Subscribe to Updates
Get the latest creative news from FooBar about art, design and business.
Author: editor.udayarashmi@gmail.com
೮೫ ವರ್ಷ ಮೇಲ್ಪಟ್ಟ ಮತ್ತು ವಿಶೇಷಚೇತನರ ಮತದಾನ ಕುರಿತು ತರಬೇತಿ ಇಂಡಿ: ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಟ್ಟು ನಿಟ್ಟಿನ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದ್ದು ಚುನಾವಣೆ ಕರ್ತವ್ಯಗಳಿಗೆ ನಿಯೋಜನೆಗೊಂಡಿರುವ ಅಧಿಕಾರಿಗಳು ಜವಾಬ್ದಾರಿಯುತವಾಗಿ ಕರ್ತವ್ಯ ನಿರ್ವಹಿಸಿ ಎಂದು ಸಹಾಯಕ ಚುನಾವಣೆ ಅಧಿಕಾರಿ ಕಂದಾಯ ಉಪವಿಬಾಗಾಧಿಕಾರಿ ಅಬೀದ್ ಗದ್ಯಾಳ ಹೇಳಿದರು.ಪಟ್ಟಣದ ಶ್ರೀ ಶಾಂತೇಶ್ವರ ಮಂಗಲ ಕಾರ್ಯಾಲಯದಲ್ಲಿ ೮೫ ವರ್ಷ ಮೇಲ್ಪಟ್ಟ ಮತ್ತು ವಿಶೇಷಚೇತನರ ಮತದಾನ ಕುರಿತು ಬೂತ್ ಮಟ್ಟದ ಅಧಿಕಾರಿಗಳಿಗೆ ತರಬೇತಿ ಶಿಬಿರದಲ್ಲಿ ಮಾತನಾಡುತ್ತಿದ್ದರು.ಮತದಾರರ ಪಟ್ಟಿಯ ಅನುಸಾರ ಬೂತ್ ಮಟ್ಟದ ಅಧಿಕಾರಿಗಳು ಮಾ.೨೨ ರಿಂದ ೮೫ ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರ ಹಾಗೂ ವಿಶೇಷಚೇತನರ ಮನೆ ಮನೆಗೆ ಭೇಟಿ ನೀಡಿ ೧೨ ಡಿ ಅರ್ಜಿಗಳನ್ನು ಭರ್ತಿ ಮಾಡಬೇಕು. ಅಂಚೆ ಮತದಾನಕ್ಕೆ ೧೨ ಡಿ ಮೂಲಕ ದೃಡಿಕರಿಸಿದವರು ಮತಗಟ್ಟೆಗಳಿಗೆ ತೆರಳಿ ಮತದಾನ ಮಾಡಲು ಅವಕಾಶ ವಿರುವದಿಲ್ಲ.ಕೇಂದ್ರ ಚುನಾವಣೆ ಆಯೋಗದ ನಿರ್ದೇಶನದಂತೆ ೮೫ ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು ಹಾಗೂ ಶೇ ೪೦ ಕ್ಕಿಂತ ಹೆಚ್ಚು…
ಬರದಿಂದ ಅಸ್ಕಿ, ಬೆಕಿನಾಳ, ಹುಣಶ್ಯಾಳ, ಕುದುರಗೂಂಡ ಕೆರೆಗಳು ಖಾಲಿ ವಿಜಯಪುರ: ರಾಜ್ಯದಲ್ಲಿ ತೀವ್ರ ಬರಗಾಲ ಉಂಟಾಗಿ ಕೆರೆಗಳೆಲ್ಲ ಬತ್ತಿದ್ದು, ಕೂಡಲೇ ಕಲಕೇರಿ ಸುತ್ತಮುತ್ತಲಿನ ಭಾಗದ ಅಸ್ಕಿ, ಬೆಕಿನಾಳ, ಹುಣಶ್ಯಾಳ, ಕುದುರಗೂಂಡ ಕೆರೆಗಳನ್ನು ತುಂಬಿಸಬೇಕು ಎಂದು ಹುಣಶ್ಯಾಳ ಗ್ರಾಮ ಪಂಚಾಯತ ಮಾಜಿ ಅಧ್ಯಕ್ಷ, ಹಾಲಿ ಸದಸ್ಯ, ಹಾಗೂ ಹುಣಶ್ಯಾಳ ಜಿಲ್ಲಾ ಪಂಚಾಯಿತಿ ಸೇವಾ ಆಕಾಂಕ್ಷಿ ಶ್ರೀಮತಿ ಬಂಗಾರೆಮ್ಮ ಮಾನಪ್ಪ ದೊಡಮನಿ ಆಗ್ರಹಿಸಿದರು.ಪತ್ರಿಕಾ ಪ್ರಕಟಣೆಯಲ್ಲಿ ಮಾತನಾಡಿದ ಅವರು, ಬರಗಾಲಪೀಡಿತ ಜಿಲ್ಲೆಯ ಜನರ ನೀರಿನ ಬವಣೆಗೆ ಸರ್ಕಾರ ಕೆರೆತುಂಬಿಸುವ ಯೋಜನೆಗಳಿಗೆ ಚಾಲನೆ ನೀಡಿತ್ತು. ಕೆರೆಗಳನ್ನು ತುಂಬಿಸುವ ಯೋಜನೆ ಆರಂಭಿಸಬೇಕು ಎಂದು ಕಾರ್ಯಾದೇಶ ನೀಡಿದ್ದರೂ ಶೇ ೯೫ರಷ್ಟು ಕಾಮಗಾರಿ ನಿಗದಿತ ಅವಧಿಯಲ್ಲಿ ನಡೆಯದೇ ಯೋಜನೆ ವಿಳಂಬ ಗತಿಯಲ್ಲಿ ಸಾಗಿರುವುದರಿಂದ ಗ್ರಾಮೀಣ ಕೆರೆ-ಕಟ್ಟೆಗಳು ಒಣಗಿ, ಕುಡಿವ ನೀರಿಗೆ ಜಾನುವಾರುಗಳಿಗೆ ನೀರಿನ ತೀವ್ರ ಸಮಸ್ಯೆ ಉಂಟಾಗಿದೆ.ಕಲಕೇರಿ ಸುತ್ತಮುತ್ತಲಿನ ಭಾಗದ ಅಸ್ಕಿ, ಬೆಕಿನಾಳ, ಹುಣಶ್ಯಾಳ, ಕುದುರೆಗುಂಡ ಕೆರೆಗಳನ್ನು ತುಂಬಿಸುವುದರಿಂದ ಈ ಭಾಗದ ಸುಮಾರು ೨೦ ಹಳ್ಳಿಗಳ ಜನಜಾನುವಾರುಗಳ ಕುಡಿಯುವ ನೀರಿಗೆ ಮತ್ತು…
ಮುದ್ದೇಬಿಹಾಳ: ಮಾ.೨೨ ರಂದು ಮಧ್ಯಾಹ್ನ ೧:೩೦ ಕ್ಕೆ ಪಟ್ಟಣದ ನ್ಯಾಯಾಲಯದ ಆವರಣದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಕುರಿತು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.ತಾಲೂಕು ಕಾನೂನು ಸೇವಾ ಸಮಿತಿ, ನ್ಯಾಯವಾದಿಗಳ ಸಂಘ ಹಾಗೂ ಇತರ ಎಲ್ಲ ಸರಕಾರಿ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಳ್ಳಲಾದ ಈ ಕಾರ್ಯಕ್ರಮವನ್ನು ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶೆ ಲಕ್ಷ್ಮೀ ನಿಂಗಪ್ಪ ಗರಗ ಉದ್ಘಾಟಿಸಲಿದ್ದು, ಕಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶ ಸಂಪತ್ತಕುಮಾರ ಬಳೂಲಗಿಡದ ಉಪಸ್ಥಿತರಿರಲಿದ್ದಾರೆ. ನ್ಯಾಯವಾದಿಗಳ ಸಂಘದ ಅಧ್ಯಕ್ಷ ಶಶಿಕಾಂತ ಮಾಲಗತ್ತಿ ಅಧ್ಯಕ್ಷತೆ ವಹಿಸಲಿದ್ದು, ಅತಿಥಿಗಳಾಗಿ ಹಿರಿಯ ಶ್ರೇಣಿ ಸಹಾಯಕ ಸರ್ಕಾರಿ ಅಭಿಯೋಜಕ ನಾಗರಾಜ ಪೂಜಾರ್, ಅಪರ್ ಸರ್ಕಾರಿ ವಕೀಲ ಎಚ್.ಎಲ್.ಸರೂರ, ಕಿರಿಯ ಶ್ರೇಣಿ ಸಹಾಯಕ ಅಭಿಯೋಜಕ ಬಸವರಾಜ ಆಹೇರಿ, ತಹಶೀಲ್ದಾರ ಬಸವರಾಜ ನಾಗರಾಳ, ತಾಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಎಸ್.ಕಲ್ಮನಿ, ಕ್ಷೇತ್ರ ಶಿಕ್ಷಣಾಧಿಕಾರಿ ಬಸವರಾಜ ಸಾವಳಗಿ, ಸಿಪಿಐ ಮಲ್ಲಿಕಾರ್ಜುನ ತುಳಸಿಗೇರಿ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶಿವಮೂರ್ತಿ ಕುಂಬಾರ ಭಾಗವಹಿಸಲಿದ್ದು, ಮಹಿಳಾ ಹಕ್ಕುಗಳ ಕಾಯ್ದೆ ಕುರಿತು ಹಿರಿಯ ನ್ಯಾಯವಾದಿ ಎನ್.ಆರ್.ಮೊಕಾಶಿ ವಿಶೇಷ ಉಪನ್ಯಾಸ…
ಮುದ್ದೇಬಿಹಾಳ: ಪಟ್ಟಣದ ೩೩/೧ಕೆವಿ ಉಪಕೇಂದ್ರ ನಾಲತವಾಡ ಹಾಗೂ ತಂಗಡಗಿಯ ಉಪಕೇಂದ್ರಗಳಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಇರುವದರಿಂದ ಈ ಉಪಕೇಂದ್ರಗಳ ಮೇಲೆ ಬರುವ ಎಲ್ಲ ಐಪಿ, ಕುಡಿಯುವ ನೀರು ಸರಬರಾಜು, ಎನ್.ಜೆ.ವಾಯ್ ಫೀಡರ್ಗಳಲ್ಲಿ ಮತ್ತು ಟೌನ್ ಫೀಡರ್ಗಳಿಗೆ ಮಾ.೨೨ ರಂದು ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದ್ದು ಸಾರ್ವಜನಿಕರು ಸಹಕರಿಸುವಂತೆ ಪ್ರಕಟಣೆ ತಿಳಿಸಿದೆ.
“ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ”- ವಿವೇಕಾನಂದ. ಎಚ್.ಕೆ, ಬೆಂಗಳೂರು ಕ್ರಿಕೆಟ್ ಆಟ – ಬೆಟ್ಟಿಂಗ್ ದಂಧೆ – ಜೂಜಿನ ಮಜಾ ಇನ್ನು ಪ್ರಾರಂಭ..ಕ್ರಿಕೆಟ್ ಆಟಗಾರರು – ಫ್ರಾಂಚೈಸಿಗಳು – ಕ್ಲಬ್ ಬಾರ್ ಗಳು – ಜಾಹೀರಾತುದಾರರು – ಅದರ ಪ್ರಚಾರ ರಾಯಭಾರಿಗಳು – ಎಲೆಕ್ಟ್ರಾನಿಕ್ ಟಿವಿ ವಾಹಿನಿಗಳು – ಬೆಟ್ಟಿಂಗ್ ಏಜೆಂಟುಗಳು ಮುಂತಾದ ಎಲ್ಲರಿಗೂ ಹಬ್ಬ..ಬೆಟ್ಟಿಂಗ್ ಹುಚ್ಚಿನ ಮನೆಯವರಿಗೆ ಶಾಪ, ಇನ್ನೂ ನತದೃಷ್ಟರಿಗೆ ತಿಥಿ..ಈ ಆಟ ಒಂದು ದೊಡ್ಡ ಆರ್ಥಿಕ ಚಟುವಟಿಕೆಗಳನ್ನು ಹೊಂದಿದೆ ಎಂಬುದು ನಿಜ. ಆದರೆ ಅಷ್ಟೇ ಸಮಾಜ ಘಾತಕವೂ ಆಗಿದೆ.ಸಮಾಜದಲ್ಲಿ ಒಳ್ಳೆಯದು ಕೆಟ್ಟದ್ದು ಎರಡೂ ಇರುತ್ತದೆ. ಆಯ್ಕೆ ಜನರಿಗೆ ಬಿಟ್ಟಿದ್ದು ಎಂದು ಸಮಾಧಾನಕರ ಉತ್ತರ ಹೇಳಬಹುದು. ಆದರೆ ಈ ಕೊಳ್ಳುಬಾಕ ಸಂಸ್ಕೃತಿ – ಕಾರ್ಪೊರೇಟ್ ವ್ಯವಸ್ಥೆ, ಜನರ ದುರಾಸೆಯ ಪ್ರವೃತ್ತಿ, ಸುಲಭವಾಗಿ ಹಣ ಮಾಡಬೇಕು ಎಂಬ ಮನೋಭಾವ ಎಲ್ಲವೂ ಇರುವಾಗ ಅವರಿಗೆ ಇದೇ ಲಾಭದ ಮಾರ್ಗಗಳು. ಇದನ್ನು ಕೇವಲ ಹಣದ ದೃಷ್ಟಿಯಿಂದ ಮಾತ್ರ ನೋಡದೆ ವ್ಯವಸ್ಥೆಯ ಅಧಃಪತನದ ಹಾದಿಯಾಗಿ…
ಆರ್ಸಿಬಿ ಮಹಿಳಾ ತಂಡದಲ್ಲಿ ಕಮಾಲ್ ಮಾಡಿದ ಕಲಬುರಗಿ ಜಿಲ್ಲೆಯ ಬೆಡಗಿ – ಇಲಿಯಾಸ್ ಪಟೇಲ್, ಬಳಗಾನೂರಯಾದಗಿರಿ: ಕಲಬುರಗಿ ಜಿಲ್ಲೆಯ ಪ್ರತಿಭೆ ಶ್ರೇಯಾಂಕ ಪಾಟೀಲ್ ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ ಮಿಂಚುವ ಮೂಲಕ ಕನ್ನಡಿಗರ ನೆಚ್ಚಿನ ಆಟಗಾರ್ತಿಯಾಗಿ ಹೊರಹೊಮ್ಮುತ್ತಿದ್ದಾರೆ.ಸದ್ಯ ದೇಶದಲ್ಲಿ ಮಹಿಳಾ ಐಪಿಎಲ್ ನದ್ದೇ ಹವಾ ನಡೆಯುತ್ತಿದೆ. ಅದರಲ್ಲೂ ಆರ್.ಸಿ.ಬಿ ಫೈನಲ್ಗೆ ಎಂಟ್ರಿ ಕೊಟ್ಟು ಇನ್ನಷ್ಟು ಕ್ರೇಜ್ ದ್ವಿಗುಣವಾಗಿದೆ. ಇದರ ಬೆನ್ನಲೇ ಕಲಬುರಗಿಯ ಕ್ರಿಕೆಟ್ ಅಭಿಮಾನಿಗಳಿಗೆ ಖುಷಿ ಕೊಡುವ ವಿಚಾರವೊಂದು ತಿಳಿದು ಎಲ್ಲರಲ್ಲೂ ಸಂತಸ ಮೂಡಿದೆ.ಹೌದು, ಕಲ್ಯಾಣ ಕರ್ನಾಟಕದ ಕಲಬುರಗಿ ಜಿಲ್ಲೆಯ ಪ್ರತಿಭೆಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಲ್ಪಟ್ಟು ಆಗೊಮ್ಮೆ ಈಗೊಮ್ಮೆ ಈ ಭಾಗದ ಹೆಸರನ್ನು ಹೆಸರು ಪ್ರಜ್ವಲಿಸುವಂತೆ ಮಾಡುತ್ತಾರೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಟೀಮ್ ಇಂಡಿಯಾ ಮಹಿಳಾ ತಂಡವನ್ನು ಪ್ರತಿನಿಧಿರುವ ಆಲ್ರೌಂಡರ್ ಆಟಗಾರ್ತಿ, ಕನ್ನಡತಿ ಶ್ರೀಯಾಂಕ ಪಾಟೀಲ್ ಅವರ ಮೂಲ ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಕೋಳಕೂರು ಗ್ರಾಮ ಎನ್ನುವುದು ಜಿಲ್ಲೆಯಲ್ಲಿ ಭಾರಿ ಸದ್ದು ಮಾಡುತ್ತಿದೆ.ಅವರ ತಾತ ಅಮೃತಗೌಡ ಹಾಗೂ ತಂದೆ ರಾಜೇಶ್…
ವಿಜಯಪುರ: ಇತ್ತೀಚೆಗೆ ಸರಕಾರದಿಂದ ಜಿಲ್ಲಾ ಮಟ್ಟದ ಕೆಡಿಪಿ ಸದಸ್ಯರಾಗಿ ನೇಮಕಗೊಂಡ ಶಿವಣ್ಣ ಕೋಟಾರಗಸ್ತಿ ಅವರನ್ನು ಸಿಂದಗಿ ತಾಲೂಕಿನ ಗೋಲಗೇರಿ ಗ್ರಾಮದಲ್ಲಿ ಸನ್ಮಾನಿಸಿ ಅಭಿನಂದಿಸಲಾಯಿತು.ಶಾಸಕ ಅಶೋಕ ಮನಗೂಳಿ ಅವರ ಶಿಫಾರಸಿನ ಮೇರೆಗೆ ವಿಜಯಪುರ ಜಿಲ್ಲಾ ಮಟ್ಟದ ತ್ರೈಮಾಸಿಕ ಪರಶೀಲನಾ ಕೆಡಿಪಿ ಸಮಿತಿಗೆ ಅಧಿಕಾರೇತರ ಸದಸ್ಯರಾಗಿ ನೇಮಕರಾದ ಶಿವಣ್ಣ ಕೋಟಾರಗಸ್ತಿ ಅವರನ್ನು ಗೋಲಗೇರಿ ಗ್ರಾಮದಲ್ಲಿ ತಳವಾರ ಸಮಾಜದ ವತಿಯಿಂದ ಸನ್ಮಾನಿಸಲಾಯಿತುಈ ಸಂದರ್ಭದಲ್ಲಿ ತಳವಾರ ಸಮಾಜದ ಮುಖಂಡರಾದ ಹಿರಿಯ ಕಲಾವಿದ ಕಲ್ಯಾಣಿ ಯಂಕಂಚಿ, ಮಡಿವಾಳ ನಾಯ್ಕೋಡಿ, ಶಿವಶಂಕರ ಪೂಜಾರಿ, ಕಲಾವಿದ ಸಂಜೀವಕುಮಾರ ಯಂಕಂಚಿ ಇದ್ದರು.
“ವಿದ್ಯಾರ್ಥಿ ನಿಧಿ” ಮಕ್ಕಳ ಕಥೆ ಅದೊಂದು ಸರೋವರ . ಸರೋವರದಲ್ಲಿ ಹಲವು ವಿಧವಾದ ಕಪ್ಪೆಗಳಿದ್ದವು. ಆ ಕಪ್ಪೆಗಳಲ್ಲಿ ಹಲವಾರು ಗುಂಪುಗಳಿದ್ದವು. ಅವುಗಳ ನಡುವೆ ಪ್ರತಿ ದಿನ ಸಣ್ಣ ಪುಟ್ಟ ಗಲಾಟೆಗಳು ಕಿರಿಕಿರಿಗಳು ಆಗುತ್ತಿದ್ದರೂ ಅವೆಲ್ಲ ಒಂದೇ ಗುಂಪಿನೊಳಗೆ ಅನುಸರಿಸಿಕೊಂಡು ಹೋಗುತ್ತಿದ್ದವು.ಅದೊಂದು ದಿನ ಆ ಕೊಳಕ್ಕೆ ಒಂದು ಹಾವು ಬಂದು ಸೇರಿಕೊಂಡಿತು. ಒಂದು ಗುಂಪಿನ ಕಪ್ಪೆಗಳು ಹಾವಿನ ಜತೆ ಸೇರಿಕೊಂಡು ಅದರ ಸ್ನೇಹ ಬೆಳೆಸಿದವು. ಉಳಿದ ಗುಂಪುಗಳ ಕಪ್ಪೆಗಳ ವಿಚಾರವನ್ನು ಹಾವಿಗೆ ತಿಳಿಸಕೊಡತೊಡಗಿತು. ಕಪ್ಪೆಗಳ ವಾಸಸ್ಥಾನ ಕಪ್ಪೆಗಳು ರಕ್ಷಣೆ ವಿಧಾನ ಹೀಗೆ ಕಪ್ಪೆಗಳ ಎಲ್ಲ ವಿಚಾರಗಳನ್ನು ಹಾವಿಗೆ ವರದಿ ಮಾಡತೊಡಗಿದ್ದು ಹೀಗಾಗಿ ಹಾವಿಗೆ ಅನಾಯಾಸವಾಗಿ ಕಪ್ಪೆ ಸಿಗತೊಡಗಿತು. ವಿರೋಧಿ ಬಣದ ಕಪ್ಪೆಗಳನ್ನು ತಿನ್ನುತ್ತಾ ಹಾವು ಕಾಲಕಳೆಯ ತೊಡಗಿತ್ತು. ಹಾಗೆ ಕಾಲಕ್ರಮೇಣ ವಿರೋಧಿ ಬಣದ ಕಪ್ಪೆಗಳೆಲ್ಲವೂ ಖಾಲಿಯಾದಾಗ ಹಾವು ತನ್ನ ಸ್ನೇಹಿತ ಬಣದ ಕಪ್ಪೆಗಳನ್ನು ತಿನ್ನತೊಡಗಿತು. ಎಷ್ಟೇ ಆದರೂ ಹಾವು ತನ್ನ ಮೂಲ ಗುಣವನ್ನು ಬಿಟ್ಟಿತೇ .. ಪ್ರಸ್ತುತ ಸನ್ನಿವೇಶವೂ ಹೀಗೆ. ನಮ್ಮ ಧರ್ಮದ…
’ಕೆಫೆ ಸ್ಪೋಟದ ಹಿಂದೆ ತಮಿಳರು’ ಹೇಳಿಕೆ | ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘನೆ | ಡಿಎಂಕೆ ದೂರು ತಮಿಳರ ವಿರುದ್ದ ದ್ವೇಷಪೂರಿತ ಹೇಳಿಕೆ ನೀಡಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳುವಂತೆ ರಾಜ್ಯ ಚುನಾವಣಾ ಆಯೋಗಕ್ಕೆ ಕೇಂದ್ರ ಚುನಾವಣಾ ಆಯೋಗ ಸೂಚಿಸಿದೆ.ತಮಿಳರ ವಿರುದ್ದ ದ್ವೇಷ ಭಾಷಣ ಮಾಡುವ ಮೂಲಕ ಶೋಭಾ ಕರಂದ್ಲಾಜೆ ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಾರೆ ಎಂದು ತಮಿಳುನಾಡಿನ ಆಡಳಿತರೂಢ ದ್ರಾವಿಡ ಮುನ್ನೇತ್ರ ಕಳಗಂ(ಡಿಎಂಕೆ) ಪಕ್ಷದ ಸಂಘಟನಾ ಕಾರ್ಯದರ್ಶಿ ಆರ್.ಎಸ್ ಭಾರತಿ ಅವರು ಬುಧವಾರ (ಮಾ.20) ಚುನಾವಣಾ ಆಯೋಗಕ್ಕೆ ದೂರು ನೀಡಿದ್ದರು.ಈ ಸಂಬಂಧ ರಾಜ್ಯ ಚುನಾವಣಾ ಆಯೋಗಕ್ಕೆ ನೋಟಿಸ್ ಜಾರಿಗೊಳಿಸಿರುವ ಕೇಂದ್ರ ಚುನಾವಣಾ ಆಯೋಗ, ಮಾದರಿ ನೀತಿ ಸಂಹಿತೆ ಉಲ್ಲಂಘನೆಗೆ ಸಂಬಂಧಪಟ್ಟಂತೆ ಶೋಭಾ ಕರಂದ್ಲಾಜೆ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಬೇಕು ಮತ್ತು 48 ಗಂಟೆಗಳ ಒಳಗೆ ವರದಿ ನೀಡಬೇಕು ಎಂದು ಆದೇಶಿಸಿದೆ.ಮಂಗಳವಾರ ಬೆಂಗಳೂರಿನಲ್ಲಿ ನಡೆದ ಪ್ರತಿಭಟನೆಯೊಂದರ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ್ದ ಶೋಭಾ ಕರಂದ್ಲಾಜೆ, “ತರಬೇತಿ ಪಡೆದು…
ಇಂಡಿ: ಪರಿಸರ ಹಾಗೂ ಪಕ್ಷಿಗಳ ಸಂರಕ್ಷಣೆ ನಮ್ಮೆಲ್ಲರ ಜವಾಬ್ದಾರಿ. ಇಂದು ಪ್ರಕೃತಿಯ ಅಸಮತೋಲನ, ಮಾನವ ನಿರ್ಮಿತ ಕೆಲವು ತಪ್ಪುಗಳಿಂದ ಪಕ್ಷಿ ಸಂಕುಲ ನಾಶದ ಅಂಚಿನಲ್ಲಿದೆ. ಬೇಸಿಗೆಯಲ್ಲಿ ಪ್ರಾಣಿ, ಪಕ್ಷಿಗಳು ನೀರಿಲ್ಲದೆ ಕಂಗೆಡುವ ಸ್ಥಿತಿ ಇದ್ದು, ಅವುಗಳ ಸಂರಕ್ಷಣೆ ನಮ್ಮೆಲ್ಲರ ಹೊಣೆಯಾಗಿದೆ ಎಂದು ಶಿಕ್ಷಕ ಸಂತೋಷ ಬಂಡೆ ಹೇಳಿದರು.ಬುಧವಾರ ತಾಲೂಕಿನ ಹಿರೇರೂಗಿ ಗ್ರಾಮದ ಯುಬಿಎಸ್ ಶಾಲೆಯಲ್ಲಿ ವಿಶ್ವ ಗುಬ್ಬಚ್ಚಿ ದಿನದ ಪ್ರಯುಕ್ತ ಪಕ್ಷಿ ಸಂಕುಲ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ ಪಾತ್ರ ಕುರಿತ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಗುಬ್ಬಿಗಳು ಮಾನವರ ನಿಕಟ ಸಂಬಂಧಿ. ಅವುಗಳ ಉಳಿವಿಗಾಗಿ ಮನೆಯ ಸುತ್ತಮುತ್ತ ಮರಗಳನ್ನು ಬೆಳೆಸಿ, ಸಾರ್ವಜನಿಕ ಸ್ಥಳಗಳಲ್ಲಿ ಬೆಳೆದಿರುವ ಗಿಡಗಳ ರೆಂಬೆಗಳಿಗೆ ಮತ್ತು ಮೇಲ್ಛಾವಣಿ ಮೇಲೆ ನೀರು ತುಂಬಿದ ತಟ್ಟೆಗಳನ್ನು ಇಟ್ಟು ಪಕ್ಷಿ ಸಂಕುಲದ ಸಂರಕ್ಷಣೆಗೆ ಇಂದಿನ ವಿದ್ಯಾರ್ಥಿಗಳು ಮುಂದಾಗಬೇಕು ಎಂದು ತಿಳಿಸಿದರು.ಶಿಕ್ಷಕ ಎಸ್.ಎಸ್. ಅರಬ ಮಾತನಾಡಿ, ಮನುಷ್ಯನ ಜೀವನ ಪ್ರಕೃತಿಯಲ್ಲಿಯೇ ಅಡಗಿದೆ. ಆದರೆ, ನಾವಿಂದು ಅಭಿವೃದ್ಧಿಯ ನೆಪದಲ್ಲಿ ಮರಗಿಡಗಳನ್ನು ಕಡಿದು, ಪ್ರಕೃತಿ ವಿನಾಶ ಮಾಡುತ್ತಿದ್ದೇವೆ. ಇಂದಿನ ಮಕ್ಕಳಲ್ಲಿ…
