸ್ಯೆಗಳೂ ಹೆಚ್ಚುತ್ತಿವೆ. ಬೇಸಿಗೆಯಲ್ಲಿ ಕೆಲವು ಸಾಮಾನ್ಯ ಕಾಯಿಲೆಗಳು ಬಾಧಿಸುವುದು ಸಹಜ. ಹಾಗಂತ ಅವುಗಳನ್ನು ನಿರ್ಲಕ್ಷ್ಯ ಮಾಡುವುದೂ ಸರಿಯಲ್ಲ. ಬಿರುಬೇಸಿಗೆಯಲ್ಲಿ ಕಾಣಿಸುವ ಕೆಲವು ಸಾಮಾನ್ಯ ಆರೋಗ್ಯ ಸಮಸ್ಯೆಗಳು ಹಾಗೂ ಬೇಸಿಗೆಯಲ್ಲಿ ಆರೋಗ್ಯ ಕಾಳಜಿಯ ಕುರಿತ ಟಿಪ್ಸ್‌ ಇಲ್ಲಿದೆ.ಸಾಮಾನ್ಯವಾಗಿ ಮಾರ್ಚ್‌ ತಿಂಗಳಿನಿಂದ ಮೇ ತಿಂಗಳ ಅಂತ್ಯದವರೆಗೆ ಬಿಸಿಲು ಜೋರಾಗಿರುತ್ತದೆ. ಆದರೆ ಈ ವರ್ಷ ಬಿಸಿಲಿನ ಪ್ರತಾಪ ಇನ್ನೂ ಜೋರಿದೆ. ಬಿಸಿಲು ಏರಿಕೆಯಾದಷ್ಟೂ ಆರೋಗ್ಯ ಸಮಸ್ಯೆಗಳೂ ಹೆಚ್ಚುತ್ತವೆ.ಬೇಸಿಗೆಯಲ್ಲಿ ಕೆಲವು ಸಾಮಾನ್ಯ ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ. ಈ ವರ್ಷ ಬಿಸಿಲಿನ ಧಗೆ ಹೆಚ್ಚಿರುವ ಕಾರಣಕ್ಕೆ ಕಾಯಿಲೆಗಳ ಪ್ರಮಾಣವೂ ಹೆಚ್ಚಿದೆ. ಬೇಸಿಗೆಯಲ್ಲಿ ಕಾಣಿಸುವ ಸಾಮಾನ್ಯ ಕಾಯಿಲೆಗಳನ್ನು ಅಸಡ್ಡೆ ಮಾಡಬಾರದು. ಇದರಿಂದ ಅಪಾಯ ಹೆಚ್ಚುವ ಸಾಧ್ಯತೆ ಇದೆ. ತಾಪಮಾನದ ಏರಿಕೆಯು ದೇಹದ ಯಾವುದೋ ಒಂದು ಭಾಗದ ಮೇಲೆ ಮಾತ್ರವಲ್ಲ; ಇದು ಸಂಪೂರ್ಣ ದೇಹದ ಮೇಲೆ ಪರಿಣಾಮ ಬೀರುತ್ತದೆ. ಬೇಸಿಗೆಯಲ್ಲಿ ಚರ್ಮ, ಕಣ್ಣು, ಉಸಿರಾಟದ ಸಮಸ್ಯೆ ಇವು…

Read More

ಜಾತಿ ಆಧಾರಿತ ಹತ್ಯೆ ತಡೆಯಲು ಪ್ರತ್ಯೇಕ ಕಾಯಿದೆ ಜಾರಿಗೆ ಚೆನ್ನೈನಲ್ಲಿ ನಡೆದ ಸಮಾವೇಶವೊಂದರಲ್ಲಿ ದಲಿತ ವಿದ್ವಾಂಸರು ಒತ್ತಾಯಿಸಿದ್ದಾರೆ.ಮಾನವ ಹಕ್ಕುಗಳ ಸಂಘಟನೆ ಪೀಪಲ್ಸ್ ವಾಚ್‌ನ ಆಶೀರ್ವತಮ್ ಸಮಾವೇಶದಲ್ಲಿ ಮಾತನಾಡಿದ್ದು, ಗರ್ಭಿಣಿ ದಲಿತ ಯುವತಿಯನ್ನು ಸವರ್ಣಿಯ ಜಾತಿಯ ಪುರುಷರ ಗುಂಪು ಸಾಮೂಹಿಕವಾಗಿ ಅತ್ಯಾಚಾರ ಮಾಡಿ ಬಳಿಕ ಬರ್ಬರವಾಗಿ ಹತ್ಯೆ ಮಾಡಿದ್ದರು. ನಾವು ಮಾನವ ಹಕ್ಕುಗಳ ರಕ್ಷಕರಾಗಿ ಸಂತ್ರಸ್ತೆಯ ಕುಟುಂಬದ ಸದಸ್ಯರನ್ನು ಭೇಟಿ ಮಾಡಲು ಪ್ರಯತ್ನಿಸಿದಾಗ, ಪೊಲೀಸ್ ಅಧಿಕಾರಿಗಳು ನಮ್ಮನ್ನು ತಡೆದಿದ್ದಾರೆ ಎಂದು ನೆನಪಿಸಿಕೊಂಡಿದ್ದಾರೆ.ಮದ್ರಾಸ್ ಸ್ಕೂಲ್ ಆಫ್ ಸೋಶಿಯಲ್ ವರ್ಕ್‌ನಲ್ಲಿ ‘ಕಾನೂನು ಅಡೆತಡೆಗಳು ಮತ್ತು ಮಧ್ಯಸ್ಥಿಕೆಗಳಲ್ಲಿನ ಸವಾಲುಗಳು’ ಕುರಿತು 100ಕ್ಕೂ ಹೆಚ್ಚು ವಿದ್ಯಾರ್ಥಿಗಳಿದ್ದ ಸಭೆಯನ್ನುದ್ದೇಶಿಸಿ ಮಾತನಾಡಿದ ಆಶೀರ್ವತಮ್, ಗರ್ಭಿಣಿ ದಲಿತ ಸಂತ್ರಸ್ತೆ ಅನುಭವಿಸಿದ ನೋವನ್ನು ಬಿಚ್ಚಿಟ್ಟಿದ್ದಾರೆ. ಸಂತ್ರಸ್ತೆ ಅನುಭವಿಸಿದ ಅಗ್ನಿಪರೀಕ್ಷೆಯನ್ನು ವಿವರಿಸಿದಾಗ ಸಭಾಂಗಣವೆಲ್ಲ ಮೌನವಾಗಿತ್ತು.ಸಮಾವೇಶದಲ್ಲಿ ಜಾತಿ ಹತ್ಯೆ ಮತ್ತು ಯಾವ ರೀತಿ ರಕ್ಷಣಾತ್ಮಕ ಕ್ರಮಗಳನ್ನು ತೆಗೆದುಕೊಳ್ಳಬಹುದು ಎಂಬುದನ್ನು ಚರ್ಚಿಸಲಾಗಿದೆ. ಭಾಗವಹಿಸಿದವರೆಲ್ಲರೂ ತಮಿಳುನಾಡಿನಲ್ಲಿ ಜಾತಿ ಹತ್ಯೆಗಳನ್ನು ತಡೆಯಲು ಪ್ರತ್ಯೇಕ ಕಾಯಿದೆಯನ್ನು ಜಾರಿಗೆ ತರುವಂತೆ ಆಗ್ರಹಿಸಿದ್ದಾರೆ.2016ರಲ್ಲಿ ಅರಿಯಲೂರಿನಲ್ಲಿ ಪರಿಶಿಷ್ಟ…

Read More

ಮುದ್ದೇಬಿಹಾಳ: ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳು ಪರೀಕ್ಷೆಯ ಸಮಯದಲ್ಲಿ ಇಡೀ ರಾತ್ರಿ ಓದದೇ, ಸರಿಯಾದ ಸಮಯಕ್ಕೆ ಊಟವನ್ನು ಮಾಡಿ ಬೇಗ ಮಲಗಬೇಕು. ಕನಿಷ್ಟ, ಏಳೆಂಟು ಗಂಟೆಗಳ ಕಾಲ ನಿದ್ರೆ ಮಾಡಬೇಕು. ನಿಮ್ಮ ಮನಸ್ಸಿನಲ್ಲಿಯ ಭಯ ಹೋಗಲಾಡಿಸಲು ಪ್ರಯತ್ನಿಸಬೇಕು ಎಂದು ಶಿಕ್ಷಕ ಟಿ.ಡಿ.ಲಮಾಣಿ ಹೇಳಿದರು.ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳ ಹಿನ್ನೆಲೆ ಪರೀಕ್ಷಾ ವಿದ್ಯಾರ್ಥಿಗಳಿಗೆ ಮಾಧ್ಯಮದ ಮೂಲಕ ಸಲಹೆ ನೀಡಿದ ಅವರು, ಪರೀಕ್ಷೆಯ ಸಮಯದಲ್ಲಿ ಸಂಪೂರ್ಣವಾಗಿ ಸಾತ್ವಿಕ ಆಹಾರವನ್ನೇ ಸೇವಿಸಬೇಕು. ಕರಿದ, ಮಸಾಲೆ ಪದಾರ್ಥಗಳನ್ನು ಸೇವಿಸದಿರಲು, ಹಣ್ಣುಗಳನ್ನು, ಹಣ್ಣಿನ ರಸಗಳನ್ನು, ನೀರನ್ನು ಹೆಚ್ಚಾಗಿ ಸೇವಿಸುವಂತೆ, ಕಾಫಿ, ಟೀ ಕುಡಿಯದಂತೆ, ಹಿಂದಿನ ದಿನದ ರಾತ್ರಿಯೇ ಪೆನ್, ಪೆನ್ಸಿಲ್, ಹಾಲ್ ಟಿಕೆಟ್ ಮತ್ತಿತರ ಅಗತ್ಯವಿರುವ ಎಲ್ಲಾ ವಸ್ತುಗಳನ್ನು ಸಿದ್ಧವಿರಿಸಿಕೊಳ್ಳುವಂತೆ, ಮತ್ತೊಮ್ಮೆ ನಿಮ್ಮ ಪರೀಕ್ಷೆಯ ಟೈಂ ಟೇಬಲ್ ಚೆಕ್ ಮಾಡಿಕೊಳ್ಳುವಂತೆ, ಪರೀಕ್ಷೆಯ ದಿನ ಪರೀಕ್ಷೆಯ ಟೈಂಗೆ ಕನಿಷ್ಟ ಅರ್ಧ ಗಂಟೆಯ ಮೊದಲಾದರೂ ಎಕ್ಸಾಮ್ ಸೆಂಟರ್‌ಗೆ ಹೋಗಬೇಕೆಂಬುದನ್ನು ನೆನಪಿಟ್ಟುಕೊಳ್ಳುವಂತೆ, ಪಾಲಕರ ಆಶೀರ್ವಾದ ಪಡೆದುಕೊಳ್ಳುವಂತೆ, ಬ್ರೆಕ್ ಫಾಸ್ಟ್ ಮಾಡದೇ ಹೋಗದಿರುವಂತೆ, ಪರೀಕ್ಷೆಯ ಮುನ್ನ ಅನಗತ್ಯವಾಗಿ…

Read More

ಮುದ್ದೇಬಿಹಾಳ: ತಾಲೂಕಿನ ತಂಗಡಗಿ ಬಳಿಯ ಚಕ್‌ಪೋಸ್ಟ್ ಗೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಭೇಟಿ ನೀಡಿ ಪರಿಶೀಲಿಸಿದರು.ಪೊಲೀಸ್ ವರಿಷ್ಠಾಧಿಕಾರಿ ರಿಷಿಕೇಶ ಭಗವಾನ್, ತಹಶೀಲ್ದಾರ ಬಸವರಾಜ ನಾಗರಾಳ, ಸಿಪಿಐ ಮಲ್ಲಿಕಾರ್ಜುನ ತುಳಸಿಗೇರಿ, ತಾ.ಪಂ ಇಓ ಎಸ್.ಎಸ್.ಮೇಲ್ಮನಿ ಸೇರಿದಂತೆ ಮತ್ತೀತರರು ಇದ್ದರು.

Read More