Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಅಫಜಲಪುರ: ವಿಜಯಪುರ, ಕಲಬುರಗಿ ಹಾಗೂ ಯಾದಗಿರಿ ಜಿಲ್ಲೆಗಳ ಜನ ಜಾನುವಾರುಗಳಿಗೆ ಜೀವನದಿಯಾಗಿರುವ ಭೀಮಾ ನದಿಗೆ ಮಹಾರಾಷ್ಟçದ ಉಜನಿ ಜಲಾಶಯದಿಂದ ನಮ್ಮ ಪಾಲಿನ ನೀರು ಬಿಡುವಂತೆ ಆಗ್ರಹಿಸಿ ಅಮರಣಾಂತ ಉಪವಾಸ ಸತ್ಯಾಗ್ರಹ ಹಮ್ಮಿಕೋಂಡಿರುವ ಜೆಡಿಎಸ್ ಮುಖಂಡ ಹೋರಾಟಗಾರ ಶಿವಕುಮಾರ ನಾಟಿಕಾರ ಅವರ ಆರೋಗ್ಯದಲ್ಲಿ ಏರುಪೇರಾಗುತ್ತಿದ್ದು ನಮಗೆ ಅವರ ಆರೋಗ್ಯವು ಬಹಳ ಮುಖ್ಯ ಎಂದು ಲೋಕಸಭಾ ಸದಸ್ಯ ಡಾ. ಉಮೇಶ ಜಾಧವ ಕಳವಳ ವ್ಯಕ್ತ ಪಡಿಸಿದರು.ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ನಡೆಯುತ್ತಿರುವ ಅಮರಣಾಂತ ಉಪವಾಸ ಸತ್ಯಾಗ್ರಹಕ್ಕೆ ಭೇಟಿ ನೀಡಿ ಬೆಂಬಲ ವ್ಯಕ್ತ ಪಡಿಸಿ ಮಾತನಾಡುತ್ತಾ ಮಳೆಗಾಲದಲ್ಲಿ ಮಳೆ ಹೆಚ್ಚಾದಾಗ ತಮ್ಮಲ್ಲಿನ ಜಲಾಶಯಗಳನ್ನು ಭರ್ತಿ ಮಾಡಿಕೋಂಡು ಹೆಚ್ಚಾದ ನೀರನ್ನು ಭೀಮಾ ನದಿಗೆ ಹರಿಬಿಡುವ ಮಹಾರಾಷ್ಟçದವರು ಬಚಾವತ್ ಆಯೋಗದ ತಿರ್ಪಿನ ಪ್ರಕಾನ ಇಂತಹ ಕಷ್ಟದ ಸಮಯದಲ್ಲಿ ನಮ್ಮ ಹಕ್ಕಿನ ನೀರನ್ನು ಸಹ ಬಿಡಬೇಕಾಗುತ್ತದೆ. ಇಡೀ ನದಿ ಒಣಗಿ ಹೋಗಿದ್ದರು ಕೂಡ ಹನಿ ನೀರು ಬಿಡದಿರುವುದು ಸರಿಯಲ್ಲ. ಕೂಡಲೇ ಜಿಲ್ಲಾಧಿಕಾರಿಗಳ ಮೂಲಕ ಜಲಸಂಪನ್ಮೂಲ ಸಚಿವರೊಂದಿಗೆ ಮಾತನಾಡಿಸಿ ಮಹಾರಾಷ್ಟ್ರ ಸರ್ಕಾರದಿಂದ ನೀರು…
ಅಫಜಲಪುರ ಸಂಪೂರ್ಣ ಸ್ಥಬ್ದ | ರಸ್ತೆ ತಡೆ | ಸಂಚಾರ ಅಸ್ತವ್ಯಸ್ತ | ಮುಂದುವರೆದ ಉಪವಾಸ ಸತ್ಯಾಗ್ರಹ ಅಫಜಲಪುರ: ಭೀಮಾ ನದಿಗೆ ಮಹಾರಾಷ್ಟದ ಉಜನಿ ಜಲಾಶಯದಿಂದ ನೀರು ಬಿಡುಗಡೆಗೆ ಆಗ್ರಹಿಸಿ ಪಟ್ಟಣದಲ್ಲಿ ಶಿವಕುಮಾರ ನಾಟಿಕಾರ ನೇತೃತ್ವದಲ್ಲಿ ಅಮರಣಾಂತ ಉಪವಾಸ ಸತ್ಯಾಗ್ರಹ ಹಮ್ಮಿಕೊಂಡಿದ್ದು ಸತ್ಯಾಗ್ರಹ ೬ನೇ ದಿನವಾದ ಬುದವಾರ ಅಫಜಲಪುರ ಸ್ವಯಂ ಪ್ರೇರಿತ ಬಂದ್ ಗೆ ಕರೆ ನೀಡಲಾಗಿತ್ತು.ಅಫಜಲಪುರ ಸಂಪೂರ್ಣವಾಗಿ ಬಂದ್ ಗೆ ಕರೆ ನೀಡಿದರಿಂದ ವಿವಿಧ ಮಠಗಳ ಮಠಾಧೀಶರು, ರೈತರು, ವ್ಯಾಪಾರಸ್ಥರು, ಮಹಿಳಾ ಸಂಘಟನೆ, ರೈತ ಸಂಘಟನೆ ಸೇರಿದಂತೆ ಪಕ್ಷಾತೀತವಾಗಿ ಎಲ್ಲರೂ ಬಂದ್ ನಲ್ಲಿ ಪಾಲ್ಗೊಂಡು ಬೆಂಬಲ ವ್ಯಕ್ತ ಪಡಿಸಿದರುಆದ್ದರಿಂದ ಎಲ್ಲ ಅಂಗಡಿ ಮುಂಗಟ್ಟುಗಳು ಬಂದಾಗಿದ್ದವು, ಬಸ್ ಸಂಚಾರ ಬಂದ್ ನಿಂದಾಗಿ ಪ್ರಯಾಣಿಕರು ಪರದಾಡಿದರು. ವಿಜಯಪುರ ಮಾರ್ಗದ ಬಸ್ ಸಂಚಾರವನ್ನು ಕರಜಗಿ ಕ್ರಾಸ್ ನಲ್ಲಿಯೇ ಸ್ಥಗಿತಗೊಳಿಸಿದ ಪ್ರಯುಕ್ತ ಎರಡು ಕಿ ಮಿ ನಡೆದುಕೊಂಡು ಹೋಗುವಂತಾಗಿ ಮಹಿಳೆಯರು, ವೃದ್ದರು ಪರದಾಡಿದರು.ಹೆಚ್ಚುವರಿ ಜಿಲ್ಲಾಧಿಕಾರಿಗಳಾದ ರಾಯಪ್ಪ ಹುಣಸಗಿ ಭೇಟಿ ನೀಡಿ ಭೀಮಾ ನದಿಗೆ ನೀರು ಹರಿಸುವ…
ದೇವರಹಿಪ್ಪರಗಿ: ಶ್ರೀಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಗ್ರಾಮಾಭಿವೃದ್ಧಿ ಯೋಜನೆ ತಾಲ್ಲೂಕಿನ ಸಾಮಾಜಿಕ, ಧಾರ್ಮಿಕ ಕ್ಷೇತ್ರಗಳಲ್ಲಿ ತನ್ನದೇಯಾದ ಸೇವೆ ಸಲ್ಲಿಸಿ ಜನಪರ ಕಾರ್ಯ ಮಾಡುತ್ತಿದೆ ಎಂದು ಯೋಜನಾಧಿಕಾರಿ ಗಿರೀಶಕುಮಾರ ಎಂ. ಹೇಳಿದರು.ಪಟ್ಟಣದಲ್ಲಿ ಬುಧವಾರ ದಾನಮ್ಮದೇವಿ ದೇವಸ್ಥಾನದ ಅಭಿವೃದ್ಧಿಗಾಗಿ ಶ್ರೀಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಗ್ರಾಮಾಭಿವೃದ್ಧಿ ಯೋಜನೆ ಮೂಲಕ ನೀಡಿದ ಅನುದಾನದ ಚೆಕ್ ವಿತರಣಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.ಶರಣ ಸಾಹಿತ್ಯ ಪರಿಷತ್ ತಾಲ್ಲೂಕು ಅಧ್ಯಕ್ಷ ಎಸ್.ಎನ್.ಬಸವರೆಡ್ಡಿ ಮಾತನಾಡಿ, ಮಂಜುನಾಥೇಶ್ವರ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಪಟ್ಟಣ ಹಾಗೂ ತಾಲ್ಲೂಕಿನಲ್ಲಿ ಕೈಗೊಂಡ ಕಾರ್ಯಗಳು ಅತ್ಯಂತ ಶ್ಲಾಘನೀಯವಾದವುಗಳು ಎಂದರು .ನಿವೃತ್ತ ಜಿಲ್ಲಾ ಜನಜಾಗೃತಿ ಸಮಿತಿ ಸದಸ್ಯ ಪಂಚಾಕ್ಷರಿ ಮಿಂಚನಾಳ, ತಾಲ್ಲೂಕು ಜಂಗನಾಭಿವೃದ್ಧಿ ಸಂಘದ ಅಧ್ಯಕ್ಷ ಸೋಮಶೇಖರ ಹಿರೇಮಠ ಹಾಗೂ ದಾನಮ್ಮಾದೇವಿ ದೇವಸ್ಥಾನ ಸಮಿತಿಯ ಅಧ್ಯಕ್ಷ ಬಸಯ್ಯ ಮಲ್ಲಿಕಾರ್ಜುನಮಠ ಮಾತನಾಡಿದರು.ಪಟ್ಟಣ ಪಂಚಾಯಿತಿ ಸದಸ್ಯ ಶಾಂತಯ್ಯ ಜಡಿಮಠ, ನಿವೃತ್ತ ಶಿಕ್ಷಕ ಶಾಂತಗೌಡ ಬಿರಾದಾರ (ಯರನಾಳ), ಬಂಡೆಪ್ಪಗೌಡ ಬಿರಾದಾರ(ದಿಂಡವಾರ), ಗ್ರಾಮಾಭಿವೃದ್ಧಿ ಯೋಜನೆಯ ವಿಶ್ವನಾಥ ಸದಲಗೆ, ಬಾಬುರಾವ್ ಗೋಣಿ, ಮಹಿಳಾ ಒಕ್ಕೂಟದ ಅಧ್ಯಕ್ಷೆಯರಾದ ಶಕುಂತಲಾ, ಪಾರ್ವತಿ, ಪದ್ಮಾವತಿ,…
ದೇವರಹಿಪ್ಪರಗಿ: ವಿಜಯಪುರ ಜಿಲ್ಲಾ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಸಾಯಿಕುಮಾರ ಬಿಸನಾಳ ನೇಮಕಗೊಂಡಿದ್ದಾರೆ.ತಾಲ್ಲೂಕಿನ ಕಡ್ಲೇವಾಡ ಪಿಸಿಎಚ್ ಗ್ರಾಮದವರಾದ ಬಿಸನಾಳ ಅವರ ಕಾರ್ಯಕ್ಷಮತೆ ಹಾಗೂ ಉತ್ತಮ ಸಂಘಟನಾ ಶಕ್ತಿಯನ್ನು ಗುರುತಿಸಿ ಈ ನೇಮಕ ಮಾಡಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ರಾಜು ಆಲಗೂರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದೇವರಹಿಪ್ಪರಗಿ: ಆರು ವರ್ಷದ ಒಳಗಿನ ಮಕ್ಕಳಿಗೆ ಸಾಮಾನ್ಯಜ್ಞಾನ ನೀಡುವ ಮೂಲಕ ಶಾಲಾ ಪೂರ್ವ ಶಿಕ್ಷಣ ಬಲವರ್ಧನೆಗೊಳಿಸುವಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಪಾತ್ರ ಪ್ರಮುಖವಾಗಿದೆ ಎಂದು ಎಸಿಡಿಪಿಓ ಎಸ್.ಎ.ಕೋರವಾರ ಹೇಳಿದರು.ಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮಂಗಳವಾರ ಜರುಗಿದ ಅಂಗನವಾಡಿ ಕಾರ್ಯಕರ್ತೆಯರ ಮೂರು ದಿನದ ತರಬೇತಿಗೆ ಚಾಲನೆ ನೀಡಿ ಮಾತನಾಡಿದರು.ಮಕ್ಕಳು ಹೆಚ್ಚಾಗಿ ನೋಡುವುದರ ಮೂಲಕ ಕಲಿಯುತ್ತಾರೆ. ಕಾರ್ಯಕರ್ತೆಯರ ಪರಿಶ್ರಮ ಮತ್ತು ಪ್ರಯತ್ನದಿಂದ ಶಾಲಾ ಪೂರ್ವ ಶಿಕ್ಷಣ ಸರಳವಾಗುತ್ತದೆ. ಇದಕ್ಕೆ ೩ ದಿನಗಳ ತರಬೇತಿ ಸಹಕಾರಿಯಾಗಿದೆ ಎಂದರು.ಶಿಕ್ಷಣಯಾತ್ರೆಯ ಸಂಯೋಜಕ ಸಾಗರ್ ಘಾಟಗೆ ಮಾತನಾಡಿ, ಸ್ಥಳೀಯ ಸಂಪನ್ಮೂಲಗಳ ಬಳಕೆ ಹಾಗೂ ವಿವಿಧ ಚಟುವಟಿಕೆಗಳ ಮೂಲಕ ಮಕ್ಕಳ ದೈಹಿಕ, ಮಾನಸಿಕ ವಿಕಾಸ ಮಾಡುವುದು ನಮ್ಮ ಗುರಿಯಾಗಿದೆ ಎಂದರು.ಅಧ್ಯಕ್ಷತೆ ವಹಿಸಿದ ಉಜ್ವಲ ಸಂಸ್ಥೆಯ ನಿರ್ದೇಶಕ ವಾಸುದೇವ ತೋಳಬಂದಿ ಮಾತನಾಡಿದರು.ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಸಂದೀಪ ಕಡ್ಲೇವಾಡ, ಶಶಿಕಾಂತ ಸುಂಗಠಾಣ, ಗೌಡಪ್ಪ ಬಿರಾದಾರ, ಶ್ರೀಶೈಲ ಜೋಗುರ, ಭಾಗಣ್ಣ ಹಾಳಕಿ, ಭೀಮಾಬಾಯಿ ಹೇರೂರು, ಮಲ್ಲಮ್ಮ ಹೊನ್ನಳ್ಳಿ ಸೇರಿದಂತೆ ಅಂಗನವಾಡಿ ಕಾರ್ಯಕರ್ತೆಯರು, ಉಜ್ವಲ ಸಂಸ್ಥೆಯ ಶಿಕ್ಷಣ…
ಅಫಜಲಪುರ: ಭೀಮೆಗೆ ನೀರು ಹರಿಸಿ ರೈತರ ಜೀವ ಉಳಿಸಿ ಎಂದು ಶಿವಕುಮಾರ ನಾಟಿಕಾರ ಅವರು ಅಮರಣಾಂತ ಸತ್ಯಾಗ್ರಹ ಹಮ್ಮಿಕೊಂಡಿದ್ದು ಸತ್ಯಾಗ್ರಹದ ೫ನೇ ದಿನದಂದು ಪಕ್ಕದ ಸಿಂದಗಿ ತಾಲೂಕಿನ ಮಾಜಿ ಶಾಸಕ ರಮೇಶ ಭೂಸನೂರ ಭೇಟಿ ನೀಡಿ ಧರಣಿಗೆ ಬೆಂಬಲಿಸಿದರು.ಈ ಸಂದರ್ಭದಲ್ಲಿ ಕಲಬುರಗಿ ಹೆಚ್ಚುವರಿ ಎಸ್ಪಿ, ತಹಸೀಲ್ದಾರ ಸಂಜೀವಕುಮಾರ ದಾಸರ, ಚಿದಾನಂದ ಮಠ, ರಾಜು ಉಕ್ಕಲಿ, ಅಮರಸಿಂಗ ರಜಪೂತ, ಮಲ್ಲಿಕಾರ್ಜುನ ಸಿಂಗೆ, ಭೀಮರಾವ ಕಲಶೆಟ್ಟಿ, ಅವ್ವಣ್ಣ ಮ್ಯಾಕೇರಿ, ಶರಣು ಪದಕಿ, ಬಸಣ್ಣ ಗುಣಾರಿ, ಶೇಖರಗೌಡ ಆನೂರ ಸೇರಿದಂತೆ ಅನೇಕರು ಇದ್ದರು.
ವಿಜಯಪುರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಸ್ವೀಪ್ ಸಮಿತಿ, ಜಿಲ್ಲಾ ಯುವಜನ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ, ಜಿಲ್ಲಾ ಎನ್.ಎಸ್.ಎಸ್ ಘಟಕ, ಬಿಎಲ್ಡಿಇ ಸಂಸ್ಥೆಯ ಜೆ.ಎಸ್.ಎಸ್. ಶಿಕ್ಷಣ ಮಹಾವಿದ್ಯಾಲಯ, ದಿ ಪ್ರೆಸಿಡೆನ್ಸಿ ಶಿಕ್ಷಣ ಮಹಾವಿದ್ಯಾಲಯ ವಿಜಯಪುರ ಇವರ ಸಂಯುಕ್ತ ಆಶ್ರಯದಲ್ಲಿ ವಿಜಯಪುರ ನಗರದಲ್ಲಿ ಮಂಗಳವಾರದಂದು ಬೃಹತ್ ಮತದಾನ ಜಾಗೃತಿ ಜಾಥಾ ಏರ್ಪಡಿಸಲಾಯಿತು.ವಿಜಯಪುರ ನಗರದ ಶ್ರೀ ಸಿದ್ದೇಶ್ವರ ದೇವಸ್ಥಾನದಿಂದ ಪ್ರಾರಂಭವಾಗಿ ಪ್ರಮುಖ ಮಾರ್ಗ ಮೂಲಕ ಗಾಂಧಿ ಚೌಕ್ ವರೆಗೆ ಸಾಗಿ ಮತದಾನದ ಮಹತ್ವವನ್ನು ಘೋಷಿಸುವುದರ ಮೂಲಕ ಜನರಲ್ಲಿ ಮತದಾನದ ಮಹತ್ವವನ್ನು ತಿಳಿಸಲಾಯಿತು.ವಿಜಯಪುರ ಜಿಲ್ಲೆಯಲ್ಲಿ ಪ್ರತಿಶತ ೯೦ ಕಿಂತ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗುವಂತೆ ಶ್ರಮಿಸಲು ಸ್ವಯಂ ಸೇವಕರೊಂದಿಗೆ ಚರ್ಚಿಸಲಾಯಿತು. ಜಿಲ್ಲೆಯಲ್ಲಿ ಸುಮಾರು ಹದಿನೈದು ಸಾವಿರಕ್ಕಿಂತ ಹೆಚ್ಚಿನ ಸ್ವಯಂಸೇವಕ / ಸೇವಕರಿದ್ದು, ತಲಾ ಹತ್ತು ಜನರಿಗೆ ಮತದಾನ ಮಾಡಿಸಲು ಗುರಿ ಹೊಂದಲು ಸ್ವಯಂ ಸೇವಕರಿಗೆ ತಿಳಿಸಲಾಯಿತು. ಇದೇ ವೇಳೆ ಮತದಾನ ಕುರಿತು ಪ್ರತಿಜ್ಞಾವಿಧಿಯನ್ನು ಭೋಧಿಸಲಾಯಿತು.ಜಿಲ್ಲಾ ಸ್ವೀಪ್ ಸಮಿತಿಯ ನೋಡಲ್ ಅಧಿಕಾರಿ ಸಿ.ಆರ್. ಮುಂಡರಗಿ, ರಾಜ್ಯ…
ವಿಜಯಪುರ: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಪ್ರಕೃತಿ ಪ್ರಾಥಮಿಕ ಹಾಗೂ ಪ್ರೌಡಶಾಲೆ ಕಗ್ಗೋಡ ಇವರ ಸಹಯೋಗದೊಂದಿಗೆ ಮಾ.೨೪ರಂದು ಬೆಳಗ್ಗೆ ೧೦ ಗಂಟೆಗೆ ಪ್ರಕೃತಿ ಶಾಲಾ ಆವರಣ ಕಗ್ಗೋಡನಲ್ಲಿ ಬೋಧಕ-ಬೋಧಕೇತರ ಹುದ್ದೆಗಳಿಗಾಗಿ ಸಂದರ್ಶನವನ್ನು ಆಯೋಜಿಸಲಾಗಿದೆ.ಬಿಎ, ಎಂಎ, ಬಿ.ಎಡ್, ಬಿ.ಎಸ್ಸಿ, ಎಂಎಸ್ಸಿ, ಹಿಂದಿ ಬಿ.ಎಡ್, ಬಿಪಿಈಡಿ ವಿದ್ಯಾರ್ಹತೆಯುಳ್ಲ ಹಾಗೂ ಬೋಧಕೇತರ ಹುದ್ದೆಗಳಾದ ಕಂಪ್ಯೂಟರ್ ಆಪರೇಟರ್, ಪ್ರಥಮ ದರ್ಜೆ ಸಹಾಯಕರು, ವಾರ್ಡನ್, ಜವಾನ್, ಸಂಗೀತ ಶಿಕ್ಷಕರು, ನೃತ್ಯ ಶಿಕ್ಷಕರು ಹಾಗೂ ವಾಹನ ಚಾಲಕರ ಹುದ್ದೆಗಳಿಗಾಗಿ ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ನೇರ ಸಂದರ್ಶನಕ್ಕೆ ಆಗಮಿಸಬಹುದಾಗಿದೆ.ಹೆಚ್ಚಿನ ಮಾಹಿತಿಗಾಗಿ ಉದ್ಯೋಗಾಧಿಕಾರಿಗಳು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ(೯೯೪೫೦೦೦೭೯೩)ಇವರನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
ವಿಜಯಪುರ: ಚುನಾವಣೆ ಸಮಯದಲ್ಲಿ ಅಕ್ರಮ ಮಧ್ಯ ಹಾಗೂ ಕಳ್ಳಭಟ್ಟಿ, ಸಾರಾಯಿ ತಯಾರಿಸಿ, ಸಂಗ್ರಹಿಸಿ, ಮಾರಾಟ ಮಾಡುವಂತಹ ಅಕ್ರಮಗಳು ಮಾಡುವ ಹಾಗೂ ಇಂತಹ ಕಳ್ಳ ಭಟ್ಟಿಯನ್ನು ಮತದಾರರಿಗೆ ಸರಬರಾಜು ಮಾಡುವ ಸಾಧ್ಯತೆ ಇದ್ದು, ಇವುಗಳನ್ನು ತಡೆಗಟ್ಟಲು ಅಬಕಾರಿ ಇಲಾಖೆ ಅಗತ್ಯ ಕ್ರಮಗಳನ್ನು ಕೈಗೊಂಡಿದೆ. ಸಾರ್ವಜನಿಕರು ಮಾಹಿತಿ ನೀಡಲು ೧೮೦೦೪೨೫೦೪೬೧ ಸಹಾಯವಾಣಿ ಆರಂಭಿಸಲಾಗಿದೆ ಎಂದು ಅಬಕಾರಿ ಉಪ ಆಯುಕ್ತರು ತಿಳಿಸಿದ್ದಾರೆ.ಈ ಕುರಿತು ಪ್ರಕಟಣೆ ನೀಡಿರುವ ಅವರು, ನಕಲಿ ಮದ್ಯ ತಯಾರಿಕೆ, ಮಾರಾಟ ಮಾಡುವಂತಹ ಚಟುವಟಿಕೆಗಳು ತಮ್ಮ ವ್ಯಾಪ್ತಿ ಪ್ರದೇಶದ ಸುತ್ತ ಮುತ್ತ ಕಂಡುಬಂದಲ್ಲಿ ಸಂಬಂಧಪಟ್ಟ ಕಂಟ್ರೋಲ್ ರೂಮ್ ಟೋಲ್ ಫ್ರೀ ದೂರವಾಣಿ ಸಂಖ್ಯೆಗೆ ಸಾರ್ವಜನಿಕರು ಕರೆ ಮಾಡಿ ಮಾಹಿತಿ ನೀಡಬಹುದು ಮತ್ತು ಕಂಟ್ರೋಲ್ ರೂಮ್ ಹಾಗೂ ಸಹಾಯವಾಣಿಗೆ ಮಾಹಿತಿ ನೀಡುವವರ ವಿವರಗಳನ್ನು ಗೌಪ್ಯವಾಗಿ ಇಡಲಾಗುವುದು. ಚುನಾವಣೆ ಸಂದರ್ಭದಲ್ಲಿ ಮತದಾರರಿಗೆ ಹಂಚಲು ಅಥವಾ ಅಕ್ರಮ ಚಟುವಟಿಕೆಗಳನ್ನು ನಡೆಸಲು ಮಾಡುವ ಕಳಭಟ್ಟಿ ಸರಾಯಿ, ನಕಲಿ ಮದ್ಯ ತಯಾರಿಕೆ, ಸಂಗ್ರಹಣೆ ಮತ್ತು ಮಾರಾಟ ಮಾಡುವ ಕಾನೂನು ಬಾಹಿರ ಕೃತ್ಯಗಳ…
ವಿಜಯಪುರ: ಜಿಲ್ಲೆಯಲ್ಲಿ ಸಾರ್ವಜನಿಕರಿಗೆ ಯಾವುದೇ ಕಾರಣಕ್ಕೂ ಕುಡಿಯುವ ನೀರಿನ ತೊಂದರೆ ಎದುರಾಗದಂತೆ, ಕುಡಿಯುವ ನೀರಿನ ಸಮಸ್ಯೆಯನ್ನು ನಿಗದಿತ ಸಮಯದಲ್ಲಿ ನಿವಾರಿಸುವ ಉದ್ದೇಶದಿಂದ ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಕಚೇರಿಗಳಲ್ಲಿ ಸಹಾಯವಾಣಿಯನ್ನು ಪ್ರಾರಂಭಿಸಲಾಗಿದೆ.ಸಾರ್ವಜನಿಕರು ಕುಡಿಯುವ ನೀರಿನ ಸಮಸ್ಯೆ ಉಂಟಾದರೆ ಜಿಲ್ಲಾ ಪಂಚಾಯತ್ ವಿಜಯಪುರ(೦೮೩೫೨-೨೭೭೨೯೩), ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯನಿರ್ವಾಹಕ ಅಭಿಯಂತರರ ಕಚೇರಿ(೦೮೩೫೨-೨೭೭೯೪೧), ಮುದ್ದೇಬಿಹಾಳ(೦೮೩೫೬-೨೦೦೬೦೬), ತಾಳಿಕೋಟೆ (೦೮೩೫೬-೨೦೦೧೦೩), ಸಿಂದಗಿ (೦೮೪೮೮-೨೨೧೭೭೨), ದೇವರಹಿಪ್ಪರಗಿ (೦೮೪೨೪-೨೦೦೧೧೪), ಆಲಮೇಲ (೦೮೪೮೮-೨೯೮೯೦೦), ವಿಜಯಪುರ (೦೮೩೫೨-೨೫೪೦೪), ಬಬಲೇಶ್ವರ(೦೮೩೫೫-೨೦೦೦೦೫), ತಿಕೋಟಾ (೦೮೩೫೨-೨೦೦೧೨೯), ಇಂಡಿ (೦೮೩೫೯-೨೦೦೦೨೬), ಚಡಚಣ (೯೪೮೦೮೩೧೭೩೨), ಬಸವನ ಬಾಗೇವಾಡಿ (೦೮೩೫೮-೨೪೫೨೩೬), ನಿಡಗುಂದಿ (೦೮೪೨೬-೨೦೦೧೬೫), ಕೋಲಾರ (೦೮೪೨೬-೨೦೦೧೦೩) ಈ ಸಹಾಯವಾಣಿಗಳನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಹಣಾ ಅಧಿಕಾರಿ ರಿಶಿ ಆನಂದ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
