Subscribe to Updates
Get the latest creative news from FooBar about art, design and business.
Author: editor.udayarashmi@gmail.com
ದಶಕಗಳಿಂದ ನೆನೆಗುದಿಗೆ ಬಿದ್ದಿದ್ದ ಸೇತುವೆ ರಿಪೇರಿ ಯೋಜನೆಗೆ ಕೊನೆಗೂ ಚಾಲನೆ | ಗ್ರಾಮಸ್ಥರ ಹಲವು ವರ್ಷಗಳ ಪ್ರತಿಭಟನೆ ಫಲಪ್ರದ ಉದಯರಶ್ಮಿ ದಿನಪತ್ರಿಕೆ ವರದಿ: ಗುರು ಹಿರೇಮಠಆಲಮೇಲ: ವಿಜಯಪುರ ಮತ್ತು ಕಲಬುರಗಿ ಜಿಲ್ಲೆಗಳ ಪ್ರಮುಖ ಸಂಪರ್ಕ ಕೊಂಡಿಯಾಗಿರುವ, ಭೀಮಾ ನದಿಗೆ ಅಡ್ಡಲಾಗಿ ನಿರ್ಮಿಸಲಾದ ಐತಿಹಾಸಿಕ “ದೇವಣಗಾಂವ ಸೇತುವೆ”ಯ ದುರಸ್ತಿ ಕಾರ್ಯಕ್ಕೆ ಕೊನೆಗೂ ಚಾಲನೆ ಸಿಕ್ಕಿದೆ. ದಶಕಗಳಿಂದ ನೆನೆಗುದಿಗೆ ಬಿದ್ದಿದ್ದ ಈ ಸೇತುವೆ ರಿಪೇರಿ ಯೋಜನೆಗೆ ಸದ್ಯ ಚಾಲನೆ ದೊರೆತಿದೆ.65 ವರ್ಷ ಹಳೆಯದಾದ ಈ ಸೇತುವೆಯ ಮೇಲ್ಭಾಗ ಸಂಪೂರ್ಣ ಹಾಳಾಗಿತ್ತು ಸಂಚಾರಕ್ಕೆ ಯೋಗ್ಯವಾಗಿರಲಿಲ್ಲ. ಕಳೆದ ಹಲವು ವರ್ಷಗಳಿಂದ ಗ್ರಾಮಸ್ಥರು ಪ್ರತಿಭಟನೆ ನಡೆಸುತ್ತಲೇ ಬಂದಿದ್ದರು. ಇದನ್ನು ಗಂಭೀರವಾಗಿ ಪರಿಗಣಿಸಿದ ಶಾಸಕ ಅಶೋಕ ಮನಗೂಳಿ ಅವರು, ಇಲಾಖೆ ಮೇಲೆ ಒತ್ತಡ ತಂದು ಅನುದಾನ ಬಿಡುಗಡೆಗೊಳಿಸಿ ಕಾಮಗಾರಿಗೆ ಚಾಲನೆ ನೀಡುವಲ್ಲಿ ಯಶಸ್ವಿಯಾಗಿದ್ದಾರೆ. “ಜೀವ ಕೈಯಲ್ಲಿ ಹಿಡಿದು ಸಂಚರಿಸುತ್ತಿದ್ದ ನಮಗೆ ಈಗ ನೆಮ್ಮದಿ ಸಿಕ್ಕಿದೆ” ಎಂದು ಸ್ಥಳೀಯರು ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ.ವಿಜಯಪುರ, ಕಲಬುರಗಿ ಗಡಿ ರೇಖೆಯಾಗಿರುವ ಈ ಸೇತುವೆ ದುರಸ್ತಿನಿ ನಿಮಿತ್ಯ…
ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಪ್ರಪಂಚದಲ್ಲಿ ಪ್ರಜಾಪ್ರಭುತ್ವ ಯಶಸ್ವಿಯಾಗಿದ್ದರೇ ಅದಕ್ಕೆ ಕಾರಣ ಸಂವಿಧಾನ ಎಂದು ಅಭಿಮಾನದಿಂದ ಹೇಳಬಹುದಾಗಿದೆ ಎಂದು ಇಂಡಿ ಕ್ಷೇತ್ರದ ಶಾಸಕ ಯಶವಂತರಾಯಗೌಡ ಪಾಟೀಲ ಹೇಳಿದರು.ಪಟ್ಟಣದ ಬಿ.ಎಲ್.ಡಿ.ಇ ಸಂಸ್ಥೆಯ ಹಳೆಯ ಪ್ರೌಢಶಾಲಾ ಆವರಣದಲ್ಲಿ ಜರುಗಿದ ಸಂವಿಧಾನ ಜಾಗೃತಿ ಸಮಾವೇಶ ಹಾಗೂ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಸಂವಿಧಾನಕ್ಕೆ ಚ್ಯುತಿ ತರುವಂತ ಕಾರ್ಯವನ್ನು ನಾಗರಿಕ ಸಮಾಜ ಯಾವುದೇ ಕಾರಣಕ್ಕೂ ಎಂದಿಗೂ ಒಪ್ಪುವದಿಲ್ಲ. ಆದ್ದರಿಂದ ಸಂವಿಧಾನವನ್ನು ಎಲ್ಲರೂ ಅರಿಯುವುದು ಅಗತ್ಯವಾಗಿದೆ ಎಂದರು.ಸಿಂದಗಿ ಮತಕ್ಷೇತ್ರದ ಶಾಸಕ ಅಶೋಕ ಮನಗೂಳಿ ಮಾತನಾಡಿ, ಸಂವಿಧಾನ ಪೀಠಿಕೆಯನ್ನು ಅರಿತಾಗ ಮಾತ್ರ ಸಾಮಾಜಿಕ ನ್ಯಾಯದ ಮಹತ್ವ ತಿಳಿಯಬಹುದಾಗಿದೆ. ಸಮಾಜದಲ್ಲಿ ತುಳಿತಕ್ಕೆ ಒಳಗಾದವರ ಅಭಿವೃದ್ಧಿಗಾಗಿ ಇಂಥ ಜಾಗೃತಿ ಸಮಾವೇಶಗಳು ಅಗತ್ಯವಾಗಿವೆ ಎಂದರು.ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಡಾ.ಪ್ರಭುಗೌಡ ಲಿಂಗದಳ್ಳಿ(ಚಬನೂರ) ಮಾತನಾಡಿ, ದೇಶದ ಸಂವಿಧಾನವನ್ನು ಅರಿತುಕೊಂಡಾಗ ಮಾತ್ರ ನಾವು ಪ್ರಜಾಪ್ರಭುತ್ವದಲ್ಲಿ ಯಶಸ್ವಿಯಾಗಲು ಸಾಧ್ಯ. ದೇಶದಲ್ಲಿ ಸಮಾನವಾಗಿ ಎಲ್ಲರೂ ಬಾಳುವಂತಾಗಬೇಕು ಆಗ ಮಾತ್ರ ಸಂವಿಧಾನ ರಚನೆಯ ಮುಖ್ಯ ಉದ್ದೇಶ ಇಡೇರಿದಂತಾಗುತ್ತದೆ ಎಂದರು.ಅಧ್ಯಕ್ಷತೆ ವಹಿಸಿದ ಕರ್ನಾಟಕ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜೀವನ ಎಂಬ ರಥದಲ್ಲಿ ಭಕ್ತಿ ಎಂಬ ಕೀಲಿ ಪ್ರತಿಯೊಬ್ಬರಿಗೂ ಅತೀ ಮುಖ್ಯ ಎಂದು ಅಪರ ಜಿಲ್ಲಾಧಿಕಾರಿ ಡಾ.ಔದ್ರಾಮ ಅವರು ಹೇಳಿದರು.ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದಲ್ಲಿ ಆಯೋಜಿಸಿದ ದೇವರ ದಾಸಿಮಯ್ಯ ಅವರ ಜಯಂತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಅವರು ಮಾತನಾಡಿದರು. ಇಂದಿನ ಒತ್ತಡದ ಬದುಕಿನಲ್ಲಿ ಬಹುತೇಕರು ಭಕ್ತಿಮಾರ್ಗದಿಂದ ವಿಮುಖರಾಗುತ್ತಿರುವುದು ಕಳವಳಕಾರಿ ಸಂಗತಿಯಾಗಿದ್ದು, ಅದೆಷ್ಟೇ ಒತ್ತಡ ಇದ್ದರೂ ಪ್ರತಿಯೊಬ್ಬರೂ ಭಕ್ತಿ ಮಾರ್ಗವನ್ನು ಮರೆಯಬಾರದು ಎಂದು ಡಾ. ಔದ್ರಾಮ ಹೇಳಿದರು.ಎತ್ತಿನ ಬಂಡಿಗೆ ಕೀಲು ಇಲ್ಲದಿದ್ದರೆ ಅದು ಸರಾಗವಾಗಿ ಚಲಿಸುವುದಿಲ್ಲ ಅದರಂತೆ ಪ್ರತಿಯೊಬ್ಬರಿಗೂ ಭಕ್ತಿ ಎಂಬ ಕೀಲು ಇರಬೇಕು. ಭಕ್ತಿಯನ್ನು ಅಳವಡಿಸಿಕೊಂಡರೆ ಜೀವನ ಹೂವಿನಷ್ಟೇ ಹಗುರ ಹಾಗೂ ಸುಮಧುರವಾಗುತ್ತದೆ ಎಂದು ಡಾ. ಔದ್ರಾಮ ಭಕ್ತಿಯ ಮಹತ್ವ ಉಣಬಡಿಸಿದರು.ಬಿ.ಎಂ.ನೂಲವಿ ಮಾತನಾಡಿದರು.ಸಂತೋಷಕುಮಾರ ಎಸ್. ಬಂಡೆ ಉಪನ್ಯಾಸ ನೀಡಿದರು.ಈ ಕಾರ್ಯಕ್ರಮದಲ್ಲಿ ತೋಟಗಾರಿಕೆ ಇಲಾಖೆಯ ಜಂಟಿ ನಿರ್ದೇಶಕರಾದ ರಾಹುಲ್ ಭಾವಿದೊಡ್ಡಿ, ಮಹಾನಗರ ಪಾಲಿಕೆಯ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯಲ್ಲಿ ಕಾರ್ಯನಿರ್ವಹಿಸದೆ ಇರುವ ಹಾಗೂ ಗುಂಪುಗಳನ್ನು ರಚಿಸದೆ ಇರುವ ಚೀಟಿ ಕಂಪನಿಗಳನ್ನು ಕಪ್ಪು ಪಟ್ಟಿಗೆ ಸೇರಿಸಲಾಗುವುದು ಎಂದು ಸಹಕಾರ ಸಂಘಗಳ ಉಪನಿಬಂಧಕರು ತಿಳಿಸಿದ್ದಾರೆ.ಈ ಪತ್ರಿಕಾ ಪ್ರಕಟಣೆ ಜಾರಿಯಾದ ೦೭ ದಿನದಲ್ಲಿ ಸಂಬಂಧಪಟ್ಟ ಚೀಟಿ ಕಂಪನಿಯ ಪೋರಮನ್ಗಳು ಆಕ್ಷೇಪಣೆಗಳಿದ್ದರೆ ನೇರವಾಗಿ ಸಹಕಾರ ಸಂಘಗಳ ಉಪನಿಬಂಧಕರ ಕಚೇರಿಗೆ ಸಂಪರ್ಕಿಸಬಹುದಾಗಿದೆ.ಒಂದು ವೇಳೆ ಯಾವುದೇ ಆಕ್ಷೇಪಣೆಗಳು ಇಲ್ಲದಿದ್ದರೆ ಗುಂಪುಗಳ ರಚಿಸದೆ ಇರುವಂತಹ ಕಂಪನಿಗಳ ಹೆಸರನ್ನು ಇಲಾಖೆಯಲ್ಲಿ ಕಪ್ಪು ಪಟ್ಟಿಗೆ ಸೇರಿಸಲಾಗುವುದು ಎಂದವರು ತಿಳಿಸಿದ್ದಾರೆ.ವಿಜಯಪುರ ಜಿಲ್ಲೆಯಲ್ಲಿ ಒಟ್ಟು ೩೮ ಚೀಟಿ ನಿಧಿಗಳ ಕಂಪನಿಗಳಿದ್ದು ಅವುಗಳ ಪೈಕಿ ಕೇವಲ ೧೮ ಚೀಟಿ ಕಂಪನಿಗಳು ಕಾರ್ಯನಿರತವಾಗಿರುತ್ತವೆ. ೨೦ ಚೀಟಿ ಕಂಪನಿಗಳು ಕಾರ್ಯನಿರ್ವಹಿಸುತ್ತಿಲ್ಲ. ಹಾಗಾಗಿ ಚೀಟಿ ಅಧಿನಿಯಮ ೧೯೮೨ ಪ್ರಕರಣ ೨೦(೧)ರ ಪ್ರಕರಣ ಚೀಟಿ ೪ರಡಿಯಲ್ಲಿ ಈ ಕಾರ್ಯಾಲಯದ ಪೂರ್ವಾನುಮೋದನೆ ಪಡೆದು ಚಾಲ್ತಿಯಲ್ಲಿರುವ ಗುಂಪುಗಳ ಮಾಹಿತಿ ಹಾಗೂ ಮತ್ತು ಮುಕ್ತಾಯಗೊಂಡ ಗುಂಪುಗಳ ಮಾಹಿತಿ ಕುರಿತು ೩ ವರ್ಷದ ಅಢಾವೆ ಪತ್ರಿಕೆಯ ಮಾಹಿತಿ ಕೇಳಿದ್ದು ಇರುತ್ತದೆ ಅದರಂತೆ ಕಾರ್ಯನಿರ್ವಹಿಸುತ್ತಿರುವ ಚೀಟಿ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಎಸ್.ಎಸ್.ಎಲ್.ಸಿ ಪರೀಕ್ಷೆ ಯಶಸ್ವಿ ಹಾಗೂ ಪಾರದರ್ಶಕವಾಗಿ ನಡೆಯುವ ನಿಟ್ಟಿನಲ್ಲಿ ವಿಜಯಪುರ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಿಷಿ ಆನಂದ ಅವರು ಸೋಮವಾರ ನಗರದ ವಿವಿಧ ಪರೀಕ್ಷಾ ಕೇಂದ್ರಗಳಿಗೆ ಹಾಗೂ ಪರೀಕ್ಷಾ ವೆಬ್ ಕಾಸ್ಟಿಂಗ್ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಮಿನಿ ಸಭಾಂಗಣದಲ್ಲಿ ಸ್ಥಾಪಿಸಲಾದ ಜಿಲ್ಲಾ ವೆಬ್ ಕಾಸ್ಟಿಂಗ್ ಕೇಂದ್ರಕ್ಕೆ ಭೇಟಿ ನೀಡಿ, ಜಿಲ್ಲೆಯಾದ್ಯಂತ ನಡೆಯುತ್ತಿರುವ ಪರೀಕ್ಷೆಗಳ ನೇರ ವೀಕ್ಷಣಾ ವ್ಯವಸ್ಥೆಯನ್ನು ಪರಿಶೀಲಿಸಿದರು. ತಾಂತ್ರಿಕ ವ್ಯವಸ್ಥೆಗಳು ದೋಷ ರಹಿತವಾಗಿ ಕಾರ್ಯ ನಿರ್ವಹಿಸುವಂತೆ ನಿರಂತರ ನಿಗಾವಹಿಸಬೇಕು ಎಂದು ಸೂಚಿಸಿದರು.ಈ ಸಂದರ್ಭದಲ್ಲಿ ಎಸ್ಎಸ್ಎಲ್ಸಿ ಜಿಲ್ಲಾ ನೋಡೆಲ್ ಅಧಿಕಾರಿಗಳಾದ ಟಿ.ಎಸ್. ಕೊಲ್ಹಾರ, ಜಿಲ್ಲೆಯ ಎಲ್ಲಾ ವಲಯಗಳ ಮುಖ್ಯಸ್ಥರು ಹಾಗೂ ಪರೀಕ್ಷಾ ವೆಬ್ ಕಾಸ್ಟಿಂಗ್ ವೀಕ್ಷಕರು, ಪರೀಕ್ಷಾ ಕೇಂದ್ರಗಳ ಮೇಲ್ವಿಚಾರಕರು, ಪೋಲಿಸ್ ಸಿಬ್ಬಂದಿ, ಆರೋಗ್ಯ ಕಾರ್ಯಕರ್ತರು ಹಾಗೂ ಇತರೆ ಸಿಬ್ಬಂದಿಯವರು ಉಪಸ್ಥಿತರಿದ್ದರು.
ಉದಯರಶ್ಮಿ ದಿನಪತ್ರಿಕೆ ಹೆಚ್ ಡಿ ಕೋಟೆ: ಪಟ್ಟಣದ ಸಾರಿಗೆ ಬಸ್ ನಿಲ್ದಾಣದ ಕಾಂಪೌಂಡ್ ಪಕ್ಕದಲ್ಲಿ ಆಟೋ ನಿಲ್ದಾಣಕ್ಕಾಗಿ ಬೀದಿ ಬದಿ ಅಂಗಡಿಗಳ ತೆರವು ಮಾಡಲು ಮುಂದಾಗಿರುವುದಕ್ಕೆ ಬೀದಿ ಬದಿ ವ್ಯಾಪಾರಿಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಒಂದು ವೇಳೆ ಅಂಗಡಿಗಳ ತೆರವು ಮಾಡಲು ಮುಂದಾದ್ರೆ ವಿಷ ಕುಡಿದು ಪ್ರಾಣ ಬಿಡುವುದಾಗಿ ಎಚ್ಚರಿಕೆ ನೀಡಿದ್ದಾರೆ.ಬೀದಿ ಬದಿ ಅಂಗಡಿಗಳನ್ನು ತೆರವು ಮಾಡದಂತೆ ಸೋಮವಾರ ಪುರಸಭೆ ಮುಖ್ಯಧಿಕಾರಿ ಸುರೇಶ್ ಅವ್ರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ.ಬೀದಿಬದಿ ವ್ಯಾಪಾರಿ ಮಹಾದೇವಮ್ಮ ಮಾತನಾಡಿ. ಕಳೆದ 25-30ವರ್ಷಗಳಿಂದ ಬಸ್ ನಿಲ್ದಾಣದ ಸಮೀಪದಲ್ಲೇ ಹೂ, ಹಣ್ಣು ಅಂಗಡಿ ಇಟ್ಟುಕೊಂಡು ಜೀವನ ಮಾಡಿಕೊಂಡು ಬರುತ್ತಿದ್ದೀವಿ. ಇದನ್ನೇ ನಂಬಿಕೊಂಡು ಬ್ಯಾಂಕ್ ಗಳಲ್ಲಿ ಸಾಲ ಪಡೆದುಕೊಂಡಿದ್ದೀವಿ. ವ್ಯಾಪಾರದಲ್ಲಿ ಸಿಗುವ ಅಷ್ಟೋ ಇಷ್ಟೋ ಹಣದಿಂದಲೇ ಮಕ್ಕಳ ವಿದ್ಯಾಭ್ಯಾಸ, ಮನೆ ಖರ್ಚು ಸರಿದೂಗಿಸಿಕೊಂಡು ಬರುತ್ತಿದ್ದೀವಿ. ಆದರೆ ಇದೀಗ ಏಕಾಏಕಿ, ಯಾವುದೇ ನೋಟೀಸ್ ನೀಡದೆ ದಬ್ಬಾಳಿಕೆ ಮಾಡಿ ಬೀದಿಬದಿ ಅಂಗಡಿಗಳ ತೆರವಿಗೆ ಮುಂದಾಗಿದ್ದಾರೆ. ಇದು ಸರಿಯಾದ ಕ್ರಮವಲ್ಲ. ಬೀದಿಬದಿ ಅಂಗಡಿಗಳ ತೆರವು ಮಾಡಬೇಕಾದ್ರೆ,…
೩ ದಿನದೊಳಗೆ ಜಂಟಿ ಸಮೀಕ್ಷೆ ನಡೆಸಿ ವರದಿ ಸಲ್ಲಿಸಲು ವಿಜಯಪುರ ಜಿಲ್ಲಾಧಿಕಾರಿ ಡಾ.ಆನಂದ ಕೆ. ಸೂಚನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಇತ್ತೀಚಿಗೆ ಬೀಸಿದ ಬಿರುಗಾಳಿ ಹಾಗೂ ಆಲಿಕಲ್ಲು ಮಳೆಯಿಂದಾಗಿ ಕೃಷಿ, ತೋಟಗಾರಿಕಾ ಬೆಳೆ ಹಾನಿಗೆ ಸಂಬಂಧಿಸಿದಂತೆ ಜಂಟಿ ಸಮೀಕ್ಷೆ ಕೈಗೊಂಡು ಮೂರು ದಿನದೊಳಗಾಗಿ ವರದಿ ಸಲ್ಲಿಸಬೇಕು ಎಂದು ಜಿಲ್ಲಾಧಿಕಾರಿಗಳಾದ ಡಾ. ಆನಂದ ಕೆ. ಅವರು ಅಧಿಕಾರಿಗಳಿಗೆ ಸೂಚಿಸಿದರು.ಕೃಷಿ, ತೋಟಗಾರಿಕೆ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಹಾಗೂ ಬೆಳೆ ವಿಮಾ ಕಂಪನಿಯ ಅಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಅವರು ಈ ಸೂಚನೆ ನೀಡಿದರು. ಕಂದಾಯ, ಕೃಷಿ ಹಾಗೂ ತೋಟಗಾರಿಕೆ ಇಲಾಖೆ ಅಧಿಕಾರಿಗಳ ತಂಡ ರಚಿಸಿ ಹಾನಿಗೊಳಗಾದ ಕ್ಷೇತ್ರಗಳಿಗೆ ಭೇಟಿ ನೀಡಿ ನಿಖರವಾದ ಸಮೀಕ್ಷೆ ಕೈಗೊಂಡು ೩ ದಿನಗೊಳಗಾಗಿ ಜಂಟಿ ಸಮೀಕ್ಷೆ ನಡೆಸಿ ವರದಿಯನ್ನು ನೀಡಬೇಕು ಎಂದು ಸೂಚಿಸಿದರು.ಇತ್ತೀಚಿನ ದಿನಗಳಲ್ಲಿ ಬಿದ್ದ ಮಳೆ, ಗಾಳಿ ಹಾಗೂ ಆಲಿಕಲ್ಲು ಮಳೆಯಿಂದಾಗಿ ಕೃಷಿ ಬೆಳೆ ಹಾನಿಗೊಳಗಾದ ರೈತರು ಬೆಳೆ ವಿಮೆ ಮಾಡಿಸಿದ್ದರೆ ಅಂತಹ ರೈತರು ಮುಂದಿನ…
ಉದಯರಶ್ಮಿ ದಿನಪತ್ರಿಕೆ ಆಲಮೇಲ: ಕರ್ನಾಟಕ ರಾಜ್ಯ ಸಹಕಾರ ಪಟ್ಟಣ ಬ್ಯಾಂಕುಗಳ ಮಹಾಮಂಡಳದ ಶಿಕ್ಷಣ ನಿಧಿ ಸಲಹಾ ಸಮಿತಿಯ ಸದಸ್ಯರಾಗಿ ಅಲಮೇಲದ ಶಿವಕುಮಾರ ಗುಂದಗಿ ನೇಮಗೊಂಡಿದ್ದಾರೆ.ಇತ್ತೀಚಿಗೆ ಕರ್ನಾಟಕ ರಾಜ್ಯ ಸಹಕಾರ ಪಟ್ಟಣ ಬ್ಯಾಂಕುಗಳ ಮಹಾಮಂಡಳದ ಪ್ರಥಮ ನಿರ್ದೇಶಕ ಮಂಡಳಿ ಸಭೆಯಲ್ಲಿ ನಿರ್ದೇಶಕ ಮಂಡಳಿಯು ಶಿಕ್ಷಣ ನಿಧಿ ಸಲಹಾ ಸಮಿತಿಗೆ ಸದಸ್ಯರುಗಳನ್ನು ನೇಮಕ ಮಾಡುವ ಕುರಿತು ಸಭೆಯಲ್ಲಿ ಸುದೀರ್ಘವಾಗಿ ಚರ್ಚಿಸಿ. ಮಹಾಮಂಡಳದ ಶಿಕ್ಷಣ ನಿಧಿ ಸಲಹಾ ಸಮಿತಿಯ ಸದಸ್ಯರನ್ನಾಗಿ ವಿಜಯಪುರ ಜಿಲ್ಲೆಯ ಅಲಮೇಲ ಪಟ್ಟಣದ ಅಲಮೇಲ ಅರ್ಬನ್ ಕೋ ಆಪರೇಟಿವ್ ಬ್ಯಾಂಕಿನ ಅಧ್ಯಕ್ಷ ಶಿವಕುಮಾರ ಗುರುಬಸಪ್ಪ ಗುಂದಗಿ ಅವರನ್ನು ನೇಮಕ ಮಾಡಲಾಯಿತು. ಸೋಮವಾರ ಅಲಮೇಲ ಅರ್ಬನ್ ಕೋ ಆಪರೇಟಿವ್ ಬ್ಯಾಂಕಿನ ಆಡಳಿತ ಮಂಡಳಿ ನಿರ್ದೇಶಕರು ಹಾಗೂ ಸಿಬ್ಬಂದಿ ಶಿವಕುಮಾರ್ ಗುಂದಗಿ ಅವರಿಗೆ ಸನ್ಮಾನಿಸಿ ಅಭಿನಂದಿಸಿದರು.
ವಿಜಯಪುರ ಜಿಲ್ಲಾ ಪಂಚಾಯತಿ ಉಪಕಾರ್ಯದರ್ಶಿ ಪ್ರಕಾಶ ವಡ್ಡರ ಅಧಿಕಾರಿಗಳಿಗೆ ಕಿವಿಮಾತು ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲಾ ಪಂಚಾಯತಿಯ ಉಪಕಾರ್ಯದರ್ಶಿ ಪ್ರಕಾಶ ವಡ್ಡರ ಸೋಮವಾರ ತಿಕೋಟಾ ತಾಲೂಕಿನ ತೊರವಿ ಗ್ರಾಮ ಪಂಚಾಯತಿಗೆ ಭೇಟಿ ನೀಡಿ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿದರು. ಆರಂಭದಲ್ಲಿ ಗ್ರಾಮ ಪಂಚಾಯತಿಗೆ ಭೇಟಿ ನೀಡಿ, ಸಿಬ್ಬಂದಿಗಳಿಗೆ ಕರ ವಸೂಲಾತಿ, ಮನರೇಗಾ ಕೂಲಿಕಾರರ ಇಕೆವೈಸಿ ಸೇರಿದಂತೆ ಇತರೆ ವಿಷಯಗಳಲ್ಲಿ ಗ್ರಾಮ ಪಂಚಾಯತಿಯ ಎಲ್ಲಾ ಸಿಬ್ಬಂದಿಗಳಿಗೆ ಕೆಲಸ ಹಂಚಿಕೆ ಮಾಡಿ ಶೀಘ್ರಗತಿಯಲ್ಲಿ ಪ್ರಗತಿ ಸಾಧಿಸಲು ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚನೆ ನೀಡಿದರು.ಪರಿಶಿಷ್ಟ ಜಾತಿಯ ಜನರಿಗಾಗಿ ಮೀಸಲಿಟ್ಟ ಸ್ಮಶಾನ ಜಾಗದ ಒತ್ತುವರಿ ತೆರವುಗೊಳಿಸಿ ಗ್ರಾಮ ಪಂಚಾಯತಿಯಿಂದ ತಂತಿ ಬೇಲಿ ಅಳವಡಿಸಿರುವದನ್ನು ಪರಿಶೀಲನೆ ಮಾಡಿದರು.ರಸ್ತೆ ಅಗಲೀಕರಣದಲ್ಲಿ ಮನೆ ಕಳೆದುಕೊಂಡ ಜನರಿಗಾಗಿ ಕಾಯ್ದಿರಿಸಿದ ನಿವೇಶನ ಸ್ಥಳಕ್ಕೆ ಭೇಟಿ ಸದರಿ ಸ್ಥಳದಲ್ಲಿ ಯಾವದೇ ರೀತಿಯ ಒತ್ತುವರಿಯಾಗದಂತೆ ನೋಡಿಕೊಳ್ಳಲು ಅಧಿಕಾರಿಗಳಿಗೆ ತಿಳಿಸಿದರು.ನಂತರ ಗ್ರಾಮದ ವಿವಿಧ ಬಡಾವಣೆಗಳಿಗೆ ಭೇಟಿ ನೀಡಿ, ಗ್ರಾಮದ ಜನರು ಯಾವದೇ ಕಾರಣಕ್ಕೂ ಮೂಲಭೂತ ಸೌಕರ್ಯಗಳಿಂದ ವಂಚಿರಾಗಬಾರದು…
ಉದಯರಶ್ಮಿ ದಿನಪತ್ರಿಕೆ ಆಲಮಟ್ಟಿ: ರಂಜಾನ್ ಹಬ್ಬದ ಹಿನ್ನಲೆಯಲ್ಲಿ ಮರುದಿನವಾದ ಭಾನುವಾರ ಆಲಮಟ್ಟಿಯ ಎಲ್ಲಉದ್ಯಾನಗಳು ಪ್ರವಾಸಿಗರಿಂದ ಭರ್ತಿಯಾಗಿದ್ದವು.ಎಲ್ಲಿ ನೋಡಿದರು ಜನ ಸಾಗರವಿತ್ತು.ಆಲಮಟ್ಟಿಯ ವಿಶಾಲವಾದ ರಾಕ್ ಉದ್ಯಾನ, ಕೃಷ್ಣ, ಲವಕುಶ ಹಾಗೂ ಮೊಘಲ್ ಸೇರಿದಂತೆ ಬಹುತೇಕ ಉದ್ಯಾನಗಳಲ್ಲಿ ಹೆಚ್ಚಿನ ಪ್ರವಾಸಿಗರು ಕಂಡು ಬಂದರು.ಹಬ್ಬದ ಮರುದಿನ ಹೆಚ್ಚು:ಪ್ರತಿ ಬಾರಿಯೂ ಹಬ್ಬದ ಮರುದಿನ ಈ ರೀತಿಯ ಪ್ರವಾಸಿಗರ ಸಂಖ್ಯೆ ಅಧಿಕಗೊಳ್ಳುವುದು ಸಾಮಾನ್ಯ ಎನ್ನುತ್ತಾರೆ ಉದ್ಯಾನದಲ್ಲಿ ಕೆಲಸ ನಿರ್ವಹಿಸುವ ಅರಣ್ಯ ಇಲಾಖೆ ಸಿಬ್ಬಂದಿ. ಅದಕ್ಕಾಗಿ ಸಾಕಷ್ಟು ಸಂಖ್ಯೆಯ ಕೆಎಸ್ಐಎಸ್ಎಫ್ ಸಿಬ್ಬಂದಿ, ಅರಣ್ಯ ಇಲಾಖೆಯ ಸಿಬ್ಬಂದಿಗಳು, ದಿನಗೂಲಿಗಳು, ಪೊಲೀಸ್ ಸಹಕಾರದೊಂದಿಗೆ ಕಾರ್ಯನಿರ್ವಹಿಸಿದವು. ಪ್ರತಿ ವರ್ಷವೂ ಸಾಕಷ್ಟು ಸಂಖ್ಯೆಯ ಪ್ರವಾಸಿಗರ ಸಂಖ್ಯೆಯ ಆಗಮನದ ಹಿನ್ನಲೆಯಲ್ಲಿ ಅಗತ್ಯ ಸಿದ್ಧತೆಯನ್ನು ಮಾಡಿಕೊಳ್ಳಲಾಗಿತ್ತು.ಕೆಬಿಜೆಎನ್ಎಲ್ ಕಾರ್ಯನಿರ್ವಾಹಕ ಎಂಜಿನಿಯರ್ ತಾರಾಸಿಂಗ್ ದೊಡಮನಿ ನೇತೃತ್ವದಲ್ಲಿ ಸಭೆ ನಡೆಸಿ ಕೆಬಿಜೆಎನ್ಎಲ್ ಸಿಬ್ಬಂದಿಗಳನ್ನು ನಿಯೋಜಿಸಲಾಗಿತ್ತು.ಕೂಗಾಟ, ನಲಿದಾಟ, ವಿವಿದೆಡೆ ಆಟ, ಮನೋರಂಜನೆಯಲ್ಲಿ ಮುಳುಗಿದ್ದ ದೃಶ್ಯ ಎಲ್ಲೆಡೆ ಕಂಡು ಬಂತು. ವಾಟರ್ ಅಮ್ಯೂಸ್ ಮೆಂಟ್ ಪಾರ್ಕ್ , ಬೋಟಿಂಗ್ ಪ್ರವಾಸಿಗರಿಂದ ತುಂಬಿ ತುಳುಕಿತ್ತು.ಹೆಚ್ಚುವರಿ ಪೊಲೀಸ್ ಸಿಬ್ಬಂದಿ:ಪ್ರತಿ…
