Subscribe to Updates
Get the latest creative news from FooBar about art, design and business.
Author: editor.udayarashmi@gmail.com
ತಿಕೋಟಾ: ತಾಲೂಕಿನಾದ್ಯಂತ ರೈತರು ಆಯಾ ಬೆಳೆಗಳಿಗೆ ಅನುಗುಣವಾಗಿ ರೈತರು ವಿಮಾಕಂತು ತುಂಬಿದ್ದು ಇನ್ನುವರೆಗೂ ಕೆಲವು ರೈತರ ಖಾತೆಗಳಿಗೆ ವಿಮಾ ಜಮಾ ಆಗಿರುವದಿಲ್ಲ ಎಂದು ಅಕ್ರೋಶಗೊಂಡ ರೈತರು ಮಂಗಳವಾರದಂದು ತಹಸೀಲ್ದಾರ ಸುರೇಶ ಮುಂಜೆ ಅವರ ಮುಖಾಂತರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ತಾಲೂಕಾ ಅದ್ಯಕ್ಷ ಎಸ್ ಎಸ್ ಸಾಲಿಮಠ ಮನವಿ ಸಲ್ಲಿಸಿ ಮಾತನಾಡುತ್ತಾ, ಜಿಲ್ಲಾಧಿಕಾರಿಗಳು ಬೆಳೆ ನಷ್ಟಗೊಂಡ ರೈತರನ್ನು ಕುದ್ದಾಗಿ ಸರ್ವೇ ಮಾಡಿಸಿ ವಿಮಾ ಮಂಜುರಾತಿ ಮಾಡಿಸಬೇಕು. ಈ ಬಾರಿ ಮಳೆ ಬಾರದೇ ಬರಗಾಲದಿಂದ ಸಾಕಷ್ಟು ರೈತರು ನಷ್ಟ ಅನುಭವಿಸುವಂತಾಗಿದೆ, ಸಾಲ ಸೋಲ ಮಾಡಿ ಬಿತ್ತಿದ ಬೆಳೆಗೆ ಖರ್ಚು ಸಹ ಬಾರದಂತಾಗಿದೆ, ಕೂಡಲೆ ವಿಮಾ ಪರಿಹಾರ ಬಾರದಿದ್ದಲ್ಲಿ ಹೋರಾಟ ಮಾಡಬೇಕಾಗುತ್ತದೆ ಎಂದರು.ಮಳೆಯಿಲ್ಲದೆ ಬರಗಾಲಕ್ಕೆ ತುತ್ತಾಗಿರುವ ರೈತರು ವಿಮಾ ಆಸರೆ ಆದಿತೆಂದು ಸಾಲ ಮಾಡಿಯಾದರೂ ಬೆಳೆಗಳ ವಿಮಾ ಪಾವತಿಸಿದ್ದಾರೆ. ಅದರೆ ವಿಮಾ ಬಾರದೆ ರೈತರು ದಿಕ್ಕು ತೋಚದೆ ಸಂಕಷ್ಟ ಎದುರಿಸುವಂತಾಗಿದೆ. ವಿಮಾ ಕಂಪನಿಯವರ ಷಡ್ಯಂತ್ರದಿಂದ ಪ್ರಭಾವಿಗಳಿಗೆ ರಾಜ್ಯದ…
ಚಿಮ್ಮಡ: ಗ್ರಾಮದ ವಿವಿಧೋದ್ದೇಶ ಪ್ರಾಥಮಿಕ ಕೃಷಿ ಸಹಕಾರಿ ಸಂಘದ ಅಧ್ಯಕ್ಷರಾದ ಶಂಕರ ಬಟಕುರ್ಕಿ ಇಫ್ಕೋ ನವದೇಹಲಿಯ ಪ್ರಾದೇಶಿಕ ಸಾಮಾನ್ಯ ಮಂಡಳಿಯ (ಆರ್ಜಿಬಿ) ಸದಸ್ಯರಾಗಿ ಆಯ್ಕೆಯಾಗಿದ್ದಾರೆ.ಐದು ವರ್ಷಗಳ ಅವಧಿಗಾಗಿ ಹುಬ್ಬಳ್ಳಿ ವೀಭಾಗೀಯ (ಎಂಟು ಜಿಲ್ಲೆಗಳನ್ನೊಳಗೊಂಡ) ಮಟ್ಟದಲ್ಲಿ ನಡೆದ ಚುನಾವಣೆಯಲ್ಲಿ ಹತ್ತು ಲಕ್ಷಕ್ಕೂ ಅಧಿಕ ಮೊತ್ತದ ಠೇವಣಿ ಹೊಂದಿರುವ ಪ್ರತೀಷ್ಠಿತ ೬೪ ವಿವಿಧೋದ್ದೇಶ ಪ್ರಾಥಮಿಕ ಕೃಷಿ ಸಹಕಾರಿ ಸಂಘಗಳ ಪಧಾದಿಕಾರಿಗಳು ಮತದಾನಕ್ಕೆ ಅರ್ಹತೆ ಹೊಂದಿದ್ದು, ಬಾಗಲಕೋಟ ಜಿಲ್ಲೆಯ ಪ್ರತಿನಿಧಿಯಾಗಿ ಸ್ಪರ್ದಿಸಿದ್ದ ಶಂಕರ ಬಟಕುರ್ಕಿ ಅನಾಯಾಸವಾಗಿ ಆಯ್ಕೆಯಾಗಿದ್ದಾರೆಂದು ವಿವಿಧೋದ್ದೇಶ ಪ್ರಾಥಮಿಕ ಕೃಷಿ ಸಹಕಾರಿ ಸಂಘದ ಕಾರ್ಯ ನಿರ್ವಾಹಕ ಅಧಿಕಾರಿ ಮುರಿಗೆಪ್ಪ ವಜ್ಜರಮಟ್ಟಿ ತಿಳಿಸಿದ್ದಾರೆ.ಶಂಕರ ಬಟಕುರ್ಕಿ ಅವರನ್ನು ಸ್ಥಳಿಯ ಗ್ರಾಂ.ಪಂ. ಅಧ್ಯಕ್ಷೆ ಶ್ರೀಮತಿ ಮಾಲಾ ಮೋಟಗಿ, ಉಪಾಧ್ಯಕ್ಷೆ ಶ್ರೀಮತಿ ಪ್ರೇಮಾ ಗೋವಿಂದಗೋಳ ಸೇರಿದಂತೆ ಸದಸ್ಯರು ಹಾಗೂ ವಿವಿಧೋದ್ದೇಶ ಪ್ರಾಥಮಿಕ ಕೃಷಿ ಸಹಕಾರಿ ಸಂಘದ ನಿರ್ದೇಶಕರು ಅಭಿನಂದನೆ ಸಲ್ಲಿಸಿದ್ದಾರೆ.ಸನ್ಮಾನ; ಗ್ರಾಮದ ವಿವಿಧೋದ್ದೇಶ ಪ್ರಾಥಮಿಕ ಕೃಷಿ ಸಹಕಾರಿ ಸಂಘದ ಅಧ್ಯಕ್ಷರಾದ ಶಂಕರ ಬಟಕುರ್ಕಿ ಇಫ್ಕೋ ನವದೇಹಲಿಯ ಪ್ರಾದೇಶಿಕ ಸಾಮಾನ್ಯ ಮಂಡಳಿಯ…
ಮುದ್ದೇಬಿಹಾಳ: ಪರೀಕ್ಷಾ ಕರ್ತವ್ಯಕ್ಕೆ ನೇಮಿಸಿದ ಎಲ್ಲರೂ ಜಾಗರೂಕರಾಗಿ, ಕಟ್ಟು ನಿಟ್ಟಾಗಿ ಪರೀಕ್ಷೆಗಳನ್ನು ನಡೆಸಬೇಕು. ನಿಷ್ಕಾಳಜಿ ತೋರಿ ಪರೀಕ್ಷಾ ಪಾವಿತ್ಯ್ರಕ್ಕೆ ಧಕ್ಕೆ ತಂದಲ್ಲಿ ಅಂಥವರ ಮೇಲೆ ನಿರ್ದಾಕ್ಷಣ್ಯವಾಗಿ ಕ್ರಮ ಜರುಗಿಸುತ್ತೇನೆ ಎಂದು ತಹಶೀಲ್ದಾರ ಬಸವರಾಜ ನಾಗರಾಳ ಕೇಳಿದರು.ಪಟ್ಟಣದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯ ಸಭಾ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ಹತ್ತನೇ ತರಗತಿ ವಿದ್ಯಾರ್ಥಿಗಳ ಪರೀಕ್ಷೆ-೧ ರ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಪರೀಕ್ಷೆಗಳಲ್ಲಿ ನಿಮಗೆ ನೀಡಲಾದ ಕರ್ತವ್ಯಗಳನ್ನು ಸರಿಯಾಗಿ ನಿಭಾಯಿಸಿದಲ್ಲಿ ಯಾವ ತೊಂದರೆಯೂ ಬರಲು ಸಾಧ್ಯವಿಲ್ಲ. ಒಂದು ವೇಳೆ ಅಹಿತಕರ ಘಟನೆಗಳು ಸಂಭವಿಸಿದಲ್ಲಿ ಯಾರಿಂದಲೂ ನನಗೆ ಕರೆ ಮಾಡಿಸಬೇಡಿ. ನಾನು ಯಾರ ಮಾತನ್ನೂ ಕೇಳುವದಿಲ್ಲ ಎಂದರು.ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ, ಕುಡಿಯುವ ನೀರಿನ ವ್ಯವಸ್ಥೆ, ವೈದ್ಯಕೀಯ ವ್ವವಸ್ಥೆ ಸರಿಯಾಗಿ ನಿಭಾಯಿಸಿ. ಯಾರಾದರೂ ಖಾಸಗಿ ಶಾಲೆವರು ತಮ್ಮ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಅಕ್ರಮಕ್ಕೆ ಮುಂದಾದಲ್ಲಿ ಅಂಥವರ ಮೇಲೆ ಮುಲಾಜಿಲ್ಲದೆ ಸೂಕ್ತಕ್ರಮ ಜರುಗಿಸುತ್ತೇನೆ ಎಂದರು.ಕ್ಷೇತ್ರ ಶಿಕ್ಷಣಾಧಿಕಾರಿ ಬಸವರಾಜ ಸಾವಳಗಿ ಮಾತನಾಡಿದರು.ತಾಲೂಕು ವೈದ್ಯಾಧಿಕಾರಿ ಸತೀಶ ತಿವಾರಿ ಮಾತನಾಡಿ ಸಧ್ಯ ಬೇಸಿಗೆಯ ತಾಪಮಾನ…
ಚಡಚಣ: ಮನೆಯಿಂದ ಹೊರಗೆ ಹೋದ ಯುವಕ ಮರಳಿ ಮನೆಗೆ ಬಾರದೆ ಕಾಣೆಯಾಗಿರುವ ಕುರಿತು ಚಡಚಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ರೇವತಗಾಂವ ಗ್ರಾಮದ ನಿವಾಸಿ ಮಾಳಪ್ಪ ಬೀರಪ್ಪ ಸಾಲಮಳಗಿ(೨೩) ಯುವಕ ಕಾಣೆಯಾದ ಯುವಕ. ಜನೆವರಿ ೧೮. ೨೦೨೪ರಂದು ಮದ್ಯಾಹ್ನ ೧ ಗಂಟೆಯ ಸುಮಾರಿಗೆ ಹೊರಗೆ ಹೋದ ಯುವಕ ಮರಳಿ ಮನೆಗೆ ಬಾರದೆ ಕಾಣೆಯಾಗಿದ್ದಾನೆ ಎಂದು ಯುವಕನ ದೊಡ್ಡಪ್ಪ ರೇವಪ್ಪ ಮನಗೇನಿಯವರು ದೂರು ದಾಖಲಿಸಿದ್ದಾರೆ. ಕಾಣೆಯಾದ ಮಾಳಪ್ಪ ೫.೨ ಎತ್ತರ, ಮೈಯಿಂದ ಸಧೃಢ, ಗೋಧಿ ಬಣ್ಣ, ಉದ್ದ ಮೂಗು, ಸ್ವಲ್ಪ ದಾಡಿ ಮೀಸೆ, ತಲೆಯಲ್ಲಿ ಕರಿಯ ಕೂದಲುಗಳಿವೆ. ಕನ್ನಡ ಭಾಷೆಯನ್ನು ಮಾತನಾಡುತ್ತಾನೆ. ಮೈಮೇಲೆ ಚಾಕಲೇಟ್ ಬಣ್ಣದ ಪುಲ್ ತೋಳಿನ ಅಂಗಿ ಹಾಗೂ ಕರಿ ಬಣ್ಣದ ಪ್ಯಾಂಟನ್ನು ತೊಟ್ಟಿದ್ದ ಈ ಪ್ರಕಾರದ ಚಹರೆಪಟ್ಟಿ ಇರುವ ವ್ಯಕ್ತಿಯು ತಮ್ಮ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಎಲ್ಲಿಯಾದರೂ ಪತ್ತೆಯಾದಲ್ಲಿ ಮಾನ್ಯ ಎಸ್.ಪಿ. ಸಾಹೇಬರು ವಿಜಯಪುರರವರಿಗಾಗಲೀ ಅಥವಾ ವಿಜಯಪುರ ಕಂಟ್ರೋಲ್ ರೂಂಗಾಗಲೀ ಅಥವಾ ಚಡಚಣ ಪೊಲೀಸ್ ಠಾಣೆಯ ಪಿ.ಎಸ್.ಐ ರವರಿಗಾಗಲೀ ಮಾಹಿತಿ…
ಇಂಡಿ: ತಾಲೂಕಿನಲ್ಲಿ ಹರಿಯುವ ಕೃಷ್ಣಾ ಮುಖ್ಯ ಕಾಲುವೆಯಿಂದ ಕಳೆದ ಎಂಟು ದಿನಗಳಿಂದ ತಾಲೂಕಿನಲ್ಲಿರುವ ಎಲ್ಲ ಕೆರೆ ಮತ್ತು ಹಳ್ಳಗಳಲ್ಲಿ ನೀರು ಹರಿಸಲಾಗಿದೆ.ಇದರಿಂದ ಗ್ರಾಮದ ಜನರಿಗೆ ಕುಡಿಯುವ ನೀರಿನ ಅನುಕೂಲವಾಗಲಿದೆ. ಅದಲ್ಲದೆ ಅಂತರ್ಜಲ ಹೆಚ್ಚಾಗಿ ಬಾವಿಗಳಿಗೆ, ಬೋರುಗಳಿಗೆ ನೀರು ಹೆಚ್ಚಾಗುವದು.ತಾಲೂಕಿನ ಸಂಗೋಗಿ,ಹಂಜಗಿ,ಲೋಣಿ ಕೆಡಿ ಮತ್ತು ಅರ್ಜನಾಳ ಕೆರೆಗಳನ್ನು ತುಂಬಲಾಗಿದೆ.ಅದಲ್ಲದೆ ನಾದ ಕೆ.ಡಿ, ಭೈರುಣಗಿ, ಹಲಸಂಗಿ ಸೇರಿದಂತೆ ಇಂಡಿಯ ಹಳ್ಳ, ಇಂಗಳಗಿ,ನೆಹರು ನಗರ, ಹಿರೇಬೇವನೂರ, ಭೂಯ್ಯಾರ ಹಳ್ಳಗಳನ್ನು ತುಂಬಿಸಲಾಗಿದ್ದು ಅಲ್ಲಿಂದ ನೀರು ಭೀಮಾ ನದಿ ಸೇರುತ್ತಿದೆ.ಬರದಿಂದ ಕಂಗೆಟ್ಟಿರುವ ತಾಲೂಕಿನ ಬಹುತೇಕ ಗ್ರಾಮಗಳಲ್ಲಿ ಕುಡಿಯುವ ಕುರಿತು ಕೃಷ್ಣಾ ಮುಖ್ಯ ಕಾಲುವೆಯಿಂದ ನೀರು ಆಸರೆ ಯಾಗುತ್ತಿದೆ. ಸಕಾಲದಲ್ಲಿ ಮಳೆ ಯಾಗದೆ ಇರುವದರಿಂದ ತಾಲೂಕಿನ ಕೆರೆ ಹಳ್ಳ ಬಾವಿ, ಬೋರು ಗಳು ಬತ್ತಿದ್ದರಿಂದ ಕುಡಿಯುವ ನೀರಿನ ಉಂಟಾಗಬಾರದೆಂದು ಕೃಷ್ಣಾ ಕಾಲುವೆಯಿಂದ ನೀರು ತುಂಬಿಸಲಾಗುತ್ತಿದೆ.ಅಧಿಕ್ಷಕ ಅಭಿಯಂತರ ಮನೋಜಕುಮಾರ ಗಡಬಳ್ಳಿ, ಕಾರ್ಯ ಪಾಲಕ ಅಭಿಯಂತರ ಶಾಂತವೀರ ಮಠ, ಸಹಾಯಕ ಕಾರ್ಯ ನಿರ್ವಾಹಕ ಅಭಿಯಂತರ ಅರವಿಂದ ಪೋಳ, ಶ್ರೀಮಂತ ಅಂಗಡಿ, ಕಿರಿಯ ಅಭಿಯಂತರ…
ಮುದ್ದೇಬಿಹಾಳ: ನೀರಿನ ಮೂಲಗಳನ್ನು ಸ್ವಚ್ಚವಾಗಿಟ್ಟುಕೊಳ್ಳುವ ಕೆಲಸ ನಾವೆಲ್ಲರೂ ಮಾಡಬೇಕು. ನಿಸರ್ಗ ನಮಗೆಲ್ಲ ನೀಡಿರುವ ಅಮೂಲ್ಯವಾದ ಸಂಪತ್ತು ನೀರು ಎಂದು ಪುರಸಭೆಯ ಮುಖ್ಯಾಧಿಕಾರಿ ಮಲ್ಲನಗೌಡ ಬಿರಾದಾರ ಹೇಳಿದರು.ಹಸಿರು ತೋರಣ ಗೆಳೆಯರ ಬಳಗ ಹಮ್ಮಿಕೊಂಡಿದ್ದ “ಕೆರೆಯಂಗಳದಲೊಂದು ಸುತ್ತು” ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾಗಿ ಅವರು ಮಾತನಾಡಿದರು.ಕೆರೆಯ ಸುತ್ತಲೂ ಬೆಳೆದಿರುವ ಮುಳ್ಳು ಕಂಟಿಗಳನ್ನು ತೆಗೆದು ಸ್ವಚ್ಛಗೊಳಿಸುವ ಸಲುವಾಗಿ ಕ್ರಿಯಾಯೋಜನೆ ರೂಪಿಸಲಾಗಿದೆ. ಟೆಂಡರ್ ಕರೆಯಬೇಕೆಂದರೆ ಲೋಕಸಭಾ ಚುನಾವಣೆ ನೀತಿಸಂಹಿತೆ ಜಾರಿಯಾಗಿದೆ. ಆದರೆ ಲಭ್ಯವಿರುವ ಸ್ವಚ್ಛತಾ ಕಾರ್ಮಿಕರನ್ನು ಬಳಸಿಕೊಂಡು ಕೆರೆಯ ಸುತ್ತಲಿನ ವಾಯುವಿಹಾರ ಪಥವನ್ನು ಸ್ವಚ್ಛಗೊಳಿಸಲಾಗುವುದು. ಕೆರೆಯ ಸ್ವಚ್ಛತೆ, ಇನ್ನಷ್ಟು ಚಂದದ ವಾಯು ವಿಹಾರ ಪಥ ನಿರ್ಮಾಣ, ಕೆರೆಯಲ್ಲಿ ಮನರಂಜನಾ ದೋಣಿಗಳನ್ನು ಬಳಸುವುದು. ಮಕ್ಕಳಿಗೆ ಮನರಂಜನಾ ಉದ್ಯಾನ ನಿರ್ಮಿಸಲು ಉದ್ದೇಶಿಸಿಸಲಾಗಿದೆ ಎಂದರು.ಹಸಿರು ತೋರಣ ಗೆಳೆಯರ ಬಳಗದ ಅಧ್ಯಕ್ಷ ಡಾ.ವೀರೇಶ ಇಟಗಿ ಮಾತನಾಡಿದರು.ಬಳಗದ ಮಾಜಿ ಅಧ್ಯಕ್ಷ ನಾಗಭೂಷಣ ನಾವದಗಿ ಮಾತನಾಡಿದರು.ಅಭಿಯಾನದಲ್ಲಿ ಹಸಿರು ತೋರಣ ಬಳಗದ ಸಂಚಾಲಕ ಮಹಾಬಲೇಶ್ವರ ಗಡೇದ, ಮಾಜಿ ಅಧ್ಯಕ್ಷರಾದ ಬಿ.ಎಸ್.ಮೇಟಿ, ಅಶೋಕ ರೇವಡಿ, ರಾಜಶೇಖರ ಕಲ್ಯಾಣಮಠ, ರವಿ ಗೂಳಿ,…
ಬ್ರಹ್ಮದೇವನಮಡು: ಸಮೀಪದ ನಾಗ ಅಲ್ಲಾಪೂರ ಗ್ರಾಮದ ಬಳಿಯ ಚೆಕ್ ಪೋಸ್ಟ್ ನಲ್ಲಿ ಯಡ್ರಾಮಿ ಪೊಲೀಸರು ಬುಧುವಾರ ಎರಡು ಪ್ರಕರಣಗಳನ್ನು ದಾಖಲಿಸಿಕೊಂಡು ರೂ.೨ಲಕ್ಷ ನಗದನ್ನು ವಶಕ್ಕೆ ಪಡೆಯಲಾಗಿದೆ.ವಿಜಯಪುರ ಕಡೆಯಿಂದ ಬಂದ ಬುಲೇರೋ ಪಿಕ್ ಆಫ್ ವಾಹನದಲ್ಲಿ ಸಾಗಿಸುತ್ತಿದ್ದ ೧ ಲಕ್ಷ ರೂ.ಗಳನ್ನು ಹಾಗೂ ಹದ್ನೂರ ಕಡೆಯಿದ ನಾಗ ಅಲ್ಲಾಪೂರ ಚೆಕ್ ಪೊಸ್ಟ್ ಕಡೆಗೆ ಬಂದ ಟಾಟಾ ನೆಕ್ಷನ್ ಕಾರನ್ನು ನಿಲ್ಲಿಸಿ ಚೆಕ್ ಮಾಡಲಾಗಿ ನಗದು ೧ ಲಕ್ಷ ರೂ.ಗಳನ್ನು ಯಾವುದೇ ಅಧಿಕೃತ ಹಣದ ದಾಖಲೆ ಇಲ್ಲದೇ ಹಣ ಸಾಗಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ನಾಗ ಅಲ್ಲಾಪೂರ ಬಳಿ ಸ್ಥಾಪಿಸಿರುವ ಚೆಕ್ ಪೋಸ್ಟ್ ನಲ್ಲಿ ಅಧಿಕಾರಿಗಳು ತಪಾಸಣೆ ನಡೆಸತ್ತಿದ್ದ ಸಮಯದಲ್ಲಿ ಎಸ್.ಎಸ್.ಟಿ ತಂಡ ಪಂಚರ ಸಮಕ್ಷಮದಲ್ಲಿ ವಶಕ್ಕೆ ಪಡಿದ್ದಿದ್ದಾರೆ.ಈ ವೇಳೆ ಎ.ಆರ್.ಓ ರಹಿಮಾನ್ ಪಟೇಲ,ಯಡ್ರಾಮಿ ಪಿಎಸೈ ವಿಶ್ವನಾಥ ಮದರಡ್ಡಿ, ಪಿಎಸೈ ವೆಂಕಟೇಶ ನಾಯಕ ಸೇರಿದಂತೆ ಎಸ್.ಎಸ್.ಟಿ ತಂಡ ಹಾಗೂ ಪೋಲಿಸ್ ಸಿಬ್ಬಂದಿ ಇದ್ದರು. ಯಡ್ರಾಮಿ ಪೋಲಿಸ್ ಠಾಣೆ ವ್ಶಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ವಿಜಯಪುರ: ಇಂದಿರಾಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವ ವಿದ್ಯಾಲಯವು ಜನವರಿ ೨೦೨೪ರ ಪದವಿ, ಸ್ನಾತಕ ಕೋರ್ಸಗಳು, ಹಾಗೂ ಡಿಪ್ಲೋಮಾ ಕೋರ್ಸ್ಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿ ಸಲ್ಲಿಸಲು ಮಾ.೩೧ ಕೊನೆಯ ದಿನವಾಗಿದ್ದು, ಆಸಕ್ತ ವಿದ್ಯಾರ್ಥಿಗಳು ಆನ್ಲೈನ್ ಮೂಲಕ www.ignou.ac.in ನಲ್ಲಿ ಪ್ರವೇಶ ಪಡೆಯಬಹುದು. ಹೆಚ್ಚಿನ ಮಾಹಿತಿಗಾಗಿ ನಿರ್ದೇಶಕರು ಇಂದಿರಾಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವವಿದ್ಯಾಲಯ ವಿಜಯಪುರ, ೧ನೇ ಮಹಡಿ, ಪ್ಲಾಜಾ-೨, ಪ್ರವಾಸೋಧ್ಯಮ ಇಲಾಖೆ ಕಟ್ಟಡ, ಡಾ.ಬಿ.ಆರ್. ಅಂಬೇಡ್ಕರ್ ವೃತ್ತ ಹತ್ತಿರ ವಿಜಯಪುರ, ದೂರವಾಣಿ ಸಂಖ್ಯೆ: ೦೮೩೫೨-೨೫೨೦೦೬, ೯೪೮೨೩೧೧೦೦೬ನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
ವಿಜಯಪುರ: ವಿಜಯಪುರ ಕೃಷಿ ಮಹಾವಿದ್ಯಾಲಯದಲ್ಲಿ ಖಾಲಿ ಇರುವ ಯಂಗ್ ಪ್ರೋಪೇಶಿಯನಲ್-೨ ತಾತ್ಕಾಲಿಕ ಹುದ್ದೆಗೆ ಮಾ.೨೮ರಂದು ಬೆಳಗ್ಗೆ ೧೦.೩೦ಕ್ಕೆ ಜೆನೆಟಿಕ್ ಮತ್ತು ಪ್ಲಾಂಟ್ ಬ್ರಿಡಿಂಗ್ ವಿಷಯದಲ್ಲಿ ಕೃಷಿ ಸ್ನಾತಕೋತ್ತರ ಪದವಿ ಪಡೆದ ಅರ್ಹ ಅಭ್ಯರ್ಥಿಗಳಿಗೆ ನೇರ ಸಂದರ್ಶನ ಕರೆಯಲಾಗಿದೆ.ಸಂದರ್ಶನಕ್ಕೆ ಬರುವಾಗ ವಿದ್ಯಾರ್ಹತೆಗೆ ಸಂಬಂಧಪಟ್ಟ ಮೂಲ ದಾಖಲೆಗಳು ಹಾಗೂ ಎರಡು ಸೆಟ್ ಝೆರಾಕ್ಸ್ ಪ್ರತಿಗಳು, ಎರಡು ಭಾವಚಿತ್ರಗಳನ್ನು ಅರ್ಜಿ ನಮೂನೆಗೆ ಲಗತ್ತಿಸಿ ಸಂದರ್ಶನದ ಸಮಯದಲ್ಲಿ ದಾಖಲೆಗಳನ್ನು ಸಲ್ಲಿಸಬೇಕು ಎಂದು ಕೃಷಿ ಮಾಹಾವಿದ್ಯಾನಿಲಯದ ವಿದ್ಯಾಧಿಕಾರಿ ಡಾ. ಭೀಮಪ್ಪ ಎ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿಜಯಪುರ: ಚಡಚಣ ತಾಲೂಕಿನ ಹೊಳೆಸಂಖ ಗ್ರಾಮದಲ್ಲಿ ೩೩ಕೆವಿ ಹೊಳೆಸಂಖ ಏತನೀರಾವರಿ ಸ್ಥಾವರಕ್ಕೆ ೩೩ಕೆವಿ ವಿದ್ಯುತ್ ಮಾರ್ಗವನ್ನು ಹಾಲಿ ಇರುವ ೧೧೦/೩೩/೧೧ಕೆವಿ ಚಡಚನ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಒಂದು ಟರ್ಮಿನಲ್ ಬೇ ನಿರ್ಮಿಸುವ ಮುಖಾಂತರ ೧೪.೫೬ ಕಿಮಿ ೩೩ಕೆವಿ ವಿದ್ಯುತ್ ಮಾರ್ಗ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದು, ಸದರಿ ಸ್ಥಳದಲ್ಲಿ ಸಾರ್ವಜನಿಕರು ಎಚ್ಚರಿಕೆ ವಹಿಸಬೇಕು ಎಂದು ವಿಜಯಪುರ ಹೆಸ್ಕಾಂ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
