Subscribe to Updates
Get the latest creative news from FooBar about art, design and business.
Author: editor.udayarashmi@gmail.com
ವಿಜಯಪುರ: ಸಾಹಿತ್ಯ ಸಮ್ಮೇಳನದ ಲಾಂಚನ ಜಿಲ್ಲೆಯ ಸಾಂಸ್ಕೃತಿಕ ಪರಂಪರೆ ಪ್ರತಿಬಿಂಬವಾಗಿದೆ. ಸಮ್ಮೇಳನದ ಲಾಂಚನ ಜಿಲ್ಲೆಯ ಚರಿತ್ರೆಯನ್ನು ವಿವರಿಸುತ್ತದೆ. ಹಾಗಾಗಿ ಲಾಂಚನ ಸಮ್ಮೇಳನದ ಆತ್ಮವಿದ್ದಂತೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಕರಾದ ಡಾ ಚಂದ್ರಶೇಖರ್ ಹೊಸಮನಿ ಅಭಿಪ್ರಾಯವ್ಯಕ್ತಪಡಿಸಿದರು.ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಸಭಾಂಗಣದಲ್ಲಿ ೧೯ ನೆಯ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಲಾಂಚನ ಬಿಡುಗಡೆಗೊಳಿಸಿ ಇಲ್ಲಿಯವರೆಗೆ ಸಮ್ಮೇಳನಗಳು ಅರ್ಥಪೂರ್ಣವಾಗಿ ಸಮಾಜಮುಖಿಯಾಗಿ ನಡೆದಿರುವುದು ಇತಿಹಾಸ, ಜಿಲ್ಲೆಯ ಎಲ್ಲ ಕ್ಷೇತ್ರದ ಪ್ರತಿಭೆಗಳಿಗೆ ಪರಿಷತ್ತು ವೇದಿಕೆಯಾಗಿದೆ ಎಂದರು.ಸಭೆಯ ಅಧ್ಯಕ್ಷತೆ ವಹಿಸಿದ ಸರಕಾರಿ ಪಪೂಕಾಲೇಜಿನ ಪ್ರಾಚಾರ್ಯರಾದ ಚಿದಾನಂದ ನಾಟೀಕಾರ ಮಾತನಾಡಿ, ಕನ್ನಡ ಸಾಹಿತ್ಯ ಪರಿಷತ್ತು ನಿರಂತರವಾಗಿ ಸಾಹಿತ್ಯ ಚಟುವಟಿಕೆಗಳನ್ನು ಹಮ್ಮಿಕೊಳ್ಳುತ್ತ ಬಂದಿದೆ. ಕನ್ನಡ ಸಾಹಿತ್ಯ ಕ್ಕೆ ವಿಜಯಪುರ ಜಿಲ್ಲೆಯ ಕೊಡುಗೆ ದೊಡ್ಡದು ಎಂದರು.ಕಸಾಪ ಕೋಶಾಧ್ಯಕ್ಷ ಡಾ ಸಂಗಮೇಶ ಮೇತ್ರಿ ಪ್ರಾಸ್ತಾವಿಕ ಮಾತನಾಡಿದರು.ಮುಖ್ಯ ಅತಿಥಿಯಾಗಿ ಮಾತನಾಡಿದ ಕಸಾಪ ತಾಲೂಕ ಅಧ್ಯಕ್ಷ ಡಾ ಆನಂದ ಕುಲಕರ್ಣಿ ಮಾತನಾಡಿ, ವಿಜಯಪುರ ಜಿಲ್ಲೆ ಧಾರ್ಮಿಕ ಸಾಮರಸ್ಯ ಹಾಗೂ ಸಾಂಸ್ಕೃತಿಕ ದೊರೆ ಎರಡನೆಯ ಇಬ್ರಾಹಿಂ…
ಬಸವನಬಾಗೇವಾಡಿ: ವಿಜಯಪುರ ಲೋಕಸಭೆ ಮತಕ್ಷೇತ್ರದಲ್ಲಿ ಬಿಜೆಪಿ ಬಂಜಾರಾ ಸಮಾಜಕ್ಕೆ ಟಿಕೆಟ್ ನೀಡದೇ ಬಂಜಾರ ಸಮಾಜಕ್ಕೆ ಅನ್ಯಾಯ ಮಾಡಿದೆ ಎಂದು ಬಂಜಾರಾ ಯುವ ಸೇನಾ ಸಂಘದ ಉಪಾಧ್ಯಕ್ಷ ಅಧ್ಯಕ್ಷ ಪುಂಡಲೀಕ ವಾಲು ಜಾಧವ ಹೇಳಿದರು.ಪಟ್ಟಣದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಸಮಾಜದ ಡಾ.ಬಾಬುರಾಜೇಂದ್ರ ನಾಯಕ ಅವರು ಜಿಲ್ಲೆಯ ಜನರ ಸಮಸ್ಯೆಗಳಿಗೆ ಸ್ಪಂದಿಸುತ್ತಾ ವಿಜಯಪುರ ಜಿಲ್ಲೆ ಸಮಗ್ರ ಅಭಿವೃದ್ಧಿಗೆ ಕನಸು ಕಾಣುತ್ತಿರುವ ಇವರನ್ನು ಬಿಜೆಪಿ ಹೈಕಮಾಂಡ್ ಗುರುತಿಸಿ ಟಿಕೆಟ್ ಕೊಡಬೇಕಾಗ್ತಿತು. ಇವರ ಅಭಿವೃದ್ಧಿ ಪರ ಚಿಂತನೆಯನ್ನು ಗುರುತಿಸಿದೇ ನಮ್ಮ ಬಂಜಾರಾ ಸಮಾಜಕ್ಕೆ ಬಿಜೆಪಿ ಅನ್ಯಾಯ ಮಾಡಿದೆ. ಬಿಜೆಪಿಯಿಂದ ಡಾ.ಬಾಬುರಾಜೇಂದ್ರ ನಾಯಕ ಅವರಿಗೆ ಟಿಕೆಟ್ ಸಿಗಬೇಕಾಗಿತ್ತು. ಅವರಿಗೆ ಟಿಕೆಟ್ ಸಿಗದೇ ಇರುವದು ನಮಗೆ ನೋವು ತಂದಿದೆ. ಬಿಜೆಪಿ ನಮ್ಮ ಸಮುದಾಯವನ್ನು ಕಡೆಗಣಿಸುತ್ತಿದೆ. ಈ ಲೋಕಸಭಾ ಚುನಾವಣೆಯಲ್ಲಿ ಜಿಲ್ಲೆಯಲ್ಲಿ ನಮ್ಮ ಸಮಾಜವು ಬಿಜೆಪಿಗೆ ತಕ್ಕಪಾಠ ಕಲಿಸಲಿದೆ ಎಂದು ಎಚ್ಚರಿಸಿದರು.ವೃತ್ತಿಯಲ್ಲಿ ವೈದ್ಯರಾಗಿರುವ ಡಾ.ಬಾಬುರಾಜೇಂದ್ರ ನಾಯಕ ಅವರು ಬಿಜೆಪಿ ತತ್ವ ಸಿದ್ಧಾಂತ ಮೆಚ್ಚಿ ಸಿಪಿಐ ವೃತ್ತಿಗೆ ರಾಜೀನಾಮೆ ಸಲ್ಲಿಸಿ…
ಬಸವನಬಾಗೇವಾಡಿ: ತಾಲೂಕಿನ ದಿಂಡವಾರ ಗ್ರಾಮದ ಸರ್ಕಾರಿ ಕನ್ನಡ ಹೆಣ್ಣುಮಕ್ಕಳ ಹಿರಿಯ ಪ್ರಾಥಮಿಕ ಶಾಲೆಗೆ ಗುತ್ತಿಗೆದಾರ ಮಂಜುನಾಥ ಬೋರಗಿ ಅವರು ಬುಧವಾರ ಕಲರ್ ಪ್ರಿಂಟರ್, ಝರಾಕ್ಸ್ ಮಷಿನ್ ದೇಣಿಗೆ ನೀಡುವ ಮೂಲಕ ತಮ್ಮ ಶಿಕ್ಷಣ ಪ್ರೇಮ ಮೆರೆದಿದ್ದಾರೆ.ಈ ಸಂದರ್ಭದಲ್ಲಿ ಶಾಲೆಯ ಮುಖ್ಯಗುರು ಮುತ್ತು ಅಗ್ನಿ ಮಾತನಾಡಿ, ನಮ್ಮ ಶಾಲೆಗೆ ಶಿಕ್ಷಣ ಪ್ರೇಮಿ ಮಂಜುನಾಥ ಬೋರಗಿ ಅವರು ಶಾಲೆಗೆ ಅಗತ್ಯವಿರುವ ಕಲರ್ ಪ್ರಿಂಟರ್, ಝರಾಕ್ಸ್ ಮಷಿನ್ ಕೊಡುಗೆಯಾಗಿ ನೀಡಿದ್ದು ಶಾಲೆಗೆ ತುಂಬಾ ಸದುಪಯೋಗವಾಗುತ್ತದೆ. ಅವರಿಂದ ಇನ್ನಷ್ಟು ಸಮಾಜಮುಖಿ ಕಾರ್ಯಗಳು ಹೆಚ್ಚು ನಡೆಯುವಂತಾಗಲಿ ಎಂದು ಆಶಯ ವ್ಯಕ್ತಪಡಿಸಿದರು.ಯುವಮುಖಂಡ ವಿಕಾಸ ಜೋಗಿ ಮಾತನಾಡಿ, ಗ್ರಾಮದ ವಿದ್ಯಾರ್ಥಿಗಳ ಶೈಕ್ಷಣಿಕ ಗುಣಮಟ್ಟವನ್ನು ಹೆಚ್ಚಿಸುವಲ್ಲಿ ಶಿಕ್ಷಕರ ಪಾತ್ರ ಹಿರಿದು. ಶಿಕ್ಷಕರು ಪ್ರಾಮಾಣಿಕವಾಗಿ ತಮ್ಮ ಸೇವೆ ಮಾಡುವ ಮೂಲಕ ನಮ್ಮ ಗ್ರಾಮದ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ನೀಡಬೇಕು. ಗ್ರಾಮದ ಪ್ರತಿಭೆಗಳು ಹೊರಹೊಮ್ಮವಂತಾಗಬೇಕು. ಶಾಲೆಗೆ ಹಾಗೂ ಮಕ್ಕಳ ಅನುಕೂಲಕ್ಕೆ ಶಿಕ್ಷಣ ಪ್ರೇಮಿ ಮಂಜುನಾಥ ಬೋರಗಿ ಅವರು ಕಲರ್ ಪ್ರಿಂಟರ್, ಝರಾಕ್ಸ್ ಮಷಿನ್ ನೀಡಿದ್ದು ಶ್ಲಾಘನೀಯ…
ಬಸವನಬಾಗೇವಾಡಿ: ವಿದ್ಯಾರ್ಥಿಗಳ ಜೀವನದ ಸುಂದರ ಬದುಕಿಗೆ ಹಾಗೂ ಆರೋಗ್ಯಕರ ಸಮಾಜ ಕಟ್ಟುವಲ್ಲಿ ಸ್ಕೌಟ್ಸ್ ಮತ್ತು ಗೈಡ್ಸನ ಶಿಸ್ತು ಮತ್ತು ಕೌಶಲ್ಯದ ಪಾತ್ರ ಮಹತ್ವದ್ದಾಗಿದೆ ಎಂದು ಭಾರತ ಸ್ಕೌಟ್ಸ್ ಮತ್ತು ಗೈಡ್ಸನ ತಾಲೂಕ ಉಪಾದ್ಯಕ್ಷ ಶಂಕರಗೌಡ ಬಿರಾದಾರ ಹೇಳಿದರು.ಪಟ್ಟಣದ ಶಾಸಕರ ಮಾದರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಭಾರತ ಸ್ಕೌಟ್ಸ್ ಮತ್ತು ಗೈಡ್ಸನ ತಾಲೂಕಾ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಸ್ಕೌಟ್ಸ್ ಮತ್ತು ಗೈಡ್ಸ್ ಸೇರ್ಪಡೆಯಾದರೆ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನ ಜೊತೆಗೆ ಕಲಿಕೆಯಲ್ಲೂ ಪ್ರಗತಿ ಸಾಧಿಸಲು ಸಾಧ್ಯ. ಎಲ್ಲ ಶಾಲಾ ಮಕ್ಕಳು ಸ್ಕೌಟ್ಸ್ ಮತ್ತು ಗೈಡ್ಸ್ ಸೇರ್ಪಡೆಗೊಳ್ಳುವಂತೆ ಶಿಕ್ಷಕರು ನೋಡಿಕೊಳ್ಳಬೇಕೆಂದರು.ಸ್ಕೌಟ್ಸ್ ಮತ್ತು ಗೈಡ್ಸನ ತಾಲೂಕು ಕಾರ್ಯಾಧ್ಯಕ್ಷ ಶೇಖರ ಗೊಳಸಂಗಿ ಸಮಾವೇಶದ ಅದ್ಯಕ್ಷತೆ ವಹಿಸಿ ಮಾತನಾಡಿದರು. ವೇದಿಕೆಯಲ್ಲಿ ಮುಖಂಡ ಮಹೇಶ ಮುಳವಾಡ, ಮಹಿಳಾ ಉಪಾದ್ಯಕ್ಷೆ ಡಾ. ವೀಣಾ ಗುಳೇದಗುಡ್ಡ, ಸ್ವರೂಪರಾಣಿ ಬಿಂಜಲಬಾವಿ, ಸೀತವ್ವ ವಾಡೇದ, ಶಿಕ್ಷಕರಾದ ಎಸ್. ಎಸ್. ಅವಟಿ, ಜಗದೀಶ ಬುಸೂರ, ಬೊಮ್ಮನಹಳ್ಳಿ ,ರಾಜಶೇಖರ ಖೇಡಗಿ ,ಶ್ರೀಮತಿ ಪೂಜಾರಿ ಇತರರು…
ಪ್ರಣಾಳಿಕೆಯಲ್ಲಿ ಡಿಎಂಕೆ ಘೋಷಣೆ | ಕರ್ನಾಟಕದ ರೈತರ ಕುಡಿವ ನೀರಿನ ಪ್ರಶ್ನೆ | ಬಿಜೆಪಿ ವಾಗ್ದಾಳಿ ಬೆಂಗಳೂರು: ಕರ್ನಾಟಕದ ದೌರ್ಬಲ್ಯವನ್ನು ಮನಗಂಡ ಸ್ಟಾಲಿನ್ ನೇತೃತ್ವದ ತಮಿಳುನಾಡು ಸರಕಾರವು ನಿನ್ನೆ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ಇಂಡಿ ಒಕ್ಕೂಟ ಗೆದ್ದು ಬಂದರೆ ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಬಿಡುವುದಿಲ್ಲ ಎಂದು ತಮಿಳುನಾಡು ಸರಕಾರದ ಮುಖ್ಯಸ್ಥ ಸ್ಟಾಲಿನ್ ಹೇಳಿಕೆ ಕೊಟ್ಟಿದ್ದಾರೆ ಎಂದು ಬಿಜೆಪಿ ನಾಯಕ ಅಶ್ವತ್ಥನಾರಾಯಣ ವಾಗ್ದಾಳಿ ನಡೆಸಿದ್ದಾರೆ.ಈ ಕುರಿತು ಮಾತನಾಡಿದ ಅವರು, ಕಳೆದ ಆ.5 ರಿಂದ ಕರ್ನಾಟಕ ಸರಕಾರದ ವೈಫಲ್ಯಗಳನ್ನು ಮನಗಂಡು ಈ ರೀತಿ ಚುನಾವಣಾ ಪ್ರಣಾಳಿಕೆ ಹೊರಡಿಸಿದೆ. ಇದು ರಾಜ್ಯ ಸರಕಾರಕ್ಕೆ ಗೊತ್ತಿದೆಯೇ ಇಲ್ಲವೋ ಗೊತ್ತಿಲ್ಲ ಎಂದು ಅಶ್ವತ್ಥನಾರಾಯಣ ಅವರು ಟೀಕಿಸಿದರು.ಕಾವೇರಿ ಐತೀರ್ಪು ಬಂದ ಬಳಿಕ ಬೆಂಗಳೂರಿನ ಕುಡಿಯುವ ನೀರು ಸಂಬಂಧ ಮತ್ತು 400 ಮೆ.ವಾ. ವಿದ್ಯುತ್ ಉತ್ಪಾದನೆಗೆ ಅವಕಾಶ ಇದೆ ಎಂದು ಗೊತ್ತಾಗಿದೆ. ಕಾವೇರಿ ನೀರು ನಿರ್ವಹಣಾ ಸಮಿತಿ ಆದೇಶದ ಮೇರೆಗೆ ನಮ್ಮ ಸರಕಾರ ಇದ್ದಾಗ ಒಂದು ಸಾಧ್ಯತಾ ವರದಿ (ಫೀಸಿಬಿಲಿಟಿ ರಿಪೋರ್ಟ್)…
ಸಂಸದ ಬಿ.ಎನ್.ಬಚ್ಚೇಗೌಡ ಬಿಜೆಪಿಗೆ ರಾಜೀನಾಮೆ ಬೆಂಗಳೂರು: ಬಿಜೆಪಿ ಸಂಸದ ಬಿ.ಎನ್.ಬಚ್ಚೇಗೌಡ ಅವರು ರಾಜೀನಾಮೆಯನ್ನು ನೀಡಿದ್ದು, ಬಿಜೆಪಿ ಕಚೇರಿಗೆ ರಾಜೀನಾಮೆ ಪತ್ರವನ್ನು ರವಾನಿಸಿದ್ದಾರೆ.ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಬಿ.ಎನ್.ಬಚ್ಚೇಗೌಡ ರಾಜೀನಾಮೆ ಸಲ್ಲಿಸಿದ್ದು, ಅವರು ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಪಕ್ಷದ ಕಚೇರಿಗೆ ರಾಜೀನಾಮೆ ಪತ್ರ ತಲುಪಿಸಿದ್ದಾರೆ.ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರಿಗೆ ರಾಜೀನಾಮೆ ಪತ್ರ ಬರೆದಿರುವ ಸಂಸದ ಬಿ.ಎನ್.ಬಚ್ಚೇಗೌಡ, ಸ್ವ ಇಚ್ಛೆಯಿಂದ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸುತ್ತಿದ್ದೇನೆ. ರಾಜೀನಾಮೆ ಅಂಗೀಕರಿಸಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ. 2008ರಲ್ಲಿ ಬಿಜೆಪಿ ಸೇರ್ಪಡೆ ಬಳಿಕ ಶಾಸಕ, ಸಚಿವ, ಸಂಸದರಾಗಿ ಸಾರ್ವಜನಿಕ ಕೆಲಸ ಮಾಡಲು ಅವಕಾಶ ಮಾಡಿಕೊಟ್ಟ ಪಕ್ಷಕ್ಕೆ ಮತ್ತು ಪಕ್ಷದ ಹಿರಿಯ ಮುಖಂಡರಿಗೆ ಧನ್ಯವಾದ ಸಮರ್ಪಿಸುವುದಾಗಿ ಹೇಳಿದ್ದಾರೆ.
ಬಸವನಬಾಗೇವಾಡಿ: ಮಾ.೨೫ ರಿಂದ ಆರಂಭವಾಗುವ ಎಸ್ಎಸ್ಎಲ್ಸಿ ಪರೀಕ್ಷೆಯನ್ನು ಪಾರದರ್ಶಕವಾಗಿ ನಡೆಸುವ ಜೊತೆಗೆ ನಕಲು ಮುಕ್ತವಾಗಿ ನಡೆಯುವಂತೆ ಎಲ್ಲ ಇಲಾಖೆಯ ಅಧಿಕಾರಿಗಳು ನೋಡಿಕೊಳ್ಳಬೇಕೆಂದು ತಹಸೀಲ್ದಾರ ವೈ.ಎಸ್.ಸೋಮನಕಟ್ಟಿ ಹೇಳಿದರು.ಪಟ್ಟಣದ ಸೇವಾದಳದ ಕಚೇರಿಯ ಸಭಾಂಗಣದಲ್ಲಿ ಬುಧವಾರ ಜರುಗಿದ ಎಸ್ಎಸ್ಎಲ್ಸಿ ಪರೀಕ್ಷಾ ಸಿದ್ಧತೆ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಎಸ್ಎಸ್ಎಲ್ಸಿ ಪರೀಕ್ಷೆಯು ವಿದ್ಯಾರ್ಥಿಗಳ ಜೀವನದಲ್ಲಿ ಮೊದಲ ಮೈಲಿಗಲ್ಲು. ಪರೀಕ್ಷೆಯನ್ನು ಯಾವುದೇ ಆತಂಕ, ಒತ್ತಡವಿಲ್ಲದೇ ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆಯುವಂತಾಗಬೇಕು. ಮಕ್ಕಳು ಒತ್ತಡ ರಹಿತ, ಸಂತಸದಿಂದ ಪರೀಕ್ಷೆಯನ್ನು ಬರೆಯುವಂತೆ ಪರೀಕ್ಷಾ ಕೇಂದ್ರವನ್ನು ವ್ಯವಸ್ಥೆ ಮಾಡಿಕೊಳ್ಳಬೇಕು. ಅಧಿಕಾರಿಗಳು ಸಕಾಲಿಕವಾಗಿ ಹಾಜರಾಗಿ ತಮ್ಮ ತಮ್ಮ ಕರ್ತವ್ಯಗಳನ್ನು ಪ್ರಾಮಾಣಿಕವಾಗಿ ಮಾಡುವ ಮೂಲಕ ಎಸ್ಎಸ್ಎಲ್ಸಿ ಪರೀಕ್ಷೆಯನ್ನು ಯಾವುದೇ ಲೋಪ-ದೋಷ ಉಂಟಾಗದಂತೆ ನಡೆಸಬೇಕೆಂದು ಸೂಚಿಸಿದ ಅವರು, ಪರೀಕ್ಷಾ ಕರ್ತವ್ಯದಲ್ಲಿ ಯಾರೂ ತಮ್ಮ ಸಂಬಂಧಗಳನ್ನು ಪರಿಗಣಿಸಬಾರದು. ಪರೀಕ್ಷಾ ಕೇಂದ್ರಗಳಲ್ಲಿ ಅಕ್ರಮ ಚಟುವಟಿಕೆಗಳು ನಡೆಯಬಾರದು. ಯಾರಾದರೂ ಪರೀಕ್ಷೆಯಲ್ಲಿ ಸಹಾಯ ಮಾಡಲು ಹೋದರೆ ಅಂತಹವರ ಮೇಲೆ ನಿರ್ದಾಕ್ಷಣಕ್ರಮವನ್ನು ತೆಗೆದುಕೊಳ್ಳಬೇಕಾಗುತ್ತದೆ ಎಂದರು.ಕ್ಷೇತ್ರ ಶಿಕ್ಷಣಾಧಿಕಾರಿ ವಸಂತ ರಾಠೋಡ ಮಾತನಾಡಿದರು.ಪರೀಕ್ಷೆ ಕೇಂದ್ರದಲ್ಲಿ ಕಡ್ಡಾಯವಾಗಿ…
ಢವಳಗಿ: ಗ್ರಾಮದ ಶ್ರೀ ಮಡಿವಾಳೇಶ್ವರರ 517ನೇ ಜಾತ್ರಾ ಮಹೋತ್ಸವದ ಅಂಗವಾಗಿ ಮಾರ್ಚ್ 23 ಶನಿವಾರದಂದು ರಾಜ್ಯ ಮಟ್ಟದ ತರಬಂಡಿ ಸ್ಪರ್ಧೆ ಏರ್ಪಡಿಸಲಾಗಿದೆ.ಸ್ಪರ್ಧೆಯಲ್ಲಿ ಒಟ್ಟು 10 ಬಹುಮಾನಗಳನ್ನು ಕೊಡಲಾಗುವುದು. ಒಂದನೇ ಬಹುಮಾನ ಮೋಟರ್ ಬೈಕ್(HF ಡಿಲಕ್ಸ್), ಎರಡನೇ ಬಹುಮಾನ 50000 ರೂ. ಮೂರನೇ ಬಹುಮಾನ 40000 ರೂ, 4ನೇ ಬಹುಮಾನ 30000, ಐದನೆಯ ಬಹುಮಾನ 25000 ರೂ, ಆರನೇ ಬಹುಮಾನ 20000 ರೂ, ಏಳನೆಯ ಬಹುಮಾನ 15000 ರೂ, ಎಂಟನೇ ಬಹುಮಾನ 10000 ರೂ, ಒಂಬತ್ತನೇ ಬಹುಮಾನ 7500 ರೂ, ಹತ್ತನೆಯ ಬಹುಮಾನ 5000 ರೂ. ಈ ರೀತಿಯಲ್ಲಿ ಬಹುಮಾನ ನೀಡಲಾಗುವುದು. ಸ್ಪರ್ಧೆಯಲ್ಲಿ ಎತ್ತುಗಳ ಮಾಲೀಕರು ಮೂವರನ್ನು ಹೊರತುಪಡಿಸಿ ಯಾರೂ ಬರುವಂತಿಲ್ಲ. ಎತ್ತುಗಳಿಗೆ ಹಿಂಸೆ ಮಾಡಬಾರದು, ಕಮೀಟಿಯವರಿಂದ ನಿಗದಿತ ಸಮಯ ನೀಡಲಾಗುವುದು, ಗಟ್ಟಿ ನೆಲದಲ್ಲಿ ಸ್ಪರ್ಧೆ ನಡೆಸಲಾಗುವುದು ಎಂದು ತರಬಂಡಿ ಸ್ಪರ್ಧೆಯ ಉಸ್ತುವಾರಿ ಸುರೇಶಗೌಡ ಪಾಟೀಲ ಅವರು ಪ್ರಕಟಣೆಯಲ್ಲಿ ತಿಳಿಸಿದರು.9663497143 ಹೆಚ್ಚಿನ ಮಾಹಿತಿಗಾಗಿ ಈ ಸಂಖ್ಯೆಗೆ ಸಂಪರ್ಕಿಸಿರಿ.
ವಿಜಯಪುರ : ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ವಿಜಯಪುರ ಜಿಲ್ಲಾ ಸಂಚಾಲಕರಾಗಿ ಜುಮನಾಳ ಗ್ರಾಮದ ರೈತ ಮುಖಂಡಾರಾದ ಮಹಾಂತೇಶ ಮಮದಾಪುರ ಅವರನ್ನು ಆಯ್ಕೆ ಮಾಡಿ ಜಿಲ್ಲಾ ಕಚೇರಿಯಲ್ಲಿ ಜಿಲ್ಲಾಧ್ಯಕ್ಷ ಸಂಗಮೇಶ ಸಗರ ಅವರು ಆದೇಶ ಪ್ರತಿ ನೀಡಿದರು.ಈ ವೇಳೆ ಜಿಲ್ಲಾಧ್ಯಕ್ಷ ಸಂಗಮೇಶ ಸಗರ ಅವರು ಆದೇಶ ಪ್ರತಿ ನೀಡಿ ಸಂಘದ ತತ್ವ ಸಿದ್ದಾಂತಗಳಿಗೆ ಬದ್ಧವಾಗಿ, ಬಡವ ಬಲ್ಲಿದ, ಮೇಲು ಕೀಳು, ಎಂದೆನ್ನದೇ ಎಲ್ಲರನ್ನು ಪಕ್ಷಾತೀತವಾಗಿ ಜಾತ್ಯಾತೀತವಾಗಿ ಸಂಘಟನೇಯ ಸಿದ್ದಾಂತದಲ್ಲಿ ಕಾನೂನಿನ ಚೌಕಟ್ಟಿನಲ್ಲಿ ಎಲ್ಲರನ್ನು ಸಮನಾಗಿ ಕಾಣುತ್ತಾ ಯಾವುದೇ ರೈತರಿಗೆ ಅನ್ಯಾಯವಾದರೂ ತಕ್ಷಣದಲ್ಲಿ ಕಾರ್ಯಪ್ರವೃತ್ತರಾಗಬೇಕು ಹಾಗೇ ಜಿಲ್ಲೆಯ ಎಲ್ಲ ಹಳ್ಳಿಗಳಲ್ಲಿ ಗ್ರಾಮ ಘಟಕ, ತಾಲೂಕು ಘಟಕಗಳನ್ನು ಮಾಡಬೇಕು ಎಂದು ಹೇಳಿದರುಈ ವೇಳೆ ಜಿಲ್ಲಾ ಸಂಚಾಲಕ ರಾಮನಗೌಡ ಪಾಟೀಲ(ಬ್ಯಾಲ್ಯಾಳ), ತಾ.ಉಪಾಧ್ಯಕ್ಷ ಮಹಾದೇವಪ್ಪ ತೇಲಿ, ತಾ.ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಗೋಡೇಕಾರ, ಮುಖಂಡ ಆನಂದ ಭೀಸೆ ಇದ್ದರು.
ವಿಜಯಪುರ: ಹೆಣ್ಣು ಅಬಲೆಯಲ್ಲ ಸಬಲೆ ಎಂದು ಶ್ರೀ ಸಿದ್ದೇಶ್ವರ ಅಕ್ಕನ ಬಳಗದ ಅಧ್ಯಕ್ಷೆ ಶೈಲಜಾ ಪಾಟೀಲ ಯತ್ನಾಳ ಅವರು ಹೇಳಿದರು.ನಗರದ ಶ್ರೀ ಸಿದ್ಧೇಶ್ವರ ಕಲಾಭವನದಲ್ಲಿ ಬುಧವಾರ ಸಮಸ್ತ ವಿಜಯಪುರ ಮಹಿಳೆಯರ ಶ್ರೀ ಸಿದ್ದೇಶ್ವರ ಅಕ್ಕನ ಬಳಗದ ವತಿಯಿಂದ ಹಮ್ಮಿಕೊಂಡಿದ್ದ ಅಂತರಾಷ್ಟೀಯ ಮಹಿಳಾ ದಿನಾಚರಣೆಯಲ್ಲಿ ಮಾತನಾಡಿದ ಅವರು, ಇಂದು ಪುರುಷನಿಗಿಂತ ಒಂದು ಕೈ ಮೇಲೆ ಎನ್ನುವಷ್ಟರ ಮಟ್ಟಿಗೆ ಮಹಿಳೆಯರು ಎಲ್ಲಾ ಕ್ಷೇತ್ರದಲ್ಲಿ ಸಾಧನೆ ಮಾಡುತ್ತಿರುವುದೇ ಸಾಕ್ಷಿ ಎಂದರು.ಕಣ್ಮರೆ ಆಗುತ್ತಿರುವ ವಚನ, ಪ್ರವಚನಗಳನ್ನು ಪ್ರಸಕ್ತ ಹಾಗೂ ಮುಂದಿನ ಪೀಳಿಗೆಗೆ ತಿಳಿಸುವ ಮೂಲಕ ಭಾರತೀಯ ಸಂಸ್ಕೃತಿಯನ್ನು ಉಳಿಸಿ ಬೆಳೆಸಲು, ಶ್ರೀ ಸಿದ್ದೇಶ್ವರ ಅಕ್ಕನ ಬಳಗ ಪ್ರತಿ ಸೋಮವಾರ ಸಿದ್ದೇಶ್ವರ ದೇವಸ್ಥಾನ ಸಭಾಭವನದಲ್ಲಿ ಕಾರ್ಯಕ್ರಗಳನ್ನು ಆಯೋಜಿಸಲಾಗುತ್ತಿದೆ ಎಂದು ತಿಳಿಸಿದರು.ಅಕ್ಕಮಹಾದೇವಿ ಬುರ್ಲಿ ಅಮ್ಮನವರು ಅಧ್ಯಕ್ಷತೆ ವಹಿಸಿದ್ದರು. ಸಾವಿತ್ರಿ ಸಜ್ಜನ, ಮೀನಾಕ್ಷಿ ಉಟಗಿ, ಸುನಂದಾ ಹೊನವಾಡ, ಶಕುಂತಲಾ ಚಿಂತಾಮಣಿ, ರೇಣುಕಾ ಪಾಟೀಲ, ಮಮತಾ ಪರಗೊಂಡೆ, ಸಾವಿತ್ರಿ ಮಠ ಸೇರಿದಂತೆ ಅಕ್ಕನ ಬಳಗದ ಪದಾಧಿಕಾರಿಗಳು, ಸದಸ್ಯರು, ಮಹಿಳೆಯರು ಭಾಗವಹಿಸಿದ್ದರು.ನಂತರ ಸಾಂಸ್ಕೃತಿಕ ಕಾರ್ಯಕ್ರಮಗಳು…
