Author: editor.udayarashmi@gmail.com

ಸಿಂದಗಿ: ನೂರಾರು ಕಿಲೋಮೀಟರ್ ದೂರದಿಂದ, ನೂರಾರೂ ಅಡಿ ಆಳದಲ್ಲಿರುವ ಜಲಮೂಲಗಳಿಂದ ಮನೆ ಮನೆಗೆ ಕುಡಿಯುವ ನೀರು ಪೂರೈಕೆಯಾಗುತ್ತಿದೆ. ಇಷ್ಟೆಲ್ಲ ಪರಿಶ್ರಮದೊಂದಿಗೆ ಲಭ್ಯವಾಗುವ ಜೀವ ಜಲವನ್ನು ಮಿತವಾಗಿ ಬಳಸುವುದು ನಮ್ಮೆಲ್ಲರ ಜವಾಬ್ದಾರಿ ಎಂದು ಮಕ್ಕಳ ಕಲ್ಯಾಣ ಪ್ರತಿಷ್ಠಾನದ ಕಾರ್ಯದರ್ಶಿ ಡಾ.ಜ್ಯೋತಿ ಪೂಜಾರ ಹೇಳಿದರು.ಪಟ್ಟಣದ ಮಕ್ಕಳ ಕಲ್ಯಾಣ ಪ್ರತಿಷ್ಠಾನದ ಕ್ರಿಯೇಟಿವ್ ಕಿಡ್ಸ್ ಹೋಮ್‌ನಲ್ಲಿ ಶುಕ್ರವಾರ ಹಮ್ಮಿಕೊಂಡ ವಿಶ್ವ ಜಲ ದಿನ ಆಚರಣೆ ಕಾರ್ಯಕ್ರಮದಲ್ಲಿ ಸಸಿಗೆ ನೀರುಣಿಸಿ ಮಾತನಾಡಿದರು.ವಿಶ್ವ ಜಲ ದಿನದ ಈ ವರ್ಷದ ಥೀಮ್ ಶಾಂತಿಗಾಗಿ ನೀರು. ಇದು ಪ್ರಪಂಚದ ಸ್ಥಿರತೆ ಮತ್ತು ಸಮೃದ್ಧಿಯಲ್ಲಿ ನೀರು ವಹಿಸುವ ನಿರ್ಣಾಯಕ ಪಾತ್ರವನ್ನು ಕೇಂದ್ರೀಕರಿಸುತ್ತದೆ. ಭೂಮಿ ಮೇಲಿನ ಎಲ್ಲ ಜೀವರಾಶಿಗಳಿಗೆ ನೀರು ಅತ್ಯವಶ್ಯ. ರೈತಾಪಿ ವರ್ಗ ಸೇರಿದಂತೆ ಪ್ರತಿಯೊಬ್ಬರೂ ಜೀವ ದ್ರವ್ಯ ಮಳೆಯನ್ನೇ ನಂಬಿಕೊಂಡಿದ್ದಾರೆ. ಹಾಗಾಗಿ ಮಿತ ಪ್ರಮಾಣದಲ್ಲಿ ನೀರು ಸದ್ಬಳಕೆಯಾಗಬೇಕು ಎಂದು ಹೇಳಿದರು.ಈ ವೇಳೆ ಶಿಕ್ಷಕಿಯರಾದ ಅಶ್ವಿನಿ ಲೋಣಿ, ಮಂಗಲಾ ಬಮ್ಮಣ್ಣಿ, ಸೇರಿದಂತೆ ಸಿಬ್ಬಂದಿಗಳಾದ ಶ್ರೀಶೈಲ ಹೂಗಾರ, ಅಂಬಿಕಾ ಕರಿಶೆಟ್ಟಿ ಹಾಗೂ ಮಕ್ಕಳು ಭಾಗವಹಿಸಿದ್ದರು.

Read More

ವಿ.ಆರ್.ಜಿ ಶಿಕ್ಷಣ ಸಂಸ್ಥೆಯ ಕಿಡ್ಜೀ ಶಾಲೆಯ ವಾರ್ಷಿಕೋತ್ಸವದಲ್ಲಿ ಶಾಸಕ ಅಶೋಕ ಮನಗೂಳಿ ಅಭಿಮತ ಸಿಂದಗಿ: ಆರೋಗ್ಯಪೂರ್ಣ ಮನಸ್ಸು ಆರೋಗ್ಯ ಪೂರ್ಣ ದೈಹಿಕ ಸಾಮರ್ಥ್ಯಕ್ಕೆ ಹಿಡಿದ ಕೈಗನ್ನಡಿಯಾಗಿದೆ. ಚಿಕ್ಕ ಮಕ್ಕಳ ವಿದ್ಯಾಭ್ಯಾಸ ಪ್ರಾರಂಭದ ಹಂತದಲ್ಲಿ ಆಟ ಪಾಠಗಳಿಂದ ಮಕ್ಕಳ ಮನೋದೈಹಿಕ ಬೆಳವಣಿಗೆಗೆ ಸಹಕಾರಿ ಆದಾಗ ಮಾತ್ರ ಶಿಕ್ಷಣ ಸಂಸ್ಥೆಗಳ ಧ್ಯೇಯೋದ್ದೇಶಗಳ ಉದ್ದೇಶ ಸಾರ್ಥಕವಾಗುತ್ತದೆ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.ಅವರು ಪಟ್ಟಣದ ವಿ.ಆರ್.ಜಿ ಶಿಕ್ಷಣ ಸಂಸ್ಥೆಯವರ ಕಿಡ್ಜೀ ಶಾಲೆಯು ಹಮ್ಮಿಕೊಂಡಿದ್ದ ಪ್ರಥಮ ವಾರ್ಷಿಕೋತ್ಸವ ಸಮಾರಂಭ ಉದ್ಘಾಟಿಸಿ ಮಾತನಾಡಿದರು.ಅತ್ಯಂತ ಶಿಸ್ತಿನಿಂದ ಕೂಡಿರುವ ಉತ್ತಮ ಗುಣಮಟ್ಟದ, ಉತ್ತಮ ಕರ್ತೃತ್ವ ಶಕ್ತಿಯನ್ನು ಹೊಂದಿರುವ ಶಿಕ್ಷಕ, ಶಿಕ್ಷಕಿಯರ ವೃಂದವು ಶಾಲೆಯನ್ನ ಉನ್ನತ ಹಂತಕ್ಕೆ ತಂದು ನಿಲ್ಲಿಸಿದೆ. ಉದ್ಯಮವನ್ನೇ ಉಸಿರಾಗಿಸಿಕೊಂಡಿದ್ದ ಗುತ್ತೇದಾರ್ ಕುಟುಂಬ ಶಿಕ್ಷಣ ಕ್ಷೇತ್ರಕ್ಕೆ ಕಾಲಿರಿಸಿದ್ದು ತುಂಬಾ ಸಂತೋಷದ ವಿಷಯ. ಮುಂಬರುವ ದಿನಗಳಲ್ಲಿ ಈ ಶಿಕ್ಷಣ ಸಂಸ್ಥೆಯು ಪದವಿ ಶಿಕ್ಷಣದವರೆಗೂ ತನ್ನ ಬಾಹು ವಿಸ್ತರಿಸಲಿ ಎಂದು ಹಾರೈಸಿದರು.ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಅರ್ಬನ್ ಬ್ಯಾಂಕಿನ ನಿರ್ದೇಶಕ ಶರಣಪ್ಪ ವಾರದ, ದೈಹಿಕ…

Read More

ಮುದ್ದೇಬಿಹಾಳ: ಸ್ವಾತಂತ್ರ‍್ಯ ಬಂದು ೭೫ವರ್ಷ ಪೂರ್ಣವಾದರೂ ಖಾಸಗಿ ಶಾಲೆಗಳ ಶಿಕ್ಷಕರಿಗೆ ಕೇವಲ ಬಿಟ್ಟಿಚಾಕರಿ ಕೆಲಸಕ್ಕೆ ಮಾತ್ರ ಸೀಮಿತವಾಗಿಟ್ಟುಕೊಂಡಿರುತ್ತಾರೆ ಎಂದು ಶಿಕ್ಷಕ ಬಿ.ಟಿ.ಭಜಂತ್ರಿ ಬೇಸರ ವ್ಯಕ್ತಪಡಿಸಿದ್ದಾರೆ.ಶುಕ್ರವಾರ ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಇಚ್ಛಿತ ವ್ಯಕ್ತಿಗಳು ಆಡಳಿತ ಮಂಡಳಿ ನಿರ್ಮಿಸಿಕೊಂಡು ಸರಕಾರದ ಪರವಾನಿಗೆ ಪಡೆದು, ಸರಕಾರವು ಕಾಲಕಾಲಕ್ಕೆ ಹೊರಡಿಸುವ ಎಲ್ಲಾ ನಿಯಮಗಳನ್ನು ಪಾಲಿಸಿಕೊಂಡು ಬರುತ್ತಿರುವ ಅನುದಾನ ರಹಿತ ಶಾಲೆಗಳ ಶಿಕ್ಷಕರುಗಳು ಸಮಾನ ಅಥವಾ ಸಮಾನಕ್ಕೆ ಹತ್ತಿರವಾಗಿಯಾದರೂ ನಮ್ಮನ್ನು ನೋಡಿಕೊಳ್ಳಬೇಕು. ಇತ್ತೀಚೆಗೆ ಅಧ್ಯಕ್ಷರು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ, ಬೆಂಗಳೂರ ರವರು ಎಸ.ಎಸ್.ಎಲ್.ಸಿ ಆಂತರಿಕ ಅಂಕಗಳ ಪರಿಶೀಲನೆಗೆ ತ್ರಿಸದಸ್ಯ ಸಮಿತಿಯನ್ನು ರಚಿಸುವ ಸಂಬಂಧ ಪತ್ರ ಸಂಖ್ಯೆ: ಸಿ೧../ಅಅಇ/ತ್ರಿ.ಸ/ಸ/೯೦/೨೦೨೩-೨೪ ದಿನಾಂಕ: ೧೩.೦೨.೨೦೨೪ ಹೊರಡಿಸಿ ಕೇವಲ ಸರಕಾರಿ ಮತ್ತು ಅನುದಾನಿತ ಶಾಲಾ ಶಿಕ್ಷಕರುಗಳಿಗೆ ಮಾತ್ರ ಅವಕಾಶಗಳನ್ನು ನೀಡಿದ್ದಾರೆ. ಇದನ್ನು ನೋಡಿದಾಗ ಅನುದಾನ ರಹಿತ ಶಾಲಾ ಶಿಕ್ಷಕರನ್ನು ಮರೆತಂತಿದೆ. ಆಂತರಿಕ ಅಂಕ ಪರಿಶೀಲನಾ ಸಮಿತಿಯಲ್ಲಿ ಸಾಮಾನ್ಯ ಸದಸ್ಯನಾಗಿ ಕೆಲಸ ಮಾಡಲು ಅನುದಾನ ರಹಿತ ಶಿಕ್ಷಕರುಗಳಿಗೆ…

Read More

ಮಾಜಿ ಎಂಎಲ್ಸಿಗಳಾದ ಮರಿತಿಬ್ಬೇಗೌಡ, ಅಪ್ಪಾಜಿಗೌಡ, ಮಾಜಿ ಶಾಸಕ ಎಂ ಶ್ರೀನಿವಾಸ ಸೇರಿದಂತೆ ಹಲವರು ಸೇರ್ಪಡೆ ಬೆಂಗಳೂರು: ಹಲವು ಮಂದಿ ಬಿಜೆಪಿ-ಜೆಡಿಎಸ್ ಮುಖಂಡರು ಮತ್ತು ಕಾರ್ಯಕರ್ತರು ಶುಕ್ರವಾರ ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.ಮಂಡ್ಯ ಜಿಲ್ಲೆಯ ಜೆಡಿಎಸ್ ನಾಯಕ ಮಾಜಿ ವಿಧಾನ ಪರಿಷತ್ ಸದಸ್ಯ ಮರಿತಿಬ್ಬೇಗೌಡ, ಮಾಜಿ ಎಂಎಲ್‌ಸಿ ಅಪ್ಪಾಜಿಗೌಡ, ಮಾಜಿ ಶಾಸಕ ಎಂ ಶ್ರೀನಿವಾಸ, ಜಿಲ್ಲಾ ಪಂಚಾಯ್ತಿ ಮಾಜಿ ಅಧ್ಯಕ್ಷ ವೆಂಕಟೇಶ್, ಸದಸ್ಯ ಯೋಗೇಶ್, ಮಂಜುನಾಥ್ ಗೌಡ ಹಾಗೂ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿಯ ಆಶಾ ಸುರೇಶ್ ಅವರು ಸೇರಿದಂತೆ ನೂರಾರು ಮಂದಿ ಕೈ ಹಿಡಿದಿದ್ದಾರೆ.ಬಿಜೆಪಿ ಜೊತೆ ಜೆಡಿಎಸ್ ಹೊಂದಾಣಿಕೆ ಮಾಡಿಕೊಂಡಿದ್ದರಿಂದ ಆಕ್ರೋಶಗೊಂಡು ವಿಧಾನ ಪರಿಷತ್ ಸ್ಥಾನಕ್ಕೆ ಗುರುವಾರ ರಾಜೀನಾಮೆ ನೀಡಿರುವ ಮರಿತಿಬ್ಬೇಗೌಡ, ತಮ್ಮ ಬೆಂಬಲಿಗರ ಜೊತೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.ಶುಕ್ರವಾರ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ನಡೆದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ಸಿಎಂ ಸಿದ್ದರಾಮಯ್ಯ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಎಲ್ಲರನ್ನು…

Read More

ತೀರ್ಪು ಕಾಯ್ದಿರಿಸಿದ ದೆಹಲಿ ಹೈಕೋರ್ಟ್‌ | ದೆಹಲಿ ಅಬಕಾರಿ ನೀತಿ ಹಗರಣ ಪ್ರಕರಣ | ಇಡಿ ಅಧಿಕಾರಿಗಳಿಂದ ಕೇಜ್ರಿವಾಲ್ ಬಂಧನ ನವದೆಹಲಿ: ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಪದಚ್ಯುತಗೊಳಿಸುವಂತೆ ಶುಕ್ರವಾರ ದೆಹಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿದೆ. ದೆಹಲಿ ಅಬಕಾರಿ ನೀತಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಜ್ರಿವಾಲ್ ಅವರನ್ನು ನಿನ್ನೆ ರಾತ್ರಿ ಇಡಿ ಅಧಿಕಾರಿಗಳು ಬಂಧಿಸಿದ್ದಾರೆ.ಅರ್ಜಿಯು ಕೆಲವು ದೋಷಗಳನ್ನು ಹೊಂದಿದೆ; ಇವುಗಳನ್ನು ಪರಿಶೀಲಿಸಿದ ನಂತರ ವಿಚಾರಣೆಗೆ ಪಟ್ಟಿ ಮಾಡಲಾಗುವುದು ಎಂದು ನ್ಯಾಯಾಲಯದ ಮೂಲಗಳನ್ನು ಉಲ್ಲೇಖಿಸಿ ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಸುರ್ಜಿತ್ ಸಿಂಗ್ ಯಾದವ್ ಎಂಬುವವರು ಅರ್ಜಿ ಸಲ್ಲಿಸಿದ್ದಾರೆ.ಕೇಜ್ರಿವಾಲ್ ಅವರು ಯಾವ ಅಧಿಕಾರದ ಅಡಿಯಲ್ಲಿ ಮುಖ್ಯಮಂತ್ರಿ ಹುದ್ದೆಯಲ್ಲಿದ್ದಾರೆ ಎಂಬುದನ್ನು ವಿವರಿಸಲು ಕೇಂದ್ರ, ದೆಹಲಿ ಸರ್ಕಾರ ಮತ್ತು ಲೆಫ್ಟಿನೆಂಟ್ ಗವರ್ನರ್ ಅವರ ಪ್ರಧಾನ ಕಾರ್ಯದರ್ಶಿಯನ್ನು ಕೇಳಬೇಕು. ಕೇಜ್ರಿವಾಲ್ ಅವರನ್ನು ಹುದ್ದೆಯಿಂದ ವಜಾಗೊಳಿಸಬೇಕು ಎಂದು ಅರ್ಜಿಯಲ್ಲಿ ಯಾದವ್ ಒತ್ತಾಯಿಸಿದ್ದಾರೆ.“ಆಪಾದಿತ ಮದ್ಯ ನೀತಿ ಹಗರಣಕ್ಕೆ ಸಂಬಂಧಿಸಿದ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಮಾರ್ಚ್ 21 ರಂದು ಜಾರಿ ನಿರ್ದೇಶನಾಲಯದಿಂದ…

Read More

ವಿಜಯಪುರ: ರಾಜ್ಯ ಕಾರ್ಮಿಕರ ಮತ್ತು ಬಡರೋಗಿಗಳ ಕಲ್ಯಾಣ ಬೋರ್ಡ (ಎನ್.ಜಿ.ಓ) ವಿಜಯಪುರ ವತಿಯಿಂದ ವಿಶ್ವ ಜಲ ದಿನವನ್ನು ನಗರದ ಜಲನಗರದಲ್ಲಿ ಅರ್ಥಪೂರ್ಣವಾಗಿ ಆಚರಣೆ ಮಾಡಲಾಯಿತು.ಈ ಸಂದರ್ಭದಲ್ಲಿ ಅಧ್ಯಕ್ಷ ಅಶೋಕ ಜುಗತಿ ಮಾತನಾಡಿ, ವಿಶ್ವ ಜಲ ದಿನವನ್ನು ವಿಶ್ವ ಸಂಸ್ಥೆಯು ೧೯೯೩ ಮಾರ್ಚ ೨೨ ರಂದು ರಲ್ಲಿ ಜಾರಿ ಬಂದಿತು. ಅಮೃತಕ್ಕೆ ಸಮಾನವಾದ ಈ ನೀರು ದಿನನಿತ್ಯದ ಬದುಕಿಗೆ ಅತ್ಯಗತ್ಯ. ಕುಡಿಯುವುದರಿಂದ ಹಿಡಿದು ದಿನನಿತ್ಯದ ಕೆಲಸಕಾರ್ಯಗಳಿಗೆ ನೀರು ಅಗತ್ಯವಾಗಿ ಬೇಕು. ನೀರಿಲ್ಲದೇ ಬದುಕುವುದನ್ನು ಊಹೆ ಮಾಡುವುದಕ್ಕೂ ಅಸಾಧ್ಯ. ಆದರೆ ಬೇಸಿಗೆಯೂ ಆರಂಭವಾಗುತ್ತಿದ್ದಂತೆ ಎಲ್ಲೆಡೆ ನೀರಿನ ಹಾಹಾಕಾರವು ಶುರುವಾಗುತ್ತದೆ. ಈ ಸಮಯದಲ್ಲಿ ಕುಡಿಯಲು ನೀರಿಲ್ಲದೆ ಒದ್ದಾಡುವವರು ಇದ್ದಾರೆ. ಈ ನೀರಿನ ಮಹತ್ವವನ್ನು ಸಾರುವ ಸಲುವಾಗಿ ಪ್ರತಿ ವರ್ಷ ಮಾರ್ಚ್ ೨೨ ರಂದು ವಿಶ್ವ ಜಲ ದಿನವನ್ನು ಆಚರಿಸಲಾಗುತ್ತದೆ. ಈ ಪೃಥ್ವಿಯ ಮೇಲಿರುವ ಸಕಲ ಜೀವ ರಾಶಿಗಳಿಗೆ ಆಹಾರ ಹಾಗೂ ಗಾಳಿ ಎಷ್ಟು ಮುಖ್ಯವೋ ಅಷ್ಟೇ ಮುಖ್ಯ ಈ ನೀರು ಕೂಡ. ಆದರೆ ಈ ಮನುಷ್ಯ…

Read More

ಕಸಾಪದಿಂದ ಜಿಲ್ಲಾ ಸಮ್ಮೇಳನದ ಸರ್ವಾಧ್ಯಕ್ಷ ಆಹ್ವಾನ ಸ್ವೀಕರಿಸಿದ ಡಾ.ಐಹೊಳ್ಳಿ ಅಭಿಮತ ವಿಜಯಪುರ: ಜಿಲ್ಲೆಯು ಕನ್ನಡ ನಾಡು- ನುಡಿ, ಕಲೆ-ಸಂಸ್ಕೃತಿಗೆ ಅಪಾರವಾದ ಕೊಡುಗೆ ನೀಡಿದೆ. ವಚನ ಸಾಹಿತ್ಯ ಮತ್ತು ಜಾನಪದ ಸಾಹಿತ್ಯ ಜಿಲ್ಲೆಯನ್ನು ಶ್ರೀಮಂತಗೋಳಿಸಿವೆ ಎಂದು ಡಾ. ವಿ ಡಿ ಐಹೊಳ್ಳಿ ಹೇಳಿದರು.ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ೧೯ ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸವಾ೯ಧ್ಯಕ್ಷರಾಗಿ ಆಯ್ಕೆಯಾದ ಡಾ ವ್ಢಿ ಡಿ ಐಹೊಳ್ಳಿ ಅವರು ಆವ್ಹಾನ ಹಾಗೂ ಗೌರವ ಸ್ವೀಕರಿಸಿ ಮಾತನಾಡಿದರು.ನಾನು ಸಮ್ಮೇಳನದ ಸವಾ೯ಧ್ಯಕ್ಷರಾಗಿ ಆಯ್ಕೆಯಾಗಿದ್ದು ಅತ್ಯಂತ ಸಂತಸದ ವಿಷಯ. ಜಿಲ್ಲೆಯಾದ್ಯಂತ ಸಾಹಿತ್ಯ ಚಟುವಟಿಕೆಗಳು ನಿರಂತರವಾಗಿ ಸಾಗಬೇಕು. ಹೊಸ ಪ್ರತಿಭೆಗಳಿಗೆ ಅವಕಾಶ ಹಾಗು ಪ್ರೋತ್ಸಾಹ ಅಗತ್ಯ ಎಂದರು.ಸವಾ೯ಧ್ಯಕ್ಷರಿಗೆ ಆವ್ಹಾನ ನೀಡಿ ಸನ್ಮಾನಿಸಿದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಹಾಸಿಂಪೀರ ವಾಲಿಕಾರ ಮಾತನಾಡಿ, ಬಹುಮುಖ ವ್ಯಕ್ತಿತ್ವ ಹೊಂದಿರುವ ಡಾ ವ್ಹಿ ಡಿ ಐಹೊಳ್ಳಿಯವರು ಶಿಕ್ಷಣ. ಸಾಹಿತ್ಯ, ಸಂಶೋಧನೆ ಹಾಗು ಗ್ರಂಥ ಸಂಪಾದನೆಯಲ್ಲಿ ಅಪಾರ ಸೇವೆ ಮಾಡಿದ ಅನುಭವಿಗಳು. ಕನ್ನಡ ಸಾಹಿತ್ಯ ಪರಿಷತ್ತಿನ…

Read More

ಬಸವನಬಾಗೇವಾಡಿ: ಪಟ್ಟಣದ ಪುರಸಭೆ ಮಾಜಿ ಅಧ್ಯಕ್ಷ ಸಂಜೀವ ಕಲ್ಯಾಣಿ ಅವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಪಕ್ಷದ ಪರಿಶಿಷ್ಟ ಜಾತಿ ವಿಭಾಗದ ರಾಜ್ಯಾಧ್ಯಕ್ಷ ಧರ್ಮಸೇನ ಅವರ ಆದೇಶ ಮೇರೆಗೆ ವಿಜಯಪುರ ಜಿಲ್ಲಾ ಕಾಂಗ್ರೆಸ್ ಪಕ್ಷದ ಪರಿಶಿಷ್ಟ ಜಾತಿ ವಿಭಾಗದ ಪ್ರಧಾನ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾಗಿದೆ. ಇವರು ಕಾಂಗ್ರೆಸ ಸಮಿತಿಗಳ ಮಾರ್ಗದರ್ಶನದಲ್ಲಿ ತಮ್ಮ ಸ್ಥಳೀಯ ನಾಯಕರ ಸಹಯೋಗದಲ್ಲಿ ಪಕ್ಷದ ಸಂಘಟನೆ ಮತ್ತು ಬಲವರ್ಧನೆಗೆ ಕಾರ್ಯೋನ್ಮುಖರಾಗಬೇಕೆಂದು ಜಿಲ್ಲಾ ಕಾಂಗ್ರೆಸ ಪಕ್ಷದ ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷ ರಮೇಶ ಗುಬ್ಬೇವಾಡ ನೀಡಿದ ನೇಮಕ ಆದೇಶ ಪತ್ರದಲ್ಲಿ ತಿಳಿಸಲಾಗಿದೆ.

Read More

ಬಸವನಬಾಗೇವಾಡಿ: ತಾಲೂಕಿನಲ್ಲಿ ಮೋಸ ಮಾಡುವ ಆಧಾರ ಕಾರ್ಡ್ ಕೇಂದ್ರಗಳ ಮೇಲೆ ತಹಸೀಲ್ದಾರರು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಕರವೇ ಸ್ವಾಭಿಮಾನಿ ಬಣದ ಜಿಲ್ಲಾ ಉಸ್ತುವಾರಿ ಅಧ್ಯಕ್ಷ ರಾಜಶೇಖರ ಹುಲ್ಲೂರ,ಪದಾಧಿಕಾರಿಗಳು ಗ್ರೇಡ್-೨ ತಹಸೀಲ್ದಾರ ಜಿ.ಎಸ್.ನಾಯಕ ಅವರಿಗೆ ಶುಕ್ರವಾರ ಮನವಿ ಸಲ್ಲಿಸಿದರು.ಅವರು ಸಲ್ಲಿಸಿದ ಮನವಿಯಲ್ಲಿ ರಾಜ್ಯದಲ್ಲಿ ಶಾಲೆಯ ಮಕ್ಕಳ ಹೆಸರು ಎಸ್ಟಿಎಸ್ ದಾಖಲಾತಿ ಪ್ರಕಾರ ಆಧಾರ ಕಾರ್ಡ್ನಲ್ಲಿಯೂ ಇರಬೇಕು. ಇದರಿಂದಾಗಿ ಆಧಾರ ಕಾರ್ಡ್ನಲ್ಲಿ ಮಕ್ಕಳು ಹೆಸರು, ತಂದೆಯ ಹೆಸರು, ಅಡ್ಡಹೆಸರು ಸೇರಿದಂತೆ ಏನಾದರೂ ತಪ್ಪಾಗಿದ್ದರೆ ಆಧಾರ ಕಾರ್ಡ್ ತಿದ್ದುಪಡಿ ಮಾಡಿಕೊಳ್ಳಲು ಶಾಲೆಯ ಮುಖ್ಯಗುರುಗಳು ಪಾಲಕರಿಗೆ ಹೇಳುತ್ತಾರೆ. ಅದರಂತೆ ಪಾಲಕರು ತಮ್ಮ ತಮ್ಮ ಮಕ್ಕಳ ಆಧಾರ ಕಾರ್ಡ್ ತಿದ್ದುಪಡಿ ಮಾಡಿಕೊಳ್ಳಲು ಆಧಾರ ಕಾರ್ಡ್ ಕೇಂದ್ರಗಳಿಗೆ ಶಾಲೆಯ ದಾಖಲೆಯನ್ನು ಮುಖ್ಯಗುರುಗಳಿಂದ ಬರೆಸಿಕೊಂಡು ಹೋಗುತ್ತಾರೆ. ಪಾಲಕರು ಇದನ್ನು ತೆಗೆದುಕೊಂಡು ಹೋದಾಗ ಆಧಾರ ಕಾರ್ಡ್ ಕೇಂದ್ರದವರು ಇದನ್ನು ಪ್ರಿಂಟ್ ಮಾಡಿ ಮತ್ತೆ ಶಾಲೆಯ ಮುಖ್ಯಗುರುಗಳಿಂದ ಸಹಿ ಮಾಡಿಸಿಕೊಂಡು ಬರಲು ಹೇಳುತ್ತಾರೆ. ಆಗ ಪಾಲಕರಿಂದ ರೂ. ೧೦೦ ತೆಗೆದುಕೊಳ್ಳುತ್ತಾರೆ. ಪಾಲಕರು ಮತ್ತೆ ಮುಖ್ಯಗುರುಗಳಿಂದ…

Read More

ಬಸವನಬಾಗೇವಾಡಿ: ಮೇ.7 ರಂದು ನಡೆಯಲಿರುವ ವಿಜಯಪುರ ಮತಕ್ಷೇತ್ರದ ಲೋಕಸಭಾ ಚುನಾವಣೆಯಲ್ಲಿ ಮುಕ್ತ, ನ್ಯಾಯಸಮ್ಮತ, ಪಾರದರ್ಶಕವಾಗಿ ಮತದಾನ ನಡೆಯುವ ನಿಟ್ಟಿನಲ್ಲಿ ಬಸವನಬಾಗೇವಾಡಿ ಮತಕ್ಷೇತ್ರದಲ್ಲಿ ಅಗತ್ಯ ಸಿದ್ದತೆ ಮಾಡಿಕೊಳ್ಳಲಾಗುತ್ತಿದೆ. ಇದಕ್ಕೆ ಪ್ರತಿಯೊಬ್ಬರ ಸಹಕಾರ ಅಗತ್ಯವಾಗಿದೆ ಎಂದು ಆಲಮಟ್ಟಿ ಯುಕೆಪಿ ಭೂಸ್ವಾಧಿನಾಧಿಕಾರಿ, ಬಸವನಬಾಗೇವಾಡಿ ವಿಧಾನಸಭಾ ಮತಕ್ಷೇತ್ರದ ಸಹಾಯಕ ಚುನಾವಣಾಧಿಕಾರಿ ಎಂ.ಗಂಗಪ್ಪ ಹೇಳಿದರು.ಪಟ್ಟಣದ ತಹಸೀಲ್ದಾರ ಕಚೇರಿಯಲ್ಲಿ ಶುಕ್ರವಾರ ಅಖಂಡ ತಾಲೂಕಿನ ಪತ್ರಿಕೆ ವರದಿಗಾರರ ಹಾಗೂ ವಿಡಿಯೋ ಮಾಧ್ಯಮದವರ ಸಭೆಯಲ್ಲಿ ಮಾತನಾಡಿದ ಅವರು, ಚುನಾವಣೆಯಲ್ಲಿ ಯಾವುದೇ ಅಹಿತಕರ ಘಟನೆಗಳು ಜರುಗದಂತೆ ಮುಂಜಾಗ್ರತೆ ವಹಿಸಲಾಗುವದು. ನಮ್ಮ ವಿಧಾನಸಭಾ ಮತಕ್ಷೇತ್ರದಲ್ಲಿ ಹೆಚ್ಚು ಮತದಾನವಾಗಲು ವಿವಿಧ ಜಾಗೃತಿ ಜಾಥಾ ಕಾರ್ಯಕ್ರನಗಳನನ್ನು ಆಯೋಜನೆ ಮಾಡಲಾಗುವದು. ಮಾ.16 ರಿಂದ ಚುನಾವಣೆ ನೀತಿಸಂಹಿತೆ ಜಾರಿ ಬಂದಿರುವದರಿಂದ ಯಾರೂ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ನೋಡಿಕೊಳ್ಳಬೇಕು. ಯಾರಾದರೂ ನೀತಿ ಸಂಹಿತೆ ಉಲ್ಲಂಘಿಸಿದರೆ ಅಂತಹವರ ಮೇಲೆ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವದು. ಈಗಾಗಲೇ ಕೊಲ್ಹಾರ ಯುಕೆಪಿ ಬ್ರಿಜ್, ಅರಳದಿನ್ನಿ ಕ್ರಾಸ್, ಯಲಗೂರ ಕ್ರಾಸ್ ನಲ್ಲಿ ಚೆಕ್ ಪೋಸ್ಟ್ ಸ್ಥಾಪಿಸಲಾಗಿದೆ ಎಂದರು.ರೂ.50 ಸಾವಿರಕ್ಕಿಂತ ಹೆಚ್ಚಿನ…

Read More